Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಹನಗಳಲ್ಲಿ ವಿ2ವಿ ಸಂವಹನ ಸಾಧನಗಳನ್ನು ಕಡ್ಡಾಯಗೊಳಿಸಲಿರುವ ಕೇಂದ್ರ ಸರ್ಕಾರ

10/01/2026 9:12 AM

ಗ್ರೀನ್ ಲ್ಯಾಂಡ್ ಅನ್ನು ‘ಕಠಿಣ ಮಾರ್ಗದಲ್ಲಿ’ ತೆಗೆದುಕೊಳ್ಳುವುದಾಗಿ ಟ್ರಂಪ್ ಬೆದರಿಕೆ !

10/01/2026 9:08 AM

SHOCKING : ಹೃದಯವಿದ್ರಾವಕ ಘಟನೆ : 10 ತಿಂಗಳ ಮಗುವಿಗೆ ವಿಷ ಕುಡಿಸಿ, ನೇಣುಬಿಗಿದುಕೊಂಡು ತಾಯಿ ಆತ್ಮಹತ್ಯೆ.!

10/01/2026 9:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಶ್ರಮ ಶಾಲೆ, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯ ಸಹಿಸಲ್ಲ; ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ
KARNATAKA

ಆಶ್ರಮ ಶಾಲೆ, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯ ಸಹಿಸಲ್ಲ; ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ

By kannadanewsnow0918/06/2024 3:33 PM

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಆಶ್ರಯ ಶಾಲೆಯ ಮಕ್ಕಳು, ಬಡವರು ಹಾಗೂ ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯ ವಹಿಸುವುದನ್ನು ಸಹಿಸುವುದಿಲ್ಲ ಅಂತ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಎಚ್ಚರಿಸಿದ್ದಾರೆ.

ಇಂದು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಮಾತನಾಡಿದಂತ ಅವರು, ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಆಶ್ರಮ ಶಾಲೆಯ ಮಕ್ಕಳು, ಬಡವರು, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯಕ್ಕೆ ಗರಂ ಆಗಿ ಅಧಿಕಾರಿಗಳನ್ನು ತೀವ್ರವಾಗಿ ಸಿಎಂ ಸಿದ್ಧರಾಮಯ್ಯ ತರಾಟೆಗೆ ತೆಗೆದುಕೊಂಡರು. ಅಲ್ಲದೇ ಆಶ್ರಮ ಶಾಲೆಗಳಿಗೆ ರಾತ್ರಿ ವೇಳೆ ಭೇಟಿ ನೀಡಿ ವ್ಯವಸ್ಥೆ ಗಮನಿಸದ್ದಕ್ಕೆ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದು ಕೊಂಡರು.

ದಲಿತ, ಬುಡಕಟ್ಟು, ಬಡವರ ಮಕ್ಕಳ ಶಿಕ್ಷಣಕ್ಕೆ, ಹಾಸ್ಟೆಲ್ ಗಳಿಗೆ ಇಷ್ಟೆಲ್ಲಾ ಹಣ, ಸವಲತ್ತು ಕೊಡುತ್ತಿದ್ದರೂ ಮಕ್ಕಳ ಶೈಕ್ಷಣಿಕ ಮಟ್ಟ ಏಕೆ ಏರಿಕೆ ಆಗುತ್ತಿಲ್ಲ? ಈ ಬಗ್ಗೆ ನಿರಂತರ ನಿಗಾ ಏಕೆ ವಹಿಸುತ್ತಿಲ್ಲ? ಫಲಿತಾಂಶದಲ್ಲಿ ಏರಿಕೆ ಏಕೆ ಆಗುತ್ತಿಲ್ಲ ಎಂದು ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿದರು.

ನಿಯಮಿತವಾಗಿ ಹಾಸ್ಟೆಲ್ ಗಳಿಗೆ, ಆಶ್ರಮ ಶಾಲೆಗಳಿಗೆ ಭೇಟಿ ನೀಡಬೇಕು. ನಿರಂತರವಾಗಿ ಗುಣಮಟ್ಟ ಹೆಚ್ಚಿಸಲು ಶ್ರಮಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ಈ ಸಭೆಯ ಇತರೆ ಮುಖ್ಯಾಂಶಗಳು..:

ಇಲಾಖೆಯ ಒಟ್ಟಾರೆ ಆಯವ್ಯಯದಲ್ಲಿ ಬಿಡುಗಡೆಯಾದ ಮೊತ್ತ 1884.01 ಕೋಟಿ ರೂ. ನಲ್ಲಿ 1879.35 ಕೋಟಿ ವೆಚ್ಚವಾಗಿದ್ದು, 99.75 % ಸಾಧನೆಯಾಗಿದೆ

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ 389 ವಿದ್ಯಾರ್ಥಿ ನಿಲಯಗಳು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು – 39,541 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಿದ್ದು, 194.71 ಕೋಟಿ ರೂ. ಒದಗಿಸಲಾಗಿದೆ

ಎಸ್‌.ಎಸ್‌.ಎಲ್‌.ಸಿ. ಯಲ್ಲಿ ಶೇ. 77 ರಷ್ಟು ಫಲಿತಾಂಶ ಬಂದಿದ್ದು, ಫಲಿತಾಂಶ ಉತ್ತಮ ಪಡಿಸಲು ಸೂಚನೆ ನೀಡಿದರು

2,90,546 ವಿದ್ಯಾರ್ಥಿಗಳಿಗೆ 50.47 ಕೋಟಿ ರೂ. ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ. 2,48,887 ವಿದ್ಯಾರ್ಥಿಗಳಿಗೆ 302.64 ಕೋಟಿ ರೂ. ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು

ಹಾಸ್ಟೆಲ್‌ಗಳಿಗೆ ಸಂಜೆ ವೇಳೆಗೆ ಭೇಟಿ ನೀಡಿ, ಶುಚಿ ಕಿಟ್‌ಗಳು, ಆಹಾರ ಪದಾರ್ಥ ವಿತರಣೆ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪರಿಶೀಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು

ಕೆಲವು ಆಶ್ರಮ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳು ಇರುವುದಿಲ್ಲ. ಮಕ್ಕಳು ರಾತ್ರಿ ಊಟವಾದ ನಂತರ ಮನೆಗೆ ಕರೆದುಕೊಂಡು ಹೋಗುತ್ತಾರೆ. ಚಿಕ್ಕ ಮಕ್ಕಳು ಎಂದು ಮನೆಗೆ ಕರೆದುಕೊಂಡು ಹೋಗುತ್ತಾರೆ. ಎಲ್ಲ ಸೌಲಭ್ಯ ಇದ್ದೂ, ಯಾಕೆ ಮನೆಗೆ ಕರೆದುಕೊಂಡು ಹೋಗುತ್ತಾರೆ. ಈ ಕುರಿತು ಪರಾಮರ್ಶೆ ನಡೆಸಿ, ಪೋಷಕರಿಗೆ ಮನವರಿಕೆ ಮಾಡಲು ಸೂಚಿಸಿದರು

ಅನುದಾನ ಲಭ್ಯವಿದೆ ಎಂಬ ಕಾರಣಕ್ಕೆ ಬೇಡಿಕೆ ಇಲ್ಲದೆ ಇದ್ದರೂ, ಹಾಸಿಗೆ, ಬೆಡ್‌ಶೀಟ್‌ ಮತ್ತಿತರ ವಸ್ತುಗಳನ್ನು ಅನಗತ್ಯವಾಗಿ ಖರೀದಿಸಿ ಗುಡ್ಡೆಹಾಕಿಕೊಳ್ಳುವುದನ್ನು ಸಹಿಸಲಾಗದು. ಅನಗತ್ಯವಾಗಿ 4 ಜಿ ವಿನಾಯಿತಿ ಪಡೆಯುವ ಬದಲು ನೇರವಾಗಿ ಟೆಂಡರ್‌ ಕರೆದು ಖರೀದಿ, ಸೇವೆಗಳನ್ನು ಪಡೆಯಬೇಕೆಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು

ನೀವು ಬಡವರು, ದಲಿತರು, ಆದಿವಾಸಿ, ಬುಡಕಟ್ಟು ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ದರೆ ನೀವು ಸೇವೆಯಲ್ಲಿರಲು unfit ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು

ಸಭೆಯಲ್ಲಿ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ್‌ ಪ್ರಸಾದ್‌ ಮತ್ತು ಪರಿಶಿಷ್ಟ ಪಂಗಡಗಳ‌ ಕಲ್ಯಾಣ ಇಲಾಖೆ ನಿರ್ದೇಶಕ ಕಲ್ಲೇಶ್ ಸೇರಿ ಇತರೆ ಅಧಿಕಾರಿಗಳು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಉಪಸ್ಥಿತರಿದ್ದರು.

ಹೀಗಿದೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಯುವ ಸಬಲೀಕರಣ, ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್

ಮೋದಿ ಪ್ರಧಾನಿಯಾದ ಬೆನ್ನಲ್ಲೇ ಷೇರು ಮಾರುಕಟ್ಟೆ ಸಂಚಲನ : 5 ಟ್ರಿಲಿಯನ್ ಡಾಲರ್ ದಾಟಿದ ಮಾರುಕಟ್ಟೆ ಕ್ಯಾಪ್ | PM Modi

Share. Facebook Twitter LinkedIn WhatsApp Email

Related Posts

SHOCKING : ಉಪನ್ಯಾಸಕನಿಂದ ಅಪಹಾಸ್ಯ : ಬೆಂಗಳೂರಲ್ಲಿ `ಡೆಂಟಲ್ ವಿದ್ಯಾರ್ಥಿನಿ’ ಆತ್ಮಹತ್ಯೆಗೆ ಶರಣು.!

10/01/2026 8:18 AM1 Min Read

SHOCKING : ಬೆಂಗಳೂರಿನಲ್ಲಿ `ಆಘಾತಕಾರಿ ಕೃತ್ಯ’ : ಹಾಡಹಗಲೇ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ‘ಡೆಲಿವರಿ ಬಾಯ್’.!

10/01/2026 7:48 AM1 Min Read

SHOCKING : ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: `ಡೆಲಿವರಿ ಬಾಯ್’ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ | Watch Video

10/01/2026 7:34 AM1 Min Read
Recent News

ವಾಹನಗಳಲ್ಲಿ ವಿ2ವಿ ಸಂವಹನ ಸಾಧನಗಳನ್ನು ಕಡ್ಡಾಯಗೊಳಿಸಲಿರುವ ಕೇಂದ್ರ ಸರ್ಕಾರ

10/01/2026 9:12 AM

ಗ್ರೀನ್ ಲ್ಯಾಂಡ್ ಅನ್ನು ‘ಕಠಿಣ ಮಾರ್ಗದಲ್ಲಿ’ ತೆಗೆದುಕೊಳ್ಳುವುದಾಗಿ ಟ್ರಂಪ್ ಬೆದರಿಕೆ !

10/01/2026 9:08 AM

SHOCKING : ಹೃದಯವಿದ್ರಾವಕ ಘಟನೆ : 10 ತಿಂಗಳ ಮಗುವಿಗೆ ವಿಷ ಕುಡಿಸಿ, ನೇಣುಬಿಗಿದುಕೊಂಡು ತಾಯಿ ಆತ್ಮಹತ್ಯೆ.!

10/01/2026 9:00 AM

BREAKING : ಭಾರತಕ್ಕೆ ವೆನೆಜುವೆಲಾದ ತೈಲ ರಪ್ತು ಮಾಡಲು ಅಮೆರಿಕ ಸರ್ಕಾರದಿಂದ ಗ್ರೀನ್ ಸಿಗ್ನಲ್.!

10/01/2026 8:51 AM
State News
KARNATAKA

SHOCKING : ಉಪನ್ಯಾಸಕನಿಂದ ಅಪಹಾಸ್ಯ : ಬೆಂಗಳೂರಲ್ಲಿ `ಡೆಂಟಲ್ ವಿದ್ಯಾರ್ಥಿನಿ’ ಆತ್ಮಹತ್ಯೆಗೆ ಶರಣು.!

By kannadanewsnow5710/01/2026 8:18 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಶರಣಾಗಿರುವ ಘಟನೆ ವರದಿಯಾಗಿದೆ. ಬೆಂಗಳೂರು…

SHOCKING : ಬೆಂಗಳೂರಿನಲ್ಲಿ `ಆಘಾತಕಾರಿ ಕೃತ್ಯ’ : ಹಾಡಹಗಲೇ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ‘ಡೆಲಿವರಿ ಬಾಯ್’.!

10/01/2026 7:48 AM

SHOCKING : ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: `ಡೆಲಿವರಿ ಬಾಯ್’ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ | Watch Video

10/01/2026 7:34 AM

ALERT : ಪುರುಷರೇ ಗಮನಿಸಿ : 30 ವರ್ಷದ ಮೇಲೆ ತಪ್ಪದೇ ಈ 8 `ಆರೋಗ್ಯ ಪರೀಕ್ಷೆ’ಗಳನ್ನು ಮಾಡಿಸಿಕೊಳ್ಳಲೇಬೇಕು.!

10/01/2026 6:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.