ಬೆಂಗಳೂರು : 2024ರಲ್ಲಿ ನಡೆದ ಆರ್ಸಿಬಿ ಅನ್ಬಾಕ್ಸ್ ಈವೆಂಟ್ನಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಗೌರವಿಸಿ ಅವರಿಂದಲೇ ಹೊಸ ಟೀಶರ್ಟ್ ಬಿಡುಗಡೆ ಮಾಡಿಸಲಾಯಿತು. ಆದರೆ, ಈ ಬಗ್ಗೆ ಗಜಪಡೆ ಎಂಬ ಟ್ವಿಟರ್ ಖಾತೆಯನ್ನು ಹೊಂದಿದ ವ್ಯಕ್ತಿ ಗಂಡನಿಲ್ಲದ ಮಹಿಳೆಯಿಂದ ಅನ್ಬಾಕ್ಸಿಂಗ್ ಮಾಡಿಸಿದ್ದಕ್ಕೆ ಆರ್ಸಿಬಿ ಸೋಲುತ್ತಿದೆ ಎಂದು ಹೇಳಿ ಟ್ವೀಟ್ ಮಾಡಿದ್ದನು.
ಈ ಕುರಿತಂತೆ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಯೊಬ್ಬ ಅವಹೇಳನ ಮಾಡಿ ಪೋಸ್ಟ್ ಮಾಡಿದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ, ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ ಎಂದು ಕಿಡಿಗೇಡಿಯೊಬ್ಬನ ಅವಹೇಳನೆಗೆ ರಾಜಕೀಯ ಬಣ್ಣವನ್ನು ನೀಡಿದ್ದಾರೆ.
ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ.
ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ ಬದುಕಿನ ನೋವುಗಳನ್ನು ನುಂಗಿಕೊಂಡು ಸಾಮಾಜಿಕ ಮತ್ತು ಔದ್ಯಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗುತ್ತಿದ್ದಾರೆ. ಈ ಸಾಮಾಜಿಕ ಬದಲಾವಣೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿಯವರಂತಹ ಮಹನೀಯರ ಸಮಾಜ ಸುಧಾರಣೆಯ ಕೊಡುಗೆಯೂ ಇದೆ.
ಹೀಗಿದ್ದರೂ ಇತಿಹಾಸದ ಚಕ್ರವನ್ನು ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನವನ್ನು ಕೆಲವು ಕಿಡಿಗೇಡಿಗಳು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಗೊಡ್ಡು ಸಂಪ್ರದಾಯವಾದಿಗಳು ಪತಿಯನ್ನು ಕಳೆದುಕೊಂಡ ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸಿ ತಮ್ಮ ವಿಕೃತಿಯನ್ನು ಮೆರೆಯುತ್ತಿರುವುದು ಖಂಡನೀಯ.
ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ.ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ, ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಮ್ಮ ಟ್ವೀಟ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ.
ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ… pic.twitter.com/fT48QzaWD5— Siddaramaiah (@siddaramaiah) April 6, 2024