ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಬೆವಿನಕಟ್ಟಿ ಬಳಿ ಊಟದ ಬಿಲ್ ಕೇಳಿದಕ್ಕೆ ಕುಡಿದ ಮತ್ತಿನಲ್ಲಿ 6 ಜನ ಪುಂಡರು ಡಾಬಾ ಪೀಠೋಪಕರಣ ಧ್ವಂಸ ಮಾಡಿರುವ ಘಟನೆ ನಡೆದಿದೆ.

VIRAL VIDEO: ಸಫಾರಿ ವೇಳೆ ವಾಹನವನ್ನೇರಿದ ಚೀತಾ;‌ ಇದನ್ನು ಕಂಡು ಪ್ರವಾಸಿಗರು ಫುಲ್‌ ಫಿದಾ

ಶ್ರೀಶೈಲ ಕಳ್ಳಿಮಠ ಎಂಬುವರಿಗೆ ಸೇರಿದ ಲಕ್ಕಿ ಡಾಬಾ ಪೀಸ್, ಪೀಸ್ ಆಗಿದೆ. ಮುಶಿಗೇರಿ ಗ್ರಾಮದ ಅರವಿಂದ್ ಅಂಗಡಿ ಹಾಗೂ ಸ್ನೇಹಿತರು ಸೇರಿ ದಾಂಧಲೆ ಮಾಡಿದ್ದಾರೆ. ಅರವಿಂದ್ ಅಂಗಡಿ ಬಾಗಲಕೋಟೆ ನವನಗರ ಠಾಣೆ ಪ್ರೋಫೆಷನಲ್ ಪಿಎಸ್ ಆಗಿ ಕೆಲಸ ಮಾಡುತ್ತಿದ್ದು, ಇವರ ಜೊತೆ ಆರ್ಮಿ ಯುವಕರು ಸಹ ಇದ್ದರು.ರಜೆಗೆಂದು ಊರಿಗೆ ಬಂದಿದ್ದ ಅರವಿಂದ್ ಅಂಗಡಿ ನಿನ್ನೆ ರಾತ್ರಿ 11 ಗಂಟೆ ವೇಳೆಗೆ ಆರ್ಮಿ ಯುವಕ ಹಾಗೂ ಇತರೆ 6 ಜನ ಸ್ನೇಹಿತರೊಂದಿಗೆ ಊಟಕ್ಕಾಗಿ ಡಾಬಾಗೆ ಬಂದಿದ್ದರು. ಈ ವೇಳೆ ಕಂಠ ಪೂರ್ತಿ ಕುಡಿದು, ಹೊಟ್ಟೆ ಬಿರಿಯುವಂತೆ ಊಟ ಮಾಡಿದ್ದಾರೆ. ನಂತರ ಊಟದ ಬಿಲ್ ಕೇಳಿದಕ್ಕೆ ನಾವು ಯಾರು ಅಂತ ತಿಳಿದಿದೆಯಾ? ನಮ್ಮನ್ನೇ ಬಿಲ್ ಕೇಳ್ತಿಯಾ ಅಂತ ಅಧಿಕಾರದ ಮದ ಹಾಗೂ ಕುಡಿದ ಅಮಲಿನಲ್ಲಿ ಖ್ಯಾತೆ ತೆಗೆದಿದ್ದಾರೆ.

 

Share.
Exit mobile version