ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನ ಐದನೇ ದಿನಕ್ಕೆ ಕಾಲಿಟ್ಟಿದೆ. ವಿಧಾನಸಭೆ ಕಲಾಪದಲ್ಲಿ ಚರ್ಚೆ ಜೋರಾಗಿ ನಡೆಯುತ್ತಿದೆ.

BREAKING NEWS: ಉ.ಕರ್ನಾಟಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಚರ್ಚೆಗೆ ಆಗ್ರಹ; ವಿಧಾನಸಭೆಯಲ್ಲಿ JDSನಿಂದ ನಿಲುವಳಿ ನೋಟಿಸ್‌

 

ಇದೀಗ ಸ್ಟಾಂಪ್ ನಾಲ್ಕನೇ ತಿದ್ದುಪಡಿ ವಿಧೇಯಕ ಅಂಗೀಕಾರ. ಬೀದಿ ಬದಿಯ ವ್ಯಾಪಾರಿಗಳಿಗೆ ಆತ್ಮ ನಿರ್ಭರ ನಿಧಿಯಡಿ ಸ್ಟಾಂಪ್ ಶುಲ್ಕ ಮನ್ನಾ ಮಾಡಲು ಅವಕಾಶ ಮಾಡಿಕೊಡುವ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಇನ್ನು ಉತ್ತರಕರ್ನಾಟಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಬಗ್ಗೆ ಚರ್ಚೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಜೆಡಿಎಸ್ ಪಕ್ಷ​ ನಿಲುವಳಿ ನೋಟಿಸ್​​​​ ನೀಡಿದೆ. ನಿಯಮ 69ರಡಿ ಸೋಮವಾರದ ಬಳಿಕ ಚರ್ಚೆಗೆ ಅವಕಾಶ ಕೊಡುವುದಾಗಿ ಸ್ಪೀಕರ್ ಕಾಗೇರಿ ತಿಳಿಸಿದರು.

Share.
Exit mobile version