Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮೈಸೂರಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

25/01/2026 8:28 PM

BIG NEWS : ಶರಣ್ ಪಂಪ್ವೆಲ್ ಗೆ ಹಾಸನ ಜಿಲ್ಲಾ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

25/01/2026 8:26 PM

SHOCKING: ಮಾಜಿ ಪ್ರೇಮಿಯ ಪತ್ನಿಗೆ ‘HIV’ ಇಂಜೆಕ್ಷನ್ ಚುಚ್ಚಿದ ಮಹಿಳೆ

25/01/2026 8:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಹಿಂದೂಗಳ ಮೇಲೆ ಹಲ್ಲೆ ಮಿತಿಮೀರಿದೆ, ಭಯೋತ್ಪಾದನಾ ಚಟುವಟಿಕೆ ಹೆಚ್ಚಾಗಿದೆ- ಆರ್.ಅಶೋಕ್ ಕಿಡಿಕಿಡಿ
KARNATAKA

ರಾಜ್ಯದಲ್ಲಿ ಹಿಂದೂಗಳ ಮೇಲೆ ಹಲ್ಲೆ ಮಿತಿಮೀರಿದೆ, ಭಯೋತ್ಪಾದನಾ ಚಟುವಟಿಕೆ ಹೆಚ್ಚಾಗಿದೆ- ಆರ್.ಅಶೋಕ್ ಕಿಡಿಕಿಡಿ

By kannadanewsnow0918/04/2024 2:20 PM

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ, ಟಿಪ್ಪು ಸಿದ್ಧಾಂತ ಇರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಗಳು, ಇಸ್ಲಾಮಿಕ್ ಕಾರ್ಯಕರ್ತರು ಪಾಕಿಸ್ತಾನ ಬೆಂಬಲಿತ ಕಾರ್ಯಕರ್ತರಿಂದ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ, ಅವಹೇಳನ, ಧಮ್ಕಿ, ಭಯೋತ್ಪಾದನಾ ಚಟುವಟಿಕೆ, ಬಾಂಬ್ ಹಾಕುವ ಘಟನೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು.

ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಗಂಭೀರ ವಿಚಾರ ಮತ್ತು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು. ನಿನ್ನೆ ವಿದ್ಯಾರಣ್ಯಪುರದಲ್ಲಿ ರಾಮನವಮಿ ಇತ್ತು. ರಾಮ ಈ ದೇಶದ ಆದರ್ಶ ಪುರುಷ. ಶ್ರೀರಾಮ ಮಂದಿರವೂ ನಿರ್ಮಾಣವಾಗಿದೆ. ಇಂಥ ಸಂದರ್ಭದಲ್ಲಿ “ಜೈ ಶ್ರೀರಾಮ್” ಎಂದು ಕೂಗಿದ್ದನ್ನು ಆಕ್ಷೇಪಿಸಿ ಮುಸ್ಲಿಂ ಗೂಂಡಾಗಳು ಅವರ ಮೇಲೆ ಹಲ್ಲೆ ನಡೆಸಿ “ಅಲ್ಲಾ ಹೋ ಅಕ್ಬರ್” ಕೂಗಬೇಕು ಎಂದು ಧಮ್ಕಿ ಹಾಕಿ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ. ಇದರಿಂದ ನಾವು ಹಿಂದೂಸ್ತಾನದಲ್ಲಿ ಇದ್ದೇವಾ ಅಥವಾ ಪಾಕಿಸ್ತಾನದಲ್ಲಿ ಇದ್ದೇವಾ ಎಂಬ ಸಂದೇಹ ಕಾಡುವಂತಾಗಿದೆ ಎಂದು ನುಡಿದರು.

ಸಿದ್ದರಾಮಯ್ಯನವರು ಇಸ್ಲಾಮಿಕ್ ಮೂಲಭೂತವಾದಿಗಳಿಗೆ ಕರ್ನಾಟಕವನ್ನು ಧಾರೆ ಎರೆದು ಕೊಟ್ಟಿದ್ದಾರಾ ಎಂದು ಭೀತಿ ವ್ಯಕ್ತಪಡಿಸಿದ ಅವರು, ಲಕ್ಷ್ಮಣ ಸವದಿಯವರು ಸಾರ್ವಜನಿಕ ಸಭೆಯಲ್ಲಿ ಕೈಮುಗಿದು ವಿನಮ್ರವಾಗಿ ‘ನಾನು ಭಾರತ್ ಮಾತಾ ಕೀ ಜೈ ಅನ್ನಬಹುದೇ ಖರ್ಗೆ ಸಾಬೇಬರೇ’ ಎಂದು ಪ್ರಶ್ನಿಸಿದ್ದಾರೆ. ಖರ್ಗೆಯವರು ಅನುಮತಿ ಕೊಟ್ಟಿದ್ದಾರೆ. ಡಿ.ಕೆ.ಸುರೇಶ್ ಅವರು ರಾಮ ದೇವರಲ್ಲ, ನಾವು ಮನೆಯಲ್ಲಿ ಅವರ ಫೋಟೊ ಇಟ್ಟಿಲ್ಲ ಎನ್ನುತ್ತಾರೆ. ಡಿ.ಕೆ.ಸುರೇಶ್ ಅವರೇ, ನೀವು ಕಲ್ಲುಬಂಡೆ ವ್ಯಾಪಾರ ಮಾಡುವವರಲ್ಲವೇ? ಕಲ್ಲು ಬಂಡೆ ಇಟ್ಟುಕೊಳ್ಳಿ. ರಾಮನ ಫೋಟೊ ಯಾಕೆ ಇಡಬೇಕು ಎಂದು ಕೇಳಿದರು. ಇಡೀ ದೇಶದಲ್ಲಿ ರಾಮಭಕ್ತ ಆಂಜನೇಯನ ದೇವಸ್ಥಾನಗಳಿವೆ. ಇದು ನಿಮಗೆ ಕಣ್ಣಿಗೆ ಕಾಣಿಸುವುದಿಲ್ಲವೇ ಎಂದು ಡಿ.ಕೆ.ಸುರೇಶ್ ಅವರನ್ನು ಪ್ರಶ್ನಿಸಿದರು.

ಹಿಂದೂಗಳನ್ನು ಈ ಥರ ಬೈದು ಬೈದು ರಾಜ್ಯದಲ್ಲಿ ಮುಸ್ಲಿಂ ಭಯೋತ್ಪಾದನಾ ಚಟುವಟಿಕೆಗಳು ಜಾಸ್ತಿಯಾಗಿವೆ. ಶ್ರೀರಾಮ ಮಂದಿರಕ್ಕೆ ಹೋಗುವ ಹಿಂದೂ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಲಾಗುತ್ತಿದೆ. ಮಂಡ್ಯದಲ್ಲಿ ಹಾರಾಡುತ್ತಿದ್ದ ಹನುಮಧ್ವಜವನ್ನು ಕಿತ್ತು ಹಾಕಿದ್ದೀರಿ. ಸಿದ್ದರಾಮಯ್ಯನವರ ಸರಕಾರ ಬಂದ ಬಳಿಕ ಕರ್ನಾಟಕದಲ್ಲಿ ಹಿಂದೂಗಳು ಭಯದಿಂದ ಬದುಕುವಂಥ ವಾತಾವರಣವನ್ನು ಸಿದ್ದರಾಮಯ್ಯ ಆಂಡ್ ಗ್ಯಾಂಗ್ ಮಾಡುವುದನ್ನು ಖಂಡಿಸುವುದಾಗಿ ಹೇಳಿದರು.

ಚಿಕ್ಕಪೇಟೆಯಲ್ಲಿ ಹನುಮಾನ್ ಚಾಲೀಸ ಜೋರಾಗಿ ಹಾಕಿದ್ದನ್ನು ವಿರೋಧಿಸಿ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ಮಾಡಿ ಹೊಡೆದು ದರೋಡೆ ಮಾಡಿದ್ದಾರೆ. ಕಾಂಗ್ರೆಸ್ ಸರಕಾರ ಪರೋಕ್ಷವಾಗಿ ಗೂಂಡಾಗಿರಿಗೆ ಬೆಂಬಲ ಕೊಡುತ್ತಿದೆ ಎಂದು ಆಕ್ಷೇಪಿಸಿದರು. ಮತ ಹಾಕಿದರೆ ಅವರನ್ನು ರಕ್ಷಿಸುವ ಸಂದೇಶವನ್ನು ಮೂಲಭೂತವಾದಿಗಳಿಗೆ ಕಾಂಗ್ರೆಸ್ ಪಕ್ಷ ನೀಡಿದೆ ಎಂದು ಟೀಕಿಸಿದರು.

ಬಹುಸಂಖ್ಯಾತ ಹಿಂದೂಗಳನ್ನು ಈ ಸರಕಾರ ಕಡೆಗಣಿಸುತ್ತಿದೆ. ಜೈಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸಿದ್ದರಾಮಯ್ಯನವರು ಗೂಂಡಾ ಕಾಯ್ದೆ, ದೇಶದ್ರೋಹದ ಕೇಸು ಹಾಕಿದ್ದಾರಾ? ಎಂದು ಪ್ರಶ್ನಿಸಿದರು. ಅರೆಸ್ಟ್ ಮಾಡಿದ್ದೀರಿ. ಬಿರಿಯಾನಿ ಕೊಟ್ಟು ಕಳಿಸುತ್ತೀರಿ ಎಂದು ಆಕ್ಷೇಪಿಸಿದರು.

ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಆದರೆ, ಉಪ ಮುಖ್ಯಮಂತ್ರಿಯವರ ಸಹೋದರ ದೇಶ ಇಬ್ಭಾಗ ಮಾಡಬೇಕು ಎನ್ನುತ್ತಾರೆ. ಈ ಥರದ ಹೇಳಿಕೆಗಳಿಂದ ಅಲ್ಪಸಂಖ್ಯಾತ ಮೂಲಭೂತವಾದಿಗಳಿಗೆ ಹುರುಪು ಬಂದಿದೆ ಎಂದು ಟೀಕಿಸಿದರು. ಕಾಂಗ್ರೆಸ್ಸಿನವರು ಫಿಟ್ಟಿಂಗ್ ಮಾಸ್ಟರ್‍ಗಳು. ರಾಮೇಶ್ವರಂ ಕೆಫೆ ಬಾಂಬ್ ಹೊಗೆ ಏಳುತ್ತಿರುವಾಗಲೇ ಅದು ಹೋಟೆಲ್ ರೈವಲ್ರಿ ಎಂದಿದ್ದರು ಎಂದು ಟೀಕಿಸಿದರು.

ಇಂಥ ಘಟನೆಗಳಿಗೆ ಕಾರಣವಾದ ಈ ಸರಕಾರ ಬಹಳ ದಿನ ಉಳಿಯುವುದಿಲ್ಲ. ಇದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ಸರಕಾರ ಎಂದು ಬ್ರಾಂಡ್ ಆಗಿದೆ. ಇದು ಜನಕ್ಕೆ ಗೊತ್ತಾಗಿದೆ. ಪಾರ್ಲಿಮೆಂಟ್ ಚುನಾವಣೆಯಲ್ಲಿ ಜನರು ಇವರಿಗೆ ಪಾಠ ಕಲಿಸುತ್ತಾರೆ ಎಂದರು. ನಿಮ್ಮ ಏಕೈಕ ಎಂಪಿ, ಎಐಸಿಸಿ ಅಧ್ಯಕ್ಷ ಖರ್ಗೆಯವರು ಸಂಸತ್ತಿನಲ್ಲಿ ಏನು ಮಾಡಿದ್ದಾರೆ? ಕರ್ನಾಟಕದ ಪರವಾಗಿ ಬಾಯಿ ಬಿಟ್ಟೇ ಇಲ್ಲ; ನೀವೇನು ಮಾಡಿದ್ದೀರಿ ಎಂದು ರಾಜ್ಯದ ಜನರು ಕೇಳುತ್ತಿದ್ದಾರೆ ಎಂದು ತಿಳಿಸಿದರು.

ಹಿಂದೂಗಳ ರಕ್ಷಣೆ ಬಗ್ಗೆ ಆತಂಕ ಉಂಟಾಗಿದೆ. ದರಿದ್ರ ಸರಕಾರ ಇದು. ನಯಾಪೈಸೆ ಹಣ ಇಲ್ಲ. ಮೇ ಜೂನ್ ನಂತರ ಸಂಬಳ ಕೊಡಲು ದುಡ್ಡಿಲ್ಲ ಎಂಬ ಸ್ಥಿತಿ ಬಂದಿದೆ. ಪಿಂಚಣಿ, ಸ್ಕಾಲರ್‍ಶಿಪ್ ಕೊಟ್ಟಿಲ್ಲ. ಇದರ ಜೊತೆಗೆ ಕರ್ನಾಟಕದ ಶಾಂತಿಯ ತೋಟವನ್ನು ಮತಕ್ಕಾಗಿ ಹಾಳು ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಇದರ ವಿರುದ್ಧ ಹೋರಾಟ ಮುಂದುವರಿಸಲಿದ್ದೇವೆ ಎಂದು ಎಚ್ಚರಿಸಿದರು.

ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಅವರು ಹಾಜರಿದ್ದರು.

BREAKING: ಇವಿಎಂ-ವಿವಿಪ್ಯಾಟ್ ಪರಿಶೀಲನೆ ಪ್ರಕ್ರಿಯೆ ಬಗ್ಗೆ ವಿವರಣೆ ನೀಡುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ನಮ್ಮ ಬದ್ಧತೆ: ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ

Share. Facebook Twitter LinkedIn WhatsApp Email

Related Posts

BREAKING: ಮೈಸೂರಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

25/01/2026 8:28 PM1 Min Read

BIG NEWS : ಶರಣ್ ಪಂಪ್ವೆಲ್ ಗೆ ಹಾಸನ ಜಿಲ್ಲಾ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

25/01/2026 8:26 PM1 Min Read

BREAKING : ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ಗೆ ಆಕಸ್ಮಿಕ ಬೆಂಕಿ : ಅದೃಷ್ಟವಶಾತ್ ಪ್ರಯಾಣಿಕರು ಪಾರು

25/01/2026 7:56 PM1 Min Read
Recent News

BREAKING: ಮೈಸೂರಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

25/01/2026 8:28 PM

BIG NEWS : ಶರಣ್ ಪಂಪ್ವೆಲ್ ಗೆ ಹಾಸನ ಜಿಲ್ಲಾ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

25/01/2026 8:26 PM

SHOCKING: ಮಾಜಿ ಪ್ರೇಮಿಯ ಪತ್ನಿಗೆ ‘HIV’ ಇಂಜೆಕ್ಷನ್ ಚುಚ್ಚಿದ ಮಹಿಳೆ

25/01/2026 8:19 PM

ಇಂದು ದೇಶವನ್ನುದ್ದೇಶಿಸಿ 77ನೇ ಗಣರಾಜ್ಯೋತ್ಸವ ಮುನ್ನಾದಿನ ರಾಷ್ಟ್ರಪತಿ ಮುರ್ಮು ಮಾಡಿದ ಭಾಷಣದ ಹೈಲೈಟ್ಸ್ ಇಲ್ಲಿದೆ

25/01/2026 7:58 PM
State News
KARNATAKA

BREAKING: ಮೈಸೂರಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

By kannadanewsnow0925/01/2026 8:28 PM KARNATAKA 1 Min Read

ಮೈಸೂರು: ಜಿಲ್ಲೆಯಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವಂತ ಮನಕಲಕುವಂತ ಘಟನೆ ನಡೆದಿದೆ. ಮೈಸೂರಿನ…

BIG NEWS : ಶರಣ್ ಪಂಪ್ವೆಲ್ ಗೆ ಹಾಸನ ಜಿಲ್ಲಾ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

25/01/2026 8:26 PM

BREAKING : ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ಗೆ ಆಕಸ್ಮಿಕ ಬೆಂಕಿ : ಅದೃಷ್ಟವಶಾತ್ ಪ್ರಯಾಣಿಕರು ಪಾರು

25/01/2026 7:56 PM

Watch Video: ರಾಜ್ಯದಲ್ಲಿ ಮತ್ತೊಂದು ಖಾಸಗಿ ಬಸ್ ಅಗ್ನಿ ಅವಘಡ: ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

25/01/2026 7:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.