Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಭಾರತದಲ್ಲಿ 88 ದಿನಗಳಿಗೆ ಬೇಕಾಗುವಷ್ಟು ಕಲ್ಲಿದ್ದಲು ಲಭ್ಯ, ಬೇಡಿಕೆ ಹೆಚ್ಚಾಗಲಿದೆ ; ಕೇಂದ್ರ ಸರ್ಕಾರ

11/03/2026 6:55 PM

BREAKING : ಇರಾನ್ ಯುದ್ಧದಲ್ಲಿ ವ್ಯಾಪಾರಿ ಹಡಗಿನ ಮೇಲೆ ದಾಳಿ : ಇಬ್ಬರು ಭಾರತೀಯರು ಸಾವು, ಒರ್ವ ನಾಪತ್ತೆ!

11/03/2026 6:48 PM

ALERT : ಪುರುಷರೇ ಎಚ್ಚರ : ನೀವು ಈ 7 ಲೈಂಗಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು !

11/03/2026 6:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಮೌಲ್ಯದ ಜಮೀನು ಕಬಳಿಕೆ ಯತ್ನ: ಎಫ್‌ಐಆರ್ ರದ್ದತಿಗೆ ಹೈಕೋರ್ಟ್ ನಕಾರ
KARNATAKA

ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಮೌಲ್ಯದ ಜಮೀನು ಕಬಳಿಕೆ ಯತ್ನ: ಎಫ್‌ಐಆರ್ ರದ್ದತಿಗೆ ಹೈಕೋರ್ಟ್ ನಕಾರ

By kannadanewsnow0901/02/2026 10:20 AM

ಬೆಂಗಳೂರು: ಸಿವಿಲ್ ಮೊಕದ್ದಮೆಗಳು ಬಾಕಿ ಇದ್ದ ಮಾತ್ರಕ್ಕೆ ಗಂಭೀರ ಮತ್ತು ಸಂಜ್ಞೇಯ (ಕಾಗ್ನೈಜಬಲ್) ಅಪರಾಧಗಳ ತನಿಖೆಗೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಫೋರ್ಜರಿ ಹಾಗೂ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂ. ಮೌಲ್ಯದ ಜಮೀನು ಕಬಳಿಸಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ನಿರಾಕರಿಸಿದೆ.

ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ವೆಂಕಟ ರಾಮ ನಾಯ್ಡು ಕೋಲ (8ನೇ ಆರೋಪಿ) ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಜಾಗೊಳಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

ಪ್ರಕರಣದಲ್ಲಿ ಜಮೀನಿನ ನಿಜವಾದ ಮಾಲೀಕರ ಸೋಗಿನಲ್ಲಿ ವಂಚನೆ ಎಸಗಿದವರು ಯಾರು ಎಂಬ ಸತ್ಯ ತಿಳಿಯಲು ತನಿಖೆ ಅತ್ಯಗತ್ಯವಾಗಿದೆ. ಸಿವಿಲ್ ನ್ಯಾಯಾಲಯದಲ್ಲಿ ಬಾಕಿ ಇರುವ ದಾವೆಯು ಅರ್ಜಿದಾರರ ವಿರುದ್ಧದ ತನಿಖೆಯನ್ನು ಅಡ್ಡಿಪಡಿಸುವುದಿಲ್ಲ. ವ್ಯಕ್ತಿಯ ಸೋಗು ಹಾಗೂ ಫೋರ್ಜರಿಯಂಥ ಗಂಭೀರ ಅಪರಾಧಗಳ ತನಿಖೆಗೆ ಸಿವಿಲ್ ದಾವೆಗಳು ಅಡ್ಡಿಯಾಗುವುದಿಲ್ಲ ಎಂದು ತಿಳಿಸಿ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ತನಿಖಾ ಸಂಸ್ಥೆಯು ಕಾನೂನಿನ ಪ್ರಕಾರ ಕ್ರಮ ಕೈಗೊಂಡು, ಶೀಘ್ರ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು ಎಂದು ನಿರ್ದೇಶಿಸಿದೆ.

ಪ್ರಕರಣವೇನು?

ದೂರುದಾರೆ ಆರ್. ರಾಧಾ (ಪವರ್ ಆಫ್ ಅಟಾರ್ನಿ ವೆಂಕಟಪ್ಪ ಕೆ. ಮೂಲಕ ದೂರು ದಾಖಲಿಸಿರುವವರು) ಅವರ ಪತಿ ಎಸ್. ಕೃಷ್ಣನ್ ಬೆಂಗಳೂರು ಪೂರ್ವ ತಾಲೂಕಿನ ಬಿದರಹಳ್ಳಿ ಹೋಬಳಿಯ ಬಂಡಾಪುರ ಗ್ರಾಮದ 3 ವಿವಿಧ ಸರ್ವೆ ನಂಬರ್‌ಗಳಲ್ಲಿ 13 ಎಕರೆ 29 ಗುಂಟೆ ಜಮೀನುಗಳನ್ನು 1978ರ ಅಕ್ಟೋಬರ್ 6ರಂದು ಕ್ರಯ ಪತ್ರದ ಮೂಲಕ ಖರೀದಿಸಿದ್ದರು. ಕೃಷ್ಣನ್ ಅವರು 1986ರ ಮೇ 29ರಂದು ಮೃತಪಟ್ಟಿದ್ದರು. ಯಾವುದೇ ವಿಲ್ ಮಾಡದ ಕಾರಣ ಎಲ್ಲ ಆಸ್ತಿಗಳಿಗೆ ಅವರ ಪತ್ನಿ ರಾಧಾ ಅವರೇ ಏಕೈಕ ಉತ್ತರಾಧಿಕಾರಿಯಾಗಿದ್ದರು. ಈ ಜಮೀನುಗಳಿಗೆ ಸಂಬಂಧಿಸಿದ ಎಲ್ಲ ದಾಖಲೆಗಳು ರಾಧಾ ಅವರ ಹೆಸರಿಗೆ ವರ್ಗಾವಣೆ (ಮ್ಯುಟೇಶನ್) ಆಗಿತ್ತು. ಪತಿಯ ಮರಣದ ನಂತರ ತಮಿಳುನಾಡಿನ ತವರು ಮನೆಗೆ ತೆರಳಿದ್ದ ರಾಧಾ ಆಗಾಗ ಬೆಂಗಳೂರಿನಲ್ಲಿರುವ ಜಮೀನುಗಳಿಗೆ ಭೇಟಿ ನೀಡುತ್ತಿದ್ದರು.

ಈ ನಡುವೆ ರಾಧಾ ಅವರ ಅನುಪಸ್ಥಿತಿಯಲ್ಲಿ ಕೆಲ ಆರೋಪಿಗಳು, ನಕಲಿ ದಾಖಲೆಗಳನ್ನು ಸೃಷ್ಟಿ ಜಮೀನು ಲಪಟಾಯಿಸಲು ಸಂಚು ರೂಪಿಸಿದ್ದಾರೆ. ಆರೋಪಿಗಳದ್ದೇ ಮೂರು ಬೇರೆ ಬೇರೆ ಗುಂಪುಗಳಿದ್ದು, ರಾಧಾ ಎಂಬ ಹೆಸರಿನ ನಾಲ್ವರು ಉಪ ನೋಂದಣಾಧಿಕಾರಿ ಮುಂದೆ ಹಾಜರಾಗಿ ಸಹಿ ಹಾಕಿದ್ದಾರೆ ಎಂದು ಆರೋಪಿಸಿ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎರಡನೇ ಗುಂಪಿನಲ್ಲಿದ್ದ ಅರ್ಜಿದಾರರನ್ನು 8ನೇ ಆರೋಪಿಯನ್ನಾಗಿಸಲಾಗಿತ್ತು. ಇದರಿಂದ, ಎಫ್‌ಐಆರ್ ರದ್ದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್ ನಲ್ಲಿ ವಾದ-ಪ್ರತಿವಾದ:

ಅರ್ಜಿದಾರರ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಪಿ.ಎಸ್. ರಾಜಗೋಪಾಲ್ ಅವರು, ಪ್ರಕರಣ ಸಂಪೂರ್ಣವಾಗಿ ಸಿವಿಲ್ ಸ್ವರೂಪದ್ದಾಗಿದೆ. ದೂರುದಾರರಾಗಿರುವ ವೆಂಕಟಪ್ಪ (ವಿಶೇಷ ಪವರ್ ಆಫ್ ಅಟಾರ್ನಿ) ಅವರು ಸಿವಿಲ್ ಕೋರ್ಟ್‌ನಲ್ಲಿಯೂ ದಾವೆ ಹೂಡಿದ್ದಾರೆ. ಸಿವಿಲ್ ಪ್ರಕರಣವನ್ನು ಕ್ರಿಮಿನಲ್ ಪ್ರಕರಣವೆಂದು ಬಿಂಬಿಸಲಾಗಿದ್ದು, ಅದರಲ್ಲಿ ಕ್ರಿಮಿನಲ್ ಪ್ರಕ್ರಿಯೆ ಮುಂದುವರಿಸಲು ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದರಲ್ಲದೆ, ಈ ಸಂಬಂಧ ರಾಜೇಶ್‌ಭಾಯ್ ಮುಲ್ಜಿ‌ಭಾಯ್ ಪಟೇಲ್ ಹಾಗೂ ಗುಜರಾತ್ ಸರ್ಕಾರದ ನಡುವಿನ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ನ್ಯಾಯಪೀಠದ ಮುಂದಿಟ್ಟಿದ್ದರು.

ವೆಂಕಟಪ್ಪ ಪರ ಹಿರಿಯ ವಕೀಲ ವೆಂಕಟೇಶ್ ದಳವಾಯಿ ವಾದ ಮಂಡಿಸಿ, ಈ ಪ್ರಕರಣದಲ್ಲಿ ದೊಡ್ಡಮಟ್ಟದಲ್ಲಿ ವಂಚನೆ ನಡೆದಿದ್ದು, ರಾಧಾ ಎಂಬ ಹೆಸರಿನ ನಾಲ್ವರು ಸಬ್ ರಿಜಿಸ್ಟ್ರಾರ್ ಮುಂದೆ ಹಾಜರಾಗಿ ಕ್ರಯಪತ್ರಕ್ಕೆ ಸಹಿ ಹಾಕಿದ್ದಾರೆ. ನಿಜವಾದ ರಾಧಾ ಅವರು ವೆಂಕಟಪ್ಪ ಅವರಿಗೆ ವಿಶೇಷ ಪವರ್ ಆಫ್ ಅಟಾರ್ನಿ ನೀಡಿದ್ದು, ಅವರು ಎಂದಿಗೂ ಸಬ್ ರಿಜಿಸ್ಟ್ರಾರ್ ಮುಂದೆ ಹಾಜರಾಗಿಯೇ ಇಲ್ಲ. ರಾಧಾ ಹಾಗೂ ಅವರ ಕುಟುಂಬ ಸದಸ್ಯರ ಸೋಗಿನಲ್ಲಿ ಎಲ್ಲ ಆರೋಪಿಗಳೂ ಒಟ್ಟಾಗಿ ವಂಚನೆಯಿಂದ ಹೆಚ್ಚಿನ ಮೌಲ್ಯದ ಭೂಮಿಯ ದಾಖಲೆ ಪತ್ರಗಳನ್ನು ಸೃಷ್ಟಿಸಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.

ಹೈಕೋರ್ಟ್ ತೀರ್ಪು ಏನು?

ಸುಪ್ರೀಂಕೋರ್ಟ್‌ನ ಹಲವು ತೀರ್ಪುಗಳನ್ನು ಉಲ್ಲೇಖಿಸಿರುವ ನ್ಯಾಯಾಲಯ, ಆ ತೀರ್ಪುಗಳನ್ನು ಹಾಲಿ ಪ್ರಕರಣಕ್ಕೆ ಅನ್ವಯಿಸಿದಾಗ, ಇಲ್ಲಿನ ಆರೋಪಗಳು ಕೇವಲ ಒಪ್ಪಂದದ ಉಲ್ಲಂಘನೆ ಅಥವಾ ಹಕ್ಕುಗಳಿಗೆ ಸಂಬಂಧಿಸಿದ ವಿವಾದಗಳಿಗೆ ಮಾತ್ರ ಸೀಮಿತವಾಗಿಲ್ಲ. ಬದಲಿಗೆ ವಂಚನೆ, ವ್ಯಕ್ತಿಯ ಸೋಗು (Impersonation), ನಕಲಿ ದಾಖಲೆ ಸೃಷ್ಟಿ ಹಾಗೂ ವ್ಯವಸ್ಥಿತ ವಂಚನೆಯ ವ್ಯಾಪ್ತಿಗೆ ಒಳಪಡುತ್ತದೆ. ​ನಿಜವಾದ ಮಾಲೀಕನ ಅನುಪಸ್ಥಿತಿಯನ್ನು ಹೇಗೆ ದುರುಪಯೋಗಪಡಿಸಿಕೊಳ್ಳಲಾಗಿದೆ, ಕುಟುಂಬದ ಗುರುತುಗಳನ್ನು ಹೇಗೆ ಸೃಷ್ಟಿಸಲಾಗಿದೆ ಮತ್ತು ನಕಲಿ ಸಹಿ ಹಾಗೂ ವ್ಯಕ್ತಿಗಳ ಮೂಲಕ ಸರ್ಕಾರಿ ಕಚೇರಿಗಳನ್ನು ಹೇಗೆ ದಾರಿತಪ್ಪಿಸಲಾಗಿದೆ ಎಂಬುದನ್ನು ಪ್ರಕರಣದ ದೂರು ವಿವರಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಪ್ರಕರಣದಲ್ಲಿ ಛದ್ಮವೇಷಧಾರಿಗಳು ಅಥವಾ ಅಪರಾಧಿಗಳು ಯಾರು ಎಂಬುದನ್ನು ತಿಳಿಯಲು ಸಮಗ್ರ ತನಿಖೆಯ ಅಗತ್ಯವಿದೆ. ಇಂತಹ ತನಿಖೆಯನ್ನು ಆರಂಭದಲ್ಲೇ ತಡೆ ಹಿಡಿಯುವುದರಿಂದ ಅವಧಿಗೂ ಮುನ್ನವೇ ನ್ಯಾಯದ ಬಾಗಿಲು ಮುಚ್ಚಿದಂತೆ ಹಾಗೂ ವಂಚನೆಯ ಗಂಭೀರ ಆರೋಪಗಳಿಗೆ ಉತ್ತರವಿಲ್ಲದ ಹಾಗೆ ಮಾಡಿದಂತಾಗುತ್ತದೆ. ಅರ್ಜಿದಾರರ ಪರ ವಕೀಲರು ಉಲ್ಲೇಖಿಸಿರುವ ತೀರ್ಪು ಈ ಪ್ರಕರಣದ ಸನ್ನಿವೇಶ ಮತ್ತು ವಾಸ್ತವಾಂಶಗಳಿಗೆ ಭಿನ್ನವಾಗಿದೆ. ಆ ತೀರ್ಪು ಚೆಕ್ ಅಮಾನ್ಯ ಮತ್ತು ಅದಕ್ಕೆ ಸಂಬಂಧಿಸಿದ ಆರೋಪಗಳ ಹಿನ್ನೆಲೆಯಲ್ಲಿ ನೀಡಲಾದ ನಿರ್ಧಾರವಾಗಿದ್ದು, ಅದನ್ನು ಹಾಲಿ ಪ್ರಕರಣಕ್ಕೆ ಸಂಪೂರ್ಣವಾಗಿ ಅನ್ವಯಿಸಲು ಸಾಧ್ಯವಿಲ್ಲ. ಈ ಪ್ರಕರಣ ವ್ಯಕ್ತಿಯ ಸೋಗು ಮತ್ತು ನಕಲಿ ದಾಖಲೆಗಳ ಸೃಷ್ಟಿಯಂತಹ ಗಂಭೀರ ಆರೋಪಗಳಿಂದ ಕೂಡಿದ್ದು, ಪ್ರಕರಣ ರದ್ದುಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿ, ಅರ್ಜಿ ವಜಾಗೊಳಿಸಿದೆ.

Share. Facebook Twitter LinkedIn WhatsApp Email

Related Posts

ALERT : ಪುರುಷರೇ ಎಚ್ಚರ : ನೀವು ಈ 7 ಲೈಂಗಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು !

11/03/2026 6:47 PM2 Mins Read

ಬಜೆಟ್ ಮಾತ್ರವಲ್ಲ, ಇಡೀ ಕಾಂಗ್ರೆಸ್ ಸರ್ಕಾರ ನಡೆಯುತ್ತಿರುವುದೇ ಸುಳ್ಳಿನ ಕಂತೆಯ ಮೇಲೆ: ಆರ್.ಅಶೋಕ್

11/03/2026 6:39 PM1 Min Read

ಗೃಹಬಳಕೆ ಎಲ್‌ಪಿಜಿ ಪೂರೈಕೆಯಲ್ಲಿ ಆತಂಕ ಬೇಡ: ಮಿತವಾಗಿ ಬಳಸಲು ಸಚಿವ ಕೆ.ಎಚ್. ಮುನಿಯಪ್ಪ ಮನವಿ

11/03/2026 6:33 PM2 Mins Read
Recent News

BREAKING : ಭಾರತದಲ್ಲಿ 88 ದಿನಗಳಿಗೆ ಬೇಕಾಗುವಷ್ಟು ಕಲ್ಲಿದ್ದಲು ಲಭ್ಯ, ಬೇಡಿಕೆ ಹೆಚ್ಚಾಗಲಿದೆ ; ಕೇಂದ್ರ ಸರ್ಕಾರ

11/03/2026 6:55 PM

BREAKING : ಇರಾನ್ ಯುದ್ಧದಲ್ಲಿ ವ್ಯಾಪಾರಿ ಹಡಗಿನ ಮೇಲೆ ದಾಳಿ : ಇಬ್ಬರು ಭಾರತೀಯರು ಸಾವು, ಒರ್ವ ನಾಪತ್ತೆ!

11/03/2026 6:48 PM

ALERT : ಪುರುಷರೇ ಎಚ್ಚರ : ನೀವು ಈ 7 ಲೈಂಗಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು !

11/03/2026 6:47 PM

ಬಜೆಟ್ ಮಾತ್ರವಲ್ಲ, ಇಡೀ ಕಾಂಗ್ರೆಸ್ ಸರ್ಕಾರ ನಡೆಯುತ್ತಿರುವುದೇ ಸುಳ್ಳಿನ ಕಂತೆಯ ಮೇಲೆ: ಆರ್.ಅಶೋಕ್

11/03/2026 6:39 PM
State News
KARNATAKA

ALERT : ಪುರುಷರೇ ಎಚ್ಚರ : ನೀವು ಈ 7 ಲೈಂಗಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು !

By kannadanewsnow5711/03/2026 6:47 PM KARNATAKA 2 Mins Read

ಬೆಂಗಳೂರು: ಸಾಮಾನ್ಯವಾಗಿ ಪುರುಷರು ತಮ್ಮನ್ನು ತಾವು ದೈಹಿಕವಾಗಿ ಸದೃಢರು ಮತ್ತು ಅಜೇಯರು ಎಂದು ಭಾವಿಸುತ್ತಾರೆ. ಆದರೆ ಇಂದಿನ ಒತ್ತಡದ ಜೀವನಶೈಲಿ,…

ಬಜೆಟ್ ಮಾತ್ರವಲ್ಲ, ಇಡೀ ಕಾಂಗ್ರೆಸ್ ಸರ್ಕಾರ ನಡೆಯುತ್ತಿರುವುದೇ ಸುಳ್ಳಿನ ಕಂತೆಯ ಮೇಲೆ: ಆರ್.ಅಶೋಕ್

11/03/2026 6:39 PM

ಗೃಹಬಳಕೆ ಎಲ್‌ಪಿಜಿ ಪೂರೈಕೆಯಲ್ಲಿ ಆತಂಕ ಬೇಡ: ಮಿತವಾಗಿ ಬಳಸಲು ಸಚಿವ ಕೆ.ಎಚ್. ಮುನಿಯಪ್ಪ ಮನವಿ

11/03/2026 6:33 PM

BREAKING : 2026ರ ‘IPL’ ವೇಳಾಪಟ್ಟಿ ಪ್ರಕಟ : ಮಾ.28ಕ್ಕೆ ಬೆಂಗಳೂರಿನಲ್ಲೇ ಹೈದರಾಬಾದ್ ವಿರುದ್ಧ ‘RCB’ ಸೆಣಸಾಟ |IPL 2026 Schedule

11/03/2026 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.