ಬೆಂಗಳೂರು: ಬೆಂಗಳೂರಿನಲ್ಲಿ ಜೂನ್ 19 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.
ಬೆಂಗಳೂರು ನಗರದ ಜನತೆಗೆ ಅಡತಡೆಯಿಲ್ಲದೆ ನೀರನ್ನು ಸರಬರಾಜು ಮಾಡುವ ಉದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3 ಮೀಟರ್ ವ್ಯಾಸದ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ ವಿದ್ಯುತ್ ಸ್ಥಾವರಗಳ ವಾರ್ಷಿಕ ನಿರ್ವಹಣೆ, ತುರ್ತು ಕಾಮಗಾರಿ ಮತ್ತು ವಿವಿಧ ವಾರ್ಷಿಕ, ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಬೇಕಿರುವುದರಿಂದ ಗುರುವಾರ (ಜೂ.19) ಬೆಳಗ್ಗೆ 6ರಿಂದ 20 ಬೆಳಗ್ಗೆ 6ರವರೆಗೆ ಕಾವೇರಿ ನೀರಿನ ಪೂರೈಕೆ ಇರುವುದಿಲ್ಲ.
ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡತಡೆಯಿಲ್ಲದೇ ನೀರನ್ನು ಸರಬರಾಜು ಮಾಡುವ ಸದುದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3000 ಮಿ.ಮೀ. ವ್ಯಾಸ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ ವಿದ್ಯುತ್ ಸ್ಥಾವರಗಳ ವಾರ್ಷಿಕ ನಿರ್ವಹಣೆ, ತುರ್ತು ಕಾಮಗಾರಿ ಮತ್ತು ವಿವಿಧ ವಾರ್ಷಿಕ/ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕಾಗಿರುತ್ತದೆ.
ಆದುದರಿಂದ, ส่งส่งต ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ ໖: 19-06-20258 ಗುರುವಾರ ಬೆಳಿಗ್ಗೆ 6-00 ಗಂಟೆಯಿಂದ ದಿನಾಂಕ: 20-06-2025ರ ಶುಕ್ರವಾರ ಬೆಳಿಗ್ಗೆ 6-00 ಗಂಟೆಯವರೆಗೆ ಒಟ್ಟು 24 ಗಂಟೆಗಳು ಕಾವೇರಿ ನೀರು ನೀರು ಸರಬರಾಜು ಯೋಜನೆಯ ಎಲ್ಲ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲು (SHUTDOWN) ಸಕ್ಷಮ ಪ್ರಾಧಿಕಾರ ರವರು ಅನುಮೋದನೆ ನೀಡಿರುತ್ತಾರೆ.
ಅದರಂತೆ, ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ-5ರವರೆಗಿನ ಜಲರೇಚಕ ಯಂತ್ರಾಗಾರಗಳ ಸ್ಥಗಿತತೆಯಿಂದ ಬೃಹತ್ ಬೆಂಗಳೂರು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಬೆಂಗಳೂರಿನ ನಾಗರೀಕರಿಗೆ ಹಾಗೂ ವಾಣಿಜ್ಯ/ಕೈಗಾರಿಕಾ ಪ್ರದೇಶಗಳಿಗೆ ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳಲು ಮಾಹಿತಿಯನ್ನು ಪ್ರಚುರಪಡಿಸಲು ಮತ್ತು ಎಲ್ಲಾ ರೀತಿಯ ಮಾಧ್ಯಮಗಳಲ್ಲಿ ಪ್ರಕಟಣೆಗೊಳಿಸಲು ಈ ಮೂಲಕ ಸೂಚಿಸಲಾಗಿದೆ.