Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ED ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

22/07/2025 2:13 PM

ಉದ್ಯೋಗಿಗಳೇ ಗಮನಿಸಿ : ‘ESE’ ನೋಂದಣಿಗೆ ಇಲ್ಲಿದೆ ಅವಕಾಶ.! | ESE Registration

22/07/2025 2:06 PM

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಪ್ರತಿ ವರ್ಷ 20,000 ರೂ. `ಸ್ಕಾಲರ್ ಶಿಪ್’.!

22/07/2025 1:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಿಗಳೇ ಗಮನಿಸಿ : ‘ESE’ ನೋಂದಣಿಗೆ ಇಲ್ಲಿದೆ ಅವಕಾಶ.! | ESE Registration
KARNATAKA

ಉದ್ಯೋಗಿಗಳೇ ಗಮನಿಸಿ : ‘ESE’ ನೋಂದಣಿಗೆ ಇಲ್ಲಿದೆ ಅವಕಾಶ.! | ESE Registration

By kannadanewsnow0522/07/2025 2:06 PM

ರಾಯಚೂರು : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವೀಯ ಅವರ ಅಧ್ಯಕ್ಷತೆಯಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆದ ಕಾರ್ಮಿಕರ ರಾಜ್ಯ ವಿಮಾ ನಿಗಮದ 196ನೇ ಸಭೆಯಲ್ಲಿ ಕಾರ್ಮಿಕರ ರಾಜ್ಯ ವಿಮಾ ನಿಗಮವು (ಇಎಸ್‌ಐಸಿ) ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು ಉತ್ತೇಜಿಸುವ ಯೋಜನೆ–2025ರ ಎಂಬ ನವೀಕೃತ ಯೋಜನೆಯನ್ನು ಇತ್ತೀಚೆಗೆ ಅನುಮೋದಿಸಲಾಯಿತು.

ಕಾರ್ಮಿಕರ ರಾಜ್ಯ ವಿಮಾ ನಿಗಮವು ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಅನುಮೋದಿಸಿದ ಒಂದು ವಿಶೇಷ ಉಪಕ್ರಮವಾಗಿದೆ. 2025ರ ಜುಲೈ 1ರಿಂದ 2025ರ ಡಿಸೆಂಬರ್ 31ರವರೆಗೆ ಸಕ್ರಿಯವಾಗಿದ್ದು, ಗುತ್ತಿಗೆ ಹಾಗೂ ತಾತ್ಕಾಲಿಕ ಕಾರ್ಮಿಕರು ಸೇರಿದಂತೆ ಇಎಸ್‌ಇ ಅಡಿಯಲ್ಲಿ ಇನ್ನೂ ನೋಂದಾವಣೆಯಾಗದ ಉದ್ಯೋಗದಾತರು ಮತ್ತು ಉದ್ಯೋಗಿಗಳು ಯಾವುದೇ ಪರಿಶೀಲನೆ ಅಥವಾ ಹಿಂದಿನ ಅವಧಿಯ ಯಾವುದೇ ಬಾಕಿಯ ಬೇಡಿಕೆ ಇಲ್ಲದೇ ನೋಂದಾಯಿಸಿಕೊಳ್ಳಲು ಒಂದು ಬಾರಿಯ ಅವಕಾಶವನ್ನು ಒದಗಿಸಲಾಗಿದೆ.

ಎಸ್‌ಪಿಆರ್‌ಇಇ 2025ರ ಅಡಿಯಲ್ಲಿ: ಉದ್ಯೋಗದಾತರು ತಮ್ಮ ಘಟಕಗಳು ಮತ್ತು ಉದ್ಯೋಗಿಗಳನ್ನು ಇಎಸ್‌ಐಸಿ ಪೋರ್ಟಲ್, ಶ್ರಮ್ ಸುವಿಧಾ, ಮತ್ತು ಎಂಸಿಎ ಪೋರ್ಟಲ್ ಮೂಲಕ ಡಿಜಿಟಲ್ ರೂಪದಲ್ಲಿ ನೋಂದಾಯಿಸಿಕೊಳ್ಳಬಹುದು. ಉದ್ಯೋಗದಾತರು ತಾವು ಘೋಷಿಸಿದ ದಿನಾಂಕದಿಂದ ನೋಂದಣಿಯನ್ನು ಪರಿಗಣಿಸಲಾಗುತ್ತದೆ. ನೋಂದಣಿಯ ಪೂರ್ವ ಅವಧಿಗೆ ಯಾವುದೇ ವಂತಿಗೆ ಮತ್ತು ಸೌಲಭ್ಯವನ್ನು ಅನ್ವಯಿಸುವುದಿಲ್ಲ. ನೋಂದಣಿಯ ಪೂರ್ವ ಅವಧಿಯ ಯಾವುದೇ ದಾಖಲೆಗಳ ಪರಿಶೀಲನೆ ಅಥವಾ ಬೇಡಿಕೆ ಇರುವುದಿಲ್ಲ.

ಈ ಯೋಜನೆಯು ಸ್ವಯಂಪ್ರೇರಿತವಾದ ಅನುಸರಣೆಯನ್ನು ಪ್ರೋತ್ಸಾಹಿಸಿ ಹಿಂದಿನ ಅವಧಿಗೆ ದಂಡ ಪಾವತಿಸಬೇಕಾದ ಭಯವನ್ನು ಹೋಗಲಾಡಿಸಿ ನೋಂದಾವಣಿಯ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದೆ. ಎಸ್‌ಪಿಆರ್‌ಇಇ 2025ನ್ನು ಅನುಮೋದಿಸುವ ಮೊದಲು ನಿಗಧಿತ ಅವಧಿಯಲ್ಲಿ ನೋಂದಾವಣೆ ಮಾಡದಿದ್ದಲ್ಲಿ ಕಾನೂನು ಕ್ರಮ ಹಾಗೂ ಹಿಂದಿನ ಅವಧಿಯ ಬಾಕಿ ಬೇಡಿಕೆಗೆ ಕಾರಣವಾಗುತ್ತಿತ್ತು. ಎಸ್‌ಪಿಆರ್‌ಇಇ 2025 ಈ ಅಡೆತಡೆಗಳನ್ನು ನಿವಾರಿಸಿ ನೋಂದಾವಣೆಯಿAದ ಬಿಟ್ಟುಹೋದ ಘಟಕಗಳು ಮತ್ತು ಕಾರ್ಮಿಕರನ್ನು ಇಎಸ್‌ಐ ವ್ಯಾಪ್ತಿಯೊಳಗೆ ಸೇರಿಸಿ ಸಾಮಾಜಿಕ ಭದ್ರತೆಯನ್ನು ಖಚಿತಪಡಿಸುತ್ತದೆ.

ಎಸ್‌ಪಿಆರ್‌ಇಇ 2025ರ ಪ್ರಾರಂಭವು ಕಾರ್ಮಿಕರ ರಾಜ್ಯ ವಿಮಾ ನಿಗಮದ ಒಂದು ಪ್ರಗತಿಪರ ಹೆಜ್ಜೆಯಾಗಿದ್ದು, ಸರಳ ಮತ್ತು ಹಿಂದಿನ ಅವಧಿಯ ಬಾಕಿಯ ಬೇಡಿಕೆಯಿಲ್ಲದೆ ನೋಂದಾವಣೆಯಾಗಿ ಸುಲಭವಾಗಿ ಸಾಮಾಜಿಕ ಭದ್ರತೆಗೆ ಒಳಪಡುವ ಯೋಜನೆಯಾಗಿದೆ. ಈ ಯೋಜನೆಯು ಉದ್ಯೋಗದಾತರು ಕೇವಲ ತಮ್ಮ ಕಾರ್ಯಪಡೆಯ ಕ್ರಮಬದ್ಧಗೊಳಿಸುವಿಕೆಯನ್ನು ಪ್ರೋತ್ಸಾಹಿಸುವುದಲ್ಲದೆ, ಇನ್ನೂ ಹೆಚ್ಚಿನ ಕಾರ್ಮಿಕರನ್ನು ವಿಶೇಷವಾಗಿ ಗುತ್ತಿಗೆ ವಲಯದ ಕಾರ್ಮಿಕರು ಇಎಸ್‌ಐ ಕಾಯ್ದೆಯಡಿಯಲ್ಲಿ ದೊರೆಯುವ ಅಗತ್ಯ ಆರೋಗ್ಯ ರಕ್ಷಣೆ ಹಾಗೂ ಸಾಮಾಜಿಕ ಸೌಲಭ್ಯಗಳನ್ನು ಪಡೆಯುವುದನ್ನು ಉತ್ತೇಜಿಸುತ್ತದೆ. ಇದರೊಂದಿಗೆ ಇಎಸ್‌ಐಸಿಯು ಅಗತ್ಯ ಆರೋಗ್ಯ ರಕ್ಷಣೆ ಮತ್ತು ಸಾಮಾಜಿಕ ಭದ್ರತೆಯನ್ನು ತಲುಪಿಸುವ ತನ್ನ ಬದ್ಧತೆಯನ್ನು ಉಳಿಸಿಕೊಂಡು ಭಾರತದ ಕಾರ್ಮಿಕ ಕಲ್ಯಾಣ ಕೇಂದ್ರಿತ ದೃಷ್ಟಿಕೋನಕ್ಕೆ ಅನುಗುಣವಾಗಿದೆ ಎಂದು ಕಾರ್ಮಿಕರ ರಾಜ್ಯ ವಿಮಾ ನಿಗಮದ ಜಿಲ್ಲಾ ಶಾಖಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ED ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

22/07/2025 2:13 PM2 Mins Read

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಪ್ರತಿ ವರ್ಷ 20,000 ರೂ. `ಸ್ಕಾಲರ್ ಶಿಪ್’.!

22/07/2025 1:39 PM2 Mins Read

ಗಮನಿಸಿ : ಮಾನಸಿಕ ಸಮಸ್ಯೆ ನಿವಾರಣೆಗೆ ತಪ್ಪದೇ ಈ ಸಂಖ್ಯೆಗೆ ಕರೆ ಮಾಡಿ.!

22/07/2025 1:26 PM1 Min Read
Recent News

ED ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

22/07/2025 2:13 PM

ಉದ್ಯೋಗಿಗಳೇ ಗಮನಿಸಿ : ‘ESE’ ನೋಂದಣಿಗೆ ಇಲ್ಲಿದೆ ಅವಕಾಶ.! | ESE Registration

22/07/2025 2:06 PM

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಪ್ರತಿ ವರ್ಷ 20,000 ರೂ. `ಸ್ಕಾಲರ್ ಶಿಪ್’.!

22/07/2025 1:39 PM

BREAKING: ಅಹ್ಮದಾಬಾದ್ ಬಳಿಕ ನಾಗ್ಪುರ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ | Bomb threat

22/07/2025 1:35 PM
State News
KARNATAKA

ED ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

By kannadanewsnow0922/07/2025 2:13 PM KARNATAKA 2 Mins Read

ಬೆಂಗಳೂರು: “ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದಾಗಿದೆ” ಎಂದು ಬಮುಲ್ ಅಧ್ಯಕ್ಷ ಹಾಗೂ ನಿಕಟಪೂರ್ವ…

ಉದ್ಯೋಗಿಗಳೇ ಗಮನಿಸಿ : ‘ESE’ ನೋಂದಣಿಗೆ ಇಲ್ಲಿದೆ ಅವಕಾಶ.! | ESE Registration

22/07/2025 2:06 PM

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಪ್ರತಿ ವರ್ಷ 20,000 ರೂ. `ಸ್ಕಾಲರ್ ಶಿಪ್’.!

22/07/2025 1:39 PM

ಗಮನಿಸಿ : ಮಾನಸಿಕ ಸಮಸ್ಯೆ ನಿವಾರಣೆಗೆ ತಪ್ಪದೇ ಈ ಸಂಖ್ಯೆಗೆ ಕರೆ ಮಾಡಿ.!

22/07/2025 1:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.