ಬೆಂಗಳೂರು : ರಾಜ್ಯ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮೂಲಕ ನೋಂದಾಯಿತ ಕಾರ್ಮಿಕರಿಗೆ ನೀಡುವ ಸೌಲಭ್ಯಗಳ ಸಂಪೂರ್ಣ ವಿವರ ಇಲ್ಲಿದೆ.
ಫಲಾನುಭವಿಗಳಿಗೆ ಸಿಗುವ ಸೌಲಭ್ಯಗಳು
1. ಪಿಂಚಣಿ ಸೌಲಭ್ಯ: ಮೂರು ವರ್ಷ ಸದಸ್ಯತ್ವದೊಂದಿಗೆ 60 ವರ್ಷ ಪೂರೈಸಿದ ಫಲಾನುಭವಿಗೆ ಮಾಸಿಕ ರೂ.1,000/-
2. ದುರ್ಬಲತೆ ಪಿಂಚಣಿ: ನೋಂದಾಯಿತ ಫಲಾನುಭವಿಯು ಖಾಯಿಲೆಗಳಿಂದ ಅಥವಾ ಕಟ್ಟಡ ಕಾಮಗಾರಿಗಳ ಅಪಘಾತದಿಂದ ಶಾಶ್ವತ/ಭಾಗಶಃ ಅಂಗವಿಕಲತೆ ಹೊಂದಿದ್ದರೆ ಮಾಸಿಕ ರೂ.1,000/- ಪಿಂಚಣಿ ಹಾಗೂ ಶೇಕಡವಾರು ದುರ್ಬಲತೆಯನ್ನಾಧರಿಸಿ ರೂ.2,00,000/-ದವರೆಗೆ ಅನುಗ್ರಹ ರಾಶಿ ಸಹಾಯಧನ.
3. ಟ್ರೈನಿಂಗ್-ಕಮ್-ಟೂಲ್ಕಿಟ್ ಸೌಲಭ್ಯ (ಶ್ರಮ ಸಾಮರ್ಥ್ಯ) : ರೂ.20.000/- ವರೆಗೆ
4. ವಸತಿ ಸೌಲಭ್ಯ (ಕಾರ್ಮಿಕ ಗೃಹ ಭಾಗ್ಯ): ರೂ.2.00.000/-ದವರೆಗೆ ‘ಮುಂಗಡ ಸೌಲಭ್ಯ
5. ಹೆರಿಗೆ ಸೌಲಭ್ಯ (ತಾಯಿ ಲಕ್ಷ್ಮೀ ಬಾಂಡ್): ಮಹಿಳಾ ಫಲಾನುಭವಿಯ ಮೊದಲ ಎರಡು ಮಕ್ಕಳಿಗೆ ಹೆಣ್ಣು ಮಗುವಿನ ಜನನಕ್ಕೆ ರೂ. 30,000/- ಮತ್ತು ಗಂಡು ಮಗುವಿನ ಜನನಕ್ಕೆ ರೂ.20,000/-
6. ಅಂತ್ಯಕ್ರಿಯೆ ವೆಚ್ಚ : ರೂ.4,000/- ಹಾಗೂ ಅನುಗ್ರಹ ರಾಶಿ ರೂ.50,000/-ಸಹಾಯಧನ
7. ಶೈಕ್ಷಣಿಕ ಸಹಾಯಧನ (ಕಲಿಕೆ ಭಾಗ್ಯ): ಫಲಾನುಭವಿಯ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ:
i) 1. 2 ಹಾಗೂ 3ನೇ ತರಗತಿಯಲ್ಲಿ ಉತ್ತೀರ್ಣರಾದವರಿಗೆ ರೂ. 2,000/-
vi) ಐಟಿಐ ಮತ್ತು ಡಿಪ್ಲೋಮಾ ಉತ್ತೀರ್ಣರಾದವರಿಗೆ ಪ್ರತಿ ವರ್ಷಕ್ಕೆ ರೂ. 7,000/-
vii) ಪದವಿ ಉತ್ತೀರ್ಣರಾದವರಿಗೆ ಪ್ರತಿ ವರ್ಷಕ್ಕೆ ರೂ. 10,000/-
vii) ಸ್ನಾತಕೋತ್ತರ ಪದವಿ ಸೇರ್ಪಡೆಗೆ ರೂ. 20,000/- ಹಾಗೂ ಪ್ರತಿ ವರ್ಷ ರೂ.10,000/-ಗಳಂತೆ (ಎರಡು ವರ್ಷಗಳಿಗೆ)
ix) ಇಂಜಿನಿಯರಿಂಗ್ ಕೋರ್ಸ್ಗೆ ಸೇರ್ಪಡೆಗೆ ರೂ.25,000/- ಹಾಗೂ ಪ್ರತಿ ವರ್ಷ ತೇರ್ಗಡೆಗೆ ರೂ.20,000/-
x) ವೈದ್ಯಕೀಯ ಕೋರ್ಸ್ಗೆ ಸೇರ್ಪಡೆಗೆ ರೂ.30,000/- ಹಾಗೂ ಪ್ರತಿ ವರ್ಷ ತೇರ್ಗಡೆಗೆ ರೂ.25,000/-
xi) ಪಿಹೆಚ್ಡಿ ಕೋರ್ಸ್ಗೆ ಪ್ರತಿ ವರ್ಷಕ್ಕೆ ರೂ.20,000/- (ಗರಿಷ್ಠ ಎರಡು ವರ್ಷಗಳು) ಮತ್ತು ಪಿಹೆಚ್ಡಿ ಪ್ರಬಂಥ ಸ್ವೀಕಾರದ ನಂತರ ಹೆಚ್ಚುವರಿಯಾಗಿ ರೂ.20,000/-
ಪ್ರತಿಭಾವಂತ ಮಕ್ಕಳಿಗಾಗಿ:
(೩) ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಶೇ.75 ಅಂಕ ‘ಪಡೆದವರಿಗೆ ರೂ.5,000/-
(b) ಪಿಯುಸಿ ಅಥವಾ ತತ್ಸಮಾನ ತರಗತಿಯಲ್ಲಿ ಶೇ.75 ಅಂಕ ಪಡೆದವರಿಗೆ ರೂ.7,000/-
(c) ಪದವಿ ಅಥವಾ ತತ್ಸಮಾನ ಕೋರ್ಸ್ನಲ್ಲಿ ಶೇ.75 ಅಂಕ ಪಡೆದವರಿಗೆ ರೂ.10,000/-
(d) ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಕೋರ್ಸ್ನಲ್ಲಿ ಶೇ.75 ಅಂಕ ಪಡೆದವರಿಗೆ ರೂ.15,000/-
8. ವೈದ್ಯಕೀಯ ಸಹಾಯಧನ (ಕಾರ್ಮಿಕ ಆರೋಗ್ಯ ಭಾಗ್ಯ): ನೋಂದಾಯಿತ ಫಲಾನುಭವಿ ಹಾಗೂ ಅವರ ಅವಲಂಭಿತರಿಗೆ ರೂ.300/- ರಿಂದ 20.10.000/-
9. ಅಪಘಾತ ಪರಿಹಾರ: ಮರಣ ಹೊಂದಿದ್ದಲ್ಲಿ ರೂ.5,00,000/-, ಸಂಪೂರ್ಣ ಶಾಶ್ವತ ದುರ್ಬಲತೆಯಾದಲ್ಲಿ ರೂ.2,00,000/- ಮತ್ತು ಭಾಗಶಃ ಶಾಶ್ವತ ದುರ್ಬಲತೆಯಾದಲ್ಲಿ ರೂ.1,00,000/-
10. ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ (ಕಾರ್ಮಿಕ ಚಿಕಿತ್ಸಾ ಭಾಗ್ಯ): ಹೃದ್ರೋಗ, ಕಿಡ್ನಿ ಜೋಡಣೆ, ಕ್ಯಾನ್ಸರ್ ಶಸ್ತ್ರಚಿಕಿತ್ಸೆ, ಕಣ್ಣಿನ ಶಸ್ತ್ರಚಿಕಿತ್ಸೆ, ಪಾರ್ಶ್ವವಾಯು, ಮೂಳೆ ಶಸ್ತ್ರಚಿಕಿತ್ಸೆ, ಗರ್ಭಕೋಶ ಶಸ್ತ್ರಚಿಕಿತ್ಸೆ, ಅಸ್ತಮ ಚಿಕಿತ್ಸೆ, ಗರ್ಭಪಾತ ಪ್ರಕರಣಗಳು, ಪಿತ್ತಕೋಶದ ತೊಂದರೆಗೆ ಸಂಬಂಧಿತ ಚಿಕಿತ್ಸೆ, ಮೂತ್ರ ಪಿಂಡದಲ್ಲಿನ ಕಲ್ಲು ತೆಗೆಯುವ ಚಿಕಿತ್ಸೆ, ಮೆದುಳಿನ ರಕ್ತಸ್ರಾವದ ಚಿಕಿತ್ಸೆ, ಅಲ್ಲರ್ ಚಿಕಿತ್ಸೆ, ಡಯಾಲಿಸಿಸ್ ಚಿಕಿತ್ಸೆ, ಕಿಡ್ನಿ ಶಸ್ತ್ರಚಿಕಿತ್ಸೆ, ಇ.ಎನ್.ಟಿ. ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ನರರೋಗ ಶಸ್ತ್ರಚಿಕಿತ್ಸೆ, ವ್ಯಾಗ್ಯೂಲರ್ ಶಸ್ತ್ರಚಿಕಿತ್ಸೆ, ಅನ್ನನಾಳದ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ಕರುಳಿನ ಶಸ್ತ್ರಚಿಕಿತ್ಸೆ. ಸ್ತನ ಸಂಬಂಧಿತ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ಹರ್ನಿಯ ಶಸ್ತ್ರಚಿಕಿತ್ಸೆ, ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ ‘ಮೂಳೆ ಮುರಿತ/ಡಿಸ್ಲೊಕೇಶನ್ ಚಿಕಿತ್ಸೆ ಸಾಮಾನ್ಯ ಶಸ್ತ್ರಚಿಕಿತ್ಸೆಗಳಿಗೆ ರೂ.2,00,000/-ವರೆಗೆ
11. ಮದುವೆ ಸಹಾಯಧನ (ಗೃಹ ಲಕ್ಷ್ಮೀ ಬಾಂಡ್): ಫಲಾನುಭವಿ ಅಥವಾ ಅವರ ಇಬ್ಬರು ಮಕ್ಕಳ ಮದುವೆಗೆ ತಲಾ ರೂ.50,000/-
12. LPG ಸಂಪರ್ಕ ಸೌಲಭ್ಯ (ಕಾರ್ಮಿಕ ಅನಿಲ ಭಾಗ್ಯ): ಅನಿಲ ಸಂಪರ್ಕದೊಂದಿಗೆ ಎರಡು ಬರ್ನರ್ ಸೌವ್
13. ಬಿಎಂಟಿಸಿ ಬಸ್ ಪಾಸ್ ಸೌಲಭ್ಯ: ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವಂತಹ / ವಾಸಸ್ಥಳದಿಂದ ಬೆಂಗಳೂರಿಗೆ ಪ್ರಯಾಣಿಸುವ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ
14. ಕೆಎಸ್ಆರ್ಟಿಸಿ ಬಸ್ ಪಾಸ್ ಸೌಲಭ್ಯ: ರಾಜ್ಯದಾದ್ಯಂತ ವಿದ್ಯಾಭ್ಯಾಸದಲ್ಲಿ ತೊಡಗಿರುವ ನೋಂದಾಯಿತು ಕಾರ್ಮಿಕರ ಇಬ್ಬರು ಮಕ್ಕಳಿಗೆ
15. ತಾಯಿ ಮಗು ಸಹಾಯ ಹಸ್ತ: ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಆಕೆಯ ಮಗುವಿನ ಶಾಲಾ ಪೂರ್ವ ಶಿಕ್ಷಣ ಮತ್ತು ಪೌಷ್ಠಿಕತೆಗಾಗಿ ಮಗುವಿಗೆ ಮೂರು ವರ್ಷಗಳು ತುಂಬುವವರೆಗೆ ವಾರ್ಷಿಕ ರೂ.6,000/-ಗಳ ಸಹಾಯಧನ.









