Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸಾಗರ ‘ಬೆಳೆಯೂರು ಶಾಲೆ’ಯಲ್ಲಿ ಊಟದ ವಿಚಾರದಲ್ಲಿ ‘ಜಾತಿ ತಾರತಮ್ಯ’, ಪ್ರಶ್ನಿಸಿದ್ದಕ್ಕೆ ಬೆದರಿಕೆ

08/11/2025 10:18 PM

ನೀವು ಯಾವ ಬ್ಯಾಂಕಿನಿಂದ ಎಷ್ಟು ಬಾರಿ ‘ಹಣ’ ವಿತ್ ಡ್ರಾ ಮಾಡ್ಬೋದು.? ಇಲ್ಲಿದೆ ಮಾಹಿತಿ.!

08/11/2025 10:12 PM

ದೀನದಲಿತರ ಬಗ್ಗೆ ಕಾಳಜಿ ಹೊಂದಿದ್ದವರು ಸಿಎಂ ಸಿದ್ದರಾಮಯ್ಯ ಮಾತ್ರ: ಸಚಿವ ಶಿವರಾಜ್ ತಂಗಡಗಿ

08/11/2025 10:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆ ಗಮನಕ್ಕೆ : ಆನ್ ಲೈನ್ ನಲ್ಲಿ ‘ಜಾತಿ ಗಣತಿ ಸಮೀಕ್ಷೆ’ಯಲ್ಲಿ ಭಾಗವಹಿಸಲು ಈ ಸಂಖ್ಯೆಗೆ ಕರೆ ಮಾಡಿ.!
KARNATAKA

ರಾಜ್ಯದ ಜನತೆ ಗಮನಕ್ಕೆ : ಆನ್ ಲೈನ್ ನಲ್ಲಿ ‘ಜಾತಿ ಗಣತಿ ಸಮೀಕ್ಷೆ’ಯಲ್ಲಿ ಭಾಗವಹಿಸಲು ಈ ಸಂಖ್ಯೆಗೆ ಕರೆ ಮಾಡಿ.!

By kannadanewsnow5724/09/2025 10:46 AM

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಸಾರ್ವಜನಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ರಾಜ್ಯದಲ್ಲಿ ಸೆಪ್ಟೆಂಬರ್.22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದೆ.

ಈಗಾಗಲೇ ಪ್ರತಿ ಮನೆಗೂ ಸರ್ಕಾರದಿಂದ ನಿಯೋಜಿತವಾಗುವ ಗಣತಿದಾರರು ಮೊಬೈಲ್ ಆಪ್ ಮುಖೇನ ಸಮೀಕ್ಷೆ ಕೈಗೊಳ್ಳಲಿದ್ದು, ಆ ಸಮಯದಲ್ಲಿ ಸಾರ್ವಜನಿಕರು ಸೂಕ್ತ ಮಾಹಿತಿ ಒದಗಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸಲು ಹಾಗೂ ಆ ಮೂಲಕ ರಾಜ್ಯದ ಅಭಿವೃದ್ಧಿಗೆ ಹಾಗೂ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಬುನಾದಿ ಹಾಕಲು ಮುಕ್ತ ಮನಸ್ಸಿನಿಂದ ಸಹಕಾರ ನೀಡುವಂತೆ ಸರ್ಕಾರ ಕೋರಿದೆ.

ಈ ಸಮೀಕ್ಷೆಯು ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ನೀತಿ ನಿರೂಪಣೆಗೆ ಆಧಾರವಾಗಿರುತ್ತದೆ. ಹೀಗಾಗಿ ಸಮೀಕ್ಷೆಯನ್ನು ಸಂಪೂರ್ಣ ಯಶಸ್ವಿಗೊಳಿಸುವುದು ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಹೇಳಿದೆ.

ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನು ಕೇಳಲಾಗುವುದು. ಎಲ್ಲರೂ ಪ್ರತಿಯೊಂದು ಪ್ರಶ್ನೆಗಳಿಗೆ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ.

ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಸಾರ್ವಜನಿಕರು ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಬಹುದು. ಆನ್ ಲೈನ್ ಮೂಲಕ ಸಹ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಸಮೀಕ್ಷೆ ಆರಂಭವಾಗುವ ಪೂರ್ವದಲ್ಲೇ ಆಶಾ ಕಾರ್ಯಕರ್ತರು ಎಲ್ಲರ ಮನೆಗಳಿಗೆ ಹೋಗಿ ಸಮೀಕ್ಷೆಯ ನಮೂನೆಯನ್ನು ಒದಗಿಸಲಿದ್ದಾರೆ. ಇದರಿಂದ ಸರಿಯಾದ ಮಾಹಿತಿಯನ್ನು ಒದಗಿಸುವ ಬಗ್ಗೆ ಜಾಗೃತಿ ಮೂಡಲು ಸಾಧ್ಯವಿದೆ. ಪ್ರತಿ ಶಿಕ್ಷಕರಿಗೆ 120ರಿಂದ 150ಮನೆಗಳ ವ್ಯಾಪ್ತಿಯನ್ನು ನಿಗದಿಪಡಿಸಲಾಗಿದೆ.
ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಸೆಪ್ಟೆಂಬರ್ 22ರಿಂದ ಪ್ರಾರಂಭವಾಗಿ ಅಕ್ಟೋಬರ್ 7 ರವರೆಗೆ ನಡೆಯುವ ಸಮೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳಿದ್ದು, ಸಮೀಕ್ಷೆ ಕಾರ್ಯವನ್ನು ಪಡಿತರ ಚೀಟಿ ಮತ್ತು ಆಧಾರ್ ಸಂಖ್ಯೆಯ ಆಧಾರದಲ್ಲಿ ಮಾಡುವುದರಿಂದ, ಸಮೀಕ್ಷಾದಾರರು ಮನೆಗೆ ಭೇಟಿ ನೀಡಿದಾಗ ಪಡಿತರ ಚೀಟಿ, ಆಧಾರ್ ಕಾರ್ಡ್ ಅಥವಾ ಆಧಾರ್ ಕಾರ್ಡಿನ ಸಂಖ್ಯೆ, ವಿಕಲಚೇತನರಾಗಿದ್ದರೆ UID ಕಾರ್ಡ್ ಅಥವಾ ಅಂಗವಿಕಲರ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ ಸಿದ್ದ ಮಾಡಿ ಇಟ್ಟುಕೊಂಡಿದ್ದರೆ ಸಮೀಕ್ಷೆ ಸುಲಭವಾಗುತ್ತದೆ ಮತ್ತು ವೇಗವಾಗುತ್ತದೆ.

ಕುಟುಂಬದ ಎಲ್ಲಾ ಸದಸ್ಯರೂ ತಮ್ಮ ಆಧಾರ್ ಕಾರ್ಡ್ ಗಳೊಂದಿಗೆ ಮೊಬೈಲ್ ನಂಬರ್ ಲಿಂಕ್ ಆಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುಬೇಕು. ಸಮೀಕ್ಷೆ ಸಮಯದಲ್ಲಿ ಇಕೆವೈಸಿ ಮಾಡುವಾಗ ಆ ಸದಸ್ಯರ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ನಂಬರಿಗೆ ಬರುವ ಒಟಿಪಿಯನ್ನು ತಿಳಿಸಬೇಕಾಗುತ್ತದೆ.

ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಚಾಲ್ತಿಯಲ್ಲಿ ಇಲ್ಲದಿದ್ದಲ್ಲಿ ಆಧಾರ್ ನೋಂದಣಿ ಕೇಂದ್ರಕ್ಕೆ ತೆರಳಿ ಹೊಸ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿಸಿಕೊಳ್ಳಬೇಕು.

ಸಮೀಕ್ಷೆಯ ಪ್ರಶ್ನಾವಳಿಯಲ್ಲಿ ಕೋರಿರುವ ವಿದ್ಯಾರ್ಹತೆ, ಕೌಶಲ್ಯ ತರಬೇತಿಯ ಅಗತ್ಯತೆ, ಆದಾಯ, ಕುಟುಂಬದ ವರಮಾನ, ಆರ್ಥಿಕ ಸ್ಥಿತಿಗಳ ವಿವರಗಳು, ಧರ್ಮ, ಜಾತಿ, ಉಪಜಾತಿ ಹಾಗೂ ಕುಲಕಸುಬು ಮುಂತಾದ ಎಲ್ಲಾ ವಿವರಗಳ ಮಾಹಿತಿಯನ್ನು ನೀಡುವಂತೆ ಸರ್ಕಾರ ಮನವಿ ಮಾಡಿದೆ.

ಸಮೀಕ್ಷೆಯ ಪ್ರಶ್ನಾವಳಿಗಳ ಬಗ್ಗೆ ಅರಿವು ಮೂಡಿಸಲು NCC (ನ್ಯಾಷನಲ್ ಕೆಡೆಟ್ ಕಾರ್ಪ್ಸ್) ಪದವಿ ವಿಧ್ಯಾರ್ಥಿಗಳ ಮೂಲಕ ಸಮೀಕ್ಷಾ ಪೂರ್ವ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿರುವ ಸಚಿವರು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಅಥವಾ Website ವಿಳಾಸ https://kscbc.karnataka.gov.in ರಲ್ಲಿ ಮಾಹಿತಿ ಪಡೆಯಬಹುದು ಎಂದಿದೆ.

Attention people of the state: Call this number to participate online in the 'Caste Census Survey'!
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸಾಗರ ‘ಬೆಳೆಯೂರು ಶಾಲೆ’ಯಲ್ಲಿ ಊಟದ ವಿಚಾರದಲ್ಲಿ ‘ಜಾತಿ ತಾರತಮ್ಯ’, ಪ್ರಶ್ನಿಸಿದ್ದಕ್ಕೆ ಬೆದರಿಕೆ

08/11/2025 10:18 PM2 Mins Read

ದೀನದಲಿತರ ಬಗ್ಗೆ ಕಾಳಜಿ ಹೊಂದಿದ್ದವರು ಸಿಎಂ ಸಿದ್ದರಾಮಯ್ಯ ಮಾತ್ರ: ಸಚಿವ ಶಿವರಾಜ್ ತಂಗಡಗಿ

08/11/2025 10:01 PM2 Mins Read

ಚಿತ್ರದುರ್ಗ: ನ.9ರಂದು KUWJ ಸಂಘದ ಚುನಾವಣೆಗೆ ಮತದಾನ, ಕಣದಲ್ಲಿ 39 ಅಭ್ಯರ್ಥಿಗಳು

08/11/2025 8:33 PM3 Mins Read
Recent News

ಶಿವಮೊಗ್ಗ: ಸಾಗರ ‘ಬೆಳೆಯೂರು ಶಾಲೆ’ಯಲ್ಲಿ ಊಟದ ವಿಚಾರದಲ್ಲಿ ‘ಜಾತಿ ತಾರತಮ್ಯ’, ಪ್ರಶ್ನಿಸಿದ್ದಕ್ಕೆ ಬೆದರಿಕೆ

08/11/2025 10:18 PM

ನೀವು ಯಾವ ಬ್ಯಾಂಕಿನಿಂದ ಎಷ್ಟು ಬಾರಿ ‘ಹಣ’ ವಿತ್ ಡ್ರಾ ಮಾಡ್ಬೋದು.? ಇಲ್ಲಿದೆ ಮಾಹಿತಿ.!

08/11/2025 10:12 PM

ದೀನದಲಿತರ ಬಗ್ಗೆ ಕಾಳಜಿ ಹೊಂದಿದ್ದವರು ಸಿಎಂ ಸಿದ್ದರಾಮಯ್ಯ ಮಾತ್ರ: ಸಚಿವ ಶಿವರಾಜ್ ತಂಗಡಗಿ

08/11/2025 10:01 PM

“ಭಾರತ ವಿಶ್ವ ನಾಯಕನಾಗಲಿದೆ, ಸಮಾಜವನ್ನ ಕಾನೂನಿನಿಂದಲ್ಲ, ಕರುಣೆಯಿಂದ ನಡೆಸಲಾಗ್ತಿದೆ” ; ಮೋಹನ್ ಭಾಗವತ್

08/11/2025 9:45 PM
State News
KARNATAKA

ಶಿವಮೊಗ್ಗ: ಸಾಗರ ‘ಬೆಳೆಯೂರು ಶಾಲೆ’ಯಲ್ಲಿ ಊಟದ ವಿಚಾರದಲ್ಲಿ ‘ಜಾತಿ ತಾರತಮ್ಯ’, ಪ್ರಶ್ನಿಸಿದ್ದಕ್ಕೆ ಬೆದರಿಕೆ

By kannadanewsnow0908/11/2025 10:18 PM KARNATAKA 2 Mins Read

ಶಿವಮೊಗ್ಗ: ಸರ್ಕಾರಿ ಶಾಲೆಗಳಲ್ಲಿ ಯಾವುದೇ ಬೇಧ ಭಾವ ಮಾಡದೇ, ಎಲ್ಲಾ ಮಕ್ಕಳನ್ನು ಸಮಾನವಾಗಿ ಕಾಣಬೇಕು. ಅದೇ ಕಾರಣಕ್ಕೆ ಬಡವ-ಬಲ್ಲಿದ, ಮೇಲು-ಕೀಳು…

ದೀನದಲಿತರ ಬಗ್ಗೆ ಕಾಳಜಿ ಹೊಂದಿದ್ದವರು ಸಿಎಂ ಸಿದ್ದರಾಮಯ್ಯ ಮಾತ್ರ: ಸಚಿವ ಶಿವರಾಜ್ ತಂಗಡಗಿ

08/11/2025 10:01 PM

ಚಿತ್ರದುರ್ಗ: ನ.9ರಂದು KUWJ ಸಂಘದ ಚುನಾವಣೆಗೆ ಮತದಾನ, ಕಣದಲ್ಲಿ 39 ಅಭ್ಯರ್ಥಿಗಳು

08/11/2025 8:33 PM

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ

08/11/2025 8:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.