ಬೆಂಗಳೂರು:ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗದಿಪಡಿಸಿದ್ದ ಕಾಲಾವಧಿಯನ್ನು ದಿನಾಂಕ 31-12-24 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012 ನ್ನು ರೂಪಿಸಲಾಗಿದೆ. ಈ ನಿಯಮಾವಳಿಗಳ ನಿಯಮ 1(3) ರಲ್ಲಿ ನಿರ್ಧಿಷ್ಟಪಡಿಸಿರುವ ಕೆಲವೊಂದು ಹುದ್ದೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.
ಕಾಂಗ್ರೆಸ್ ಪಕ್ಷದಿಂದ ಸದನದ ನೀತಿ, ನಿಯಮಗಳ ಉಲ್ಲಂಘನೆ- BY ವಿಜಯೇಂದ್ರ ಖಂಡನೆ
ಈ ಪರೀಕ್ಷೆಯು ಸರ್ಕಾರಿ ನೌಕರರ ಪರಿವೀಕ್ಷಣಾ ಅವಧಿ,ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿಗೆ ಒಂದು ಅರ್ಹತಾ ಮಾನದಂಡವಾಗಿರುತ್ತದೆ.ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅವಧಿ 31-12-23 ರವರೆಗೆ ವಿಸ್ತರಿಸಲಾಗಿತ್ತು.