Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರಲ್ಲಿ BMTC ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

13/08/2025 6:05 PM

‘ವಿದೇಶಿ ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ಆ.17ರಂದು ಬೆಂಗಳೂರಲ್ಲಿ ‘ಅಧ್ಯಯನ ಮೇಳ’ ಆಯೋಜನೆ

13/08/2025 5:54 PM

ಚಾಮರಾಜನಗರದಲ್ಲಿ 2 ಹುಲಿಮರಿ ಸಾವು ಕೇಸ್: ವಾಸ್ತವಾಂಶ ವರದಿ ನೀಡಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

13/08/2025 5:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ವಿದೇಶಿ ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ಆ.17ರಂದು ಬೆಂಗಳೂರಲ್ಲಿ ‘ಅಧ್ಯಯನ ಮೇಳ’ ಆಯೋಜನೆ
KARNATAKA

‘ವಿದೇಶಿ ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ಆ.17ರಂದು ಬೆಂಗಳೂರಲ್ಲಿ ‘ಅಧ್ಯಯನ ಮೇಳ’ ಆಯೋಜನೆ

By kannadanewsnow0913/08/2025 5:54 PM

ಬೆಂಗಳೂರು : ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ.

ಇದೆಲ್ಲಾ ಸಾಧ್ಯವಾಗುತ್ತಿರುವುದು ಕರ್ನಾಟಕ‌ ಸರ್ಕಾರದ ಹೊಸ ಯೋಜನೆಯಿಂದ. ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮವರ್ಗದ ಹಿನ್ನೆಲೆಯ ವಿದ್ಯಾರ್ಥಿಗಳು ಸಹ ಈಗ ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಯಾವುದೇ ತೊಂದರೆಯಿಲ್ಲದೇ ಪಡೆಯಬಹುದಾಗಿದೆ.

ಕೌಶಲ್ಯ ಅಭಿವೃದ್ಧಿ ಇಲಾಖೆ ಅಡಿಯ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್‌ಡಿಸಿ) ಆಗಸ್ಟ್ 17 ರ ಭಾನುವಾರ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ಅಂತಾರಾಷ್ಟ್ರೀಯ ವಿದೇಶದಲ್ಲಿ ಅಧ್ಯಯನ ಮೇಳ – 2025 ಅನ್ನು ಆಯೋಜಿಸಿದೆ.

ಈ ವಿಶೇಷ ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಸಂಸ್ಥೆಗಳು ವಿಶ್ವದ ಟಾಪ್ 500 ರಲ್ಲಿ ಸ್ಥಾನ ಪಡೆದಿವೆ.

ಈ ಕುರಿತು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ಹೆಚ್ಚಿನ ಮಾಹಿತಿ ನೀಡಿದರು.

“ಸಮಾಜದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನ ಮಾಡುವ ಅವಕಾಶವನ್ನು ಒದಗಿಸಲಾಗುವುದು. ಇದೇ ಮೊದಲ ಬಾರಿಗೆ ಈ ರೀತಿಯ ಯೋಜನೆಯನ್ನು ದೇಶದಲ್ಲಿ ಜಾರಿಗೆ ತರಲಾಗುತ್ತಿದೆ” ಎಂದು ತಿಳಿಸಿದರು.

ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಇದು “ಜಾಗತಿಕ ಶಿಕ್ಷಣದ ಹೆಬ್ಬಾಗಿಲು” ಎಂದು ಸಚಿವರು ತಿಳಿಸಿದರು.

ವಿದ್ಯಾರ್ಥಿಗಳು ವಿದೇಶದಲ್ಲಿ ವ್ಯಾಸಂಗ ಮಾಡಲು ಭಾರತದಿಂದ ತೆರಳಿದ ನಂತರ ಅವರಿಗೆ ಎಲ್ಲ ರೀತಿಯ ಬೆಂಬಲ ಒದಗಿಸುವುದು ನಮ್ಮ ಗುರಿಯಾಗಿದೆ. ಈ ಸರ್ಕಾರಿ ಬೆಂಬಲಿತ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಹೆಚ್ಚು ಆಪ್ತವಾಗಿರಲಿದೆ. ಶೈಕ್ಷಣಿಕ ಪ್ರಗತಿ ಮತ್ತು ಕಾನೂನು ನೆರವು ಎಲ್ಲವೂ ದೊರೆಯಲಿದೆ ಎಂದು ಸಚಿವರು ವಿವರಿಸಿದರು.

ಈ ಎಕ್ಸ್‌ಪೋದಲ್ಲಿ ಹೆಚ್ಚು ವಿಶ್ವಾಸಾರ್ಹತೆ ಮತ್ತು ಪಾರದರ್ಶಕತೆ ನೀಡುತ್ತದೆ. ವಿಶ್ವವಿದ್ಯಾಲಯದ ಆಯ್ಕೆ, ಏಜೆನ್ಸಿ ಶುಲ್ಕವಿಲ್ಲದೆ ಉಚಿತ ಮಾರ್ಗದರ್ಶನವನ್ನು ನಾವು ನೀಡುತ್ತೇವೆ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದರು.

ಎಕ್ಸ್‌ಪೋದ ಪ್ರಮುಖ ಅಂಶಗಳು

ವಿಶ್ವವಿದ್ಯಾಲಯದ ಪ್ರತಿನಿಧಿಗಳೊಂದಿಗೆ ಒನ್-ಆನ್-ಒನ್ ಸೆಷನ್‌; ಸ್ಪಾಟ್ ವಿದ್ಯಾರ್ಥಿವೇತನಗಳು ಮತ್ತು ಅರ್ಹತಾ ಮೌಲ್ಯಮಾಪನಗಳು; ವೀಸಾ ಪ್ರಕ್ರಿಯೆ, ಹಣಕಾಸು ಯೋಜನೆ, ಆರೋಗ್ಯ ವಿಮೆ, ಭಾಷಾ ಪ್ರಾವೀಣ್ಯತೆ ಮತ್ತು ಇತರೆ ಮಾರ್ಗದರ್ಶನ.

ಆಸ್ಟ್ರೇಲಿಯಾ, ಯುನೈಟೆಡ್‌ ಕಿಂಗ್‌ಡಮ್‌, ಅಮೆರಿಕ, ಐರ್ಲೆಂಡ್, ನ್ಯೂಜಿಲೆಂಡ್ ಮತ್ತು ಮಧ್ಯಪ್ರಾಚ್ಯ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ಇರಲಿದ್ದಾರೆ.

ಎಕ್ಸ್‌ಪೋದಲ್ಲಿ ಭಾಗವಹಿಸಲು http://studyabroad.ksdckarnataka.com ನಲ್ಲಿ ನೋಂದಾಯಿಸಿಕೊಳ್ಳಬಹುದು

ಪ್ರಮುಖ ವಿಶ್ವವಿದ್ಯಾಲಯಗಳು ಮತ್ತು ಕೊಡುಗೆಗಳು

– ಬ್ಯಾಂಗೋರ್ ವಿಶ್ವವಿದ್ಯಾಲಯ (ಯುಕೆ): ₹3–5 ಲಕ್ಷದವರೆಗಿನ ವಿದ್ಯಾರ್ಥಿವೇತನ, ಒಂದು ಆರ್ಥಿಕ ದರ್ಜೆಯ ವಿಮಾನ ಟಿಕೆಟ್, ಜೊತೆಗೆ ಎರಡು 50% ಬೋಧನಾ ಶುಲ್ಕ ವಿದ್ಯಾರ್ಥಿವೇತನಗಳು

– ಉತ್ತರ ಟೆಕ್ಸಾಸ್ ವಿಶ್ವವಿದ್ಯಾಲಯ (ಅಮೆರಿಕ): ₹8–10 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು

– ಜೇಮ್ಸ್ ಕುಕ್ ವಿಶ್ವವಿದ್ಯಾಲಯ (ಆಸ್ಟ್ರೇಲಿಯಾ): ₹8–10 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು

– ಕರ್ಟಿನ್ ವಿಶ್ವವಿದ್ಯಾಲಯ (ಸಿಂಗಾಪುರ): ₹5 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು

– ಮುರ್ಡೋಕ್ ದುಬೈ (ಅಮೆರಿಕ): ₹5 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು

– GISMA ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯ (ಜರ್ಮನಿ): ₹10 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು

ಚಾಮರಾಜನಗರದಲ್ಲಿ 2 ಹುಲಿಮರಿ ಸಾವು ಕೇಸ್: ವಾಸ್ತವಾಂಶ ವರದಿ ನೀಡಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಬೆಂಗಳೂರಲ್ಲಿ ಕಿಲ್ಲರ್ BMTC ಬಸ್ಸಿಗೆ ಮತ್ತೊಂದು ಬಲಿ: ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ BMTC ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

13/08/2025 6:05 PM1 Min Read

ಚಾಮರಾಜನಗರದಲ್ಲಿ 2 ಹುಲಿಮರಿ ಸಾವು ಕೇಸ್: ವಾಸ್ತವಾಂಶ ವರದಿ ನೀಡಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

13/08/2025 5:47 PM1 Min Read

ಬೆಂಗಳೂರಲ್ಲಿ ಕಿಲ್ಲರ್ BMTC ಬಸ್ಸಿಗೆ ಮತ್ತೊಂದು ಬಲಿ: ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ

13/08/2025 5:41 PM1 Min Read
Recent News

BREAKING: ಬೆಂಗಳೂರಲ್ಲಿ BMTC ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

13/08/2025 6:05 PM

‘ವಿದೇಶಿ ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ಆ.17ರಂದು ಬೆಂಗಳೂರಲ್ಲಿ ‘ಅಧ್ಯಯನ ಮೇಳ’ ಆಯೋಜನೆ

13/08/2025 5:54 PM

ಚಾಮರಾಜನಗರದಲ್ಲಿ 2 ಹುಲಿಮರಿ ಸಾವು ಕೇಸ್: ವಾಸ್ತವಾಂಶ ವರದಿ ನೀಡಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

13/08/2025 5:47 PM

ಬೆಂಗಳೂರಲ್ಲಿ ಕಿಲ್ಲರ್ BMTC ಬಸ್ಸಿಗೆ ಮತ್ತೊಂದು ಬಲಿ: ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ

13/08/2025 5:41 PM
State News
KARNATAKA

BREAKING: ಬೆಂಗಳೂರಲ್ಲಿ BMTC ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

By kannadanewsnow0913/08/2025 6:05 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲೇ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವಂತ ಘಟನೆ…

‘ವಿದೇಶಿ ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ಆ.17ರಂದು ಬೆಂಗಳೂರಲ್ಲಿ ‘ಅಧ್ಯಯನ ಮೇಳ’ ಆಯೋಜನೆ

13/08/2025 5:54 PM

ಚಾಮರಾಜನಗರದಲ್ಲಿ 2 ಹುಲಿಮರಿ ಸಾವು ಕೇಸ್: ವಾಸ್ತವಾಂಶ ವರದಿ ನೀಡಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

13/08/2025 5:47 PM

ಬೆಂಗಳೂರಲ್ಲಿ ಕಿಲ್ಲರ್ BMTC ಬಸ್ಸಿಗೆ ಮತ್ತೊಂದು ಬಲಿ: ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ

13/08/2025 5:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.