Author: kannadanewsnow01

ಕಾರವಾರ:ಚಾರ್ಸಿ ತುಂಡಾಗಿ ರಸ್ತೆಯಲ್ಲೇ ಬಸ್ ಪಲ್ಟಿಯಾದ ಘಟನೆ ಕಾರವಾರದಲ್ಲಿ ನಡೆದಿದೆ.ಉತ್ತರ ಕನ್ನಡ ಜಿಲ್ಲೆ ಕಾರವಾರದ ಹಬ್ಬುವಾಡ ರಸ್ತೆಯಲ್ಲಿ ಅಪಘಾತ ಬಸ್ ಪಲ್ಟಿಯಾಗಿದೆ.ಬಸ್ ನ ಚಾರ್ಸಿ ತುಂಡಾಗಿ ರಸ್ತೆಯಲ್ಲೇ ಬಸ್  ಪಲ್ಟಿಯಾಗಿದೆ. ಬಸ್​​ನಲ್ಲಿದ್ದ ಹಲವರಿಗೆ ಗಾಯಗಳಾಗಿದೆ.ಅವರನ್ನೆಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಕೊಡಿಸಲಾಗಿದೆ. ಕಂಡಿಷನ್ ಇಲ್ಲದ ಬಸ್​ ಬಿಟ್ಟಿದ್ದಕ್ಕೆ ಜನರು ಆಕ್ರೋಶ ಹೊರ ಹಾಕಿದ್ದಾರೆ. ಅಪಘಾತ ಹಿನ್ನೆಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.ಸುಮಾರು ಐವತ್ತು ಜನ ಪ್ರಯಾಣಿಸುತ್ತಿದ್ದರು. ಕಾರವಾರ ನಗರದಿಂದ ಕೆರವಡಿ ಗ್ರಾಮಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಪಲ್ಟಿಯಾಗಿದೆ. ಬಸ್ಸಿನ ಹಿಂಬದಿ ಚಾರ್ಸಿ ಒಮ್ಮೆಲೆ ಕಟ್ ಆಗಿದ್ದು ಬಸ್ ರಸ್ತೆಯಲ್ಲಿಯೇ ಪಲ್ಟಿಯಾಗುವ ಹಂತಕ್ಕೆ ತಲುಪಿತ್ತು. ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ. ಬಸ್ಸಿನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಕಂಡಿಷನ್ ಇಲ್ಲದ ಬಸ್ಸನ್ನ ಬಿಟ್ಟ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ಹೊರ ಹಾಕಿದ್ದಾರೆ. ರಸ್ತೆಯಲ್ಲಿಯೇ ಬಸ್ ಪಲ್ಟಿಯಾದ ಹಿನ್ನಲೆ ಕಾರವಾರ ಕೈಗಾ ರಸ್ತೆ ಸಂಚಾರ ವ್ಯತ್ಯಯವಾಗಿತ್ತು.

Read More

ಬೆಂಗಳೂರು:ರಾಮಮಂದಿರ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃದು ಧೋರಣೆ ತಾಳಿರುವ ಬೆನ್ನಲ್ಲೇ, ಗೃಹ ಸಚಿವ ಜಿ ಪರಮೇಶ್ವರ ಅವರು, ರಾಮನ ಆಡಳಿತ ಕೇವಲ ಬಿಜೆಪಿ ನಾಯಕರಿಗಷ್ಟೇ ಅಲ್ಲ, ಜಾಗತಿಕ ಮಟ್ಟಕ್ಕೆ ಮಾದರಿಯೇ ಹೊರತು ಕ್ಷುಲ್ಲಕ ರಾಜಕಾರಣಕ್ಕಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ರಾಮರಾಜ್ಯದ ಪರಿಕಲ್ಪನೆಯು ಸಮಾನತೆ ಮತ್ತು ಸಮಾನ ಅವಕಾಶಗಳನ್ನು ಅರ್ಥೈಸುತ್ತದೆ, ಇದು ನಮ್ಮ ಸಂವಿಧಾನದ ಮೂಲತತ್ವವಾಗಿದೆ, ನಮ್ಮ ಸಂಸ್ಥಾಪಕರು ಸಂವಿಧಾನವನ್ನು ರೂಪಿಸಲು ಬಯಸಿದಾಗ ನಾವು ರಾಮರಾಜ್ಯ ಮಾದರಿಯ ಸಾರವನ್ನು ತೆಗೆದುಕೊಂಡಿದ್ದೇವೆ. ಆದ್ದರಿಂದ, ರಾಮರಾಜ್ಯ ಮಾದರಿಯು ಬಿಜೆಪಿ ಅಥವಾ ಸ್ಥಳೀಯ ಮಟ್ಟಕ್ಕೆ ಮಾತ್ರವಲ್ಲ, ಇದು ಜಾಗತಿಕ ಮಾದರಿ ಎಂದು ನಾನು ಭಾವಿಸುತ್ತೇನೆ.”ಎಂದರು. ಸಾವಧಾನವಾಗಿ ಪ್ರತಿಕ್ರಿಯಿಸಿದ ಸಚಿವ ಪರಮೇಶ್ವರ, ಸದ್ಯಕ್ಕೆ ಈ ವಿಚಾರದಲ್ಲಿ ಪಕ್ಷದ ನಿಲುವು ಏನು ಎಂಬುದು ಗೊತ್ತಿಲ್ಲ ಎಂದರು. “ನಾನು ಪಕ್ಷದ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ, ಪಕ್ಷವು ಪಾಲ್ಗೊಳ್ಳಲು ನಿರ್ಧರಿಸಿದರೆ, ನಾವು ಖಂಡಿತವಾಗಿಯೂ ಹೋಗುತ್ತೇವೆ. ನಾವೇಕೆ ಹೋಗಬಾರದು? ಭಗವಾನ್ ರಾಮ ಕೇವಲ ಬಿಜೆಪಿಯ ದೇವರಲ್ಲ, ಅವರು ಎಲ್ಲರಿಗೂ ಪೂಜ್ಯರು.”ಎಂದರು. ಬಿಜೆಪಿ…

Read More

ಮಂಗಳೂರು:ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಿಳ್ಯದಲ್ಲಿ ಹೊಸ ವರ್ಷಾಚರಣೆಯ ನಂತರ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತನ ಮೂಗು ಕಚ್ಚಿರುವ ಆರೋಪ ಕೇಳಿಬಂದಿದೆ. ದೀಕ್ಷಿತ್ (28) ಎಂಬಾತ ಗಾಯಗೊಂಡಿದ್ದು, ಸದ್ಯ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ರಾಕೇಶ್ ಎಂಬಾತನ ಸ್ನೇಹಿತ. ಇಬ್ಬರೂ ಪಿಲ್ಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಹೊಸ ವರ್ಷಾಚರಣೆಯ ನಂತರ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ಕೋಪದ ಭರದಲ್ಲಿ ರಾಕೇಶ್ ತನ್ನ ಸ್ನೇಹಿತನ ಮೂಗು ಕಚ್ಚಿದ್ದಾನೆ ಎನ್ನಲಾಗಿದೆ. ದೀಕ್ಷಿತ್ ಅವರನ್ನು ಮೊದಲು ಬೆಳ್ತಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಪ್ರಕರಣ ದಾಖಲಾಗಿದೆ.

Read More

ಚಿಕ್ಕಮಗಳೂರು:ಚಲಿಸುತ್ತಿದ್ದ ರೈಲಿನಡಿ ಬಿದ್ದು ಶಾಲಾ ಬಸ್ ಚಾಲಕ ಮತ್ತು ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಖಾಸಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಚಾಲಕನು ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದನುಮೀ ಬಗ್ಗೆ ಪಾಲಕರು ಶಾಲಾ ಆಡಳಿತ ಮಂಡಳಿಗೆ ದೂರು ನೀಡಿದ್ದರೂ ಸಂತೋಷ್ ವಿರುದ್ಧ ಆಡಳಿತ ಮಂಡಳಿ ಕ್ರಮ ಕೈಗೊಂಡಿರಲಿಲ್ಲ. ಮೃತ ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಸಂತೋಷ್ ಕೂಡ ಇದೇ ಶಾಲೆಯಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಡಿಸೆಂಬರ್ 31 ರಂದು ಹೊಸ ವರ್ಷದ ಪಾರ್ಟಿಗೆ ಹೋಗುತ್ತೇನೆ ಎಂದು ಹೋಗಿದ್ದ ಜಾನವಿ ಶವವಾಗಿ ಪತ್ತೆಯಾಗಿದ್ದಾಳೆ.ಜಾನವಿಯನ್ನು ಸಂತೋಷ್ ತನ್ನ ಜೊತೆ ಕರೆದೊಯ್ದಿದ್ದನು. ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯ ರೈಲ್ವೆ ಹಳಿ ಮೇಲೆ ಇಬ್ಬರ ಮೃತದೇಹ ರುಂಡ ಮತ್ತು ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇಬ್ಬರು ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ…

Read More

ಬೆಂಗಳೂರು:‘ಚುನಾವಣೆ ಗ್ಯಾರಂಟಿಗಳ ಪರಿಣಾಮಕಾರಿ ಅನುಷ್ಠಾನದಿಂದ ಕಳೆದ ಏಳು ತಿಂಗಳಲ್ಲಿ ಬಡವರ ಮೇಲೆ ಬರದ ತೀವ್ರತೆ ಕಡಿಮೆಯಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಹಾಗೂ ಹಿರಿಯ ಸರ್ಕಾರಿ ಕಾರ್ಯದರ್ಶಿಗಳಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ ಸಿದ್ದರಾಮಯ್ಯ, ಶೇ.60ಕ್ಕೂ ಹೆಚ್ಚು ಜನರು ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ಚಟುವಟಿಕೆಗಳ ಮೇಲೆ ಅವಲಂಬಿತರಾಗಿದ್ದಾರೆ,.ಬರಗಾಲದ ತೀವ್ರತೆ ಕಡಿಮೆಯಾಗಲು ನಮ್ಮ ಭರವಸೆಗಳೇ ಕಾರಣ. ಬರಗಾಲವಿದ್ದರೂ ಬಡ ಕುಟುಂಬಗಳು ಕೊಳ್ಳುವ ಶಕ್ತಿಯನ್ನು ಪಡೆದಿರುವುದರಿಂದ ಅದರ ತೀವ್ರತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ,’’ ಎಂದು ಅವರು ಹೇಳಿದರು. ಸಾರ್ವತ್ರಿಕ ಮೂಲ ಆದಾಯ ನೀತಿಯನ್ನು ಉಲ್ಲೇಖಿಸಿದ ಮುಖ್ಯಮಂತ್ರಿ, ಜನರ ಆದಾಯ ಹೆಚ್ಚಿದೆ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 35,000 ಕೋಟಿ ಬೆಳೆ ನಷ್ಟವಾಗಿದೆ, ಪ್ರಕೃತಿಯು ನಮ್ಮನ್ನು ಬೆಂಬಲಿಸದಿದ್ದರೆ ಸರ್ಕಾರದಿಂದ ಪರಿಹಾರ ಸಾಕಾಗುವುದಿಲ್ಲ, ಹವಾಮಾನ ಬದಲಾವಣೆಯಿಂದ ನಾವು ಈ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ.…

Read More

ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೋವಿಡ್ ರೂಪಾಂತರ ತಳಿ ಜೆಎನ್.1 (JN.1) ವೈರಸ್​​ ಅಟ್ಟಹಾಸ ಹೆಚ್ಚಳವಾಗುತ್ತಿದೆ.ದೇಶದ ವಿವಿಧ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಿದೆ.ಕೇರಳ ಮತ್ತು ಕರ್ನಾಟಕದಲ್ಲಿ ಇದು ಮತ್ತಷ್ಟು ಹಬ್ಬಿದೆ. ಇದುವರೆಗೆ ಜಿನೋಮ್‌ ಸೀಕ್ವೆನ್ಸ್‌ ಟೆಸ್ಟ್‌ಗೆ 601 ಸ್ಯಾಂಪಲ್ಸ್‌ಗಳ‌ ರವಾನಿಸಲಾಗಿದ್ದು ಈವರೆಗೆ 199 ಜನರಲ್ಲಿ ಜೆಎನ್.1 ವೈರಸ್ ಸೋಂಕು ತಗುಲಿದೆ. 202 ಮಾದರಿಗಳ ವರದಿಯಲ್ಲಿ 165 ಮಂದಿಯಲ್ಲಿ ಜೆಎನ್1 ಸೋಂಕು ತಗುಲಿದೆ.28 ಜನರಿಗೆ ಎಕ್ಸ್‌ಬಿಬಿ ಉಪ ತಳಿ ಸೋಂಕು ಇದ್ದು, 35 ಮಂದಿಯಲ್ಲಿ ಇತರೆ ರೂಪಾಂತರಿ ಸೋಂಕು ಪತ್ತೆಯಾಗಿದೆ.

Read More

ಮೈಸೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC)ಯ ಬಸ್ ಮತ್ತು ಜೀಪ್ ಮಧ್ಯೆ ಸಂಭವಿಸಿದ ಅಪಘಾತ ದಲ್ಲಿ ಮೂವರು ಮೃತಪಟ್ಟ ಘಟನೆ ಹುಣಸೂರು ಪಟ್ಟಣದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ ನಡೆದಿದೆ. ಘಟನೆಯಲ್ಲಿ ಜೀಪ್​ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವೀಗಿಡಾಗಿದ್ದಾರೆ. ಮೃತಪಟ್ಟವರೆಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ.ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಶಿವಮೊಗ್ಗ:ಶಿವಮೊಗ್ಗ ಏರ್​​ಪೋರ್ಟ್​​ ಸೇರಿದಂತೆ ಶಿವಮೊಗ್ಗ ಜಿಲ್ಲೆ ಸೇರಿದಂತೆ ವಿವಿಧೆಡೆ ಸಾವಿರಾರು ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ಮಾಡಿರುವ ನ್ಯಾಷನಲ್ ಸಂಸ್ಥೆ ಮೇಲೆ ED ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹಣಕಾಸಿನ ವ್ಯವಹಾರದ ಮೇಲೆ ಲೋಪ ಕಂಡು ಬಂದ ಹಿನ್ನಲೆಯಲ್ಲಿ ಇಡಿ ದಾಳಿ ನಡೆದಿದೆ. ತೀರ್ಥಹಳ್ಳಿಯ ಸುಲೈಮಾನ್ ಎಂಬುವರಿಗೆ   ನ್ಯಾಷನಲ್ ಸಂಸ್ಥೆ ಸೇರಿದೆ.ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್, ಇಂಡಿಯನ್ ಗ್ಯಾಸ್ ಗೋಡೌನ್ ಹಾಗೂ ಸುಲೈಮಾನ್ ಅವರ ಮನೆ ಮೇಲೂ ಕೂಡ ದಾಳಿ ಮಾಡಿದ್ದಾರೆ. ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಳು ದಾಳಿ ನೆಡೆಸಿರುವ ಶಂಕೆ ವ್ಯಕ್ತವಾಗಿದೆ. ಹೈವೇ ಮತ್ತು ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯನ್ನೂ ಈ ಕಂಪನಿಯೇ ನಡೆಸುತ್ತಿದೆ.

Read More