Subscribe to Updates
Get the latest creative news from FooBar about art, design and business.
Author: kannadanewsnow05
ಧಾರವಾಡ : ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ನಿಂದಲೇ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮೀರ್ ಮುಲ್ಲಾನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅದಾದ ಬಳಿಕ ಯುವತಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಿಗಿರುವ ಆರೋಪದ ಮೇಲೆ ಮುಫಿಸ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಇದೀಗ ಧಾರವಾಡದಲ್ಲಿ ಮತ್ತೊಂದು ಪ್ರಕರಣ ನಡೆದಿದ್ದು, ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡುತ್ತಿದ್ದ ಜಿಮ್ ಟ್ರೇನರ್ನ್ನು ಪೊಲೀಸರು ಬಂಧಿಸಿದ್ದಾರೆ. ಸಾಬೀರ್ ಬಂಧಿತ ಆರೋಪಿ. ಧಾರವಾಡ ನಗರದ ಮರಾಠಾ ಕಾಲೋನಿಯ ಫಿಟನೆಸ್ ಫಸ್ಟ್ ಎಂಬ ಜಿಮ್ನಲ್ಲಿದ್ದ ಜಿಮ್ ಟ್ರೇನರ್ ಆಗಿದ್ದ ಎನ್ನಲಾಗಿದೆ. ಸಂತ್ರಸ್ತೆ ಧಾರವಾಡ ಉಪನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜಿಮ್ಗೆ ಬರುವ ಯುವತಿ ಮತ್ತು ಮಹಿಳೆಯರಿಗೆ ಬ್ಯಾಡ್ ಟಚ್ ಮಾಡುತ್ತಾ ಟ್ರೆನ್ ಮಾಡುತ್ತಿದ್ದ ಎಂದು ಆರೋಪಿಸಿದ್ದರು. ಈ ಹಿನ್ನೆಲೆ ಭಜರಂಗ ದಳದ ಕಾರ್ಯಕರ್ತರು ಸೇರಿಕೊಂಡು ಜಿಮ್ಗೆ ಬೀಗ ಹಾಕಿದ್ದರು. ದ್ಯ ಆರೋಪಿ ಸಾಬೀರ್ನನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್…
ಧಾರವಾಡ : ಧಾರವಾಡದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿಯಾಗಿ ಕಾನ್ಸ್ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದ ರಾಯಪುರ ಬಡಾವಣೆಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಕಾನ್ಸ್ಟೇಬಲ್ ಎನ್.ಎಫ್ ಸಿದ್ದಪ್ಪನವರ (52) ಮೃತರು ಎಂದು ತಿಳಿದುಬಂದಿದೆ. ಎಲ್ಪಿಜಿ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನಪ್ಪಿದ್ದಾರೆ. ಮೃತ ಸಿದ್ದಪ್ಪನವರ್ ಕುಂದಗೋಳ ತಾಲೂಕಿನ ಪಶುಪತಿಹಾಳದ ನಿವಾಸಿ. ಊಟ ಮುಗಿಸಿ ಕಚೇರಿಗೆ ತೆರಳುವಾಗ ಈ ಒಂದು ಅಪಘಾತ ಸಂಭವಿಸಿದೆ. ಸಂಬಂಧಿಸಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ : ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ಎರಡು ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷರ ಪ್ರಮೋದ್ ಮುತಾಲಿಕ್ ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಪ್ರಕರಣಗಳಿಗೆ ಕೇರಳ ನಂಟಿದೆ ಎಂದು ನಂಬಿರವಾಗಿ ಆರೋಪಿಸಿದ್ದಾರೆ. ಸಮೀರ್ ಮುಲ್ಲಾ ಸಹೋದರಿ ಕೇರಳಕ್ಕೆ ಹೋಗಿದ್ದಾಳೆ. ಆಕೆ ಕೇರಳಕ್ಕೆ ಹೋಗಿದ್ದರ ಹಿಂದೆ ಅನೇಕ ಅನುಮಾನಗಳು ಇವೆ. ಈ ಪ್ರಕರಣದ ತನಿಖೆಯನ್ನು NIA ವಹಿಸಬೇಕು. ಪೊಲೀಸರು ದಕ್ಷರು ಆದರೆ ಸರ್ಕಾರ ಅವರ ಕೈ ಕಟ್ಟಿ ಹಾಕುತ್ತದೆ. ಹೀಗಾಗಿ ಪ್ರಕರಣದ ತನಿಖೆಯನ್ನು NIA ಗೆ ನೀಡಬೇಕು. ಹಿಂದೂ ಕಾರ್ಯಕರ್ತರ ಮೇಲಿನ ಕೇಸ್ ಗಳನ್ನು ಕೈಬಿಡಬೇಕು ಇಲ್ಲದಿದ್ದರೆ ಹುಬ್ಬಳ್ಳಿ ಬಂದ್ ಮಾಡುತ್ತೇವೆ ಎಂದು ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ನವದೆಹಲಿ : ಕೊಲ್ಕತ್ತಾ ಮೇಲೆ ದಾಳಿ ಮಾಡುವುದಾಗಿ ಪಾಕಿಸ್ತಾನ ಬೆದರಿಕೆ ಹಾಕಿರುವ ವಿಚಾರವಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಹೇಳಿಕೆಗೆ ರಾಜನಾಥ್ ಸಿಂಗ್ ಇದೀಗ ಖಡಕ್ ಎಚ್ಚರಿಕೆ ಕೊಟ್ಟಿದ್ದು, ಪಶ್ಚಿಮ ಬಂಗಾಳ ಮೇಲೆ ಕಣ್ಣು ಹಾಕಿದರೆ ಮತ್ತೆ ಇಬ್ಭಾಗ ಆಗಲಿದೆ ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಅವರು, 1971ರ ಘಟನೆಯನ್ನು ನೀವು ಎಂದಿಗೂ ಮರೆಯಬೇಡಿ. ಈ ಹಿಂದೆ ಪಾಕಿಸ್ತಾನ ಹೇಗೆ ಇಬ್ಭಾಗ ಆಗಿದೆ ಅಂತ ನೆನಪಿನಲ್ಲಿ ಇಟ್ಟುಕೊಳ್ಳಿ. ಪಾಕಿಸ್ತಾನದಿಂದ ಬೇರ್ಪಟ್ಟು ಬಾಂಗ್ಲಾದೇಶ ರಚನೆ ಆಯ್ತು. ಪಶ್ಚಿಮ ಬಂಗಾಳದ ಮೇಲೆ ಕಣ್ಣು ಹಾಕಿದರೆ ಮತ್ತೆ ಪಾಕಿಸ್ತಾನ ಇಬ್ಬಾಗ ಆಗಲಿದೆ. ಅಗತ್ಯ ಬಿದ್ದರೆ ಪಾಕಿಸ್ತಾನ ಇನ್ನು ಎಷ್ಟು ಭಾಗ ಆಗುತ್ತೆ ಗೊತ್ತಿಲ್ಲ ಎಂದು ಪಾಕಿಸ್ತಾನ ಸಚಿವರ ಹೇಳಿಕೆಗೆ ರಾಜನಾಥ ಸಿಂಗ್ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಘೋರ ಘಟನೆ ಒಂದು ನಡೆದಿದ್ದು, ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮುಡುಬ ಬಳಿ ನಡೆದಿದೆ. ಮೃತರನ್ನ ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗಿದೆ. ಎನ್.ಆರ್ ಪುರ ತಾಲೂಕಿನ ಮುತ್ತಿನಕೊಪ್ಪ ಮೂಲಕದ ಮೃತ ರನ್ಯಾ ಬೇಸಿಲ್ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಕೂಡ ಆಸ್ಪತ್ರೆಗೆ ಹೋಗಿ ತನ್ನ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ನಿತ್ಯ ಶಿವಮೊಗ್ಗಕ್ಕೆ ಓಡಾಡುತ್ತಿದ್ದ ರನ್ಯಾ ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ಮನೆಗೆ ಬಂದಿದ್ದ ರನ್ಯಾ ಮತ್ತೆ ಮುಡುಬ ಬಳಿ ಹೋಗಿ ಸೇತುವೆ ಮೇಲಿಂದ ಹೊಳೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. 12 ವರ್ಷದ ಹಿಂದೆ ಮದುವೆಯಾಗಿದ್ದ ರನ್ಯಾಗೆ ಇಬ್ಬರು ಮಕ್ಕಳಿದ್ದು, ಪತಿ ಕಾಫಿ ಬೆಳೆಗಾರರಾಗಿದ್ದಾರೆ. ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂಡುಬಿದರೆ ಇನ್ಸ್ಪೆಕ್ಟರ್ ಪಿ.ಜಿ ಸಂದೇಶ್ ವಿರುದ್ಧ ತನಿಖೆಗೆ ತಡೆ ನೀಡಲು ಹೈಕೋರ್ಟ್ ಇದೀಗ ನಿರಾಕರಿಸಿದೆ. ಪ್ರಕರಣ ರದ್ದು ಕೋರಿದ ಅರ್ಜಿಯನ್ನು ಅರ್ಜಿದಾರರ ಪರ ವಕೀಲರು ಹಿಂಪಡೆದಿದ್ದಾರೆ. ಖಾಸಗಿ ಶಾಲೆಯ ಮುಖ್ಯ ಶಿಕ್ಷಕಿ ದೂರು ಆಧರಿಸಿ ಪೊಲೀಸರು FIR ದಾಖಲಿಸಿದ್ದರು. ಪ್ರಕರಣ ಹಿನ್ನೆಲೆ? ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕಿ ನೀಡಿದ ದೂರಿನ ಪ್ರಕಾರ, 2018ರಿಂದ 2023ರವರೆಗೆ ಹಲವು ಬಾರಿ ಮನೆಗೆ ಬಂದು ಸಂದೇಶ್ ಪಿಜಿ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದಕ್ಕೂ ಮುನ್ನ ಸಂದೇಶ್ ವಿರುದ್ಧ ಇಬ್ಬರು ಮಹಿಳೆಯರು ಮಾಡಿದ್ದ ಲೈಂಗಿಕ ಕಿರುಕುಳ ಆರೋಪಗಳು ಸುಳ್ಳು ಎಂದು ಪೊಲೀಸ್ ವರದಿ ತಿಳಿಸಿತ್ತು. ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಕೂಡ ಈ ಆರೋಪಗಳು ಪ್ರೇರಿತವಾಗಿವೆ ಎಂದು ಹೇಳಿಕೆ ನೀಡಿದ್ದರು.
ಮೈಸೂರು : ಹುಣಸೂರಿನ ಪ್ರಾದೇಶಿಕ ಅರಣ್ಯ ವಿಭಾಗದ ಪಿರಿಯಾಪಟ್ಟಣ ತಾಲೂಕಿನ ಗುಳೆದಹಳ್ಳದ ಪ್ರದೇಶದಲ್ಲಿ ಸುಮಾರು 2 ವರ್ಷದ ಹೆಣ್ಣು ಚಿರತೆಯ ಶವವೊಂದು ಸೋಮವಾರ ಪತ್ತೆಯಾಗಿದೆ. ಈ ಚಿರತೆಯನ್ನು ಗುಂಡು ಹಾರಿಸಿ ಸಾಯಿಸಿರುವ ಶಂಕೆ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಸಚಿವ ಈಶ್ವರ್ ಖಂಡ್ರೆ ಅವರು ಆದೇಶಿಸಿದ್ದಾರೆ. ವನ್ಯಜೀವಿ ಬೇಟೆಗೆ ಬಂದಿರುವ ಬೇಟೆಗಾರರು ನಾಡಬಂದೂಕಿನಿಂದ ಗುಂಡು ಹಾರಿಸಿರಬಹುದೆಂದು ಶಂಕಿಸಲಾಗಿದೆ. ಎರಡು ದಿನಗಳ ಹಿಂದೆ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಚಿರತೆಯ ಕಳೇಬರವು ಪತ್ತೆಯಾದ ಜಾಗಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳೆದಹಳ್ಳದ ರಾಜ್ಯ ಅರಣ್ಯದಿಂದ 2 ಕಿಲೋಮೀಟರ್ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ ಚಿರತೆ ಸಾವಿಗೀಡಾಗಿರುವ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಇಂದು ಬೆಳಗ್ಗೆ ಎರಡು ವರ್ಷ ವಯಸ್ಸಿನ ಹೆಣ್ಣು ಚಿರತೆಯೊಂದು…
ಬೆಂಗಳೂರು : ನಟ ನಿರ್ದೇಶಕ ಜೋಗಿ ಪ್ರೇಮ್ ನಿರ್ಮಾಣದ ಕೆಡಿ ಚಿತ್ರದ ಸೆರಗ ಸರ್ಸೆ’ ಹಾಡಿನ ಸಾಹಿತ್ಯ ಮತ್ತು ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿವಾದ ಉಂಟಾಗಿದ್ದು, ಈ ವಿಷಯ ಲೋಕಸಭೆಯಲ್ಲಿ ಸಹ ಚರ್ಚೆ ಆಗಿತ್ತು. ಹಾಡು ಅಶ್ಲೀಲವಾಗಿದೆ ಎಂಬ ಕಾರಣಕ್ಕೆ ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ನಿರ್ದೇಶಕ ಮತ್ತು ಹಾಡಿನ ಮೂಲ ಸಾಹಿತ್ಯ ಬರೆದಿರುವ ಪ್ರೇಮ್, ಹಾಡಿನಲ್ಲಿ ನಟಿಸಿರುವ ನೋರಾ ಫತೇಹಿ, ಸಂಜಯ್ ದತ್ ಹಾಗೂ ಹಾಡಿನ ಹಿಂದಿ ಸಾಹಿತ್ಯ ಬರೆದಿರುವ ರಖೀಬ್ ಆಲಂ ನೊಟೀಸ್ ಜಾರಿ ಮಾಡಿತ್ತು. ಇದೀಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಿಳಾ ಆಯೋಗ ಇದೀಗ ಮತ್ತೊಮ್ಮೆ ನೊಟೀಸ್ ನೀಡಿದೆ.ಈ ಹಿಂದೆ ನೀಡಿದ್ದ ನೋಟೀಸಿನ ಅನ್ವಯ ನೋರಾ ಫತೇಹಿ ಏಪ್ರಿಲ್ 6 ರಂದು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ನೋರಾ ಪರವಾಗಿ ಅವರ ವಕೀಲರು ಹಾಜರಾಗಿದ್ದರು, ಇದನ್ನು ಒಪ್ಪದ ಮಹಿಳಾ ಆಯೋಗ ಖುದ್ದಾಗಿ ನಟಿಯೇ ಹಾಜರಾಗೇಕು ಎಂದಿದೆ. ಇದೀಗ ಮತ್ತೊಮ್ಮೆ ನೋರಾ ಫತೇಹಿಗೆ ನೊಟೀಸ್ ಹೊರಡಿಸಿದ್ದು, ಏಪ್ರಿಲ್…
ಬೆಂಗಳೂರು : ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದಾಳೆ. ಅಲ್ಲದೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಹಾಗೂ ಮಹಿಳಾ ಆಯೋಗಕ್ಕೂ ದೂರು ನೀಡಿದ್ದಾಳೆ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಹಿಳೆಗೆ ಬಸವ ಜಯ ಮೃತ್ಯುಂಜಯ ಶ್ರೀ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಏಪ್ರಿಲ್ ನಾಲ್ಕರಂದೇ ಮಹಿಳೆ ಸೇರಿ ನಾಲ್ವರ ವಿರುದ್ಧ ಸ್ವಾಮೀಜಿ ದೂರು ನೀಡಿದ್ದರು ಫೆಬ್ರವರಿ 11ರಂದು ಹಲ್ಲೆ ಮಾಡಿದ್ದಾರೆ. ಎಂದು ಸ್ವಾಮೀಜಿ ದೂರು ನೀಡಿದ್ದಾರೆ. ವಿಜಯಪುರ ತಾಲೂಕಿನ ಕಗ್ಗೊಡ ಬಳಿ ನನಗೆ ಹಲ್ಲೆ ಮಾಡಿದ್ದಾರೆ ಎಂದು ಸ್ವಾಮೀಜಿ ದೂರು ನೀಡಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆಗೆ ಮೃತ್ಯುಂಜಯ ಶ್ರೀಗಳು ದೂರು ನೀಡಿದ್ದಾರೆ. ಬೆಂಗಳೂರು ಮೂಲದ ತ್ರಿವೇಣಿ, ಪೃಥ್ವಿ ಗೌಡ, ಯಶವಂತ ಹಾಗೂ ಸ್ಪೀಡ್ ನ್ಯೂಸ್ ಎಂಡಿ ವೀರೇಶ್ ವಿರುದ್ಧ ಜಯ ಮೃತ್ಯುಂಜಯ ಶ್ರೀಗಳು…
ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ನೀಡಿದ್ದ ‘ಬಿ’ ವರದಿಯನ್ನು ಪ್ರಶ್ನಿಸಿ ಈ ಹಿಂದೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಜಾರಿ ನಿರ್ದೇಶನಾಲಯ (ಇ.ಡಿ) ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಹೌದು ವಿಶೇಷ ನ್ಯಾಯಾಲಯವು ಈ ಹಿಂದೆ ಲೋಕಾಯುಕ್ತದ ಕ್ಲೀನ್ ಚೀಟನ್ನು ಅಂಗೀಕರಿಸಿತ್ತು. ಇದನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಹೈಕೋರ್ಟ್ ಸಿಎಂ ಕುಟುಂಬಕ್ಕೆ ತುರ್ತು ನೋಟಿಸ್ ಜಾರಿ ಮಾಡಿದೆ. ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸುವಂತೆ ಕೋರಲಾಗಿದ್ದು, ED ಮೇಲ್ಮನವಿ ಸಲ್ಲಿಸಿದ್ದರಿಂದ ಪ್ರಕರಣ ಹೊಸ ತಿರುವು ಪಡೆದಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರಿಗೆ ಮಾರ್ಟ್ 26ರಂದು ತುರ್ತು ನೋಟಿಸ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ವರದಿಯನ್ನು ಪುರಸ್ಕರಿಸಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚೀಟ್ ನೀಡಿತ್ತು. ಆದರೆ…














