Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಜೂನ್ 3ರ ಬುಧವಾರದಂದು ರಾಜಭವನದಲ್ಲಿ ಆಯೋಜಿಸಲಾಗಿರುವ ಸರಳ ಸಮಾರಂಭದಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಹೊಸ ಸರ್ಕಾರದ ರಚನೆಗೆ ಮುಹೂರ್ತ ನಿಗದಿಯಾಗುತ್ತಿದ್ದಂತೆ, ನೂತನ ಸಚಿವ ಸಂಪುಟ ಸೇರ್ಪಡೆ ಕುರಿತಾಗಿ ಕಾಂಗ್ರೆಸ್ ಹೈಕಮಾಂಡ್‌ಗೆ ಭಾರಿ ತಲೆನೋವು ಶುರುವಾಗಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಮತ್ತು ಯಾರನ್ನು ಕೈಬಿಡಬೇಕು ಎಂಬುದು ಸದ್ಯದ ದೊಡ್ಡ ಸವಾಲಾಗಿದೆ. ದೆಹಲಿಗೆ ದೌಡಾಯಿಸಿದ ಸಿದ್ದರಾಮಯ್ಯ, ಡಿಕೆಶಿ ಸಚಿವ ಸಂಪುಟ ರಚನೆಯ ಗೊಂದಲವನ್ನು ಬಗೆಹರಿಸಿಕೊಳ್ಳಲು ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್‌ನ ಪ್ರಮುಖ ನಾಯಕರೊಂದಿಗೆ ಇವರಿಬ್ಬರೂ ಮಹತ್ವದ ಸಭೆ ನಡೆಸಲಿದ್ದು, ಯಾರಿಗೆ ಯಾವ ಸಚಿವ ಸ್ಥಾನ ನೀಡಬೇಕು ಮತ್ತು ಖಾತೆಗಳ ಹಂಚಿಕೆ ಹೇಗೆ ಮಾಡಬೇಕು ಎನ್ನುವುದರ ಕುರಿತು ಸುದೀರ್ಘ ಚರ್ಚೆ ನಡೆಸಲಿದ್ದಾರೆ. ಆದರೆ, ಈ ಇಬ್ಬರು…

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಐತಿಹಾಸಿಕ ಗೆಲುವಿನ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಭಾನುವಾರ ನಡೆದ ಐಪಿಎಲ್ 2026ರ ರೋಮಾಂಚಕ ಫೈನಲ್ ಪಂದ್ಯದಲ್ಲಿ ಜಯಭೇರಿ ಬಾರಿಸುವ ಮೂಲಕ ಆರ್‌ಸಿಬಿ ಸತತ ಎರಡನೇ ಬಾರಿಗೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಈ ಅಭೂತಪೂರ್ವ ಗೆಲುವನ್ನು ಸಂಭ್ರಮಿಸಲು ನಗರದಾದ್ಯಂತ ಅಭಿಮಾನಿಗಳು ಬೀದಿಗಿಳಿದಿದ್ದು, ಇಡೀ ಬೆಂಗಳೂರು ಕೆಂಪು ಮತ್ತು ಚಿನ್ನದ ಬಣ್ಣದಿಂದ ಕಂಗೊಳಿಸುತ್ತಿದೆ. ಆರ್‌ಸಿಬಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಗಾರ ಜೋರಾಗಿತ್ತು. ಭಾನುವಾರ ತಡರಾತ್ರಿಯಿಡೀ ನಗರದ ಪ್ರಮುಖ ರಸ್ತೆಗಳಲ್ಲಿ ಅಭಿಮಾನಿಗಳು ಬೈಕ್ ರ್ಯಾಲಿಗಳನ್ನು ನಡೆಸಿದರು. ‘ಈ ಸಲ ಕಪ್ ನಮ್ದೆ’ ಎಂಬ ಘೋಷಣೆಯ ಜೊತೆಗೆ ಪಟಾಕಿಗಳನ್ನು ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲ ಹಾಗೂ ಇಂದಿರಾನಗರ ಸೇರಿದಂತೆ ನಗರದ ಪ್ರಮುಖ ಜಂಕ್ಷನ್‌ಗಳು ಅಭಿಮಾನಿಗಳಿಂದ ಹೌಸ್‌ಫುಲ್ ಆಗಿದ್ದವು. ಮದ್ಯಪಾನ ಮಾಡಿ ವಾಹನ ಚಾಲನೆ: ಪೊಲೀಸರ ಭರ್ಜರಿ ಬೇಟೆ ಒಂದೆಡೆ ವಿಜಯೋತ್ಸವದ ಸಂಭ್ರಮ ಮಿತಿಮೀರುತ್ತಿದ್ದರೆ,…

Read More

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದ ಬಳಿಯ ತಟ್ಟೆಕೊಡ್ಲುವಿನಲ್ಲಿ ಭೀಕರ ಘಟನೆಯೊಂದು ಸಂಭವಿಸಿದೆ. 85 ವರ್ಷದ ವೃದ್ಧರೊಬ್ಬರು ತಮ್ಮದೇ ಲೈಸನ್ಸ್ ಗನ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಟ್ಟೆಕೊಡ್ಲು ನಿವಾಸಿಯಾದ ರಾಮಚಂದ್ರ ರಾವ್ (85) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ. ತೀವ್ರ ಆರೋಗ್ಯ ಸಮಸ್ಯೆಯಿಂದ ಬೇಸತ್ತು ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕೋಣೆಯಲ್ಲಿ ನಡೆದ ದುರಂತ ಮೃತ ರಾಮಚಂದ್ರ ರಾವ್ ಅವರು ತಮ್ಮ ಮನೆಯ ಕೋಣೆಯಲ್ಲಿದ್ದಾಗ ಈ ಘಟನೆ ನಡೆದಿದೆ. ತಮಗಿದ್ದ ಕೋವಿ ಹೆಗಲಿಗೇರಿಸಿಕೊಂಡ ಅವರು, ಗದ್ದದ ಭಾಗಕ್ಕೆ ಇಟ್ಟುಕೊಂಡು ನೇರವಾಗಿ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡಿನ ದಾಳಿ ಎಷ್ಟು ಭೀಕರವಾಗಿತ್ತೆಂದರೆ, ವೃದ್ಧರ ತಲೆ ಸಂಪೂರ್ಣವಾಗಿ ಛಿದ್ರಗೊಂಡಿದೆ. ಇನ್ನು ರಕ್ತದ ಚಿತ್ತಾರವು ಮನೆಯ ಕೋಣೆಯ ಗೋಡೆಗಳ ಮೇಲಲ್ಲಾ ಹರಡಿದ್ದು, ಘಟನಾ ಸ್ಥಳ ಭೀಕರವಾಗಿ ದೃಶ್ಯೀಕರಣಗೊಂಡಿದೆ. ಅತೀವ ನೋವೇ ಆತ್ಮಹತ್ಯೆಗೆ ಕಾರಣ? ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ ರಾಮಚಂದ್ರ ರಾವ್ ಅವರು ಕೇವಲ ಮೂರು ದಿನಗಳ ಹಿಂದಷ್ಟೇ…

Read More

ಕಲಬುರ್ಗಿ: ರಾಜ್ಯದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಕಣ್ಣೆದುರೇ ಹೆತ್ತ ತಂದೆ ನದಿಯ ನೀರಿನಲ್ಲಿ ಮುಳುಗುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿಯಲ್ಲಿ ಮಗ ನಿಂತಿದ್ದ ದಾರುಣ ಘಟನೆಯೊಂದು ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಮಗನ ಕಣ್ಣು ಮುಂದೆಯೇ ತಂದೆ ನೀರು ಪಾಲಾಗಿ ಜೀವಬಿಟ್ಟಿರುವ ಘಟನೆ ಇಡೀ ಜಿಲ್ಲೆಯನ್ನು ಕಣ್ಣೀರಿಡುವಂತೆ ಮಾಡಿದೆ. ಭೀಮಾ ನದಿಯಲ್ಲಿ ನಡೆದ ದುರಂತ: ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಗ್ರಾಮದ ಬಳಿ ಹರಿಯುವ ಭೀಮಾ ನದಿಯಲ್ಲಿ ಈ ಒಂದು ಘೋರ ದುರಂತ ಸಂಭವಿಸಿದೆ. ನದಿಯ ಮತ್ತೊಂದು ದಡದಲ್ಲಿದ್ದ ತಮ್ಮ ಎಮ್ಮೆಯನ್ನು ವಾಪಸ್ ಕರೆತರುವುದಕ್ಕಾಗಿ ತಂದೆ ನದಿಗೆ ಇಳಿದಿದ್ದರು. ಆದರೆ, ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಗನ ಮೊಬೈಲ್‌ನಲ್ಲಿ ಸೆರೆಯಾಯ್ತು ತಂದೆಯ ಕೊನೆಯ ಕ್ಷಣ: ಮೃತಪಟ್ಟ ದುರ್ದೈವಿ ತಂದೆಯನ್ನು ವಿಜಯ್ ರಾಜು ಎಂದು ಗುರುತಿಸಲಾಗಿದೆ. ತಂದೆ ನದಿ ದಾಟುತ್ತಿದ್ದ ಸಂದರ್ಭದಲ್ಲಿ ಮಗ ದಡದ ಮೇಲೆ ನಿಂತು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸುತ್ತಿದ್ದ ಎನ್ನಲಾಗಿದೆ. ದುರದೃಷ್ಟವಶಾತ್, ತಂದೆಯ…

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪಟ್ಟಾಭಿಷೇಕದ ಬೆನ್ನಲ್ಲೇ ಇದೀಗ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಕಸರತ್ತು ತೀವ್ರಗೊಂಡಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಮತ್ತು ಯಾರನ್ನು ಕೈಬಿಡಬೇಕು ಎನ್ನುವುದು ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆಡಳಿತ ಪಕ್ಷದಲ್ಲಿ ಸಚಿವ ಸ್ಥಾನಕ್ಕಾಗಿ ಒಳಗೊಳಗೇ ಭಾರಿ ಪೈಪೋಟಿ ಶುರುವಾಗಿದೆ. ಈಗಾಗಲೇ ಪಕ್ಷದಲ್ಲಿರುವ ಹಿರಿಯ ನಾಯಕರು ಹಾಗೂ ಮೂರರಿಂದ ನಾಲ್ಕು ಬಾರಿ ಸತತವಾಗಿ ಗೆದ್ದು ಬಂದಿರುವ ಶಾಸಕರು ಸಚಿವ ಸ್ಥಾನಕ್ಕಾಗಿ ತೀವ್ರ ಕಸರತ್ತು ನಡೆಸುತ್ತಿದ್ದಾರೆ. ತಮಗೆ ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನ ಸಿಗಲೇಬೇಕು ಎಂದು ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರುತ್ತಿದ್ದು, ರಾಜಧಾನಿ ಬೆಂಗಳೂರಿನಿಂದ ದೆಹಲಿಯವರೆಗೂ ಲಾಬಿ ತಲುಪಿದೆ. ವಿಧಾನಸಭೆ ಶಾಸಕರಷ್ಟೇ ಅಲ್ಲದೆ, ಇದೀಗ ವಿಧಾನ ಪರಿಷತ್ ಸದಸ್ಯರು (ಎಂಎಲ್‌ಸಿ) ಸಹ ತಮಗೂ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಪರಿಷತ್ ಸದಸ್ಯರ ಕೋಟಾದಡಿ ಕನಿಷ್ಠ…

Read More

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ವಿರುದ್ಧ ಗಂಭೀರ ಸ್ವರೂಪದ ಪಕ್ಷ ವಿರೋಧಿ ಚಟುವಟಿಕೆಯ ಆರೋಪ ಕೇಳಿಬಂದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯನ್ನೇ ಸೋಲಿಸಲು ಆಂತರಿಕವಾಗಿ ಕೆಲಸ ಮಾಡಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿವೆ. ಈ ಆರೋಪಗಳಿಗೆ ಪುಷ್ಟಿ ನೀಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಡಿಯೋ ಕ್ಲಿಪ್‌ ಒಂದು ಭಾರಿ ವೈರಲ್ ಆಗುತ್ತಿದೆ. ‘ಕಾಕ್ರೋಚ್ ಪಾರ್ಟಿ’ ಹೆಸರಿನ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಆಡಿಯೋ ಸಂಭಾಷಣೆ ಬಿಡುಗಡೆಯಾಗಿದ್ದು, ಇದರಲ್ಲಿ ಕೇಳಿಬರುವ ಧ್ವನಿ ಸಚಿವ ಜಮೀರ್ ಅಹಮದ್ ಅವರದ್ದೇ ಎನ್ನಲಾಗಿದೆ. ದಾವಣಗೆರೆಯ ಸ್ಥಳೀಯ ಕಾಂಗ್ರೆಸ್ ಮುಖಂಡ ಹಾಗೂ ಕೆಎಂಡಿಸಿ ನಿರ್ದೇಶಕ ಮೊಹಮ್ಮದ್ ಸಿರಾಜ್ ಎಂಬುವವರ ಜೊತೆ ಜಮೀರ್ ನಡೆಸಿರುವ ಮಾತುಕತೆ ಇದಾಗಿದೆ ಎಂದು ಬಿಂಬಿಸಲಾಗಿದೆ. ವೈರಲ್ ಆಗಿರುವ ಆಡಿಯೋದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಬಿಟ್ಟು, ಪಕ್ಷೇತರ ಹಾಗೂ ಎಸ್‌ಡಿಪಿಐ (SDPI) ಅಭ್ಯರ್ಥಿಗಳಿಗೆ ಬೆಂಬಲ…

Read More

ಬೆಂಗಳೂರು: ದೇಶದಲ್ಲಿ ಈಗಾಗಲೇ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದರಗಳ ನಿರಂತರ ಹೆಚ್ಚಳದಿಂದ ಕಂಗಾಲಾಗಿದ್ದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ವಿವಿಧ ಉದ್ಯಮಗಳಲ್ಲಿ ಬಳಸಲಾಗುವ ವಾಣಿಜ್ಯ ಬಳಕೆಯ (Commercial) ಎಲ್‌ಪಿಜಿ ಸಿಲಿಂಡರ್ ದರವನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ. ತೈಲ ಕಂಪನಿಗಳು ಪ್ರಕಟಿಸಿರುವ ಈ ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ ಎಂದು ತಿಳಿದುಬಂದಿದೆ. ದೇಶದ ಪ್ರಮುಖ ಮಹಾನಗರಗಳಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇದರ ಬಿಸಿ ಜೋರಾಗಿಯೇ ತಟ್ಟಿದೆ. ಬೆಂಗಳೂರಿನಲ್ಲಿ 19 ಕೆಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ದರದಲ್ಲಿ 46 ರೂ.ಗಳಷ್ಟು ಹೆಚ್ಚಳವಾಗಿದ್ದು, ಇದರೊಂದಿಗೆ ಪ್ರತಿ ಸಿಲಿಂಡರ್ ಬೆಲೆ ಭೀಕರ 3,198 ರೂ.ಗಳಿಗೆ ತಲುಪಿದೆ. ಈ ದಿಢೀರ್ ದರ ಹೆಚ್ಚಳವು ನಗರದ ಹೋಟೆಲ್ ಮಾಲೀಕರು ಹಾಗೂ ಸಣ್ಣ ಉದ್ಯಮಿಗಳಲ್ಲಿ ಆತಂಕ ಮೂಡಿಸಿದೆ. ರಾಜಧಾನಿ ದೆಹಲಿಯಲ್ಲೂ ಸಹ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ದೆಹಲಿಯಲ್ಲಿ 19…

Read More

ಬೆಂಗಳೂರು: ದೇಶದ ರಾಜಕಾರಣದಲ್ಲಿ ಅಪರೂಪದ ಮುತ್ಸದ್ದಿ, ‘ಮಣ್ಣಿನ ಮಗ’ ಎಂದೇ ಖ್ಯಾತರಾದ ಹರದನಹಳ್ಳಿ ದೊಡ್ಡಗೌಡ ದೇವೇಗೌಡರು ಭಾರತದ 11ನೇ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ 2026ರ ಜೂನ್ 1ಕ್ಕೆ (ಸೋಮವಾರ) ಸರಿಯಾಗಿ 30 ವರ್ಷಗಳು ಪೂರೈಸಿವೆ. ಹಾಸನ ಜಿಲ್ಲೆಯ ಹರದನಹಳ್ಳಿಯ ಸಾಮಾನ್ಯ ಕೃಷಿಕ ಕುಟುಂಬದಲ್ಲಿ ಜನಿಸಿ, ಹಳ್ಳಿಗಾಡಿನ ರಾಜಕಾರಣದಿಂದ ದಿಲ್ಲಿಯ ಗದ್ದುಗೆಯವರೆಗೆ ಬೆಳೆದ ಅವರ ರಾಜಕೀಯ ಯಾನ ಭಾರತೀಯ ಪ್ರಜಾಪ್ರಭುತ್ವದ ವಿಶಿಷ್ಟ ಅಧ್ಯಾಯಗಳಲ್ಲಿ ಒಂದಾಗಿದೆ. ರಾಷ್ಟ್ರ ರಾಜಕಾರಣದ ತೀವ್ರ ಅನಿಶ್ಚಿತತೆಯ ಕಾಲ: ಅದು 1996ರ ಲೋಕಸಭಾ ಚುನಾವಣೆಯ ಸಮಯ. ದೇಶದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ತೀವ್ರ ಅನಿಶ್ಚಿತತೆಯ ವಾತಾವರಣ ನಿರ್ಮಾಣವಾಗಿತ್ತು. ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಬಾರದೆ ಅತಂತ್ರ ಪರಿಸ್ಥಿತಿ ಎದುರಾಗಿತ್ತು. ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ ಪರವಾಗಿ ಅಟಲ್ ಬಿಹಾರಿ ವಾಜಪೇಯಿ ಅವರು ಸರ್ಕಾರ ರಚಿಸಿದರಾದರೂ, ಬಹುಮತ ಸಾಬೀತುಪಡಿಸಲಾಗದೆ ಕೇವಲ 13 ದಿನಗಳಲ್ಲಿ ಆ ಸರ್ಕಾರ ಪತನಗೊಂಡಿತು. ದೇಶ ಮತ್ತೊಮ್ಮೆ ರಾಜಕೀಯ ಬಿಕ್ಕಟ್ಟಿಗೆ ಸಿಲುಕಿದ ಸಂದರ್ಭವದು. ಅನಿರೀಕ್ಷಿತವಾಗಿ ಒಲಿದ…

Read More

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇಲೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು ಈ ಒಂದು ಚರ್ಚೆಯ ವೇಳೆ ರಾಹುಲ್ ಗಾಂಧಿ ನಿಮ್ಮ ಪತ್ನಿಯನ್ನು ರಾಜ್ಯಸಭೆಗೆ ಕಳುಹಿಸಿ ಎಂದು ಆಫರ್ ನೀಡಿದ್ದರು ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಹೌದು ನಿಮಗಾಗದಿದ್ದರೆ ನಿಮ್ಮ ಪತ್ನಿ ಅವರನ್ನು ರಾಜ್ಯಸಭೆಗೆ ಕಳುಹಿಸಿ ಅಂತ ರಾಹುಲ್ ಗಾಂಧಿ ಹೇಳಿದ್ದರು. ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿ ತೀವ್ರ ಒತ್ತಡ ಹೇರಿದ್ದರು.ರಾಷ್ಟ್ರೀಯ ರಾಜಕಾರಣಕ್ಕೆ ಆಗಮಿಸುವಂತೆ ರಾಹುಲ್ ಗಾಂಧಿ ಹೇರಿದ್ದರು. ಆದರೆ ರಾಜ್ಯಸಭೆ ಸ್ಥಾನ ನಿರಾಕರಿಸಿದ ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿ ಇರುವುದಾಗಿ ಸ್ಪಷ್ಟಪಡಿಸಿದ್ದರು. ಪತ್ನಿಗೂ ರಾಜ್ಯಸಭಾ ಸ್ಥಾನ ನೀಡುವುದಕ್ಕೆ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಈ ಹೊರ ಜಗತ್ತಿಗೆ ನನ್ನ ಪತ್ನಿ ಬಂದಿಲ್ಲ ಹೀಗಾಗಿ ನನ್ನ ಪತ್ನಿ ರಾಜಕೀಯಕ್ಕೆ ಬರುವ ಮಾತೇ ಇಲ್ಲ.ನನ್ನ ಪತ್ನಿ ರಾಜ್ಯ ಸಭೆಯ ಪ್ರವೇಶದ ಮಾತೆ ಇಲ್ಲ ಎಂದು ಕಡ್ಡಿ ಮುರಿದಂತೆ ಸಿದ್ದರಾಮಯ್ಯ ರಾಹುಲ್ ಗಾಂಧಿ ಆಫರ್ ತಿರಸ್ಕರಿಸಿದ್ದರು. ಹಿಂದುಳಿದ ಸಮಾಜದವರಿಗೆ…

Read More

ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಆರು ಜನರ ಭೀಕರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ವಿಜಯಪುರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣ ನಡೆದು ಕೆಲವೇ ದಿನಗಳಲ್ಲಿ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ಇದುವರೆಗೆ ಒಟ್ಟು 12 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಇಂದು ಮಧ್ಯಾಹ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಜಮೀನಿನಲ್ಲಿ ನಡೆದಿದ್ದ ರಕ್ತಪಾತ: ಮೇ 29 ರಂದು ಗೋವಿಂದಪುರ ಗ್ರಾಮದ ಜಮೀನೊಂದರಲ್ಲಿ ಈ ಭೀಕರ ಹತ್ಯಾಕಾಂಡ ನಡೆದಿತ್ತು. ಜಮೀನಿನ ವಿಷಯ ಅಥವಾ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿತ್ತು ಎನ್ನಲಾಗಿದೆ. ದುಷ್ಕರ್ಮಿಗಳು ಡಬಲ್ ಬ್ಯಾರೆಲ್ ಗನ್‌ನಿಂದ ಗುಂಡು ಹಾರಿಸಿ ಹಾಗೂ ಮಚ್ಚು, ಲಾಂಗುಗಳಿಂದ ಮನಬಂದಂತೆ ಕೊಚ್ಚಿ ಆರು ಜನರನ್ನು ಅತ್ಯಂತ ಕ್ರೂರವಾಗಿ ಸ್ಥಳದಲ್ಲೇ ಹತ್ಯೆ ಮಾಡಿದ್ದರು. ಒಂದೇ ಕುಟುಂಬದ ಐವರು ಸೇರಿ ಆರು ಜನ ಬಲಿ: ಚಡಚಣ ಪಟ್ಟಣದ ಪ್ರತಿಷ್ಠಿತ ಕುಟುಂಬವೊಂದರ ಐವರು ಸದಸ್ಯರು ಸೇರಿದಂತೆ…

Read More