Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಆದಾಯಕ್ಕೂ ಮೀರಿ ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಬಿಡಿಎ ನೌಕರ ವೆಂಕಟೇಶ ನಿವಾಸದ ಮೇಲೆ ಇದೀಗ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಬಿಡಿಎ ನೌಕರ ವೆಂಕಟೇಶ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳಿಗ್ಗೆಯಿಂದ ಸುಮಾರು 10ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಆದಾಯ ಮೇರಿ ಆಸ್ತಿಗಳಿಗಕೆ ಸೇರಿದಂತೆ ಹಲವು ಆರೋಪ ಕೇಳಿ ಬಂದಿತ್ತು. ಹೀಗಾಗಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ.
ಉಡುಪಿ : ಇತ್ತೀಚಿಗೆ ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ದೊಡ್ಡ ದೊಡ್ಡ ಉದ್ಯಮಿಗಳು, ಐಟಿ ಕಂಪನಿಯ ಉದ್ಯೋಗಿಗಳೇ ಟಾರ್ಗೆಟ್ ಆಗಿರುತ್ತಿದ್ದರು. ಆದರೆ ಇದೀಗ ಸೈಬರ್ ವಂಚಕರು ರಾಜಕಾರಣಿಗಳನ್ನು ಬಿಡುತ್ತಿಲ್ಲ. ಉಡುಪಿ ಶಾಸಕ ಸುವರ್ಣ ಅವರ ವಾಟ್ಸಾಪ್ ಖಾತೆಯನ್ನು ಹ್ಯಾಕ್ ಮಾಡಿದ್ದಾರೆ. ಹೌದು ಶಾಸಕ ಯಶಪಾಲ್ ಸುವರ್ಣ ಅವರ ವಾಟ್ಸಾಪ್ ಖಾತೆಯನ್ನು ಮಾಡಿದ್ದಾರೆ. ಜನಸಾಮಾನ್ಯರಿಗೆ ಕಾಡುತ್ತಿದ್ದ ಸೈಬರ್ ವಂಚಕರು ಶಾಸಕರ ಖಾತೆಯನ್ನೂ ಬಿಡದೇ ಹ್ಯಾಕ್ ಮಾಡಿದ್ದಾರೆ. ಇಂದು ಸೈಬರ್ ಕ್ರಿಮಿನಲ್ ಗಳು ಉಡುಪಿಯ ಶಾಸಕ ಯಶ್ಪಾಲ್ ಸುವರ್ಣ ಅವರ ವಾಟ್ಸಾಪ್ ಖಾತೆಯನ್ನು ಹ್ಯಾಕ್ ಮಾಡಿ, ಅವರ ಸಂಪರ್ಕದಲ್ಲಿ ಇರುವ ಆಪ್ತರಿಗೆ ಮೆಸೇಜ್ ಮಾಡಿ, ನಿಮ್ಮಿಂದ ನನಗೆ ಒಂದು ಸಹಾಯವಾಗಬೇಕೆ ಅಂತ ಹಣದ ಅವಶ್ಯಕತೆಯಿದೆ ಎಂದು ಮೆಸೇಜ್ ಮಾಡಿದ್ದಾರೆ. ಹೀಗೆ ಸಾಕಷ್ಟು ಜನರಿಗೆ ಮೆಸೇಜ್ ಗಳು ಹೋದ ನಂತರ ಶಾಸಕರಿಗೆ ಈ ಬಗ್ಗೆ ಅರಿವಾಗಿದ್ದು, ತಮ್ಮ ವಾಟ್ಸಾಪ್ ಖಾತೆ ಹ್ಯಾಕ್ ಆಗಿರುವ ಬಗ್ಗೆ ತಡವಾಗಿ ಎಚ್ಚೆತ್ತುಕೊಂಡಿದ್ದು ಯಾರೂ ಹಣ ಹಾಕಬೇಡಿ ಎಂದು ಎಚ್ಚರಿಸಿದ್ದಾರೆ.…
ಬೆಂಗಳೂರು : ಬೆಂಗಳೂರಿನ ಕೋಗಿಲು ಲೇಔಟ್ ನಲ್ಲಿ ಮನೆಗಳನ್ನು ತೇರು ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅತಿವೃಷ್ಟಿಯಿಂದ ರೈತರು ಬೆಳೆ ಕಳೆದುಕೊಂಡು ಕಂಗಾಗಿದ್ದಾರೆ. ಅವರಿಗೆ ಪರಿಹಾರ ನೀಡುವುದನ್ನು ಬಿಟ್ಟು, ಕೋಗಿಲೆ ಲೇಔಟ್ ನಲ್ಲಿರುವ ನಿರಾಶ್ರಿತರಿಗೆ ಮನೆ ಕಟ್ಟಿಕೊಡಲು ಹೊರಟಿದ್ದೀರಿ.ರಾಜ್ಯದ ಜನತೆಗೆ ಸುಣ್ಣ, ಹೊರ ರಾಜ್ಯದವರಿಗೆ ಬೆಣ್ಣೆ ಇದು ಕಾಂಗ್ರೆಸ್ ಸರ್ಕಾರದ ಹೊಸ ವರ್ಷದ ಗ್ಯಾರಂಟಿ ಎಂದು ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಉತ್ತರ ಕರ್ನಾಟಕದ ಕಲಬುರಗಿ, ಬೀದರ್, ವಿಜಯಪುರ, ಯಾದಗಿರಿ ಮೊದಲಾದ ಜಿಲ್ಲೆಗಳಲ್ಲಿ 117 ಕ್ಕೂ ಅಧಿಕ ಹಳ್ಳಿಗಳು ಜಲಾವೃತವಾಗಿ, 20,000 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. 14.58 ಲಕ್ಷ ಹೆಕ್ಟೇರ್ನಲ್ಲಿ ಬೆಳೆ ಹಾನಿಯಾದ ಸಂದರ್ಭದಲ್ಲಿ ರೈತರು ಹಾಗೂ ನಿರಾಶ್ರಿತರ ಕಣ್ಣೀರು ಒರೆಸಲು ಹೋಗದ ಸರ್ಕಾರ, ಇಂದು ಬೆಂಗಳೂರಿನ…
ಬೆಂಗಳೂರು : ಇನ್ನೇನು ನಾಳೆನೇ ಹೊಸ ವರ್ಷಕ್ಕೆ ಇಡೀ ಜಗತ್ತೇ ಕಾಯುತ್ತಿದೆ ಈ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದಲೇ ಎಲ್ಲಾ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು ಯಾವುದೇ ಅಹಿತಕರ ಘಟನೆ ನಡೆದಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವ ಯುವಜನತೆಗೆ ಯಾವುದೇ ರೀತಿಯ ತೊಂದರೆ ಆಗದಂತೆ ಈಗಾಗಲೇ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದ್ದು, ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಆದರೆ ಕೆಲವರು ಹೊಸ ವರ್ಷ ಹಿನ್ನೆಲೆಯಲ್ಲಿ ಕೆಲವು ಪ್ರವಾಸಿ ತಾಣಗಳಿಗೆ ಭೇಟಿ ಕೊಡುತ್ತಾರೆ. ಈ ಹಿನ್ನಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ ಡಿಸೆಂಬರ್ 31 ಸಂಜೆ 6 ಗಂಟೆಯಿಂದ ಜನವರಿ 1 ಬೆಳಗ್ಗೆ 6 ಗಂಟೆಯವರೆಗೂ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಶ್ರೀರಾಮದೇವರ ಬೆಟ್ಟ, ಸಂಗಮ, ಮೇಕೆದಾಟು, ಚುಂಚಿಫಾಲ್ಸ್ ಪ್ರದೇಶಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ನಿಷೇಧಿತ ಪ್ರದೇಶವೆಂದು…
ಬೆಂಗಳೂರು : ಸಿದ್ದರಾಮಯ್ಯ ಅವರು ಜ.7ರಂದು ಕರ್ನಾಟಕದ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದು, ಸಂಭ್ರಮಾಚರಣೆಗೆ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗ ಸಮುದಾಯಗಳ ಒಕ್ಕೂಟವೂ ಸಂಭ್ರಮಾಚರಣೆಯನ್ನು ಹಮ್ಮಿಕೊಂಡಿದೆ. ದೇವರಾಜ ಅರಸು ಅವರು ಈವರೆಗಿನ ದೀರ್ಘಾವಧಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿಯಾಗಿದ್ದಾರೆ. ಅವರು ಎರಡು ಅವಧಿಗಳಲ್ಲಿ ಒಟ್ಟು 2,792 ದಿನಗಳು ಅಥವಾ 7.6 ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ಸೋಮವಾರ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ 2,784 ದಿನಗಳನ್ನು ಪೂರ್ಣಗೊಳಿಸಿದ್ದಾರೆ. ಇದರಲ್ಲಿ ಅವರ ಮೊದಲ ಅಧಿಕಾರಾವಧಿಯ (2013ರಿಂದ 2018) 1,829 ದಿನಗಳು ಮತ್ತು ಪ್ರಸಕ್ತ ಅಧಿಕಾರಾವಧಿಯ ದಿನಗಳು ಸೇರಿವೆ. ಜನವರಿ 6ರಂದು ಅರಸು ಅವರ ದಾಖಲೆಯನ್ನು ಸರಿಗಟ್ಟಲಿರುವ ಅವರು ಮರುದಿನ ಅದನ್ನು ಮುರಿಯಲಿದ್ದಾರೆ. ಸಿದ್ದರಾಮಯ್ಯನವರ ಅಭಿಮಾನಿಗಳು ಮತ್ತು ವಿವಿಧ ಸಂಘಟನೆಗಳು ಸಂಭ್ರಮಾಚರಣೆಗೆ ಯೋಜಿಸುತ್ತಿದ್ದಾರೆ. ಅಹಿಂದ ಸಮಾವೇಶವನ್ನು ಆಯೋಜಿಸುವಂತೆ ನಾವು ಯಾರನ್ನೂ ಕೇಳಿಕೊಂಡಿಲ್ಲ’ ಎಂದು ಸ್ಪಷ್ಟಪಡಿಸಿದ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು, ಆದರೆ ವಿವಿಧ ಸಮುದಾಯಗಳು ತಮ್ಮ…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಟ್ರಯಲ್ ಶುರುವಾಗಿದ್ದು, ರೇಣುಕಾಸ್ವಾಮಿ ತಂದೆ-ತಾಯಿಯ ಹೇಳಿಕೆ ದಾಖಲಿಸಲಾಗುತ್ತಿದೆ. ಈ ಹೊತ್ತಲ್ಲೇ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಾಸಿಕ್ಯೂಷನ್ ವಿರುದ್ಧವೇ ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಹೇಳಿಕೆ ನೀಡಿದ್ದಾರೆ. ಹಿಂದಿನ ಹೇಳಿಕೆಗೂ ಈಗಿನ ಹೇಳಿಕೆಗೂ ದ್ವಂದ್ವ ಹಿನ್ನೆಲೆಯಲ್ಲಿ ರತ್ನಪ್ರಭಾರನ್ನು ಪ್ರತಿಕೂಲ ಸಾಕ್ಷಿಯಾಗಿ ಪರಿಗಣಿಸಲು ಎಸ್ಪಿಪಿ (SPP) ಮನವಿ ಮಾಡಿದ್ದಾರೆ. ಎಸ್ಪಿಪಿ ಪ್ರಸನ್ನಕುಮಾರ್ ಸಲ್ಲಿಸಿದ ಮನವಿ ಬಗ್ಗೆ ಸೋಮವಾರ ನಿರ್ಧಾರ ಆಗಲಿದೆ. ರತ್ನಪ್ರಭಾ 8 ಅಂಶಗಳಲ್ಲಿ ಪ್ರಾಸಿಕ್ಯೂಷನ್ ವಿರುದ್ಧವೇ ವ್ಯತಿರಿಕ್ತ ಹೇಳಿಕೆ ಕೊಟ್ಟಿದ್ದಾರೆ. ಮಗನ ಮೊಬೈಲ್ ಬಗ್ಗೆ ಗೊತ್ತಿಲ್ಲ ಎಂದು ನ್ಯಾಯಾಲಯದಲ್ಲಿ ಹೇಳಿದ್ದು ಪೊಲೀಸರ ಮುಂದೆ ಇದೇ ಮೊಬೈಲ್ ಅಂತ ಹೇಳಿದ್ದರು. ಜೊತೆಗೆ ಹತ್ಯೆಯಾದ ದಿನ 2 ಬಾರಿ ರೇಣುಕಾಗೆ ಕರೆ ಮಾಡಿದ್ದರು. ಆದರೆ ಕರೆ ಮಾಡಿಲ್ಲ ಅಂತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದರು. ಈ ಎಲ್ಲಾ ಹೇಳಿಕೆಗಳ ಆಧಾರದಲ್ಲಿ ರತ್ನಪ್ರಭಾರನ್ನು ಪ್ರತಿಕೂಲ ಸಾಕ್ಷಿಯಾಗಿ ಪರಿಗಣಿಸಲು…
ಉತ್ತರಕನ್ನಡ : ಶೈಕ್ಷಣಿಕ ಪ್ರವಾಸ ಹಿನ್ನಲೆಯಲ್ಲಿ ದಾವಣಗೆರೆಯ ವಿದ್ಯಾರ್ಥಿಗಳು ಉತ್ತರ ಕನ್ನಡ ಜಿಲ್ಲೆಗೆ ತೆರಳಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಬಸ್ ನಲ್ಲಿ ಇದ್ದಂತಹ ಸುಮಾರು 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಮೂಲತಃ ದಾವಣಗೆರೆಯ ಜೈನ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಬಸ್ ಪಲ್ಟಿಯಾಗಿದೆ. ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ವಿಭೂತಿ ಫಾಲ್ಸ್ಗೆ ಹೋಗುವಾಗ ಶಿರಸಿ ತಾಲೂಕಿನ ಮತ್ತಿಘಟ್ಟ ಸಮೀಪದ ಹಸೆಮನೆ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 10 ರಿಂದ 12 ವಿದ್ಯಾರ್ಥಿಗಳಿಗೆ ಗಾಯಗೊಂಡಿದ್ದಾರೆ. ಅಪಘಾತಕ್ಕೀಡಾದ ತಕ್ಷಣ ಗಾಯಾಳು ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಅಂಕೋಲಾ ಹಾಗೂ ಶಿರಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಡಿಸೆಂಬರ್ 28 ರಂದು ದಾವಣಗೆರೆಯಿಂದ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಅದರ ಭಾಗವಾಗಿ ಮಂಗಳವಾರ ಬೆಳಿಗ್ಗೆ ಶಿರಸಿ ಮಾರಿಕಾಂಬಾ ದೇವಾಲಯಕ್ಕೆ ತೆರಳಿ, ಅಲ್ಲಿಂದ ಯಾನ ಹಾಗೂ ವಿಭೂತಿ ಫಾಲ್ಸ್ಗೆ ತೆರಳಬೇಕಿತ್ತು. ಮಾರ್ಗಮಧ್ಯೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ…
ಬೆಂಗಳೂರು : 2026ರ ಜ.9ರಿಂದ ಫೆ.5ರವರೆಗೆ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯ ನಡೆಯಲಿದ್ದು, ಈ ಟೂರ್ನಿಯಲ್ಲಿ ಆರ್ಸಿಬಿಯ ಎಲ್ಲಿಸ್ ಪೆರ್ರಿ ಯುಪಿ ವಾರಿಯರ್ಸ್ನ ತಾರಾ ನರ್ರಿಸ್ ಹಾಗೂ ದೆಹಲಿ ಕ್ಯಾಪಿಟಲ್ಸ್ನ ಅನ್ನಾಬೆಲ್ ಸದರ್ಲ್ಯಾಂಡ್ ಹೊರಗುಳಿದಿದ್ದಾರೆ ಎಂದು WPL ಎಕ್ಸ್ನಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ. ಆಸ್ಟ್ರೇಲಿಯಾದ ಆಲ್ ರೌಂಡರ್ಗಳಾದ ಎಲ್ಲಿಸ್ ಪೆರ್ರಿ ಮತ್ತು ಅನ್ನಾಬೆಲ್ ಸದರ್ಲ್ಯಾಂಡ್ ವೈಯಕ್ತಿಕ ಕಾರಣಗಳಿಂದ WPL 2026ರ ಆವೃತ್ತಿಯಿಂದ ಹಿಂದೆ ಸರಿದಿದ್ದಾರೆ. ಆರ್ಸಿಬಿ ತಂಡ ಪೆರ್ರಿ ಬದಲಾಗಿ ಸಯಾಲಿ ಸತ್ಘರೆ ಅವರನ್ನು, ದೆಹಲಿ ಕ್ಯಾಪಿಟಲ್ಸ್ ತಂಡವು ಸದರ್ಲ್ಯಾಂಡ್ ಬದಲಾಗಿ ಅಲಾನಾ ಕಿಂಗ್ ಅವರನ್ನು ಹೆಸರಿಸಿದೆ. 2026ರ ಜ.18ರಿಂದ ಫೆ.1ರವರೆಗೆ ನೇಪಾಳದಲ್ಲಿ 2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ನ ಅರ್ಹತಾ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಯುಎಸ್ ನ್ಯಾಷನಲ್ ಟೀಮ್ಗೆ ತಾರಾ ನರ್ರಿಸ್ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ಜ.9ರಿಂದ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ನಿಂದ ತಾರಾ ನರ್ರಿಸ್ ಅವರು ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಯುಪಿ ವಾರಿಯರ್ಸ್ ತಂಡವು ಆಸ್ಟ್ರೇಲಿಯಾದ…
ಬೆಂಗಳೂರು : ಡ್ರಿಂಕ್ ಅಂಡ್ ಡ್ರೈವ್ ತಪಾಸಣೆಯ ವೇಳೆ ಸಂಚಾರಿ ಪೊಲೀಸರಿಗೆ ಅವಾಜ್ ಹಾಕಿರುವ ಘಟನೆ ವರದಿಯಾಗಿದೆ. ಹೌದು ನಾಲ್ವರು ಯುವಕರು ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಮಾಡುವ ವೇಳೆ ಪೋಲೀಸರ ಮೇಲೆ ಹಲ್ಲೆ ಮಾಡಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಾರು ಚಾಲಕನಿಗೆ ಊದಲು ಹೇಳಿದಾಗ ನಿರಾಕರಿಸಿದ ವಿಚಾರಕ್ಕೆ ಪೊಲೀಸರ ನಡುವೆ ಹಾಗೂ ನಾಲ್ವರ ಯುವಕರ ಮಧ್ಯೆ ವಾಗ್ವಾದ ನಡೆದಿದ್ದು, ಕಾರಿನಿಂದ ಕೆಳಗಿಳಿದು ದೇವನಹಳ್ಳಿ ಟ್ರಾಫಿಕ್ ಪೊಲೀಸರ ಮೇಲೆ ದರ್ಪ ತೋರಿದ್ದಾರೆ. ಪೊಲೀಸರನ್ನು ಎಳೆದಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಕರ್ತವ್ಯಕ್ಕೆ ಅಡ್ಡಿ ಸಾರ್ವಜನಿಕವಾಗಿ ಅಪಮಾನ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ fir ದಾಖಲಾಗಿದೆ. ದೇವನಹಳ್ಳಿಯ ಬೈಪಾಸ್ ನಲ್ಲಿ ನಿನ್ನೆ ರಾತ್ರಿ ಒಂದು ಘಟನೆ ನಡೆದಿದೆ.
ಬೆಂಗಳೂರು : ಅಕ್ರಮವಾಗಿ ಆನ್ಲೈನ್ ಅಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಶಾಸಕ ವೀರೇಂದ್ರ ಪಪ್ಪಿಗೆ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇಡಿ ಪ್ರಕರಣದಲ್ಲಿ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ಆಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ. ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ವೀರೇಂದ್ರ ಪಪ್ಪಿ ಜೈಲು ಸೇರಿದ್ದರು. ಕಳೆದ ನಾಲ್ಕು ತಿಂಗಳಿಂದ ಪರಪ್ಪನ ಅಗ್ರಹಾರ ಇದೀಗ ಇಡೀ ಪ್ರಕರಣದಲ್ಲಿ ವೀರೇಂದ್ರ ಪಪ್ಪಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣ ಹಿನ್ನೆಲೆ? ಅಕ್ರಮ ಆನ್ಲೈನ್ ಮತ್ತು ಬೆಟ್ಟಿಂಗ್ನಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕರ್ನಾಟಕದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ. ಸಿ. ವೀರೇಂದ್ರ ಪಪ್ಪಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗ್ಯಾಂಗ್ಟಾಕ್ನಲ್ಲಿ…














