Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಮೈಸೂರು : RSS ಸಂಘಟನೆ ನೋಂದಣಿ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ ಖರ್ಗೆ ನಡುವೆ ತೀವ್ರ ವಾಗ್ವಾದ ನಡೆಯುತ್ತಿದ್ದು, ಇದೀಗ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಕೂಡ RSS ನವರು ಹಿಂದುಗಳೇ ಅಲ್ಲ ಅವರು ಕೇವಲ ಹಿಂದುತ್ವವಾದಿಗಳಷ್ಟೇ ಎಂದು ಹೇಳಿಕೆ ನೀಡಿದ್ದಾರೆ. ಧರ್ಮದ ಹೆಸರಿನಲ್ಲಿ ಏನು ಬೇಕಾದರೂ ಮಾಡುತ್ತೇವೆ ಅಂದರೆ ಅದೆಲ್ಲ ನಡೆಯಲ್ಲ. ಆರ್ಎಸ್ಎಸ್ ಕೇವಲ ಸಾಂಸ್ಕೃತಿಕ ಸಂಘಟನೆ ಅಲ್ಲ. ಆರ್ ಎಸ್ ಎಸ್ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿರುವ ಸಂಸ್ಥೆ. ಎಲ್ಲರಿಗೂ ಒಂದು ಕಾನೂನು ಅವರಿಗೆ ಇನ್ನೊಂದು ಕಾನೂನ? ಅವರು ಎಷ್ಟೇ ಆರ್ಥಿಕ ವ್ಯವಹಾರ ಮಾಡಿಕೊಂಡರು ಕೂಡ ನೋಂದಣಿಯಿಂದ ವಿನಾಯಿತಿ ಕೊಡಬೇಕು ಅಂತ ಹೇಗೆ ಹೇಳಲಾಗುತ್ತದೆ? RSS ಕೇವಲ ಸಂಸ್ಕೃತಿಕ ಸಂಘಟನೆ ಅಲ್ಲ ಎಲೆಕ್ಷನ್ ಸಂದರ್ಭದಲ್ಲಿ ಬಿಜೆಪಿ ಪರವಾಗಿ ಹೇಗೆ ಕೆಲಸ ಮಾಡಬೇಕು ಎನ್ನುವುದು ಗೊತ್ತಿದೆ. ಪ್ರತಿಯೊಂದು ನಗರಗಳಲ್ಲಿ ಕೂಡ ಕೋಟ್ಯಾಂತರ ಬೆಲೆಬಾಳುವ ಆಸ್ತಿ, ಕಟ್ಟಡಗಳಿವೆ. ಇವೆಲ್ಲ ಹೇಗೆ ಬಂತು ಎಲ್ಲಿಂದ ಬಂತು? ಇದೆಲ್ಲಾ ತಿಳಿದುಕೊಳ್ಳಬೇಕಾದರೆ ರಿಜಿಸ್ಟ್ರೇಷನ್ ಮಾಡಿಕೊಳ್ಳಲೇಬೇಕು ಎಂದರು.

Read More

ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರವೇ ತಲೆತಗ್ಗಿಸುವಂತಹ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಜ್ಞಾನದೀವಿಗೆ ಬೆಳಗಬೇಕಾದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕನೋರ್ವ, ತನ್ನದೇ ಶಾಲೆಯ ಐದಕ್ಕೂ ಹೆಚ್ಚು ಅಪ್ರಾಪ್ತ ಗಂಡು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ವಿಕೃತ ಘಟನೆಯಿಂದ ಇಡೀ ರಾಜ್ಯವೇ ಬೆಚ್ಚಿಬಿದ್ದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಈ ಲಜ್ಜೆಗೆಟ್ಟ ಕೃತ್ಯ ನಡೆದಿದೆ. ಈ ಶಾಲೆಯಲ್ಲಿ ಕನ್ನಡ ವಿಷಯದ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಶೈಲ್ ಕುಂಬಾರ್ ಎಂಬಾತನೇ ಈ ಆರೋಪ ಎದುರಿಸುತ್ತಿರುವ ಶಿಕ್ಷಕ. ಈತ ತನ್ನ ಸ್ಥಾನದ ದುರುಪಯೋಗ ಪಡಿಸಿಕೊಂಡು, ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮುಗ್ಧ ವಿದ್ಯಾರ್ಥಿಗಳನ್ನು ತನ್ನ ವಿಕೃತಿಗೀಡು ಮಾಡಿಕೊಂಡಿದ್ದಾನೆ ಎಂದು ದೂರಲಾಗಿದೆ. ಪರೀಕ್ಷೆ ಪಾಸ್ ಮಾಡುವ ಆಮಿಷ, ಶೌಚಾಲಯದಲ್ಲಿ ದೌರ್ಜನ್ಯ ಆರೋಪಿ ಶಿಕ್ಷಕ ಶ್ರೀಶೈಲ್ ಕುಂಬಾರ್, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮುಂಬರುವ ಪರೀಕ್ಷೆಯಲ್ಲಿ ‘ಕನ್ನಡ ವಿಷಯದಲ್ಲಿ ಪಾಸ್ ಮಾಡಿಸುವುದಾಗಿ’…

Read More

ಇಂಡೋನೆಷ್ಯಾ : ಇಂಡೋನೆಷ್ಯಾದ ಸುಲವೇಸಿ ಪ್ರಾಂತ್ಯದಲ್ಲಿ ಭೀಕರ ಭೂಕಂಪ ಸಂಭವಿಸಿದ್ದು, ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ರಿಕ್ಟರ್ ಮಾಪಕದಲ್ಲಿ 6.7 ರಷ್ಟು ತೀವ್ರತೆ ದಾಖಲಾಗಿರುವ ಈ ಪ್ರಬಲ ಭೂಕಂಪದಿಂದಾಗಿ ಪ್ರಾಂತ್ಯದ ಹಲವು ಭಾಗಗಳು ಗಡಗಡ ನಡುಗಿವೆ. ಮುಂಜಾನೆ ಗಾಢ ನಿದ್ರೆಯಲ್ಲಿದ್ದ ಜನರಿಗೆ ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆ, ಜೀವಭಯದಿಂದ ರಸ್ತೆಗಳಿಗೆ ಓಡಿ ಬಂದಿದ್ದಾರೆ. ಹವಾಮಾನ ಮತ್ತು ಭೂವಿಜ್ಞಾನ ಇಲಾಖೆಯ ವರದಿಗಳ ಪ್ರಕಾರ, ಸುಲವೇಸಿ ಪ್ರಾಂತ್ಯದ ನಿರ್ದಿಷ್ಟ ಪ್ರದೇಶವೊಂದನ್ನು ಈ ಭೂಕಂಪದ ಕೇಂದ್ರ ಬಿಂದು ಎಂದು ಗುರುತಿಸಲಾಗಿದೆ. ಭೂಮಿಯ ಮೇಲ್ಮೈನಿಂದ ಕೇವಲ 10 ಕಿಲೋಮೀಟರ್ ಆಳದಲ್ಲಿ ಈ ಭೂಕಂಪನ ಪ್ರಕ್ರಿಯೆ ಸಂಭವಿಸಿದೆ. ಭೂಮಿಯ ಅತ್ಯಂತ ಆಳದಲ್ಲಿ ಅಲ್ಲದೆ ಮೇಲ್ಮಟ್ಟದಲ್ಲೇ ಈ ಕಂಪನ ನಡೆದಿರುವುದರಿಂದ ಇದರ ತೀವ್ರತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಭಾರಿ ಪ್ರಮಾಣದಲ್ಲಿ ತಟ್ಟಿದೆ. ಈ ಪ್ರಬಲ ಭೂಕಂಪದ ಹೊಡೆತಕ್ಕೆ ಸುಲವೇಸಿ ಪ್ರಾಂತ್ಯದ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ದೊಡ್ಡ ಮಟ್ಟದ ಹಾನಿಯಾಗಿದೆ. ಮುಖ್ಯವಾಗಿ, ಪ್ರಾಂತ್ಯದ ಶಾಲೆಯೊಂದರ ಮೇಲ್ಚಾವಣಿ (ಛಾವಣಿ) ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಭೂಕಂಪವು ಮುಂಜಾನೆ…

Read More

ಪುಣೆ : ವಿನಾಯಕ ದಾಮೋದರ ಸಾವರ್ಕರ್ ಅವರು ಬ್ರಿಟಿಷ್ ಸರ್ಕಾರದ ಮುಂದೆ ಒಟ್ಟು 10 ಬಾರಿ ಕ್ಷಮಾದಾನ ಅರ್ಜಿಗಳನ್ನು ಸಲ್ಲಿಸಿದ್ದರು ಎಂಬ ವಿಷಯವನ್ನು ಅವರ ಮರಿಮೊಮ್ಮಗ ಸತ್ಯಕಿ ಸಾವರ್ಕರ್ ಅವರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸತ್ಯಕಿ ಸಾವರ್ಕರ್ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆ ವೇಳೆ ಅವರು ಈ ಮಹತ್ವದ ಹೇಳಿಕೆ ನೀಡಿದ್ದಾರೆ. ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಅಮೋಲ್ ಶಿಂಧೆ ಅವರಿದ್ದ ಪೀಠದ ಮುಂದೆ ಸೋಮವಾರ ನಡೆದ ಅಡ್ಡ-ಸವಾಲಿನ (Cross-examination) ಸಂದರ್ಭದಲ್ಲಿ ಈ ವಿಚಾರ ಬಹಿರಂಗವಾಗಿದೆ. ರಾಹುಲ್ ಗಾಂಧಿ ಅವರ ಪರ ವಕೀಲರಾದ ಮಿಲಿಂದ್ ಪವಾರ್ ಅವರು ನಡೆಸಿದ ಅಡ್ಡ-ಸವಾಲಿಗೆ ಉತ್ತರಿಸಿದ ಸತ್ಯಕಿ ಸಾವರ್ಕರ್, ತಮ್ಮ ಮುತ್ತಜ್ಜ ಬ್ರಿಟಿಷ್ ಸರ್ಕಾರಕ್ಕೆ ಹತ್ತು ಬಾರಿ ಕ್ಷಮಾದಾನ ಅರ್ಜಿ ಸಲ್ಲಿಸಿರುವುದು ನಿಜ ಎಂದು ಸ್ಪಷ್ಟಪಡಿಸಿದರು. ಆದರೆ, ಈ ಅರ್ಜಿಗಳ ಸಲ್ಲಿಕೆಯ ನಡುವೆಯೂ ಅವರನ್ನು ‘ವೀರ’ ಎಂದು ಕರೆಯಲಾಗುತ್ತಿತ್ತು. ಹತ್ತು ಬಾರಿ ಕ್ಷಮಾದಾನ ಅರ್ಜಿ ಸಲ್ಲಿಸಿದ…

Read More

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ, ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ಅಂತಿಮ ರೂಪುರೇಷೆಗಳು ಸಿದ್ಧಗೊಳ್ಳುತ್ತಿವೆ. ಈ ಬೃಹತ್ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಡೆಸಲು ‘ವಿಶೇಷ ಉದ್ದೇಶಿತ ವಾಹನ’ (SPV – Special Purpose Vehicle) ಒಂದನ್ನು ರಚಿಸಲಾಗುತ್ತಿದ್ದು, ಇದರ ಅಡಿಯಲ್ಲೇ ಸಂಪೂರ್ಣ ವಿತರಣಾ ಪ್ರಕ್ರಿಯೆ ನಡೆಯಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಚಿವರು ಮಹತ್ವದ ಸಭೆ ನಡೆಸಿದರು. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 2 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಲಾಭ ಪಡೆಯುತ್ತಿದ್ದು, ಅವರೆಲ್ಲರಿಗೂ ಸ್ಮಾರ್ಟ್ ಕಾರ್ಡ್ ವಿತರಿಸುವ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಇಲಾಖೆಯು ತಾಂತ್ರಿಕ ಹಾಗೂ ಆಡಳಿತಾತ್ಮಕ ಸಿದ್ಧತೆಗಳನ್ನು ಚುರುಕುಗೊಳಿಸಿದೆ ಎಂದರು. ವಹಿವಾಟು ಸಲಹೆಗಾರರ ಸಮಿತಿ ನೇಮಕ ಕೋಟಿಗಟ್ಟಲೆ ಸಂಖ್ಯೆಯ ಕಾರ್ಡ್‌ಗಳನ್ನು ಸಿದ್ಧಪಡಿಸಿ ವಿತರಿಸುವುದು ದೊಡ್ಡ ಸವಾಲಾಗಿರುವುದರಿಂದ, ಇದರ ಸಂಪೂರ್ಣ…

Read More

ರಾಜಸ್ತಾನ : ರಾಜಸ್ಥಾನದ ಸೀಕರ್‌ನಲ್ಲಿ NEET ಪರೀಕ್ಷೆಗೆ ಸಿದ್ಧವಾಗುತ್ತಿದ್ದ 22ರ ಉಮೇಶ್ ಮಾಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೂನ್ 21ರ ನೀಟ್ ಮರುಪರೀಕ್ಷೆಯ ಒತ್ತಡ, ಜೊತೆಗೆ ಇದು ಮೂರನೇ ಪ್ರಯತ್ನವಾಗಿದ್ದರಿಂದ ಆತ ಆತಂಕಕ್ಕೊಳಗಾಗಿದ್ದ ಎನ್ನಲಾಗಿದೆ. ನೀಟ್ ಪರೀಕ್ಷೆಯ ಗೊಂದಲಗಳ ನಡುವೆ ಸೀಕರ್‌ನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ನಡೆದ ಎರಡನೇ ವಿದ್ಯಾರ್ಥಿ ಸಾವು ಇದಾಗಿದೆ. ಮೃತ ಯುವಕನನ್ನು ಜುಂಜುನು ಜಿಲ್ಲೆಯ ನವಲಗಢ ಪ್ರದೇಶದ ಕಾರಿ ಗ್ರಾಮದ ನಿವಾಸಿ ಉಮೇಶ್ ಮಾಲಿ ಎಂದು ಗುರುತಿಸಲಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಪ್ರವೇಶ ಪಡೆಯುವ ಕನಸಿನಿಂದ ಅವರು ಸಿಕಾರ್‌ನ ಪಿಪ್ರಾಲಿ ರಸ್ತೆಯಲ್ಲಿರುವ ವಸತಿ ನಿಲಯದಲ್ಲಿ ವಾಸಿಸುತ್ತಿದ್ದರು. ಮೂಲಗಳ ಪ್ರಕಾರ, ಉಮೇಶ್ ಅವರಿಗೆ ಇದು ಮೂರನೇ ಪ್ರಯತ್ನವಾಗಿತ್ತು ಎನ್ನಲಾಗಿದೆ. ಘಟನಾ ಸ್ಥಳದಿಂದ ಪೊಲೀಸರು ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದು, ಅದರಲ್ಲೇನಿದೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪೊಲೀಸ್ ಮಾಹಿತಿಯ ಪ್ರಕಾರ, ಉಮೇಶ್ ತನ್ನ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ಕುಟುಂಬ ಸದಸ್ಯರು ಮೊದಲು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ…

Read More

ರಾಯಚೂರು: ಜಿಲ್ಲೆಯ ಸಿಂಧನೂರು ನಗರದಲ್ಲಿ ತಲೆತಗ್ಗಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ದಿನಗೂಲಿ ನೌಕರರ ಬಡ ಕುಟುಂಬದ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಕಿರಾತಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನುಷ ಕೃತ್ಯ ಸಿಂಧನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೋಷಕರಿಲ್ಲದ ಸಮಯ ಸಾಧಿಸಿ ಕೃತ್ಯ ಬಾಲಕಿಯರ ಪೋಷಕರು ಜೀವನೋಪಾಯಕ್ಕಾಗಿ ಪ್ರತಿದಿನ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಎಂದಿನಂತೆ ಪೋಷಕರು ಕೆಲಸಕ್ಕೆ ತೆರಳಿದ್ದ ಸಂದರ್ಭವನ್ನು ಹೊಂಚು ಹಾಕಿ ಕಾಯುತ್ತಿದ್ದ ಆರೋಪಿ, ಬಾಲಕಿಯರು ವಾಸವಿದ್ದ ಶೆಡ್‌ಗೆ ಅಕ್ರಮವಾಗಿ ನುಗ್ಗಿದ್ದಾನೆ. ಮನೆಯಲ್ಲಿ ಪೋಷಕರು ಇಲ್ಲದ್ದನ್ನು ಬಂಡವಾಳ ಮಾಡಿಕೊಂಡು ಇಬ್ಬರು ಅಪ್ರಾಪ್ತ ಸಹೋದರಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. 8 ಮತ್ತು 9 ವರ್ಷದ ಬಾಲಕಿಯರ ಮೇಲೆ ದೌರ್ಜನ್ಯ ಭೀಕರ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿಯರು ಕೇವಲ 8 ಮತ್ತು 9 ವರ್ಷ ವಯಸ್ಸಿನವರಾಗಿದ್ದಾರೆ. ಇಬ್ಬರೂ ಸ್ಥಳೀಯ ಶಾಲೆಯಲ್ಲಿ ಕ್ರಮವಾಗಿ ಎರಡು ಮತ್ತು ಮೂರನೇ…

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ ನಲ್ಲಿ 2.77 ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ ಏರ್ಪೋರ್ಟಲ್ಲಿ ಕಷ್ಟಂ ಅಧಿಕಾರಿಗಳು 2.77 ಕೋಟಿ ರೂಪಾಯಿ ಮೌಲ್ಯದ 7.92 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಪ್ರಯಾಣಿಕ ಬ್ಯಾಂಕಾಕ್ ನಿಂದ ಬೆಂಗಳೂರಿಗೆ ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಪ್ರಯಾಣಿಕನ ಬ್ಯಾಕ್ ತಪಾಸನೆ ಸಂದರ್ಭದಲ್ಲಿ ಗಾಂಜಾ ಪತ್ತೆಯಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ಕಸ್ಟಮ್ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಎನ್ ಡಿ ಪಿ ಎಸ್ ಕಾಯ್ದೆ ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಭೀಕರವಾದ ಸರಣಿ ಅಪಘಾತ ಸಂಭವಿಸಿದ್ದು, ಲಾರಿ ಚಾಲಕನ ಅಜಾಗರೂಕತೆಗೆ ಅಪಘಾತ ಸಂಭವಿಸಿದೆ. ಕೂದಲೆಳೆ ಅಂತರದಲ್ಲಿ ವಾಹನ ಸವಾರರು ಬಚಾವ್ ಆಗಿದ್ದಾರೆ. ದೇವನಹಳ್ಳಿಯ ಲಕ್ಷ್ಮಿಪುರ ಗೇಟ್ ಬಳಿ ಈ ಒಂದು ಅಪಘಾತ ಸಂಭವಿಸಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಈ ಒಂದು ಭೀಕರ ಅಪಘಾತದ ದೃಶ್ಯ ಸೆರೆಯಾಗಿದೆ. ದೊಡ್ಡಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಲಾರಿ ಬರುತ್ತಿತ್ತು ಈ ವೇಳೆ ನಿಯಂತ್ರಣ ತಪ್ಪಿ, ಮುಂದಿರುವ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ನುಗ್ಗಿದ್ದು, ಅಲ್ಲದೆ ಎದುರುಗಡೆ ಬರುತ್ತಿದ್ದಂತಹ ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆ ಪಕ್ಕದ ಹಳ್ಳಕ್ಕೆ ಬೋಲೇರೋ ಆಹಾರ ಉರುಳಿ ಬಿದ್ದಿದೆ. ಇಷ್ಟೆಲ್ಲಾ ಭೀಕರ ಅಪಘಾತ ಸಂಭವಿಸಿದರೂ ಕೂಡ ಅದೃಷ್ಟವಶಾತ್ ಎಲ್ಲಾ ಚಾಲಕರು ಕೂಡ ಪ್ರಾಣಭಾಯದಿಂದ ಪಾರಾಗಿದ್ದು ಪವಾಡವೇ ಸರಿ ಎನ್ನಲಾಗಿದೆ.

Read More

ತುಮಕೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿದ್ದು ಅಲ್ಲದೆ ಇದೇ ಸಂದರ್ಭದಲ್ಲಿ 13 ಸಚಿವರು ಕೂಡ ಪದಗ್ರಹಣ ಮಾಡಿದರು. ಇದೀಗ ಜೂನ್ 23 ಅಥವಾ 25 ರಂದು ಸಂಪುಟ ವಿಸ್ತರಣೆ ಆಗುವ ವಿಶ್ವಾಸ ಇದೆ ಎಂದು ಶಾಸಕ ಟಿಬಿ ಜಯಚಂದ್ರ ತಿಳಿಸಿದರು. ತುಮಕೂರಿನಲ್ಲಿ ಮಾತನಾಡಿದ ಅವರು ದೆಹಲಿ ವಿಶೇಷ ಪ್ರತಿನಿಧಿಯಾಗಿ ಅನೇಕ ಸಭೆಗಳನ್ನು ನಾನು ಮಾಡಿದ್ದೇನೆ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಎಲ್ಲೋ ಒಂದು ಕಡೆ ಸಚಿವ ಸ್ಥಾನ ಸಿಗುತ್ತೆ ಎಂಬ ವಿಶ್ವಾಸವಿದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ನಾನು ಸಹ ಮನವಿ ಮಾಡಿದ್ದೇನೆ. ರಾಜಕೀಯದಲ್ಲಿ ಯಾರೂ ಗ್ರೀನ್ ಸಿಗ್ನಲ್ ಮತ್ತು ಪಾಸಿಟಿವ್ ಕೊಡಲ್ಲ ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ರಾಜ್ಯ ಜಿಲ್ಲೆ ಮತ್ತು ಕ್ಷೆತ್ರಕ್ಕೆ ಯಾವ ರೀತಿ ಕೆಲಸ ಮಾಡಬೇಕು ಎಂಬ ಅರಿವು ಇದೆ ಎಂದು ತುಮಕೂರಿನಲ್ಲಿ ಕಾಂಗ್ರೆಸ್ ಶಾಸಕ ಟಿ ಬಿ ಜಯಚಂದ್ರ ಹೇಳಿಕೆ ನೀಡಿದರು.

Read More