Author: kannadanewsnow05

ಬೆಂಗಳೂರು : ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಕುಡಿದ ನಶೆಯಲ್ಲಿ ಅಪಘಾತ ಮಾಡಿ ಕೊಲೆ ಮಾಡಿರುವ ಶಂಕೆ ಇದೀಗ ವ್ಯಕ್ತವಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಕೊಲೆ ನಡೆದಿದೆ. ಪ್ರಶಾಂತ್ (28) ಸಾವನ್ನಪ್ಪಿದ್ದು, ರೋಷನ್ ಹೆಗ್ಗಡಗೆ ಗಂಭೀರವಾದ ಗಾಯಗಳಾಗಿವೆ. ಕೊಲೆ ಮಾಡುತ್ತಿರುವ ದೃಶ್ಯ ಕಾರಿನ ಮುಂಭಾಗದ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರಶಾಂತನ ಕೊಲೆ ಮಾಡಲಾಗಿದೆ ಅಂತ ಪೋಷಕರು ಗಂಭೀರವಾಗಿ ಆರೋಪ ಮಾಡಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೊಲೆ ಪ್ರಕರಣ ದಾಖಲಾಗಿದೆ

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ, ಬೆಂಗಳೂರಲ್ಲಿ ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣಕ್ಕೆ ಇದೀಗ ಮತ್ತೊಂದು ಸಿಕ್ಕಿದೆ. ತನಿಖೆ ವೇಳೆ ಬೆಚ್ಚಿ ಬೆಳಿಸುವ ಮಾಹಿತಿಯನ್ನು ಆರೋಪಿ ಕರ್ನಲ್ ಕುರೈ ಬಿಚ್ಚಿಟ್ಟಿದ್ದಾನೆ. ಆರೋಪಿಗೆ ಪ್ರೀತಿಗಿಂತ ಆಕೆಯ ಮೇಲೆ ವಿಕೃತಿ ಮನಸ್ಸು ಇತ್ತು ಎಂದು ತನಿಖೆ ವೇಳೆ ತಿಳಿದು ಬಂದಿದೆ. ಆರೋಪಿ ಕರ್ನಲ್ ಶರ್ಮಿಳಾ ಮೇಲೆ ಲೈಂಗಿಕ ವಿಕೃತಿ ಹೊಂದಿದ್ದ ಅಲ್ಲದೇ ಶರ್ಮಿಳಾ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ವಿಚಾರಣೆಯ ವೇಳೆ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ. ತನಿಖೆ ಬೆಳೆ ಈ ಒಂದು ಕೊಲೆಯ ರಹಸ್ಯ ಬಯಲಾಗಿದೆ. ಕೊಲೆಯ ದಿನ ಶರ್ಮಿಳಾ ಕೂಗುತ್ತಿದ್ದಂತೆ ಪಾಪಿ ಕರ್ನಲ್ ಬಾಯಿ ಹೊತ್ತಿ ಹಿಡಿದಿದ್ದಾನೆ. ನನ್ನ ಬಿಟ್ಟುಬಿಡು ಅಂತ ಶರ್ಮಳ ಆರೋಪಿಗೆ ಬೇಡಿಕೊಂಡಿದ್ದಾಳೆ. ಈ ವೇಳೆ ಆಕೆಯ ಕುತ್ತಿಗೆ ಒತ್ತಿದ್ದಾನೆ ಅಷ್ಟೆ ಶರ್ಮಿಳಾ ಉಸಿರು ಚೆಲ್ಲಿದ್ದಾಳೆ. ಬಳಿಕ ಟಿಶ್ಯೂ ಪೇಪರ್ ಹಾಸಿಗೆ ಮೇಲೆ ಇಟ್ಟು ಕಿರಾತಕ ಬೆಂಕಿ ಹಚ್ಚಿದ್ದಾನೆ. ಇದು ಆಕಸ್ಮಿಕ ಘಟನೆ ಎಂದು ಬಿಂಬಿಸಲು ಯತ್ನಿಸಿದ್ದಾನೆ ಇದೀಗ…

Read More

ಬೆಳಗಾವಿ : ಚೋರ್ಲಾ ಘಾಟ್ ಬಳಿಯ 400 ಕೋಟಿ ದರೋಡೆ ಪ್ರಕರಣ ಬಗೆದಷ್ಟು ಬಯಲಾಗ್ತಿದೆ. ಹಣ ಪ್ರಭಾವಿ ರಾಜಕಾರಣಿಗೆ ಸೇರಿದ್ದಾಗಿರಬಹುದು ಎಂಬ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಎರಡು ಸಾವಿರ ರೂಪಾಯಿ ನೋಟುಗಳನ್ನು ಬದಲಾಯಿಸಲು ಸಾಗಿಸುವಾಗ ಕಂಟೇನರ್ ನಾಪತ್ತೆಯಾಗಿದೆ. ಹೌದು 400 ಕೋಟಿ ರಾಬರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಹಣ ತುಂಬಿದ್ದ ಕಂಟೇನರ್​​ಗಳ ಹೈಜಾಕ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ, ಎಸ್‌ಐಟಿಯಿಂದ ತನಿಖೆ ಚುರುಕುಗೊಳಿಸಿದೆ. ಈ ನಡುವೆ ಕೆಲ ಪ್ರಮುಖ ಅಂಶಗಳು ಹುಬ್ಬೇರುವಂತೆ ಮಾಡಿದ್ದು, ಎರಡು ಸಾವಿರ ಮುಖ ಬೆಲೆಯ ನೋಟುಗಳು ಗುಜರಾತ್​​ನ ಪವರ್ ಫುಲ್ ರಾಜಕಾರಣಿಗೆ ಸೇರಿದ್ದು ಎಂಬ ಸುದ್ದಿ ಹರಿದಾಡತೊಡಗಿದೆ. ಕಿಶೋರ್ ಸಾಳ್ವೆ ಅಲಿಯಾಸ್ ಸೇಠ್ ಬರೀ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ, ನೋಟು ಬದಲಾವಣೆಗಾಗಿ ಗೋವಾದಿಂದ ಹಣ ಸಾಗಿಸಲಾಗುತ್ತಿತ್ತು. ಇದರ ಜವಾಬ್ದಾರಿ ಆರೋಪಿ ವಿರಾಟ್​​ಗೆ ಕಿಶೋರ್ ನೀಡಿದ್ದ. ವಿರಾಟ್ ಹುಡುಗರಿಂದ ಹಣ ಸಾಗಾಟದ ವೇಳೆ ಕಂಟೇನರ್ ಮಿಸ್ಸಿಂಗ್ ಆಗಿದೆ. ಹಣದ ಸಮೇತ…

Read More

ಬೆಂಗಳೂರು : 2028ಕ್ಕೆ ರಾಜ್ಯದಲ್ಲಿ ಎನ್ ಡಿ ಎ ಅಧಿಕಾರಕ್ಕೆ ಬರುತ್ತೆ ಎಂದು ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಎಲ್ಲರೂ ಕನಸು ಕಾಣುತ್ತಾರೆ ನಾವು 2028ಕ್ಕೆ ನಮ್ಮದೇ ಸರ್ಕಾರ ಅಂತೀವಿ ಅದೇ ರೀತಿ ಬಿಜೆಪಿ ಜೆಡಿಎಸ್ ನವರು ಕನಸು ಕಾಣುತ್ತಿದ್ದಾರೆ ಎಂದು ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದರು. ಎಲ್ಲರಂತೆ ಬಿಜೆಪಿ ಮತ್ತು ಜೆಡಿಎಸ್ ನವರು 2028ಕ್ಕೆ ಸರ್ಕಾರ ಬರುತ್ತೆ ಅಂತ ಕನಸು ಕಾಣುತ್ತಿದ್ದಾರೆ ಜನ ಯಾರಿಗೆ ಆಶೀರ್ವಾದ ಮಾಡುತ್ತಾರೆ ಅವರು ಅಧಿಕಾರಕ್ಕೆ ಬರುತ್ತಾರೆ. ನನ್ನ ಪ್ರಕಾರ 2028ಕ್ಕೆ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತದೆ. ನಮ್ಮ ಅಭಿವೃದ್ಧಿ ಕೆಲಸಗಳನ್ನು ನೋಡಿ ಜನ ನಮಗೆ ಮತ ಕೊಡುತ್ತಾರೆ. ಬಿಜೆಪಿ ಅವಧಿಯಲ್ಲಿ ಎಷ್ಟು ಬಾರಿ ಸಿಎಂ ಬದಲಾವಣೆ ಆಯ್ತು ಜನರು ಇದೆಲ್ಲವನ್ನು ನೋಡಿದ್ದಾರೆ. ಬಿಜೆಪಿ ಆಡಳಿತವೇ ನೋಡಿ ಜನ ನಮಗೆ ಮೆಜಾರಿಟಿ ಕೊಟ್ಟರು. ಮುಂದೆಯೂ ಅದೇ ರೀತಿಯಲ್ಲಿ ನಮ್ಮದೇ ಸರ್ಕಾರ ಬರುತ್ತೆ ಎಂದು ಬೆಂಗಳೂರಿನ ಜಿಲ್ಲೆಯ ರಾಮನಗರದಲ್ಲಿ ರಾಮಲಿಂಗರೆಡ್ಡಿ ಹೇಳಿಕೆ…

Read More

ಬೆಳಗಾವಿ : ಬೆಳಗಾವಿ ಗಡಿಯಲ್ಲಿ 400 ಕೋಟಿ ರಾಬರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದಂತಹ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು 400 ಕೋಟಿ ಪ್ರಕರಣದಲ್ಲಿ ಕಾಂಗ್ರೆಸ್ ಬಿಜೆಪಿ ಅಂತ ಏನಿಲ್ಲ ಎಲ್ಲರೂ ಇರುತ್ತಾರೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಪೊಲೀಸರು ನಮ್ಮ ಪೊಲೀಸರಿಗೆ ಸಹಕರಿಸುತ್ತಿಲ್ಲ. ಪ್ರಕರಣ ಸಂಬಂಧಪಟ್ಟಂತೆ ಈಗಾಗಲೇ ಪತ್ರ ಬರೆದಿದ್ದಾರೆ. ಯಾರಾದರೂ ದೂರು ನೀಡಿದರೆ ನಮ್ಮವರು ತನಿಖೆ ಮಾಡುತ್ತಾರೆ. ಚೋರ್ಲ ಘಾಟ್ ಪ್ರದೇಶದ ವ್ಯಾಪ್ತಿ ದೊಡ್ಡದಿದೆ. ದರೋಡೆ ನಡೆದ ಸ್ಥಳ ಮಹಾರಾಷ್ಟ್ರ ಗೋವಾ ಅಥವಾ ಕರ್ನಾಟಕಕ್ಕೆ ಸೇರಿದೆಯೋ ಅನ್ನೋ ಬಗ್ಗೆ ಗೊಂದಲವಿದೆ ತನಿಖೆ ಮಾಡುತ್ತಾರೆ ಎಂದರು. 400 ಕೋಟಿ ಹಣ ಕಾಂಗ್ರೆಸ್ಗೆ ಸೇರಿದ್ದು ಎಂಬ ಆರೋಪದ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಹೇಳಿಕೆಗೆ ಇದರಲ್ಲಿ ಕಾಂಗ್ರೆಸ್ ಬಿಜೆಪಿ ಅಂತ ಏನು ಇಲ್ಲ ಎಲ್ಲರೂ ಇರುತ್ತಾರೆ. ದರೋಡೆ ಪ್ರಕರಣದಲ್ಲಿ ಎಲ್ಲಿ ನಡೆದಿದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ನಮ್ಮ ಪೊಲೀಸರು ಮಹಾರಾಷ್ಟ್ರ ಪೊಲೀಸ್ರಿಗೆ ಸಹಕಾರ…

Read More

ಬೆಂಗಳೂರು : ಜನ ಕಲ್ಯಾಣಗಳಿಗಾಗಿ ರಾಜ್ಯವು ವರ್ಷಕ್ಕೆ 1.12 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಈವರೆಗೆ 1.13 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನವನ್ನು ವಿನಿಯೋಗಿಸಲಾಗಿದೆ. ಇದರ ಪರಿಣಾಮವಾಗಿ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ, ಕುಟುಂಬಗಳು ಆರ್ಥಿಕವಾಗಿ ಸಬಲವಾಗುತ್ತಿವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. 77ನೇ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರಾದೇಶಿಕ ಅಸಮಾನತೆಗಳನ್ನು ಹೋಗಲಾಡಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಇದರ ಮೂಲಕ ಕರ್ನಾಟಕದಲ್ಲಿ ಸಾಮಾಜಿಕ ಹಾಗೂ ರಾಜಕೀಯ ಚೈತನ್ಯ ಉದಯಿಸುತ್ತಿದೆ. ಕರ್ನಾಟಕ ಸರ್ಕಾರವು ಸಂವಿಧಾನ ಪ್ರಸ್ತಾಪಿಸಿರುವ ಭಾತೃತ್ವ, ಸ್ವಾತಂತ್ರ ಹಾಗೂ ಸಮಾನತೆಯನ್ನು ಆದ್ಯತೆಯ ವಿಷಯಗಳನ್ನಾಗಿ ಪರಿಗಣಿಸಿದೆ. ರಾಜ್ಯದ ಪ್ರತಿ ಪ್ರದೇಶ ಹಾಗೂ ಪ್ರತಿ ಸಮುದಾಯಗಳ ಜನರ ಧ್ವನಿಗಳನ್ನು ಆಲಿಸಿ, ಅವುಗಳಿಗೆ ನ್ಯಾಯೋಚಿತ ಪರಿಹಾರ ನೀಡುವ ಕೆಲಸವನ್ನು ಮಾಡುತ್ತಿದೆ. ಸರ್ಕಾರದ ವಿವಿಧ ನೇಮಕಾತಿಗಳಲ್ಲಿ ಅಲಕ್ಷಿತರಿಗೆ ಪ್ರಾಧಾನ್ಯತೆ ನೀಡಲಾಗುತ್ತಿದೆ. ವಿವಿಧ ಜನಸಮುದಾಯಗಳ ಪರಿಸ್ಥಿತಿಗಳನ್ನು ಅರ್ಥ…

Read More

ಬೆಂಗಳೂರು : ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ವಿರುದ್ಧ ಶಾಸಕ ಎಸ್.ಸುರೇಶ್ ಕುಮಾರ್ ನೀಡಿದ್ದ ವಿವಾದಾತ್ಮಕ ಹೇಳಿಕೆ ಪ್ರಕರಣದ ಸಂಬಂಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಮುಖ್ಯಸ್ಥರಾದ ಜಿ.ಪ್ರಕಾಶ್‌ ಮತ್ತು ಮನೋಹರ್‌ ನೇತೃತ್ವದ ನಿಯೋಗ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದೆ. ಮಹಿಳೆಯರಿಗೆ ಅವಮಾನ ಮಾಡಿದ ಶಾಸಕರು ಕ್ಷಮೆಯಾಚಿಸಲಿ ಎಂಬ ಘೋಷಣೆಗಳುಳ್ಳ ಪೋಸ್ಟರ್‌ಗಳನ್ನು ಅಂಟಿಸುವ ಕಾಂಗ್ರೆಸ್‌ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದ್ದರು. ಬಳಿಕ ಈ ಸಂಬಂಧ ದೂರು ಕೊಡಲು ಬಸವೇಶ್ವರ ನಗರ ಠಾಣೆಗೆ ದೂರು ಕೊಡಲು ಹೋಗಿದ್ದರು. ಆದರೆ ಈ ಘಟನೆ ವಿಧಾನಸೌಧ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹಾಗಾಗಿ ಅಲ್ಲಿಗೆ ತೆರಳಿ ದೂರು ನೀಡಲು ಅಧಿಕಾರಿಗಳು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಭಾನುವಾರ ಕಾಂಗ್ರೆಸ್‌ ನಿಯೋಗ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ನಿಂದನೆ ಹೇಳಿಕೆ ನೀಡಿರುವ ಶಾಸಕ ಸುರೇಶ್‌ ಕುಮಾರ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Read More

ಚಾಮರಾಜನಗರ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಹೆಣ್ಣು ಮಗುವನ್ನು ಸಾಕಲು ಇಷ್ಟವಿಲ್ಲದೇ 50 ಸಾವಿರ ರೂ.ಗೆ ಮಾರಾಟ ಮಾಡಿದ್ದ ಘಟನೆ ಬೆಳಕಿಗೆ ಬಂದಿದ್ದು, ತಂದೆ, ತಾಯಿ ಸೇರಿ ಐವರನ್ನು ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ರಾಮಸಮುದ್ರ ಟೌನಿನ ಕುರುಬರ ಬೀದಿಯಲ್ಲಿ ವಾಸವಿದ್ದ ಸಿಂಧು ಮತ್ತು ಮಂಜುನಾಯಕ ಬಂಧಿತ ಪೋಷಕರಾಗಿದ್ದಾರೆ. ಜೊತೆಗೆ, ಮಧ್ಯವರ್ತಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಡಿ ಗ್ರೂಪ್ ಸಿಬ್ಬಂದಿ ಶಾಂತಾ, ಮಗು ಖರೀದಿ ಮಾಡಿದ್ದ ಹಾಸನದ ಅರಕಲಗೂಡು ತಾಲೂಕು ಕೋಣನೂರಿನ ಜವರಯ್ಯ ಮತ್ತು ನೇತ್ರಾ ದಂಪತಿ ಜೈಲು ಸೇರಿದ್ದಾರೆ. ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಡಿ ಗ್ರೂಪ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ ಶಾಂತಾ ಮೂಲಕ ಹಾಸನದ ಕೊಣನೂರು ಗ್ರಾಮದ ಮಕ್ಕಳಿಲ್ಲದ ಜವರಯ್ಯ ಮತ್ತು ನೇತ್ರಾ ದಂಪತಿಗೆ 50 ಸಾವಿರ ರೂ.ಗೆ ಮಾರಾಟ ಮಾಡಿರುವುದಾಗಿ ತಿಳಿದುಬಂತು. ಬಳಿಕ ಸಿಂಧು ಮತ್ತು ಮಂಜುನಾಯಕ, ಶಾಂತ, ಜವರಯ್ಯ ಮತ್ತು ನೇತ್ರಾ ಅವರನ್ನು ಸೆರೆ ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು…

Read More

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಇಂದು 77ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಡಾ. ನಂದಿನಿದೇವಿ ಕೆ. ಭಾ.ಆ.ಸೇ, ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ರವರು ಧ್ವಜಾರೋಹಣವನ್ನು ನೆರವೇರಿಸಿ, ರಾಷ್ಟ್ರಪಿತ ಮಹಾತ್ಮಾ ಗಾಂಧಿ, ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಸಂಗೊಳ್ಳಿ ರಾಯಣ್ಣ ರವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಗಣರಾಜ್ಯೋತ್ಸವ ದಿನವು ನ್ಯಾಯ, ಸಮಾನತೆ ಮತ್ತು ಹಿರಿಮೆಯನ್ನು ನೀಡಿದೆ. ಈ ದಿನವು ಹಕ್ಕುಗಳನ್ನು ಆಚರಿಸುತ್ತದೆ ಜೊತೆಗೆ ನಮ್ಮ ಕರ್ತವ್ಯಗಳನ್ನು ಸಹ ನೆನಪಿಸುತ್ತದೆ. ರಾಷ್ಟ್ರೀಯ ಹಬ್ಬಗಳಲ್ಲಿ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡು, ರಾಷ್ಟ್ರ ನಿರ್ಮಾಣದಲ್ಲಿ ತಮ್ಮೆಲ್ಲವನ್ನು ಸಮರ್ಪಿಸಿದ ಮಹಾನ್ ಚೇತನಗಳ ಕಾರ್ಯ, ತ್ಯಾಗ, ನಿಸ್ವಾರ್ಥಸೇವೆಯನ್ನು ಸ್ಮರಿಸಿ ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ತಿಳಿಸಿದರು. ನಮ್ಮ ಸಾರಿಗೆ ಸಂಸ್ಥೆಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡ್ಯೊಯುವ ನಿಟ್ಟಿನಲ್ಲಿ ನಾವೆಲ್ಲರೂ ನಮ್ಮ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸಬೇಕು ಎಂದು ಕರೆ‌ ನೀಡಿದರು. ಕಾರ್ಯಕ್ರಮದಲ್ಲಿ, ನಿಗಮದ…

Read More

ನವದೆಹಲಿ : ದೇಶದಾದ್ಯಂತ ಇಂದು 77ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಆಚರಿಸಲಾಗುತ್ತಿದ್ದು ಈ ಹಿನ್ನಲೆಯಲ್ಲಿ ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರೀಯ ಸಮರ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ಯೋಧರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ದೆಹಲಿ 77ನೇ ಗಣರಾಜ್ಯೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ಏಳು ಸುತ್ತಿನ ಕೋಟೆಯಾಗಿದೆ. ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರೀಯ ಗೀತೆ ವಂದೇ ಮಾತರಂ ಗೆ 150 ವರ್ಷ, ಒಂದೇ ಮಾತರಂ ಪರಿಕಲ್ಪನೆಯಡಿ ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದ್ದು, 26 ಯುದ್ಧ ವಿಮಾನಗಳಿಂದ ವೈಮಾನಿಕ ಪ್ರದರ್ಶನ, 17 ರಾಜ್ಯ, 10 ಇಲಾಖೆಗಳ ಸ್ತಬ್ಧ ಚಿತ್ರಗಳ ಅನಾವರಣ ಪಥಸಂಚಲಕ್ಕೆ ಎಐ ತಂತ್ರಜ್ಞಾನದ ಕ್ಯಾಮೆರಾ ಕಣ್ಗಾವಲು ಹಾಗೂ ಆಪರೇಷನ್ ಸಿಂಧೂರ ಯುದ್ಧ ಅಭಿಮಾನಿಗಳ ಪ್ರದರ್ಶನ ನಡೆಯಲಿದೆ.

Read More