Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸಲು ನಮ್ಮ ಸರ್ಕಾರ ತೀರ್ಮಾನಿಸಿದೆ. ಇವುಗಳಿಗೆ ಇದ್ದ ಮೀಸಲಾತಿ ಸಮಸ್ಯೆ ಬಗೆಹರಿಸಲು ಸಿಎಂ ಹಾಗೂ ಸಚಿವರು ತಿಳಿಸಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆಗಳನ್ನೂ ಪಕ್ಷದ ಚಿಹ್ನೆ ಮೇಲೆ ನಡೆಸಬೇಕು ಎಂದು ಅನೇಕರು ಸಲಹೆ ನೀಡಿದ್ದು, ನಾವಿನ್ನೂ ಆ ಬಗ್ಗೆ ತೀರ್ಮಾನ ಮಾಡಿಲ್ಲ. ಒಂದೇ ಬಾರಿಗೆ ಎಲ್ಲವನ್ನು ನಡೆಸಲು ಚಿಂತನೆ ನಡೆಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ನ್ಯಾಯಾಲಯ ಆದೇಶ ನೀಡಿದೆ. ನಮ್ಮ ಸರ್ಕಾರ ಸಂವಿಧಾನದ 73, 74ನೇ ತಿದ್ದುಪಡಿಗೆ ಬದ್ಧವಾಗಿದೆ. ಯುವಕರಿಗೆ ಅಧಿಕಾರ ನೀಡಬೇಕು, ಹೊಸ ಪೀಳಿಗೆ ಅಧಿಕಾರಕ್ಕೆ ಬರಬೇಕು. ಈಗ ಐದು ಪಾಲಿಕೆಗಳಿಂದ 369 ವಾರ್ಡ್ಗಳನ್ನು ರಚಿಸಲಾಗಿದೆ. ಇನ್ನು ಬೆಂಗಳೂರಿನ ಹೊರವಲಯವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು. ನನಗೂ ಈ ಬಗ್ಗೆ ಮಾಹಿತಿ ಬಂದಿದೆ. ಇದು ರಾಜ್ಯ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ. ಮತಪತ್ರ ಬಳಸುವುದರಲ್ಲಿ ತಪ್ಪೇನು ಇಲ್ಲ. ಯಾವ ರೂಪದಲ್ಲಿ ಚುನಾವಣೆ ನಡೆಸಲಾಗುವುದು ಎನ್ನುವುದಕ್ಕಿಂತ…
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಇರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಅಚ್ಚರಿ ಹೇಳಿಕೆ ಒಂದು ನೀಡಿದ್ದು ರಾಜ್ಯದ 140 ಶಾಸಕರು ಸಿರಿದಂತೆ ಸಿಎಂ ಸಿದ್ದರಾಮಯ್ಯ ಸಹ ನನ್ನ ಬೆಂಬಲಕ್ಕೆ ಇದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 140 ಶಾಸಕರು ಕೂಡ ನನ್ನ ಬೆಂಬಲಿಗರೇ. ಸಿಎಂ ಸಿದ್ದರಾಮಯ್ಯ ಅವರು ಕೂಡ ನನಗೆ ಬೆಂಬಲವಾಗಿದ್ದಾರೆ. ನಾನು ಹಾಗೂ ಸಿಎಂ ಅವರು ಏನು ಮಾತನಾಡಿದ್ದೇವೆ ಎಂದು ಸಾರ್ವಜನಿಕವಾಗಿ ಚರ್ಚೆ ಮಾಡಲು ಆಗಲ್ಲ ಎಂದು ತಿಳಿಸಿದರು. ರಾಹುಲ್ ಗಾಂಧಿ ಸಮ್ಮುಖದಲ್ಲಿ ನಾವು ಏನು ಮಾತನಾಡಿಕೊಂಡಿದ್ದೇವೆ, ಹೈಕಮಾಂಡ್ ಸಮ್ಮುಖದಲ್ಲಿ ಏನು ಮಾತನಾಡಿದ್ದೇವೆ, ಎಲ್ಲ ಕೂತು ಏನು ತೀರ್ಮಾನ ಮಾಡಿದ್ದೇವೆ ಎಂದು ನಮಗೆ ಗೊತ್ತಿದೆ. ಈ ವಿಚಾರವನ್ನು ನಿಮ್ಮ ಮುಂದೆ ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವೇ? ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದರು.
ಬೆಳಗಾವಿ : ರಾಜ್ಯ ಪೊಲೀಸ್ ಇಲಾಖೆಯ ನಾಚಿಕೆ ಪಡುವಂತಹ ತಲೆತಗ್ಗಿಸುವಂತಹ ಘಟನೆ ನಡೆದಿದ್ದು ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಇದೇ ವಿಚಾರವಾಗಿ ಡಿಜಿಪಿ ರಾಮಚಂದ್ರ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಈ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು ಇಂದು ಬೆಳಿಗ್ಗೆ ತಾನೇ ನನಗೆ ಈ ವಿಚಾರ ಗೊತ್ತಾಗಿದ್ದು, ಬಿಜೆಪಿ ರಾಮಾಚಂದ್ರ ರಾವ್ ವಿರುದ್ಧ ಪ್ರಸ್ತುತ ಕ್ರಮ ತೆಗೆದುಕೊಳ್ಳುತ್ತೇವೆ, ರಸ್ತೆ ಎತ್ತರದ ಅಧಿಕಾರಿ ಇದ್ದರು ಕಾನೂನಿನ ಮುಂದೆ ಯಾರು ದೊಡ್ಡವರಲ್ಲ ಹಾಗಾಗಿ ಅವರ ವಿರುದ್ಧ ಶಿಸ್ತು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ವಿಚಾರಣೆ ಮಾಡಿ ಕ್ರಮತೆ ಕಳೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ನಾಚಿಕೆ ಪಡುವಂತಹ ತಲೆತಗ್ಗಿಸುವಂತಹ ಘಟನೆ ನಡೆದಿದ್ದು ಬಿಜೆಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಇದೇ ವಿಚಾರವಾಗಿ ರಾಮಚಂದ್ರರಾವ್ ಅವರನ್ನು ತಕ್ಷಣ ಸಸ್ಪೆಂಡ್ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಲಾಗಿದೆ. ನಾಗರಿಕ ಹಾಗೂ ಹೋರಾಟ ಸಮಿತಿ ಅಧ್ಯಕ್ಷರಾಗಿರುವ ದಿನೇಶ್ ಕಲ್ಲಹಳ್ಳಿಯವರು ದೂರು ನೀಡಿದ್ದು, ಇದು ರಾಜ್ಯ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ ಈ ಕೂಡಲೇ ರಾಜ್ಯ ಸರ್ಕಾರ ರಾಮಚಂದ್ರ ಅವರನ್ನು ತಕ್ಷಣ ಅಮಾನತುಗೊಳಿಸಬೇಕು, ಪ್ರಕರಣದ ಕುರಿತು ಉನ್ನತ ತನಿಖೆಗೆ ವಹಿಸಬೇಕು. ಗೃಹ ಇಲಾಖೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಒಳ್ಳೆಯ ಹೆಸರಿರುವಂತಹ ಕರ್ನಾಟಕ ಪೊಲೀಸ್ ಇಲಾಖೆ ಇಂತಹ ಅಧಿಕಾರಿಗಳಿಂದ ಮಾನ ಮರ್ಯಾದೆ ಹರಾಜು ಆಗುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಉನ್ನತ ಮಟ್ಟದ ತಣಿಕೆಗೆ ವಹಿಸಬೇಕು ದಕ್ಷ ಮತ್ತು ಪ್ರಮಾಣಿಕ ಅಧಿಕಾರಿಗಳಿಂದ ಇಡೀ ಪ್ರಕರಣವನ್ನು ತನಿಖೆ ಮಾಡಬೇಕು ಎಂದು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಸರ್ಕಾರದ ಮುಖ್ಯ…
ಮೈಸೂರು : ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದ್ದರೆ, ಇತ್ತ ಜೆಡಿಎಸ್ ಪಕ್ಷದಲ್ಲೂ ಕೂಡ ಹಲವು ಬೆಳವಣಿಗೆಗಳು ನಡೆದಿವೆ.ನಾನು ಜೆಡಿಎಸ್ನಲ್ಲಿಯೇ ಇದ್ದೇನೆ, ಎಲ್ಲಿಯೂ ಹೋಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ನಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಸ್ಪಷ್ಟಪಡಿಸಿದರು. ನಾನು ಯಾವ ನಾಯಕರಿಗೂ ದ್ರೋಹ ಮಾಡಿಲ್ಲ. 5 ಬಾರಿ ಶಾಸಕನಾಗಿದ್ದೇನೆ, ಅದರಲ್ಲಿ 2 ಬಾರಿ ಹುಣಸೂರು ಹಾಗೂ 3 ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದಿದ್ದೇನೆ. ಜೆಡಿಎಸ್ ಪಕ್ಷದ ಸಂಘಟನೆಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದೇನೆ, ಈಗಲೂ ಪಕ್ಷದಿಂದ ದೂರ ಉಳಿದಿಲ್ಲ. ಯಾರನ್ನೂ ಟೀಕೆ ಮಾಡಿಲ್ಲ, ನಾನು ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು. ನಾನು ಜೆಡಿಎಸ್ ಪಕ್ಷವನ್ನು ಕಟ್ಟಿರುವ ವಿಚಾರ ಹೆಚ್ ಡಿ ದೇವೇಗೌಡರು ಹಾಗೂ ಹೆಚ್ ಡಿ ಕುಮಾರಸ್ವಾಮಿಗೆ ಗೊತ್ತಿದೆ. ಮೂರು ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದಿದ್ದೇನೆ, ಮುಂದೆಯೂ ಜೆಡಿಎಸ್ನಲ್ಲಿಯೇ ಇರುತ್ತೇನೆ. ಜೊತೆಗೆ ಜೆಡಿಎಸ್ನಿಂದಲೇ ಸ್ಪರ್ಧಿಸುತ್ತೇನೆ. ಯಾರೂ ಆತಂಕಪಡುವ ಆವಶ್ಯಕತೆ ಇಲ್ಲ. ನನಗೂ ಆತಂಕವಿಲ್ಲ, ಕಾರ್ಯಕರ್ತರಿಗೂ ಇಲ್ಲ…
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ನಾಚಿಕೆ ಪಡುವಂತಹ ತಲೆತಗ್ಗಿಸುವಂತಹ ಘಟನೆ ನಡೆದಿದ್ದು ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಗುತ್ತಿದೆ ಇದೇ ವಿಚಾರವಾಗಿ ರಾಮಚಂದ್ರರಾವ್ ಎಂದು ಬೆಂಗಳೂರಿನ ಸದಾಶಿವನಾಗರದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಲು ಆಗಮಿಸಿದ್ದರು. ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಲು ಬಂದಾಗ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮಚಂದ್ರರಾವ್, ಇದು ಹಳೆಯ ಹಳೆಯ ವಿಡಿಯೋ ಎಂಟು ವರ್ಷ ಹಳೆಯದು. ಆಗ ನಾನು ಬೆಳಗಾವಿಯಲ್ಲಿ ಇದ್ದೆ. ಈ ವಿಡಿಯೋ ಸುಳ್ಳು ಇದರ ಕುರಿತು ವಕೀಲರ ಜೊತೆಗೆ ಮಾತನಾಡಿ ಕ್ರಮ ಕೈಗೊಳ್ಳುತ್ತೇವೆ. ಇದರ ಬಗ್ಗೆ ನನಗೆ ಏನೂ ಗೊತ್ತಿಲ್ಲ ಯಾವಾಗ ಮಾಡಿದ್ದಾರೆ ಎಂದು ನನಗೆ ಗೊತ್ತಿಲ್ಲ. ತನಿಖೆ ಬಳಿಕ ಎಲ್ಲವೂ ಗೊತ್ತಾಗುತ್ತದೆ. ಈ ರೀತಿ ಸುಳ್ಳು ಮಾಹಿತಿ ಹರಿಬಿಡಬಾರದು ಎಂದು ತಿಳಿಸಿದರು.
ಬೆಂಗಳೂರು : ಕಚೇರಿಯಲ್ಲಿಯೇ ಡೀಜಿಪಿ ರಾಮಚಂದ್ರ ರಾವ್ ಮಹಿಳೆಯರ ಜೊತೆಗೆ ಇರುವ ರಾಸಲೀಲೆ ವಿಡಿಯೋ ದೃಶ್ಯ ಇದೀಗ ವೈರಲ್ ಆಗಿದ್ದು ಭಾರಿ ಸಂಚಲನ ಸೃಷ್ಟಿಸಿದೆ ಇದರ ಬೆನ್ನಲ್ಲೇ ರಾಮಚಂದ್ರ ರಾವ್ ಅವರು ಇದೀಗ ಪರಮೇಶ್ವರ್ ಅವರನ್ನು ಭೇಟಿ ಆಗಿದ್ದಾರೆ. ಹೌದು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೆಚ್ಚಿ ಬೀಳಿಸುವಂತ ವಿಡಿಯೋ ಇದೀಗ ವೈರಲ್ ಆಗಿದ್ದು, ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆಗಿವೆ. ಕಚೇರಿಯಲ್ಲಿ ಮಹಿಳೆಯರನ್ನು ಖಾಕಿ ಸಮವಸ್ತ್ರದಲ್ಲಿಯೇ ತಮ್ಮ ಮೇಲೆ ಕೂರಿಸಿಕೊಂಡು ಅಪ್ಪಿ ಮುದ್ದಾಡುತ್ತಿರುವ ವಿಡಿಯೋ ವೈರಲಾಗಿದೆ. ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವೈರಲ್ ಆಗಿದೆ. ಒಂದು ವರ್ಷಗಳ ಹಿಂದೆಯೇ ಡೀಜಿಪಿ ರಾಸಲೀಲೆ ದೃಶ್ಯ ಸೆರೆಯಾಗಿತ್ತು. ನಟಿ ರನ್ಯಾರಾವ್ ಪ್ರಕರಣಕ್ಕಿಂತ ಮೊದಲು ಈ ಒಂದು ರಾಸಲೀಲೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಡಿಸಿಆರ್ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ. ಡಿಜಿಪಿ ರಾಮಚಂದ್ರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಕಚೇರಿಯಲ್ಲಿಯೇ ಬಿಜೆಪಿ ರಾಮಚಂದ್ರ ರಾಸಲೀಲೇ ನಡೆಸಿದ್ದು ಕಚೇರಿಯಲ್ಲಿಯೇ ಕುಳಿತು ಸ್ತ್ರೀಯರಿಗೆ ಮುತ್ತಿಟ್ಟಿರುವ ವಿಡಿಯೋ ವೈರಲ್ ಆಗಿದೆ.…
ಉತ್ತರಪ್ರದೇಶ : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಿವೃತ್ತ ರೈಲ್ವೆ ಉದ್ಯೋಗಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಹತ್ಯೆ ಮಾಡಿ ಮೃತದೇಹವನ್ನು ಬಾಕ್ಸ್ವೊಂದಕ್ಕೆ ಹಾಕಿ ಬೆಂಕಿ ಇಟ್ಟಿರುವ ಘಟನೆ ನಡೆದಿದೆ. ಆರೋಪಿ ರಾಮ್ ಸಿಂಗ್ ಪರಿಹಾರ್ಗೆ ಇಬ್ಬರು ಹೆಂಡತಿಯರು. ಆತನ ಮಾಜಿ ಪತ್ನಿ ಸಿಪ್ರಿ ಬಜಾರ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಎರಡನೇ ಪತ್ನಿ ಅದೇ ನಗರದ ಸಿಟಿ ಕೊಟ್ವಾಲಿ ಪ್ರದೇಶದಲ್ಲಿ ವಾಸವಾಗಿದ್ದಾರೆ. ಮಹಿಳೆಯ ದೇಹವನ್ನು ಸುಟ್ಟ ನಂತರ, ಪರಿಹಾರ್ ಬೂದಿಯನ್ನು ಚೀಲಗಳಲ್ಲಿ ಸಂಗ್ರಹಿಸಿ ಅಪರಾಧವನ್ನು ಮರೆಮಾಡಲು ನದಿಗೆ ಎಸೆದಿದ್ದ. ಆಕೆಯ ಉಳಿದ ಅವಶೇಷಗಳನ್ನು ಟ್ರಂಕ್ನಲ್ಲಿ ವಿಲೇವಾರಿ ಮಾಡಲು, ಅದನ್ನು ತನ್ನ ಪತ್ನಿ ಗೀತಾಳ ಮನೆಗೆ ಕಳುಹಿಸಲು ಸಂಚು ರೂಪಿಸಿದ್ದ. ಪರಿಹಾರ್ ತನ್ನ ಲಿವ್-ಇನ್ ಸಂಗಾತಿ ಪ್ರೀತಿಯನ್ನು ಕೊಲೆ ಮಾಡಿದ್ದಾನೆ. ಆಕೆ ತನ್ನಿಂದ ಭಾರಿ ಮೊತ್ತದ ಹಣವನ್ನು ಬೇಡಿಕೆ ಇಟ್ಟಿದ್ದಳು. ಹೀಗಾಗಿ, ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಈಗಾಗಲೇ ತನ್ನಿಂದ ಲಕ್ಷಾಂತರ ರೂಪಾಯಿಗಳನ್ನು ಪಡೆದುಕೊಂಡಿದ್ದಳು ಎಂದು ವಿಚಾರಣೆ ವೇಳೆ…
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೆಚ್ಚಿ ಬೆಳೆಸುವಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆಗಿವೆ. ಕಚೇರಿಯಲ್ಲಿ ಮಹಿಳೆಯರನ್ನು ಖಾಕಿ ಸಮವಸ್ತ್ರದಲ್ಲಿಯೇ ತಮ್ಮ ಮೇಲೆ ಕೂರಿಸಿಕೊಂಡು ಅಪ್ಪಿ ಮುದ್ದಾಡುತ್ತಿರುವ ವಿಡಿಯೋ ವೈರಲಾಗಿದೆ. ಹೌದು ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವೈರಲ್ ಆಗಿದೆ. ಒಂದು ವರ್ಷಗಳ ಹಿಂದೆಯೇ ಡೀಜಿಪಿ ರಾಸಲೀಲೆ ದೃಶ್ಯ ಸೆರೆಯಾಗಿತ್ತು. ನಟಿ ರನ್ಯಾರಾವ್ ಪ್ರಕರಣಕ್ಕಿಂತ ಮೊದಲು ಈ ಒಂದು ರಾಸಲೀಲೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಡಿಸಿಆರ್ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ. ಡಿಜಿಪಿ ರಾಮಚಂದ್ರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಕಚೇರಿಯಲ್ಲಿಯೇ ಬಿಜೆಪಿ ರಾಮಚಂದ್ರ ರಾಸಲೀಲೇ ನಡೆಸಿದ್ದು ಕಚೇರಿಯಲ್ಲಿಯೇ ಕುಳಿತು ಸ್ತ್ರೀಯರಿಗೆ ಮುತ್ತಿಟ್ಟಿರುವ ವಿಡಿಯೋ ವೈರಲ್ ಆಗಿದೆ. ಕಚೇರಿಯಲಿಯೇ ಕುಳಿತು ಮಹಿಳೆಯರಿಗೆ ಮುತ್ತಿಟ್ಟಿರುವ ದೃಶ್ಯ ಸೆರೆಯಾಗಿದೆ. ಚೇರ್ ಮೇಲೆ ಕುಳಿತುಕೊಂಡು ಮಹಿಳೆಯನ್ನು ಅಪ್ಪಿಕೊಂಡಿದ್ದಾರೆ. ಸದ್ಯ ಈ ಒಂದು ವಿಡಿಯೋ ಇದೀಗ ವೈರಲ್ ಆಗಿದೆ. ಈ ವಿಚಾರವಾಗಿ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಶಿವಮೊಗ್ಗ : ಕಳೆದ ಜನೆವರಿ 7 ರಂದು ಸಿಎಂ ಸಿದ್ದರಾಮಯ್ಯ ದೀರ್ಘಾವಧಿ ಸಿಎಂ ಎಂದು ದಾಖಲೆ ಬರೆದಿದ್ದಾರೆ. ಅಷ್ಟೆ ಅಲ್ಲದೇ ಮೇ ಮೊದಲ ಅಥವಾ ಎರಡನೇ ವಾರದಲ್ಲಿ 17ನೇ ಬಾರಿ ದಾಖಲೆ ಬಜೆಟ್ ಕೂಡ ಮಂಡನೆ ಮಾಡಲಿದ್ದಾರೆ.ಒಟ್ಟಾರೆಯಾಗಿ ದಾಖಲೆರಾಮಯ್ಯರಾಗಿ ಸಿದ್ದರಾಮಯ್ಯ ಹೊರಹೊಮ್ಮಿದ್ದಾರೆ. ಇದೀಗ ಜನವರಿ 22ರಂದು ಕರೆದಿರುವ ಅಧಿವೇಶನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನವಿರಬಹುದು. ಈ ಅಧಿವೇಶನವನ್ನು ವಿದಾಯದ ಭಾಷಣವಾಗುವ ಸಾಧ್ಯತೆ ಇದೆ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪನವರು ಅಧಿವೇಶನ ಕರೆದಿರುವ ಬಗ್ಗೆ ವ್ಯಂಗ್ಯವಾಡಿದ್ದಾರೆ. 22ನೇ ತಾರೀಕಿನಿಂದ ಅಧಿವೇಶನ ಕರೆಯುತ್ತಿದ್ದಾರೆ. ಅವರು ಮಾಡುತ್ತಿರುವ ತರಾತುರಿ ನೋಡುತ್ತಿದ್ದರೆ ನನಗೆ ಅವರದು (ಸಿಎಂ ಸಿದ್ದರಾಮಯ್ಯ) ಇದು ಕೊನೆ ಅಧಿವೇಶನ ಅನ್ನಿಸಲು ಪ್ರಾರಂಭವಾಗುತ್ತಿದೆ. ಹೀಗಾಗಿ ಹೊಸ ಮುಖ್ಯಮಂತ್ರಿಗಳು ಬರುತ್ತಾರೆ ಎಂದು ಅನಿಸುತ್ತದೆ. ಬರಲಿ, ಯಾರು ಬಂದರೂ ಇನ್ನು ಮುಂದೆಯಾದರೂ ಅಭಿವೃದ್ಧಿ ಮಾಡುವುದರ ಬಗ್ಗೆ ಯೋಚನೆ ಮಾಡಬೇಕು.














