Author: kannadanewsnow05

ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಪ್ರಕರಣ ಇದೀಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಶಾಸಕ ಜನಾರ್ಧನ ರೆಡ್ಡಿ ಜನವರಿ 17ರಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ವಿಚಾರವಾಗಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಹೋರಾಟ ಮಾಡುತ್ತೇವೆ. ಜನವರಿ 17 ರಂದು ಬೃಹತ್ ಹೋರಾಟ ಮಾಡುತ್ತೇವೆ. ಪ್ರತಿಭಟನೆಗೆ ಜಿಲ್ಲಾಧಿಕಾರಿ ಅನುಮತಿ ಕೋರಿ ಮನವಿ ಮಾಡಿದ್ದೇವೆ. ಪ್ರತಿಭಟನೆಗೆ ಅನುಮತಿ ಕೊಡದಿದ್ದರೆ ಕೋರ್ಟಿಗೆ ಹೋಗುತ್ತೇವೆ ಎಂದು ಅವರು ತಿಳಿಸಿದರು. ಬೆಂಗಳೂರಿನಿಂದ ಬಳ್ಳಾರಿಯವರೆಗೆ ಪಾದಯಾತ್ರೆನಾ ಅಥವಾ ಬಳ್ಳಾರಿಯಿಂದ ಬೆಂಗಳೂರಿಗೆ ಪಾದಯಾತ್ರೆನಾ ಎನ್ನುವುದರ ಬಗ್ಗೆ ನಾಳೆ ಘೋಷಣೆ ಮಾಡುತ್ತೇವೆ. ಹೋರಾಟದ ರೂಪರೇಷೆಯ ಬಗ್ಗೆ ಪಕ್ಷದ ಹಿರಿಯರು ಘೋಷಿಸುತ್ತಾರೆ. ಪಕ್ಷದ ಹಿರಿಯರ ಜೊತೆಗೆ ನಿನ್ನೆ ಈ ವಿಚಾರವಾಗಿ ಚರ್ಚೆಯಾಗಿದೆ. ಗಲಭೆಕೋರರ ಬಂಧನ ಆಗುವವರಿಗೆ ಹೋರಾಟ ಮಾಡಿ ಅಂತ ಜನರು ಹೇಳುತ್ತಿದ್ದಾರೆ. ರಾಜ್ಯಾದ್ಯಂತ ಈ ಹೋರಾಟ ನಡೆಯಲಿದೆ ಎಂದು ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಹೇಳಿಕೆ ನೀಡಿದರು.

Read More

ಮೈಸೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಒದ್ದು ಕಿತ್ತುಕೊಳ್ಳುತ್ತೇನೆ ಅಂತ ಹೇಳಿದ್ದಾರೆ. ಹಾಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಖಂಡಿತವಾಗಿಯೂ ಸಿಎಂ ಸ್ಥಾನವನ್ನು ಒದ್ದು ಕಿತ್ತುಕೊಳ್ಳುತ್ತಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದರು. ಮೈಸೂರಲ್ಲಿ ಮಾತನಾಡಿದ ಅವರು ಡಿಸಿಎಂ ಡಿಕೆ ಶಿವಕುಮಾರ್ ಖಂಡಿತವಾಗಿಯೂ ಮುಖ್ಯಮಂತ್ರಿ ಕುರ್ಚಿಯನ್ನು ಒದ್ದು ಕಿತ್ತುಕೊಳ್ಳುತ್ತಾರೆ. ಡಿಕೆ ಶಿವಕುಮಾರ್ ಕ್ಯಾರೆಕ್ಟರ್ ಅದೇ ರೀತಿ ಇದೆ. ಡಿಕೆ ಶಿವಕುಮಾರ್ ಇದ್ದಾರೆ ಕಾಂಗ್ರೆಸ್ ಪಕ್ಷದಲ್ಲಿ ಖಂಡಿತ ಕ್ರಾಂತಿ ಆಗಿದೆ. ಅದೇ ಕಾರಣಕ್ಕೆ ಸಿದ್ದರಾಮಯ್ಯ ಪ್ರತಿದಿನ ನಾನೇ ಸಿಎಂ ಅಂತಿದ್ದಾರೆ. ಹೈಕಮಾಂಡ್ ಹೇಳಿದರೆ ಸಿಎಂ ಸ್ಥಾನ ಬಿಟ್ಟು ಕೊಡುತ್ತೇನೆ ಅಂತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸತ್ತು ಹೋಗಿದೆ. ಹೆಣ ಹೊರುವವರಿಗೆ ಹಿಂದೆ ಆದರೆ ಏನು ಮುಂದೆ ಆದರೆ ಏನು ಆ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಆಗಿದೆ ಡಿಕೆ ಶಿವಕುಮಾರ್ ನಮ್ಮ ಕಡೆ ಬಂದರೆ ಸೇರಿಸಿಕೊಳ್ಳುವುದಿಲ್ಲ ಡಿಕೆ ಶಿವಕುಮಾರ್ ಗೆ ನಮ್ಮ ಪಾರ್ಟಿಗೆ ನೋ…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರಿಗೆ ಕಿಡಿಗೇಡಿಗಳು ಅಶ್ಲೀಲವಾಗಿ ಕಮೆಂಟ್ ಹಾಕಿದ್ದರು. ಅದಾದ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮಿಗೂ ಈ ಕಾಟ ಇತ್ತು. ಇದೀಗ ಕಾಂಗ್ರೆಸ್ ಶಾಸಕಿ ನಯನ ಮೊಟಮ್ಮ ಅವರಿಗೆ ಕಿಡಿಗೇಡಿಗಳು ಅಶ್ಲೀಲವಾಗಿ ಕಮೆಂಟ್ ಹಾಕಿದ್ದಾರೆ. ಹೌದು ಕಾಂಗ್ರೆಸ್ ಶಾಸಕಿ ನಯನ ಮೊಟ್ಟಮ್ಮಗು ಇದೀಗ ಅಶ್ಲೀಲ ಕಮೆಂಟ್ ಕಾಟ ಶುರುವಾಗಿದೆ. ಮೂಡಿಗೆರೆ ಕಾಂಗ್ರೆಸ್ ಶಾಸಕ ನಯನ ಮೋಟಮ್ಮ ಅವರ ಬಟ್ಟೆಯ ಬಗ್ಗೆ ವೈಯಕ್ತಿಕ ಇನ್ಸ್ಟಾಗ್ರಾಮ್ ಖಾತೆಯಲ್ಲಿನ ಪೋಸ್ಟ್ ಗಳಿಗೆ ಅಶ್ಲೀಲವಾಗಿ ಕಿಡಿಗೇಡಿಗಳು ಕಮೆಂಟ್ ಹಾಕಿದ್ದಾರೆ. ವೇಶ್ಯೆ ಎಂದು ಕಮೆಂಟ್ ಮಾಡಿದ್ದಾರೆ ಎಂದು ನಯನ ಮೊಟ್ಟಮ್ಮ ಆರೋಪಿಸಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಎರಡು ಅಧಿಕೃತ ಖಾತೆ ಹೊಂದಿರುವ ನಯನ ಮೊಟಮ್ಮ ರಾಜಕೀಯ ವಿಚಾರದ ಬಗ್ಗೆ ಮಾಹಿತಿ ಕೊಳ್ಳಲು ಪ್ರತ್ಯೇಕ ಖಾತೆ ಹೊಂದಿದ್ದು, ಇನ್ನೂ ವೈಯಕ್ತಿಕ ವಿಚಾರ ಹಂಚಿಕೊಳ್ಳಲು…

Read More

ತುಮಕೂರು : ರಾಜ್ಯದಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಋತುಚಕ್ರದ ಹೊಟ್ಟೆ ನೊವು ತಾಳಲಾಗದೆ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ತುಮಕೂರು ತಾಲೂಕಿನ ಬ್ಯಾತ ಗ್ರಾಮದಲ್ಲಿ ನಡೆದಿದೆ. ಇನ್ನು ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಕಲಬುರ್ಗಿ ಮೂಲದ ಕೀರ್ತನಾ (19) ನೇಣಿಗೆ ಶರಣಾದ ಯುವತಿ ಎಂದು ತಿಳಿದುಬಂದಿದೆ. ಗುಲ್ಬರ್ಗದ ಕಲಗಿ ತಾಲೂಕಿನ ಸಾಲಹಳ್ಳಿಯ ಕೀರ್ತನಾ ಕೆಲಸ ಅರಸಿ ತುಮಕೂರಿನಲ್ಲಿದ್ದ ಚಿಕ್ಕಪ್ಪನ ಮನೆಯಲ್ಲಿ ಬಂದಿದ್ದಳು. ಕೆಲಸ ಸಿಗದ ಕಾರಣ ಮನೆಯಲ್ಲೆ ವಾಸವಾಗಿದ್ದಳು. ಚಿಕ್ಕಪ್ಪನ ಮನೆಯಲ್ಲಿ ಯಾರು ಇಲ್ಲದ ವೇಳೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮುಟ್ಟಿನ ಕಾಲದ ಹೊಟ್ಟೆ ನೋವಿನ ಕಾರಣಕ್ಕೆ ನೇಣಿಗೆ ಶರಣಾಗಿದ್ದಾಳೆ.ಎನ್ನಲಾಗಿದೆ. ಈ ಸಂಬಂಧ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಳ್ಳಾರಿ : ಬಳ್ಳಾರಿಯಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ಆಗಿತ್ತು ಈ ಒಂದು ಘರ್ಷಣೆ ವೇಳೆ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ್ದು ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಗೆ ತಗಲಿ ಆತ ಸಾವನಪ್ಪಿದ್ದಾನೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಜನಾರ್ದನ ರೆಡ್ಡಿ ಮತ್ತಷ್ಟು ವಿಡಿಯೋಗಳನ್ನು ರಿಲೀಸ್ ಮಾಡಿದ್ದಾರೆ. ಶ್ರೀರಾಮುಲು ಅವರನ್ನು ಹೊಡೆಯಿರಿ ಅಂತ ಸತೀಶ್ ರೆಡ್ಡಿ ಹೇಳುತ್ತಿದ್ದ ಗಲಾಟೆಯ ವೇಳೆ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಹೇಳುತ್ತಿದ್ದ. ಪ್ರಿಪ್ಲಾನ್ ಮಾಡಿಯೆ ಕಾಂಗ್ರೆಸ್ ನವರು ಈ ಗಲಾಟೆ ಮಾಡಿದ್ದಾರೆ. ರಾಮಲು ಏನು ದೊಡ್ಡ ಬ್ಯಾಡರ ನಾಯಕನ ಅಂತ ಹೇಳುತ್ತಿದ್ದ. ಆ ವಿಡಿಯೋ ಈಗ ಎಲ್ಲಾ ಕಡೆ ಹರಿದಾಡುತ್ತಿದೆ. ಪ್ರಕರಣವನ್ನು ಸಿಐಡಿಗೆ ಕೊಟ್ಟಿದ್ದು ಇದು ಕಣ್ಣೀರು ಒರೆಸುವ ತಂತ್ರವಾಗಿದೆ. ಇಷ್ಟೊತ್ತಿಗೆ ಭರತ್ ರೆಡ್ಡಿ ಮತ್ತು ಸತೀಶ್ ರೆಡ್ಡಿ ಅರೆಸ್ಟ್ ಮಾಡಬೇಕಿತ್ತು.…

Read More

ಬೀದರ್ : ರಾಜ್ಯ ರಾಜಕಾರಣದಲ್ಲಿ ದಿನವೊಂದಕ್ಕೆ ಅಚ್ಚರಿ ಬೆಳವಣಿಗೆ ನಡೆಯುತ್ತಿದ್ದು ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುವ ಆತುರದಲ್ಲಿ ಇದ್ದರೆ, ಮತ್ತೊಂದು ಕಡೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಮೇಲೆ ನನಗೆ ವಿಶ್ವಾಸವಿದೆ. ನಾನೇ ಐದು ವರ್ಷ ಸಿಎಂ ಎಂದು ಹೇಳಿಕೆ ನೀಡುತ್ತಿದ್ದಾರೆ. ಇದರ ಮಧ್ಯ ಕೋಡಿಮಠದ ಸ್ವಾಮೀಜಿ ಸದ್ಯ ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಹೌದು ರಾಜ್ಯದ ರಾಜಕೀಯದಲ್ಲಿ ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಬದಲಾವಣೆ ಆಗಲ್ಲ. ಯುಗಾದಿವರೆಗೂ ಸರ್ಕಾರ ಏನೂ ಬದಲಾವಣೆ ಆಗೋದಿಲ್ಲ ಸಿಎಂ ಬದಲಾವಣೆ ಅನ್ನೋದು ಊಹಾಪೋಹ ಅಷ್ಟೇ. ಸಂಕ್ರಾಂತಿ ಫಲದಲ್ಲಿ ಸಿಎಂ ಬದಲಾವಣೆ ಇಲ್ಲ. ಅವರಾಗಿಯೇ ಬಿಟ್ಟುಕೊಟ್ಟರೆ ಬೇರೆಯವರು ಸಿಎಂ ಆಗಬಹುದು. ಆದರೆ, ಸಿಎಂ ಸಿದ್ದರಾಮಯ್ಯ ಬದಲಾವಣೆ ಯಾರ ಕೈಯಲ್ಲೂ ಮಾಡೋಕೆ ಆಗಲ್ಲ ಎಂದು ಬೀದರ್‌ನಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದ್ದಾರೆ. ಅವರು ಬಿಟ್ಟು ಕೊಡಲ್ಲ, ಇಳಿಯೋದು ಇಲ್ಲ. ಯುಗಾದಿ ಕಳೆದ ಮೇಲೆ…

Read More

ಬಾಗಲಕೋಟೆ : ನಿನ್ನೆ ತಾನೆ ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಘಟನೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಸಹ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಆ ಘಟನೆ ಮಾಸುವ ಮುನವೇ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು 40 ವರ್ಷದ ವಿಚ್ಛೇದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಬಾಗಲಕೋಟೆ ಜಿಲ್ಲೆಯ ಹುನಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಅತ್ಯಾಚಾರ ಎಸಗಿ ರಾಷ್ಟ್ರೀಯ ಹೆದ್ದಾರಿ ಬಳಿ ಕಾಮುಕರು ಮಹಿಳೆಯನ್ನು ಬಿಟ್ಟು ಹೋಗಿದ್ದಾರೆ, ಜನವರಿ 5 ರಂದು ನಡೆದಿರುವ ಘಟನೆ ಇದು ಈಗ ತಡವಾಗಿ ಬೆಳಕಿಗೆ ಬಂದಿದೆ. ಆಂಬುಲೆನ್ಸ್ ಗೆ ಕರೆ ಮಾಡಿ ತಕ್ಷಣ ಸ್ಥಳಿಯರು ಮಾಹಿತಿ ನೀಡಿದ್ದಾರೆ. ಸಂತ್ರಸ್ತೆಯನ್ನು ಹುನಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಸಂತ್ರಸ್ತೆಗೆ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಸೋದರಿಯ ಮೇಲಿನ ದೌರ್ಜನ್ಯ ನೆನೆದು ಸಹೋದರ ರವಿ…

Read More

ಬೆಂಗಳೂರು : ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದೆ.ಕೂಲಿ ಕಾಲೋನಿಯಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದ್ದು ಕಳೆದ ರಾತ್ರಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ. ರಾತ್ರಿ 2 ಗಂಟೆ ಸುಮಾರಿಗೆ ಘಟನೆಯಲ್ಲಿ 11 ಮನೆಗಳಿಗೆ ಹಾನಿಗಳಾಗಿದ್ದು 11ಕ್ಕೂ ಹೆಚ್ಚು ಬೈಕ್ ಗಳು ಹಾಗೂ ಗೂಡ್ಸ್ ಆಟೋಗಳು ಬೆಂಕಿಗೆ ಸುಟ್ಟು ಸಂಪೂರ್ಣವಾಗಿ ಕರಕಲಾಗಿವೆ. ಕಿಡಿಗೇಡಿಗಳು ಈ ಒಂದು ಕೃತಿ ಹರಿದಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More

ಬೆಂಗಳೂರು : ನನ್ನ ಬಂಡೆ ಬಂಡೆ ಅಂತ ಕರೀತಾರೆ.ಬಂಡೆ ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ ಟೀಕೆ ಸಾಯುತ್ತದೆ ಕೆಲಸ ಉಳಿಯುತ್ತದೆ ಎಂದು ಬೆಂಗಳೂರಿನ ಎಕ್ಸ್ ಪೋ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗ ಎಕ್ಸ್ಪೋ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಷಾರಾಗಿರಿ ನೀವು ವ್ಯವಹಾರ ಮಾಡುವಾಗ ಯಶಸ್ಸು ಮುಖ್ಯ. ನನ್ನನ್ನು ಬಂಡೆ ಅಂತ ಕರೆಯುತ್ತಾರೆ ಆದರೆ ಬಂಡೆ ಮುಂದೆ ಆಕೃತಿ ಆಗುತ್ತದೆ. ನಾನು ಚಿಕ್ಕವನು ಆಗಿರಬಹುದು ಆದರೆ ಅನುಭವ ಇದೆ ನನ್ನ ಜಾತಿ ಅವರೇ ನನ್ನನ್ನು ಟೀಕೆ ಮಾಡುತ್ತಿದ್ದಾರೆ ಹಿಂದೆ ಮುಂದೆಯಿಂದ ಚಾಕು ಹಾಕುತ್ತಿದ್ದಾರೆ ಎಚ್ ಡಿ ಕುಮಾರಸ್ವಾಮಿ ಜೊತೆಗೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಆದರೆ ಅವರೇ ನನಗೆ ಚಾಕು ಹಾಕಿದ್ದಾರೆ ಅಂತ ಹೇಳಿದ್ದಾರೆ ಸಕ್ಸಸ್ ಸ್ಟೋರಿಯಲ್ಲಿ ಶ್ರಮ ಮತ್ತು ಟೀಕೆ ಇದ್ದೇ ಇರುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬಂಡೆ ಪ್ರಕೃತಿ ಕಡೆದರೆ…

Read More

ಬೆಂಗಳೂರು : ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ ಟೀಕೆ ಸಾಯುತ್ತದೆ ಕೆಲಸ ಉಳಿಯುತ್ತದೆ ಎಂದು ಬೆಂಗಳೂರಿನ ಎಕ್ಸ್ ಪೋ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗ ಎಕ್ಸ್ಪೋ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಷಾರಾಗಿರಿ ನೀವು ವ್ಯವಹಾರ ಮಾಡುವಾಗ ಯಶಸ್ಸು ಮುಖ್ಯ. ನನ್ನನ್ನು ಬಂಡೆ ಅಂತ ಕರೆಯುತ್ತಾರೆ ಆದರೆ ಬಂಡೆ ಮುಂದೆ ಆಕೃತಿ ಆಗುತ್ತದೆ. ನಾನು ಚಿಕ್ಕವನು ಆಗಿರಬಹುದು ಆದರೆ ಅನುಭವ ಇದೆ ನನ್ನ ಜಾತಿ ಅವರೇ ನನ್ನನ್ನು ಟೀಕೆ ಮಾಡುತ್ತಿದ್ದಾರೆ ಹಿಂದೆ ಮುಂದೆಯಿಂದ ಚಾಕು ಹಾಕುತ್ತಿದ್ದಾರೆ ಎಚ್ ಡಿ ಕುಮಾರಸ್ವಾಮಿ ಜೊತೆಗೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಆದರೆ ಅವರೇ ನನಗೆ ಚಾಕು ಹಾಕಿದ್ದಾರೆ ಅಂತ ಹೇಳಿದ್ದಾರೆ ಸಕ್ಸಸ್ ಸ್ಟೋರಿಯಲ್ಲಿ ಶ್ರಮ ಮತ್ತು ಟೀಕೆ ಇದ್ದೇ ಇರುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.

Read More