Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ದೀರ್ಘಕಾಲದಿಂದ ಕಾಡುತ್ತಿರುವ ವೈದ್ಯರು ಮತ್ತು ಸಿಬ್ಬಂದಿಯ ಕೊರತೆಯನ್ನು ನೀಗಿಸಲು ಆರೋಗ್ಯ ಇಲಾಖೆ ಅತ್ಯಂತ ಮಹತ್ವದ ಹಾಗೂ ಧೀscoreರ್ಘ ನಿರ್ಧಾರವೊಂದನ್ನು ಕೈಗೊಂಡಿದೆ. ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ಮಹತ್ತರ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದ್ದು, ಸಾರ್ವಜನಿಕ ಆರೋಗ್ಯ ಕ್ಷೇತ್ರಕ್ಕೆ ಹೊಸ ಭರವಸೆ ಮೂಡಿಸಿದೆ. 200 ವೈದ್ಯರ ಖಾಯಂ ನೇಮಕಾತಿ: ರಾಜ್ಯದ ವಿವಿಧ ಕಡೆಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡುವ ಮೊದಲ ಹಂತವಾಗಿ 200 ವೈದ್ಯರನ್ನು ಖಾಯಂ ಹಾಗೂ ನೇರ ನೇಮಕಾತಿ ಮಾಡಿಕೊಳ್ಳಲು ಇಲಾಖೆ ನಿರ್ಧರಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಪರೀಕ್ಷೆ ಮುಗಿದ ಕೇವಲ ಒಂದು ವಾರದ ಒಳಗಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲು ನಿರ್ಧಾರ ಮಾಡಲಾಗಿದೆ. ಈ 200 ವೈದ್ಯರ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಈಗಾಗಲೇ ಅಧಿಕೃತ ಅನುಮೋದನೆ ಕೂಡ ದೊರೆತಿದೆ. ಪ್ಯಾರಾ ಮೆಡಿಕಲ್ ಸಿಬ್ಬಂದಿ…

Read More

ಬೆಂಗಳೂರು: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಸಿಎಂ ವಿಜಯ್ ಅವರು ನೆರೆರಾಜ್ಯ ಕರ್ನಾಟಕಕ್ಕೆ ಅಧಿಕೃತ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನಕ್ಕಾಗಿ ಅವರು ಶುಕ್ರವಾರದಂದು ಆಗಮಿಸುತ್ತಿರುವುದು ಭಾರಿ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿಯಾದ ನಂತರ ಕರ್ನಾಟಕಕ್ಕೆ ಇದು ಅವರ ಮೊದಲ ಪ್ರವಾಸವಾಗಿದ್ದು, ತಮಿಳುನಾಡು ಸಿಎಂ ಅವರ ಈ ಭೇಟಿಯು ಕರಾವಳಿ ಭಾಗದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಶುಕ್ರವಾರ ಮಧ್ಯಾಹ್ನದ ವೇಳೆಗೆ ಅವರು ಉಡುಪಿ ಜಿಲ್ಲೆಯನ್ನು ತಲುಪಲಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ನಿಗದಿತ ಸಮಯ ಮತ್ತು ಕಾರ್ಯಕ್ರಮದ ವಿವರ ಪೂರ್ವನಿರ್ಧರಿತ ವೇಳಾಪಟ್ಟಿಯ ಪ್ರಕಾರ, ಶುಕ್ರವಾರ ಮಧ್ಯಾಹ್ನ ಸರಿಯಾಗಿ 3:00 ಗಂಟೆಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಬೈಂದೂರು ತಾಲೂಕಿನಲ್ಲಿರುವ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಮೊದಲ ಬಾರಿಗೆ ಈ ಶಕ್ತಿಪೀಠಕ್ಕೆ ಭೇಟಿ ನೀಡುತ್ತಿರುವ ಸಿಎಂ ವಿಜಯ್, ಮೂಕಾಂಬಿಕಾ ದೇವಿಯ ಸನ್ನಿಧಿಯಲ್ಲಿ ವಿಶೇಷ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ನಡೆದಿದ್ದು, ಒಂಟಿ ಮನೆ ಟಾರ್ಗೆಟ್ ಮಾಡಿ ಚೆನ್ನಾಭರಣ ದರೋಡೆ ಮಾಡಲಾಗಿದೆ. ಬೆಂಗಳೂರಿನ ಕದಿರೆನಹಳ್ಳಿಯಲ್ಲಿ ಒಂಟಿ ಮನೆಗೆ ಖದೀಮರು ಕನ್ನ ಹಾಕಿದ್ದಾರೆ. ಮನೆಯಲ್ಲಿ ಇದ್ದಂತಹ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಅರುಣ್ ಕುಮಾರ್ ಮನೆಯಲ್ಲಿ ಸುಮಾರು 21 ಲಕ್ಷ ಮೌಲ್ಯದ 200 ಗ್ರಾಂ ಚಿನ್ನ, 2 ಲಕ್ಷ ಮೌಲ್ಯದ 3 ಕೆಜಿ ಬೆಳ್ಳಿ ಹಾಗೂ ರೇಷ್ಮೆ ಸೀರೆಗಳನ್ನು ಕಳ್ಳತನ ಮಾಡಿದ್ದಾರೆ. ಅರುಣ್ ಕುಮಾರ್ ದಂಪತಿ ಸಂಬಂಧಿಕರ ಮನೆಗೆ ಹೋಗಿದ್ದರು ಆ ಸಂದರ್ಭದಲ್ಲಿ ಕಬ್ಬಿಣದ ಡೋರ್ ಲಾಕ್ ಮುರಿದು ಮನೆ ಒಳಗೆ ನುಗ್ಗಿದ್ದಾರೆ. ಮನೆಯ ಲಾಕರ್ ಮುರಿದು ಚಿನಭರಣ ಬೆಳ್ಳಿ ಹಾಗೂ ಬೆಲೆ ಬಾಳುವ ರೇಷ್ಮೆ ಸೀರೆ ಸಹ ಕದ್ದು ತೆಗೆದುಕೊಂಡು ಹೋಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ಕಸದ ಟೆಂಡರ್‌ನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ನಾಯಕರ ನಿಯೋಗವು ಲೋಕಾಯುಕ್ತರಿಗೆ ಅಧಿಕೃತವಾಗಿ ದೂರು ನೀಡಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಕಚೇರಿಗೆ ಭೇಟಿ ನೀಡಿ, ಈ ಹಗರಣದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಲಾಗಿದೆ. ಕೆಲ ದಿನಗಳ ಹಿಂದಷ್ಟೇ ಕಸದ ಟೆಂಡರ್ ಅಕ್ರಮಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ ಟೆಂಡರ್ ಪ್ರಕ್ರಿಯೆ ನಡೆಸಿದೆ ಎಂದು ಗಂಭೀರ ಆರೋಪ ಮಾಡಿದ್ದರು. ರಾಜಭವನದ ಕದ ತಟ್ಟಿದ ಬೆನ್ನಲ್ಲೇ, ಈಗ ಭ್ರಷ್ಟಾಚಾರ ನಿಗ್ರಹ ಸಂಸ್ಥೆಯಾದ ಲೋಕಾಯುಕ್ತಕ್ಕೂ ದೂರು ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಲೋಕಾಯುಕ್ತರಿಗೆ ದೂರು ಸಲ್ಲಿಸುವ ಸಂದರ್ಭದಲ್ಲಿ ವಿಪಕ್ಷ ನಾಯಕರೊಂದಿಗೆ ಬಿಜೆಪಿಯ ಹಲವು ಪ್ರಮುಖ…

Read More

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಘೋರ ಘಟನೆಯೊಂದು ನಡೆದಿದ್ದು, ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.ಮನೆಯ ಮುಂದೆ ಗುಂಡು ಹಾರಿಸಿಕೊಂಡು ಸುಮಾ (45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವು ದಿನಗಳಿಂದ ಸುಮಾ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಫಿ ಉದ್ಯಮಿ ರಾಜೇಶ್ ಎಂಬುವವರ ಪತ್ನಿ ಸುಮಾ ಎಂದು ತಿಳಿದುಬಂದಿದೆ. ತಲೆಗೆ ಗುಂಡು ಹಾರಿಸಿಕೊಂಡು ಸುಮಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲೈಸೆನ್ಸ್ ರಿವಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಚಿಕ್ಕಮಗಳೂರು ಎಸ್.ಪಿ ಜಿತೇಂದ್ರ ಕುಮಾರ್ ಭೇಟಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿ ಅವರು, ಆತ್ಮಹತ್ಯೆ ಮಾಡಿಕೊಂಡ ಸುಮಾ ಡೆತ್ ನೋಟ್ ಕೂಡ ಸಿಕ್ಕಿದೆ. ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೃಹಿಣಿ ಸುಮಾ ಆತ್ಮಹತ್ಯೆ ಕುರಿತಾಗಿ ತನಿಖೆ ನಡೆಯುತ್ತಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡುಬದಿದೆ. ರಿವಲ್ವಾರ್ ಸಂಬಂಧ ದಾಖಲೆ ಪರಿಶೀಲನೆ ನಡೆಸುತ್ತಿದ್ದೇವೆ. ಎಂದು ಚಿಕ್ಕಮಗಳೂರು ಎಸ್.ಪಿ ಜಿತೇಂದ್ರ ಕುಮಾರ್ ಹೇಳಿಕೆ ನೀಡಿದರು.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಿಂದ ಮಹತ್ವದ ತೀರ್ಪು ಹೊರಬಿದ್ದಿದೆ. ಪ್ರಕರಣದ ಐವರು ಪ್ರಮುಖ ಆರೋಪಿಗಳ ಜಾಮೀನು ರದ್ದುಗೊಳಿಸಬೇಕೆಂದು ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಆರೋಪಿಗಳಾದ ಪವನ್, ಧನರಾಜು, ರಾಘವೇಂದ್ರ, ವಿನಯ್ ಮತ್ತು ನಂದೀಶ್ ಅವರಿಗೆ ನ್ಯಾಯಾಲಯದಲ್ಲಿ ದೊಡ್ಡ ಸಮಾಧಾನ ಸಿಕ್ಕಂತಾಗಿದೆ. ಪ್ರಕರಣದ ತನಿಖೆ ಮತ್ತು ಕಾನೂನು ಪ್ರಕ್ರಿಯೆಗಳು ನಡೆಯುತ್ತಿರುವ ಬೆನ್ನಲ್ಲೇ, ಈ ಐವರು ಆರೋಪಿಗಳಿಗೆ ಕೆಳಹಂತದ ನ್ಯಾಯಾಲಯ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಹೈಕೋರ್ಟ್ ಮೆಟ್ಟಿಲೇರಿತ್ತು. ಆರೋಪಿಗಳು ಹೊರಗಿದ್ದರೆ ಸಾಕ್ಷ್ಯ ನಾಶಪಡಿಸುವ ಅಥವಾ ತನಿಖೆಗೆ ಅಡ್ಡಿಪಡಿಸುವ ಸಾಧ್ಯತೆ ಇರುವುದರಿಂದ ಅವರ ಜಾಮೀನನ್ನು ರದ್ದುಗೊಳಿಸಬೇಕು ಎಂದು ಪ್ರಾಸಿಕ್ಯೂಷನ್ ಪರ ವಕೀಲರು ಪ್ರಬಲವಾಗಿ ವಾದಿಸಿದ್ದರು. ಆದರೆ, ಪ್ರಾಸಿಕ್ಯೂಷನ್ ಮಂಡಿಸಿದ ವಾದ ಮತ್ತು ಆಕ್ಷೇಪಣೆಗಳನ್ನು ಸುದೀರ್ಘವಾಗಿ ಆಲಿಸಿದ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಎಸ್. ರಾಚಯ್ಯ ಅವರು ಈ ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಆರೋಪಿಗಳ ಜಾಮೀನು ರದ್ದುಗೊಳಿಸಲು ಯಾವುದೇ ಬಲವಾದ ಮತ್ತು ಸೂಕ್ತವಾದ ಕಾರಣಗಳು…

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಣೆ ಪತ್ತೆಯಾಗಿದೆ. ದುಬೈನಿಂದ ಬಂದಿದ್ದ ಪ್ರಯಾಣಿಕನ ಬಳಿ 899.50 ಗ್ರಾಂ ಚಿನ್ನ ಪತ್ತೆಯಾಗಿದೆ. 1.337 ಕೋಟಿ ಮೌಲ್ಯದ 899.50 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. 4 ಕ್ಯಾಪ್ಸುಲ್ ಗಳಲ್ಲಿ ಚಿನ್ನದ ಪೇಸ್ಟ್ ಅಡಗಿಸಿ ತಂದಿದ್ದ ಪ್ರಯಾಣಿಕ ಅನುಮಾನಸ್ಪದ ವರ್ತನೆ ಹಿನ್ನಲೆ ಕಸ್ಟಮ್ಸ್ ಅಧಿಕಾರಿಗಳಿಂದ ತಪಾಸಣೆ ನಡೆಸಿದರು. ಈ ವೇಳೆ 899.50 ಗ್ರಾಂ 24 ಕ್ಯಾರಾಟ್ ಚಿನ್ನ ಪತ್ತೆಯಾಗಿದೆ. ಕಸ್ಟಮ್ಸ್ ಕಾಯ್ದೆಯಡಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಉಂಡ ಮನೆಗೆ ಕನ್ನ ಹಾಕಿರುವ ಘಟನೆ ನಡೆದಿದ್ದು, ಕೆಲಸ ಮಾಡಿಕೊಂಡಿದ್ದ ಮನೆಯಲ್ಲಿ ಕಳ್ಳತನ ಎಸಗಿದ್ದ ನೇಪಾಳ ಮೂಲದ ದಂಪತಿಯನ್ನು ನಗರದ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪವನ್ ಬಿಸ್ತಾ ಹಾಗೂ ಸೀತಾ ಬಿಸ್ತಾ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ನಗರದ ಅರ್ಕಾವತಿ ಲೇಔಟ್‌ನಲ್ಲಿರುವ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಆರೋಪಿಗಳು, ಮೇ 27ರಂದು ಮನೆಯ ಕಬೋರ್ಡ್‌ನಲ್ಲಿದ್ದ 25 ಲಕ್ಷ ರೂಪಾಯಿ ನಗದು ದೋಚಿಕೊಂಡು ಪರಾರಿಯಾಗಿರುವ ಬಗ್ಗೆ ದೂರು ದಾಖಲಾಗಿತ್ತು. ದೂರುದಾರ ಉದ್ಯಮಿಯ ಮನೆಯಲ್ಲಿ ಆರೋಪಿ ಪವನ್ ಬಿಸ್ತಾ ಒಂದು ತಿಂಗಳಿನಿಂದ ಸೆಕ್ಯುರಿಟಿ ಗಾರ್ಡ್ ಕೆಲಸಕ್ಕಿದ್ದರೆ, ಆತನೊಂದಿಗೆ ಪತ್ನಿ ಸೀತಾ ಬಿಸ್ತಾ ಮನೆಗೆಲಸ ಮಾಡಿಕೊಂಡಿದ್ದಳು. ಕೆಲಸಗಾರರಿಗೆ ಕೊಡಬೇಕಿದ್ದ ವೇತನದ ಹಣ 25 ಲಕ್ಷ ರೂಪಾಯಿಯನ್ನು ಉದ್ಯಮಿಯು ಮನೆಯ ಕಬೋರ್ಡ್‌ನಲ್ಲಿ ಇಟ್ಟಿದ್ದರು. ಮೇ 27ರಂದು ಮನೆ ಮಾಲೀಕರು ಕೆಲಸದ ನಿಮಿತ್ತ ಮನೆಯಿಂದ ಹೊರಗಡೆ ಹೋಗಿದ್ದರು. ಅದೇ ಸಮಯದಲ್ಲಿ ಮನೆಯೊಳಗೆ ನುಗ್ಗಿದ್ದ ಆರೋಪಿಗಳು ನಗದು ದೋಚಿ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.…

Read More

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಆಳಂದ್ ತಾಲೂಕಿನ ಕಡಗಂಚಿಯಲ್ಲಿರುವ ಬಿಸಿಎಂ (BCM) ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರು ಮದ್ಯದ ಪಾರ್ಟಿ ಮಾಡಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಶಿಸ್ತು ಮತ್ತು ಉನ್ನತ ಶಿಕ್ಷಣಕ್ಕೆ ಹೆಸರಾಗಬೇಕಿದ್ದ ವಿಶ್ವವಿದ್ಯಾಲಯದ ಆವರಣದಲ್ಲೇ ಇಂತಹದ್ದೊಂದು ಬೇಜವಾಬ್ದಾರಿ ಕೃತ್ಯ ನಡೆದಿರುವುದು ಸಾರ್ವಜನಿಕರಲ್ಲಿ ಮತ್ತು ಶಿಕ್ಷಣ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಹಾಸ್ಟೆಲ್ ಕೊಠಡಿಯೊಳಗೆ ವಿದ್ಯಾರ್ಥಿನಿಯರ ಗುಂಪೊಂದು ಅತ್ಯಂತ ಬಿಂದಾಸ್ ಆಗಿ ಕುಳಿತು ಮದ್ಯ ಸೇವನೆ ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವಿದ್ಯಾರ್ಥಿನಿಯರು ತಮಗೆ ತಾವೇ ವಿಡಿಯೋ ಮಾಡಿಕೊಂಡಿದ್ದು, ಇದೀಗ ಆ ವಿಡಿಯೋ ಎಲ್ಲೆಡೆ ವೈರಲ್ ಆಗುವ ಮೂಲಕ bcm ಹಾಸ್ಟೆಲ್‌ಗಳ ಭದ್ರತೆ ಮತ್ತು ವಿದ್ಯಾರ್ಥಿಗಳ ನಡವಳಿಕೆಯನ್ನು ಸಾರ್ವಜನಿಕವಾಗಿ ಪ್ರಶ್ನಿಸುವಂತೆ ಮಾಡಿದೆ. ವಾರ್ಡನ್ ವಿರುದ್ಧ ಗಂಭೀರ ಆರೋಪ ಘಟನೆಯ ಬೆನ್ನಲ್ಲೇ ಮತ್ತೊಂದು ಕರಾಳ ಮುಖ ಅನಾವರಣಗೊಂಡಿದ್ದು, ಹಾಸ್ಟೆಲ್ ಉಸ್ತುವಾರಿ ನೋಡಿಕೊಳ್ಳಬೇಕಾದ ವಾರ್ಡನ್ ತಪ್ಪು ಮಾಡಿದ ವಿದ್ಯಾರ್ಥಿನಿಯರಿಗೆ ಬುದ್ಧಿ ಹೇಳುವ ಬದಲಾಗಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮದ್ಯದ ಪಾರ್ಟಿ…

Read More

ಬೆಂಗಳೂರು: ದೇಶದಲ್ಲಿ ಪ್ರತಿಯೊಬ್ಬ ನಾಗರಿಕ ಹಾಗೂ ಸಂಸ್ಥೆಗಳು ಕಾನೂನಿಗೆ ಬದ್ಧರಾಗಿರಬೇಕು. ಆದರೆ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರ್‌ಎಸ್‌ಎಸ್) ಮಾತ್ರ ತೆರಿಗೆ ಮತ್ತು ನೋಂದಣಿ ನಿಯಮಗಳಿಂದ ವಿನಾಯಿತಿ ಬೇಕಿರುವುದೇಕೆ ಎಂದು ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ವಿಚಾರವಾಗಿ ಬಿಜೆಪಿ ನಾಯಕ ಸಿ.ಟಿ. ರವಿ ಮಾಡಿದ್ದ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅವರು, ಸಿ.ಟಿ. ರವಿಯವರಿಗೆ ತಮ್ಮದೇ ಸಂಘಟನೆಯ ಇತಿಹಾಸದ ಜ್ಞಾನವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಕೈಕಾಲು ಹಿಡಿದ ಇತಿಹಾಸ ಆರ್‌ಎಸ್‌ಎಸ್‌ಗೆ ಇದೆ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಜವಾಹರಲಾಲ್ ನೆಹರೂ ಅವರು ಆರ್‌ಎಸ್‌ಎಸ್ ಸಂಘಟನೆಯನ್ನು ನಿಷೇಧಿಸಿದಾಗ, ನಿಷೇಧ ಹಿಂಪಡೆಯುವಂತೆ ಕೋರಿ ಇದೇ ಆರ್‌ಎಸ್‌ಎಸ್ ನಾಯಕರು ಅವರ ಕೈಕಾಲು ಹಿಡಿದಿದ್ದರು ಎಂದು ವಾಗ್ದಾಳಿ ನಡೆಸಿದರು. ಇಂದಿರಾಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಿದ ಸಂದರ್ಭದಲ್ಲೂ ಆರ್‌ಎಸ್‌ಎಸ್‌ನ ಅಂದಿನ ಸಂಚಾಲಕರೇ ಪತ್ರ ಬರೆದು ಕ್ಷಮೆಯಾಚಿಸಿದ್ದರು. ಬ್ರಿಟಿಷರ ಕಾಲದಲ್ಲಿ ವೀರ ಸಾವರ್ಕರ್ ಅವರು ಬ್ರಿಟಿಷರಿಂದ ತಿಂಗಳಿಗೆ 60 ರೂಪಾಯಿ…

Read More