Author: kannadanewsnow05

ಹಾಸನ : ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಅಧಿಕಾರಕ್ಕಾಗಿ ಅಂತಹ ಜನರನ್ನು ಸೇರಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಉದ್ದೂರು ಹೊಸಳ್ಳಿ ಗ್ರಾಮದಲ್ಲಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು. ಯಾವುದೇ ಕಾರಣಕ್ಕೂ ಆ ವಿಷಯವನ್ನು ನನ್ನ ಮುಂದೆ ಹೇಳಬೇಡಿ. ಅವರನ್ನು ಸೇರಿಸಿಕೊಳ್ಳುವ ಅವಶ್ಯಕತೆ ಇಲ್ಲ ಈಗಾಗಲೇ ಅನುಭವಿಸಿದ್ದೇನೆ. ರಾಜಕೀಯದಲ್ಲಿ ಶಕ್ತಿ ಬರುತ್ತೆ ಅಂತ ಹೇಳಿ ಈ ಕೆಲಸಕ್ಕೆ ಕೈ ಹಾಕುವುದಿಲ್ಲ. ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ. ಕಾಂಗ್ರೆಸ್ಸಿಗರು ಅನ್ನ ತಿನ್ನುತ್ತಿರುವುದು ಆ ವರ್ಗದವರಿಂದ ಅಂತಿದ್ದಾರೆ. ನಿತ್ಯ ಅಣ್ಣ ತಿನ್ನುತ್ತಿರುವುದೇ ಆ ವರ್ಗದ ಜನರಿಂದ ಅಂತ ಹೇಳುತ್ತಿದ್ದಾರೆ. ಕಾಂಗ್ರೆಸ್ನವರು ಯಾರಾದರೂ ಅದನ್ನು ವಿರೋಧ ಮಾಡಿದ್ದೀರಾ? ಎಲ್ಲೆಲ್ಲಿಗೆ ಹೋಗುತ್ತೋ ನೋಡೋಣ ಎಂದು ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.

Read More

ದಾವಣಗೆರೆ : ವಚನಾನಂದ ಸ್ವಾಮೀಜಿಯನ್ನು ಉಚ್ಛಾಟಿಸಿದ್ದೇವೆ. ಆಡಳಿತಾಧಿಕಾರಿ ರಾಜಕುಮಾರ್, ದಾಸೋಹ ಸಮಿತಿ ಅಧ್ಯಕ್ಷ ಪ್ರಕಾಶ್ ಪಾಟೀಲ್ ಅವರನ್ನು ಅಮಾನತು ಮಾಡಿದ್ದೇವೆ. ಅವರಾಗಿಯೇ ಗೌರವದಿಂದ ಮಠ ತೊರೆಯಲಿ. ಇಲ್ಲದಿದ್ದರೆ ಟ್ರಸ್ಟ್ ಮುಂದಿನ ತೀರ್ಮಾನ ಕೈಗೊಳ್ಳಲಿದೆ” ಎಂದು ಹರಿಹರದ ಪಂಚಮಸಾಲಿ ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ 27ರಂದು ಹರಿಹರ ಮಠದಲ್ಲೇ ಲೆಕ್ಕ ಕೊಡಲು ಮುಂದಾಗಿದ್ದೇವೆ. 2008ರಿಂದ 2026ರವರೆಗೆ ಲೆಕ್ಕ ಕೊಡ್ತೀವಿ. ಸಂಘ ಬೇರೆ, ಟ್ರಸ್ಟ್ ಬೇರೆ ಇದೆ. ನಾವು ಬ್ಯಾಲೆನ್ಸ್ ಶೀಟ್ ಕೊಡ್ತಾ ಬರ್ತಿದ್ದೇವೆ. ಆದರೆ, ದಿಕ್ಕು ತಪ್ಪಿಸುವ ಸಲುವಾಗಿ ಲೆಕ್ಕ ಕೊಡಿ ಎಂಬ ಅಭಿಯಾನ ನಡೆಸಿದ್ದಾರೆ. ಯಾವುದೇ ಟ್ರಸ್ಟ್​​ನಲ್ಲಿ ಲೆಕ್ಕ ಕೊಡುವ ಪದ್ಧತಿ ಇಲ್ಲ. ಆದರೂ ಸಹ ಪೈಸೆ ಪೈಸೆ ಲೆಕ್ಕ ಕೊಡಲು ಮುಂದಾಗಿದ್ದೇವೆ. ಲೆಕ್ಕದ ವಿಚಾರವಾಗಿ ತಪ್ಪು ಕಲ್ಪನೆ ಮೂಡಿಸುತ್ತಿದ್ದಾರೆ. ಹೀಗಾಗಿ ಪೀಠದ ಹುಟ್ಟಿನಿಂದ ಇಲ್ಲಿಯವರೆಗೆ ಲೆಕ್ಕ ಕೊಡುತ್ತೇವೆ ಎಂದರು. ಸ್ವಾಮೀಜಿ ಮಠದಲ್ಲೇ ಇದ್ದು, ಸುದ್ದಿಗೋಷ್ಠಿಯಲ್ಲಿ ‌ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ. ಇದೇ 24ರಂದು ಮಠದಲ್ಲಿ ಬಸವ ಜಯಂತಿ ಆಚರಿಸಲು…

Read More

ಬೆಂಗಳೂರು : ಕಬ್ಬಡಿ ಪಂದ್ಯ ಒಂದರಲ್ಲಿ 500 ರೂಪಾಯಿ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೌದು ಪರಮೇಶ್ವರ ಅವರ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಸುನಿಲ್ ಯಾದವ್ ಅವರಿದ್ದ ಪೀಠ ಆದೇಶ ನೀಡಿದೆ. ಈ ಕೇಸ್ ಗೆ ಸಬಂಧಿಸಿದಂತೆ ವಕೀಲ ಫಣಿಂದ್ರ ಅವರು ವಾದ ಮಂಡಿಸಿದರು. ಸಚಿವರು ಕಬ್ಬಡಿ ಟೂರ್ನಿ ಮುಖ್ಯ ಅತಿಥಿಯಾಗಿ ಹೋಗಿದ್ದರು. ವಿಜಯಪುರ ತಂಡ ಗೆಲ್ಲುತ್ತದೆ ಎಂದು ಬೆಟ್ಟಿಂಗ್ ಕಟ್ಟಿದ್ರು. ಸೋತ ತಂಡಕ್ಕೆ ಬೇಸರವಾಗಬಾರದೆಂದು ಹೀಗೆ ಹೇಳಿದ್ದಾರೆ ಇದನ್ನೇ ಅಪರಾಧವೆಂಬಂತೆ ಖಾಸಗಿ ದೂರು ದಾಖಲಿಸಿದ್ದಾರೆ. ಕೋರ್ಟ್ fir ಗೆ ಆದೇಶಿಸುವ ಮುನ್ನ ಪ್ರಕ್ರಿಯೆ ಪಾಲಿಸಿಲ್ಲ ಎಂದು ವಾದಿಸಿದರು. ಇದೇ ವೇಳೆ ಹೈಕೋರ್ಟ್ ಜಡ್ಜ್ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರು ತಮಾಷೆಗೆ ಮಾತನಾಡಿದರು ಕೂಡ ಕೇಸ್ ದಾಖಲಿಸಬಹುದಾ?ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆ ನೀಡಿದಂತೆ ಕಾಣುತ್ತಿಲ್ಲ ತನಿಖೆಗೆ ಆದೇಶಿಸುವ ಮುನ್ನ ಪೊಲೀಸರ ವಿವರಣೆ ಪಡೆಯಬೇಕಿತ್ತು…

Read More

ಕಲಬುರಗಿ : ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮ ಪಂಚಾಯತ್ ನ ಲಂಚಕೋರ ಕಂಪ್ಯೂಟರ್ ಆಪರೇಟರ್ ಬಂದೇನವಾಜ್ ಎಂಬಾತ ಬಸವ ವಸತಿ ಯೋಜನೆಯ ಹಣ ಮಂಜೂರು ಮಾಡಲು ಲಂಚ ಪಡೆದು, ಲೋಕಾಯುಕ್ತ ಬಲೆಗೆ ಸಾಕ್ಷಿ ಸಮೇತ ಬಿದ್ದಿದ್ದಾನೆ. ಮಳ್ಳಿ ಗ್ರಾಮದ ಮಲ್ಲಿಕಾರ್ಜುನ ಅವರ ಸಹೋದರನ ಮನೆ ಬಿಲ್ ಮಾಡಲು 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು, 5 ಸಾವಿರ ರೂ. ಕೈಯಲ್ಲಿ ಪಡೆದಿದ್ದು, ಮೂರು ಸಾವಿರ ರೂಪಾಯಿ ಫೋನ್ ಫೇ ಮಾಡಿಕೊಂಡಿದ್ದ. ಲೋಕಾಯುಕ್ತ ತನಿಖಾಧಿಕಾರಿ ಮುರುಗುಂಡಿ ಅವರ ನೇತೃತ್ವದ ತಂಡ ದಾಳಿ ನಡೆಸಿದೆ. ಸದ್ಯ ಕಂಪ್ಯೂಟರ್ ಆಪರೇಟರ್ ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ.

Read More

ತುಮಕೂರು : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ತಾಪಮಾನ ಏರಿಕೆಯಿಂದ ಜನರು ಹೈರಾಣಾಗಿದ್ದಾರೆ ಇನ್ನು ಕೆಲವು ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಮಳೆಯಾಗುತ್ತಿದ್ದು ಜನರು ದುಡ್ಡು ಉಸಿರು ಬಿಟ್ಟಿದ್ದಾರೆ ಈಗ ತುಮಕೂರಿನಲ್ಲಿ ಇದೆ ಬಿಸಿಲಿನ ತಾಪಮಾನದಿಂದ 32 ನವಿಲುಗಳು ಸಾವನ್ನಪ್ಪಿವೆ ಎಂದು ಹೇಳಲಾಗುತ್ತಿದೆ. ಹೌದು ತುಮಕೂರಿನ ವಿವಿಧ ಭಾಗದಲ್ಲಿ 32 ನವಿಲುಗಳ ಸಾವನ್ನಪ್ಪಿದ್ದು, ಹೀಟ್‌ಸ್ಟ್ರೋಕ್‌ನಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತುಮಕೂರು ತಾಲೂಕಿನ ಬೊಮ್ಮನಹಳ್ಳಿ, ಕೋಳಿಹಳ್ಳಿ, ಭೈರಸಂದ್ರ, ಹುಲ್ಲೆನಹಳ್ಳಿ ಗ್ರಾಮದಲ್ಲಿ ಏ.16ರಿಂದ 21ರವರೆಗೆ ಒಟ್ಟು 32 ನವಿಲುಗಳ ಸಾವನ್ನಪ್ಪಿವೆ. ಹೀಟ್‌ಸ್ಟ್ರೋಕ್‌ನಿಂದ ಸಾವನ್ನಪ್ಪಿರಬಹುದು ಎನ್ನಲಾಗಿದೆ.

Read More

ಕೋಲಾರ : ಇಂದು SSLC ಫಲಿತಾಂಶ ಪ್ರಕಟವಾಗಿದ್ದು ರಾಜ್ಯದಲ್ಲಿ ಶೇಕಡ 94 ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಇನ್ನು SSLC ಪರೀಕ್ಷೆಯಲ್ಲಿ ಪಾಸ್ ಆಗಿದ್ದಕ್ಕೆ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವನಪ್ಪಿದ್ದಾನೆ. ಬಾವಿಯಲ್ಲಿ ಈಜುಲು ಹೋಗಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೋಣ್ಣವಾಡಿ ಗ್ರಾಮದಲ್ಲಿ ಒಂದು ದುರಂತ ಸಂಭವಿಸಿದೆ. ಕೋಲಾರ ಜಿಲ್ಲೆಯ ಮುಳ್ಬಾಗಿಲು ತಾಲೂಕಿನ ಸೊಣ್ಣವಾಡಿ ಗ್ರಾಮದ 15 ವರ್ಷದ ಕಿರಣ್ ಮೃತ ದುರ್ದೇವಿ ಎನ್ನಲಾಗಿದೆ. ಎಸ್ ಎಸ್ ಎಲ್ ಸಿ ರಿಸಲ್ಟ್ ಬಂದ ಹಿನ್ನೆಲೆಯಲ್ಲಿ ಕಿರಣ್ ತನ್ನ ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ತೆರಳಿದ್ದಾನೆ. ಆಳದ ಬಾವಿಯಲ್ಲಿ ಕಿರಣ್ ಮುಳುಗಿ ಸಾವನಪ್ಪಿದ್ದಾನೆ. ಕಿರಣ್ಗಾಗಿ ಸದ್ಯ ಅಗ್ನಿಶಾಮಕ ಸಿಬ್ಬಂದಿ ಶವಕ್ಕಾಗಿ ಉದ್ಘಾಟ ನಡೆಸುತ್ತಿದ್ದಾರೆ. ಕುಟುಂಬಸ್ಥರ ಅಕ್ರಂದನ ಇದೀಗ ಮುಗಿಲು ಮುಟ್ಟಿದೆ.

Read More

ಮೈಸೂರು : ಕಬಿನಿ ಜಲಾಶಯದ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಅರಣ್ಯ ರಕ್ಷಕ ಒಬ್ಬರು ನೀಡಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ ಹೆಚ್. ಡಿ. ಕೋಟೆ ತಾಲೂಕಿನ ಅಂಕನಾಥಪುರ ಗ್ರಾಮದ ಸುಪ್ರೀತ್‌ (36) ಮೃತ ಅರಣ್ಯ ರಕ್ಷಕ ಎಂದು ತಿಳಿದುಬಂದಿದೆ. ಉದ್ಬೂರು ಗೇಟ್‌ ಬಳಿಯ ಕಳ್ಳಬೇಟೆ ತಡೆ ಶಿಬಿರದ ಸಮೀಪ ತಮ್ಮ ಇಬ್ಬರು ಸಹೋದ್ಯೋಗಿಗಳಾದ ಅಯ್ಯಪ್ಪ ಹಾಗೂ ಅಮನ್ ಎಂಬುವರೊಂದಿಗೆ ಈಜಲು ಹೋಗಿದ್ದರು. ಈಜಾಡುತ್ತಿದ್ದ ವೇಳೆ ಆಯಾಸಗೊಂಡಿದ್ದ ಸುಪ್ರೀತ್‌ ತಮ್ಮ ಇಬ್ಬರು ಸಹೋದ್ಯೋಗಿಗಳಿಗೆ ತಾವು ದಡಕ್ಕೆ ಹೋಗುವುದಾಗಿ ಹೇಳಿ ನೀರಿನಿಂದ ಹೊರಬರಲು ಪ್ರಯತ್ನಿಸಿದ್ದಾರೆ. ಈ ವೇಳೆ ತೀರಾ ಆಯಾಸಗೊಂಡು ನೀರಿನಲ್ಲಿ ಮುಳುಗಿದ್ದಾರೆ. ಸಹೋದ್ಯೋಗಿಗಳ ಚೀರಾಟದಿಂದ ವಿಷಯ ತಿಳಿದು ಸ್ಥಳೀಯರು ಕೂಡಲೇ ಸ್ಥಳಕ್ಕೆ ಆಗಮಿಸಿ, ಸುಪ್ರೀತ್​ಗಾಗಿ ಹುಡುಕಾಟ ನಡೆಸಿದರು. ಎಲ್ಲಿಯೂ ಪತ್ತೆಯಾಗದ ಕಾರಣ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದರು. ಕಬಿನಿ ಜಂಗಲ್ ಲಾಡ್ಜ್ ಅಂಡ್ ರೆಸಾರ್ಟ್ ಸಿಬ್ಬಂದಿ, ಇಟ್ನ ಗ್ರಾಮದ ನುರಿತ ಈಜುಗಾರರ ಜತೆಗೆ ಕೇರಳದಿಂದ ಆಗಮಿಸಿದ್ದ ಮುಳುಗು ತಜ್ಞರು ಮೃತದೇಹಕ್ಕಾಗಿ ತೀವ್ರ ಶೋಧ…

Read More

ಕೋಲಾರ : ಸಾಧಿಸುವ ಛಲ ಒಂದಿದ್ದರೆ ಎಂತಹ ಕಠಿಣ ಸವಾಲುಗಳನ್ನು ಕೂಡ ಎದುರಿಸಬಹುದು ಎನ್ನುವ ಮಾತಿಗೆ ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆದ ಕೋಲಾರದ ವಿದ್ಯಾರ್ಥಿನಿ ಕುಸುಮ ಪಾತ್ರಳಾಗಿದ್ದಾಳೆ. ಹೌದು ತೀವ್ರ ಅನಾರೋಗ್ಯದ ನಡುವೆಯೂ ಆಂಬುಲೆನ್ಸ್ ನಲ್ಲಿ ಬಂದು ಸ್ಟ್ರೆಚರ್ ಮೇಲೆಯೇ ಪರೀಕ್ಷೆ ಬರೆದು ಕುಸುಮ ಫಸ್ಟ್ ಕ್ಲಾಸ್ನಲ್ಲಿ ತೇರ್ಗಡೆಯಾಗಿದ್ದಾಳೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಿನ್ನನಾಗಹಳ್ಳಿ ನಿವಾಸಿಯಾಗಿರುವ ಕುಸುಮಾ, ಪರೀಕ್ಷೆಯ ಸಮಯದಲ್ಲಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಆದರೆ ಪರೀಕ್ಷೆ ತಪ್ಪಿಸಿಕೊಳ್ಳಬಾರದು ಎಂಬ ದೃಢ ಸಂಕಲ್ಪ ಮಾಡಿದ ಆಕೆ, ಆಂಬುಲೆನ್ಸ್ ಮೂಲಕ ಪರೀಕ್ಷಾ ಕೇಂದ್ರಕ್ಕೆ ಆಗಮಿಸುತ್ತಿದ್ದರು. ಎದ್ದುನಿಲ್ಲಲು ಸಾಧ್ಯವಾಗದ ಸ್ಥಿತಿಯಲ್ಲೂ ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಪರೀಕ್ಷೆ ಬರೆದು ಎಲ್ಲರ ಗಮನ ಸೆಳೆದಿದ್ದರು. ಇಂದು ಹೊರಬಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಕುಸುಮಾ 625 ಅಂಕಗಳಿಗೆ 374 ಅಂಕಗಳನ್ನು ಗಳಿಸಿದ್ದಾರೆ. ದೈಹಿಕ ಯಾತನೆಯ ನಡುವೆಯೂ ಆಕೆ ಗಳಿಸಿರುವ ಈ ಅಂಕಗಳು ಆಕೆಯ ಕಠಿಣ ಪರಿಶ್ರಮಕ್ಕೆ ಸಾಕ್ಷಿಯಾಗಿವೆ.…

Read More

ಕೇರಳ : ಪೋಷಕರ ನಿರ್ಲಕ್ಷದಿಂದ ಅದೆಷ್ಟೋ ಹಸುಗೂಸುಗಳು ಪ್ರಾಣ ಕಳೆದುಕೊಂಡಿರುವ ಘಟನೆಗಳು ನಡೆದಿವೆ. ಇದೀಗ ಕೇರಳದಲ್ಲಿ ಸಹ ಇಂತಹದ್ದೆ ಘಟನೆ ನಡೆದಿದ್ದು ಆಟವಾಡುತ್ತಾ ಅಡುಗೆಮನೆಗೆ ಸೇರಿದ ಮಗುವೊಂದು ಬಿಂದಿಗೆಯಲ್ಲಿ ಸಿಲುಕಿರುವ ಘಟನೆ ಕೇರಳದ ಮಲ್ಲಪ್ಪುರಂ ಜಿಲ್ಲೆಯ ತಿರುವಾಲಿ ಎಂಬ ಗ್ರಾಮದಲ್ಲಿ ನಡೆದಿದೆ. ತಿರುವಳ್ಳಿಯಲ್ಲಿ ಮಗು ಒಂದು ಆಟವಾಡುತ್ತಾ ಅಡಿಗೆ ಮನೆಗೆ ಹೋಗಿದೆ. ಈ ವೇಳೆ ಅಲ್ಲಿರುವ ಬಿಂದಿಗೆ ಒಳಗೆ ಮಗು ಕುಳಿತಿದೆ. ಆದರೆ ಮಗು ಬಿಂದಿಗೆಯಿಂದ ಹೊರಬರಲು ಆಗದೆ ನರಳಾಡಿದೆ. ಈ ವೇಳೆ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬಿಂದಿಗೆಯನ್ನು ಕಟ್ ಮಾಡಿ ಮಗುವನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಈ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

Read More

ಬೆಂಗಳೂರು : ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ ಎಸ್ ಎಸ್ ಎಲ್ ಸಿ ಒಂದನೇ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಮೇ 18ರಿಂದ ಎರಡನೇ ಪರೀಕ್ಷೆ ಆರಂಭವಾಗಲಿದೆ ಆದರೆ ಈ ಸಲ ಮೂರನೇ ಬಾರಿ ಪರೀಕ್ಷೆ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು. ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಮಧು ಬಂಗಾರಪ್ಪ ಈ ಬಾರಿ ಮೂರನೇ ಬಾರಿ ಪರೀಕ್ಷೆ ಇರುವುದಿಲ್ಲ ಫೇಲಾದ ಮಕ್ಕಳಿಗೆ ಮೂರನೇ ಪರೀಕ್ಷೆ ಇರುವುದಿಲ್ಲ ಹಾಗಾಗಿ ಫೇಲಾದ ಮಕ್ಕಳು ಎರಡನೇ ಬಾರಿ ಪರೀಕ್ಷೆ ಬರೆಯಲು ಅವಕಾಶ ಇದು ಮೇ 18ರಿಂದ ಪರೀಕ್ಷೆ ಆರಂಭ ಆಗಲಿದೆ. ಯಾರೆಲ್ಲಾ ಫೇಲ್ ಆಗಿದ್ದಾರೋ ಅವರಿಗೆ ತರಬೇತಿ ಕೊಡುವ ಕೆಲಸ ಆಗಲಿದೆ ಕಾರಣಾಂತರಗಳಿಂದ ಫೇಲ್ ಆಗಿದ್ದಾರೆ ಯಾವ ಸಬ್ಜೆಕ್ಟ್ ಅಲ್ಲಿ ಫೇಲ್ ಆಗಿದ್ದಾರೆ ಅದರಲ್ಲಿ ಮಕ್ಕಳನ್ನು ಪಾಸ್ ಮಾಡಿಸುವಂತಹ ಕೆಲಸ ಸಂಬಂಧ ಪಟ್ಟಂತಹ ಶಿಕ್ಷಕರು…

Read More