Author: kannadanewsnow05

ಬೆಂಗಳೂರು : ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧದ ಪರಿಣಾಮ ಇದೀಗ ಭಾರತದಾದ್ಯಂತ ಹಲವಾರು ರೀತಿಯಲ್ಲಿ ಪರಿಣಾಮ ಬೀರಿದ್ದು ಅದರಲ್ಲೂ ಪ್ರಮುಖವಾಗಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ್ಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಿಲಿಂಡರ್ ವಿತರಕರ ಕಲಾಟ ನಡೆಯುತ್ತಿದೆಯಾ ಎಂದು ತನಿಖೆ ನಡೆಸಲು ರಾಜ್ಯಕ್ಕೆ ಸಿಬಿಐ ಎಂಟ್ರಿ ಕೊಟ್ಟಿದೆ. ಹೌದು ರಾಜ್ಯದ ಹಲವೆಡೆ ವಾಣಿಜ್ಯ ಸಿಲಿಂಡರ್ ಕೊರತೆ ಹಿನ್ನೆಲೆಯಲ್ಲಿ, ವಾಣಿಜ್ಯ ಸಿಲಿಂಡರ್ ಅಭಾವ ಸಂಬಂಧ ಸಿಬಿಐ ತನಿಖೆ ನಡೆಸುತ್ತಿದ್ದು, ಕಮರ್ಷಿಯಲ್ ಸಿಲಿಂಡರ್ ವಿತರಕರ ಕಳ್ಳಾಟ ನಡೆಸುತ್ತಿದ್ದಾರಾ? ಎಂದು ತನಿಖೆ ನಡೆಸಲು ಇದೀಗ ಸಿಬಿಐ ಎಂಟ್ರಿ ಕೊಟ್ಟಿದೆ. ಈಗಾಗಲೇ ಸಿಲಿಂಡರ್ ಪೂರೈಕೆ ವ್ಯತ್ಯಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಹುತೇಕ ಹೋಟೆಲ್ ಗಳು ಬಂದಾಗಿವೆ. ಇನ್ನು ಗ್ರಾಹಕರು ಸಿಲಿಂಡರ್ ಇಲ್ಲದೆ ಪರದಾಡುತ್ತಿದ್ದಾರೆ. ಸಿಲಿಂಡರ್ ಏಜೆನ್ಸಿ ಅಂಗಡಿಗಳ ಮುಂದೆ ನಿಂತು ವಾಗ್ವಾದ ನಡೆಸುತ್ತಿದ್ದಾರೆ. ಅಲ್ಲದೆ ಕೆಲವು ಸಿಲಿಂಡರ್ ವಿತರಕರು ಸಿಲಿಂಡರ್ ದರ ಒಮ್ಮೆಲೆ ಏರಿಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಇಳಿದಿದೆ. 1. ಅಕ್ರಮದ ಸ್ವರೂಪ ಏನು?…

Read More

ಬೆಂಗಳೂರು : ಬಂಡಿಪುರ ಹಾಗೂ ನಾಗರಹೊಳೆ ಸಫಾರಿ ಪುನರಂಭದ ಕುರಿತು ಸಚಿವ ಈಶ್ವರ ಕಂಡ್ರೆ ಸಮರ್ಥಿಸಿಕೊಂಡಿದ್ದರು. ಇದೀಗ ಪ್ರವಾಸಿಗರಿಗೆ ಸಚಿವ ಈಶ್ವರ ಕಂಡ್ರೆ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಸುಬ್ರಹ್ಮಣ್ಯ – ಕುಮಾರ ಪರ್ವತದ ಚಾರಣವನ್ನು ಬೆಳಗ್ಗೆ 5.30 ಗಂಟೆಗೆ ಆರಂಭಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಒಪ್ಪಿಗೆ ಸೂಚಿಸಿದರು.‌ ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕಿ ಭಾಗೀರಥಿ ಮುರುಳ್ಯಾ, ಸುಬ್ರಹ್ಮಣ್ಯದಿಂದ, ಕುಮಾರ ಪರ್ವತಕ್ಕೆ ಚಾರಣ ಹೋಗಲು ವ್ಯವಸ್ಥೆ ಬದಲಾಗಿದೆ. ಬೆಳಗ್ಗೆ 5 ಗಂಟೆ ಬದಲಾಗಿ, ಬೆಳಗ್ಗೆ 6 ಗಂಟೆಗೆ ಚಾರಣಕ್ಕೆ ಹೋಗಲು ಬಿಡಲಾಗ್ತಿದೆ. ಇದರಿಂದ ಶಿಖರಕ್ಕೆ ತಲುಪಲು ಸಮಯ ವ್ಯತ್ಯಾಸ ಆಗುತ್ತಿದೆ. ಶೇಷಗಿರಿ ಪರ್ವತಕ್ಕೆ ಹೋಗಲು ಬಿಡುತ್ತಿಲ್ಲ. ಹಾಗಾಗಿ, ಮೊದಲಿನಂತೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸಚಿವ ಈಶ್ವರ್ ಖಂಡ್ರೆ ಉತ್ತರಿಸುತ್ತಾ, ಸುಬ್ರಹ್ಮಣ್ಯದಿಂದ ಕುಮಾರ ಪರ್ವತ ಚಾರಣ ಮಾಡಿ ವಾಪಸಾಗಲು ಎರಡು ದಿನ ಬೇಕು. ಹೋದವರು ಅಲ್ಲಿ ವಾಸ್ತವ್ಯ ಮಾಡುತ್ತಿದ್ದರು. ಅಲ್ಲಿ ಹೋಗುವ ಪ್ರವಾಸಿಗರ ರಕ್ಷಣೆಗೆ ಸಮಸ್ಯೆ…

Read More

ಬೆಂಗಳೂರು : ಬೇಸಿಗೆಯ ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಅನೇಕರು ತಣ್ಣಗಿರುವ ಬಿಯರ್ ಮೊರೆ ಹೋಗುತ್ತಾರೆ. ಗಂಟಲು ಒಣಗಿದಾಗ ‘ಚಿಲ್ಡ್’ ಬಿಯರ್ ಕುಡಿದರೆ ಹಾಯ್ ಎನಿಸಬಹುದು, ಆದರೆ ಇದು ನಿಮ್ಮ ದೇಹದ ಮೇಲೆ ಅಂದುಕೊಂಡಿದ್ದಕ್ಕಿಂತ ಭಿನ್ನವಾದ ಪರಿಣಾಮ ಬೀರಬಹುದು. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ 1. ನಿರ್ಜಲೀಕರಣದ (Dehydration) ಅಪಾಯ ಬಿಯರ್ ಕುಡಿದರೆ ದಾಹ ತೀರುತ್ತದೆ ಎಂಬುದು ತಪ್ಪು ಕಲ್ಪನೆ. ಆಲ್ಕೋಹಾಲ್ ಒಂದು ‘ಡಯೂರೆಟಿಕ್’ (Diuretic) ಆಗಿ ಕಾರ್ಯನಿರ್ವಹಿಸುತ್ತದೆ. ಅಂದರೆ, ಇದು ನಿಮ್ಮ ದೇಹದಿಂದ ಮೂತ್ರದ ರೂಪದಲ್ಲಿ ಹೆಚ್ಚು ನೀರನ್ನು ಹೊರಹಾಕುವಂತೆ ಮಾಡುತ್ತದೆ. ಬೇಸಿಗೆಯಲ್ಲಿ ಈಗಾಗಲೇ ಬೆವರಿನ ಮೂಲಕ ನೀರು ನಷ್ಟವಾಗುತ್ತಿರುತ್ತದೆ, ಇದರ ಜೊತೆಗೆ ಬಿಯರ್ ಸೇವಿಸಿದರೆ ದೇಹವು ಬೇಗನೆ ನಿರ್ಜಲೀಕರಣಕ್ಕೆ ಒಳಗಾಗುತ್ತದೆ. 2. ದೇಹದ ಉಷ್ಣಾಂಶ ಏರಿಕೆ ನಮಗೆ ಕುಡಿಯುವಾಗ ತಣ್ಣಗೆ ಎನಿಸಿದರೂ, ಆಲ್ಕೋಹಾಲ್ ರಕ್ತನಾಳಗಳನ್ನು ವಿಸ್ತರಿಸುತ್ತದೆ (Vasodilation). ಇದರಿಂದ ಚರ್ಮದ ಮೇಲ್ಮೈಗೆ ರಕ್ತದ ಹರಿವು ಹೆಚ್ಚಾಗಿ ತಾತ್ಕಾಲಿಕವಾಗಿ ಬಿಸಿಯ ಅನುಭವವಾಗುತ್ತದೆ. ಇದು ದೇಹದ ಆಂತರಿಕ ಉಷ್ಣತೆಯನ್ನು ನಿಯಂತ್ರಿಸುವ ಸಾಮರ್ಥ್ಯವನ್ನು…

Read More

ಬೆಂಗಳೂರು : ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಮೈಸೂರು ರಸ್ತೆಯ ಆರ್.ಆರ್.ವೈದ್ಯಕೀಯ ಕಾಲೇಜು ಬಳಿ ನಡೆದಿದೆ. ಈ ಕಾಲೇಜಿನಲ್ಲೇ ನಾಲ್ಕನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ಕೃತಿಕಾ (21) ಮೃತ ಯುವತಿ ಎಂದು ತಿಳಿದು ಬಂದಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿನಿ ಹಂಸ ಕೂಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ನಿನ್ನೆ ಸಂಜೆ 4:15ರ ಸುಮಾರಿಗೆ ಸ್ಕೂಟರ್‌ ಮೂಲಕ ಹೊರಟ ಕೃತಿಕಾ ಹಾಗೂ ಹಂಸ ಆರ್.ಆರ್.ವೈದ್ಯಕೀಯ ಕಾಲೇಜಿನ ನಿರ್ಗಮನ ದ್ವಾರದಿಂದ ಮೈಸೂರು ರಸ್ತೆಯ ಕಡೆ ತೆರಳುತ್ತಿದ್ದರು. ಈ ವೇಳೆ ಮೈಸೂರು ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿ ಸ್ಕೂಟರ್‌ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಸ್ಕೂಟರ್‌ ಚಲಾಯಿಸುತ್ತಿದ್ದ ಹಂಸ ರಸ್ತೆಯ ಎಡಭಾಗಕ್ಕೆ ಬಿದ್ದರೆ, ಹಿಂಬದಿ ಸವಾರೆ ಕೃತಿಕಾ ಬಲಭಾಗಕ್ಕೆ ಬಿದ್ದಿದ್ದಾರೆ.ದುರಾದೃಷ್ಟವಶಾತ್ ಕೃತಿಕಾ ಅವರ ದೇಹದ ಮೇಲೆ ಟಿಪ್ಪರ್ ಲಾರಿಯ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಹಂಸಳನ್ನು ಆರ್ ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರ…

Read More

ನವದೆಹಲಿ : ಇಸ್ರೇಲ್ ಇರಾನ್ ಯುದ್ಧದ ಬಳಿಕ ಭಾರತದ ಬಂದರಿಗೆ ಮೊದಲ ಬಾರಿಗೆ ಭಾರತದ ಬಂದರಿಗೆ ತೈಲನೌಕೆ ಆಗಮಿಸಿದೆ ಜಲಸಂಧಿಯಿಂದ ಈ ಒಂದು ತೈಲನೌಕೆ ಬಂದಿದೆ. ಹೊರ್ಮೊಜ್ ಜಲಸಂಧಿಯಿಂದ ಮುಂಬೈ ಬಂದರಿಗೆ ತೈಲ ನೌಕೆ ಆಗಮಿಸಿದೆ. ಮಾರ್ಚ್ 8ರವರೆಗೆ ಜಲಸಂಧಿಯಲ್ಲಿ ಈ ಒಂದು ತೈಲ ನೌಕೆ ಸಿಲುಕಿತ್ತು. ಹರ್ಮೋಜ್ ಜಲಸಂಧಿ ಬಂದ್ ಆಗಿದ್ದರಿಂದ ತೈಲ ನೌಕೆ ಸಿಲುಕಿತ್ತು. ಮಾರ್ಚ್ 9 ರಂದು ಹೊರಟಿದ್ದ ಭಾರತದ ತೈಲ ನೌಕೆ ಇದೀಗ ಮುಂಬೈ ತಲುಪಿದೆ. ಇರಾನ್ ಇಸ್ರೇಲ್ ಯುದ್ಧದ ನಡುವೆ ಹಾರ್ಮೋನ್ಸ್ ಜಲಸಂಧಿಯಲ್ಲಿ ಭಾರತೀಯ ತೈಲ ನೌಕೆ ಸಿಲುಕಿತ್ತು. ಒಂದು ವೇಳೆ ಯಾವುದೇ ಹಡಗುಗಳನ್ನು ಅಲ್ಲಿಂದ ತೆಗೆದುಕೊಂಡು ಹೋದರೆ ನಡುವೆಯೇ ದಾಳಿ ಮಾಡಿ ಧ್ವಂಸಗೊಳಿಸಲಾಗುತ್ತದೆ ಎಂದು ಇರಾನ್ ಎಚ್ಚರಿಕೆ ನೀಡಿತ್ತು. ಆದರೆ ಇದೀಗ ಭಾರತಕ್ಕೆ ಅತಿ ದೊಡ್ಡ ರಾಜತಾಂತ್ರಿಕ ಗೆಲುವು ಸಿಕ್ಕಂತಾಗಿದೆ. ಪ್ರಮುಖ ಅಂಶಗಳು: ಸುರಕ್ಷಿತ ಸಂಚಾರ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿಯಿದ್ದರೂ, ಅಂತರಾಷ್ಟ್ರೀಯ ಜಲಮಾರ್ಗಗಳಲ್ಲಿ ತೈಲ ಸಾಗಾಣಿಕೆ ಪುನರಾರಂಭಗೊಂಡಿರುವುದು ಭಾರತದ ಇಂಧನ ಭದ್ರತೆಗೆ…

Read More

ಕೊಡಗು : ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಇಂದು ಕಾಡಾನೆ ದಾಳಿಗೆ ಕಾಫಿ ಬೆಳೆಗಾರನೊಬ್ಬ ಸಾವನಪ್ಪಿರುವ ಘಟನೆ ವರದಿಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಗಣಪತಿ ಅಲಿಯಾಸ್ ಗಪ್ಪು (49) ಸಾವನ್ನಪ್ಪಿರುವ ವ್ಯಕ್ತಿ. ಸಿದ್ದಾಪುರ ಸಮೀಪದ ಹೈಸ್ಕೂಲ್ ಪೈಸಾರಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ನವದೆಹಲಿ : ಇರಾನ್ ಇಸ್ರೇಲ್ ಯುದ್ಧದ ನಡುವೆಯೇ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ನಡುವಿನ ಮಾತುಕತೆಯ ನಂತರ, ಆಯಕಟ್ಟಿನ ಹಾರ್ಮುಜ್ ಜಲಸಂಧಿಯ ಮೂಲಕ ಭಾರತೀಯ ತೈಲ ಹಡಗುಗಳು ಸಾಗಲು ಇರಾನ್ ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಇದೀಗ ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ತೈಲ ಹಡಗುಗಳಿಗೆ ಯಾವುದೇ ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ. ವಿಶ್ವದ ಅತ್ಯಂತ ಪ್ರಮುಖ ತೈಲ ಸಾಗಾಣಿಕೆ ಮಾರ್ಗವಾಗಿರುವ ‘ಹಾರ್ಮುಜ್ ಜಲಸಂಧಿ’ಯಲ್ಲಿ (Strait of Hormuz) ಭಾರತೀಯ ತೈಲ ಹಡಗುಗಳ ಸಂಚಾರಕ್ಕೆ ಯಾವುದೇ ವಿಶೇಷ ಅನುಮತಿ ಅಥವಾ ವಿನಾಯಿತಿ ನೀಡಿಲ್ಲ ಎಂದು ಇರಾನ್ ಸರ್ಕಾರ ಅಧಿಕೃತವಾಗಿ ಸ್ಪಷ್ಟಪಡಿಸಿದೆ. ಮುಖ್ಯಾಂಶಗಳು: ಸ್ಪಷ್ಟನೆ ನೀಡಿದ ಇರಾನ್: ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಭಾರತೀಯ ತೈಲ ಟ್ಯಾಂಕರ್‌ಗಳಿಗೆ ಯಾವುದೇ ರೀತಿಯ ಪ್ರತ್ಯೇಕ ಸೌಲಭ್ಯ ಅಥವಾ ಸುರಕ್ಷತೆಯ ಭರವಸೆ ನೀಡಿಲ್ಲ ಎಂದು ಇರಾನ್ ವಿದೇಶಾಂಗ ಇಲಾಖೆ…

Read More

ಬೆಂಗಳೂರು : ಹಾಲು ಉತ್ಪಾದಕರಿಗೆ ಬಮುಲ್ ಇದೀಗ ಯುಗಾದಿ ಉಡುಗೊರೆ ನೀಡಿದ್ದು ಲೀಟರ್ ಹಾಲಿಗೆ 1 ರೂಪಾಯಿ ಪ್ರೋತ್ಸಾಹ ಧನವನ್ನು ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್ ಘೋಷಣೆ ಮಾಡಿದ್ದಾರೆ. ರೈತರಿಂದ 59, 39, 78,492 ಲೀಟರ್ ಹಾಲು ಖರೀದಿಸಿದ್ದೇವೆ. ಈ ಬಾರಿ 500 ಕೋಟಿ ಹೆಚ್ಚುವರಿ ಟರ್ನ್ ಓವರ್ ಮಾಡುವ ಗುರಿ ಇದ್ದು, ಕಾರ್ಮಿಕರಿಗೆ ಸುಮಾರು 6 ಕೋಟಿ ರೂಪಾಯಿ ಡಿಎ ಕೊಡಬೇಕು. ನಾವು ಸುಮಾರು 60 ಕೋಟಿ ಲಾಭಗಳಿಸುವ ಮಟ್ಟಿಗೆ ಬಂದಿದ್ದೇವೆ. ಹೀಗಾಗಿ ಸಿಬ್ಬಂದಿಗಳಿಗೆ ಬಾಕಿ ಇದ್ದ ಹಣ ಕೊಡಲು ತೀರ್ಮಾನಿಸಲಾಯಿತು. ಗುತ್ತಿಗೆದಾರರಿಗೆ 5000 ಬೋನಸ್ ಕೊಡುತ್ತೇವೆ. ಗುಣಮಟ್ಟದ ಹಾಲು ಕೊಡುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ ಎಂದು ಡಿಕೆ ಸುರೇಶ ತಿಳಿಸಿದರು. ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಇದು ನಿಜಕ್ಕೂ ಸಿಹಿ ಸುದ್ದಿ! ಯುಗಾದಿ ಹಬ್ಬದ ಸಂದರ್ಭದಲ್ಲಿ ಬೆಂಗಳೂರು ಹಾಲು ಒಕ್ಕೂಟ (ಬಮುಲ್) ತನ್ನ ವ್ಯಾಪ್ತಿಯ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 1 ರೂಪಾಯಿ ಪ್ರೋತ್ಸಾಹ ಧನ ಹೆಚ್ಚಳ…

Read More

ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ನೀರಿನ ಸಂಪಿಗೆ ಬಿದ್ದು ಎರಡು ವರ್ಷದ ಮಗು ಸಾವನಪ್ಪಿದೆ. ಬೆಂಗಳೂರಿನ ಬ್ಯಾಡರಹಳ್ಳಿಯ ನಿವಾಸದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಅಣ್ಣಯ್ಯ ಮತ್ತು ಋತು ದಂಪತಿಯ ಎರಡುವರೆ ವರ್ಷದ ಮಗ ಸಂಪಿಗೆ ಬಿದ್ದು ಸಾವನಪ್ಪಿದ್ದಾನೆ. ನಿನ್ನೆ ಕಾರು ತೊಳೆಯಲು ಮನೆಯಲ್ಲಿದ್ದ ಸಂಪ್ ತೆಗೆದಿದ್ದ ಅಣ್ಣಯ್ಯ, ಕಾರು ತೊಳೆದು ನಂತರ ಸಂಪ್ ಕ್ಲೋಸ್ ಮಾಡದೇ ತೆರಳಿದ್ದಾರೆ. ಈ ವೇಳೆ ಆಟವಾಡುತ್ತಿದ್ದ ಚಿರಾಗ್ ಸಂಪಗೆ ಬಿದ್ದು ಸಾವನಪ್ಪಿದ್ದಾನೆ. ಸುರಕ್ಷತೆಗಾಗಿ ಗಮನಿಸಬೇಕಾದ ಅಂಶಗಳು: ಸಂಪ್‌ಗಳಿಗೆ ಸುರಕ್ಷಿತ ಮುಚ್ಚಳ: ಮನೆಯಲ್ಲಿ ನೀರಿನ ಸಂಪ್‌ಗಳಿದ್ದರೆ ಅವುಗಳಿಗೆ ಯಾವಾಗಲೂ ಗಟ್ಟಿಯಾದ ಕಬ್ಬಿಣದ ಅಥವಾ ಸಿಮೆಂಟ್ ಮುಚ್ಚಳಗಳನ್ನು ಅಳವಡಿಸಿರಬೇಕು. ಲಾಕ್ ವ್ಯವಸ್ಥೆ: ಮುಚ್ಚಳಗಳನ್ನು ಕೇವಲ ಮುಚ್ಚಿಡುವುದು ಸಾಲದು, ಮಕ್ಕಳು ಸುಲಭವಾಗಿ ತೆಗೆಯದಂತೆ ಅದಕ್ಕೆ ಲಾಕ್ (Lock) ಹಾಕುವ ವ್ಯವಸ್ಥೆ ಇರುವುದು ಉತ್ತಮ. ನಿರಂತರ ನಿಗಾ: ಸಣ್ಣ ಮಕ್ಕಳಿರುವ ಮನೆಯಲ್ಲಿ ಅವರು ಆಟವಾಡುವಾಗ ದೊಡ್ಡವರ ಕಣ್ಣು ಯಾವಾಗಲೂ ಅವರ ಮೇಲಿರಲಿ. ಆಟದ…

Read More

ಬೆಂಗಳೂರು : ರಾಜ್ಯಾ, ದೇಶ ಸೇರಿದಂತೆ ಎಲ್ಲೆಡೆ ಸಿಲಿಂಡರ್ ವ್ಯತ್ಯಯದಲ್ಲಿ ಭಾರಿ ಸಮಸ್ಯೆ ಉಂಟಾಗಿದೆ. ಈಗಲೇ ಬೆಂಗಳೂರಿನಲ್ಲಿ ಬಹುತೇಕ ಹೋಟೆಲ್ ಗಳು ಬಂದ್ ಆಗಿವೆ. ಸಿಲಿಂಡರ್ ಸಮಸ್ಯೆ ಬೆನ್ನಲ್ಲೇ ತುಂಬಿದ ಸಿಲಿಂಡರ್ ಕಳ್ಳತನ ನಡೆದಿದೆ. ಬೆಂಗಳೂರಿನ ನಾಗರಬಾವಿಯ ಕಲ್ಯಾಣ ನಗರದಲ್ಲಿ ಈ ಒಂದು ಕಳ್ಳತನ ನಡೆದಿದೆ. ಕಲ್ಯಾಣ ನಗರದಲ್ಲಿ ಬೈಕಿನಲ್ಲಿ ಬಂದು ಮನೆಯ ಕಂಪೌಂಡ್ ನಲ್ಲಿದ್ದಂತ ಚೀಲದ ಸಮೇತ ಸಿಲಿಂಡರ್ ಕಳ್ಳತನ ನಡೆದಿದೆ. ಮನೆಯವರು ಸಿಲಿಂಡರ್ ಫುಲ್ ಮಾಡಿ ಚೀಲದಲ್ಲಿ ಇಟ್ಟಿದ್ದರು. ಇದನ್ನು ಮೊದಲೇ ಗಮನಿಸಿದ್ದ ಕಳ್ಳ ರಾತ್ರಿ ಬೈಕ್ ನಲ್ಲಿ ಬಂದು ಗ್ಯಾಸ್ ಸಿಲಿಂಡರ್ ಕಳ್ಳತನ ಮಾಡಿದ್ದಾನೆ.

Read More