Author: kannadanewsnow05

ದಕ್ಷಿಣಕನ್ನಡ : ಬಿಜೆಪಿಯವರು ಎಷ್ಟೇ ತಿಪ್ಪರಲಾಗ ಹೊಡೆದ್ರೂ ಮತ್ತೆ ಸರ್ಕಾರ ತರೋದು ನಮಗೆ ಗೊತ್ತಿದೆ. ದಾನ ಧರ್ಮ ಮಾಡುವ ಕೈ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಬಡವರಿಗೆ ಪಂಚ ಗ್ಯಾರಂಟಿಗಳನ್ನು ನೀಡಲು ಸಾಧ್ಯವಾಗಿದೆ. ಹೀಗಾಗಿ ಬಿಜೆಪಿಯವರು ಟೀಕಿಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನೂತನ ಕಾಂಗ್ರೆಸ್ ಭವನಕ್ಕೆ ಶಿಲನ್ಯಾಸ ನೆರವೇರಿಸಿ ಮಾತನಾಡಿದ ಅವರು, ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆ ತಂದಿರುವುದು ಕೇವಲ ಕಾಂಗ್ರೆಸ್‌ಗರಿಗೆ ಮಾತ್ರ ಎಂದು ಬಿಜೆಪಿಯವರು ಅಪಪ್ರಚಾರ ಮಾಡಿದ್ದರು. ಆದರೆ ಎಲ್ಲರಿಗಾಗಿ ಈ ಯೋಜನೆ ತಂದಿದ್ದೇವೆ. ಇದನ್ನು ಬಿಜೆಪಿಯವರು ಪಡೆಯುತ್ತಿದ್ದಾರೆ. ಟೀಕೆ ಮಾಡುವವರು ಯೋಜನೆ ನಮಗೆ ಬೇಡ ಎಂದು ಬಿಟ್ಟು ಕೊಡಲಿ ಎಂದು ಸವಾಲು ಹಾಕಿದರು. ಬಿಜೆಪಿಯು ಜನರ ವೋಟು ತಡೆಯುವ ನಿಟ್ಟಿನಲ್ಲಿ ಎಸ್‌ಐಆರ್ ತರುತ್ತಿದೆ. ಈ ಮೂಲಕ ಎಸ್‌ಸಿ ಎಸ್‌ಟಿ, ಅಲ್ಪ ಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಮತವನ್ನು ತಡೆಯುವ ಕೆಲಸ ಮಾಡಲಾಗುತ್ತಿದೆ. ಪ್ರತಿ ಬೂತ್‌ಗಳಲ್ಲಿಯೂ ಇದನ್ನು ಮಾಡಲಾಗುತ್ತಿದೆ. ಇದರ ಬಗ್ಗೆ ಬಹಳ ಜಾಗೃತೆಯಾಗಿರಬೇಕು. ಮುಖ್ಯಮಂತ್ರಿ…

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ದರೋಡೆ ನಡೆದಿದ್ದು ಮನೆಯ ಬೀಗ ಒಡೆದು ಹಣ ಮತ್ತು ಚಿನ್ನಾಭರಣವನ್ನು ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಡಿ ಆರ್ ಎಂ ಬಡಾವಣೆಯಲ್ಲಿ ಹರೀಶ್ ಎಂಬುವರ ಮನೆಯಲ್ಲಿ ಈ ಒಂದು ಕಳ್ಳತನ ನಡೆದಿದೆ ಕುಟುಂಬದವರು ಎಲ್ಲರೂ ತಿರುಪತಿಗೆ ಹೋಗಿದ್ದಾಗ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು 30 ಗ್ರಾಂ ಚಿನ್ನ 450 g ಬೆಳ್ಳಿ 46,000 ನಗದು ಹಣ ಕಳ್ಳತನ ಮಾಡಿದ್ದಾರೆ ಈ ಕುರಿತು ಗೌರಿಬಿದನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕನಿಗೆ ಥಳಿಸಲಾಗಿದೆ. ಜಿಲ್ಲೆಯ ಸಾಗರ ನಗರದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಾಧ್ಯಾಪಕನಿಗೆ ಥಳಿಸಿರುವ ಘಟನೆ ವರದಿಯಾಗಿದೆ. ಕೊಳಗಿಬೀಸ್ ಕಾಲೇಜಿನ ವಿದ್ಯಾರ್ಥಿ ನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಕಾಲೇಜು ಪ್ರಾಧ್ಯಾಪಕ ಎಂ. ಆರ್ ಆದರ್ಶ್ ಎಂಬವನಿಗೆ ಇದೀಗ ಜನ ಥಳಿಸಿದ್ದಾರೆ. ಈ ಹಿಂದೆ ಶಿರಸಿಯಲ್ಲಿ ಕೂಡ ಇದೆ ರೀತಿ ಲೈಂಗಿಕ ಕಿರುಕುಳ ನೀಡಿ ಸಿಕ್ಕಿ ಬಿದ್ದಿದ್ದ. ಬಳಿಕ ಆದರ್ಶ ನನ್ನ ಬೇರೆ ಕಾಲೇಜಿಗೆ ವರ್ಗಾಯಿಸಲಾಗಿತ್ತು. ಇದೀಗ ಶಿವಮೊಗ್ಗದಲ್ಲೂ ಈ ರೀತಿ ಕೃತ್ಯ ಎಸಗಿದ್ದು, ಜನರು ಹಿಡಿದು ಥಳಿಸಿದ್ದಾರೆ.

Read More

ಉತ್ತರಕನ್ನಡ : ಬಿಜೆಪಿ ನಾಯಕರನ್ನು ಹೊಗಳಿ ರಾಜ್ಯ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ಶಾಸಕ ಆರ್ ವಿ ದೇಶಪಾಂಡೆ ವ್ಯಂಗ್ಯವಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಶಾಸಕ ಆರ್ ವಿ ದೇಶಪಾಂಡೆ ಹೇಳಿಕೆ ನೀಡಿದ್ದು ಕೇಂದ್ರ ಸಚಿವ ವಿ ಸೋಮಣ್ಣ ಅವರನ್ನು ಹೊಗಳಿದ್ದಾರೆ. ವಿ ಸೋಮಣ್ಣ ಅವರು ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಪ್ರಯಾಣದ ಫಲವಾಗಿ ರೈಲು ಸೇವೆ ಪೂನ ಆರಂಭವಾಗಿದೆ. ದಾಂಡೇಲಿ ಮತ್ತು ಅಳ್ಳಾವರ ರೈಲು ಸಂಚಾರ ಪುನರಾರಂಭ ಆಗಿದೆ. ವಿ ಸೋಮಣ್ಣ ಅವರು ಮತ್ತಷ್ಟು ಎತ್ತರಕ್ಕೆ ಬೆಳೆಯಬೇಕು ಎಂದು ಹಾರೈಸುತ್ತೇನೆ ಎಂದು ತಿಳಿಸಿದರು. ಸಿದ್ದರಾಮಯ್ಯ ಮಹಿಳೆಯರಿಗೆ ಬಸ್ ಫ್ರೀ ಮಾಡಿದ್ದಾರೆ ಯಾವ ಭಾಷೆ ನೋಡಿದರೂ ಫುಲ್ ಆಗಿರುತ್ತವೆ ಗಂಡು ಮಕ್ಕಳಿಗೆ 10ವುದಕ್ಕೂ ಸಹ ಆಗಲ್ಲ ಬಸ್ನಲ್ಲಿ ಯಾರಿಗಾದರೂ ಹಣ ಬೀಳುತ್ತದೆ ಬಸ್ನಲ್ಲಿ ಗಂಡು ಮಕ್ಕಳು ನೋಡಿಕೊಂಡು ಓಡಾಡಬೇಕಿದೆ ಸಿದ್ದರಾಮಯ್ಯ ಮಾಡಿದ್ದು ಒಂದೆರಡು ಅಲ್ಲ ಎಂದು ಆರ್ ವಿ ದೇಶಪಾಂಡೆ ಗ್ಯಾರಂಟಿ ಕುರಿತು ವ್ಯಂಗ್ಯವಾಡಿದ್ದಾರೆ.

Read More

ಬೆಂಗಳೂರು : ಮೆಟ್ರೋ ದರ ಹೆಚ್ಚಳ ಆಗಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಏನು ಹೇಳಿಕೆ ನೀಡಿದ್ದರೊ, ಈ ಕುರಿತು ಬಿಎಂಆರ್‌ಸಿಎಲ್ ಹಿರಿಯ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು, ನಮಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ ಎಂದು ತಿಳಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ‘BMRCL’ ಹಿರಿಯ ಅಧಿಕಾರಿಗಳು ನಮಗೆ ಮಾಹಿತಿ ಬಂದಮೇಲೆ ಏನು ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ. ಅಲ್ಲಿಯವರೆಗೂ ನಮ್ಮ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ. ಮಾಹಿತಿ ಬಂದ ನಂತರ ಬಳಿಕವಷ್ಟೇ ಟಿಕೇಟ್ ದರ ಇಳಿಕೆ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಬಿಎಂಆರ್‌ಸಿಎಲ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದ್ದು ಮೆಟ್ರೋ ಪ್ರಯಾಣದ ದರ ಹೆಚ್ಚಳ ಇಲ್ಲ ಎಂದು ಹೇಳಲಾಗುತ್ತಿದೆ ಈ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.ಈ ವಿಚಾರವಾಗಿ ಬಿಎಂಆರ್‌ಸಿಎಲ್ ಇಂದ ಅಧಿಕೃತ ಮಾಹಿತಿ ಬರಬೇಕಷ್ಟೇ. ಕೇಂದ್ರ ಗೃಹ ವ್ಯವಹಾರಗಳ ಸಚಿವ ಮನೋಹರ್ ಕಟ್ಟರ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದೇನೆ, ಸೋಮವಾರದಿಂದ ಪ್ರಾರಂಭಿಸಲು ಪ್ರಸ್ತಾಪಿಸಲಾದ ರಾಜ್ಯ ಸರ್ಕಾರದ ಅನ್ಯಾಯದ ಬೆಂಗಳೂರು ಮೆಟ್ರೋ ದರ ಏರಿಕೆಯ ವಿರುದ್ಧ ತಕ್ಷಣದ ಮಧ್ಯಪ್ರವೇಶವನ್ನು ಕೋರಿದ್ದೇನೆ. ಬೆಂಗಳೂರಿನಲ್ಲಿ ಈಗಾಗಲೇ ಭಾರತದಲ್ಲಿ ಅತ್ಯಂತ ದುಬಾರಿ ಮೆಟ್ರೋ ದರಗಳಿವೆ ಎಂದು ನಾನು ಗಮನಸೆಳೆದಿದ್ದೇನೆ. ಈ ಹೆಚ್ಚಳವು ಲಕ್ಷಾಂತರ ನಾಗರಿಕರಿಗೆ ಸಾರ್ವಜನಿಕ ಸಾರಿಗೆಯನ್ನು ತಲುಪಲು ಕಷ್ಟವಾಗುತ್ತದೆ ಮತ್ತು ಅದರ ಉದ್ದೇಶವನ್ನು ವಿಫಲಗೊಳಿಸುತ್ತದೆ. ಪ್ರಸ್ತಾವಿತ ಹೆಚ್ಚಳವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಅವರು ಸೂಚನೆ ನೀಡಿದ್ದಾರೆ. ಇದು ಸೋಮವಾರದಿಂದ ಜಾರಿಗೆ ಬರುವುದಿಲ್ಲ. FFC ಯಲ್ಲಿನ ವೈಪರೀತ್ಯಗಳ ವೈಯಕ್ತಿಕ ಪರಿಶೀಲನೆಯನ್ನು ಸಹ ಅವರು ಭರವಸೆ…

Read More

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದ್ದು ಮೆಟ್ರೋ ಪ್ರಯಾಣದ ದರ ಹೆಚ್ಚಳ ಇಲ್ಲ ಎಂದು ಹೇಳಲಾಗುತ್ತಿದೆ ಈ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.ಈ ವಿಚಾರವಾಗಿ ಬಿಎಂಆರ್‌ಸಿಎಲ್ ಇಂದ ಅಧಿಕೃತ ಮಾಹಿತಿ ಬರಬೇಕಷ್ಟೇ. ಕೇಂದ್ರ ಗೃಹ ವ್ಯವಹಾರಗಳ ಸಚಿವ ಮನೋಹರ್ ಕಟ್ಟರ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದೇನೆ, ಸೋಮವಾರದಿಂದ ಪ್ರಾರಂಭಿಸಲು ಪ್ರಸ್ತಾಪಿಸಲಾದ ರಾಜ್ಯ ಸರ್ಕಾರದ ಅನ್ಯಾಯದ ಬೆಂಗಳೂರು ಮೆಟ್ರೋ ದರ ಏರಿಕೆಯ ವಿರುದ್ಧ ತಕ್ಷಣದ ಮಧ್ಯಪ್ರವೇಶವನ್ನು ಕೋರಿದ್ದೇನೆ. ಬೆಂಗಳೂರಿನಲ್ಲಿ ಈಗಾಗಲೇ ಭಾರತದಲ್ಲಿ ಅತ್ಯಂತ ದುಬಾರಿ ಮೆಟ್ರೋ ದರಗಳಿವೆ ಎಂದು ನಾನು ಗಮನಸೆಳೆದಿದ್ದೇನೆ. ಈ ಹೆಚ್ಚಳವು ಲಕ್ಷಾಂತರ ನಾಗರಿಕರಿಗೆ ಸಾರ್ವಜನಿಕ ಸಾರಿಗೆಯನ್ನು ತಲುಪಲು ಕಷ್ಟವಾಗುತ್ತದೆ ಮತ್ತು ಅದರ ಉದ್ದೇಶವನ್ನು ವಿಫಲಗೊಳಿಸುತ್ತದೆ. ಪ್ರಸ್ತಾವಿತ ಹೆಚ್ಚಳವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಅವರು ಸೂಚನೆ ನೀಡಿದ್ದಾರೆ. ಇದು ಸೋಮವಾರದಿಂದ ಜಾರಿಗೆ ಬರುವುದಿಲ್ಲ. FFC ಯಲ್ಲಿನ ವೈಪರೀತ್ಯಗಳ ವೈಯಕ್ತಿಕ ಪರಿಶೀಲನೆಯನ್ನು ಸಹ ಅವರು ಭರವಸೆ…

Read More

ಬೆಂಗಳೂರು : ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಆರೋಗ್ಯ ಇಲಾಖೆಯಿಂದ ಸ್ಫೋಟಕ ಸಂಗತಿ ಹೊರಬಿದ್ದಿದೆ. ವರ್ಷದಲ್ಲಿ 1 ಲಕ್ಷಕ್ಕೂ ಹೆಚ್ಚು ಜನರಿಗೆ ಆತ್ಮಹತ್ಯೆ ಆಲೋಚನೆ ಬರುತ್ತಿವೆ. ಉದ್ಯಮಿ ಸಿ ಜೆ ರಾಯ್ ಆತ್ಮಹತ್ಯೆ ಬೆನ್ನಲ್ಲೇ ಇದೀಗ ಆರೋಗ್ಯ ಇಲಾಖೆ ಸ್ಫೋಟಕ ಮಾಹಿತಿ ಬಹಿರಂಗಗೊಳಿಸಿದೆ. ಈ ಕುರಿತು ಡಾಕ್ಟರ್ ಗುರುರಾಜ ಹೆಗಡೆ ಮಾಹಿತಿ ನೀಡಿದ್ದು , ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಹಿಡನ್ ಡಿಪ್ರೆಶನ್ ಪ್ರಕರಣ. ನೀವು ನಿಮಾನ್ಸ್ ನ ಟೆಲಿ ಮಾನಸ್ ವೆ ಜನರು ಸುಮಾರು 2 ಲಕ್ಷ 3 ಸಾವಿರಕ್ಕೂ ಹೆಚ್ಚು ಜನರು ಕರೆ ಮಾಡಿದ್ದಾರೆ. ತಮ್ಮ ಸಮಸ್ಯೆಗಳನ್ನು ಮನೋರೋಗಿಗಳು ಹೇಳಿಕೊಳ್ಳುತ್ತಿದ್ದಾರೆ. ಶೇಕಡಾ 49.86 ಪುರುಷರು ಶೇಕಡ 45.45 ಮಹಿಳೆಯರಲ್ಲಿ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ. ಒಂದು ಕಡೆ ಉದ್ಯಮದಲ್ಲಿ ನಷ್ಟ, ಒತ್ತಡ, ಕೌಟುಂಬಿಕ ಚಿಂತೆ, ಕೆಲಸ ಮಾಡುವ ಸ್ಥಳದಲ್ಲಿ ಒತ್ತಡ ಹೀಗೆ ಹತ್ತು ಹಲವು ಸಮಸ್ಯೆಗಳಿಂದ ಹಿಡನ್ ಡಿಪ್ರೆಶನ್ ನಿಂದ ಪುರುಷ ಮತ್ತು ಮಹಿಳೆಯರು ಬಳಲುತ್ತಿದ್ದಾರೆ. ತಮಗೆ ಅರಿವಿಲ್ಲದಂತೆ ಖಿನ್ನತೆಗೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು ಪ್ರಿಯಕರನೀಗಾಗಿ ಗಂಡನನ್ನು ಜೈಲಿಗೆ ಕಳುಹಿಸಲು ಪತ್ನಿ ಒಬ್ಬಳು ಬಾರಿ ಸ್ಕೆಚ್ ಹಾಕಿದ್ದಾಳೆ. ಪತಿಯನ್ನು ಕೊಲೆಗಾರನನ್ನಾಗಿ ಮಾಡಲು ಪತ್ನಿ ಪ್ಲಾನ್ ಮಾಡಿದ್ದಳು. ಅದರಂತೆ ಹೆಂಡತಿಯ ಖತರ್ನಾಕ್ ಪ್ಲಾನ್ ಇಂದ ಜೈಲು ಪಾಲದ ಪತಿ. ಆನೇಕಲ್ ನಲ್ಲಿ ಅಣ್ಣನ ಕೊಂದು ಆಂಥೋನಿ ಎಂಬಾತ ಜೈಲು ಪಾಲಾಗಿದ್ದಾನೆ. ಪ್ರಿಯಕರಣಿಗಾಗಿ ಗಂಡನನ್ನು ಪತ್ನಿ ಜೈಲಿಗೆ ಕಳುಹಿಸಿದ್ದಾಳ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದ್ದು, ಅಣ್ಣನನ್ನೇ ಕೊಂದು ತಮ್ಮ ಆಂಥೋನಿ ಜೈಲು ಸೇರಿದ್ದಾನೆ. ಆಂತೋನಿ ಪತ್ನಿ ರೋಜಿಗೆ ರಾಜೇಶ್ ಎಂಬಾತನ ಜೊತೆ ಲವ್ ಆಗಿದ್ದು ಪ್ರಿಯಕರನ ಜೊತೆಗೆ ಇರಲು ಗಂಡ ಆಂಥೋನಿ ಅಡ್ಡಿಯಾಗಿದ್ದ. ಕುಡಿತದ ನೆಪ ಒಡ್ಡಿ ಪತಿಯನ್ನು ರಿಹಾಬ್ ಸೆಂಟರ್ಗೆ ಪತ್ನಿ ದಾಖಲು ಮಾಡಿದ್ದಳು. 18 ತಿಂಗಳು ಬಳಿಕ ಪತಿ ಆಂಥೋನಿ ವಾಪಸ್ ಆಗಿದ್ದ. ಆತನ ಜೊತೆ ಜೀವನ ನಡೆಸಲು ಶರತ್ತು ಹಾಕಿದ್ದಳು. ತಾಯಿ ಅಣ್ಣ ತಮ್ಮ ಕೊಲ್ಲುವಂತೆ ಒತ್ತಡ ಹಾಕಿದ್ದಳು.…

Read More

ಬೆಂಗಳೂರು : ನಟ ನಟಿ ಸೇರಿದಂತೆ ನಿರ್ದೇಶಕರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕನಕಪುರದ ಶ್ರೀನಿವಾಸ್ ವಿರುದ್ಧ ಬೆಂಗಳೂರಿನ ಫಿಲಂ ಚೇಂಬರ್ ಗೆ ನಟ ನಿರ್ದೇಶಕ ಜೋಗಿ ಪ್ರೇಮ್ ದೂರು ಕೊಟ್ಟಿದ್ದಾರೆ. ನಿರ್ಮಾಪಕ ಕನಕಪುರ ಶ್ರೀನಿವಾಸ್ ಹೇಳಿಕೆಗೆ ಜೋಗಿ ಪ್ರೇಮ್ ತೀವ್ರವಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಎ ಪಿ ಅರ್ಜುನ್ ಅವರು ಕೂಡ ಶ್ರೀನಿವಾಸ್ ವಿರುದ್ಧ ದೂರು ನೀಡಿದ್ದಾರೆ. ಕಾಟನ್ ಪೇಟೆ ಚಿತ್ರದ ಆಡಿಯೋ ಲಾಂಚ್ ಸಂದರ್ಭದಲ್ಲಿ ನಿರ್ದೇಶಕ ನಟ ನಟಿಯರ ಮೇಲೆ ನಿರ್ಮಾಪಕ ಕನಕಪುರ ಶ್ರೀನಿವಾಸ ಬಹಿರಂಗ ವೇದಿಕೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು. ಪುನೀತ್ ರಾಜಕುಮಾರ್ ಜೋಗಿ ಪ್ರೇಮ್ ಎಪಿ ಅರ್ಜುನ್ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕರ ವಿರುದ್ಧ ಮಾತನಾಡಿದರು ಈ ನೆಲೆಯಲ್ಲಿ ಜೋಗಿ ಪ್ರೇಮ್ ಜಯಮಾಲಾ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದ್ದಾರೆ. ಕನಕಪುರ ಶ್ರೀನಿವಾಸ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೆಖಿಸಿದ್ದಾರೆ.

Read More