Author: kannadanewsnow05

ಕೊಪ್ಪಳ: ಕೊಪ್ಪಳದಲ್ಲಿ ಲವ್ ಜಿಹಾದ್ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಹಿಂದೂ ಅಪ್ರಾಪ್ತಿಯೊಂದಿಗೆ ಓಡಾಡುತ್ತಿದ್ದ ಮುಸ್ಲಿಂ ಯುವಕನಿಗೆ ಹಿಂದೂಪರ ಮುಖಂಡರು ಥಳಿಸಿದ ಘಟನೆರ ನಡೆದಿದೆ. ಮುಸ್ಲಿಂ ಯುವಕ ಸಮೀರ್ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿಂದೂಪರ ಮುಖಂಡರ ಮೇಲೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 8 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್‌ ಇಲಾಖೆ ನಡೆಗೆ ಹಿಂದೂಪರ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮೀರ್ ಹಿಂದೂ ಅಪ್ರಾಪ್ತಯ ಜೊತೆ ಸಲ್ಲಾಪವಾಡಿದ ಆರೋಪವಿದ್ದು, ಸಮೀರ್ ಮೊಬೈಲ್ ನಲ್ಲಿ ಎಲ್ಲವೂ ಇವೆ. ಆತನ ಮೇಲೆ ಕೇಸ್ ಮಾಡಿ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.

Read More

ಚೆನ್ನೈ: ಇತ್ತೀಚೆಗಷ್ಟೇ ಮುಕ್ತಾಯಗೊಂಡ ತಮಿಳುನಾಡು ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊಮ್ಮಿರುವ ಟಿವಿಕೆ ಸರ್ಕಾರ ರಚಿಸಲು ಅಗತ್ಯ ಸಂಖ್ಯಾಬಲ ಹೊಂದಿದೆ ಎಂಬುದನ್ನ ಮನವರಿಕೆ ಮಾಡಲು ನಟ ವಿಜಯ್‌ ಹೆಣಗಾಡುತ್ತಿದ್ದಾರೆ. ಇಂದು ಬೆಳಗ್ಗೆ ರಾಜ್ಯಪಾಲ ಆರ್‌. ವಿ ಅರ್ಲೇಕರ್‌ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ವಿಜಯ್‌, ತಮಗೆ ಮೊದಲು ಪದಗ್ರಹಣಕ್ಕೆ ಅವಕಾಶ ನೀಡಬೇಕೆಂದು ಮನವಿ ಮಾಡಿದರು. ತಾವು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ, ಸದನದಲ್ಲಿ ನಿಗದಿತ ಅವಧಿಯೊಳಗೆ ಬಹುಮತ ಸಾಬೀತುಪಡಿಸುವುದಾಗಿ ಭರವಸೆ ನೀಡಿದರು. ಚುನಾವಣೆಯಲ್ಲಿ ಅತಿದೊಡ್ಡ ಪಕ್ಷದ ನಾಯಕನಾಗಿ ತಮಗೆ ಸರ್ಕಾರ ರಚಿಸಲು ಮೊದಲ ಆದ್ಯತೆ ನೀಡಬೇಕು ಎಂಬುದು ಅವರ ಪ್ರಮುಖ ವಾದವಾಗಿತ್ತು. ಆದರೆ, ವಿಜಯ್‌ ಅವರ ಈ ವಾದಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗಿದೆ. ಕೇವಲ ಅತಿದೊಡ್ಡ ಪಕ್ಷ ಎಂಬ ಕಾರಣಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ, ಬದಲಿಗೆ ಸ್ಪಷ್ಟ ಬಹುಮತಕ್ಕೆ ಅಗತ್ಯವಿರುವ ಸಂಖ್ಯಾಬಲದ ಬೆಂಬಲವನ್ನು ಮೊದಲೇ ತೋರಿಸಬೇಕು ಎಂದು ರಾಜ್ಯಪಾಲರು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ, ತಾಂತ್ರಿಕ ಕಾರಣಗಳನ್ನು ನೀಡಿ ರಾಜ್ಯಪಾಲರು…

Read More

ಕಾರವಾರ : ಕಾರವಾರದಲ್ಲಿ ಘೋರ ಘಟನೆ ನಡೆದಿದ್ದು, ಕಾರವಾರದ ಪ್ರಸಿದ್ಧ ಪ್ರವಾಸಿ ತಾಣವಾದ ಮುಂಡಳ್ಳಿ ನಸ್ತಾರ್ ಬೀಚ್‌ನಲ್ಲಿ ಬುಧವಾರ ಸಂಜೆ ಅರಬ್ಬಿ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.ಮೃತಪಟ್ಟವರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಅಫ್ರೋಜ್ (34) ಮತ್ತು ರಿಜ್ವಾನ್ ಅಹ್ಮದ್ ಸಾಕೀರ್ (27) ಎಂದು ಗುರುತಿಸಲಾಗಿದೆ. ಇವರು ಸ್ಥಳೀಯ ಗಾರ್ಮೆಂಟ್ಸ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ಸುಮಾರು 4 ಗಂಟೆಯ ಸುಮಾರಿಗೆ ಏಳು ಜನರ ತಂಡವೊಂದು ವಾಯುವಿಹಾರಕ್ಕಾಗಿ ನಸ್ತಾರ್ ಬೀಚ್‌ಗೆ ತೆರಳಿತ್ತು. ಈ ಪೈಕಿ ಮೂವರು ಸಮುದ್ರ ತೀರದಲ್ಲಿ ಕುಳಿತುಕೊಂಡಿದ್ದರೆ, ಉಳಿದ ನಾಲ್ವರು ಸಮೀಪದ ಬಂಡೆಯ ಮೇಲೆ ನಿಂತು ಸಮುದ್ರದ ಸೌಂದರ್ಯ ವೀಕ್ಷಿಸುತ್ತಿದ್ದರು. ಈ ವೇಳೆ ಏಕಾಏಕಿ ಅಪ್ಪಳಿಸಿದ ಬೃಹತ್ ಅಲೆಯೊಂದು ಬಂಡೆಯ ಮೇಲಿದ್ದ ಇಬ್ಬರನ್ನು ಸಮುದ್ರಕ್ಕೆ ಎಳೆದುಕೊಂಡು ಹೋಗಿದೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ನೂರಾರು ಜನರು ಸ್ಥಳದಲ್ಲಿ ಜಮಾಯಿಸಿದರು. ಸಾಮಾಜಿಕ ಕಾರ್ಯಕರ್ತ ಸೌದ್ ಗವಾಹಿ ಅವರು ಸಿಹಾನ್ ಹಾಗೂ ಸಾಜಪ್ ಎಂಬವರ…

Read More

ಚಿಕ್ಕಬಳ್ಳಾಪುರ : ರಾಜ್ಯದಲ್ಲೊಂದು ವಿಚಿತ್ರವಾದ ಘಟನೆ ನಡೆದಿದ್ದು, ದೇವನಹಳ್ಳಿಯ ಯುವತಿಯೊಬ್ಬಳು ತಾಯಿಯ ತಂಗಿಯ ಮಗನನ್ನೇ (ವರಸೆಯಲ್ಲಿ ತಮ್ಮ) ಪ್ರೀತಿಸಿ ಮದುವೆಯಾಗಿರುವ ವಿಚಿತ್ರ ವಿದ್ಯಮಾನ ಬೆಳಕಿಗೆ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಾವಕನಹಳ್ಳಿಯ ಶಶಿಕಲಾ (29), ಹೊಸಕೋಟೆ ತಾಲ್ಲೂಕಿನ ಹಳೆಊರಿನ ಪ್ರವೀಣ್ (24) ಎಂಬಾತನನ್ನು ಮದುವೆಯಾಗುವ ಮೂಲಕ ಸಮಾಜ ಮತ್ತು ಕುಟುಂಬದ ವಿರೋಧದ ನಡುವೆಯೂ ಒಂದಾಗಿದ್ದಾರೆ. ಅಷ್ಟೇ ಅಲ್ಲದೆ, ತಮಗೆ ರಕ್ಷಣೆ ನೀಡುವಂತೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕಚೇರಿ ಮತ್ತು ಮಹಿಳಾ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಶಶಿಕಲಾ ಮತ್ತು ಪ್ರವೀಣ್ ಸಂಬಂಧಿಕರಾಗಿದ್ದು, ಶಶಿಕಲಾಳ ತಾಯಿಯ ತಂಗಿಯ ಮಗನೇ ಪ್ರವೀಣ್. ಅಂದರೆ, ವರಸೆಯಲ್ಲಿ ಇವರಿಬ್ಬರು ಅಕ್ಕ-ತಮ್ಮನಾಗಬೇಕು. ಇವರ ಪ್ರೀತಿಯ ವಿಷಯ ತಿಳಿದ ಪೋಷಕರು, ಈ ಸಂಬಂಧ ಸಮಾಜದಲ್ಲಿ ಒಪ್ಪಿತವಲ್ಲ ಎಂದು ವಿರೋಧಿಸಿದ್ದರು. ಅಲ್ಲದೆ, ಶಶಿಕಲಾಗೆ ಬೇರೊಬ್ಬ ಹುಡುಗನೊಂದಿಗೆ ನಿಶ್ಚಿತಾರ್ಥ ನಡೆಸಿ ಇದೇ ಮೇ 29ಕ್ಕೆ ಮದುವೆ ದಿನಾಂಕವನ್ನೂ ನಿಗದಿಪಡಿಸಿದ್ದರು. ಆದರೆ ಮದುವೆಗೆ ಕೆಲವೇ ದಿನ ಬಾಕಿ ಇರುವಾಗ ಶಶಿಕಲಾ…

Read More

ಬೆಂಗಳೂರು : ಬೆಂಗಳೂರಿನ IPL ಫೈನಲ್ ಪಂದ್ಯವನ್ನು ಅಹ್ಮದಾಬಾದ್ ಗೆ ಶಿಫ್ಟ್ ಮಾಡಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಭದ್ರತೆ ವಿಚಾರವಾಗಿ ಯಾವುದೇ ದೂರು ಬಂದಿಲ್ಲ ಬೆಂಗಳೂರಲ್ಲಿ 5 ಪಂದ್ಯ ನಡೆದಿದೆ. ಭದ್ರತೆ ವಿಚಾರ ಕಾರಣ ಅಲ್ಲ. RCB ಅಥವಾ ಪೊಲೀಸರಿಂದ ಯಾವುದೇ ದೂರು ಬಂದಿಲ್ಲ ಎಂದು ತಿಳಿಸಿದರು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ 33 ಸಾವಿರ ಆಸನಗಳಿವೆ. ಸ್ಪಾನ್ಸರ್ ಗಳಿಗೆ 7 ರಿಂದ 8 ಸಾವಿರ ಪಾಸ್ ಕೊಡಬೇಕಾಗುತ್ತದೆ. ಹೀಗಾಗಿ ಅವರೇ 7 ರಿಂದ 8 ಸಾವಿರ ಸೀಟ್ ಬ್ಲಾಕ್ ಮಾಡುತ್ತಾರೆ. ಉಳಿಯೋದು 25 ಸಾವಿರ ಸೀಟ್ ಹೀಗಾಗಿ ವರ್ಕೌಟ್ ಆಗಲ್ಲ. ಮೊದ್ಲೇ ಇದೆಲ್ಲವನ್ನು ವರದಿ ಮಾಡಿ ನಿರ್ಧಾರಿಸಿದ್ದಾರೆ ಅನಿಸುತ್ತೆ. ಶಾಸಕರ ಟಿಕೆಟ್ ದುರ್ಬಳಕೆಯಿಂದ ಕೈತಪ್ಪಿದೆಯಾ ಎಂಬ ವಿಚಾರವಾಗಿ ಶಾಸಕರ ಪಾಸ್ ಗು ಪಂದ್ಯ ಸ್ಥಳತಂರಕ್ಕೂ ಸಂಬಂಧ ಇಲ್ಲ ಎಂದು ತಿಳಿಸಿದರು.

Read More

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠವು ಮೇ 26ಕ್ಕೆ ಮುಂದೂಡಿ ಇಂದು ಆದೇಶ ಹೊರಡಿಸಿದೆ. ತಮ್ಮ ವಿರುದ್ಧದ ಜೀವಾವಧಿ ಶಿಕ್ಷೆಗೆ ತಡೆ ನೀಡಬೇಕು ಹಾಗೂ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಕುಲಕರ್ಣಿ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಸಿಬಿಐನಿಂದ ಕಾಲಾವಕಾಶದ ಕೋರಿಕೆ: ಇಂದು ಈ ಅರ್ಜಿಯ ವಿಚಾರಣೆ ನಡೆದ ಸಂದರ್ಭದಲ್ಲಿ, ಕೇಂದ್ರ ತನಿಖಾ ದಳದ (CBI) ಪರ ವಕೀಲರು ಹಾಜರಾಗಿ, ಅರ್ಜಿದಾರರು ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ಕಾಲಾವಕಾಶದ ಅಗತ್ಯವಿದೆ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ತನಿಖಾ ಸಂಸ್ಥೆಯ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್, ಆಕ್ಷೇಪಣೆ ಸಲ್ಲಿಸಲು ಸಮಯ ನೀಡಿ ವಿಚಾರಣೆಯನ್ನು ಮುಂದಿನ ದಿನಾಂಕಕ್ಕೆ ನಿಗದಿಪಡಿಸಿತು. ಸಹ ಆರೋಪಿ ಟಿಂಗರಿಕರ ಅರ್ಜಿಗೂ ಸಿಗದ ಸಮ್ಮತಿ: ಇದೇ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಚನ್ನಕೇಶವ ಟಿಂಗರಿಕರ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನೂ…

Read More

ತೆಲಂಗಾಣ : ಮಹಿಳಾ ಸುರಕ್ಷತೆ ಬಗ್ಗೆ ಮಹಿಳಾ ಅಧಿಕಾರಿಯೊಬ್ಬರು ಮಾರು ವೇಷದಲ್ಲಿ ಬೀದಿಯಲ್ಲಿ ನಿಂತು ಪರಿಶೀಲನೆ ನಡೆಸಿದಾಗ ಅಘಾತಕಾರಿ ಘಟನೆ ನಡೆದಿದ್ದು, ಕೇವಲ ಮೂರು ಗಂಟೆಗಳಲ್ಲಿ ಸುಮಾರು 40 ಮಂದಿ ಅವರಿಗೆ ಕಿರುಕುಳ ನೀಡಿದ್ದಾರೆ. ಈ ಘಟನೆ ನಡೆದಿರುವುದು ಹೈದ್ರಾಬಾದ್ ನಲ್ಲಿ. ತೆಲಂಗಾಣದ ಮಹಿಳಾ ಐಪಿಎಸ್ ಅಧಿಕಾರಿ ಸುಮತಿ ಅವರು ಮೇ 1 ರಂದು ಮಲ್ಕಾಜ್‌ಗಿರಿ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡರು. ಅಂದೇ ಮಧ್ಯರಾತ್ರಿ, ಅವರು ಮಹಿಳಾ ಸುರಕ್ಷತೆಯನ್ನು ಪರೀಕ್ಷಿಸಲು ಮುಂದಾದರು. ಹೈದರಾಬಾದ್‌ನ ಜನನಿಬಿಡ ದಿಲ್‌ಸುಖ್‌‌ನಗರ ಬಸ್ ನಿಲ್ದಾಣದಲ್ಲಿ ಸಾಮಾನ್ಯ ಮಹಿಳೆಯಂತೆ, ಮಾಮೂಲಿ ಬಟ್ಟೆ ಧರಿಸಿ ನಿಂತಿದ್ದರು. ಯಾವುದೇ ಭದ್ರತೆ, ಮುಖಕ್ಕೆ ಮಾಸ್ಕ್ ಇಲ್ಲದೆ ಮಧ್ಯರಾತ್ರಿ 12:30 ರಿಂದ 3:30 ರವರೆಗೆ ಅಲ್ಲೇ ಇದ್ದರು. ಅವರು ಒಂಟಿಯಾಗಿರುವುದನ್ನು ನೋಡಿ, ಮೂರು ಗಂಟೆಗಳಲ್ಲಿ ಸುಮಾರು 40 ಪುರುಷರು ಕಿರುಕುಳ ನೀಡಲು ಯತ್ನಿಸಿದರು. ‘ರಾತ್ರಿ ಬರ್ತೀಯಾ? ರೇಟ್ ಎಷ್ಟು?’ ಎಂದು ಅಸಭ್ಯವಾಗಿ ಮಾತನಾಡಿಸಿ ಪೇಚಿಗೆ ಸಿಲುಕಿಸಿದರು. ಕಿರುಕುಳ ನೀಡಿದವರಲ್ಲಿ ಡ್ರಗ್ಸ್ ವ್ಯಸನಿಗಳಿಂದ ಹಿಡಿದು,…

Read More

ಪಶ್ಚಿಮಬಂಗಾಳ : ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (PA) ಚಂದ್ರನಾಥ್ ಭಟ್ಟಾಚಾರ್ಯ ಅವರ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರವು ಈಗ ತನಿಖೆಯನ್ನು ಚುರುಕುಗೊಳಿಸಲು ವಿಶೇಷ ತನಿಖಾ ತಂಡವನ್ನು (SIT) ರಚನೆ ಮಾಡಿದೆ. SIT ರಚನೆ ಮತ್ತು ತನಿಖೆಯ ಉದ್ದೇಶ ಚಂದ್ರನಾಥ್ ಭಟ್ಟಾಚಾರ್ಯ ಅವರ ಸಾವಿನ ಸುತ್ತ ಹಲವಾರು ಅನುಮಾನಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ಪ್ರಕರಣದ ಆಳವಾದ ತನಿಖೆ ನಡೆಸಲು ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ SIT (Special Investigation Team) ಅನ್ನು ರಚಿಸಲಾಗಿದೆ. ಈ ತಂಡವು ಘಟನಾ ಸ್ಥಳದ ಮಹಜರು, ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಚಂದ್ರನಾಥ್ ಅವರ ಕೊನೆಯ ಕ್ಷಣಗಳ ಸಂಪರ್ಕಗಳ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸಲಿದೆ. ಪ್ರಕರಣದ ಹಿನ್ನೆಲೆ ಕೆಲವು ದಿನಗಳ ಹಿಂದೆ ಸುವೇಂದು ಅಧಿಕಾರಿ ಅವರ ನಂಬಿಕಸ್ತ ಆಪ್ತರೆಂದೇ ಗುರುತಿಸಿಕೊಂಡಿದ್ದ ಚಂದ್ರನಾಥ್ ಅವರ ಮೃತದೇಹವು ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು.…

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮೇ 10ರಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಲಿದ್ದು, ನಗರದಲ್ಲಿ ಎರಡು ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಪ್ರಮುಖವಾಗಿ ಅಧ್ಯಾತ್ಮಿಕ ಕೇಂದ್ರವಾದ ‘ಆರ್ಟ್ ಆಫ್ ಲಿವಿಂಗ್’ ಸಂಸ್ಥೆಯ ಮೈಲಿಗಲ್ಲಿನ ಸಂಭ್ರಮಾಚರಣೆಗೆ ಅವರು ಸಾಕ್ಷಿಯಾಗಲಿದ್ದಾರೆ. ಆರ್ಟ್ ಆಫ್ ಲಿವಿಂಗ್ 45ರ ಸಂಭ್ರಮ: ಶ್ರೀ ರವಿಶಂಕರ್ ಗುರೂಜಿ ಅವರು ಸ್ಥಾಪಿಸಿದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಯಶಸ್ವಿಯಾಗಿ 45 ವರ್ಷಗಳನ್ನು ಪೂರೈಸುತ್ತಿದ್ದು, ಇದರ ಜತೆಗೇ ಗುರೂಜಿಯವರ 70ನೇ ಜನ್ಮದಿನದ ಅಂಗವಾಗಿ ಬೃಹತ್ ಸಮಾರಂಭವನ್ನು ಆಯೋಜಿಸಲಾಗಿದೆ. ಈ ದ್ವಿಗುಣ ಸಂಭ್ರಮದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಸಂಸ್ಥೆಯ ಅಧ್ಯಾತ್ಮಿಕ ಮತ್ತು ಸಾಮಾಜಿಕ ಕೊಡುಗೆಗಳನ್ನು ಗೌರವಿಸಲಿದ್ದಾರೆ. ನೂತನ ಧ್ಯಾನ ಮಂದಿರ ಲೋಕಾರ್ಪಣೆ: ಈ ಭೇಟಿಯ ವೇಳೆ ಪ್ರಧಾನಿಯವರು ವಿವಿಧ ಸಾಂಪ್ರದಾಯಿಕ ಕಲೆಗಳಿಂದ ಅದ್ಭುತವಾಗಿ ಸಿಂಗಾರಗೊಂಡಿರುವ ನೂತನ ಧ್ಯಾನ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಮೇ 10ರಿಂದ ಪ್ರಾರಂಭವಾಗಿ ಮೇ 25ರವರೆಗೆ ಆಶ್ರಮದಲ್ಲಿ ನಿರಂತರವಾಗಿ ವಿಶೇಷ ಕಾರ್ಯಕ್ರಮಗಳು, ಸಾಂಸ್ಕೃತಿಕ ವೈಭವ…

Read More

ಧಾರವಾಡ : ಧಾರವಾಡದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ನೀರಿನ ಗುಂಡಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪಿರುವ ಘಟನೆ ಧಾರವಾಡ ತಾಲೂಕಿನ ಮನಸೂರು ಗ್ರಾಮದಲ್ಲಿ ನಡೆದಿದೆ. ಕುಮಾರ್ ಮುದುಕಣ್ಣನವರ್ (8) ಮತ್ತು ಪ್ರಥಮ್ (8) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಆಟವಾಡುತ್ತ ನೀರಿನ ಗುಂಡಿ ಬಳಿಗೆ ಹೋಗಿದ್ದಾಗ ಈ ದುರಂತ ಸಂಭವಿಸಿದೆ. ಮನೆ ನಿರ್ಮಿಸಲು ತೆಗೆದಿದ್ದ ಗುಂಡಿಯಲ್ಲಿ ಇಬ್ಬರು ಬಾಲಕರು ಬಿದ್ದು ಸಾವನಪ್ಪಿದ್ದಾರೆ. ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತ ಬಾಲಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Read More