Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು, ಮೇ20: ಯುಪಿಎ ಕಾಲದಲ್ಲಿ 400 ರೂ. ಇದ್ದ ಅಡುಗೆ ಅನಿಲ ಸಿಲಿಂಡರ್ ದರ ಅಲ್ಪ ಏರಿಕೆ ಮಾಡಿದ್ದಕ್ಕೆ ತಲೆಯ ಮೇಲೆ ಗ್ಯಾಸ್ ಸಿಲಿಂಡರ್ ಹೊತ್ತು ಪ್ರತಿಭಟನೆ ಮಾಡಿದ ಬಿಜೆಪಿ ನಾಯಕರು ಈಗ ಎಲ್ಲಿ ಹೋದರು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರವನ್ನು ಪದೇ ಪದೇ ಏರಿಸುತ್ತಿರುವ ಕೇಂದ್ರ ಎನ್.ಡಿ.ಎ. ಸರ್ಕಾರದ ವಿರುದ್ಧ ಧ್ವನಿ ಎತ್ತಲಾಗದ ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ಸಾಧನೆ ಸಮಾವೇಶದ ಬಗ್ಗೆ ಮಾತನಾಡುತ್ತಾರೆ. 2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂಬುದು ಬಿಜೆಪಿ ನಾಯಕರಿಗೆ ಮನವರಿಕೆಯಾಗಿದೆ ಹೀಗಾಗಿಯೇ ಹೌಹಾರುತ್ತಿದ್ದಾರೆ ಎಂದರು. ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಲಾಗದೆ, ಪ್ರಶ್ನೆಪತ್ರಿಕೆ ಲೀಕ್ ಆದರೂ ಸಚಿವ ರಾಜೀನಾಮೆ ಪಡೆಯದ, ಕ್ರಮ ಕೈಗೊಳ್ಳದೆ 25 ಲಕ್ಷ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚಲ್ಲಾಟ ಆಡುತ್ತಿರುವ ಕೇಂದ್ರ ಸರ್ಕಾರವನ್ನು ಪ್ರಶ್ನಿಸಲಿ ಎಂದರು. ರಾಜ್ಯ ಸರ್ಕಾರ…

Read More

ತುಮಕೂರು : ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಮಾಡಿ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ತಮ್ಮ ಹೇಳಿಕೆಗೆ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ಕೊಟ್ಟಿದ್ದು, ತುಮಕೂರು ಒಂದು ಕಾನ್ಸೆಪ್ಟ್ ಅಷ್ಟೇ ತುಮಕೂರು ಹೆಸರು ಬದಲಾವಣೆ ಮಾಡಿ ಅಂತ ಹೇಳಿದ್ದಿನ? ತುಮಕೂರು ಹೆಸರು ಬದಲಾವಣೆ ಆಗಲ್ಲ ವಿಸ್ತೀರ್ಣವೂ ಬದಲಾಗಲ್ಲ ತುಮಕೂರು ಹೇಗಿರುತ್ತೋ ಹಾಗೆ ಇರಲಿದೆ ಎಂದು ಸ್ಪಷ್ಟಪಡಿಸಿದರು. ಬೆಂಗಳೂರಿನ ಒಂದು ಭಾಗ ಆದಾಗ ಹೂಡಿಕೆಗೆ ಆಲೋಚನೆ ಬರುತ್ತೆ. ನಾವು ಅಲ್ಲಿ ಹೋಗಿ ಇನ್ವೆಸ್ಟ್ ಮಾಡಬೇಕೆಂಬ ಆಲೋಚನೆ ಬರುತ್ತದೆ. ಅಷ್ಟು ಬಿಟ್ಟರೆ ನಾವು ಯಾವುದನ್ನು ಬದಲಾಯಿಸಲ್ಲ. ತುಮಕೂರು ಹೆಸರು ಬದಲಾಗಲ್ಲ ದೆಹಲಿಯನ್ನು ಮೂರು ಭಾಗ ಮಾಡಿಲ್ವಾ? ಅದನ್ನು ಬದಲಾಯಿಸಿದ್ದಾರ? ತುಮಕೂರಿನ ಒಂದು ಕಡ್ಡಿ ಕೂಡ ಅಲಗಾಡುವುದಿಲ್ಲ. ತುಮಕೂರು ಹಾಗೆ ಇರುತ್ತೆ ತುಮಕೂರು ತಾಲೂಕು ಸಹ ಹಾಗೆ ಇರುತ್ತೆ. ಬೆಂಗಳೂರಿಗೆ ಒಂದು ಭಾಗ ಅಂತ ಮಾಡಿದರೆ ಹೂಡಿಕೆ ಮಾಡುತ್ತಾರೆ. ನಮಗೂ ಕೂಡ ತುಮಕೂರು ಎಲಿವೇಟ್ ಆಗುತ್ತೆ ಅನ್ನೋ…

Read More

ನವದೆಹಲಿ: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಿಂದ ಕೊಂಚ ಸಮಾಧಾನಕರ ಸುದ್ದಿ ಸಿಕ್ಕಿದೆ. ಚುನಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಮತ್ತೆ ಎರಡು ತಿಂಗಳ ಕಾಲಾವಕಾಶವನ್ನು ನೀಡಿ ಮಹತ್ವದ ಆದೇಶ ಹೊರಡಿಸಿದೆ. ಈ ಹಿಂದೆ ಜಿಬಿಎ ಚುನಾವಣೆಯನ್ನು ಜೂನ್ ಅಂತ್ಯದೊಳಗೆ ನಡೆಸಿ ಮುಗಿಸಬೇಕು ಎಂದು ಸುಪ್ರೀಂ ಕೋರ್ಟ್‌ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಆದರೆ, ಪ್ರಸ್ತುತ ಸಂದರ್ಭದಲ್ಲಿ ನಿಗದಿತ ಅವಧಿಯೊಳಗೆ ಚುನಾವಣೆ ನಡೆಸುವುದು ಕಷ್ಟಸಾಧ್ಯ ಎಂದು ಮನಗಂಡಿದ್ದ ಕರ್ನಾಟಕ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ, ಸುಪ್ರೀಂ ಕೋರ್ಟ್‌ಗೆ ಜಂಟಿ ಮನವಿ ಸಲ್ಲಿಸಿದ್ದವು. ಬೆಂಗಳೂರಿನ ವಿಸ್ತರಣೆ ಮತ್ತು ಆಡಳಿತಾತ್ಮಕ ಸಿದ್ಧತೆಗಳ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಇನ್ನು ಹೆಚ್ಚಿನ ಸಮಯದ ಅಗತ್ಯವಿದೆ ಎಂದು ಸರ್ಕಾರ ಪ್ರತಿಪಾದಿಸಿತ್ತು. ಇದಕ್ಕಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ರಾಜ್ಯ ಸರ್ಕಾರ, ಪ್ರಸ್ತುತ ಡೆಡ್‌ಲೈನ್‌ನಿಂದ ಹೆಚ್ಚುವರಿಯಾಗಿ ಮೂರು ತಿಂಗಳ ಕಾಲಾವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ…

Read More

ಶಿವಮೊಗ್ಗ; ಮೇ. 20 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಶಿವಮೊಗ್ಗ ಜಿಲ್ಲೆಯ 2023ರ ನಂತರ ಸ್ನಾತಕೋತ್ತರ ಪದವಿ/ ಪದವಿ/ ಡಿಪ್ಲೋಮಾ ಪಡೆದ ಅರ್ಹ ನಿರುದ್ಯೋಗಿಗಳು ಪದವಿ ಪಡೆದು 6 ತಿಂಗಳಾದರೂ ಉದ್ಯೋಗ ಪಡೆಯದವರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಫಲಾನುಭವಿಗಳು ತ್ರೈಮಾಸಿಕ ಬದಲಾಗಿ ಪ್ರತಿ ತಿಂಗಳು 25ರೊಳಗಾಗಿ ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ನೀಡಬೇಕು. ಇಲ್ಲದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮಾ ಆಗುವುದಿಲ್ಲ. ಪ್ರತಿ ತಿಂಗಳು ಪದವೀಧರರಿಗೆ ರೂ. 3000/- ಹಾಗೂ ಡಿಪ್ಲೋಮಾದಾರರಿಗೆ ರೂ. 1500/- ನಿರುದ್ಯೋಗ ಭತ್ಯೆ ನೀಡಲಾಗುವುದು.

Read More

ಶಿವಮೊಗ್ಗ; ಮೇ.20 (ಕರ್ನಾಟಕ ವಾರ್ತೆ): ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜೂನ್ 01 ರಿಂದ 31 ದಿನಗಳ ಕಾಲ ನಿರುದ್ಯೋಗಿ ಯುವಕರಿಗೆ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಶಿಬಿರದಲ್ಲಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿಯೊಂದಿಗೆ ಗಿಂಬಲ್ ಹಾಗೂ ಡ್ರೋಣ್ ಬಳಕೆ, ಮಾಡೆಲ್ ಫೋಟೋ ಶೂಟ್, ಪ್ರಾಡೆಕ್ಟ್ ಫೋಟೋಗ್ರಫಿ, ಔಟ್ ಡೋರ್ ಫೋಟೋಶೂಟ್, ಸ್ಟುಡಿಯೋ ಸೆಟ್ ಅಫ್, ಫ್ರೀ ವೆಡ್ಡಿಂಗ್ ಶೂಟ್, ವೆಡ್ಡಿಂಗ್ ಶೂಟ್, ಫೋಟೋ ಮತ್ತು ವಿಡಿಯೋ ಎಡಿಟಿಂಗ್, ಫೋಟೋಶಾಪ್, ಕರಿಷ್ಮಾ ಆಲ್ಬಂ ಬಗ್ಗೆ ಪ್ರಾಯೋಗಿಕವಾಗಿ ತರಬೇತಿ ನೀಡಲಾಗುವುದು. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು.…

Read More

ಬೆಂಗಳೂರು : ಬಿಡದಿ ಟೌನ್‌ಶಿಪ್ ಕುರಿತು ರೈತರನ್ನು ಉದ್ದೇಶಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು ದೇವೇಗೌಡರ ಕುಟುಂಬ ಹಾಸನದಲ್ಲಿ ಜಮೀನು ತೆಗೆದುಕೊಳ್ಳಬಹುದಿತ್ತಲ್ಲ? ಅವರು ಇಲ್ಲೇ ನೂರಾರು ಬೇಕೆರೆ ಜಮೀನು ತೆಗೆದುಕೊಂಡಿದ್ದಾರೆ. ಕೇತಗಾನಹಳ್ಳಿಯಲ್ಲಿ ಇರುವ ಜಮೀನು ಬಹು ಸ್ವಾಧೀನ ಮಾಡಲು ಸೇರಿಸಿಲ್ಲ. ರೈತರಿಗೆ 8000 ಅಡಿ ಭೂಮಿ ಕೊಡಲು ನಿರ್ಧರಿಸಿದೆ ಅಂತ ಎಚ್ ಡಿ ಕುಮಾರಸ್ವಾಮಿ ಹೇಳಿದ್ದರು. ಬಿಡದಿ ಟೌನ್ ಶಿಪ್ ಕುರಿತು ರೈತರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದ್ದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಿದ ಬಳಿಕ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಜಮೀನುಗಳ ಮೌಲ್ಯ ಹೆಚ್ಚಾಗಿದೆ. ಬೆಂಗಳೂರು ಎಂಬುವುದು ಒಂದು ಬ್ರಾಂಡ್ ನಾವೆಲ್ಲ ಈಗ ಬೆಂಗಳೂರು ಜಿಲ್ಲೆಯವರು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಈ ವಿಚಾರದಲ್ಲಿ ಕೋರ್ಟಿಗೆ ಹೋಗಲಿ ಏನಾದರೂ ಮಾಡಿಕೊಳ್ಳಲಿ ಮೂರು ಮೂರು ಹಳ್ಳಿಗಳನ್ನು ಸೇರಿಸಿ ಡಿನೋಟಿಫೈ ಮಾಡುತ್ತೇವೆ. ಒಂದೊಂದೇ ಕ್ಲಿಯರ್ ಮಾಡುತ್ತೇವೆ. ಬಿಡದಿಗೆ ಗ್ರೇಟರ್ ಬೆಂಗಳೂರು ಎಂದೆ ಹೆಸರಿಡುತ್ತೇನೆ.…

Read More

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸೆನ್ಸೇಷನ್ ಸೃಷ್ಟಿಸುವ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಸ್ನೇಹದ ಜುಗಲ್‌ಬಂದಿ ಈಗ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. ಪ್ರಧಾನಿ ಮೋದಿ ಅವರು ಇಟಲಿಯ ರಾಜಧಾನಿ ರೋಮ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಮೆಲೋನಿ ಅವರಿಗೆ ಭಾರತದ ಪ್ರಸಿದ್ಧ ‘ಮೆಲೋಡಿ’ ಚಾಕೋಲೇಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಸದ್ಯ ಈ ಅಪರೂಪದ ಕ್ಷಣದ ವೀಡಿಯೋ ಇಂಟರ್ನೆಟ್‌ನಲ್ಲಿ ಸಕತ್ ವೈರಲ್ ಆಗುತ್ತಿದ್ದು, ನೆಟ್ಟಿಗರ ಗಮನ ಸೆಳೆದಿದೆ. ವಿಶ್ವದ ಇಬ್ಬರು ಪ್ರಭಾವಿ ನಾಯಕರಾದ ಮೋದಿ ಮತ್ತು ಮೆಲೋನಿ ನಡುವಿನ ಉತ್ತಮ ಬಾಂಧವ್ಯ ಇಡೀ ಜಗತ್ತಿಗೆ ತಿಳಿದಿದೆ. ಇವರಿಬ್ಬರ ಹೆಸರನ್ನು ಒಟ್ಟಿಗೆ ಸೇರಿಸಿ ಸಾಮಾಜಿಕ ಜಾಲತಾಣಗಳಲ್ಲಿ ‘ಮೆಲೋಡಿ’ (Meloni + Modi = Melodi) ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ನೆಟ್ಟಿಗರು ಟ್ರೆಂಡ್ ಮಾಡುತ್ತಿದ್ದರು. ಇದೀಗ ಪ್ರಧಾನಿ ಮೋದಿ ಅವರು ನಿಜವಾಗಿಯೂ ‘ಮೆಲೋಡಿ’ ಚಾಕೋಲೇಟ್ ಅನ್ನು ಉಡುಗೊರೆಯಾಗಿ ನೀಡುವ ಮೂಲಕ ನೆಟ್ಟಿಗರ ಈ ಕ್ರಿಯೇಟಿವಿಟಿಗೆ ಸ್ವತಃ ತಾವೇ…

Read More

ಬೆಂಗಳೂರು: ಕೊಡಗಿನ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಇತ್ತೀಚೆಗೆ ನಡೆದ ಪ್ರವಾಸಿ ಮಹಿಳೆ ಮತ್ತು ಆನೆ ಸಾವಿನ ದುರದೃಷ್ಟಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಯಾರೂ ಊಹಿಸದ ರೀತಿಯಲ್ಲಿ ಅನಿರೀಕ್ಷಿತವಾಗಿ ನಡೆದಿದೆ ಎಂದು ವಿಷಾದಿಸಿರುವ ಅವರು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಆನೆ ಶಿಬಿರದಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಆದೇಶಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಆನೆ ಶಿಬಿರಗಳಿಗೆ ಭೇಟಿ ನೀಡುವ ಪ್ರವಾಸಿಗರ ಸುರಕ್ಷತೆಯೇ ನಮಗೆ ಮುಖ್ಯವಾಗಿದೆ. ಹೀಗಾಗಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ಪ್ರವಾಸಿಗರು ಆನೆಗಳ ತೀರ ಸಮೀಪಕ್ಕೆ ಹೋಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ವನ್ಯಜೀವಿಗಳ ವೀಕ್ಷಣೆಯ ಸಂದರ್ಭದಲ್ಲಿ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಅವರು ಸ್ಪಷ್ಟಪಡಿಸಿದರು. ಎಸ್‌ಒಪಿ (SOP) ಪಾಲನೆಗೆ ಕಟ್ಟುನಿಟ್ಟಿನ ಆದೇಶ: ದುಬಾರೆ ಆನೆ ಶಿಬಿರ ಸೇರಿದಂತೆ ರಾಜ್ಯದ ಎಲ್ಲಾ ಆನೆ ಶಿಬಿರಗಳಲ್ಲಿ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು (SOP) ಅತ್ಯಂತ…

Read More

ಬೆಂಗಳೂರು : ಬೆಂಗಳೂರಿನ ಎನ್‌ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ವಿಶೇಷ ನ್ಯಾಯಾಲಯವು ದೇಶದ ಸುರಕ್ಷತೆಗೆ ಧಕ್ಕೆ ತರುವ ಕೃತ್ಯದಲ್ಲಿ ತೊಡಗಿದ್ದ ಆರೋಪಿಗೆ ಮಹತ್ವದ ಶಿಕ್ಷೆ ಪ್ರಕಟಿಸಿದೆ. ನಿಷೇಧಿತ ತಾಲಿಬಾನ್​ ಹಾಗೂ ತೆಹ್ರಿಕ್‌-ಇ-ತಾಲಿಬಾನ್‌ ಪಾಕಿಸ್ತಾನ (ಟಿಟಿಪಿ) ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ಮಹಾರಾಷ್ಟ್ರ ಮೂಲದ ಹಮ್ರಾಜ್‌ ವೋರ್ಷಿದ್‌ ಶೇಕ್‌ಗೆ ನ್ಯಾಯಾಲಯವು 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 63 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ಈ ಪ್ರಕರಣದ ಹಿನ್ನೆಲೆಯನ್ನು ನೋಡುವುದಾದರೆ, 2023ರ ಏಪ್ರಿಲ್‌ನಲ್ಲಿ ಎನ್‌ಐಎ ಅಧಿಕಾರಿಗಳು ಹಮ್ರಾಜ್ ವೋರ್ಷಿದ್ ಶೇಕ್ ಮತ್ತು ಮೊಹಮ್ಮದ್‌ ಆರೀಫ್‌ ಎಂಬ ಇಬ್ಬರು ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ತೀವ್ರ ತನಿಖೆ ನಡೆಸಿದ ಸಂಸ್ಥೆಯು, ಅದೇ ವರ್ಷದ ಅಕ್ಟೋಬರ್‌ನಲ್ಲಿ ನ್ಯಾಯಾಲಯಕ್ಕೆ ಸುದೀರ್ಘ ಆರೋಪಪಟ್ಟಿಯನ್ನು ಸಲ್ಲಿಸಿತ್ತು. ಈ ಆರೋಪಪಟ್ಟಿಯ ಆಧಾರದ ಮೇಲೆ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು ಇದೀಗ ಹಮ್ರಾಜ್‌ಗೆ ಶಿಕ್ಷೆ ಪ್ರಕಟಿಸಿದ್ದು, ಪ್ರಕರಣದ ಮತ್ತೊಬ್ಬ ಆರೋಪಿಯ…

Read More

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ನಡೆಸುವ ಸಂಬಂಧ ಸುಪ್ರೀಂಕೋರ್ಟ್ ಇಂದು ಮಹತ್ವದ ಆದೇಶ ಪ್ರಕಟಿಸಿದೆ. ಈ ಹಿಂದೆ ನಿಗದಿಪಡಿಸಿದ್ದ ಜೂನ್ 30ರ ಗಡುವನ್ನು ವಿಸ್ತರಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗ (KSEC) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ, ಮುಂಬರುವ ಆಗಸ್ಟ್ 31 ರವರೆಗೆ ಅಂತಿಮ ಕಾಲಾವಕಾಶವನ್ನು ನೀಡಿದೆ. ಸೆಪ್ಟೆಂಬರ್ 30ರವರೆಗೆ ವಿನಂತಿಸಿದ್ದ ಸರ್ಕಾರ: ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಚುನಾವಣೆ ನಡೆಸಲು ಜೂನ್ 30ರವರೆಗೆ ಈ ಹಿಂದೆ ಸುಪ್ರೀಂಕೋರ್ಟ್ ಗಡುವು ನೀಡಿತ್ತು. ಆದರೆ, ಪ್ರಸ್ತುತ ರಾಜ್ಯದಲ್ಲಿ ರಾಷ್ಟ್ರೀಯ ಜನಗಣತಿ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯಗಳು ಪ್ರಗತಿಯಲ್ಲಿರುವುದರಿಂದ, ಎಲ್ಲಾ ಸರ್ಕಾರಿ ಸಿಬ್ಬಂದಿ ಹಾಗೂ ತಾಂತ್ರಿಕ ವ್ಯವಸ್ಥೆಗಳು ಈ ಕೆಲಸಗಳಲ್ಲಿ ನಿರತವಾಗಿವೆ. ಈ ಹಿನ್ನೆಲೆಯಲ್ಲಿ ಸೂಕ್ತ ಸಿಬ್ಬಂದಿ ಹಾಗೂ ಕಾನೂನಾತ್ಮಕ ಸಿದ್ಧತೆಗಳ ಕೊರತೆಯನ್ನು ಉಲ್ಲೇಖಿಸಿ, ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಸೆಪ್ಟೆಂಬರ್ 30ರವರೆಗೆ (ಮೂರು ತಿಂಗಳ ಹೆಚ್ಚುವರಿ…

Read More