Author: kannadanewsnow05

ರಾಜಸ್ತಾನ್ : ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಯುವ ಜನತೆ ಇಯರ್ ಬಡ್ ಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಅಲ್ಲದೆ ಕಳೆದ ಕೆಲವು ತಿಂಗಳ ಹಿಂದೆ ಇದೇ ಇಯರ್ ಬಡ್ ಸ್ಪೋಟಗೊಂಡು ಯುವಕನೊಬ್ಬ ಸಾವನಪ್ಪಿದ ಪ್ರಕರಣ ನಡೆದಿತ್ತು. ಇದೀಗ ರಾಜಸ್ಥಾನದ ಜೈಪುರ್ ನಲ್ಲಿ ಇಯರ್ ಬಡ್ ಸ್ಫೋಟಗೊಂಡು ವಿದ್ಯಾರ್ಥಿನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಹೌದು ಇಯರ್ ಬಡ್ ಕಿವಿಯಲ್ಲಿದ್ದಾಗಲೇ ಸ್ಫೋಟಗೊಂಡು ಯುವತಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ರಾಜಸ್ತಾನದ ಮೆಡಿಕಲ್ ವಿದ್ಯಾರ್ಥಿಯೊಬ್ಬರು, ಜೆಬಿಎಲ್ ಇಯರ್‌ಬಡ್‌ ಕಿವಿಗೆ ಹಾಕಿರುವಾಗಲೇ ಸ್ಫೋಟಗೊಂಡು ತಮ್ಮ ಕಿವಿಗೆ ಹಾನಿಯಾಗಿರುವುದಾಗಿ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಹೇಳಿಕೊಂಡಿದ್ದಾರೆ. ಅವರ ಪೋಸ್ಟ್‌ ವೈರಲ್‌ ಆಗ್ತಿದ್ದಂತೆ ಜೆಬಿಎಲ್‌ ಸಂಸ್ಥೆ ಕೂಡ ಪ್ರತಿಕ್ರಿಯೆ ನೀಡಿದೆ. ಜೊತೆಗೆ ಇಯರ್‌ ಪಾಡ್‌ ಬಳಸುವವರಿಗೆ ಕೆಲ ಸಲಹೆಗಳನ್ನೂ ನೀಡಿದೆ. JBL ಬಲಭಾಗದ ಇಯರ್‌ ಬಡ್‌ ನನ್ನ ಕಿವಿಯಲ್ಲಿ ಸಿಡಿದು ಟಿಎಂ ಪೊರೆಯ ಉರಿಯೂತಕ್ಕೆ (ಹಾನಿ) ಕಾರಣವಾಯಿತು. ಇದು ಒಂದು ತಿಂಗಳ ಹಿಂದೆ ನನ್ನ ಸಹೋದರಿ ನನಗೆ ಉಡುಗೊರೆಯಾಗಿ ನೀಡಿದ್ದಳು, ಜೆಬಿಎಲ್…

Read More

ಮುಂಬೈ : ಮುಂಬೈ : ಭಾರತೀಯ ಸಿನಿಮಾ ಸಂಗೀತ ಕ್ಷೇತ್ರದ ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆಶಾ ಭೋಸ್ಲೆ ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ನಾಳೆ ಸಂಜೆ 4 ಗಂಟೆಗೆ ಆಶಾ ಭೋಸ್ಲೇ ಅವರ ಅಂತ್ಯಕ್ರಿಯೆ ನೆರವೇರಲಿದ್ದು, ಮುಂಬೈ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ ಶಿವಾಜಿ ಪಾರ್ಕ್ ನಲ್ಲಿ ಅಂತಿಮ ಸಂಸ್ಕಾರಕ್ಕೆ ಈಗಾಗಲೇ ಸಿದ್ಧತೆ ನಡೆಸಲಾಗಿದೆ ಎಂದು ಆಶಾ ಭೋಸ್ಲೇ ಅವರ ಪುತ್ರ ಆನಂದ ಭೋಸ್ಲೆ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಆಶಾ ಬೋಸ್ಲೆ ಅವರಿಗೆ 92 ವರ್ಷ ವಯಸ್ಸಾಗಿದ್ದು, ವಯೋಸಜ ಕೆಲವು ಸಮಸ್ಯೆಗಳಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಭೋಸ್ಲೆ ಅವರ ಕುಟುಂಬ ವರ್ಗದವರು, ಆಪ್ತರು ಆಸ್ಪತ್ರೆಗೆ ಧಾವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಇದೀಗ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರು ಭಾರತ ರತ್ನ ಪುರಸ್ಕೃತ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಸಹೋದರಿ ಆಗಿದ್ದು,…

Read More

ಹಾಸನ : ಅಪಘಾತದಲ್ಲಿ ಯುವತಿ ಒಬ್ಬಳ ಮೆದುಳು ಡೆಡ್ ಆಗಿತ್ತು. ಈ ವೇಳೆ ಪೋಷಕರು ಮಗಳ ಸಾವಿನಲ್ಲೂ ಕೂಡ ಸಾರ್ಥಕತೆ ಮೆರೆದಿದ್ದು, ಮಗಳ ಅಂಗಾಂಗವನ್ನು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ಅರಸೀಕೆರೆ ತಾಲ್ಲೂಕಿನ, ಕಾರೇಹಳ್ಳಿ ಗ್ರಾಮದ ನಿವಾಸಿ ಮೋನಿಕಾ (18) ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಏಪ್ರಿಲ್ 5 ರಂದು ಸಂಜೆ ಸುಮಾರು 6.30 ರ ಸಮಯದಲ್ಲಿ ಬಿ.ಹೆಚ್ ರಸ್ತೆಯ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ಪೆಟ್ಟಾಗಿದ್ದರಿಂದ ಯುವತಿ ಸ್ಥಿತಿ ಗಂಭೀರವಾಗಿದ್ದು ನಂತರ ಮೆದುಳು ನಿಷ್ಕ್ರಿಯವಾಗಿತ್ತು. ವೈದ್ಯರು ಮೋನಿಕಾಳ ಪೋಷಕರಿಗೆ ಈ ವಿಷಯ ತಿಳಿಸಿದ್ದಾರೆ. ಪೋಷಕರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ನಂತರ ಮಗಳ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದ್ದು, 5 ಜೀವಗಳಿಗೆ ಹೊಸ ಬೆಳಕು ನೀಡಿದ್ದಾರೆ.

Read More

ಬೆಂಗಳೂರು : ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಮುಸ್ಲಿಂ ನಾಯಕರ ನಡುವಿನ ಭಿನ್ನಮತ ಸ್ಫೋಟಗೊಂಡಿದೆ. ಶುಕ್ರವಾರವಷ್ಟೇ ಕಾಂಗ್ರೆಸ್ ಪಕ್ಷದ ಮುಸ್ಲಿಂ ಶಾಸಕರು ಪತ್ರಿಕಾಗೋಷ್ಠಿಯನ್ನು ನಡೆಸಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಅಬ್ದುಲ್ ಜಬ್ಬಾರ್ ಅವರ ಕುರಿತಾಗಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು. ಹೌದು ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದ ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಜಬ್ಬಾರ್ ರಾಜೀನಾಮೆ ನೀಡಿದ್ದು, ಇದೀಗ ಈ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಂಗೀಕರಿಸಿದ್ದಾರೆ. ಅಷ್ಟೆ ಅಲ್ಲದೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿ ಆದೇಶ ಹೊರಡಿಸಿದ್ದು, ಈ ಬೆಳವಣಿಗೆ ಕಾಂಗ್ರೆಸ್​​ನಲ್ಲಿ ಭಾರೀ ಸಂಚನಲನ ಮೂಡಿಸಿದೆ. ಅಬ್ದುಲ್ ಜಬ್ಬಾರ್ ರಾಜಿನಾಮೆ ಬೆನ್ನಲ್ಲೆ, ಮಹಮ್ಮದ್ ಸಿರಾಜ್ ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಘಟಕ ಉಪಾಧ್ಯಕ್ಷ ಹಾಗೂ ವಕ್ಫ ಮಂಡಳಿ ಮಾಜಿ ಅಧ್ಯಕ್ಷ. ಇನ್ನೂ ಮೂರು ಜನ ಕೆಪಿಸಿಸಿ ಅಲ್ಪ ಸಂಖ್ಯಾತರ ಘಟಕ ಕಾರ್ಯದರ್ಶಿಗಳಾದ ಅಬ್ದುಲ್ ಗನಿ ತಾಹೀರ್, ನೂರ್ ಅಹ್ಮದ್,…

Read More

ನವದೆಹಲಿ : ಭಾರತೀಯ ಸಿನಿಮಾ ಸಂಗೀತ ಕ್ಷೇತ್ರದ ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆಶಾ ಭೋಸ್ಲೆ ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರಿಳೆದಿದ್ದಾರೆ. ಆಶಾ ಬೋಸ್ಲೆ ಅವರಿಗೆ 92 ವರ್ಷ ವಯಸ್ಸಾಗಿದ್ದು, ವಯೋಸಜ ಕೆಲವು ಸಮಸ್ಯೆಗಳಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಆಶಾ ಬೋಸಲೇ ಅವರ ನಿಧನಕ್ಕೆ ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಭಾರತ ಕಂಡ ಅತ್ಯಂತ ಪ್ರತಿಮಾರೂಪದ ಮತ್ತು ಬಹುಮುಖ ಪ್ರತಿಭೆಯ ಧ್ವನಿಗಳಲ್ಲಿ ಒಬ್ಬರಾದ ಆಶಾ ಭೋಸ್ಲೆ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ದಶಕಗಳ ಕಾಲದ ಅವರ ಅಸಾಧಾರಣ ಸಂಗೀತ ಪ್ರಯಾಣವು ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿತು ಮತ್ತು ಪ್ರಪಂಚದಾದ್ಯಂತ ಲೆಕ್ಕವಿಲ್ಲದಷ್ಟು ಹೃದಯಗಳನ್ನು ಮುಟ್ಟಿತು. ಅದು ಅವರ ಭಾವಪೂರ್ಣ ಮಧುರ ಅಥವಾ ರೋಮಾಂಚಕ ಸಂಯೋಜನೆಗಳಾಗಿರಬಹುದು, ಅವರ ಧ್ವನಿಯು ಕಾಲಾತೀತ ತೇಜಸ್ಸನ್ನು ಹೊಂದಿತ್ತು. ನಾನು ಅವರೊಂದಿಗೆ ನಡೆಸಿದ ಸಂವಹನವನ್ನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ. ಅವರ ಕುಟುಂಬ, ಅಭಿಮಾನಿಗಳು…

Read More

ಬೆಂಗಳೂರು : ಯುವತಿಯನ್ನು ಅಪಹರಿಸುವ ಯತ್ನದಲ್ಲಿ ಕಿಡಿಗೇಡಿಗಳಿಂದ ಚಾಕು ಇರಿತಕ್ಕೊಳಗಾಗಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಮಾಗೇಶ್ವರಿ (55) ಚಿಕಿತ್ಸೆ ಫಲಿಸದೇ ತಡರಾತ್ರಿ ಸಾವನ್ನಪ್ಪಿದ್ದಾರೆ. ಮಾರ್ಚ್​ 25ರಂದು ಆಡುಗೋಡಿಯ ಮನೆಯಲ್ಲಿ ಮಾಗೇಶ್ವರಿ ಅವರಿಗೆ ಚಾಕು ಇರಿಯಲಾಗಿತ್ತು. ಮಾಗೇಶ್ವರಿಯ ಸಹೋದರ ಸಂಬಂಧಿ ಕಿರಣ್ ಮತ್ತು ಅವರ ಕಡೆಯವರು ಚಾಕುವಿನಿಂದ ಹಲ್ಲೆಗೈದು ಪರಾರಿಯಾಗಿದ್ದರು. ಮಾಗೇಶ್ವರಿಯ ಮೊಮ್ಮಗಳನ್ನು ಅಪಹರಿಸುವ ಯತ್ನದಲ್ಲಿ ಈ ಘಟನೆ ನಡೆದಿತ್ತು. ಮಾಗೇಶ್ವರಿಯ ಅಣ್ಣನ ಮಗನಾಗಿದ್ದ ಕಿರಣ್​ಗೆ ಮದುವೆಯಾಗಿದ್ದರೂ ಸಹ ಆಕೆಯ ಮೊಮ್ಮಗಳ ಜೊತೆಗೆ ವಾಸಿಸುತ್ತಿದ್ದ. ಕೆಲ ದಿನಗಳ ಹಿಂದೆ ಕಿರಣ್​ನನ್ನು ತೊರೆದು ಬಂದು ಅಜ್ಜಿ ಮಾಗೇಶ್ವರಿಯೊಂದಿಗೆ ಆಡುಗೋಡಿಯಲ್ಲಿ ವಾಸವಿದ್ದಳು. ಆದರೆ ಮಾರ್ಚ್ 25ರಂದು ಯುವತಿಯನ್ನು ಹುಡುಕಿಕೊಂಡು ಬಂದಿದ್ದ ಕಿರಣ್ ಮತ್ತವನ ಕಡೆಯವರು, ಬಲವಂತವಾಗಿ ಆಕೆಯನ್ನು ಅಪಹರಿಸಿಕೊಂಡು ಹೋಗಲು​ ಯತ್ನಿಸಿದ್ದರು. ಆ ಸಂದರ್ಭದಲ್ಲಿ ತಡೆಯಲು ಬಂದ ಮಾಗೇಶ್ವರಿಗೆ ಚಾಕುವಿನಿಂದ ಹಲ್ಲೆ ಮಾಡಿ, ಇರಿದು ಪರಾರಿಯಾಗಿದ್ದರು. ಈ ಸಂಬಂಧ ಹತ್ಯೆ ಯತ್ನ ಪ್ರಕರಣ ದಾಖಲಾಗಿದೆ. ಈಗಾಗಲೇ ಕಿರಣ್​, ಮಣಿವಣ್ಣನ್, ಮಣಿರಾಜ್ ಹಾಗೂ ಅಭಿಷೇಕ್…

Read More

ಮುಂಬೈ : ಭಾರತೀಯ ಸಿನಿಮಾ ಸಂಗೀತ ಕ್ಷೇತ್ರದ ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆಶಾ ಭೋಸ್ಲೆ ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರಿಳೆದಿದ್ದಾರೆ. ಆಶಾ ಬೋಸ್ಲೆ ಅವರಿಗೆ 92 ವರ್ಷ ವಯಸ್ಸಾಗಿದ್ದು, ವಯೋಸಜ ಕೆಲವು ಸಮಸ್ಯೆಗಳಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಭೋಸ್ಲೆ ಅವರ ಕುಟುಂಬ ವರ್ಗದವರು, ಆಪ್ತರು ಆಸ್ಪತ್ರೆಗೆ ಧಾವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಇದೀಗ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರು ಭಾರತ ರತ್ನ ಪುರಸ್ಕೃತ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಸಹೋದರಿ ಆಗಿದ್ದು, ಅಕ್ಕನಂತೆಯೇ ಅದ್ಭುತ ಗಾಯಕಿ ಆಗಿದ್ದಾರೆ. ಎಂಟು ದಶಕಗಳಿಂದಲೂ ಗಾಯಕ ಕ್ಷೇತ್ರದಲ್ಲಿರುವ ಆಶಾ ಭೋಸ್ಲೆ ಈ ವರೆಗೆ ಸಾವಿರಾರು ಹಾಡುಗಳನ್ನು ರೆಕಾರ್ಡ್ ಮಾಡಿದ್ದಾರೆ. ಹಲವಾರು ಲೈವ್ ಶೋಗಳನ್ನು ನೀಡಿದ್ದಾರೆ. ಹಲವು ಸಿಂಗಿಂಗ್ ರಿಯಾಲಿಟಿ ಶೋಗಳಿಗೆ ಜಡ್ಜ್ ಸಹ ಆಗಿದ್ದಾರೆ. ಆಶಾ ಭೋಸ್ಲೆ ಅವರು ತಮ್ಮ 90ನೇ ವಯಸ್ಸಿನಲ್ಲೂ ಸಹ ಲೈವ್ ಸಿಂಗಿಂಗ್ ಶೋಗಳನ್ನು ನೀಡುತ್ತಿದ್ದರು.…

Read More

ಕಲಬುರ್ಗಿ : ಸಂವಿಧಾನ ಬದಲಾಯಿಸಲು ಹೊರಟವರ ಕೈಗಳನ್ನು ಕತ್ತರಿಸಿ ಅಂತ ಹೇಳಬೇಕಾಗುತ್ತದೆ. ನಮ್ಮವರು ಚುನಾವಣೆಗೆ ನಿಲ್ಲಬೇಕು ಇಲ್ಲ ಅಂದ್ರೆ ತಲೆ ಮೇಲೆ ಮಲ ಹೊರಬೇಕಾಗುತ್ತೆ ಎಂದು ಕಲಬುರ್ಗಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯಲ್ಲಿ ಹಿರಿಯ ನಟ ಅಶೋಕ್ ಹೇಳಿಕೆ ನೀಡಿದರು. ಕೆಲವರು ಸಂವಿಧಾನ ಬದಲಾವಣೆ ಮಾಡಲು ಹೊರಟಿದ್ದಾರೆ. ಅವರದ್ದು ವೈದಿಕ ಸನಾತನ ಧರ್ಮ, ನಮ್ಮದು ನೈತಿಕ ಸನಾತನ ಧರ್ಮ. ಯಾವ ರಾಜಕೀಯ ಪಕ್ಷ ಅಂತ ನಾನು ಹೇಳಲು ಹೋಗಲ್ಲ. ಯಾವ ರಾಷ್ಟ್ರೀಯ ಪಕ್ಷ ಅಂತ ಕೂಡ ನಾನು ಹೇಳಲು ಹೋಗಲ್ಲ. ಇಂತಹ ಸಮಯದಲ್ಲಿ ನಾವು ಮೆರವಣಿಗೆ ಮಾಡಿಕೊಂಡು ಇರಬಾರದು ಹಾಕಿಕೊಂಡು ಇರದೆ ಕೂಡಲೇ ಎಚ್ಚೆತ್ತುಕೊಳ್ಳಬೇಕಾಗಿದೆ. 2029 ಚುನಾವಣೆಯಲ್ಲಿ ಬಹುಮತ ಪಡೆದು ಸಂವಿಧಾನ ಬದಲಾವಣೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಹಿರಿಯ ನಟ ಅಶೋಕ್ ಹೇಳಿಕೆ ನೀಡಿದರು. ನಮ್ಮವರು ಅಧ್ಯಯನ ಮಾಡಬೇಕು, ಚುನಾವಣೆಯಲ್ಲಿ ನಿಲ್ಲಬೇಕು ಇಲ್ಲ ಅಂದರೆ ತಲೆಯ ಮೇಲೆ ಮಲ ಹೊರಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು. ಪರೋಕ್ಷವಾಗಿ ಆರ್ ಎಸ್…

Read More

ಕಲಬುರ್ಗಿ : ಸಂವಿಧಾನ ಬದಲಾಯಿಸಲು ಹೊರಟವರ ಕೈಗಳನ್ನು ಕತ್ತರಿಸಿ ಅಂತ ಹೇಳಬೇಕಾಗುತ್ತದೆ ಎಂದು ಕಲಬುರ್ಗಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯಲ್ಲಿ ಹಿರಿಯ ನಟ ಅಶೋಕ್ ಹೇಳಿಕೆ ನೀಡಿದರು. ಕೆಲವರು ಸಂವಿಧಾನ ಬದಲಾವಣೆ ಮಾಡಲು ಹೊರಟಿದ್ದಾರೆ. ಅವರದ್ದು ವೈದಿಕ ಸನಾತನ ಧರ್ಮ, ನಮ್ಮದು ನೈತಿಕ ಸನಾತನ ಧರ್ಮ. ಯಾವ ರಾಜಕೀಯ ಪಕ್ಷ ಅಂತ ನಾನು ಹೇಳಲು ಹೋಗಲ್ಲ. ಯಾವ ರಾಷ್ಟ್ರೀಯ ಪಕ್ಷ ಅಂತ ಕೂಡ ನಾನು ಹೇಳಲು ಹೋಗಲ್ಲ. ಇಂತಹ ಸಮಯದಲ್ಲಿ ನಾವು ಮೆರವಣಿಗೆ ಮಾಡಿಕೊಂಡು ಇರಬಾರದು ಹಾಕಿಕೊಂಡು ಇರದೆ ಕೂಡಲೇ ಎಚ್ಚೆತ್ತುಕೊಳ್ಳಬೇಕಾಗಿದೆ. 2029 ಚುನಾವಣೆಯಲ್ಲಿ ಬಹುಮತ ಪಡೆದು ಸಂವಿಧಾನ ಬದಲಾವಣೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಹಿರಿಯ ನಟ ಅಶೋಕ್ ಹೇಳಿಕೆ ನೀಡಿದರು. ನಮ್ಮವರು ಅಧ್ಯಯನ ಮಾಡಬೇಕು, ಚುನಾವಣೆಯಲ್ಲಿ ನಿಲ್ಲಬೇಕು ಇಲ್ಲ ಅಂದರೆ ತಲೆಯ ಮೇಲೆ ಮಲ ಹೋರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪರೋಕ್ಷವಾಗಿ ಆರ್ ಎಸ್ ಎಸ್ ಮತ್ತು ಬಿಜೆಪಿ ವಿರುದ್ಧ ನಟ ಅಶೋಕ್ ವಾಗ್ದಾಳಿ ನಡೆಸಿದರು.

Read More

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಭಾರಿ ತಾಪಮಾನ ಏರಿಕೆ ಆಗಿದ್ದು, ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದ ಕಲ್ಬುರ್ಗಿ ರಾಯಚೂರು, ಬೀದರ್ ಜಿಲ್ಲೆಗಳಲ್ಲಿ ಬಿಸಿಲಿನಿಂದ ಜನ ಬಸವಳಿದಿದ್ದಾರೆ. ಇದೀಗ ಹವಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಕಲ್ಬುರ್ಗಿಯಲ್ಲಿ 44 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆ ಆಗುವ ಸಾಧ್ಯತೆ ಇದೆ ಎಂದಿದೆ. ಕಳೆದ 24 ಗಂಟೆಯಲ್ಲಿ ಚಿಕ್ಕಮಂಗಳೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರವಾಗಿ ಮಳೆಯಾಗಿದೆ. ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ 41 ಡಿಗ್ರಿ ಸೆಲ್ಸಿಯಸ್, ಬಿಜಾಪುರದಲ್ಲಿ 40 , ರಾಯಚೂರಲ್ಲಿ 39, ಬೆಂಗಳೂರಲ್ಲಿ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.ಕರ್ನಾಟಕದ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಸುಮಾರು 35 ರಿಂದ 37 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಕೂಡಾ ಗರಿಷ್ಠ ಉಷ್ಣಾಂಶ 35 ರಿಂದ 37 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಬೀದರ್, ರಾಯಚೂರು, ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ವಿಜಯನಗರ…

Read More