Author: kannadanewsnow05

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಡೆಸಿದ್ದು ಇದೀಗ ಜಂಟಿ ಕ್ರಿಯಾ ಸಮಿತಿ ಜೊತೆಗೆ ಸಭೆ ನಡೆಸಿದ ಬಳಿಕ ಮುಷ್ಕರ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದ್ದು ಹಾಗಾಗಿ ನಾಳೆ ರಾಜ್ಯಾದ್ಯಂತ ಎಂದನಂತೆ ಬಸ್ ಸಂಚಾರ ಆರಂಭವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸಾರಿಗೆ ನೌಕರರ ಪ್ರತಿಭಟನೆ ವಾಪಸ್ ತೆಗೆದುಕೊಳ್ಳಲು ನಿರ್ಧರಿಸಿದ್ದು, ಮುಷ್ಕರ ಮಾಡದಿರಲು ಜಂಟಿ ಕ್ರಿಯ ಸಮಿತಿ ಇದೀಗ ತೀರ್ಮಾನ ಮಾಡಿದೆ. ಹಾಗಾಗಿ ನಾಳೆಯಿಂದ ಬಸ್ಸುಗಳು ಎಂದಿನಂತೆ ಸಂಚಾರ ಮಾಡುವ ಸಾಧ್ಯತೆ ಇದೆ. ಮುಂದಿನ ಸಭೆಯಲ್ಲಿ ಬೇಡಿಕೆ ಈಡೇರಿಗೆ ಮನವಿ ಮಾಡಲಾಗಿದೆ. ಮನವಿ ಮಾಡೋದಕ್ಕೆ ಸಮಿತಿ ತೀರ್ಮಾನ ಮಾಡಿದೆ ಬಜೆಟ್ ನಂತರ ವೇತನ ಪರಿಷ್ಕರಣಿಯ ಬಗ್ಗೆ ಸಭೆ ನಡೆಸಲಿದ್ದು ಸಿಎಂ ಸಿದ್ದರಾಮಯ್ಯ ಜೊತೆಗೆ ಸಾರಿಗೆ ಮುಖಂಡರ ಸಭೆ ನಡೆಯಲಿದೆ. ಈ ವೇಳೆ ಜಂಟಿಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೆ ಅರಸು ಮಾತನಾಡಿದ್ದು, ರಾಜ್ಯ ಸರ್ಕಾರಕ್ಕೆ ಪ್ರತಿಭಟನೆ ಬಿಸಿ ಮುಟ್ಟಿದೆ. ಹಿಂಬಾಕಿ…

Read More

ಆಂಧ್ರಪ್ರದೇಶ : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಆಂಧ್ರಪ್ರದೇಶದಲ್ಲಿ ಹೀನವಾದ ಕೃತ್ಯ ಬೆಳಕಿಗೆ ಬಂದಿದೆ. 3 ವರ್ಷದ ಹೆಣ್ಣುಮಗುವಿನ ಮೇಲೆ ಆಕೆಯ ತಂದೆಯ ಸ್ನೇಹಿತನೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆಕೆಯ ತಂದೆಯನ್ನು ಭೇಟಿಯಾಗುವ ನೆಪದಲ್ಲಿ ಆತ ಮನೆಗೆ ಬಂದಿದ್ದ. ಆದರೆ, ಆಕೆಯ ಅಪ್ಪ ಮನೆಯಲ್ಲಿರಲಿಲ್ಲ. ಅಮ್ಮ ಒಳಗೆ ಅಡುಗೆ ಮಾಡುತ್ತಿದ್ದರು. ಈ ವೇಳೆ ಆ ಆರೋಪಿಯು ಮಗುವಿಗೆ ಬಿಸ್ಕತ್ ಕೊಡಿಸುತ್ತೇನೆ ಎಂದು ಹತ್ತಿರದ ದಿನಸಿ ಅಂಗಡಿಗೆ ಕರೆದೊಯ್ದನು. ಆಕೆಯನ್ನು ಅಂಗಡಿಗೆ ಕರೆದುಕೊಂಡು ಹೋಗುವಾಗ ಮಧ್ಯದಲ್ಲೇ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇದಾದ ನಂತರ ಏನೂ ಆಗಿಯೇ ಇಲ್ಲವೆಂಬಂತೆ ಅವನು ಅವಳನ್ನು ವಾಪಾಸ್ ಕರೆದುಕೊಂಡು ಬಂದು ಅವಳ ಮನೆಯಲ್ಲಿ ಬಿಟ್ಟು ಓಡಿಹೋಗಿದ್ದಾನೆ. ಮನೆಯಲ್ಲಿ ಆ ಮಗು ನೋವಿನಿಂದ ನಿರಂತರವಾಗಿ ಅಳುತ್ತಲೇ ಇದ್ದುದರಿಂದ ಆ ಮಗುವಿನ ತಾಯಿ ಅವಳನ್ನು ಪರೀಕ್ಷಿಸಿದಾಗ ರಕ್ತದ ಕಲೆಗಳು ಕಂಡುಬಂದವು. ಏನಾಯಿತೆಂದು ಕೇಳಿದಾಗ ಆಕೆ ನಡೆದ ವಿಚಾರ ಹೇಳಿದಳು. ಆರೋಪಿಯ ವಿರುದ್ಧ…

Read More

ಬಾಗಲಕೋಟೆ : ವಿಜಯಪುರದ ಬೆಂಕಿ ಬಬಲಾದಿ ಸದಾಶಿವ ಮುತ್ಯಾನಮಠದ ಶ್ರೀ ಸದಾಶಿವ ಮುತ್ಯಾ ಸ್ಪೋಟಕ ಕಾಲಜ್ಞಾನ ಭವಿಷ್ಯ ನುಡಿದಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ಪಡೆಯಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಈ ವರ್ಷ (2026) 1948 ಪ್ರಭಾವನ ನಾಮ ಸಂವತ್ಸರದಲ್ಲಿ ಈ ವರ್ಷದ ಶುಭಾಶಯಗಳು ಚಿಕ್ಕ ಮಕ್ಕಳಿಗೆ ರೋಗ ಹೆಚ್ಚಾಗಲಿದ್ದು, ಜನಗಳಿಗೆ ಸ್ವಲ್ಪ ಸುಧಾರಣೆ ಆಗುತ್ತದೆ. ಪ್ರಜೆಗಳ ನಡುವೆ ಕಲಹ ಹೆಚ್ಚಾಗುತ್ತದೆ. ಅಗ್ನಿ ಅನಾಹುತಗಳು ಆಗಲಿವೆ. ದೊಡ್ಡ ದುಃಖದ ಸುದ್ದಿ ಬಂದಿತಣ್ಣ ಪಾಪದ ಕೆಲಸ ಹೆಚ್ಚಾದಿತು. ಕಾಡುಪ್ರಾಣಿಗಳಿಗೆ ತೊಂದರೆ ಆದಿತು, ಉತ್ತರ ಭಾರತದಲ್ಲಿ ಅತಿ ಮಳೆಯಾಗಿ ಕೆಲವು ಕಡೆ ಅತಿವೃಷ್ಟಿ ಆಗಲಿದೆ. ವಿಶ್ವದ ಕೆಲವು ಕಡೆ ಭೂಕುಸಿತ ಆಗುವ ಸಾಧ್ಯತೆ ಇದೆ. ರೈತರಿಗೆ ಹೆಚ್ಚಿನ ಒಳ್ಳೆಯದಾಗುತ್ತೆ ರಾಜ್ಯ ರಾಜಕೀಯದಲ್ಲಿ ಹೊಸ ತಿರುವುಗಳು ಕಂಡು ಬರಲಿವೆ ಈ ವರ್ಷದಲ್ಲಿ ಗಡಿ ಭಾಗದಲ್ಲಿ ಯುದ್ಧದಲ್ಲಿ ಕಾರ್ಮೋಡ. ನೈಸರ್ಗಿಕ ವಿಕೋಪ ಹೆಚ್ಚಾಗಲಿದೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಆಗಲಿದೆ. ಶ್ರೀಮಂತ ಬಡವರ ನಡುವಿನ ಅಂತರ ಕಡಿಮೆಯಾಗಲಿದೆ.…

Read More

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದು, ಇದೀಗ ಮುಷ್ಕರ ಸ್ಥಳಕ್ಕೆ ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷಾ ಅವರು ಬಂದು ಹಲವು ಭರವಸೆಗಳನ್ನು ನೀಡಿದರು. ಆದರೂ ಇದಕ್ಕೆ ಸಾರಿಗೆ ನೌಕರರು ಒಪ್ಪದೇ ಮೊದಲು ನಮ್ಮ ಪ್ರಮುಖ ಎರಡು ಬೇಡಿಕೆಗಳನ್ನು ಈಡೇರಿಸಿ ಎಂದು ಆಗ್ರಹಿಸಿದರು. ಕೆಎಸ್ಆರ್ಟಿಸಿ ಅಂಗಡಿ ಭರವಸೆ ಮೇಲೆ ಬಸ್ ಬಂದ್ ಭವಿಷ್ಯ ನಿರ್ಧಾರವಾಗಲಿದೆ. ಯಾವ ಭರವಸೆ ನೀಡುತ್ತಾರೆ ಎಂದು ನೌಕರರು ಕಾಯುತ್ತಿದ್ದರು.ಸಾರಿಗೆ ಸಿಬ್ಬಂದಿ ಬೇಡಿಕೆಗಳು ಈಡೇರಿಕೆಗೆ ಮೊದಲ ಆದ್ಯತೆ ನೀಡಿದ್ದೇವೆ. ನಿವೃತ್ತ ನೌಕರರಿಗೆ ಗ್ರ್ಯಾಚುಟಿ 100 ಕೋಟಿ ಬಿಡುಗಡೆ ಮಾಡಿದ್ದೇವೆ. ಅಲ್ಲದೆ 1,272 ಕೋಟಿ ಹಿಂಬಾಕಿ ವೇತನ ನೀಡಲು ಸರ್ಕಾರ ನಿರ್ಧರಿಸಿದೆ. ಉಳಿದ ವಿಚಾರಗಳ ಬಗ್ಗೆ ಸಂಘಟನೆ ಮುಖಂಡರ ಜೊತೆಗೆ ಚರ್ಚಿಸುತ್ತೇವೆ ಎಂದು ಫ್ರೀಡಂ ಪಾರ್ಕ್ ನಲ್ಲಿ ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷಾ ಹೇಳಿಕೆ ನೀಡಿದರು. 1,271 ಕೋಟಿ ಹಣ ಕೊಡಲು ಸರ್ಕಾರ ಒಪ್ಪಿಕೊಂಡಿದೆ. ಬಜೆಟ್ ನಲ್ಲಿ ಹಣ ಪಡೆದುಕೊಂಡು ಅತಿ ಶೀಘ್ರದಲ್ಲಿ…

Read More

ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, 2 ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಹಾಸನದ ಗುಡ್ಡೆನಹಳ್ಳಿ ರಾಷ್ಟ್ರೀಯ ಹೆದ್ದಾರಿ 373 ರಲ್ಲಿ ನಡೆದಿದೆ. ಮೃತ ಯುವಕರನ್ನು ಗುಡ್ಡೆನಹಳ್ಳಿ ರಾಕೇಶ್ (29) ಹಾಗೂ ಮಯೂರ (24) ಅಪಘಾತದಲ್ಲಿ ಸಾವನಪ್ಪಿದ್ದಾರೆ. ಮಕ್ಕಳನ್ನು ಕಳೆದುಕೊಂಡು ಪೋಷಕರು ಗೋಳಾಡುತ್ತಿದ್ದಾರೆ ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ, ಬೆಳ್ತಂಗಡಿ ತಾಲೂಕಿನಲ್ಲಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಪೋಟಗೊಂಡು ಬಾಲಕನೊಬ್ಬ ಗಾಯಗೊಂಡ ಘಟನೆ ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಬಲಿಪೆ ನಿವಾಸಿಗಳಾದ ಮುಕುಂದ ಮತ್ತು ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಅವಘಡದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮನೆಯ ಅಂಗಳದಲ್ಲಿ ಇಬ್ಬರು ಮಕ್ಕಳು ಆಟವಾಡುತ್ತಿದ್ದ ವೇಳೆ ಚೆಂಡಿನಂತಿದ್ದ ವಸ್ತುವೊಂದು ಪತ್ತೆಯಾಗಿದ್ದ. ಅದನ್ನು ತೆಗೆದುಕೊಂಡು ಕ್ರಿಕೆಟ್ ಆಡಲು ಮುಂದಾಗಿದ್ದಾರೆ. ಒಬ್ಬ ಬೌಲಿಂಗ್ ಮಾಡಿದ್ದು, ಇನ್ನೊಬ್ಬ ಬ್ಯಾಟಿಂಗ್ ಮಾಡಿದ ಸಂದರ್ಭ ಸ್ಫೋಟಗೊಂಡಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಅಭೀಶ್ ಗಾಯಗೊಂಡಿದ್ದಾನೆ. ಗಾಯಗೊಂಡ ಬಾಲಕನನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಬೆಂಗಳೂರು : ಗುತ್ತಿಗೆದಾರರಿಂದ ಕಮಿಷನ್ ಆರೋಪದ ವಿಚಾರವಾಗಿ ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ. ಅದನ್ನು ಕಂಡು ಹಿಡಿಯುವುದಕ್ಕೆ ಆಗಲ್ಲ. ಹಿಂದಿನ ಸರ್ಕಾರ ಮಾಡಿರುವ ತಪ್ಪು ಅದು. ನೀರಾವರಿ, ಲೋಕೋಪಯೋಗಿ ಇಲಾಖೆಯಲ್ಲಿ ಜಾಸ್ತಿ ಬಾಕಿ ಇದೆ. ಕಾಮಗಾರಿ ನಿಲ್ಲಿಸುವುದಕ್ಕೆ ಆಗಲ್ಲ‌, ಅವರಿಗೆ ಕಂಫರ್ಟ್ ಇದ್ದ ಕಡೆ ಟೆಂಡರ್ ಹಾಕೇ ಹಾಕ್ತಾರೆ ಎಂದರು. ಎಂದು ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ.‌ ನಮ್ಮ ಇಲಾಖೆಯಲ್ಲಿ 12 ಸಾವಿರ ಕೋಟಿ ರೂ. ಬಾಕಿ ಇತ್ತು. ಮೂರು ಸಾವಿರ ಕೋಟಿ ಕೊಡಲಾಗಿದೆ. 9 ಸಾವಿರ ಕೋಟಿ ಬಾಕಿ ಇದೆ. ಅದನ್ನು ಬ್ಯಾಲೆನ್ಸ್ ಮಾಡುತ್ತೇವೆ. ನಾವು ನಿಮಗೆ ಅಪ್ರೂವ್ ಕೊಟ್ಟಿಲ್ಲ ಅಂತಲೂ ಚರ್ಚೆ ಆಗಿದೆ. ನಾವು ಕೊಡುವುದರಲ್ಲೇ ಬ್ಯಾಲೆನ್ಸ್ ಮಾಡಿ ಅಂತ ಚರ್ಚೆ ಆಗಿದೆ. ಇದರಲ್ಲಿ ಅಧಿಕಾರಿಗಳ ಲೋಪ ಎನ್ನಲು ಬರಲ್ಲ. ಹಿಂದಿನ ಸರ್ಕಾರವೇ ಇದಕ್ಕೆ ಕಾರಣ ಎಂದು ಆರೋಪಿಸಿದರು. ನಮ್ಮಲ್ಲಿರುವ ಬಜೆಟ್​​ಗೆ ಸರಿದೂಗಿಸುವ ಕೆಲಸ ಮಾಡುತ್ತಿದ್ದೇವೆ. ಇವರನ್ನು ದಾರಿ ತಪ್ಪಿಸುವ ಕೆಲಸ…

Read More

ಹುಬ್ಬಳ್ಳಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ನೌಕರರು ಮುಷ್ಕರಕ್ಕೆ ಇಳಿದಿದ್ದಾರೆ. ಇದೀಗ ಕೆಲಸ ಬಿಟ್ಟು ಮುಷ್ಕರಕ್ಕೆ ಹೇಳಿದವರ ಸಂಬಳಕ್ಕೆ ಕತ್ತರಿ ಹಾಕಲಾಗಿದ್ದು, ನೋ ವರ್ಕ್ ನೋವೇಸ್ ನೋಟಿಸ್ ಜಾರಿ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಎಂಡಿ ಪ್ರಿಯಾಂಕ ಮಾಹಿತಿ ನೀಡಿದ್ದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಂಡಿ ಆಗಿರುವ ಪ್ರಿಯಾಂಕ ವೈದ್ಯಕೀಯ ರಜೆ ಹೊರತುಪಡಿಸಿ ಬೇರೆಯವರಿಗೆ ರಜೆ ನೀಡಿಲ್ಲ ಎಂದು ತಿಳಿಸಿದ್ದು, ನೌಕರರು ಮುಷ್ಕರ ಎರಡು ದಿನಗಳ ಹಿಂದೆ ನೌಕರರಿಗೆ ನೋ ವರ್ಕ್ ನೋ ವೇಜಸ್ ಆದೇಶ ಮಾಡಿದ್ದೇವೆ. ಎಲ್ಲದಕ್ಕೂ ಮುಷ್ಕರ ಒಂದೇ ದಾರಿ ಇಲ್ಲ. ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ. ಇವತ್ತು ಯಾವುದೇ ರೀತಿ ತೊಂದರೆ ಇಲ್ಲ ಒಂದು ಗಂಟೆ ವರೆಗೂ ಯಾವ ಬಸ್ ಗಳು ನಿರ್ಗಮನ ಆಗಬೇಕೊ ಅವೆಲ್ಲ ತೆರಳಿವೆ. ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂದರು

Read More

ಬೆಂಗಳೂರು : ಮುಡಾ ಮಾಜಿ ಆಯುಕ್ತ ಡಿ ಬಿ ನಟೇಶ್‌ಗೆ ಮುಂಬಡ್ತಿ ಬಗ್ಗೆ ಸ್ಪಷ್ಟೀಕರಣ ನೀಡಲಾಗಿದೆ. ಸ್ನೇಹಮಯಿ ದೂರಿಗೆ ಪತ್ರದ ಮೂಲಕ ಶಾಲಿನಿ ರಜನಿಶ್ ಸ್ಪಷ್ಟೀಕರಣ ನೀಡಿದ್ದಾರೆ. ತಾವು ಸಲ್ಲಿಸಿರುವ ದೂರಿನಲ್ಲಿ ಮಾಡಿರುವ ಆರೋಪಗಳು ನಿರಾಧಾರ ಆಗಿವೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್ ಸ್ಪಷ್ಟನೆ ನೀಡಿದ್ದಾರೆ. ಮುಡಾ ಮಾಜಿ ಅಧ್ಯಕ್ಷ ನಟೇಶ್ ಅವರಿಗೆ ಭರ್ತಿ ನೀಡುವ ವಿಚಾರವಾಗಿ ಕೋಟ್ಯಾಂತರ ಹಣ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣಗೆ ತಿರುಗೇಟು ನೀಡಿದ್ದಾರೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಸಲ್ಲಿಸಿಲ್ಲ. ಸರ್ಕಾರಕ್ಕೆ ಯಾವುದೇ ಪೂರಕ ದಾಖಲೆಗಳನ್ನು ಸಲ್ಲಿಸಿರುವುದಿಲ್ಲ ಆರೋಪ ಸಂಬಂಧ ಸೂಕ್ತ ದಾಖಲೆಗಳನ್ನು ಒದಗಿಸಿದರೆ ನಿಯಮಾನುಸಾರ ಸಾಕ್ಷಿ ಆಧಾರಗಳನ್ನು ಖಂಡಿತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪತ್ರದ ಮೂಲಕ ಸಿ ಎಸ್ ಶಾಲಿನಿ ರಜನೀಶ್ ಸ್ಪಷ್ಟನೆ ನೀಡಿದ್ದಾರೆ.

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ,6 ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್​ಗಳಲ್ಲಿ 23.88 ಕೋಟಿ ರೂ. ಮೌಲ್ಯದ 4.776 ಕೆ.ಜಿ ಕೊಕೇನ್ ಪತ್ತೆಯಾಗಿದೆ. ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ವಿಭಾಗದ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಪ್ರಯಾಣಿಕ ಬ್ರೆಜಿಲ್ ಮೂಲದವ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಎನ್​ಸಿಬಿ ಅಧಿಕಾರಿಗಳು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್​ಡಿಪಿಎಸ್)​​ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ. ಫೆಬ್ರುವರಿ 17ರಂದು ಕತಾರ್​​ನ ದೋಹಾದಿಂದ ಬಂದ ಪ್ರಯಾಣಿಕನ ಬಳಿ ಇದ್ದ ಬ್ಯಾಗ್​ಗಳನ್ನು ತಪಾಸಣೆ ನಡೆಸಿದಾಗ ಭಾರಿ ಪ್ರಮಾಣದ ಕೊಕೇನ್ ಪತ್ತೆಯಾಗಿದೆ. ಮಹಿಳೆಯರು ಬಳಸುವ ಬ್ಯಾಗ್​ನಲ್ಲಿ ಮರೆಮಾಚಿ ಕೊಕೇನ್ ಸಾಗಿಸಲಾಗುತ್ತಿತ್ತು. ಬ್ಯಾಗ್​ನ ಕೆಳಭಾಗದಲ್ಲಿ ಕೆಮಿಕಲ್​ನಿಂದ ಮಾಡಲಾಗದ ಪದರಗಳ ಒಳಗೆ ಕೊಕೇನ್ ಇಡಲಾಗಿತ್ತು. ಪ್ರಯಾಣಿಕರ ಚೆಕ್ ಇನ್ ವೇಳೆ ಮಾದಕವಸ್ತು ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. https://twitter.com/narcoticsbureau/status/2024143495041339553?t=_gCYCIkYGMBCzJbbyWYDgw&s=19

Read More