Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಾಂತರಾಜ್ ಚಾಪ್ಟರ್ 1ರ ಬಗ್ಗೆ ಚಾಮುಂಡಿ ಪಾತ್ರದ ಬಗ್ಗೆ ನಟ ರಣವೀರ್ ಸಿಂಗ್ ಅವಹೇಳನಕಾರಿ ಸನ್ನೆ ಮಾಡಿದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ FIR ದಾಖಲಾಗಿತ್ತು. FIR ರದ್ದು ಕೋರಿ ಸಿಂಗ್ ಅರ್ಜಿ ಸಲ್ಲಿಸಿದ್ದು ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ತನ್ನ ಹೇಳಿಕೆಗೆ ನಟ ರಣವೀರ್ ಸಿಂಗ್ ಬೇಷರತ್ ಕ್ಷಮೆ ಯಾಚಿಸಿದ್ದಾರೆ. ಕ್ಷಮೆಯಾಚನೆಯ ಪ್ರಮಾಣ ಪತ್ರವನ್ನು ಹೈಕೋರ್ಟಿಗೆ ಸಲ್ಲಿಕೆ ಮಾಡಿದ್ದಾರೆ. ಅಲ್ಲದೆ ಶೀಘ್ರವೇ ಚಾಮುಂಡಿ ಬೆಟ್ಟಕ್ಕೂ ಭೇಟಿ ನೀಡುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದು, ರಣವೀರ್ ಪರ ಹಿರಿಯ ವಕೀಲ ಸಜನ್ ಪೂವಯ್ಯ ಪತ್ರ ಸಲ್ಲಿಸಿದ್ದಾರೆ. ಚಾಮುಂಡಿ ಬೆಟ್ಟ ಬೇಟಿಗೆ ಗಡುವು ನೀಡಬೇಕೆಂದು ಇದೇ ವೇಳೆ ಮನವಿ ಮಾಡಿದರು. ಈ ವೇಳೆ ಹೈಕೋರ್ಟ್ ರಣವೀರ್ ಸಿಂಗ್ ಕ್ಷಮೆಯಾಚನೆ ಅಂಗೀಕರಿಸಿ ನ್ಯಾಯಾಲಯ ಅರ್ಜಿ ಇತ್ಯರ್ಥ ಪಡಿಸಿದೆ. ಚಾಮುಂಡಿ ಬೇಟಿಯ ಬಗ್ಗೆ ಆದೇಶ ನೀಡಲಾಗುವುದು ಎಂದು ಹೈಕೋರ್ಟ್ ಇದೆ ವೇಳೆ ತಿಳಿಸಿತು. ಪಂಜುರ್ಲಿ ದೈವ ಹಾಗೂ ಕಾಂತಾರ ಚಿತ್ರದ ಸಂಪ್ರದಾಯದ ಕುರಿತಾದ ವಿವಾದಕ್ಕೆ…
ಬೆಂಗಳೂರು : ಇತ್ತೀಚಿಗೆ ವಿಜಯಪುರದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಗ್ರಾಮ ಪಂಚಾಯತ್ ಮಾಜಿ ಸದಸ್ಯನ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲಿಯಾಬಾದ್ ಬಳಿಯ ಕೈಗಾರಿಕಾ ಪ್ರದೇಶದ ಹತ್ತಿರ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಗೊಡಂದಡ್ಡಿ ಗ್ರಾಮದ ನಿವಾಸಿ ರಾಜು ಖರೆ (48) ಎಂಬುವರನ್ನು, ಅವರು ಚಲಾಯಿಸುತ್ತಿದ್ದ ವಾಹನಕ್ಕೆ ಮೊದಲು ಟಿಪ್ಪರ್ನಿಂದ ಡಿಕ್ಕಿ ಹೊಡೆದು ಬಳಿಕ ವಾಹನದ ಮೇಲೆ ಗುಂಡಿನ ದಾಳಿ ನಡೆಸಿ, ಬಳಿಕ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿತ್ತು. ಆಸ್ತಿ ವಿವಾದದ ಕಾರಣ ನಡೆದ ಕೊಲೆ ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿತ್ತು. ಆರೋಪಿ ಅಬಾಶ್ಯಾ ಕೊಡ್ಲೆಕರ್ ಸಂಬಂಧಿಕರಾದ ಮುರ್ತುಬಾ ಖರೆ ಸಹೋದರಿಗೆ ಸೇರಿದ ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ರಾಜು ಖರೆ ಭಾಗಿಯಾಗಿದ್ದ. ಮುರ್ತುಬಾ ಖರೆ ಪತ್ನಿ ಮನೀಷಾ ಪರವಾಗಿ ಅಬಾಶ್ಯಾ ಕೊಡ್ಲೆಕರ್ ನಿಂತಿದ್ದ. ಮನೀಷಾಳಿಗೆ ಸೋದರ ಮಾವನಾಗಿದ್ದ ಅಬಾಶ್ಯಾ ಈ ಆಸ್ತಿ ವಿಚಾರದಲ್ಲಿ ರಾಜು ಖರೆ…
ರಾಯಚೂರು : ಆನ್ಲೈನ್ನಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರಾಯಚೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ರುಕ್ಮಾಪುರ ಮೂಲದ ಮಹೇಶ, ವೀರೇಶ ಮತ್ತು ಪ್ರಭು ಬಂಧಿತ ಆರೋಪಿಗಳು. ಬಂಧಿತರಿಂದ ನಗದು, ವಾಹನ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಿಂಭಾಗದ ಲಕ್ಷ್ಮೀ ಲೇಔಟ್ನಲ್ಲಿ ಬಾಡಿಗೆ ಮನೆ ಪಡೆದಿದ್ದ ಈ ಮೂವರು ಆರೋಪಿಗಳು, ಸಾರ್ವಜನಿಕರಿಗೆ ಆನ್ಲೈನ್ ಮೂಲಕ ಸಾಲ ಸೌಲಭ್ಯ ಕಲ್ಪಿಸುವುದಾಗಿ ನಂಬಿಸುತ್ತಿದ್ದರು. ನಂತರ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಸೇರಿದಂತೆ ವೈಯಕ್ತಿಕ ದಾಖಲೆಗಳನ್ನು ಪಡೆದು, ವಿವಿಧ ಕಂಪನಿಗಳ ಸಿಮ್ ಕಾರ್ಡ್ಗಳನ್ನು ಬಳಸಿ ಕ್ಯೂಆರ್ ಕೋಡ್ಗಳನ್ನು ಸೃಷ್ಟಿಸುತ್ತಿದ್ದರು. ಈ ವಿಧಾನದಲ್ಲಿ ಸಾರ್ವಜನಿಕರ ಖಾತೆಗಳಿಂದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ಯಾವುದೇ ಸಾಲ ನೀಡದೇ ವಂಚಿಸುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಆಧರಿಸಿ ರಾಯಚೂರು ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆ…
ಕಲಬುರ್ಗಿ : ಕಲಬುರ್ಗಿಯಲ್ಲಿ ಘೋರ ದುರಂತ ನಡೆದಿದ್ದು, ಎರಡು ತಿಂಗಳ ಹಿಂದೆಯಷ್ಟೇ ವಿವಾಹ ಆಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿರು ಘಟನೆ ನಗರದ ದುಬೈ ಕಾಲೋನಿಯಲ್ಲಿ ನಡೆದಿದೆ. ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಭಾಗ್ಯಶ್ರೀ (19) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪತಿ ಮತ್ತು ಅವರ ಮನೆಯವರ ಕಿರುಕುಳ ಬಗ್ಗೆ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಚಿನ್ ಎಂಬಾತನನ್ನು ಪ್ತಿತಿಸಿ 2 ತಿಂಗಳ ಹಿಂದೆಯಷ್ಟೇ ಮದುವೆ ಆಗಿದ್ದಳು.ಕುಟುಂಬಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಯುವತಿ ಪೋಷಕರು ಆಗ್ರಹಿಸಿದ್ದಾರೆ.
ಬೆಂಗಳೂರು : ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮುಖ್ಯಮಂತ್ರಿಗೆ ದೂರು ನೀಡಿ, ಕಾಲೇಜು ಪರವಾನಗಿ ರದ್ದುಪಡಿಸಿ 25 ಲಕ್ಷ ರೂ.ದಂಡ ವಿಧಿಸಲು ಆಗ್ರಹಿಸಿದೆ. ಇದು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಬ್ರಾಹ್ಮಣ ಸಮುದಾಯ ಆಕ್ರೋಶ ವ್ಯಕ್ತಪಡಿಸಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದೆ. ರಾಜ್ಯದಲ್ಲಿ ಜನಿವಾರದ ಜಟಾಪಟಿ ತೀವ್ರವಾಗಿದ್ದು, ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲು ನಿಯಮ ಇಲ್ಲದಿದ್ದರೂ ತೆಗೆಸಿರೋದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಇದೀಗ ಮಡಿವಾಳ ಠಾಣೆಯ ಪೊಲೀಸರಿಂದ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್, ಈ ಘಟನೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. ಜನಿವಾರ ತೆಗೆಸಿದ ಪರಿಣಾಮ ವಿದ್ಯಾರ್ಥಿಗಳು ಮತ್ತು ಪೋಷಕರು ಮಾನಸಿಕವಾಗಿ ನೊಂದಿದ್ದಾರೆ. ಕಳೆದ ವರ್ಷವೂ ಇಂತಹ ಘಟನೆ ನಡೆದಾಗ ಮಹಾಸಭಾ ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು ಎಂದು ರಘುನಾಥ್ ತಿಳಿಸಿದ್ದಾರೆ. 2025ರ…
ಬೆಂಗಳೂರು : ಧಾರವಾಡದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ವಿನಯ್ ಕುಲಕರನಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತು ಇದೀಗ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟಿಗೆ ವಿನಯ್ ಕುಲಕರ್ಣಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಹೌದು ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 16 ಆರೋಪಿಗಳಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪು ಹೊರಡಿಸಿತ್ತು. ಧಾರಾವಾಡದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ಹೈಕೋರ್ಟ್ ಮೆಟ್ಟಿಲೇರಿರುವುದು ಈಗಿನ ಪ್ರಮುಖ ಕಾನೂನು ಬೆಳವಣಿಗೆಯಾಗಿದೆ. ಪ್ರಕರಣದ ಹಿನ್ನೆಲೆ ಘಟನೆ: 2016 ರಲ್ಲಿ ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಅವರ ಹತ್ಯೆ ನಡೆದಿತ್ತು. ವಿಶೇಷ ನ್ಯಾಯಾಲಯದ ತೀರ್ಪು: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇತ್ತೀಚೆಗೆ ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಇತರ…
ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಒಂದು ಕುಸಿದು ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುಚ್ಚೆ ಮೊಗರು ಭಾಗದ ಬಾವದಬೈಲು ಎಂಬಲ್ಲಿ ಕಾಲು ಸಂಕ ಕುಸಿದಿರುವ ಘಟನೆ ವರದಿಯಾಗಿದೆ. ಕಾಲು ಸಂಕ ಮುರಿದು ಬಿದ್ದ ಪರಿಣಾಮ 8 ಮಂದಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ನಿತ್ಯ ಕಾಲು ಸಂಕದ ಮೇಲೆ ಜನರು ಓಡಾಡುತ್ತಿದ್ದರು. ಈ ಒಂದು ಕಾಲು ಸಂಕ ಸುಮಾರು ಐವತ್ತು ವರ್ಷಗಳ ಹಿಂದಿನ ಹಳೆಯದಾಗಿದ್ದು ಶಿಥಿಲಗೊಂಡ ಪರಿಣಾಮ ಇಂದು ದೈವದ ಭಂಡಾರ ಬರವಣಿಗೆ ವೇಳೆ ಕಾಲು ಸಂಕ ಕುಸಿದು ಬಿದ್ದಿದೆ. ಘಟನೆಯಲ್ಲಿ 8 ಜನರಿಗೆ ಗಂಭೀರ, ಗಾಯಗಳಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಧಾರವಾಡ : ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಯೊಬ್ಬ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಜೈಲಿನ ಶೌಚಾಲಯದ ಕೆಟ್ಟಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಕೈದಿ ಮಹಾಂತೇಶ್ (29) ಆತ್ಮಹತ್ಯೆಗೆ ಶರಣಾಗಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಗದಗ ಮೂಲದ ಮಹಾಂತೇಶ್ ಪೋಕ್ಸೋ ಕೇಸ್ ನಲ್ಲಿ ಜೈಲು ಸೇರಿದ್ದ. ಗದಗದಿಂದ ಧಾರವಾಡಕ್ಕೆ ಮಹಾಂತೇಶ ಕುಂಬಾರ ಶಿಫ್ಟ್ ಆಗಿದ್ದ. ನಿನ್ನೆ ಜಿಲ್ಲಾ ಸೆಷನ್ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಹಾಗಾಗಿ ಮಹಾಂತೇಶ್ ಕುಂಬಾರ್ ಮಾನಸಿಕವಾಗಿ ನೊಂದಿದ್ದ. ಜೈಲಿನಲ್ಲಿ ಮಹಾಂತೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತೆಲಂಗಾಣ : ತೆಲಂಗಾಣದಲ್ಲಿ ಹೊಸ ರಾಜಕೀಯ ಪಕ್ಷ ಘೋಷಣೆ ಆಗಿದ್ದು ಮಾಜಿ ಮುಖ್ಯಮಂತ್ರಿ ಕೆ ಸಿ ಆರ್ ಪುತ್ರಿ ಕೆ.ಕವಿತಾ ಅವರು ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ಹೊಸ ಪಕ್ಷಕ್ಕೆ ತೆಲಂಗಾಣ ರಾಷ್ಟ್ರ ಸೇನಾ (ಟಿಆರ್ಎಸ್) ಪಕ್ಷ ಎಂದು ಘೋಷಣೆ ಮಾಡಿದ್ದಾರೆ. ತೆಲಂಗಾಣದ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ ಪುತ್ರಿ ಕವಿತಾ ಅವರು ಇಂದು ಹೊಸ ಪಕ್ಷ ಘೋಷಣೆ ಮಾಡಿದರು ಮೇಡ್ಚಲ ಜಿಲ್ಲೆಯ ಮುನಿರಾಬಾದ್ ನಲ್ಲಿ ಬೃಹತ್ ಸಮಾವೇಶದಲ್ಲಿ ಹೊಸ ಪಕ್ಷ ಘೋಷಣೆ ಮಾಡಿದರು. ಮಾಜಿ ಎಂಎಲ್ಸಿ ತೆಲಂಗಾಣ ಜಾಗೃತಿ ಸಂಘಟನೆ ಅಧ್ಯಕ್ಷರಾಗಿರುವ ಕೆ ಕವಿತಾ ಅವರು ಸಾವಿರ ಜನರನ್ನು ಸೇರಿಸಿ ಹೊಸ ಪಕ್ಷದ ಹೆಸರು ಘೋಷಿಸಿದ್ದಾರೆ. ಸದ್ಯ ತೆಲಂಗಾಣ ಜಾಗೃತಿ ಸಂಘಟನೆ ಅಧ್ಯಕ್ಷರಾಗಿದ್ದಾರೆ. ತಂದೆ ಕೆಸಿಆರ್ ಹಾಗೂ ಸೋದರ ಕೆಟಿ ರಾಮರಾವ್ಗೆ ಸೆಡ್ಡು ಹೊಡೆದು ಕವಿತಾ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ ದೆಹಲಿ ಅಬಕಾರಿ ನೀತಿ ಹಗರಣದ ಆರೋಪದ ಅಡಿ ಕವಿತಾ ಅವರು ಜೈಲು ಸೇರಿದ್ದರು. ಅಬಕಾರಿ ಹಗರಣದಿಂದ ಕ್ಲೀನ್ ಚಿಟ್…
ಬೆಂಗಳೂರು : ರಾಜ್ಯದ ಹಲವಡೆ ಸಿಇಟಿ ಪರೀಕ್ಷಾ ವೇಳೆ ವಿದ್ಯಾರ್ಥಿಗಳಿಂದ ಸಿಬ್ಬಂದಿಗಳು ಜನಿವಾರ ತೆಗಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಪಾ ನಿಧಿ ಕಾಲೇಜಿನಲ್ಲಿ ನಡೆದ ಘಟನೆ ಯ ಬಗ್ಗೆ ಮಾಹಿತಿ ಬಂದಿದೆ. ಸೀಟಿ ಪರೀಕ್ಷೆಗೆ ಬಂದಾಗ ವಿದ್ಯಾರ್ಥಿಯ ಜನಿವಾರ ತಗಿಸಿದ ಮಾಹಿತಿ ಬಂದಿದ್ದು ಪೊಲೀಸರು ಈಗಾಗಲೇ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳು ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದರು. ಕೃಪಾನಿಧಿ ಕಾಲೇಜಿನಲ್ಲಿ ಕೆಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ನಡೆದ ಘಟನೆ ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ಈ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಪಾರದರ್ಶಕವಾಗಿ ಕ್ರಮ ಜರುಗಿಸಲಾಗುವುದು. ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳ ಕಿವಿ ಓಲೆ, ಬಳೆ, ಹಿಜಾಬ್ ಅಥವಾ ಜನಿವಾರ ತೆಗೆಸುವುದು, ಹಾಗೂ ಉದ್ದನೆಯ ತೋಳಿಗೆ ಕತ್ತರಿ ಹಾಕುವ ಮೂಲಕ ಅವರ…














