Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಭೋಪಾಲ್ : ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ದಶಕಗಳಿಂದಲೂ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸುದೀರ್ಘ ಕಾನೂನು ಹೋರಾಟಕ್ಕೆ ಪ್ರಮುಖ ತಿರುವು ನೀಡಿರುವ ಉನ್ನತ ನ್ಯಾಯಾಲಯವು, ವಿವಾದಿತ ಭೋಜಶಾಲಾ ಆವರಣವನ್ನು “ದೇವಸ್ಥಾನ” ಎಂದು ಘೋಷಿಸಿ ಐತಿಹಾಸಿಕ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ವಿಜಯ್ ಕುಮಾರ್ ಶುಕ್ಲಾ ಮತ್ತು ಅಲೋಕ್ ಅವಸ್ತಿ ಅವರನ್ನೊಳಗೊಂಡ ಹೈಕೋರ್ಟ್‌ನ ದ್ವಿಸದಸ್ಯ ಪೀಠವು ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೇ 12 ರಂದೇ ಎಲ್ಲಾ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯವು, ತೀರ್ಪನ್ನು ಕಾಯ್ದಿರಿಸಿತ್ತು. ತೀವ್ರ ಕುತೂಹಲ ಕೆರಳಿಸಿದ್ದ ಈ ತೀರ್ಪನ್ನು ಇಂದು ಅಧಿಕೃತವಾಗಿ ಪ್ರಕಟಿಸಲಾಗಿದೆ. ನ್ಯಾಯಾಲಯವು ತನ್ನ ಆದೇಶದಲ್ಲಿ ಐತಿಹಾಸಿಕ ಸಾಕ್ಷ್ಯಗಳನ್ನು ಉಲ್ಲೇಖಿಸಿದ್ದು, ವಿವಾದಿತ ಇಡೀ ಸಂಕೀರ್ಣವು ಮೂಲತಃ ವಾಗ್ದೇವಿ (ಸರಸ್ವತಿ ದೇವಿ)ಯ ಮಂದಿರವಾಗಿತ್ತು ಮತ್ತು ಇದನ್ನು ರಾಜ ಭೋಜನು ಸ್ಥಾಪಿಸಿದ್ದ ಪ್ರಸಿದ್ಧ ಸಂಸ್ಕೃತ ಅಧ್ಯಯನ ಕೇಂದ್ರವಾಗಿತ್ತು ಎಂದು ಸ್ಪಷ್ಟವಾಗಿ…

Read More

ಬೆಂಗಳೂರು : ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ರಾಜ್ಯ ಸರ್ಕಾರ ಮತ್ತೆ ಅನುಮತಿ ನೀಡಿದ ವಿಚಾರವಾಗಿ, ಏನೇ ಟೀಕೆ-ಟಿಪ್ಪಣಿ ಮಾಡಲಿ. ಎಲ್ಲಾ ಚೆನ್ನಾಗಿರಲಿ ಅಂತ ಕಾನೂನುಗಳನ್ನಾಗಲಿ, ನೀತಿಗಳನ್ನು ಮಾಡುತ್ತಾರೆ. ಹಿಜಾಬ್ ಹಿಂದಿನಿಂದಲೂ ಹಾಕುತ್ತಿದ್ದರು. ಹೊಸದಾಗಿ ಏನೂ ಹಾಕುತ್ತಿಲ್ಲ. ಮಧ್ಯದಲ್ಲಿ ಇವರೇ ಗೊಂದಲ ಸೃಷ್ಟಿ ಮಾಡಿದರು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರಿನ ಸದಾಶಿವ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದು ಕೇಂದ್ರ ಸರ್ಕಾರದ ನೀತಿಯನ್ನು ಎಕ್ಸ್‌ಪೋಸ್ ಮಾಡಿದೆ. ಕೇಂದ್ರ ಸರ್ಕಾರ ಜನಪರವಾಗಿಲ್ಲ ಎಂಬುದನ್ನು ಈ ಬೆಳವಣಿಗೆ ಹೇಳುತ್ತದೆ. ವಿಪರೀತ ಬೆಲೆ ಏರಿಕೆ ಆಗ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಸಲಾಗಿದೆ. ಇದನ್ನು ಕೇಂದ್ರ ಮಾಡಬಾರದಿತ್ತು ಎಂದರು. ರಾಜ್ಯದಲ್ಲಿ ಎಸ್​ಐಆರ್ ವಿಚಾರವಾಗಿ ಪ್ರತಿಕ್ರಿಯಿಸಿ, ಎಸ್​ಐಆರ್ ಬಗ್ಗೆ ನಮಗೆಲ್ಲರಿಗೂ ಅನುಮಾನಗಳಿವೆ. ಅದು ಪಶ್ಚಿಮ ಬಂಗಾಳ ಇರಬಹುದು, ಬೇರೆ ಬೇರೆ ರಾಜ್ಯದಲ್ಲಿ ಎಲ್ಲೆಲ್ಲಿ ಎಸ್​ಐಆರ್ ಮಾಡಿದ್ದಾರೋ ಅಲ್ಲೆಲ್ಲ ಅನುಮಾನಗಳು ಹುಟ್ಟಿಕೊಂಡಿವೆ. ಕೆಲವರನ್ನು ಉದ್ದೇಶಪೂರ್ವಕವಾಗಿ ಓಟರ್ ಲಿಸ್ಟ್​ನಿಂದ ತೆಗೆಯುತ್ತಿದ್ದಾರೆ. ಕೆಲವರನ್ನು…

Read More

ರಾಯಚೂರು: ಇಡೀ ಸಮಾಜವೇ ತಲೆ ತಗ್ಗಿಸುವಂತಹ ಹಾಗೂ ಮಾನವೀಯತೆಯನ್ನೇ ಮರೆತ ಅತ್ಯಂತ ಅಮಾನವೀಯ ಘಟನೆಯೊಂದು ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಹೆತ್ತ ಮಗಳ ರಕ್ಷಣೆಗೆ ನಿಲ್ಲಬೇಕಾದ ತಂದೆ ಮತ್ತು ಆತನ ಸ್ನೇಹಿತನೇ ಸೇರಿ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಘನಘೋರ ಕೃತ್ಯ ನಡೆದಿದ್ದು, ಜಿಲ್ಲೆಯ ಜನತೆಯನ್ನು ತಲ್ಲಣಗೊಳಿಸಿದೆ. ಎರಡು ವರ್ಷಗಳಿಂದ ನರಕಯಾತನೆ: ಬಂಧಿತ ಆರೋಪಿಗಳನ್ನು ಸಂತ್ರಸ್ತ ಬಾಲಕಿಯ ತಂದೆ ಅಮರೇಶ್ ಹಾಗೂ ಆತನ ಆಪ್ತ ಸ್ನೇಹಿತ ಸೀನು ಎಂದು ಗುರುತಿಸಲಾಗಿದೆ. ಈ ಇಬ್ಬರು ಕಾಮುಕರು ಕಳೆದ ಎರಡು ವರ್ಷಗಳಿಂದ ಆ ರಕ್ಷಣೆ ಇಲ್ಲದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಾ, ಆಕೆಗೆ ನರಕಯಾತನೆ ನೀಡಿದ್ದಾರೆ. ಹೆತ್ತ ತಂದೆಯ ಕ್ರೂರತೆಗೆ ಒಳಗಾಗಿ ಹೊರಗೆ ಹೇಳಿಕೊಳ್ಳಲಾಗದೆ ಬಾಲಕಿ ಇಷ್ಟು ದಿನ ಮೌನವಾಗಿ ಕಣ್ಣೀರಿಟ್ಟಿದ್ದಾಳೆ. ಸಾಂತ್ವಾನ ಕೇಂದ್ರದಲ್ಲಿ ಸತ್ಯ ಬಯಲು: ಇತ್ತೀಚೆಗಷ್ಟೇ ಸಂಕಷ್ಟದಲ್ಲಿದ್ದ ಬಾಲಕಿಯನ್ನು ರಕ್ಷಿಸಿದ ಪೊಲೀಸರು ಮತ್ತು ಅಧಿಕಾರಿಗಳು ಆಕೆಯನ್ನು ಲಿಂಗಸುಗೂರಿನ ಸಾಂತ್ವಾನ ಕೇಂದ್ರಕ್ಕೆ ರವಾನಿಸಿದ್ದರು.…

Read More

ಬೆಂಗಳೂರು: ಆನ್‌ಲೈನ್ ಗೇಮಿಂಗ್ ಸಂಸ್ಥೆಯಾದ ‘ಗೇಮ್ಸ್ ಕ್ರಾಫ್ಟ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್’ ಕಂಪನಿಗೆ ಜಾರಿ ನಿರ್ದೇಶನಾಲಯ (ಇ.ಡಿ.) ಬಿಗ್ ಶಾಕ್ ನೀಡಿದೆ. ಇತ್ತೀಚೆಗೆ ಕಂಪನಿಯ ಕಚೇರಿಗಳು ಹಾಗೂ ಅದರ ಪ್ರಮುಖ ನಿರ್ದೇಶಕರ ನಿವಾಸಗಳ ಮೇಲೆ ಸರಣಿ ದಾಳಿ ನಡೆಸಿದ್ದ ಇ.ಡಿ. ಅಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮೂವರು ನಿರ್ದೇಶಕರನ್ನು ಅಧಿಕೃತವಾಗಿ ಬಂಧಿಸಿದ್ದಾರೆ. ಇದರೊಂದಿಗೆ ಸುಮಾರು 526.49 ಕೋಟಿ ರೂಪಾಯಿ ಮೌಲ್ಯದ ಚರಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂವರು ನಿರ್ದೇಶಕರು ಇ.ಡಿ. ವಶಕ್ಕೆ: ಈ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೇಮ್ಸ್ ಕ್ರಾಫ್ಟ್ ಟೆಕ್ನಾಲಜಿ ಸಂಸ್ಥೆಯ ನಿರ್ದೇಶಕರಾದ ಪೃಥ್ವಿ ರಾಜ್ ಸಿಂಗ್, ವಿಕಾಸ್ ತನೇಜಾ ಮತ್ತು ದೀಪಕ್ ಸಿಂಗ್ ಅಹ್ಲಾವತ್ ಎಂಬುವವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ನಿರ್ದೇಶಕರು ಕಂಪನಿಯ ಆರ್ಥಿಕ ವ್ಯವಹಾರಗಳಲ್ಲಿ ನೇರವಾಗಿ ಭಾಗಿಯಾಗಿದ್ದರು ಎನ್ನಲಾಗಿದ್ದು, ಸದ್ಯ ಇವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ವಾರಗಳ ಕಾಲ ನಡೆದ ಸರಣಿ ಶೋಧ ಕಾರ್ಯ: ಮೇ 7ರಿಂದ ಮೇ 13ರವರೆಗೆ ಜಾರಿ…

Read More

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ಒಂದರ ಮೇಲೊಂದರಂತೆ ತಟ್ಟುತ್ತಲೇ ಇದೆ. ಇತ್ತೀಚೆಗಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಕಂಗಾಲಾಗಿದ್ದ ಜನಸಾಮಾನ್ಯರಿಗೆ ಈಗ ಮತ್ತೊಂದು ಭಾರಿ ಆಘಾತ ಎದುರಾಗಿದೆ. ಇಂಧನ ದರ ಏರಿಕೆಯನ್ನು ಮುಂದಿಟ್ಟುಕೊಂಡು ಖಾಸಗಿ ಬಸ್ ಮಾಲೀಕರು ಪ್ರಯಾಣ ದರವನ್ನು ದಿಢೀರ್ ಆಗಿ ಹೆಚ್ಚಳ ಮಾಡಿದ್ದಾರೆ. ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ. ನಿನ್ನೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಖಾಸಗಿ ಬಸ್‌ಗಳ ಪ್ರಯಾಣ ದರವನ್ನು ಹೆಚ್ಚಿಸಲಾಗಿದೆ. ಇದರಿಂದಾಗಿ ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರು ತಕ್ಷಣವೇ ಜೇಬಿಗೆ ಕತ್ತರಿ ಬೀಳುವಂತಾಗಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ದರ ಏರಿಕೆ ಕುರಿತು ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ. ಇಂಧನ ಬೆಲೆಗಳು ಗಗನಕ್ಕೇರುತ್ತಿರುವುದರಿಂದ ಬಸ್ ನಿರ್ವಹಣಾ ವೆಚ್ಚ ಭರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಶೇಕಡಾ 20 ರಿಂದ 30 ರಷ್ಟು…

Read More

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ತೀವ್ರ ಏರುಪೇರು ಕಂಡುಬರುತ್ತಿದೆ. ಒಂದೆಡೆ ದಿಢೀರ್ ಮಳೆಯಾಗುತ್ತಿದ್ದರೆ, ಮತ್ತೊಂದೆಡೆ ಬಿಸಿಲಿನ ತೀವ್ರತೆ ಮತ್ತು ಉಷ್ಣಾಂಶದ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಠಾತ್ ಹವಾಮಾನ ಬದಲಾವಣೆಯು ಕೇವಲ ಮನುಷ್ಯರನ್ನು ಮಾತ್ರವಲ್ಲದೆ, ಮೂಕಪ್ರಾಣಿ ಮತ್ತು ಪಕ್ಷಿಗಳನ್ನು ಅಕ್ಷರಶಃ ಕಂಗಾಲಾಗಿಸಿದೆ. ಕರಾವಳಿಯ ಧಗಧಗಿಸುವ ಸೆಕೆಗೆ ಬೀದಿಗಳಲ್ಲಿ ಅಲೆಯುವ ನೂರಾರು ಪ್ರಾಣಿಗಳು ತತ್ತರಿಸಿಹೋಗಿವೆ. ಗರಿಷ್ಠ ಉಷ್ಣಾಂಶದಲ್ಲಿ ಉಂಟಾಗಿರುವ ಭಾರಿ ಏರಿಕೆಯಿಂದಾಗಿ ಪ್ರಾಣಿ-ಪಕ್ಷಿಗಳ ದೇಹದಲ್ಲಿ ನೀರಿನ ಅಂಶ ತೀವ್ರವಾಗಿ ಕಡಿಮೆಯಾಗುತ್ತಿದ್ದು, ‘ನಿರ್ಜಲೀಕರಣ’ (Dehydration) ಸಮಸ್ಯೆ ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿದೆ. ಸೂಕ್ತ ಆಶ್ರಯ ಮತ್ತು ಕುಡಿಯುವ ನೀರಿಲ್ಲದೆ ರಸ್ತೆ ಬದಿಗಳಲ್ಲಿ ಪ್ರಾಣಿಗಳು ಅಸ್ವಸ್ಥಗೊಂಡು ಬಿದ್ದಿರುವ ದೃಶ್ಯಗಳು ಕರಾವಳಿಯ ವಿವಿಧೆಡೆ ಸಾಮಾನ್ಯ ಎಂಬಂತಾಗಿದೆ. ವಿಶೇಷವಾಗಿ ನಗರ ಹಾಗೂ ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸದಾ ತಿರುಗಾಡುವ ಬೀಡಾಡಿ ದನಗಳು ಮತ್ತು ಬೀದಿ ನಾಯಿಗಳು ಈ ಕಡುಬಿಸಿಲಿನ ಹೊಡೆತಕ್ಕೆ ಸಿಲುಕಿ ತೀವ್ರವಾಗಿ ಬಸವಳಿಯುತ್ತಿವೆ. ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಇವು ಮರಗಳ ನೆರಳು ಹಾಗೂ ಕಟ್ಟಡಗಳ…

Read More

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ತಮಗೆ ಜಾಮೀನು ಮಂಜೂರು ಮಾಡುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು, ಜಾಮೀನು ನೀಡಲು ಸ್ಪಷ್ಟವಾಗಿ ನಿರಾಕರಿಸಿದೆ. ಈ ಆದೇಶವು ನಟ ದರ್ಶನ್ ಹಾಗೂ ಅವರ ಅಭಿಮಾನಿಗಳಿಗೆ ತೀವ್ರ ನಿರಾಶೆ ಮೂಡಿಸಿದೆ. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸದ್ಯಕ್ಕೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಅಷ್ಟೇ ಅಲ್ಲದೆ, ಮುಂದಿನ ಒಂದು ವರ್ಷದ ಅವಧಿಯೊಳಗೆ ಈ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ನ್ಯಾಯಾಲಯ ಹಾಗೂ ತನಿಖಾ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಆದೇಶದ ಹಿನ್ನೆಲೆಯಲ್ಲಿ ನಟ ದರ್ಶನ್ ಕನಿಷ್ಠ ಇನ್ನೂ ಒಂದು ವರ್ಷಗಳ ಕಾಲ ಜೈಲಿನಲ್ಲೇ ದಿನ ದೂಡುವುದು ಅನಿವಾರ್ಯವಾಗಿದೆ. ಸುಪ್ರೀಂ ಕೋರ್ಟ್‌ನ ಈ ಮಹತ್ವದ ಆದೇಶ ಹೊರಬೀಳುತ್ತಿದ್ದಂತೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ…

Read More

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರ ಹಮ್ಮಿಕೊಂಡಿರುವ ಬಹುನಿರೀಕ್ಷಿತ ‘ಸಾಧನಾ ಸಮಾವೇಶ’ದ ದಿನಾಂಕದಲ್ಲಿ ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ನಿಗದಿಯಾಗಿದ್ದ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿಯೇ ಈ ಸಮಾವೇಶವನ್ನು ನಡೆಸಲು ಸದ್ಯ ತೀರ್ಮಾನಿಸಲಾಗಿದೆ. ಅಧಿಕೃತ ಮೂಲಗಳ ಮಾಹಿತಿ ಪ್ರಕಾರ, ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಜನರಿಗೆ ತಲುಪಿಸುವ ಉದ್ದೇಶದ ಈ ಸಮಾವೇಶವು ಮೇ 20 ರಂದು ನಡೆಯಬೇಕಾಗಿತ್ತು. ಆದರೆ, ಇದೀಗ ಪರಿಷ್ಕೃತ ವೇಳಾಪಟ್ಟಿಯಂತೆ ಮೇ 19 ರಂದೇ ಸಾಧನಾ ಸಮಾವೇಶವನ್ನು ಅತ್ಯಂತ ಅದ್ಧೂರಿಯಾಗಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಸೂಚನೆಯ ಮೇರೆಗೆ ಈ ದಿನಾಂಕ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆಡಳಿತಾತ್ಮಕ ಕಾರಣಗಳು ಹಾಗೂ ಸಮಾವೇಶದ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಒಂದು ದಿನ ಮುಂಚಿತವಾಗಿಯೇ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಅಧಿಕಾರಿಗಳು ಹಾಗೂ ಪಕ್ಷದ ಪ್ರಮುಖರಿಗೆ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್…

Read More

ಬೆಳಗಾವಿ :ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಒಳಗೊಳಗೇ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ‘ಮುಂದಿನ ಮುಖ್ಯಮಂತ್ರಿ’ ಎಂದು ಬಿಂಬಿಸುವ ಬ್ಯಾನರ್ ಸಂಸ್ಕೃತಿ ಈಗ ರಾಜಧಾನಿ ಬೆಂಗಳೂರಿನಿಂದ ಕುಂದಾನಗರಿ ಬೆಳಗಾವಿಗೂ ವಿಸ್ತರಿಸಿದೆ. ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನ ಕೆಪಿಸಿಸಿ ಕಚೇರಿಯ ಮುಂಭಾಗದಲ್ಲಿ ಡಿ.ಕೆ. ಶಿವಕುಮಾರ್ ಅಭಿಮಾನಿಗಳು ಇಂತಹದ್ದೇ ಬ್ಯಾನರ್ ಹಾಕಿ ಗಮನ ಸೆಳೆದಿದ್ದರು. ಇದೀಗ ಬೆಳಗಾವಿ ನಗರದ ಪ್ರಮುಖ ವೃತ್ತಗಳಲ್ಲೂ ಡಿ.ಕೆ.ಶಿ ಮುಂದಿನ ಸಿಎಂ ಎಂಬ ಪೋಸ್ಟರ್‌ಗಳು ರಾರಾಜಿಸುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ. ಮೃಣಾಲ್ ಹೆಬ್ಬಾಳ್ಕರ್ ನೇತೃತ್ವದಲ್ಲಿ ಬ್ಯಾನರ್ ಅಳವಡಿಕೆ ವಿಶೇಷವೆಂದರೆ, ಈ ಬ್ಯಾನರ್‌ಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರು ಅಳವಡಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಈ ಬ್ಯಾನರ್‌ಗಳನ್ನು ಹಾಕಲಾಗಿದ್ದು, ಅದರಲ್ಲಿ “ಕರ್ನಾಟಕದ ಮುಂದಿನ ಮುಖ್ಯಮಂತ್ರಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು” ಎಂದು ಬರೆಯಲಾಗಿದೆ. ಬೆಳಗಾವಿಯ ಬಹುತೇಕ ಪ್ರಮುಖ…

Read More

ಹಾಸನ : ಹಾಸನದಲ್ಲಿ ಘೋರ ಘಟನೆ ನಡೆದಿದ್ದು ವರದಕ್ಷಿಣೆ ಹಣಕ್ಕಾಗಿ ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಗಂಡನೊಬ್ಬ ಚಾಕು ಇರಿದು ಕೊಲೆಗೆ ಯತ್ನಿಸಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಚಾಕುವಿನಿಂದ ಇರಿದು ಪತ್ನಿ ರೋಜಾ ಕೊಲೆಗೆ ಪತಿ ಉಮೇಶ್ ಯತ್ನಿಸಿದ್ದಾನೆ. ಗಂಭೀರವಾಗಿ ಗಾಯಕೊಂಡ ರೋಜಾ ಗೆ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಉಮೇಶ್ ಅನ್ನು ಹಾಸನ ಮಹಿಳಾ ಠಾಣೆ ಪೋಲಿಸರು ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ಮಂಜುಳಾ ಹಾಗೂ ಅತ್ತಿಗೆ ವೀಣಾ ವಿರುದ್ಧವು ಪ್ರಕರಣ ದಾಖಲಾಗಿದೆ. ಹಾಸನ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Read More