Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಳಗಾವಿ : ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಲಾಂಗು ಕಟ್ಟಿಗೆ ಹಿಡಿದು ಮಾರಮಾರಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಪನಾಳ ಗ್ರಾಮದ ಬಿಲಕಾರ ತೋಟದಲ್ಲಿ ನಡೆದಿದೆ. ಸತ್ಯಪ್ಪ ಬಿಲಾಕರ ಇವರ ಜಮೀನನ್ನು ಪರಮಪ್ಪ ಹರಿಜನ ಹಾಗೂ ಲಕ್ಷ್ಮಿತಾಯಿ ಹರಿಜನ ಎಂಬ ದಂಪತಿ ಉಳುಮೆ ಮಾಡುತ್ತಿದ್ದರು. ಜಮೀನಿನಲ್ಲಿ ಅರಿಶಿಣ ಬೆಳೆಯನ್ನು ಬೆಳೆದಿದ್ದರು. ಇಂದು ಏಕಾಏಕಿ ಬಂದು ಜಮೀನು ಬಿಟ್ಟು ಹೋಗಿ ಅಂತ ಸತ್ಯಪ್ಪ ಹಲ್ಲೆ ನಡೆಸಿದ್ದಾರೆ. ದೊಣ್ಣೆ, ಮಚ್ಚು ಕಲ್ಲುಗಳಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಬಸವರಾಜ್ ವಿವೇಕಾನಂದ ಸೇರಿ 8 ಜನರಿಂದ ಹಲ್ಲೆ ಮಾಡಿದ್ದಾರೆ. ಹೊಡೆದಾಟದ ಭೀಕರ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು ಸದ್ಯ ಗಾಯಳುಗಳನ್ನ ಗೋಕಾಕ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ

Read More

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯಲ್ಲಿ ಇಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸಜ್ಜಾಗುತ್ತಿದೆ. ಇಂದಿನ ಪಂದ್ಯದಲ್ಲಿ ಆರ್‌ಸಿಬಿ ತಂಡವು ಪ್ರಮುಖ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ತಂಡದ ಪ್ರಮುಖ ಸ್ಫೋಟಕ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅನುಪಸ್ಥಿತಿಯಲ್ಲಿ ಜೇಕಬ್ ಬೆಥೆಲ್‌ಗೆ ಆರಂಭಿಕನಾಗಿ ಸಾಕಷ್ಟು ಅವಕಾಶಗಳನ್ನು ನೀಡಲಾಗಿತ್ತು. ಆದರೆ, ಬೆಥೆಲ್ ಸಿಕ್ಕ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಆರಂಭಿಕನಾಗಿ ವೆಂಕಟೇಶ್ ಅಯ್ಯರ್: ಜೇಕಬ್ ಬೆಥೆಲ್ ಸತತ ವೈಫಲ್ಯ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಇಂದಿನ ಪಂದ್ಯದಲ್ಲಿ ಆರ್‌ಸಿಬಿ ಆರಂಭಿಕ ವಿಭಾಗದಲ್ಲಿ ದೊಡ್ಡ ಬದಲಾವಣೆ ಮಾಡಲು ಮುಂದಾಗಿದೆ. ಕಳೆದ ಪಂದ್ಯದಲ್ಲಿ ಅತ್ಯಾಕರ್ಷಕ ಅರ್ಧಶತಕ ಸಿಡಿಸಿ ತಂಡಕ್ಕೆ ಅದ್ಭುತ ಜಯ ತಂದುಕೊಟ್ಟಿದ್ದ ಎಡಗೈ ಬ್ಯಾಟರ್ ವೆಂಕಟೇಶ್ ಅಯ್ಯರ್ ಅವರಿಗೆ ಪ್ರಮೋಷನ್ ಸಿಗುವ ಸಾಧ್ಯತೆಯಿದೆ. ಇಂದಿನ ಪಂದ್ಯದಲ್ಲಿ ಕಿಂಗ್ ವಿರಾಟ್ ಕೊಹ್ಲಿ ಜೊತೆ ವೆಂಕಟೇಶ್ ಅಯ್ಯರ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂದು ಕ್ರಿಕೆಟ್ ವಲಯದಲ್ಲಿ ಬಲವಾಗಿ ಕೇಳಿಬರುತ್ತಿದೆ. ಬೌಲಿಂಗ್ ವಿಭಾಗಕ್ಕೆ…

Read More

ನವದೆಹಲಿ : ಸದ್ಯ ಭಾರತದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಕಾಕ್ರೋಚ್ ಜನತಾ ಪಾರ್ಟಿ, ಜೆನ್ Z ಯುವಕರನ್ನು ಆಕರ್ಷಿಸುತ್ತಿದೆ. ಆದರೆ, ಈ ಪಕ್ಷಕ್ಕೆ ಸೇರಲು ಕಳುಹಿಸಲಾಗುವ ವಾಟ್ಸ್​ಆ್ಯಪ್​ ಲಿಂಕ್‌ಗಳ ಮೂಲಕ ಸೈಬರ್ ವಂಚಕರು ಬ್ಯಾಂಕ್ ಖಾತೆಗಳನ್ನು ಲೂಟಿ ಮಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದ್ದು, ಅಪರಿಚಿತ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ಸೂಚಿಸಿದೆ. ಹೌದು ಜನರನ್ನು ಮರುಳು ಮಾಡಲು, ಅವರ ಬ್ಯಾಂಕ್​ ಖಾತೆಯನ್ನು ಲೂಟಿ ಮಾಡಲು ಹೊಸ ಹೊಸ ಪ್ರಯೋಗ ಮಾಡುತ್ತಲೇ ಬಂದಿದೆ. ಸೋ ಕಾಲ್ಡ್​ ವೆಲ್​ ಎಜುಕೇಟೆಡ್​ ಅರ್ಥಾತ್​ ಸುಶಿಕ್ಷಿತರು ಎನ್ನಿಸಿಕೊಂಡಿರುವ ಜನರೇ ಇವರ ಮೋಸಕ್ಕೆ ಬಲಿಯಾಗಿ ಲಕ್ಷ ಲಕ್ಷ ಕಳೆದುಕೊಳ್ಳುತ್ತಿದ್ದಾರೆ. ಪೊಲೀಸರು, ಮಾಧ್ಯಮಗಳಲ್ಲಿ ಎಷ್ಟೇ ಎಚ್ಚರಿಕೆ ಬಂದರೂ, ತಮಗೆ ಆಮಿಷ ತೋರಿ ಬಂದಿರುವ ಲಿಂಕ್​ ನೋಡಿದ ತಕ್ಷಣ ಎಲ್ಲಾ ಎಚ್ಚರಿಕೆಯೂ ಮರೆತು ಹೋಗಿ ಲಿಂಕ್​ ಕ್ಲಿಕ್​ ಮಾಡಿ ದುಡ್ಡು ಕಳೆದುಕೊಂಡಿರುವವರೇ ಲಕ್ಷ ಲಕ್ಷ ಮಂದಿ ಇದ್ದಾರೆ. ಹೀಗೆ ಕಳೆದುಕೊಂಡ ದುಡ್ಡು ಸಿಗುವುದು ಕೂಡ ಅತ್ಯಂತ ವಿರಳ.…

Read More

ಹುಬ್ಬಳ್ಳಿ: ಮಕ್ಕಳಿಲ್ಲದ ದಂಪತಿಗಳಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ (KIMS / ಕೆಎಂಸಿ-ಆರ್‌ಐ) ಮಹತ್ತರ ಹೆಜ್ಜೆಯಿಟ್ಟಿದೆ. ಇಲ್ಲಿನ ಸ್ತ್ರೀರೋಗ ಹಾಗೂ ಪ್ರಸೂತಿ ವಿಭಾಗದ 2ನೇ ಮಹಡಿಯಲ್ಲಿ ನೂತನ ಕೃತಕ ಗರ್ಭಧಾರಣೆ ಕೇಂದ್ರವನ್ನು (IVF) ಸಂಪೂರ್ಣ ಸರ್ಕಾರಿ ಮಾದರಿಯಲ್ಲಿ ಆರಂಭಿಸಲಾಗುತ್ತಿದ್ದು, ಇದು ಕರ್ನಾಟಕದಲ್ಲೇ ಇಂತಹ ಮೊದಲ ಸರ್ಕಾರಿ ಐವಿಎಫ್ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಹುಬ್ಬಳ್ಳಿಯ ಈ ಕೇಂದ್ರದ ಪ್ರಗತಿಯನ್ನು ಗಮನಿಸಿರುವ ರಾಜ್ಯ ಸರ್ಕಾರವು, ಪ್ರಸ್ತುತ ರಾಜ್ಯದ ಇನ್ನೂ ಮೂರು ಪ್ರಮುಖ ವೈದ್ಯಕೀಯ ಕಾಲೇಜುಗಳಲ್ಲಿಯೂ ಐವಿಎಫ್ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿದೆ. ಕೆಲವು ತಿಂಗಳುಗಳ ಹಿಂದೆಯೇ ಈ ಕೇಂದ್ರವು ಸಾರ್ವಜನಿಕರ ಸೇವೆಗೆ ಲಭ್ಯವಾಗಬೇಕಿತ್ತಾದರೂ, ಆರಂಭದಲ್ಲಿ ಕೆಲವು ಗೊಂದಲಗಳಿಂದಾಗಿ ವಿಳಂಬವಾಗಿತ್ತು. ಮೊದಲು ಈ ಕೇಂದ್ರವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಸರ್ಕಾರ ನಿಗದಿಪಡಿಸುವ ದರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಕೇಂದ್ರ ನಡೆಸುವುದು ಕಷ್ಟಸಾಧ್ಯವಾಗಿತ್ತು. ಕೇಂದ್ರದ ಕಾರ್ಯನಿರ್ವಹಣೆ ಮತ್ತು…

Read More

ಬೆಂಗಳೂರು: ಬಂಗಾರ ಖರೀದಿಸುವ ಯೋಚನೆಯಲ್ಲಿದ್ದ ಗ್ರಾಹಕರಿಗೆ ಶುಕ್ರವಾರದ ದಿನ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಇಂದು ಗಮನಾರ್ಹ ಇಳಿಕೆ ಕಂಡುಬಂದಿದೆ. ಮೇ 22ರ ಶುಕ್ರವಾರದಂದು ಹಳದಿ ಲೋಹದ ದರ ಗಣನೀಯವಾಗಿ ಕುಸಿದಿರುವುದು ಚಿನ್ನ ಪ್ರಿಯರಲ್ಲಿ ಸಂತಸ ಮೂಡಿಸಿದೆ. ಮತ್ತೊಂದೆಡೆ, ಗುರುವಾರ ಕುಸಿತ ಕಂಡಿದ್ದ ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆಯಾಗದೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಕಳೆದ ಮೂರು ದಿನಗಳಿಂದಲೂ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ತೀವ್ರ ಏರಿಳಿತಗಳು ದಾಖಲಾಗುತ್ತಿದ್ದವು. ಬುಧವಾರ ಮತ್ತು ಗುರುವಾರ ಚಿನ್ನದ ಬೆಲೆ ಸತತವಾಗಿ ಏರಿಕೆಯ ಹಾದಿಯಲ್ಲಿದ್ದರೆ, ಬೆಳ್ಳಿಯ ದರವು ಇಳಿಕೆಯ ಮುಖ ಮಾಡಿತ್ತು. ಆದರೆ ಶುಕ್ರವಾರದ ವಹಿವಾಟಿನಲ್ಲಿ ಈ ಟ್ರೆಂಡ್ ಬದಲಾಗಿದ್ದು, ಚಿನ್ನದ ದರ ಹಠಾತ್ ಕುಸಿತ ಕಾಣುವ ಮೂಲಕ ಗ್ರಾಹಕರಿಗೆ ನಿರಾಳತೆ ತಂದಿದೆ. ಆಭರಣ ತಯಾರಿಕೆಗೆ ಹೆಚ್ಚಾಗಿ ಬಳಸಲಾಗುವ 22 ಕ್ಯಾರೆಟ್ ಚಿನ್ನದ ದರದಲ್ಲಿ ಇಂದು ದೊಡ್ಡ ಮಟ್ಟದ ಇಳಿಕೆಯಾಗಿದೆ. 22 ಕ್ಯಾರೆಟ್‌ನ…

Read More

ಶಿವಮೊಗ್ಗ: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ ಕುರಿತಾದ ಚರ್ಚೆಗಳು ದಿನದಿಂದ ದಿನಕ್ಕೆ ಕಾವೇರುತ್ತಿವೆ. ತೆರೆಮರೆಯಲ್ಲಿ ಸದ್ದಿಲ್ಲದೆ ಸಭೆಗಳು, ಮಾತುಕತೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ತಾವೂ ಸಹ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಅವರು ಬಹಿರಂಗವಾಗಿಯೇ ಘೋಷಿಸಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಮುಂಬರುವ ಮೇ 27 ರಂದು ಕಾಂಗ್ರೆಸ್‌ನ ಸುಮಾರು 30 ಶಾಸಕರು ಒಟ್ಟಾಗಿ ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಲಿದ್ದೇವೆ ಎಂಬ ಮಹತ್ವದ ವಿಷಯವನ್ನು ಹಂಚಿಕೊಂಡಿದ್ದಾರೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳು ಹಾಗೂ ಹಕ್ಕುಗಳನ್ನು ಮಂಡಿಸಲು ಶಾಸಕರ ದಂಡೇ ಸಜ್ಜಾಗುತ್ತಿದೆ ಎಂದು ಅವರು ತಿಳಿಸಿದ್ದು, ಇದು ಪಕ್ಷದೊಳಗಿನ ಆಂತರಿಕ ಅಸಮಾಧಾನವನ್ನು ಮತ್ತೊಮ್ಮೆ ಮುನ್ನಲೆಗೆ ತಂದಿದೆ. ಶಾಸಕರ ಈ ದೆಹಲಿ ಪ್ರವಾಸವು ಕೇವಲ ಸಚಿವ ಸ್ಥಾನದ ಬೇಡಿಕೆಗೆ ಮಾತ್ರ…

Read More

ನವದೆಹಲಿ: ಜಾಗತಿಕವಾಗಿ ಭೀತಿ ಮೂಡಿಸುತ್ತಿರುವ ಎಬೋಲಾ ವೈರಸ್ ಹರಡುವಿಕೆಯ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು (WHO) ಅಂತರರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಈ ಗಂಭೀರ ಪರಿಸ್ಥಿತಿಯನ್ನು ಪರಿಗಣಿಸಿ, ಭಾರತದಾದ್ಯಂತ ಕೇಂದ್ರ ಸರ್ಕಾರವು ಹೈ ಅಲರ್ಟ್ ಘೋಷಣೆ ಮಾಡಿದ್ದು, ಸಾಂಕ್ರಾಮಿಕ ರೋಗ ದೇಶದೊಳಗೆ ಹರಡದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ವಿಶ್ವ ಸಂಸ್ಥೆಯ ಎಚ್ಚರಿಕೆಯ ಬೆನ್ನಲ್ಲೇ ತಕ್ಷಣ ಕಾರ್ಯಪ್ರವೃತ್ತವಾಗಿರುವ ಭಾರತದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ದೇಶದ ಎಲ್ಲಾ ಪ್ರಮುಖ ವಿಮಾನ ನಿಲ್ದಾಣಗಳು ಹಾಗೂ ಬಂದರುಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಿದೆ. ವಿದೇಶಗಳಿಂದ, ವಿಶೇಷವಾಗಿ ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರನ್ನು ತೀವ್ರ ತಪಾಸಣೆಗೆ (Screening) ಒಳಪಡಿಸಲಾಗುತ್ತಿದೆ. ಯಾವುದೇ ಶಂಕೆ ಕಂಡುಬಂದಲ್ಲಿ ಅಂತಹ ಪ್ರಯಾಣಿಕರನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡಲು ವಿಶೇಷ ಐಸೋಲೇಶನ್ ವಾರ್ಡ್‌ಗಳನ್ನು ಸಜ್ಜುಗೊಳಿಸಲಾಗಿದೆ. ಎಬೋಲಾ ವೈರಸ್‌ನ ಪ್ರಮುಖ ಲಕ್ಷಣಗಳು: ತೀವ್ರ ಜ್ವರ ಮತ್ತು ಅತಿಯಾದ ತಲೆನೋವು ಅಸಹನೀಯ ಮೈಕೈ ನೋವು ಮತ್ತು ವಿಪರೀತ ಸುಸ್ತು ಗಂಟಲು ನೋವು ಹಾಗೂ…

Read More

ಬೆಂಗಳೂರು : ಕೇಂದ್ರ ಸರ್ಕಾರದ ಆಡಳಿತ ವೈಖರಿಯನ್ನು ತರಾಟೆಗೆ ತೆಗೆದುಕೊಂಡ ಬಿ.ಕೆ. ಹರಿಪ್ರಸಾದ್, “ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನರನ್ನು ಭಿಕಾರಿ ಮಾಡಿದ್ದಾರೆ” ಎಂದು ಗಂಭೀರ ಆರೋಪ ಮಾಡಿದರು. ಪ್ರಧಾನಿಯವರು ಸಾಮಾನ್ಯ ಜನರ ಹಿತ ಕಾಯುವ ಬದಲು ಕಾರ್ಪೊರೇಟ್ ಕಂಪನಿಗಳ ಪರವಾಗಿ ನಿಂತಿದ್ದಾರೆ ಎಂದು ದೂರಿದ ಅವರು, ಕೊನೆಯ ಪಕ್ಷ ಪಾರ್ಲೆ ಕಂಪನಿಯ ಜೊತೆಗೂ ಪ್ರಧಾನಿ ಮೋದಿ ವ್ಯಾಪಾರ ಕುದುರಿಸಿದ್ದಾರೆ ಎಂದು ಲೇವಡಿ ಮಾಡಿದರು. ಇದೇ ಸಂದರ್ಭದಲ್ಲಿ ಪ್ರಾಚೀನ ರಾಜತಾಂತ್ರಿಕ ಚಾಣಕ್ಯನ ನೀತಿಯನ್ನು ಉಲ್ಲೇಖಿಸಿದ ಹರಿಪ್ರಸಾದ್, “ಯಾವಾಗ ದೇಶದ ರಾಜನೇ ವ್ಯಾಪಾರಿಯಾಗುತ್ತಾನೋ, ಆ ದೇಶದ ಪ್ರಜೆಗಳು ಭಿಕಾರಿಗಳಾಗುತ್ತಾರೆ ಎಂಬುದು ಚಾಣಕ್ಯ ನೀತಿ. ಇಂದು ಭಾರತದಲ್ಲಿ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದ ಆಡಳಿತಗಾರನೇ ವ್ಯಾಪಾರ ಮಾಡಲು ಹೊರಟಿರುವುದರಿಂದ ದೇಶದ ಜನಸಾಮಾನ್ಯರು ಆರ್ಥಿಕವಾಗಿ ಕಂಗಾಲಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೋದಿಯನ್ನು ಆಸ್ಟ್ರಿಚ್ ಪಕ್ಷಿಗೆ ಹೋಲಿಸಿದ ಹರಿಪ್ರಸಾದ್ ಪ್ರಧಾನಿ ಮೋದಿಯವರ ಕಾರ್ಯವೈಖರಿಯನ್ನು ಉದ್ರೇಕಕಾರಿ ಮಾತುಗಳಲ್ಲಿ ಟೀಕಿಸಿದ ಹರಿಪ್ರಸಾದ್, ಮೋದಿಯವರನ್ನು ‘ಆಸ್ಟ್ರಿಚ್’ (ಉಷ್ಟ್ರಪಕ್ಷಿ) ಪಕ್ಷಿಗೆ ಹೋಲಿಸಿದರು.…

Read More

ತಿರುನಂತಪುರಂ: ಕೇರಳ ರಾಜಕಾರಣದ ಹಿರಿಯ ಮುಖಂಡ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಶಾಸಕ ತಿರುವನಂಚೂರು ರಾಧಾಕೃಷ್ಣನ್ ಅವರು ಕೇರಳದ 16ನೇ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಇಂದು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಸ್ಪೀಕರ್ ಚುನಾವಣೆಯಲ್ಲಿ ಅವರು ಭರ್ಜರಿ ಬಹುಮತದೊಂದಿಗೆ ಜಯಭೇರಿ ಬಾರಿಸುವ ಮೂಲಕ ಈ ಉನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ್ದಾರೆ. ಒಟ್ಟು 140 ಸದಸ್ಯ ಬಲದ ಕೇರಳ ವಿಧಾನಸಭೆಯಲ್ಲಿ, ಹಂಗಾಮಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ ಜಿ. ಸುಧಾಕರನ್ ಅವರು ಚುನಾವಣಾ ಅಧಿಕಾರಿಯಾಗಿದ್ದ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿದ್ದರು. ಹೀಗಾಗಿ ಸದನದಲ್ಲಿ ಒಟ್ಟು 139 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಮೈತ್ರಿಕೂಟದ ಅಭ್ಯರ್ಥಿಯಾಗಿದ್ದ ರಾಧಾಕೃಷ್ಣನ್ ಅವರು ಬರೋಬ್ಬರಿ 101 ಮತಗಳನ್ನು ಪಡೆಯುವ ಮೂಲಕ ಸುಲಭ ಜಯ ಸಾಧಿಸಿದರು. ಇನ್ನುಳಿದಂತೆ ಎಡರಂಗ (LDF) ಮೈತ್ರಿಕೂಟದ ಅಭ್ಯರ್ಥಿಯಾಗಿದ್ದ ಎ.ಸಿ. ಮೊಯ್ದೀನ್ ಅವರು 35 ಮತಗಳನ್ನು ಪಡೆಯಲಷ್ಟೇ ಶಕ್ತರಾದರು. ಮತ್ತೊಂದೆಡೆ, ಭಾರತೀಯ ಜನತಾ ಪಾರ್ಟಿ (BJP) ಪರವಾಗಿ…

Read More

ಉತ್ತರಕನ್ನಡ : ರಾಜ್ಯದಲ್ಲಿ ಮಾನವೀಯತೆಯನ್ನೇ ಮರೆತು ವರ್ತಿಸುವ ಕೃತ್ಯಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಜಿಲ್ಲೆಯಲ್ಲಿ ಇಡೀ ಸಮಾಜವೇ ತಲೆತಗ್ಗಿಸುವಂತಹ ಘೋರ ಘಟನೆಯೊಂದು ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ತಂದೆಯೊಬ್ಬ ತನ್ನ ಹೆತ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿರುವ ಹೇಯ ಕೃತ್ಯ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ವಿಕೃತಿ: ಆರೋಪಿ ತಂದೆಯು ಪ್ರತಿನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಘಟನೆ ನಡೆದ ದಿನದಂದು ತೀವ್ರವಾಗಿ ಮದ್ಯಪಾನ ಮಾಡಿದ್ದ ಈತ, ಮದ್ಯದ ಅಮಲಿನಲ್ಲಿ ತಾನು ಮಾಡುತ್ತಿರುವುದೇನು ಎಂಬುದನ್ನೂ ಮರೆತು, ರಕ್ಷಣೆ ನೀಡಬೇಕಾದ ಹೆತ್ತ ಮಗಳ ಮೇಲೆಯೇ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಂದೆಯ ಈ ವಿಕೃತ ಕೃತ್ಯದಿಂದ ಇಡೀ ಭಾಗದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನೆರೆಹೊರೆಯವರಿಂದ ಹೊರಬಂದ ಸತ್ಯ: ಪಾಪಿ ತಂದೆಯ ಅತ್ಯಾಚಾರಕ್ಕೆ ಒಳಗಾದ 13 ವರ್ಷದ ಅಪ್ರಾಪ್ತ ಬಾಲಕಿ, ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿದ್ದಾಳೆ. ತಂದೆಯ ಭಯಾನಕ ಕೃತ್ಯದಿಂದ ನೊಂದ ಬಾಲಕಿ, ಧೈರ್ಯ…

Read More