Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಜೆಡಿಎಸ್ ಪಕ್ಷದ ಬೆಳವಣಿಗೆಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ ನಾನು ಸುಮ್ಮನೆ ಕೂರಲ್ಲ. ನನ್ನ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ರಾಜ್ಯ ಮತ್ತು ದೇಶದ ವಿಚಾರವನ್ನು ಯಾರ ಹಂಗಿಲ್ಲದೆ ಮಾತನಾಡುತ್ತೇನೆ. ಆದರೂ ಪಕ್ಷ ಸಂಘಟನೆ ಮಾಡಬೇಕು ಜಿಬಿಎ ಚುನಾವಣೆಗೆ ಕಮಿಟಿ ಮಾಡಲಾಗಿದೆ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸ್ಥಳಿಯ ಸಂಸ್ಥೆ ಚುನಾವಣೆಯ ಸಿದ್ಧತೆ ಮಾಡುತ್ತೇವೆ. ಎಂದು ಮಾಜಿ ಪ್ರಧಾನಿ HD ದೇವೇಗೌಡ ತಿಳಿಸಿದರರು. ನನ್ನ ಅವಶ್ಯಕತೆ ಇದ್ದಲ್ಲಿ ಶಕ್ತಿಮೀರಿ ಕೆಲಸ ಮಾಡುತ್ತೇನೆ. ರಾಜ್ಯ, ದೇಶಕ್ಕೆ ಒಳ್ಳೇದಾಗುವ ಹಿನ್ನಡೆಯಲ್ಲಿ ಕೆಲಸ ಮಾಡುತ್ತೇನೆ. ರಾಜ್ಯಸಭಾ ಸದಸ್ಯ ಸ್ಥಾನದಿಂದ ಮುಗೀತು ಎಂದು ಭಾವಿಸಬೇಡಿ ನನ್ನ ಹಾಗೂ ಮೋದಿ ಸಂಬಂಧ ಮುಗಿತು ಎಂದು ಭಾವಿಸಬೇಡಿ ಎಂದು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ತಿಳಿಸಿದರು. ಹಲಸು ಮಾವು ಮತ್ತು ನೇರಳೆ ಹಣ್ಣಿನ ಬೋರ್ಡ್ ಮಾಡಲು ಮನವಿ ಮಾಡಿದ್ದೇನೆ. ಕೇಂದ್ರ ತೋಟಗಾರಿಕಾ ಸಚಿವರಿಗೆ ಪತ್ರದ ಮೂಲಕ ಮನವಿ ಮಾಡಿದ್ದೇನೆ.…
ಬೆಂಗಳೂರು : ಬೆಂಗಳೂರಿನಲ್ಲಿ ಕಸದ ಹೆಸರಿನಲ್ಲಿ 36,000 ಕೋಟಿ ರೂಪಾಯಿ ಲೂಟಿ ಮಾಡಲಾಗಿದೆ. ಅಲ್ಲದೆ 36,000 ಕೋಟಿ ಹಗರಣದಲ್ಲಿ 10,000 ಕೋಟಿ ಕಿಕ್ ಬ್ಯಾಂಕ್ ಪಡೆದಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ ಗಂಭೀರವಾಗಿ ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಸದ ಹೆಸರಿನಲ್ಲಿ ಮಾಡಿರುವ ಲೂಟಿ ಬಗ್ಗೆ ದಾಖಲೆ ಸಂಗ್ರಹಿಸಿದ್ದು ಕಸದಲ್ಲಿ ಇಷ್ಟು ದೊಡ್ಡ ಹಗಿರಣ ದೇಶದ ಇತಿಹಾಸದಲ್ಲಿಯೇ ನಡೆದಿಲ್ಲ ಮುಂದಿನ 30 ವರ್ಷಕ್ಕೆ ಟೆಂಡರ್ ಕೊಟ್ಟು, ಹಗರಣ ಮಾಡಿದ್ದಾರೆ ಜೊತೆಗೆ 35 ವರ್ಷಕ್ಕೆ ವಿಸ್ತರಣೆ ಮಾಡಬಹುದು ದೆಹಲಿ ಕಂಪನಿಯಿಂದ ಹಗರಣ ನಡೆದಿದೆ ಕಾಂಗ್ರೆಸ್ ಹೈಕಮಾಂಡ್ ಮೂಲಕವೇ ಹಗರಣ ನಡೆಸಿದ್ದಾರೆ. ರಾಮ್ ಕಿ ಹೆಸರಿನ ಕಂಪನಿ ಈಗಾಗಲೇ ಕಪ್ಪು ಪಟ್ಟಿಗೆ ಸೇರಿದೆ ಕಪ್ಪು ಪಟ್ಟಿಗೆ ಸೇರಿದ ಕಂಪನಿಗೆ ಇವರು ಟೆಂಡರ್ ಕೊಟ್ಟಿದ್ದಾರೆ. ಕಸ ಸಂಸ್ಕರಣೆ ಮತ್ತು ವಿಲೇವಾರಿಗೆ 380 ಕೋಟಿ ರೂಪಾಯಿ ಖರ್ಚು ಆಗುತ್ತೆ. ಪೌರಕಾರ್ಮಿಕರಿಗೆ 444 ಕೋಟಿ ರೂಪಾಯಿ ಸಂಬಳ ಕೊಡಲಾಗುತ್ತಿದೆ. ವಾರ್ಷಿಕವಾಗಿ ಒಟ್ಟು 1,344 ಕೋಟಿ ರೂಪಾಯಿ…
ಕಲಬುರ್ಗಿ : ಕಲ್ಬುರ್ಗಿ ಜನತೆಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕಲ್ಬುರ್ಗಿ ಮತ್ತು ಬೆಂಗಳೂರು ನಡುವೆ ವಿಮಾನ ಸಂಚಾರ ಪುನಾರಂಭವಾಗಿದೆ. ಇಂದಿನಿಂದ ಸ್ಟಾರ್ ಏರ್ ವಿಮಾನ ಸಂಚರಿಸಲಿದೆ. ಶಾಸಕ ಎಂ.ವೈ ಪಾಟೀಲ್ ಹಾಗು ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅವರು ಇಂದು ಚಾಲನೆ ನೀಡಿದರು. ಕೆಕೆಆರ್ಡಿಬಿ ಇಂದ ಆರ್ಥಿಕ ಸಹಾಯ ಹಿನ್ನೆಲೆ ಇಂದಿನಿಂದ ಸೇವೆ ಪುನರಂಭವಾಯಿತು ಅಂದಾಜು 28 ಕೋಟಿ ರೂಪಾಯಿ ಅನುದಾನ ನೀಡಿರುವ ಕೆಕೆಆರ್ಡಿಬಿ ಪ್ರತಿದಿನ ಬೆಳಿಗ್ಗೆ 7:30ಕ್ಕೆ ಕಲ್ಬುರ್ಗಿಗೆ ಸ್ಟಾರ್ ಏರ್ ವಿಮಾನ ಆಗಮಿಸಲಿದೆ. ಬೆಳಿಗ್ಗೆ 8:10ಕ್ಕೆ ಕಲಬುರ್ಗಿಯಿಂದ ಬೆಂಗಳೂರಿಗೆ ಈ ಒಂದು ಫ್ಲೈಟ್ ತೆರಳಲಿದೆ.
ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಕ್ಕೆ ಸೈಡ್ ನೀಡುವ ವಿಚಾರವಾಗಿ ಮಂಗಳವಾರ ರಾತ್ರಿ ಹೊರರಾಜ್ಯದ ಪ್ರವಾಸಿಗರು ಹಾಗೂ ಸ್ಥಳೀಯ ವ್ಯಕ್ತಿಯ ನಡುವೆ ಗಲಾಟೆ ನಡೆದು, ದೂರು ಪ್ರತಿದೂರು ದಾಖಲಾಗಿದೆ. ಕೊರಂಗ್ರಪಾಡಿ ನಿವಾಸಿ ಸುಪ್ರೀತ್ ಅವರು ಕಾರು ಚಲಾಯಿಸುತ್ತಿದ್ದ ವೇಳೆ ಹೈದರಾಬಾದ್ ಮೂಲದ ಪ್ರವಾಸಿಗರೊಂದಿಗೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಕಾರು ಹತ್ತಿಸಲು ಯತ್ನಿಸಿದ್ದಾರೆ ಎಂದು ಪ್ರವಾಸಿಗರು ದೂರಿದ್ದಾರೆ. ಬಳಿಕ ವಾಗ್ವಾದ ತೀವ್ರಗೊಂಡು ಹೊ*ಡೆ*ದಾಟಕ್ಕೆ ತಿರುಗಿದೆ. ಕಾರಿನಲ್ಲಿದ್ದ ಕೋಲಿನಿಂದ ಸುಪ್ರೀತ್ ಅವರು ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಹೈದರಾಬಾದ್ ಮೂಲದ ಪವನ್ ಅವರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದಕ್ಕೆ ಪ್ರತಿಯಾಗಿ, ವಾಹನವನ್ನು ನಿಧಾನವಾಗಿ ಚಲಾಯಿಸುವಂತೆ ಹೇಳಿದ್ದಕ್ಕೆ ಪ್ರವಾಸಿಗರೇ ಗಲಾಟೆ ಆರಂಭಿಸಿದ್ದು, ತನ್ನ ಕಾರಿನ ಗಾಜು ಜಖಂಗೊಳಿಸಿದ್ದಾರೆ ಎಂದು ಸುಪ್ರೀತ್ ಪ್ರತಿದೂರು ನೀಡಿದ್ದಾರೆ. ಅಲ್ಲದೆ, ಪತ್ನಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಪ್ರವಾಸಿಗರು ಕುರ್ಚಿ ಹಾಗೂ ಫೋಟೋ ಸ್ಟ್ಯಾಂಡ್ನಿಂದ ಹಲ್ಲೆ*…
ಬೀದರ್ : ಬೀದರ್ ನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಶಾಲಾ ಕಟ್ಟಡದಿಂದ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಜನಸೇವಾ ಖಾಸಗಿ ಶಾಲೆಯಲ್ಲಿ ಈ ಒಂದು ದುರಂತ ನಡೆದಿದೆ. ಬೀದರ್ ನಗರದ ಶಾಂತಿನಗರದ ನಿವಾಸಿ 15 ವರ್ಷದ ಸಮೀರ್ ಮೃತ ಬಾಲಕ ತಿಳಿದು ಬಂದಿದೆ. ಎಲ್ಐಸಿ ಕಾಲೋನಿಯಲ್ಲಿರುವ ಜನ ಸೇವಾ ಖಾಸಗಿ ಶಾಲೆಯಲ್ಲಿ ಈ ಒಂದು ದುರಂತ ನಡೆದಿದೆ. ಶಾಲಾ ಸಿಬ್ಬಂದಿ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತ ಬಾಲಕ ಸಮೀರ್ ಪೋಷಕರು ಆರೋಪಿಸಿದ್ದಾರೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಯನ್ನು ಎದುರು ನೋಡುತ್ತಿದ್ದ ಉದ್ಯೋಗ ಆಕಾಂಕ್ಷಿಗಳಿಗೆ ಕೊನೆಗೂ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಶಾಲಾ ಶಿಕ್ಷಣ ಇಲಾಖೆಯ ಬಲವರ್ಧನೆಗೆ ಮುಂದಾಗಿರುವ ಸರ್ಕಾರ, ಮುಂದಿನ 100 ದಿನಗಳ ಒಳಗಾಗಿ ಬರೋಬ್ಬರಿ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಹತ್ವದ ಅನುಮೋದನೆ ನೀಡಿದೆ. ಪ್ರಸ್ತುತ ರಾಜ್ಯಾದ್ಯಂತ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ತೀವ್ರವಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ರಾಜ್ಯದಲ್ಲಿ ಸದ್ಯ 80,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಇದರಿಂದಾಗಿ ಗ್ರಾಮೀಣ ಹಾಗೂ ನಗರ ಭಾಗದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಹಿನ್ನಡೆಯಾಗುತ್ತಿದ್ದು, ಮಕ್ಕಳ ವ್ಯಾಸಂಗಕ್ಕೆ ತೊಂದರೆಯಾಗುತ್ತಿರುವುದನ್ನು ಮನಗಂಡು ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಶಿಕ್ಷಕರ ಕೊರತೆಯನ್ನು ಹಂತ-ಹಂತವಾಗಿ ನೀಗಿಸಲು ಯೋಜಿಸಿರುವ ಸರ್ಕಾರ, ಒಟ್ಟಾರೆ 51,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಹಸಿರು ನಿಶಾನೆ ಪಡೆದುಕೊಂಡಿದೆ. ಈ ಬೃಹತ್ ನೇಮಕಾತಿ ಪ್ರಕ್ರಿಯೆಯ ಮೊದಲ…
ಬಳ್ಳಾರಿ : ಬಳ್ಳಾರಿ ಗಡಿ ಭಾಗದಲ್ಲಿ ಲಾರಿ ಮತ್ತು ಟ್ಯಾಂಕರ್ ನಡುವೆ ಭೀಕರವಾದ ಅಪಘಾತ ಸಂಭವಿಸಿದ್ದು, ಬೆಂಕಿಯಿಂದ ಎರಡು ವಾಹನಗಳು ಹೊತ್ತಿ ಉರಿದಿವೆ. ಘಟನೆಯಲ್ಲಿ ಓರ್ವ ಚಾಲಕ ಸಜೀವ ದಹನಗೊಂಡಿದ್ದಾನೆ. ಅನಂತಪುರ ಜಿಲ್ಲೆಯ ಡಿ ಹಿರೇಹಾಳ ಮಂಡಲದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಜಾಜರಕಲ್ ಟೋಲ್ ಪ್ಲಾಜಾ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಪಂಚರಾಗಿ ಟ್ಯಾಂಕರ್ ರಸ್ತೆ ಬದಿ ನಿಂತಿತ್ತು. ಈ ವೇಳೆ ರಾಂಪುರಂ ಕಡೆಯಿಂದ ಲಾರಿ ವೇಗವಾಗಿ ಬಂದಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಜೀವ ದಹನಗೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ಭಾರಿ ತಾಂತ್ರಿಕ ಲೋಪ ಹಾಗೂ ಸಾರ್ವಜನಿಕ ಹಣ ದುರ್ಬಳಕೆಯಾಗಿರುವುದು ಪತ್ತೆಯಾಗಿದೆ. ಯೋಜನೆಯಡಿ ಈಗಾಗಲೇ ಮೃತಪಟ್ಟಿರುವ ಸುಮಾರು 1.48 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಕಳೆದ ಐದು ತಿಂಗಳುಗಳಿಂದ ಬರೋಬ್ಬರಿ 128 ಕೋಟಿ ರೂಪಾಯಿಗೂ ಅಧಿಕ ಹಣ ಜಮೆಯಾಗಿರುವ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ, ಯೋಜನೆಯನ್ನು ಸಮೂಲವಾಗಿ ಪರಿಷ್ಕರಿಸಲು ಮುಂದಾಗಿದ್ದು, ಅರ್ಹರಿಂದ ಹೊಸದಾಗಿ ಮರು ಅರ್ಜಿ ಸ್ವೀಕರಿಸಲು ಗಂಭೀರ ಸಿದ್ಧತೆ ನಡೆಸಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ನಡೆಸಿದ ತಾಂತ್ರಿಕ ಆಡಿಟ್ ಹಾಗೂ ಸುದೀರ್ಘ ಪರಿಶೀಲನೆ ವೇಳೆ ಈ ದೋಷ ಪತ್ತೆಯಾಗಿದೆ. ರಾಜ್ಯಾದ್ಯಂತ ಪ್ರತಿ ತಿಂಗಳು 2,000 ರೂ. ಪಡೆಯುತ್ತಿದ್ದ ಸುಮಾರು 1,48,000 ಫಲಾನುಭವಿ ಮಹಿಳೆಯರು ನಿಧನರಾಗಿದ್ದರೂ, ಅವರ ಖಾತೆಗಳಿಗೆ ಹಣ ವರ್ಗಾವಣೆಯಾಗುತ್ತಲೇ ಇತ್ತು. ಈ ಮೂಲಕ ಒಟ್ಟು 128 ಕೋಟಿ ರೂಪಾಯಿಗಳಷ್ಟು ಸಾರ್ವಜನಿಕ ಹಣ…
ಬೆಂಗಳೂರು: ಸ್ಯಾಂಡಲ್ವುಡ್ನ ಪ್ರಖ್ಯಾತ ನಟಿ ರುಕ್ಮಿಣಿ ವಸಂತ್ ಅವರ ಅಶ್ಲೀಲವಾಗಿ ಮಾರ್ಫ್ ಮಾಡಲಾದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಸಿಸಿಬಿ (ಕೇಂದ್ರ ಅಪರಾಧ ವಿಭಾಗ) ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ನಟಿ ರುಕ್ಮಿಣಿ ವಸಂತ್ ಅವರು ನೀಡಿದ ಅಧಿಕೃತ ದೂರಿನ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಸಿಬಿ ಪೊಲೀಸರು, ಈ ಕೃತ್ಯದ ಹಿಂದೆ ಇರುವ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಹತ್ತಾರು ನಕಲಿ ಐಡಿಗಳ ಬಳಕೆ: ಪ್ರಾಥಮಿಕ ತನಿಖೆಯ ಪ್ರಕಾರ, ದುಷ್ಕರ್ಮಿಗಳು ಕೇವಲ ಒಂದೆರಡು ಖಾತೆಗಳಿಂದ ಈ ಫೋಟೋಗಳನ್ನು ಹಂಚಿಕೊಂಡಿಲ್ಲ. ಬದಲಿಗೆ, ಹತ್ತಾರು ನಕಲಿ ಐಡಿಗಳನ್ನು (Fake Profiles) ಸೃಷ್ಟಿಸಿ ಅದರ ಮೂಲಕ ನಟಿಯ ತೇಜೋವಧೆ ಮಾಡಲು ಯತ್ನಿಸಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಸೈಬರ್ ಕ್ರೈಮ್ ವಿಭಾಗದ ಅಧಿಕಾರಿಗಳು ತಾಂತ್ರಿಕ ನೆರವನ್ನು ಪಡೆದುಕೊಂಡು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಸರ್ವಿಸ್ ಪ್ರೊವೈಡರ್ ಕಂಪನಿಗಳಿಗೆ ಸಿಸಿಬಿ ಪತ್ರ: ಯಾವ ಐಪಿ ವಿಳಾಸಗಳು ಮತ್ತು ಮೊಬೈಲ್ ಸಂಖ್ಯೆಗಳನ್ನು ಬಳಸಿ ಈ ನಕಲಿ ಖಾತೆಗಳನ್ನು ತೆರೆಯಲಾಗಿದೆ…
ಬೆಂಗಳೂರು : ಬೆಂಗಳೂರಲ್ಲಿ ಮಹಿಳೆಯ ಜೊತೆಗೆ ವೃದ್ಧನೊಬ್ಬ ಅಸಭ್ಯವಾಗಿ ವರ್ತನೆ ಮಾಡಿದ್ದಾನೆ. ಪಕ್ಕದ ಮನೆಯ ಮನೆಯ ಮಹಿಳೆಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಘಟನೆ ನಡೆದಿದೆ. ಪಕ್ಕದ ಮನೆ ನಿವಾಸಿಯಾಗಿರುವ ವೃದ್ಧಾ ಕೃಷ್ಣಮೂರ್ತಿ ಬೊನ್ ಇಟ್ಟು ಸುಮಾರು 3 ರಿಂದ 4 ನಾಯಿಗಳನ್ನು ಸಾಕುತ್ತಿದ್ದ. ಈ ಬಗ್ಗೆ ಮಹಿಳೆ ಸಾಕಷ್ಟು ಬಾರಿ ಮನವಿ ಮಾಡಿದ್ದಳು. ಮಹಿಳೆಯ ಜೊತೆ ಯಾವಾಗಲೂ ಕಿರಿಕ್ ಮಾಡಿ ಆತ ಅಸಭ್ಯವಾಗಿ ವರ್ತನೆ ತೋರುತ್ತಿದ್ದ. ಮಹಿಳೆ ಕ್ಯಾಬ್ ನಲ್ಲಿ ಬಂದಾಗ ರಸ್ತೆ ಬ್ಲಾಕ್ ಆಗಿರುತ್ತಿತ್ತು ಹೀಗಾಗಿ ಪ್ರತಿನಿತ್ಯ ನಡೆದು ಬರುವ ಪರಿಸ್ಥಿತಿ ನಿರ್ಮಾಣ ಆಗಿತ್ತು. ಈ ಬಗ್ಗೆ ಜಿಬಿಎ ಅಧಿಕಾರಿಗಳಿಗೂ ಮಹಿಳೆ ದೂರು ಕೊಟ್ಟಿದ್ದಳು. ಇದು ಸಾರ್ವಜನಿಕರ ರಸ್ತೆ ಈ ರೀತಿ ಮಾಡಬಾರದು ಎಂದು ಜಿಬಿಎ ಸೂಚನೆ ನೀಡಿತ್ತು. ಇದೇ ಕಾರಣಕ್ಕೆ ಮಹಿಳೆಯ ಜೊತೆ ಕೃಷ್ಣಮೂರ್ತಿ ವರ್ತನೆ ತೋರಿದ್ದಾನೆ. ಇದೀಗ ಮಹಿಳೆಯ ದೂರನ್ನು ಆಧರಿಸಿ ಆರೋಪಿ ಕೃಷ್ಣಮೂರ್ತಿನನ್ನು…














