Author: kannadanewsnow05

ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ ನಡೆದಿದ್ದು ಜಮೀನು ಮಾರಾಟ ಮಾಡಿದ ಹಣದೊಂದಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಓಮಿನಿ ವಾಹನ ತಡೆದು, ಹಲ್ಲೆ ನಡೆಸಿ ₹38 ಲಕ್ಷ ನಗದು, ಮೊಬೈಲ್‌ ದರೋಡೆ ಮಾಡಿರುವ ಘಟನೆ ಹೊನ್ನಾಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಗಡಿಭಾಗದ ಅರಕೆರೆ ಎ.ಕೆ. ಕಾಲೋನಿ ಸಮೀಪ ಶುಕ್ರವಾರ ಮುಂಜಾನೆ 4 ಗಂಟೆ ಹೊತ್ತಿಗೆ ನಡೆದಿದೆ. ಈ ಬಗ್ಗೆ ಹೊನ್ನಾಳಿ ಪೊಲೀಸ್‌ ಠಾಣೆಯ ಪಿಎಸ್‌ಐ ನಿರ್ಮಲ ದೂರು ದಾಖಲಿಸಿಕೊಂಡಿದ್ದಾರೆ. ಭದ್ರಾವತಿ ತಾಲೂಕಿನ ಮೈದೊಳಲು ಮಲ್ಲಾಪುರ ಗ್ರಾಮದ ಕಿರಾಣಿ ವರ್ತಕ ಮಾಲತೇಶ್ ಹಣ ಕಳೆದುಕೊಂಡ ದುರ್ದೈವಿ. ಹೊಸಪೇಟೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮೋರಗೇರ ಗ್ರಾಮದಲ್ಲಿದ್ದ ತನ್ನ 10 ಎಕರೆ 58 ಸೆಂಟ್ಸ್ ಜಮೀನನ್ನು ಮಾಲತೇಶ್‌ ಹೊಸಪೇಟೆಯ ಡಾಕ್ಟರ್ ಒಬ್ಬರಿಗೆ ಮಾರಾಟ ಮಾಡಿದ್ದರು. ಜಮೀನು ಮಾರಾಟದ 1.21 ಕೋಟಿ ಹಣವನ್ನು ಮರಿಯಮ್ಮನಹಳ್ಳಿಯಲ್ಲಿ ಪಡೆದುಕೊಂಡಿದ್ದ ಮಾಲತೇಶ್‌ ಅವರು, ಹೊಸಪೇಟೆಯ ಬಾಬುಲಾಲ್ ಹತ್ತಿರ ತಾವು ಮಾಡಿದ್ದ 36 ಲಕ್ಷ ಸಾಲಕ್ಕೆ ಹಣ ಪಾವತಿ ಮಾಡಿದ್ದಾರೆ. ಬಳಿಕ ರಿಜೆಸ್ಟ್ರೇಷನ್…

Read More

ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾಗಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚಿರಂತ್ (16) ಎಂದು ಗುರುತಿಸಲಾಗಿದೆ. ಪರೀಕ್ಷೆ ಮುಗಿಸಿ ಬಸ್‍ನಲ್ಲಿ ಊರಿಗೆ ಬಂದಿದ್ದ ಬಾಲಕ ರಸ್ತೆ ದಾಟುತ್ತಿದ್ದ. ಈ ವೇಳೆ ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿಯಾಗಿದೆ. ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ. ಅತಿಯಾದ ವೇಗ ಹಾಗೂ ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

Read More

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಇಂದು ವರುಣ ಅಬ್ಬರಿಸಿದ್ದು, ಜಿಲ್ಲೆಯ ಮೂಡಿಗೆರೆ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಸಿಲಿನ ವಾತಾವರಣದ ನಡುವೆ ದಿಢೀರನೆ ಶುರುವಾದ ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ. ಚಿಕ್ಕಮಗಳೂರು ನಗರದಲ್ಲೂ ಮಳೆ ಅಬ್ಬರಿಸುತ್ತಿದೆ. ಭಾರೀ ಗಾಳಿ ಜೊತೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಆರಂಭವಾದ ಮಳೆಯಿಂದ ಜನ ಪರದಾಡುವಂತಾಗಿದೆ. ವಾಹನ ಸವಾರರು ವಾಹನ ಚಾಲನೆ ಮಾಡಲು ಸಾಧ್ಯವಾಗದೆ ಪರದಾಡಿದ್ದಾರೆ. ಬೈಕ್‌ ಸವಾರರು ಅಂಗಡಿಗಳು, ಬಸ್ ನಿಲ್ದಾಣಗಳ ಆಶ್ರಯ ಪಡೆದಿದ್ದಾರೆ. ಕೆಲವೆಡೆ ಗಾಳಿಯ ಅಬ್ಬರಕ್ಕೆ ಕಬ್ಬಿಣದ ತಗಡುಗಳು ಹಾರಿ ಹೋಗಿವೆ.ಬಿಸಿಲ ಧಗೆಗೆ ಕಂಗೆಟ್ಟಿದ್ದ ರೈತರು ಮಾತ್ರ ಮಳೆ ಬಂದಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಕಾಫಿ ಗಿಡಗಳಿಗೆ ನೀರು ಹಾಯಿಸಲು ಪರದಾಡುತ್ತಿದ್ದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ

Read More

ಬೆಂಗಳೂರು : ಕ್ಲಾಸ್ ರೂಮಿನಲ್ಲಿ ವಿದ್ಯಾರ್ಥಿಯನ್ನು ಉಗ್ರ ಎಂದು ಕರೆದ ಆರೋಪದ ಹಿನ್ನೆಲೆಯಲ್ಲಿ ಈಗ ಸಸ್ಪೆಂಡ್ ಆದ ಪ್ರೊಫೆಸರ್ ಮುರುಳಿದರ ದೇಶಪಾಂಡೆ ವಿರುದ್ಧ ಗಿರಿನಗರ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದ ಒಂದು ಪೋಸ್ಟನ್ನು ಆಧರಿಸಿ ಕೇಸ್ ದಾಖಲಿಸಿಕೊಂಡಿದ್ದಾರೆ ಧಾರ್ಮಿಕ ಭಾವನೆಗೆ ದಕ್ಕೆ ಮಾಡುವ ಆರೋಪದ ಅಡಿ ಲೆಸ್ ದಾಖಲಾಗಿದೆ. ಬಿ ಎನ್ ಎಸ್ ಸೆಕ್ಷನ್ 299 352ರ ಅಡಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆ ಹಿನ್ನೆಲೆ? ನಗರದ ಪ್ರತಿಷ್ಠಿತ PES ವಿಶ್ವವಿದ್ಯಾಲಯದ ಪ್ರೊಫೆಸರ್ ಒಬ್ಬರು ತರಗತಿಯಲ್ಲಿದ್ದ ಮುಸ್ಲಿಂ ವಿದ್ಯಾರ್ಥಿಯೊಬ್ಬನಿಗೆ ‘ಭಯೋತ್ಪಾದಕ’ (Terrorist) ಎಂದು ನಿಂದಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ವಿವಾದದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ಪ್ರೊಫೆಸರ್ ಅವರನ್ನು ಅಮಾನತುಗೊಳಿಸಿದೆ. ವಿದ್ಯಾರ್ಥಿ ಅಫ್ಫಾನ್ ತರಗತಿಯ ನಡುವೆ ಹೊರಗೆ ಹೋಗಲು ಅನುಮತಿ ಕೇಳಿದ್ದನು. ಇದರಿಂದ ಆಕ್ರೋಶಗೊಂಡ ಪ್ರೊಫೆಸರ್ ಡಾ. ಮುರಳೀಧರ್ ದೇಶಪಾಂಡೆ, ವಿದ್ಯಾರ್ಥಿಯನ್ನು ತೀವ್ರವಾಗಿ ತರಾಟೆಗೆ…

Read More

ಬೆಂಗಳೂರು : ಐಪಿಎಲ್ ನಡೆಯುವಾಗ ಶಾಸಕರಿಗೆ ಕೇವಲ ಒಂದು ಟಿಕೆಟ್ ಮಾತ್ರ ನೀಡಲಾಗುತ್ತದೆ ನಮಗೆ ಒಂದು ಟಿಕೆಟ್ ನಲ್ಲಿ ನಾವು ಕುಟುಂಬದವರನ್ನು ಹೇಗೆ ಕಳುಹಿಸಬೇಕು ಎಂದು ಸದನದಲ್ಲಿ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ಸೇರಿದಂತೆ ಬಿಜೆಪಿ ನಾಯಕರು ಕೂಡ ಹೆಚ್ಚುವರಿ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದರು. ಅದರ ಬೆನ್ನಲ್ಲೆ ಕೆಎಸ್ಸಿಎ ಎರಡು ಟಿಕೆಟ್ ನೀಡುವುದಾಗಿ ಯೋಚನೆ ಮಾಡಿತು. ಆದರೆ ಇದೀಗ ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಸ್ಪೀಕರ್‌ ಯುಟಿ ಖಾದರ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸಮಾಜವಾದಿ ಎಂದು ಹೇಳಿಕೊಳ್ಳುವ ಸರ್ಕಾರದ ಆಡಳಿತದಲ್ಲಿ ಈ ವಿಐಪಿ ಸಂಸ್ಕೃತಿಗೆ ಪುರಸ್ಕಾರ ಸಿಗುತ್ತಿರುವುದು ಆಘಾತಕಾರಿಯಾಗಿದೆ. ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ ದಿಢೀರನೆ ಚಿನ್ನಸ್ವಾಮಿ ಸ್ಟೇಡಿಯಂನ ಐಪಿಎಲ್ ಪಂದ್ಯ, ಶಾಸಕರಿಗೆ ಟಿಕೆಟ್ ಹಂಚಿಕೆ…

Read More

ಬೆಂಗಳೂರು : ಬೆಂಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿಗೆ (Lorry) ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಾಗಡಿ ತಾಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಅಭಿಷೇಕ್ (21), ಮನೋಜ್(21) ಮೃತ ವಿದ್ಯಾರ್ಥಿಗಳು. ಬೆಂಗಳೂರಿನ ಪಿಜಿಯಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳು ಶುಕ್ರವಾರ ಬೆಂಗಳೂರಿನಿಂದ ಕುಣಿಗಲ್ ಕಡೆ ಒಂದೇ ಬೈಕ್‌ನಲ್ಲಿ ಮೂವರು ನೈಟ್ ರೈಡ್ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನವೀನ್ ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಮೃತ ವಿದ್ಯಾರ್ಥಿಗಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಇರಾನ್-ಇಸ್ರೇಲ್ ಯುದ್ಧ ಎಷ್ಟು ದಿನ ನಡೆಯುತ್ತೆ ಎಂಬ ಆತಂಕ ಕಾಡುತ್ತಿದೆ. ನಾನು ಹಾಗೂ ನನ್ನದು ಎನ್ನುವ ಕಾರಣಕ್ಕೆ ಯುದ್ಧ ನಡೆಯುತ್ತಿದೆ. ಎಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮದಲ್ಲಿ ಆರ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ ಹೇಳಿಕೆ ನೀಡಿದರು. ಯುದ್ಧ ಉಕ್ರೇನ್ ಹಾಗೂ ರಷ್ಯಾ ಯುದ್ಧದಷ್ಟು ಹಳೆಯದಲ್ಲ. ಆದರೂ ಈ ಯುದ್ಧ ಎಷ್ಟು ದಿನ ನಡೆಯುವ ಆತಂಕ ಕಾಡುತ್ತದೆ. ಅಮೆರಿಕಾದ ಊರ್ವ ವಕೀಲರು ಈ ಹಿಂದೆ ನನ್ನನ್ನು ಭೇಟಿಯಾಗಿದ್ದರು. ನನ್ನ ಭೇಟಿಯಾದ ಬಳಿಕ ಅವರು ನೌಕರಿಯನ್ನು ಕಳೆದುಕೊಂಡರು. ಹಿಂದೂ ಧರ್ಮದಲ್ಲಿ ಬೇರೆಯವರನ್ನು ಮತಾಂತರ ಮಾಡುವುದಿಲ್ಲ. ಆದಿಕಾಲದಿಂದಲೂ ನಾವು ನಮ್ಮ ದಾರಿಯಲ್ಲಿ ಸಾಗುತ್ತಿದ್ದೇವೆ. ಭಾರತದ ಜೊತೆಗೆ ಎಲ್ಲಾ ರಾಷ್ಟ್ರಗಳು ಸ್ನೇಹ ಸಂಬಂಧದಿಂದ ಇವೆ. ಜಗತ್ತಿನ ಎಲ್ಲಾ ಸಮಸ್ಯೆಗಳಿಗೆ ಮಾನವ ಧರ್ಮ ನೆನಪಿಸಿಕೊಳ್ಳಬೇಕು. ಮಾನವ ಧರ್ಮ ಹಾಗು ಹಿಂದೂ ಧರ್ಮವನ್ನು ನೆನಪಿಸಿಕೊಳ್ಳಬೇಕು. ಇಂದು ಸಮಾಜದಲ್ಲಿ ಪೂಜೆ ಹಾಗೂ ಆಹಾರ ಪದ್ಧತಿ ಬೇರೆ ಇದೆ. ಆದರೂ ನಾವೆಲ್ಲರೂ ಆದಿ ಕಾಲದಿಂದಲೂ ಒಗಟ್ಟಾಗಿ ಇದ್ದೇವೆ…

Read More

ಆಂಧ್ರಪ್ರದೇಶ : ನಿಂತಿದ್ದ APSRTC ಬಸ್ ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ, ಆಂಧ್ರಪ್ರದೇಶದ ಶೇಷಾಪುರಂ ಬಳಿ ಕಾರಿನಲ್ಲಿದ್ದ ದಂಪತಿ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಬಂಗಾರಪಾಳ್ಯಂ ತಾಲೂಕಿನ ಗ್ರಾಮ ದಂಪತಿ ಶ್ರೀಧರ್ ರಾವ್, ಲಕ್ಷ್ಮೀ ಹಾಗು ಪುತ್ರಿ ಅದ್ವಿಕಾ (4) ಮೃತರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಶಿವಮೊಗ್ಗ : ರಾಜ್ಯದಲ್ಲಿ ಹೃದಯವಿದ್ರಾವಕ ಒಂದು ನಡೆದಿದ್ದು ಶಿವಮೊಗ್ಗದಲ್ಲಿ ವಿದ್ಯಾರ್ಥಿ ಒಬ್ಬ ತಂದೆಯ ಸಾವಿನ ದುಃಖದಲ್ಲಿಯೇ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿದ್ದಾನೆ ಇಂದು ಎಸ್ ಎಸ್ ಎಲ್ ಸಿ ಗಣಿತ ಪರೀಕ್ಷೆ ನಡೆಯುತ್ತಿದ್ದು, ವಿದ್ಯಾರ್ಥಿ ಪ್ರೀತಮ್ ತಂದೆ ಸಾವಿನ ದುಃಖದಲ್ಲೂ ಕೂಡ ಪರೀಕ್ಷೆ ಬರೆಯುತ್ತಿದ್ದಾನೆ. ಶಿವಮೊಗ್ಗ ತಾಲೂಕಿನ ಮಂಡಘಟ್ಟ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆಗಿರುವ ಪ್ರೀತಂ ಎಣ್ಣೆ ಅವರ ತಂದೆ ಸಾವನಪ್ಪಿದ್ದರು. ತಂದೆಯಾಸ್ ಸಾವಿನ ಹಿನ್ನೆಲೆಯಲ್ಲಿ ಪ್ರೀತಮ್ ಪರೀಕ್ಷೆಗೆ ಗೈರಾಗಲು ಮುಂದಾಗಿದ್ದ. ವಿಷಯ ತಿಳಿದ ತಕ್ಷಣ ಶಿವಮೊಗ್ಗದ ಬಿಇಓ ರಮೇಶ್ ವಿದ್ಯಾರ್ಥಿ ಪ್ರೀತಮ್ ಅವರ ಮನೆಗೆ ತೆರಳಿದ್ದಾರೆ. ಗಣಿತ ಪರೀಕ್ಷ ಇದೆ ವರ್ಷ ಪೂರ್ತಿ ಕಷ್ಟಪಟ್ಟು ಓದಿದ್ದೀರಿ ತಂದೆ ಸಾವನಪ್ಪಿದ್ದಾರೆ ದುಃಖವಿದೆ ಎಂದು ವಿದ್ಯಾರ್ಥಿ ಪ್ರೀತಂ ಹಾಗೂ ಕುಟುಂಬಸ್ಥರಿಗೆ ಧೈರ್ಯ ಹೇಳಿ ಅವರ ಮನವೊಲಿಸಿದ್ದಾರೆ. ಬಳಿಕ ಪ್ರೀತಂ ನನ್ನ ತಮ್ಮ ವಾಹನದಲ್ಲಿಯೇ ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ.

Read More

ಬೆಂಗಳೂರು : ರವಿಶಂಕರ್ ವಿರುದ್ಧ ಯಾವುದೇ ಸ್ಪಷ್ಟ ಆರೋಪಗಳಿಲ್ಲದೆ ಪ್ರಕರಣ ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ರವಿಶಂಕರ್ ವಿರುದ್ಧದ ಭೂ ಕಬಳಿಕೆ ಪ್ರಕರಣವನ್ನು ರದ್ದುಪಡಿಸಿದೆ. ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಬೆಂಗಳೂರು ಮಹಾನಗರ ಟಾಸ್ಕ್ ಫೋರ್ಸ್ 19 ಸೆಪ್ಟೆಂಬರ್ 2025ರಂದು ಕರ್ನಾಟಕ ಭೂ ಆದಾಯ ಕಾಯ್ದೆ 1964 ಅಡಿಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿತ್ತು. ಕಾಗ್ಗಳಿಪುರ ಗ್ರಾಮದ ವಿವಿಧ ಸರ್ವೇ ಸಂಖ್ಯೆಗಳಲ್ಲಿನ ಸರ್ಕಾರಿ ಭೂಮಿ, ಕೆರೆ ಮತ್ತು ರಾಜಕಾಲುವೆ ಅಕ್ರಮವಾಗಿ ಕಬಳಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಪಿಐಎಲ್, ಲ್ಯಾಂಡ್ ಗ್ರಾಬಿಂಗ್ ವಿಶೇಷ ನ್ಯಾಯಾಲಯದ ವಿಚಾರಣೆ ಮತ್ತು ತಹಶೀಲ್ದಾರ್ ವರದಿ ಆಧರಿಸಿ ದೂರು ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಶ್ರೀ ಶ್ರೀ ರವಿಶಂಕರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಪರಿಶೀಲಿಸಿದ ಕರ್ನಾಟಕ ಹೈಕೋರ್ಟ್ ದೂರುದಲ್ಲಿ ಅರ್ಜಿದಾರರ ವಿರುದ್ಧ ಯಾವುದೇ ಸ್ಪಷ್ಟ ಆರೋಪಗಳಿಲ್ಲವೆಂದು ಗಮನಿಸಿದೆ. ಹೀಗಾಗಿ ಕೇವಲ ಪ್ರತಿವಾದಿಯಾಗಿ ಹೆಸರು ಸೇರಿಸಿರುವುದನ್ನು ಆಧಾರವನ್ನಾಗಿಟ್ಟುಕೊಂಡು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.…

Read More