Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಬಾಕ್ಸಿಂಗ್ ತರಬೇತಿ ಪಡೆಯುತ್ತಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ, ಬಾಕ್ಸಿಂಗ್ ತರಬೇತುದಾರನ ವಿರುದ್ಧ ಕೇಳಿ ಬಂದಿದ್ದು, ಪೋಕ್ಸೋ ಪ್ರಕರಣ ದಾಖಲಾಗಿದೆ. ಕಸ್ತೂರಬಾ ರಸ್ತೆಯಲ್ಲಿನ ಕ್ರೀಡಾಂಗಣದ ಆವರಣದೊಳಗಿರುವ ಖಾಸಗಿ ಬಾಕ್ಸಿಂಗ್ ಕ್ಲಬ್ನಲ್ಲಿ ತರಬೇತಿ ಪಡೆಯುತ್ತಿದ್ದ 17 ವರ್ಷದ ಅಪ್ರಾಪ್ತೆಗೆ ಕಳೆದ 4 ತಿಂಗಳುಗಳಿಂದ ನಿರಂತರ ಕಿರುಕುಳ ನೀಡುತ್ತಿರುವ ಆರೋಪ 50 ವರ್ಷ ವಯಸ್ಸಿನ ಬಾಕ್ಸಿಂಗ್ ತರಬೇತುದಾರನ ವಿರುದ್ಧ ಕೇಳಿಬಂದಿದೆ. ನೊಂದ ಬಾಲಕಿಯ ತಾಯಿ ನೀಡಿರುವ ದೂರಿನ ಅನ್ವಯ ಆರೋಪಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಸಂಪಂಗಿರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಕ್ಸಿಂಗ್ ಸ್ಪರ್ಧೆಗಾಗಿ ಚೆನ್ನೈನಲ್ಲಿದ್ದ ಬಾಲಕಿಯನ್ನು, ಮೇ 17ರಂದು ತನ್ನ ಕೋಣೆಗೆ ಕರೆಸಿಕೊಂಡಿದ್ದ ಆರೋಪಿ, ಆಕೆಯ ಪ್ರತಿರೋಧದ ನಡುವೆಯೂ ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಮೊದಲು ಬೆಂಗಳೂರಿನ ಕ್ರೀಡಾಂಗಣದಲ್ಲಿಯೂ ಇದೇ ರೀತಿ ಅನುಚಿತ ವರ್ತನೆಯ ಘಟನೆಗಳು ನಡೆದಿವೆ. ಆದರೆ, ಆ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಸುಮ್ಮನೆ…
ಬೆಂಗಳೂರು : ಬೆಂಗಳೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕತ್ತು ಕೊಯ್ದುಕೊಂಡು ಯುವಕ ಒಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿನ್ನೆಯಷ್ಟೇ ರಿಯ್ಯಾಬ್ ಸೆಂಟರ್ ನಿಂದ ಬಂದಿದ್ದ ಯುವಕ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ. ಈ ಒಂದು ಘಟನೆ ಬೆಂಗಳೂರಿನ ಅಶೋಕ್ ನಗರದಲ್ಲಿ ನಡೆದಿದೆ. ನಿನ್ನ ಬೆಳಿಗ್ಗೆ ಗೌತಮ್ (28) ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿನ್ನೆ ತಾನೇ ರಿಯ್ಯಾಬ್ ಸೆಂಟರ್ ನಿಂದ ಗೌತಮ್ ಬಂದಿದ್ದ. ಮೇಲ್ ನೋಟಕ್ಕೆ ಕೊಲೆ ಆಗಿರಬಹುದು ಎಂದು ಅನುಮಾನ ಇತ್ತು. ಆದರೆ ಯುವಕ ಗೌತಮ್ ಆತ್ಮಹತ್ಯೆ ಮಾಡಿಕೊಂಡಿರುವುದು ಇದೀಗ ಪತ್ತೆಯಾಗಿದೆ. ಸದ್ಯ ಅಶೋಕನಗರ ಠಾಣೆ ಪೊಲೀಸರು ಯುಡಿಆರ್ ದಾಖಲೆಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ವಿರುದ್ಧ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದು, ಕೇಂದ್ರ ಸರ್ಕಾರಕ್ಕೆ ಒಂದು ಪರೀಕ್ಷೆ ಮಾಡುವ ಯೋಗ್ಯತೆ ಇಲ್ಲ ನನ್ನ ಇಲಾಖೆಯಲ್ಲಿ ಒಂದೇ ಒಂದು ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ. ಕಳೆದ ಮೂರು ವರ್ಷದಿಂದ ಯಾವುದೇ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಉತ್ತರ ಕೊಡಬೇಕಾಗುತ್ತದೆ ಅಂತ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಒಂದು ವಾರ ಓಡಿ ಹೋಗಿದ್ದರು. ಧರ್ಮೇಂದ್ರ ಪ್ರಧಾನ ಬಳಿ ಬರಲಿ ಸೋರಿಕೆ ಇಲ್ಲದೆ ಪರೀಕ್ಷೆ ಹೇಗೆ ಮಾಡೋದು ಅಂತ ಹೇಳಿ ಕೊಡುತ್ತೇನೆ. ಒಂದೇ ವಾರದಲ್ಲಿ ಧರ್ಮೇಂದ್ರ ಪ್ರಧಾನ್ ಗೆ ಹೇಳಿ ಕೊಡುತ್ತೇನೆ ನೀಟ್ ಪರೀಕ್ಷೆಯಲ್ಲಿ 96 ಪ್ರತಿಶತ ಹಿಂದುಳಿದ ವರ್ಗಗಳ ಮಕ್ಕಳಿದ್ದಾರೆ ಅವರ ಕಾಲಿನ ಕೆಳಗೆ ಬಿಜೆಪಿ ನೌಕಲಿ ಆಗಲಾದರೂ ಬುದ್ದಿ ಬರುತ್ತೆ ಎಂದು ಬೆಂಗಳೂರಿನಲ್ಲಿ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು…
ಬೆಂಗಳೂರು : ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಅವರಿಗೆ ಅದು ನಿಜ. ನಮಗೆ ಸಮಾನತೆಯ ಸಂಕೇತ. ಈ ವಿಚಾರದಲ್ಲಿ ನಮಗೆ ಸ್ಪಷ್ಟತೆ. ಇದೆ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲಿಯೇ ಹೇಳಿದ್ದೆವು. ರಾಜ್ಯದ ಜನರು ಮತ ಕೊಟ್ಟಿದ್ದಾರೆ ಅದಕ್ಕಾಗಿ ಅವರ ಋಣ ತೀರಿಸಿದ್ದೇವೆ. ನಮಗೆ ವೋಟ್ ಹಾಕಿದ ಜನರ ಋಣವನ್ನು ತೀರಿಸಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ರೂಲ್ಸ್ ಇದೆ ಎಂಬುದನ್ನು ಬಿಜೆಪಿ ಅವರು ಮೊದಲು ನೋಡಿಕೊಂಡು ಬರಲಿ. ಕೆವಿ ವಿದ್ಯಾರ್ಥಿಗಳಿಗೆ ಮೊದಲು ಕೇಸರಿ ಶಾಲು ಹಾಕಿಸಿ ಕಳುಹಿಸಲಿ ರಾಜ್ಯ ಸರ್ಕಾರದ ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶ ಇಲ್ಲ. ಯಾರಾದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದರು. ಇನ್ನೂ ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ವಿರುದ್ಧ ಸಚಿವ ಮಧು…
ಕೋಲಾರ : ಮಹಿಳೆಯ ಖಾಸಗಿ ಫೋಟೋ ಮತ್ತು ವಿಡಿಯೋ ಮಾಡುವುದಾಗಿ ಬೆದರಿಕೆ ಒಡ್ಡಿ ಹಣ ಮತ್ತು ಲಕ್ಷಾಂತರ ರೂಪಾಯಿ ಮೌಲ್ಯದ ಒಡವೆ ವಸೂಲಿ ಮಾಡಿದ್ದು, ಯುವಕನ ಬ್ಲ್ಯಾಕ್ ಮೇಲ್ ಜಿಂದಗಿ ಮನನೊಂದ ಮಹಿಳೆ ನೇಣಿಗೆ ಶರಣಾಗಿದ್ದಾಳೆ. ಕೋಲಾರ ತಾಲೂಕಿನ ಛತ್ರಕೋಡಿ ಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಜಿನಿ (28) ಎಂದು ತಿಳಿದು ಬಂದಿದೆ. ಬೇಗ್ಲಿಗಣಜೇನಹಳ್ಳಿಯ ಶ್ರೀಕಾಂತನ ಕಿರುಕುಳಕ್ಕೆ ಬಲಿಯಾದ ರಜನಿ ಹಲವು ದಿನಗಳಿಂದ ರಜನಿಗೆ ಬೆದರಿಕೆ ಹಾಕಿ ಹಣ ಮತ್ತು ಆಭರಣ ವಸೂಲಿ ಮಾಡಿದ್ದಾನೆ. ಮಾಂಗಲ್ಯ ಸರ ಒಡವೆಗಳು ಸೇರಿದಂತೆ 30 ರಿಂದ 40 ಲಕ್ಷ ಹಣ ವಸೂಲಿ ಮಾಡಿದ್ದಾನೆ. ಶ್ರೀಕಾಂತ್ ಈಗಾಗಲೇ ಇಬ್ಬರು ಮಹಿಳೆಯರಿಗೆ ವಂಚಿಸಿರುವ ಆರೋಪ ಕೇಳಿಬಂದಿದೆ. ಶ್ರೀಕಾಂತ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬದ ಸದಸ್ಯರು ಆಗ್ರಹಿಸಿದ್ದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ನವದೆಹಲಿ: ಚೀನಾದ ಪ್ರಮುಖ ಕಲ್ಲಿದ್ದಲು ಉತ್ಪಾದನಾ ಪ್ರದೇಶವಾದ ಶಾಂಕ್ಸಿ ಪ್ರಾಂತ್ಯದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿನ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 82 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಶನಿವಾರ ಚೀನಾದ ಸರ್ಕಾರಿ ಸ್ವಾಮ್ಯದ ಮಾಧ್ಯಮಗಳು ವರದಿ ಮಾಡಿವೆ. ಗಣಿಯ ಆಳದಲ್ಲಿ ಸಿಲುಕಿರುವ ಇತರ ಕಾರ್ಮಿಕರ ಪತ್ತೆಗಾಗಿ ಶೋಧ ಕಾರ್ಯವನ್ನು ತೀವ್ರಗೊಳಿಸಲಾಗಿದೆ. 201 ಕಾರ್ಮಿಕರ ರಕ್ಷಣೆ: ಅಪಘಾತ ಸಂಭವಿಸಿದ ಕರಾಳ ಸಮಯದಲ್ಲಿ ಸುಮಾರು 247 ಕಾರ್ಮಿಕರು ಗಣಿಯ ನೆಲದಡಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸ್ಫೋಟದ ತೀವ್ರತೆಯ ನಡುವೆಯೂ ರಕ್ಷಣಾ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ಶನಿವಾರ ಮುಂಜಾನೆಯ ಹೊತ್ತಿಗೆ 201 ಜನರನ್ನು ಸುರಕ್ಷಿತವಾಗಿ ಹೊರತರಲು ಯಶಸ್ವಿಯಾಗಿದ್ದಾರೆ. ಸದ್ಯ ಗಣಿಯೊಳಗೆ ಸಿಲುಕಿರುವ ಉಳಿದ ಕಾರ್ಮಿಕರನ್ನು ಬದುಕಿಸಲು ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಅಧ್ಯಕ್ಷ ಕ್ಸಿ ಜಿನ್ಪಿಂಗ್ ಕಟ್ಟುನಿಟ್ಟಿನ ಆದೇಶ: ಘಟನೆಯ ಗಂಭೀರತೆಯನ್ನು ಪರಿಗಣಿಸಿ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ತುರ್ತು ಆದೇಶ ಹೊರಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವುದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡ-ಪೋಕರಿಗಳ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರ ಭದ್ರತೆಗೆ ಧಕ್ಕೆ ತರುವಂತಹ ಮತ್ತೊಂದು ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ನಗರದ ಹೃದಯಭಾಗದಲ್ಲಿ ತಡರಾತ್ರಿ ಉಬರ್ ಚಾಲಕನೊಬ್ಬನ ಮೇಲೆ ದುಷ್ಕರ್ಮಿಗಳ ಗ್ಯಾಂಗ್ ಒಂದು ಭೀಕರವಾಗಿ ಹಲ್ಲೆ (ಡೆಡ್ಲಿ ಅಟ್ಯಾಕ್) ನಡೆಸಿದ್ದು, ಈ ಘಟನೆ ಇಡೀ ನಗರವನ್ನು ಬೆಚ್ಚಿಬೀಳಿಸಿದೆ. ರಸ್ತೆಯಲ್ಲೇ ಎಳೆದಾಡಿ ಹಿಗ್ಗಾಮುಗ್ಗ ಥಳಿತ ನಿನ್ನೆ ರಾತ್ರಿ ಬೆಂಗಳೂರಿನ ಡಬಲ್ ರೋಡ್ (Double Road) ಜಂಕ್ಷನ್ನಲ್ಲಿ ಈ ಆಘಾತಕಾರಿ ಘಟನೆ ಸಂಭವಿಸಿದೆ. ಉಬರ್ ಕಾರು ಚಾಲಕ ಎಂದಿನಂತೆ ತನ್ನ ಕರ್ತವ್ಯದಲ್ಲಿದ್ದಾಗ ಮಾರ್ಗಮಧ್ಯೆ ಹೊಂಚು ಹಾಕಿ ಕುಳಿತಿದ್ದ ನಾಲ್ಕೈದು ಜನರಿದ್ದ ಪುಂಡರ ಗ್ಯಾಂಗ್ ಕಾರನ್ನು ತಡೆದಿದೆ. ಅಷ್ಟಕ್ಕೇ ನಿಲ್ಲದ ದುಷ್ಕರ್ಮಿಗಳು, ಕಾರಿನ ಒಳಗಡೆ ಕುಳಿತಿದ್ದ ಚಾಲಕನನ್ನು ಬಲವಂತವಾಗಿ ಹೊರಗೆ ಎಳೆದು ಹಾಕಿ, ಯಾವುದೇ ಕರುಣೆಯಿಲ್ಲದೆ ಹಿಗ್ಗಾಮುಗ್ಗವಾಗಿ ಥಳಿಸಲು ಪ್ರಾರಂಬಿಸಿದ್ದಾರೆ. ಯುವತಿಯನ್ನು ಕೆಳಗಿಳಿಸಿ ದುಷ್ಕೃತ್ಯ ಘಟನೆ ನಡೆದ ಸಮಯದಲ್ಲಿ ಕಾರಿನಲ್ಲಿ ಯುವತಿಯೊಬ್ಬರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಚಾಲಕನ ಮೇಲೆ ಮುಗಿಬಿದ್ದ ಗ್ಯಾಂಗ್, ಕಾರಿನಲ್ಲಿದ್ದ ಯುವತಿಯನ್ನು ಕೆಳಗೆ…
ಬೆಂಗಳೂರು: ದೇಶದ ಕ್ರೀಡಾ ಲೋಕದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮತ್ತೊಂದು ಐತಿಹಾಸಿಕ ಮೈಲಿಗಲ್ಲಿಗೆ ಸಾಕ್ಷಿಯಾಗಿದೆ. ದೇಶದ ಎರಡನೇ ಅತಿದೊಡ್ಡ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಭಾನುವಾರ ಅಧಿಕೃತವಾಗಿ ಚಾಲನೆ ಸಿಕ್ಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಭವ್ಯ ಕ್ರೀಡಾಂಗಣದ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ಹಾಗೂ ಭೂಮಿ ಪೂಜೆಯನ್ನು ನೆರವೇರಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ಈ ಬೃಹತ್ ಕ್ರೀಡಾಂಗಣ ತಲೆಯೆತ್ತುತ್ತಿದ್ದು, ಮುಖ್ಯಮಂತ್ರಿಗಳು ಸಾಂಪ್ರದಾಯಿಕವಾಗಿ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಹಸಿರು ನಿಶಾನೆ ತೋರಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಜಿ. ಪರಮೇಶ್ವರ್ ಸೇರಿದಂತೆ ಹಲವು ಪ್ರಮುಖ ನಾಯಕರು ಮತ್ತು ಉನ್ನತ ಅಧಿಕಾರಿಗಳು ಸಾಕ್ಷಿಯಾದರು. 900 ಕೋಟಿ ವೆಚ್ಚ, 100 ಎಕರೆ ವಿಸ್ತೀರ್ಣ ಈ ಅತ್ಯಾಧುನಿಕ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ಒಟ್ಟು 100 ಎಕರೆ ವಿಶಾಲವಾದ ಜಾಗದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 900 ಕೋಟಿ ರೂಪಾಯಿಗಳ ಭಾರಿ ವೆಚ್ಚದಲ್ಲಿ ಈ ಯೋಜನೆ…
ನವದೆಹಲಿ: ದೇಶದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲೂ ತನ್ನದೇ ಆದ ವಿಭಿನ್ನ ಶೈಲಿಯ ಮೂಲಕ ಭಾರಿ ಸದ್ದು ಮಾಡುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ಯ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯು ಹ್ಯಾಕ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯವಾಗಿದ್ದುಕೊಂಡು ದೊಡ್ಡ ಮಟ್ಟದ ಫಾಲೋವರ್ಸ್ ಹೊಂದಿದ್ದ ಈ ಖಾತೆಯನ್ನು ಅಪರಿಚಿತರು ಹ್ಯಾಕ್ ಮಾಡಿದ್ದು, ಸದ್ಯ ಪೇಜ್ ನಿಯಂತ್ರಣ ತಪ್ಪಿರುವುದು ಆತಂಕ ಮೂಡಿಸಿದೆ. ಈ ಕುರಿತು ಕಾಕ್ರೋಚ್ ಜನತಾ ಪಾರ್ಟಿಯ ಪ್ರಮುಖರಾದ ಅಭಿಜೀತ್ ಅವರು ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. “ನಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಇದರಿಂದಾಗಿ ನಮಗೆ ಅಕೌಂಟ್ಗೆ ಲಾಗಿನ್ ಆಗಲು ಸಾಧ್ಯವಾಗುತ್ತಿಲ್ಲ ಮತ್ತು ಯಾವುದೇ ಹೊಸ ಪೋಸ್ಟ್ಗಳನ್ನು ಹಾಕಲು ತೊಂದರೆಯಾಗುತ್ತಿದೆ,” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಖಾತೆಯನ್ನು ಮರಳಿ ಪಡೆಯಲು ತಾಂತ್ರಿಕ ತಂಡದೊಂದಿಗೆ ಈಗಾಗಲೇ ಪ್ರಯತ್ನಗಳನ್ನು ಆರಂಭಿಸಲಾಗಿದೆ ಎಂದು ತಿಳಿದುಬಂದಿದೆ. ಸಾಮಾಜಿಕ ಮಾಧ್ಯಮದಲ್ಲಿ ಲಕ್ಷಾಂತರ ಜನರನ್ನು ತಲುಪುತ್ತಿದ್ದ ಈ ಪೇಜ್ ಹ್ಯಾಕ್ ಆಗಿರುವುದು ಅದರ ಬೆಂಬಲಿಗರು ಮತ್ತು ಫಾಲೋವರ್ಸ್ಗೆ ತೀವ್ರ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಸಾರ್ವಜನಿಕರ ನೆಮ್ಮದಿ ಕೆಡಿಸಿದೆ. ನಗರದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳ ಮೇಲೆ ಹದಿನೈದಕ್ಕೂ ಹೆಚ್ಚು ಬೀದಿ ನಾಯಿಗಳು ಒಮ್ಮೆಗೆ ಭೀಕರವಾಗಿ ದಾಳಿ ನಡೆಸಿರುವ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯು ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಿನ್ನೆ ರಾತ್ರಿ ಸುಮಾರು 8:30ರ ವೇಳೆಗೆ ನಡೆದಿದೆ. ಯುವತಿಯೊಬ್ಬಳು ರಸ್ತೆಯಲ್ಲಿ ಫೋನ್ ಮಾತನಾಡುತ್ತಾ ತಮ್ಮ ಪಾಡಿಗೆ ತಾವು ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಠಾತ್ತನೆ ಎದುರಾದ ಹದಿನೈದಕ್ಕೂ ಹೆಚ್ಚು ಬೀದಿ ನಾಯಿಗಳ ಹಿಂಡು ಯುವತಿಯನ್ನು ಸುತ್ತುವರೆದು, ಏಕಕಾಲದಲ್ಲಿ ದಾಳಿ ಮಾಡಲು ಮುಂದಾಗಿವೆ. ಈ ಇಡೀ ಭೀಕರ ದೃಶ್ಯವು ಸ್ಥಳೀಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯದಲ್ಲೇನಿದೆ? ನಾಯಿಗಳು ದಾಳಿ ಮಾಡುತ್ತಿದ್ದಂತೆ ಆತಂಕಗೊಂಡ ಯುವತಿ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆದರೆ ನಾಯಿಗಳು ಬಿಡದೆ ಬೆನ್ನಟ್ಟಿವೆ. ಯುವತಿಯ ಕಿರುಚಾಟ ಹಾಗೂ ನಾಯಿಗಳ ಬೊಗಳುವ ಶಬ್ದ ಕೇಳಿ ತಕ್ಷಣವೇ…














