Author: kannadanewsnow05

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಘೋರವಾದ ದುರಂತ ಒಂದು ನಡೆದಿದ್ದು, ತನ್ನ ತಂಗಿ ಮದುವೆಯಾಗಿದ್ದ 40 ವರ್ಷದ ವರನ ತಾಯಿಗೆ ಅಣ್ಣನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಹೌದು ತನ್ನ 20 ವರ್ಷದ ತಂಗಿಯನ್ನು 40 ವರ್ಷದ ವ್ಯಕ್ತಿಯೊಬ್ಬ ಪ್ರೀತಿಸಿ ವಿವಾಹ ಆಗಿದ್ದಕ್ಕೆ ಕೋಪಗೊಂಡ ಯುವತಿಯ ಅಣ್ಣ, ತನ್ನ ಸ್ನೇಹಿತರ ಜತೆ ಸೇರಿ ವಿವಾಹವಾದ ವ್ಯಕ್ತಿಯ ತಾಯಿಯನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಲಕ್ಷ್ಮೀದೇವಮ್ಮ ಕೊಲೆಯಾದ ಮಹಿಳೆ. ಕೊಲೆ ಆರೋಪಿಯನ್ನು ನವೀನ್ ಎಂದು ಗುರುತಿಸಲಾಗಿದೆ. ನವೀನ್ ಸ್ನೇಹಿತರ ಜತೆ ಮಾ.20 ರಂದು ಪುರುಷೋತ್ತಮ್ ಅವರ ತಾಯಿಯ ಮನೆ ಮೇಲೆ ದಾಳಿ ನಡೆಸಿ ಕೃತ್ಯ ಎಸಗಿದ್ದ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಮವಾರ ಮೃತಟಿದ್ದರು. ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಪೊಲೀಸರು ಬಹುದೊಡ್ಡ ಕಾರ್ಯಾಚರಣೆ ಒಂದು ನಡೆಸಿದ್ದು, ಜೂಜು ಆಡುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ 19 ಜೂಜು ಕೋರರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಲ್ಲದೇ ಜೂಜಾಟದ ಸ್ಥಳದಲ್ಲಿ 9 ಲಕ್ಷದ 22 ಸಾವಿರ ನಗದು ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ 15 ಮೊಬೈಲ್ ಫೋನ್ ಗಳು ಹಾಗೂ ಒಂದು ಕಾರನ್ನು ವಶಪಡಿಸಿಕೊಂಡಿದ್ದಾರೆ 19 ಆರೋಪಿಗಳನ್ನು ಇದೀಗ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

Read More

ಬೆಂಗಳೂರು : ಆಟೋ ಗ್ಯಾಸ್ ಸಮಸ್ಯೆ ಬಗೆಹರಿಸುವಂತೆ ಚಾಲಕರು ಡೆಡ್ ಲೈನ್ ಕೊಟ್ಟಿದ್ದಾರೆ. ಗ್ಯಾಸ್ ಗಾಗಿ ಆಟೋ ಚಾಲಕರು ಪರದಾಡುತ್ತಿದ್ದು ಸಚಿವ ಕೆಎಚ್ ಮುನಿಯಪ್ಪ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಹಿನ್ನೆಲೆ ನಾಳೆ ಸಚಿವ ಕೆಎಚ್ ಮುನಿಯಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಆಟೋ ಚಾಲಕರು ನಿರ್ಧರಿಸಿದ್ದಾರೆ. ಹೌದು ಬೆಂಗಳೂರು ಆಟೋ ಸಂಘಟನೆಗಳು ಸಚಿವ ಮುನಿಯಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ಲಾನ್ ಮಾಡಿದ್ದಾರೆ. ಆಟೋ ಗ್ಯಾಸ್ ಬಗ್ಗೆ ಹರಿಸುವಂತೆ ಈಗಾಗಲೇ ಚಾಲಕರು ಡೆಡ್ ಲೈನ್ ಕೊಟ್ಟಿದ್ದು ಇನ್ನಾದರೂ ಆಟೋ ಗ್ಯಾಸ್ ಸಮಸ್ಯೆ ಬಗೆಹರಿಸಿದಿದ್ದರೆ ಸಚಿವ ಕೆಎಚ್ ಮುನಿಯಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಆಟೋ ಚಾಲಕರು ಎಚ್ಚರಿಕೆ ಕೊಟ್ಟಿದ್ದಾರೆ. ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗ್ಯಾಸ್ ಇಲ್ಲದೆ ಆಟೋ ಚಾಲಕರು ಪರದಾಟ ಮಾಡುತ್ತಿದ್ದಾರೆ. ಗ್ಯಾಸ್ ಬಂಕ್ಗಳ ಮುಂದೆ ಕಿಲೋಮಿಟರ್ ಗಟ್ಟಲೆ ಆಟೋಗಳು ಸರತಿ ಸಾಲಿನಲ್ಲಿ ನಿಂತು ಅಲ್ಲಿಯೇ ಊಟ, ನಿದ್ದೆ ಮಾಡುತ್ತಿದ್ದು, ಜೀವನ ಬಹಳ ದುಃಸ್ತರವಾಗಿದೆ.…

Read More

ದಾವಣಗೆರೆ : ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ. ದಾವಣಗೆರೆ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಪಕ್ಷದ ಭದ್ರಕೋಟೆ. ಪ್ರಚಾರಕ್ಕೆ ಯಾರು ಬರಲಿ ಬಿಡಲಿ ಇದು ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ದಾವಣಗೆರೆಯಲ್ಲಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ನಿವಾಸಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 5 ರಂದು ಪ್ರಚಾರಕ್ಕೆ ಬರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು ಹಾಗಾಗಿ ಕೇರಳದಿಂದ ನೇರವಾಗಿ ನಾನು ಇಲ್ಲಿಗೆ ಬಂದಿದ್ದೇನೆ ಕೇರಳದಲ್ಲಿ ನನ್ನ ಸ್ಟಾರ್ ಕ್ಯಾಂಪಿನರ್ ಆಗಿ ಕಳುಹಿಸಿದ್ದರು.. ಹಾಗಾಗಿ ಕೇರಳದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಹೋಗಿದ್ದೆ. ಯಾವುದೇ ರೀತಿಯ ಮುನಿಸಿಲ್ಲ ನಾನು ಯಾವುದೇ ರೀತಿಯ ಕಂಡೀಶನ್ ಹಾಕಿಲ್ಲ. ನಮ್ಮದು ಹೈಕಮಾಂಡ್ ಪಕ್ಷ ಎಲ್ಲಾ ವರಿಷ್ಠರು ನಿರ್ಧರಿಸುತ್ತಾರೆ 2028ಕ್ಕೆ ನನಗೆ ಟಿಕೆಟ್ ನಿರ್ಧರಿಸುವುದು ಹೈಕಮಾಂಡ್. ಎಂದು ತಿಳಿಸಿದರು.

Read More

ಬೆಂಗಳೂರು : ರಾಜ್ಯದಲ್ಲಿ ಒಳ ಮೀಸಲಾತಿ ಸಂಬಂಧ ಈಗಾಗಲೇ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು ರಾಜ್ಯಪಾಲರು ಒಲಮಿಸಲಾತಿ ಜಾರಿಗೆ ಅಂಕಿತ ಹಾಕಿದ್ದಾರೆ ಹಾಗಾಗಿ ನಿಧಾನವಾಗಿ ಸಮಾಧಾನವಾಗಿ ಕುರಿತು ಚರ್ಚಿಸಿ ಒಳ ಮೀಸಲಾ ಜಾರಿಗೆ ತರುತ್ತೇವೆ ಎಂದು ಸಚಿವ ಕೆ ಎಸ್ ಮುನಿಯಪ್ಪ ತಿಳಿಸಿದರು. ಈ ವಿಚಾರವಾಗಿ ನಾನು ಮಹದೇವಪ್ಪ ಹೇಳಿದ್ದೇವೆ ಅಳಮಿ ಸಲಾತಿ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿದ್ದೆವು. ರಮೇಶ ರಾಶಿವಿದೆಯ ಕಕ್ಕೆ ರಾಜಪಾಲರು ಅಂಕಿತ ಹಾಕಿದ್ದಾರೆ. ರೋಸ್ಟರ್ ಬಿಂದು ವಿಚಾರದಲ್ಲಿ ಗೊಂದಲವಾಗಿ ಗಲಾಟೆ ಆಗಿದೆ ಸಮಾಧಾನವಾಗಿ ಕುಳಿತು ಚರ್ಚಿಸಿ ಒಳ ಮೀಸಲಾತಿ ಜಾರಿ ಮಾಡುತ್ತೇವೆ. 101 ಜಾತಿಯಲ್ಲಿ ಯಾರಿಗೂ ಅನ್ಯಾಯ ಆಗಲ್ಲ ಒಳ ಮೀಸಲಾತಿ ಜಾರಿ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ಜಿ ಪರಮೇಶ್ವರ್ ಉಲ್ಲೇಖಿಸಿದ್ದಾರೆ. ಪ್ರಣಾಳಿಕೆಯಲ್ಲಿ ಅವರು ಹೇಳಿದನ್ನು ಬೇರೆ ರೀತಿಯಲ್ಲಿ ಅರ್ಥೈಸುತಿದ್ದೀರಿ ಎಂದು ಬೆಂಗಳೂರಲ್ಲಿ ಸಚಿವ ಕೆ ಎಸ್ ಮುನಿಯಪ್ಪ ತಿಳಿಸಿದರು.

Read More

ಬೆಂಗಳೂರು : ಹಳೆಯ ವಾಹನಗಳಿಗೆ ಹೆಚ್ಎಸ್ಆರ್‌ಪಿ ಅಳವಡಿಕೆ ಕುರಿತು ಕರ್ನಾಟಕ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. 2019ರ ಎಪ್ರಿಲ್ 1ಕ್ಕಿಂತ ಮುಂಚೆ ನೋಂದಾಯಿಸಲ್ಪಟ್ಟ ವಾಹನಗಳಿಗೆ ಹೆಚ್ಎಸ್ಆರ್‌ಪಿ ಕಡ್ಡಾಯವಲ್ಲ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಎಂದು ಸಾರಿಗೆ ಇಲಾಖೆ ತಿಳಿಸಿದೆ. ಹೌದು 2019ರ ಎಪ್ರಿಲ್ 1ಕ್ಕಿಂತಲೂ ಮೊದಲು ನೋಂದಾಯಿಸಲ್ಪಟ್ಟಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್‌ಪಿ ಅಳವಡಿಕೆ ಕಡ್ಡಾಯವಾಗಿದೆ ಎಂದು ಇಲಾಖೆ ದೃಢಪಡಿಸಿದೆ. 1989ರ ಮೋಟಾರು ವಾಹನ ನಿಯಮ 50ರಡಿ ಕೇಂದ್ರ ಸರ್ಕಾರವು 2018ರ ಡಿಸೆಂಬರ್ 4ರಂದು ಅಧಿಸೂಚನೆ ಹೊರಡಿಸಿ, 2019ರ ಎಪ್ರಿಲ್ 1ರ ಮುಂಚೆ ನೋಂದಾಯಿಸಲ್ಪಟ್ಟ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್‌ಪಿ ಅಳವಡಿಕೆ ಕಡ್ಡಾಯಗೊಳಿಸಿತ್ತು. ಅದರಂತೆ, ಕರ್ನಾಟಕ ಸರ್ಕಾರವು 2023ರ ಆಗಸ್ಟ್ 17ರಂದು ರಾಜ್ಯ ಅಧಿಸೂಚನೆ ಹೊರಡಿಸಿ, ಇದೇ ನಿಯಮವನ್ನು ಜಾರಿಗೆ ತಂದಿದೆ. ಕರ್ನಾಟಕ ಉಚ್ಚ ನ್ಯಾಯಾಲಯವು ಈ ಪ್ರಕರಣದಲ್ಲಿ ರಾಜ್ಯವು ತುರ್ತು ಕ್ರಮ ಕೈಗೊಳ್ಳಬಾರದು ಎಂದು ತಾತ್ಕಾಲಿಕ ಆದೇಶ ನೀಡಿದ್ದರೂ, ಹೆಚ್ಎಸ್ಆರ್‌ಪಿ ಅಳವಡಿಕೆಗೆ ಸಂಬಂಧಿಸಿದ ಅಧಿಸೂಚನೆಗೆ ಯಾವುದೇ ತಡೆಯಾಜ್ಞೆ ಇಲ್ಲ. ಸಾರ್ವಜನಿಕರು ತಮ್ಮ…

Read More

ತುಮಕೂರು : ತುಮಕೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಶಿರಾ ರಾಷ್ಟ್ರೀಯ ಹೆದ್ದಾರಿ 48ರಲ್ಲಿ KSRTC ಮತ್ತು ಖಾಸಗಿ ಸ್ಲೀಪರ್ ಬಸ್ ನಡುವೆ ಭೀಕರ ಅಪಘಾತವಾಗಿದೆ. ಈ ದುರ್ಘಟನೆಯಲ್ಲಿ ಹಾವೇರಿ ಮತ್ತು ಗದಗ ಮೂಲದ ಇಬ್ಬರು ಪ್ರಯಾಣಿಕರು ದಾರುಣವಾಗಿ ಮೃತಪಟ್ಟಿದ್ದು, 35 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಹಾವೇರಿ ಮೂಲದ ಪ್ರವೀಣ್ ಕೃಷ್ಣಪ್ಪ (28) ಮತ್ತು ಗದಗ ಮೂಲದ ಸಂಗೀತಾ (16) ಎಂದು ಗುರುತಿಸಲಾಗಿದೆ. ಅಪಘಾತವಾಗಿರುವ ಎರಡೂ ಬಸ್​​ಗಳು ಬೆಂಗಳೂರಿಗೆ ಬರುತ್ತಿದ್ದವು ಎನ್ನಲಾಗಿದ್ದು ಹೆದ್ದಾರಿಯ ಮೂರನೇ ಲೇನ್​​ನಿಂದ ಏಕಾಏಕಿ ಎರಡನೇ ಲೇನ್​​ಗೆ ಖಾಸಗಿ ಬಸ್ ಬಂದಿರೋದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ವೇಳೆ ಮತ್ತೊಂದು ಲೇನ್​​ನಲ್ಲಿ ವೇಗವಾಗಿ ಬರುತ್ತಿದ್ದ ಕೆಎಸ್​ಆರ್​​ಟಿಸಿ ಬಸ್​​ ನಿಯಂತ್ರಣ ತಪ್ಪಿ ಖಾಸಗಿ ಬಸ್​​ನ ಹಿಂಭಾಕ್ಕೆ ಗುದ್ದಿದೆ. ಪರಿಣಾಮ ಖಾಸಗಿ ಬಸ್​​ನ ಹಿಂಬದಿ ಸೀಟ್​​ಗಳಲ್ಲಿದ್ದ ಇಬ್ಬರು ಪ್ರಾಣಬಿಟ್ಟಿದ್ದಾರೆ. ಬೇಜವಾಬ್ದಾರಿ ಚಾಲನೆ ಹಿನ್ನಲೆ ಘಟನೆ ಸಂಬಂಧ ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಎರಡು ಪತ್ಯೇಕ ಪ್ರಕರಣಗಳು ದಾಖಲಾಗಿವೆ.

Read More

ದಾವಣಗೆರೆ : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮುಸ್ಲಿಂಮರು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಈ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪೋಟಗೆ ಹೇಳಿದ್ದು 2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಲು ಹೈಕಮಾಂಡ್ ಒಪ್ಪಿದೆ ಎಂದು ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಅಲ್ಪಸಂಖ್ಯಾತರಿಗೆ ಟಿಕೆಟ್ ತಪ್ಪಿದರ ಬಗ್ಗೆ 2028 ರಲ್ಲಿ ಅಲ್ಪಸಂಖ್ಯಾತರನ್ನು ಪರಿಗಣಿಸುವಂತೆ ಕಾಂಗ್ರೆಸ್ ಹೈಕಮಾಂಡ್ ನಲ್ಲಿ ಮನವಿ ಮಾಡಿದ್ದು ಹೈಕಮಾಂಡ್ ಸಹ ಅಲ್ಪಸಂಖ್ಯಾತರನ್ನು ಪರಿಗಣಿಸುತ್ತೇವೆ ಅಂತ ಹೇಳಿದ್ದಾರೆ. ಎಸ್ ಎಸ್ ಮಲ್ಲಿಕಾರ್ಜುನ ಮುಂದೆಯೇ ಹೈಕಮಾಂಡ್ ಈ ಒಂದು ಹೇಳಿಕೆ ನೀಡಿದ್ದಾರೆ. ಕೊನೆಗೆ ಪಕ್ಷದ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಅಂತ ಜಮೀರ್ ಅಹ್ಮದ್ ಹೇಳಿದ್ದು ಯಶಸ್ ಮಲ್ಲಿಕಾರ್ಜುನ್ ನಾನು ಆತ್ಮೀಯ ಸ್ನೇಹಿತರು ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಲಕ್ಷಾಂತರ ಜನ ಕಾರ್ಯಕರ್ತರಿದ್ದಾರೆ. ಅವರವರ ಅಭಿಮಾನಿಗಳು ಘೋಷಣೆ ಕೂಗುವುದು ಸಹಜ ಆದರೆ ಕಾಂಗ್ರೆಸ್ ಪಕ್ಷಕ್ಕೆ ಯಾರೋ ಒಬ್ಬರ ಮೇಲೆ ಯಾವತ್ತೂ…

Read More

ಹುಬ್ಬಳ್ಳಿ : ಕಳೆದ ಎರಡು ದಿನಗಳ ಹಿಂದೆ ತಾನೆ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮೀರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೆ, ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಮುಫೀಸ್ ಮಿಯಾನ್ನವರ ಎಂಬಾತ ಹಿಂದೂ ಯುವತಿಗೆ ಪ್ರೀತಿಸೋ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿ ಕಮಿಷನರ್ ಎನ್ ಶಶಿಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ನಿನ್ನೆ ಯುವತಿ ಒಬ್ಬಳು ಕೇಶವಪುರ ಠಾಣೆಗೆ ದೂರು ನೀಡಿದ್ದಾಳೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಅಂತ ದೂರು ನೀಡಿದ್ದಾಳೆ. ಮೊದಲು ನಾವು ಸ್ನೇಹಿತರಾಗಿದ್ದೆವು ಆ ಬಳಿಕ ನಮ್ಮ ನಡುವೆ ಇನ್ನಷ್ಟು ಸಲುಗೆ ಬೆಳೆಯಿತು. ಬಳಿಕ ಅದೇ ಸಲುಗೆಯಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ ಎಸೆಗಿದ್ದಾನೆ ಎಂದು ಯುವತಿ ದೂರು ನೀಡಿದ್ದಾಳೆ. ಮುಫೀಸ್ ಮಿಯಾನ್ನವರ ಎಂಬತನ ವಿರುದ್ಧ ದೂರು ದಾಖಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು…

Read More

ಬೆಂಗಳೂರು : ಲಾರಿಗೆ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಪೊಲೀಸರಿಂದ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಮದ್ಯ ಸೇವಿಸಿದ್ದಕ್ಕೆ ಟ್ರಾಫಿಕ್ ಪೊಲೀಸರು ಲಾರಿ ಚಾಲಕನಿಗೆ ದಂಡ ಹಾಕಿದ್ದರು. ಆನಂತರ ಲಾರಿಯನ್ನು ಪೊಲೀಸರು ಸ್ಟೇಷನ್ ಬಳಿಗೆ ತಂದಿದ್ದಾರೆ ಆದರೆ ಲಾರಿ ಚಾಲಕ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತಂತೆ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕೆಸ್ ದಾಖಲಾಗಿದೆ.

Read More