Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಕಲಬುರಗಿ: ನೀಟ್ (NEET) ಪರೀಕ್ಷೆ ಬರೆದ ಬೆನ್ನಲ್ಲೇ ನಗರದ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೇಲ್ನೋಟಕ್ಕೆ ನೀಟ್ ಪರೀಕ್ಷೆಯ ಒತ್ತಡದಿಂದ ಈ ದುರಂತ ಸಂಭವಿಸಿದೆ ಎಂದು ಭಾವಿಸಲಾಗಿತ್ತಾದರೂ, ಇದೀಗ ಆಕೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೇ ಫೇಲ್‌ ಆಗಿದ್ದ ಆಘಾತಕಾರಿ ಸತ್ಯ ತಡವಾಗಿ ಬೆಳಕಿಗೆ ಬಂದಿದೆ. ಹೆತ್ತವರಿಗೆ ಸುಳ್ಳು ಹೇಳಿದ್ದೇ ಈ ಇಡೀ ದುರಂತಕ್ಕೆ ಮುಖ್ಯ ಕಾರಣ ಎಂಬುದು ಬಹಿರಂಗವಾಗಿದೆ. ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯ ಫಲಿತಾಂಶ ಬಂದಾಗ ವಿದ್ಯಾರ್ಥಿನಿ ಭಾಗ್ಯಶ್ರೀ ತನಗೆ ಶೇಕಡಾ 92 ರಷ್ಟು ಅಂಕಗಳು ಬಂದಿವೆ ಎಂದು ಪೋಷಕರ ಬಳಿ ಸುಳ್ಳು ಹೇಳಿಕೊಂಡಿದ್ದಳು. ಮಗಳ ಮಾತನ್ನು ಸಂಪೂರ್ಣವಾಗಿ ನಂಬಿದ್ದ ಹೆತ್ತವರು, ಆಕೆಯ ವೈದ್ಯಕೀಯ ಶಿಕ್ಷಣದ ಕನಸಿಗೆ ಹೆಗಲು ಕೊಟ್ಟು ನೀಟ್ ಪರೀಕ್ಷೆ ಬರೆಯಲು ಸಂಪೂರ್ಣ ಬೆಂಬಲ ನೀಡಿದ್ದರು. ಪೋಷಕರ ಪ್ರೋತ್ಸಾಹದೊಂದಿಗೆ ಇತ್ತೀಚೆಗಷ್ಟೇ ಭಾಗ್ಯಶ್ರೀ ನೀಟ್ ಪರೀಕ್ಷೆಯನ್ನೂ ಬರೆದು ಮುಗಿಸಿದ್ದಳು. ಆದರೆ ಇದೀಗ ಲಭ್ಯವಾಗಿರುವ ಅಂಕಪಟ್ಟಿ (Marks Card) ಕಹಿಯಾದ ಸತ್ಯವನ್ನು…

Read More

ಮಂಗಳೂರು: ಕರಾವಳಿ ಮತ್ತು ರಾಜಧಾನಿ ಬೆಂಗಳೂರು ನಿವಾಸಿಗಳ ಬಹುದಿನಗಳ ಕನಸಾಗಿದ್ದ ಮಂಗಳೂರು-ಬೆಂಗಳೂರು ನಡುವಿನ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲು ಸೇವೆ ಮುಂಬರುವ ಜೂನ್ ತಿಂಗಳಿನಲ್ಲಿ ಅಧಿಕೃತವಾಗಿ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಸೇರಿದಂತೆ ದೇಶದ ವಿವಿಧ ಭಾಗಗಳ ನೂತನ ರೈಲು ಸಂಚಾರಗಳಿಗೆ ಜೂನ್‌ನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ ಅವರು ಪ್ರಕಟಿಸಿದ್ದಾರೆ. ರೈಲು ನಿಲ್ದಾಣ ಕಾಮಗಾರಿಗಳ ಪರಿಶೀಲನೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಶನಿವಾರ ಭೇಟಿ ನೀಡಿದ ಸಚಿವರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಅಮೃತ್ ಭಾರತ್’ ಯೋಜನೆಯಡಿ ಅಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಕಾಮಗಾರಿಗಳನ್ನು ವೀಕ್ಷಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸಲು ಸರ್ಕಾರ ಬದ್ಧವಾಗಿದೆ ಎಂಬ ಭರವಸೆಯನ್ನು ನೀಡಿದರು. ವಿದ್ಯುದ್ದೀಕರಣ ಕಾಮಗಾರಿ ಪೂರ್ಣ ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲ್ವೆ ಮಾರ್ಗದ ಸಕಲೇಶಪುರದಿಂದ ಕುಕ್ಕೆ ಸುಬ್ರಹ್ಮಣ್ಯವರೆಗಿನ ಅತ್ಯಂತ…

Read More

ಚಾಮರಾಜನಗರ: ಕಳೆದ ಹಲವು ದಿನಗಳಿಂದ ಸ್ಥಳೀಯರು ಹಾಗೂ ಭಕ್ತಾದಿಗಳಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದ ಇಂಡಿಗನತ್ತ ಸಮೀಪ ಅರಣ್ಯ ಇಲಾಖೆಯ ಸಿಬ್ಬಂದಿ ನಡೆಸಿದ ನಿರಂತರ ಕಾರ್ಯಾಚರಣೆಯ ಫಲವಾಗಿ ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ. ಪೋಷಕರ ಕಣ್ಣೆದುರೇ ನಡೆದಿತ್ತು ಘೋರ ದುರಂತ: ಕೆಲವು ದಿನಗಳ ಹಿಂದೆ ಬೆಂಗಳೂರು ಮೂಲದ ಕುಟುಂಬವೊಂದು ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೆ ತೆರಳುತ್ತಿದ್ದಾಗ ಈ ಘೋರ ದುರಂತ ಸಂಭವಿಸಿತ್ತು. ನಡೆದುಕೊಂಡು ಹೋಗುತ್ತಿದ್ದ ಬಾಲಕನನ್ನು ಪೋಷಕರ ಕಣ್ಣೆದುರೇ ಹೊಂಚು ಹಾಕಿ ಕುಳಿತಿದ್ದ ಚಿರತೆಯು ಹಠಾತ್ತಾಗಿ ದಾಳಿ ನಡೆಸಿ, ಕಾಡಿನೊಳಗೆ ಎಳೆದೊಯ್ದು ಭೀಕರವಾಗಿ ಕೊಂದು ಹಾಕಿತ್ತು. ಈ ಘಟನೆಯು ಇಡೀ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿತ್ತಲ್ಲದೆ, ಸ್ಥಳೀಯ ನಿವಾಸಿಗಳು ಹಾಗೂ ಪ್ರವಾಸಿಗರಲ್ಲಿ ಭೀತಿಯ ವಾತಾವರಣ ನಿರ್ಮಿಸಿತ್ತು. ೧೫ ದಿನಗಳ ನಿರಂತರ ಕಾರ್ಯಾಚರಣೆ: ಬಾಲಕನ ಸಾವಿನ ಬೆನ್ನಲ್ಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ, ಚಿರತೆಯನ್ನು…

Read More

ಕ್ವೆಟ್ಟಾ: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾ ನಗರದ ಪ್ರಮುಖ ರೈಲ್ವೆ ನಿಲ್ದಾಣದ ಬಳಿ ಶನಿವಾರ ಅತ್ಯಂತ ಭೀಕರ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಕನಿಷ್ಠ 23 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 47ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಭದ್ರತಾ ಅಧಿಕಾರಿಗಳು ಮತ್ತು ವೈದ್ಯಕೀಯ ಸಿಬ್ಬಂದಿ ಖಚಿತಪಡಿಸಿದ್ದಾರೆ. ರೈಲು ಹತ್ತಲು ನೂರಾರು ಪ್ರಯಾಣಿಕರು ಕಾಯುತ್ತಿದ್ದ ಸಂದರ್ಭದಲ್ಲೇ ಈ ಸ್ಫೋಟ ಸಂಭವಿಸಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ ಎನ್ನಲಾಗಿದೆ. ಛಿದ್ರಗೊಂಡ ವಾಹನಗಳು, ನಡುಗಿದ ರೈಲ್ವೆ ನಿಲ್ದಾಣ ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಇಡೀ ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳು ನಡುಗಿಹೋಗಿವೆ. ನಿಲ್ದಾಣದ ಆವರಣ ಹಾಗೂ ರೈಲ್ವೆ ಹಳಿಯ ಸಮೀಪ ನಿಲ್ಲಿಸಲಾಗಿದ್ದ ಸುಮಾರು 10ಕ್ಕೂ ಹೆಚ್ಚು ವಾಹನಗಳು ಸ್ಫೋಟದ ತೀವ್ರತೆಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಸ್ಫೋಟದ ಸದ್ದು ಕೇಳುತ್ತಿದ್ದಂತೆ ಸ್ಥಳದಲ್ಲಿ ಮರಣಮೃದಂಗ ಸೃಷ್ಟಿಯಾಗಿದ್ದು, ಪ್ರಯಾಣಿಕರು ಪ್ರಾಣಭಯದಿಂದ ದಿಕ್ಕಾಪಾಲಾಗಿ ಓಡಿದ್ದಾರೆ. ಘಟನಾ ಸ್ಥಳದಲ್ಲಿ ರಕ್ತದ ಮಡುವು ಹಾಗೂ ದೇಹದ ಭಾಗಗಳು ಚೆಲ್ಲಾಪಿಲ್ಲಿಯಾಗಿ…

Read More

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ವೇಳೆ ಭದ್ರತಾ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯು ಇಬ್ಬರು ಅಧಿಕಾರಿಗಳು ಸೇರಿ ಒಟ್ಟು ಆರು ಮಂದಿ ಸಿಬ್ಬಂದಿಗಳನ್ನು ಸೇವೆಯಿಂದ ಅಮಾನತುಗೊಳಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಪ್ರಧಾನಿ ಸಂಚರಿಸುವ ಮಾರ್ಗದಲ್ಲೇ ಸ್ಫೋಟಕಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಕ್ಷಣದ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚಿಗೆ ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಬೆಂಗಳೂರು ದಕ್ಷಿಣ ತಾಲೂಕಿನ ವಡೆರಹಳ್ಳಿ ಗೇಟ್ ಬಳಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದವು. ವಿವಿಐಪಿ ಭದ್ರತೆಯ ದೃಷ್ಟಿಯಿಂದ ಅತ್ಯಂತ ಸೂಕ್ಷ್ಮ ಹಾಗೂ ಸುರಕ್ಷಿತವಾಗಿರಬೇಕಾದ ಮಾರ್ಗದಲ್ಲೇ ಇಂತಹ ಅಪಾಯಕಾರಿ ವಸ್ತುಗಳು ಪತ್ತೆಯಾಗಿದ್ದು, ಇಡೀ ಪೊಲೀಸ್ ಇಲಾಖೆ ಮತ್ತು ಭದ್ರತಾ ವಲಯದಲ್ಲಿ ತೀವ್ರ ಆತಂಕ ಹಾಗೂ ಸಂಚಲನ ಮೂಡಿಸಿತ್ತು. ಈ ಗಂಭೀರ ಭದ್ರತಾ ಲೋಪವನ್ನು ಅತ್ಯಂತ ಕಠಿಣವಾಗಿ ಪರಿಗಣಿಸಿರುವ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ (SP) ಶ್ರೀನಿವಾಸ್ ಗೌಡ ಅವರು ತನಿಖೆಯ ಬಳಿಕ ಅಮಾನತು ಆದೇಶ ಹೊರಡಿಸಿದ್ದಾರೆ.…

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಿರಿಯ ನಾಗರಿಕರನ್ನೇ ಗುರಿಯಾಗಿಸಿಕೊಂಡು ಜಾಲ ಹೆಣೆದಿದ್ದ ಸೈಬರ್ ವಂಚಕರು, ವೃದ್ಧೆಯೊಬ್ಬರನ್ನು ಬರೋಬ್ಬರಿ 24 ಕೋಟಿ ರೂಪಾಯಿ ವಂಚಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ದೈತ್ಯ ‘ಡಿಜಿಟಲ್ ಅರೆಸ್ಟ್’ ಹಗರಣಕ್ಕೆ ಸಂಬಂಧಿಸಿದಂತೆ ಸಿಸಿಬಿ (CCB) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮುಂಬೈ, ಅಲಹಾಬಾದ್ ಮತ್ತು ದೆಹಲಿ ಮೂಲದ ಐವರು ಅಂತಾರಾಜ್ಯ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರನ್ನು ಗೌರವ್ ಕುಮಾರ್, ಓಂ ಪ್ರಕಾಶ್ ಸೇರಿದಂತೆ ಐವರು ಎಂದು ಗುರುತಿಸಲಾಗಿದೆ. ತಿಂಗಳುಗಳ ಕಾಲ ನಡೆದ ಕಳ್ಳಾಟ ಬೆಂಗಳೂರಿನ ಶಿವಾಜಿನಗರದ ನಿವಾಸಿಯಾದ ಲಕ್ಷ್ಮೀ ನಾರಾಯಣ್ ಎಂಬ ವೃದ್ಧೆಯೇ ಈ ಕೋಟ್ಯಂತರ ರೂಪಾಯಿ ವಂಚನೆಗೆ ಒಳಗಾದ ದುರ್ದೈವಿ. ಸೈಬರ್ ಖದೀಮರು ಕಳೆದ ಜನವರಿ ತಿಂಗಳಿನಿಂದಲೇ ಈ ವೃದ್ಧೆಯನ್ನು ತಮ್ಮ ಡಿಜಿಟಲ್ ಜಾಲದಲ್ಲಿ ಸಿಲುಕಿಸಿದ್ದರು. ಕಾನೂನು ಬಾಹಿರ ಚಟುವಟಿಕೆ ಅಥವಾ ತನಿಖೆಯ ಹೆಸರಿನಲ್ಲಿ ವೃದ್ಧೆಯನ್ನು ಹೆದರಿಸಿ, ‘ಡಿಜಿಟಲ್ ಅರೆಸ್ಟ್’ ಮಾದರಿಯಲ್ಲಿ ಮನೆಯಲ್ಲೇ ಬಂಧಿಯಾಗುವಂತೆ ಮಾಡಿದ್ದರು. ಬಂಧನದ ಭೀತಿಯಲ್ಲಿದ್ದ ವೃದ್ಧೆಯಿಂದ ಹಂತ ಹಂತವಾಗಿ ಬರೋಬ್ಬರಿ 24…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಸಿಸಿಎಚ್ ಕೋರ್ಟ್‌ನಿಂದ ನಗರದ 59ನೇ ಸೆಷನ್ ಕೋರ್ಟ್‌ಗೆ ವರ್ಗಾವಣೆಯಾಗಿದೆ. ಪ್ರಕರಣದ ಕನಿಷ್ಠ ಪ್ರಮುಖ 60 ಪ್ರಮುಖ ಸಾಕ್ಷಿ ಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಕಡ್ಡಾಯವಾಗಿ ಮುಗಿಸಬೇಕು ಸುಪ್ರೀಂಕೋರ್ಟ್‌ ನಿರ್ದೇಶನ ಹಿನ್ನೆಲೆಯಲ್ಲಿ ಜೂ.1ರಿಂದ 59ನೇ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಲಿದೆ. ಎಂಬ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶದ ಪ್ರತಿಯನ್ನು ದರ್ಶನ್ ಪರ ವಕೀಲರು ಬೆಂಗಳೂರಿನ ಸೆಷನ್ ಕೋರ್ಟ್‌ಗೆ ಸಲ್ಲಿಸಿದ್ದಾರೆ. ಈ ಆದೇಶದ ಅನ್ವಯ, ಪ್ರಕರಣದ ತ್ವರಿತಗತಿ ವಿಚಾರಣೆ ನಡೆಸುವ ಹಾಗೂ ಆರೋಪಿಗಳಿಗೆ ಒದಗಿಸಬೇಕಾದ ಕನಿಷ್ಠ ಸೌಲಭ್ಯಗಳ ಮಾರ್ಗಸೂಚಿಗಳನ್ನು ಹೇಗೆ ಅಳವಡಿಸಿಕೊಳ್ಳಬೇಕು ಎಂಬುದನ್ನು ಸುಜಾತಾ ಎಂ.ಸಾಮ್ರಾಣಿ ಅವರು ಕೊಲೆ ನ್ಯಾಯಾಲಯ ನಿರ್ಧರಿಸಲಿದೆ. ನ್ಯಾ. ಪ್ರಕರಣದ ವಿಚಾರಣೆ ನಡೆಸಲಿದ್ದಾರೆ. ಇದೇ ಪ್ರಕರಣದಲ್ಲಿ ಈಗಾಗಲೇ ಜಾಮೀನು ಪಡೆದು ಹೊರಗಿರುವ 5 ಆರೋಪಿಗಳ ಜಾಮೀನನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಪ್ರಾಸಿಕ್ಯೂಷನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾ ರಣೆ ನಡೆಸಿರುವ ಹೈಕೋರ್ಟ್, ಸದ್ಯ ತನ್ನ ತೀರ್ಪು ಕಾಯ್ದಿರಿಸಿದೆ.…

Read More

ಬೆಂಗಳೂರು: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ ಯುಜಿ (NEET-UG) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಹೊರಬಿದ್ದಿದೆ. ಮೇ 3ರಂದು ನಡೆದಿದ್ದ ಪರೀಕ್ಷೆಯು ರದ್ದಾಗಿದ್ದು, ಜೂನ್ 21ರಂದು ದೇಶಾದ್ಯಂತ ನೀಟ್ ಮರು ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಮರು ಪರೀಕ್ಷೆ ಬರೆಯಲಿರುವ ಕರ್ನಾಟಕದ ವಿದ್ಯಾರ್ಥಿಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಜೂನ್ 21ರ ಪರೀಕ್ಷೆಯ ದಿನದಂದು ರಾಜ್ಯದ ನೀಟ್ ಅಭ್ಯರ್ಥಿಗಳಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಸಚಿವರು ಅಧಿಕೃತವಾಗಿ ಘೋಷಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರದ ನಿರ್ಧಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಪತ್ರಿಕೆ ಸೋರಿಕೆಯಿಂದಾಗಿ ವಿದ್ಯಾರ್ಥಿಗಳು ಈಗಾಗಲೇ ತೀವ್ರ ಮಾನಸಿಕ ನೆಮ್ಮದಿ ಕಳೆದುಕೊಂಡಿದ್ದಾರೆ. ಈಗ ಮತ್ತೆ ಮರು ಪರೀಕ್ಷೆ ಬರೆಯಬೇಕಾಗಿ ಬಂದಿರುವುದು ಅವರಿಗೆ ಆರ್ಥಿಕ ಹಾಗೂ ದೈಹಿಕವಾಗಿಯೂ ಹೊರೆಯಾಗಿದೆ. ಈ ಹಿನ್ನೆಲೆಯಲ್ಲಿ, ಮರು ಪರೀಕ್ಷೆ ಬರೆಯುವ ರಾಜ್ಯದ…

Read More

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಬಾಕ್ಸಿಂಗ್​ ತರಬೇತಿ ಪಡೆಯುತ್ತಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ, ಬಾಕ್ಸಿಂಗ್ ತರಬೇತುದಾರನ ವಿರುದ್ಧ ಕೇಳಿ ಬಂದಿದ್ದು, ಪೋಕ್ಸೋ ಪ್ರಕರಣ ದಾಖಲಾಗಿದೆ. ಕಸ್ತೂರಬಾ ರಸ್ತೆಯಲ್ಲಿನ ಕ್ರೀಡಾಂಗಣದ ಆವರಣದೊಳಗಿರುವ ಖಾಸಗಿ ಬಾಕ್ಸಿಂಗ್ ಕ್ಲಬ್‌ನಲ್ಲಿ ತರಬೇತಿ ಪಡೆಯುತ್ತಿದ್ದ 17 ವರ್ಷದ ಅಪ್ರಾಪ್ತೆಗೆ ಕಳೆದ 4 ತಿಂಗಳುಗಳಿಂದ ನಿರಂತರ ಕಿರುಕುಳ ನೀಡುತ್ತಿರುವ ಆರೋಪ 50 ವರ್ಷ ವಯಸ್ಸಿನ ಬಾಕ್ಸಿಂಗ್ ತರಬೇತುದಾರನ ವಿರುದ್ಧ ಕೇಳಿಬಂದಿದೆ. ನೊಂದ ಬಾಲಕಿಯ ತಾಯಿ ನೀಡಿರುವ ದೂರಿನ ಅನ್ವಯ ಆರೋಪಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಸಂಪಂಗಿರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.​ ಬಾಕ್ಸಿಂಗ್ ಸ್ಪರ್ಧೆಗಾಗಿ ಚೆನ್ನೈನಲ್ಲಿದ್ದ ಬಾಲಕಿಯನ್ನು, ಮೇ 17ರಂದು ತನ್ನ ಕೋಣೆಗೆ ಕರೆಸಿಕೊಂಡಿದ್ದ ಆರೋಪಿ, ಆಕೆಯ ಪ್ರತಿರೋಧದ ನಡುವೆಯೂ ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಮೊದಲು ಬೆಂಗಳೂರಿನ ಕ್ರೀಡಾಂಗಣದಲ್ಲಿಯೂ ಇದೇ ರೀತಿ ಅನುಚಿತ ವರ್ತನೆಯ ಘಟನೆಗಳು ನಡೆದಿವೆ. ಆದರೆ, ಆ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಸುಮ್ಮನೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕತ್ತು ಕೊಯ್ದುಕೊಂಡು ಯುವಕ ಒಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿನ್ನೆಯಷ್ಟೇ ರಿಯ್ಯಾಬ್ ಸೆಂಟರ್ ನಿಂದ ಬಂದಿದ್ದ ಯುವಕ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ. ಈ ಒಂದು ಘಟನೆ ಬೆಂಗಳೂರಿನ ಅಶೋಕ್ ನಗರದಲ್ಲಿ ನಡೆದಿದೆ. ನಿನ್ನ ಬೆಳಿಗ್ಗೆ ಗೌತಮ್ (28) ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿನ್ನೆ ತಾನೇ ರಿಯ್ಯಾಬ್ ಸೆಂಟರ್ ನಿಂದ ಗೌತಮ್ ಬಂದಿದ್ದ. ಮೇಲ್ ನೋಟಕ್ಕೆ ಕೊಲೆ ಆಗಿರಬಹುದು ಎಂದು ಅನುಮಾನ ಇತ್ತು. ಆದರೆ ಯುವಕ ಗೌತಮ್ ಆತ್ಮಹತ್ಯೆ ಮಾಡಿಕೊಂಡಿರುವುದು ಇದೀಗ ಪತ್ತೆಯಾಗಿದೆ. ಸದ್ಯ ಅಶೋಕನಗರ ಠಾಣೆ ಪೊಲೀಸರು ಯುಡಿಆರ್ ದಾಖಲೆಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More