Author: kannadanewsnow05

ಬೆಂಗಳೂರು : ಬೆಂಗಳೂರಿನ ಮಂತ್ರಿ ಬಿಲ್ಡರ್ಸ್ ಮೇಲೆ ED ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಹಕರಿಂದ ಅಪಾರ್ಟ್‌ಮೆಂಟ್‌ಗಳಿಗಾಗಿ ಸಂಗ್ರಹಿಸಿದ ಕೋಟ್ಯಂತರ ರೂಪಾಯಿ ಹಣವನ್ನು ಉದ್ದೇಶಿತ ಯೋಜನೆಗಳಿಗೆ ಬಳಸುವ ಬದಲು, ಅಕ್ರಮವಾಗಿ ವಿದೇಶಿ ಹೂಡಿಕೆಗೆ ಅಥವಾ ಇತರ ವೈಯಕ್ತಿಕ ಉದ್ದೇಶಗಳಿಗೆ ಬಳಸಲಾಗಿದೆ ಎಂಬ ಆರೋಪದ ಮೇಲೆ ಈ ದಾಳಿ ನಡೆದಿದೆ. ಹೌದು ಬೆಂಗಳೂರಿನ ಖ್ಯಾತ ರಿಯಲ್ ಎಸ್ಟೇಟ್ ಕಂಪನಿಯಾದ ‘ಮಂತ್ರಿ ಡೆವಲಪರ್ಸ್’ (Mantri Developers) ಕಚೇರಿಗಳು ಹಾಗೂ ಅದರ ಮಾಲೀಕ ಸುಶೀಲ್ ಮಂತ್ರಿ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿಯಿಂದ ಆಗಮಿಸಿದ ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳ ತಂಡವು ಈ ಕಾರ್ಯಾಚರಣೆ ನಡೆಸುತ್ತಿದ್ದು, ಹಣ ವರ್ಗಾವಣೆ ಮತ್ತು ಗ್ರಾಹಕರಿಂದ ಪಡೆದ ಹಣದ ದುರುಪಯೋಗಕ್ಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

Read More

ಚಿಕ್ಕಮಗಳೂರು : ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಮಳೆಯಿಂದಾಗಿ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಚಿಕ್ಕಮಗಳೂರು, NR ಪುರ, ಮೂಡಿಗೆರೆ, ಕೊಪ್ಪ ಭಾಗದಲ್ಲಿ ಮಳೆ ಸುರಿಯುತ್ತಿದೆ. ಕಳೆದ 1 ಗಂಟೆಯಿಂದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಹಾಗಾಗಿ ವಾಹನಗಳು ರಸ್ತೆಯಲ್ಲಿಯೇ ನಿಂತಿದ್ದು ಸವಾರರು ಪರದಾಡುತ್ತಿದ್ದಾರೆ.

Read More

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಹೋಟೆಲ್ ಸಿಬ್ಬಂದಿಯ ಬರ್ಬರ ಕೊಲೆ ನಡೆದಿದ್ದು, ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆ ಸಿಬ್ಬಂದಿ ಹತ್ಯೆಯಾಗಿದೆ. ಕೆಫೆಯಲ್ಲಿ ಕೆಲಸ ಮಾಡ್ತಿದ್ದ ಬಿಹಾರ್ ಮೂಲದ ಟಿಂಕು ಶರ್ಮಾ (30) ಎನ್ನುವ ಸಿಬ್ಬಂದಿ ಹತ್ಯೆ ಮಾಡಲಾಗಿದೆ.ಹೋಂಡಾ ಸಿಟಿ ಕಾರಿನೊಳಗೆ ಶವವಾಗಿ ಟಿಂಕು ಶವ ಪತ್ತೆಯಾಗಿದೆ.ಸ್ಥಳಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಚಾಮರಾಜನಗರ : ಮನೆಯಲ್ಲಿ ಪೋಷಕರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ನೇಣು ಬಿಗಿದುಕೊಂಡು ಪ್ರೇಮಿಗಳು ಇಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೊನ್ನಚಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲೆ ನದಿಯ (19) ಹಾಗು ನಾಗೇಂದ್ರ (21) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪಾಲರ್ ಗ್ರಾಮದ ನದಿಯಾಳನ್ನು ನಾಗೇಂದ್ರ ಪ್ರೀತಿಸುತ್ತಿದ್ದ. 3 ದಿನದ ಹಿಂದೆ ನಾಗೇಂದ್ರ ಜೊತೆ ನದಿಯಾ ಪೊನ್ನಚ್ಚಿಗೆ ತೆರಳಿದ್ದಳು. ನಾಗೇಂದ್ರ ಆಕೆಯನ್ನು ತಾತನ ಮನೆಗೆ ಕರೆದುಕೊಂಡು ಹೋಗಿದ್ದ. ಈ ಕುರಿತು ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವನಿಸಲಾಗಿದೆ. ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ನವದೆಹಲಿ : ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣದ ತುರ್ತು ವಿಚಾರಣೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಸಾಮಾನ್ಯ ಕ್ರಮದಲ್ಲೇ ವಿಚಾರಣೆ ನಡೆಸುವುದಾಗಿ ಸ್ಪಷ್ಟಪಡಿಸಿದೆ. ಹೌದು ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಾತ್ಕಾಲಿಕ ರಿಲೀಫ್ ದೊರೆತಿದ್ದು, ತುರ್ತು ವಿಚಾರಣೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಪ್ರಕರಣವನ್ನು ತಕ್ಷಣವೇ ವಿಚಾರಣೆ ನಡೆಸಬೇಕೆಂಬ ಬೇಡಿಕೆಗೆ ನ್ಯಾಯಾಲಯ ಸ್ಪಷ್ಟ ನಿರಾಕರಣೆ ನೀಡಿದೆ. ಸಮಾಜ ಪರಿವರ್ತನಾ ಸಮುದಾಯ ಸಂಸ್ಥೆಯು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇತ್ತೀಚೆಗೆ ನಡೆದ ಸರ್ವೇ ಕಾರ್ಯಗಳ ಹಿನ್ನೆಲೆಯಲ್ಲಿ ಪ್ರಕರಣ ತುರ್ತು ವಿಚಾರಣೆಗೆ ಒಳಪಡಿಸಬೇಕು ಎಂದು ಮನವಿ ಮಾಡಲಾಗಿತ್ತು. ಆದರೆ, ಈ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿ, ಪ್ರಕರಣವನ್ನು ಸಾಮಾನ್ಯ ವಿಚಾರಣೆಯ ಕ್ರಮದಲ್ಲಿಯೇ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.…

Read More

ಬೆಂಗಳೂರು : ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳಿಂದಾಗಿ ಜಾಗತಿಕ ಕಚ್ಚಾ ತೈಲ ಬೆಲೆಗಳು ಏರುತ್ತಿರುವ ಸಮಯದಲ್ಲಿ, ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ವಲಯದ ತೈಲ ಕಂಪನಿಗಳು ಚಿಲ್ಲರೆ ಬೆಲೆಗಳನ್ನು ಸ್ಥಿರವಾಗಿರಿಸುವುದನ್ನು ಮುಂದುವರಿಸಿದ್ದರೂ ಸಹ, ಪೆಟ್ರೋಲ್ ಡಿಸೇಲ್ ದರದಲ್ಲಿ ಭಾರಿ ಏರಿಕೆಯಾಗಿದೆ. ಹೌದು ಖಾಸಗಿ ಇಂಧನ ಚಿಲ್ಲರೆ ವ್ಯಾಪಾರಿಗಳಾದ ನಯಾರ ಎನರ್ಜಿ ಮತ್ತು ಶೆಲ್ ಬೆಂಗಳೂರು ಸೇರಿದಂತೆ, ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿದೆ. ಈಗಾಗಲೇ ಹೆಚ್ಚುತ್ತಿರುವ ಅಗತ್ಯ ವಸ್ತುಗಳ ವೆಚ್ಚಗಳೊಂದಿಗೆ ಹೋರಾಡುತ್ತಿರುವ ಗ್ರಾಹಕರಲ್ಲಿ ಇದು ಹೊಸ ಕಳವಳವನ್ನು ಉಂಟು ಮಾಡಿದೆ. ಬೆಂಗಳೂರಿನಲ್ಲಿ ಖಾಸಗಿ ಇಂಧನ ಮಳಿಗೆಗಳಲ್ಲಿ ಪೆಟ್ರೋಲ್ ಬೆಲೆ ತೀವ್ರವಾಗಿ ಏರಿದ್ದು, ಸಿಲಿಕಾನ್ ವ್ಯಾಲಿಯ ಹಲವಾರು ಭಾಗಗಳಲ್ಲಿ ಲೀಟರ್‌ಗೆ ₹120 ದಾಟಿದೆ. ಡೀಸೆಲ್ ಬೆಲೆಗಳಲ್ಲಿ ಸಹ ಗಮನಾರ್ಹ ಏರಿಕೆ ಕಂಡು ಬಂದಿದೆ. ದೇಶಾದ್ಯಂತ ಇತರ ಮಹಾನಗರಗಳಲ್ಲಿ ಇದೇ ರೀತಿ ಬೆಲೆ ಏರಿಕೆಯಾಗಿರುವ ಬಗ್ಗೆ ವರದಿಯಾಗಿವೆ. ಖಾಸಗಿ ಚಿಲ್ಲರೆ ವ್ಯಾಪಾರಿಗಳು ಸರ್ಕಾರಿ ಸ್ವಾಮ್ಯದ ಮಳಿಗೆಗಳಿಗೆ ಹೋಲಿಸಿದರೆ ಬೆಲೆಗಳಲ್ಲಿ…

Read More

ಬೆಂಗಳೂರು : ಇತ್ತೀಚಿಗೆ ಆನ್ಲೈನ್ ಆಪ್ ಗಳ ಹೆಸರಲ್ಲಿ ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದೂ, ಇದೀಗ ಡೇಟಿಂಗ್ ಆಪ್ ಮೂಲಕ ಪರಿಚಯವಾದ ಮಹಿಳೆ, ಮದುವೆಯಾಗುವುದಾಗಿ ನಂಬಿಸಿ ಸಾಫ್ಟ್‌ವೇರ್ ಎಂಜಿನಿಯರ್‌ಗೆ ಆನ್‌ಲೈನ್ ಟ್ರೇಡಿಂಗ್ ಹೆಸರಲ್ಲಿ 18.7 ಲಕ್ಷ ರೂ. ವಂಚಿಸಿದ್ದಾಳೆ. ಈ ಬಗ್ಗೆ ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2025ರ ನವೆಂಬರ್‌ನಲ್ಲಿ Flutrr ಡೇಟಿಂಗ್ ಆಪ್‌ ಮೂಲಕ 29 ವರ್ಷದ ಸ್ವಾಫ್ಟ್‌ವೇರ್ ಎಂಜಿನಿಯರ್​​ಗೆ ಮಹಿಳೆಯೊಬ್ಬಳ ಪರಿಚಯವಾಗಿತ್ತು. ಆಕೆ ತನ್ನನ್ನು ಮುಂಬೈ ಮೂಲದ ಅಂಜಲಿ ಕುಶ್ಲಾನಿ ಎಂದು ಪರಿಚಯಿಸಿಕೊಂಡು, ನಂತರ ವಾಟ್ಸಾಪ್ ಮೂಲಕ ನಿಯಮಿತವಾಗಿ ಈತನ ಸಂಪರ್ಕದಲ್ಲಿದ್ದಳು. ಇದಾದ ಕೆಲ ಸಮಯದ ಬಳಿಕ ಪ್ರೀತಿಯ ಹೆಸರಲ್ಲಿ ಸಂತ್ರಸ್ತನ ನಂಬಿಸಿದ್ದ ಮಹಿಳೆ, ಆತನ ಜೊತೆಗೆ ಸಲುಗೆ ಬೆಳೆಸಿಕೊಂಡಿದ್ದಳು. ಹೀಗಾಗಿ ಸಾಫ್ಟ್‌ವೇರ್ ಎಂಜಿನಿಯರ್​​ ಆಕೆಯ ಜೊತೆಗೆ ಭವಿಷ್ಯದ ಕನಸು ಕೂಡ ಕಂಡಿದ್ದ. ಇದನ್ನೇ ಬಂಡವಾಳ ಮಾಡಿಕೊಂಡ ಆಕೆ ಕೆಲ ವಾರಗಳ ಬಳಿಕ ಆಕೆ ಆನ್‌ಲೈನ್ ಟ್ರೇಡಿಂಗ್ ಬಗ್ಗೆ ಪರಿಚಯಿಸಿ, ತನ್ನ ಮಾರ್ಗದರ್ಶನದಲ್ಲಿ ಹೂಡಿಕೆ…

Read More

ಧಾರವಾಡ : ಧಾರವಾಡ ಡಿಸಿ ಕಚೇರಿ ಕಂಪೌಂಡ್ ಬಳಿ ಕಿಡಿಗೇಡಿಗಳು ವಾಮಾಚಾರ ನಡೆಸಿದ್ದಾರೆ. ಮೊಟ್ಟೆ, ಬಾಳೆಹಣ್ಣು, ವೀಳ್ಯದೆಲೆ, ನಿಂಬೆಹಣ್ಣು ಬಳಸಿ ವಾಮಾಚಾರ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಬಳಿ ವಾಮಾಚಾರ ಹಿನ್ನಲೆ ಸಿಬ್ಬಂದಿಗೆ ಆತಂಕ ಶುರುವಾಗಿದ್ದು, ತಡರಾತ್ರಿ ಜಿಲ್ಲಾಧಿಕಾರಿ ಕಚೇರಿ ಬಳಿ ವಾಮಾಚಾರ ಮಾಡಿರುವ ಶಂಕೆ ವ್ಯಕ್ತವಾಗಿದೆ.

Read More

ಬಾಗಲಕೋಟೆ : ಸಿದ್ದರಾಮಯ್ಯರ ಬಗ್ಗೆ ಬಿಜೆಪಿಯವರು ಹಗುರವಾಗಿ ಮಾತನಾಡಿದ್ದಾರೆ. ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಬ್ರಿಯಾನ್ ಲಾರ ಅನೇಕರು ಸೇರಿ ಒಬ್ಬ ಸಿದ್ದರಾಮಯ್ಯ ಎಂದು ಬಾಗಲಕೋಟೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದರು. ಗುಜರಾತ್ ಗು ಕರ್ನಾಟಕಕ್ಕೂ ಹೋಲಿಕೆ ಮಾಡಿ ನೋಡಿ ಸಾಕು. ಚುನಾವಣೆ ವೇಳೆ ಮಾತ್ರ ಬಿಜೆಪಿಯವರು ಗೋಮಾತೆ ಬಗ್ಗೆ ಮಾತನಾಡುತ್ತಾರೆ. ಇಡೀ ಜಗತ್ತಿನಲ್ಲಿಯೇ ನಮ್ಮ ದೇಶ ಬೀಫ್ ರಫ್ತು ಮಾಡುವಲ್ಲಿ ಎರಡನೇ ಸ್ಥಾನದಲ್ಲಿದೆ. ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಣೆ ಮಾಡಿಬಿಡಿ ಗೋ ಸಾಕಾಣಿಕೆ ತಡೆಯುವ ಹೆಸರಲ್ಲಿ ಹಣ ವಸೂಲಿ ಮಾಡಿದ್ದಾರೆ. ಅದರ ಹಣದಿಂದ ದೇಶದಲ್ಲಿ 800 ಬಿಜೆಪಿ ಕಚೇರಿಗಳನ್ನು ಕಟ್ಟಿಸಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Read More

ಬೆಂಗಳೂರು : ಉಪಚುನಾವಣೆ ಹೊತ್ತಲ್ಲೆ ಗ್ಯಾರಂಟಿ ಹಣ ಬಿಡುಗಡೆ ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ಗೆ ಗೌತಮ್ ಕುಮಾರ್ ಜೈನ್ ಎನ್ನುವರು ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ನಲ್ಲಿ ಈ ಒಂದು ಅರ್ಜಿಯ ವಿಚಾರಣೆ ನಡೆಯಿತು. ಹೈಕೋರ್ಟಿಗೆ ಸರ್ಕಾರದ ಪರ ವಕೀಲ ಎಜಿ ಶಕಿರಣಶೆಟ್ಟಿ ಮಾಹಿತಿ ನೀಡಿದ್ದಾರೆ. ಫೆಬ್ರುವರಿ ವರೆಗಿನ ಗೃಹಲಕ್ಷ್ಮಿ ಹಣವನ್ನು ಈಗಾಗಲೇ ನೀಡಲಾಗಿದೆ. ಉಳಿದ ಹಣ ಯಾವಾಗ ಬಿಡುಗಡೆ ಎಂದು ಈಗ ಹೇಳುವಲಾಗುವುದಿಲ್ಲ. ಉಚಿತ ವಿದ್ಯುತ್ ಮಹಿಳೆಯರಿಗೆ ಬಸ್ ಸೌಲಭ್ಯ ನೀಡಲಾಗಿದೆ. ರಾಜ್ಯದ ಎಲ್ಲಾ ಫಲಾನುಭವಿಗಳಿಗೂ ಈ ಸೌಲಭ್ಯ ನೀಡಲಾಗಿದೆ. ಉಪಚುನಾವಣೆ ಕಾರಣ ಅದನ್ನು ತಡೆಹಿಡಿಯಲು ಅರ್ಜಿದಾರರು ಕೇಳುತ್ತಾರೆ ಎಂದು ಗೌತಮ್ ಕುಮಾರ್ ಜೈನ್ ರಿಟ್ ಅರ್ಜಿಗೆ ಶಶಿಕಿರಣ್ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಹೈಕೋರ್ಟ್ ಜಡ್ಜ್ ಸರ್ಕಾರದ ನೀತಿಯಂತೆ ಸೌಲಭ್ಯ ನೀಡಲಾಗುತ್ತಿದೆ ಎಂದು ಹೈಕೋರ್ಟ್ ಇದೆ ವೇಳೆ ತಿಳಿಸಿತು. ಅನ್ನ ಭಾಗ್ಯದ ಹಣ ಆರು ತಿಂಗಳಿನಿಂದ ನಡಿಲ್ಲವೆಂದು ಇದೇ ವೇಳೆ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಅರ್ಜಿ…

Read More