Author: kannadanewsnow05

ಉತ್ತರಕನ್ನಡ : ಕಾರಿಗೆ ಬೆಂಕಿ ತಗುಲಿ ಚಾಲಕ ಸಜೀವ ದಹನ ಕೇಸ್ ಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಈ ಒಂದು ಘಟನೆ ನಡೆದಿತ್ತು. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಈ ಒಂದು ಘಟನೆ ನಡೆದಿಡ್ಮತ್ತು. ಮೋಸ್ಟ್ ವಾಂಟೆಡ್ ಆರೋಪಿಯ ಕೊಲೆ ಮಾಡಿರುವುದು ಇದೀಗ ತನಿಖೆಯಲ್ಲಿ ಬಯಲಾಗಿದೆ. ಬೆಳಗಾವಿ ಮೂಲದ ನಿತೀಶ್ ಡಾಪಳೆ ಅನ್ನು ಆರೋಪಿಗಳು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಸುಮಾರು 50ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣದ ಆರೋಪಿ ಯಾಗಿರುವ ನಿತೀಶ್ನನ್ನು ಕೊಲೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ತನ್ನ ಸಹಚರರಿಂದಲೇ ನಿತೀಶ್ ಹತ್ಯೆಯಾಗಿದ್ದಾನೆ. ಕಾರಿನಲ್ಲಿ ನಿತೀಶ್ ಡಾಂಬಳೆ ಶವ ಅರಬೈಲ್ ಘಟ್ಟಕ್ಕೆ ತಂದಿದ್ದರು. ಕಾರಿಗೆ ಬೆಂಕಿ ಹಾಕಿ ಶವವನ್ನು ಸುಟ್ಟು ಹಾಕಿದ್ದರು. ಪೊಲೀಸರು ಸದ್ಯ ಮೂವರನ್ನು ಬಂಧಿಸಿದ್ದು ನಯಿಮ್ ಮೌಲ ದಾದಾಪೀರ್ ಹಾಗೂ ಸೋಯಬ್ ಎನ್ನುವವರನ್ನು ಅರೆಸ್ಟ್ ಮಾಡಿದ್ದಾರೆ ಬಂಧಿತ ಮೂವರು ಆರೋಪಿಗಳು ಹುಬ್ಬಳ್ಳಿ ಮೂಲದವರು ಎನ್ನಲಾಗಿದೆ. ಇನ್ನುಳಿದ ಶಾನು,…

Read More

ಬಳ್ಳಾರಿ : ಯೋಧರ ಪ್ಯಾರಾಚೂಟ್ ತರಬೇತಿ ಬೆಳೆ ಅವಗಡ ಸಂಭವಿಸಿದ್ದು, 50 ಅಡಿ ಅಂತರದಿಂದ ಜಿಗಿದ ಇಬ್ಬರ ಕಾಲುಗಳು ಮುರಿತ ಆಗಿರುವ ಘಟನೆ ಬಳ್ಳಾರಿ ಹೊರವಲಯದ ಪೀಡಿಹಳ್ಳಿ ಭಾಗದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಯೋಧ ಚಿನ್ನ ರಾಜ್ ಅವರ ಕಾಲಿನ ಮೂಳೆಮುರಿತವಾಗಿದ್ದು ಮತ್ತೊಬ್ಬ ಯೋಧನಿಗೂ ಕಾಲಿನ ಮೂಳೆ ಮುರಿತವಾಗಿದೆ.ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಬಳ್ಳಾರಿಯಲಿ ಪ್ಯಾರಾಚೂಟ್ ತರಬೇತಿ ಟ್ರೇನಿಂಗನ್ನು ಕೊಡಲಾಗುತ್ತಿದೆ. ವಿಮಾನದಿಂದ ಯೋಧರು ಜಂಪ್ ಮಾಡಿದ್ದಾರೆ. ಈ ವೇಳೆ ಪ್ಯಾರಾಚೂಟ್ ಓಪನ್ ಆಗಿದೆ. ಬಳಿಕ ಲ್ಯಾಂಡಿಂಗ್ ಸಂದರ್ಭದಲ್ಲಿ ಸಮಸ್ಯೆ ಉಂಟಾಗಿ ಇಬ್ಬರು ಯೋಧರು ಹೊಲದಲ್ಲಿ ಬಿದ್ದಿದ್ದಾರೆ. ಈ ವೇಳೆ ಇಬ್ಬರ ಕಾಲುಗಳು ಮುರಿತವಾಗಿದ್ದು ತಕ್ಷಣ ಅವರನ್ನು ಏರ್ಲಿಫ್ಟ್ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಭಾರತೀಯ ವಾಯು ಸೇನೆಯಿಂದ ಪ್ಯಾರಾಚೂಟ್ ತರಬೇತಿ ನೀಡಲಾಗುತ್ತಿತ್ತು. ನಿನ್ನೆ ಬೆಳಿಗ್ಗೆ 417 ಸೈನಿಕರಿಂದ ಪ್ಯಾರಾಚೂಟ್ ತರಬೇತಿ ನೀಡಲಾಗುತ್ತಿತ್ತು. ಸೇನಾ ವಿಮಾನದಿಂದ 50 ಅಡಿ ಎತ್ತರದಿಂದ ಜಿಗಿದಿದ್ದಾರೆ. ಪ್ಯಾರಾಚೂಟು ಸಹಿತ 417…

Read More

ರಾಯಚೂರು: ಜಿಲ್ಲೆಯ ರಾಯಚೂರು ತಾಲೂಕಿನ ಬೈಲ್ ಮರ್ಚಡ್ ಗ್ರಾಮದಲ್ಲಿ ಇಂದು ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಗ್ರಾಮದ ಸಮುದಾಯ ಭವನದ ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ಬಿದ್ದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸಮ್ಮ ಎನ್ನುವ ಮಹಿಳೆಯ ಒಂದು ಕಾಲು ಕಟ್ ಆಗಿದ್ದು, ಪುತ್ರಿ ಲಕ್ಷ್ಮಿ ಎರಡು ಕಾಲುಗಳು ಸಹ ಕಟ್ ಆಗಿವೆ. ವಿಶಾಲಮ್ಮ (20) ಹಾಗೂ ಎಲ್ಲಮ್ಮ (4) ಎಂಬ ಬಾಲಕಿಗೆ ಗಂಭೀರವಾದ ಗಾಯಗಳಾಗಿದ್ದು ರಾಯಚೂರಿನ ಒಪೆಕ್ ಆಸ್ಪತ್ರೆಗೆ ದಾಖಲಿಸಿ ನಾಲ್ವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದಲ್ಲಿ ನಿನ್ನೆ ರಾತ್ರಿ ಬಯಲಾಟ ನೋಡುತ್ತಿದ್ದ ಗ್ರಾಮಸ್ಥರು, ಸಮುದಾಯ ಭವನದ ಕಟ್ಟೆಯ ಕೆಳಗೆ ಕೂತು ಬೈರಾಟ ವೀಕ್ಷಣೆ ಮಾಡುತ್ತಿದ್ದರು ಇವಳೆ ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ದುರಂತ ಸಂಭವಿಸಿದೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ. ದುರಂತದ ಹಿನ್ನೆಲೆ: ಮಕ್ಕಳು ನಾಮಫಲಕದ ಬಳಿ ಇದ್ದ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಬೃಹತ್ ಗಾತ್ರದ ಸಿಮೆಂಟ್…

Read More

ಧಾರವಾಡ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಲಯದ ತೀರ್ಪನ್ನು ನಾವು ಸಂಪೂರ್ಣವಾಗಿ ಗೌರವಿಸುತ್ತೇವೆ ಎಂದು ಶಾಸಕ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಈ ಪ್ರಕರಣದಲ್ಲಿ ತಮ್ಮ ಪತಿ ವಿನಯ ಕುಲಕರ್ಣಿ ಅವರು ಯಾವುದೇ ರೀತಿಯಲ್ಲಿ ಭಾಗಿಯಾಗಿಲ್ಲ ಎಂಬ ಬಗ್ಗೆ ತಮಗೆ ದೃಢವಾದ ಆತ್ಮವಿಶ್ವಾಸವಿದೆ.  ಪ್ರಸ್ತುತ ಹೊರಬಿದ್ದಿರುವ ತೀರ್ಪನ್ನು ಪ್ರಶ್ನಿಸಿ ನಾವು ಕೂಡಲೇ ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದೇವೆ. ಉನ್ನತ ನ್ಯಾಯಾಲಯದಲ್ಲಿ ನಮಗೆ ಖಂಡಿತವಾಗಿಯೂ ನ್ಯಾಯ ಸಿಗಲಿದೆ ಎಂಬ ಅಚಲ ನಂಬಿಕೆ ಇದೆ ಎಂದು ಹೇಳಿದ್ದಾರೆ. ಈ ಕಠಿಣ ಸಮಯದಲ್ಲಿ ವಿನಯ್ ಅವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಅಥವಾ ಮುಖಂಡರುಧೃತಿಗೆಡಬಾರದು. ಸಂಯಮದಿಂದ ವರ್ತಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

Read More

ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಶಿಕ್ಷೆ ಪ್ರಕಟ ಮಾಡಿತ್ತು. ಶಿಕ್ಷೆ ಪ್ರಕಟ ಬೆನ್ನಲ್ಲೆ, ಶಾಸಕ ವಿನಯ್ ಕುಲಕರಣಿ ಕೋರ್ಟ್ ನಲ್ಲಿಯೇ ಕಣ್ಣೀರು ಹಾಕಿದ್ದರು. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಾಸಕ ವಿನಯ್ ಕುಲಕರ್ಣಿ, ನಿನ್ನೆ ರಾತ್ರಿ ಊಟ ನಿದ್ದೆ ಇಲ್ಲದೆ ಕಣ್ಣೀರು ಹಾಕಿದ್ದಾರೆ. ಅಷ್ಟೆ ಅಲ್ಲದೆ ನಟ ದರ್ಶನ್ ಇರುವ ಬ್ಯಾರಕ್ ಸಮೀಪದಲ್ಲಿಯೇ ಶಾಸಕ ವಿನಯ್ ಕುಲಕರ್ಣಿ ಅವರ ಬ್ಯಾರಕ್ ಕೂಡ ಇದ್ದು, ಒಂದೇ ಕಡೆ ಇದೀಗ ಇಬ್ಬರು ಇದ್ದಾರೆ. ಆದರೆ ವಿನಯ್ ಕುಲಕರ್ಣಿಗೆ ರಾಜಕೀಯ ಭವಿಷ್ಯದ ಜೊತೆಗೆ ಇನ್ನೊಂದು ಬಹುದೊಡ್ಡ ಚಿಂತೆ ಕಾಡುತ್ತಿದೆ. ಹೌದು ವಿನಯ್ ಕುಲಕರ್ಣಿಗೆ ವಿಶೇಷವಾಗಿ ರಾಜಕೀಯ ಭವಿಷ್ಯವೇ ದೊಡ್ಡ ಪ್ರಶ್ನೆಯಾಗಿದ್ದು,ಅತ್ತ ಮತ್ತೊಂದು ದೊಡ್ಡ ಚಿಂತೆ ಎಂದರೆ ಕುಟುಂಬ, ಕುಟುಂಬದ ಸ್ಥಿತಿ ಹಾಗೂ ಮುಂದಿನ ದಿನಗಳಲ್ಲಿ ಏನಾಗಬಹುದು…

Read More

ಬೆಂಗಳೂರು : ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ ಹಾಗೂ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಇಂದು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಛಲವಾದಿ ನಾರಾಯಣಸ್ವಾಮಿ ಮಾತನಾಡಿದ್ದು ಮಸೂದೆ ಸೋಲು ಎನ್ ಡಿ ಎ ಗೆ ಮುಖಭಂಗ ಅಲ್ಲ. ಇದು ಮಹಿಳೆಯರಿಗೆ ಕಾಂಗ್ರೆಸ್ ಮಾಡಿರುವ ಅವಮಾನ ಎಂದು ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು. ಆರ್.ಅಶೋಕ್ ಕಾಂಗ್ರೆಸ್ ಮಹಿಳೆಯರಿಗೆ ಮಾಡಿರುವ ಅನ್ಯಾಯ ಇದು. ಮಸೂದೆಗೆ ಸೋಲಾಗಿದ್ದು ಕೆಲವು ರಾಜಕೀಯ ಪಕ್ಷಗಳ ಪಿತ್ತೂರಿ ಮತ್ತು ಮಹಿಳಾ ವಿರೋಧಿ ಭಾವನೆಯ ಸ್ಪಷ್ಟ ಸಂಕೇತವಾಗಿದೆ. ಮಹಿಳೆಯರ ಬಗ್ಗೆ ಮಾತನಾಡುವ ಅರ್ಹತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕಾಂಗ್ರೆಸ್ ಮಹಿಳಾ ಘಟಕವನ್ನು ರದ್ದು ಮಾಡಿಬಿಡಿ. ಇನ್ನೆಷ್ಟು ವರ್ಷ ಮಹಿಳೆಯರನ್ನು ಕೇವಲ ಮತದಾರರನ್ನಾಗಿ ಬಳಸುತ್ತೀರಿ? ಮಹಿಳೆಯರು ದುರ್ಬಲರು ಎಂದು ಕಾಂಗ್ರೆಸ್ 60 ವರ್ಷ ಆಡಳಿತ ಮಾಡಿತು. ದೇಶದ 70 ಕೋಟಿ ಮಹಿಳೆಯರಿಗೆ ದ್ರೋಹ ಬಗೆಯಲಾಗಿದೆ. ಕಾಂಗ್ರೆಸ್ ನಿಂದ…

Read More

ಬೆಂಗಳೂರು : ಹಿಂದಿ ಅಂಕದ ವಿಷಯದಲ್ಲಿ ಕೋರ್ಟ್ ಆದೇಶದ ವಿಚಾರಕ್ಕೆ ಸಂಬಂಧಪಟ್ಟಂತೆ ಶಿಕ್ಷಕರು ಪಿಐಎಲ್ ಹಾಕಿರುವುದಕ್ಕೆ ಕೋರ್ಟ್ ಆದೇಶ ಮಾಡಿದೆ. ಶಿಕ್ಷಕರು ಇದೀಗ ಪಿಐಎಲ್ ವಾಪಸ್ ತೆಗೆದುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ಮಾಡಿ ತೀರ್ಮಾನ ಮಾಡಿ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದರು. ಕೋಟ್ ಆದೇಶವನ್ನು ಪಾಲನೆ ಮಾಡುತ್ತೇವೆ. ಮರುಪರಿಶೀಲನೆ ಮಾಡಿ ಅಂತ ಕೋರ್ಟ್ ಎಲ್ಲೂ ಹೇಳಿಲ್ಲ 2025-26ರಲ್ಲಿ ಏನು ಮಾಡಿದ್ರಿ ಅದನ್ನು ಮಾಡಿ ಅಂತ ಕೋರ್ಟ್ ಹೇಳಿದೆ. ಪಿಐಎಲ್ ಹಾಕಿದ ಮಗು ವಿಚಾರದ ಬಗ್ಗೆ ಮಾತ್ರ ಮರುಪರಿಶೀಲನೆ ಮಾಡಿ ಅಂತ ಕೋರ್ಟ್ ಹೇಳಿದೆ. ಈ ವಿಚಾರದ ಬಗ್ಗೆ ಕೋರ್ಟ್ ಮಂಗಳವಾರ ಸಮಯ ನೀಡಿದೆ. ಅಂದು ಕೋರ್ಟ್ ಆದೇಶದ ಮೇಲೆ ಎಜಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು.

Read More

ಮಂಡ್ಯ :- ಮದ್ದೂರು ನಗರಸಭಾ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾಗಿರುವ ಗ್ರಾಮ ಪಂಚಾಯಿತಿ ಕಛೇರಿಗಳಲ್ಲೆ ( ಉಪ ಕಛೇರಿ ) ಇ – ಖಾತಾ ಸೇವೆಯನ್ನು ಪ್ರಾರಂಭಿಸಿರುವುದಾಗಿ ನಗರಸಭೆಯ ಪೌರಾಯುಕ್ತೆ ಎಸ್.ಎನ್‌. ರಾಧಿಕಾ ಶುಕ್ರವಾರ ಹೇಳಿದರು. ನಗರದ ನಗರಸಭೆಯ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಈ ಹಿಂದೆ ಗ್ರಾಮ ಪಂಚಾಯಿತಿಗಳಾಗಿದ್ದ ಸೋಮನಹಳ್ಳಿ ಹಾಗೂ ಚಾಮನಹಳ್ಳಿಗಳನ್ನು ನಗರಸಭಾ ವ್ಯಾಪ್ತಿಗೆ ಸೇರ್ಪಡೆ ಮಾಡಿರುವ ಹಿನ್ನೆಲೆಯಲ್ಲಿ ಅಲ್ಲಿನ ಸ್ಥಳಿಯ ಸಾರ್ವಜನಿಕರು ಇನ್ನು ಮುಂದೆ ಪ್ರತಿಯೊಂದು ಕೆಲಸ ಕಾರ್ಯಗಳಿಗೂ ನಗರಸಭಾ ಕಛೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಆತಂಕದಲ್ಲಿದ್ದರು. ಆದರೆ, ಸಾರ್ವಜನಿಕರು ನಗರಸಭಾ ಕಛೇರಿಗೆ ಅಲೆದಾಟ ಮಾಡುವ ಸನ್ನಿವೇಶ ಎದುರಾಗಬಾರದು ಎಂಬ ಉದ್ದೇಶದಿಂದ ಈ ಸೇವೆಯನ್ನು ಆರಂಭಗೊಳಿಸಲಾಗಿದ್ದು, ಅಷ್ಟೇ ಅಲ್ಲದೆ ಮುಂದಿನ ದಿನಗಳಲ್ಲಿ ಮನೆ ಕಟ್ಟಲು ಪರವಾನಗಿ ಸೇರಿದಂತೆ ಹಲವು ಸೇವೆಗಳನ್ನು ಕೂಡ ಉಪ ಕಛೇರಿಯಲ್ಲೆ ಆರಂಭಿಸಲಾಗುವುದು ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಇ – ಖಾತಾ ಸೇವೆಯನ್ನು ಪಡೆಯಲು 50 ರೂ…

Read More

ಬೆಂಗಳೂರು : ಕಾಂಗ್ರೆಸ್ ಶಾಸಕರ ಪಾಲಿಗೆ ಜಿಲ್ಲಾ ಉಸ್ತುವಾರಿ ಸಚಿವರ ಇದೀಗ ವಿಲನ್ ಆಗಿದ್ದಾರೆ. ಹೌದು ಕಾಂಗ್ರೆಸ್ ಶಾಸಕರ ಕ್ಷೇತ್ರದ ಅನುದಾನದ ಮೇಲೆ ಸಚಿವರಿಗೆ ಕಣ್ಣು ಬಿದ್ದಿದ್ದು, ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನವನ್ನು ಸಚಿವರು ತಮ್ಮ ಕ್ಷೇತ್ರಕ್ಕೆ ಡೈವರ್ಟ್ ಮಾಡಿಕೊಂಡಿದ್ದಾರೆ ಶಾಸಕರ ಕ್ಷೇತ್ರಕ್ಕೆ ಮಂಜೂರಾದ ಅನುದಾನಕ್ಕೆ ಸಚಿವರಿಂದಲೇ ಇದೀಗ ಕತ್ತರಿ ಬಿದ್ದಿದೆ. ಮಂಜೂರು ಆದ ಅನುದಾನದ ಆದೇಶಕ್ಕೆ ಸಚಿವರು ತಿದ್ದುಪಡಿ ಮಾಡಿದ್ದಾರೆ ಅನುದಾನವನ್ನು ತಮ್ಮ ಕ್ಷೇತ್ರಕ್ಕೆ ಸಚಿವರು ಕೊಂಡೊಯ್ಯುತ್ತಿದ್ದಾರೆ ಸಚಿವರ ನಡೆಯಿಂದ ಶಾಸಕರು ಇದೀಗ ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಶಾಸಕರ ದೆಹಲಿ ಭೇಟಿ ವೇಳೆಯೂ ಹೈಕಮಾಂಡ್ ಮುಂದೆ ಈ ಒಂದು ವಿಷಯ ಪ್ರಸ್ತಾಪವಾಗಿದೆ ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಮಂಜೂರಾಗಿದ್ದ ಪ್ರಗತಿ ಕಾಲೋನಿ ಅನುದಾನ 3 ಕೋಟಿ ರೂಪಾಯಿ ದಾನದಲ್ಲಿ 99 ಲಕ್ಷ ಹಣ ಬಿಡುಗಡೆಯಾಗಿದ್ದು ಹಣ ಬಿಡುಗಡೆ ಬಳಿಕ ಆದೇಶವನ್ನೇ ಉಸ್ತುವಾರಿ ಸಚಿವರು ಮಾರ್ಪಾಡು ಮಾಡಿದ್ದಾರೆ ಆದೇಶದಲ್ಲಿ ಕ್ಷೇತ್ರದ ಹೆಸರನ್ನೇ ತಿದ್ದುಪಡಿ ಮಾಡಿ ಅನುದಾನ ಡೈವರ್ಟ್ ಮಾಡಿದ್ದಾರೆ. ಆದೇಶದಲ್ಲಿ ಕ್ಷೇತ್ರದ ಹೆಸರಿನ ತಿದ್ದುಪಡಿ…

Read More

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಪ್ರತಿ ತಿಂಗಳು ಬರುತ್ತಿದ್ದ 2,000 ರೂಪಾಯಿಗಳನ್ನು ಉಳಿತಾಯ ಮಾಡುವ ಮೂಲಕ ಮಹಿಳೆಯೊಬ್ಬರು ಸ್ವಂತ ಐಸ್‌ಕ್ರೀಮ್ ಅಂಗಡಿ ತೆರೆದು ಮಹಿಳಾ ಸಬಲೀಕರಣಕ್ಕೆ ಮಾದರಿಯಾಗಿದ್ದಾರೆ. ಹೌದು ಪ್ರತಿ ತಿಂಗಳು ತಮಗೆ ಸಿಗುತ್ತಿದ್ದ ಹಣವನ್ನು ಅನಗತ್ಯ ಖರ್ಚು ಮಾಡದೆ, ಹನಿ ಹನಿ ಕೂಡಿದರೆ ಹಳ್ಳ ಎಂಬಂತೆ ಸಂಗ್ರಹಿಸಿ ಇಂದು ಉದ್ಯಮಿಯಗಿ ಬೆಳೆದು ನಿಂತಿದ್ದಾರೆ. ಇವರ ಈ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಹರಾಳು ಗ್ರಾಮದ ಎನ್.ವಿಶಾಲಾಕ್ಷಿ ಐಸ್‌ಕ್ರೀಮ್ ಅಂಗಡಿ ತೆರೆದು, ಸ್ವಾವಲಂಬಿ ಬದುಕು ಕಟ್ಟಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಧ್ಯಮ ವರ್ಗದ ಕುಟುಂಬದ ವಿಶಾಲಾಕ್ಷಿ ನಿತ್ಯ ಕೂಲಿ ಕೆಲಸ ಮಾಡುತ್ತಿದ್ದರು. ಆದರೆ, ಪ್ರತಿ ತಿಂಗಳು 2,000 ರೂ.ನಂತೆ ಬರುವ ಗೃಹಲಕ್ಷ್ಮೀ ಹಣ ಕೂಡಿಟ್ಟು ಐಸ್‌ಕ್ರೀಂ ಅಂಗಡಿ ಓಪನ್ ಮಾಡಿದ್ದಾರೆ. ಕೊಟ್ಟೂರಿನ ಕಿಶನ್ ಎಂಟರ್ಪ್ರೈಸ್ ವಿತರಕರಿಂದ ಚಾಕೋಬಾರ್, ಐಸ್‌ ಕ್ಯಾಂಡಿ, ಕುಲ್ಫಿ ಐಸ್,…

Read More