Author: kannadanewsnow05

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇನ್ನು ಮುಂದೆ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು ಓದುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳ ಭಾಷಾ ಕೌಶಲ್ಯ ಹಾಗೂ ಸಾಮಾನ್ಯ ಜ್ಞಾನ ಹೆಚ್ಚಿಸಲು ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸುವ ಬಗ್ಗೆ ಬಜೆಟ್‌ನಲ್ಲಿ ಘೋಷಿಸಿದ್ದು, ಅದರ ಮುಂದಿನ ಭಾಗವಾಗಿ ಈ ಶೈಕ್ಷಣಿಕ ಸುಧಾರಣೆ ಜಾರಿಗೆ ಬಂದಿದೆ. ಈ ನೂತನ ನಿಯಮವು ಮಕ್ಕಳನ್ನು ಬಾಹ್ಯ ಜಗತ್ತಿನ ವಿದ್ಯಮಾನಗಳೊಂದಿಗೆ ಸಂಪರ್ಕಿಸಲು ಮತ್ತು ಅವರಲ್ಲಿ ಓದುವ ಆಸಕ್ತಿ ಮೂಡಿಸಲು ಸಹಕಾರಿಯಾಗಲಿದೆ ಎಂದು ಇಲಾಖೆ ವಿಶ್ವಾಸ ವ್ಯಕ್ತಪಡಿಸಿದೆ. ಆದೇಶದ ಹಿನ್ನೆಲೆ ಮತ್ತು ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (KSCPCR) ಶಿಫಾರಸಿನ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್ ಫೋನ್, ಸೋಶಿಯಲ್ ಮೀಡಿಯಾ ಮತ್ತು ಇಂಟರ್ನೆಟ್ ವ್ಯಸನಕ್ಕೆ ತುತ್ತಾಗುತ್ತಿರುವುದನ್ನು ತಡೆಯುವುದು…

Read More

ಪುಣೆ : ಮಹಾರಾಷ್ಟ್ರದಲ್ಲಿ ಹೃದಯಸ್ಪರ್ಶಿ ಘಟನೆ ಒಂದು ನಡೆದಿದ್ದು, ಇಡೀ ದೇಶದ ಜನತೆಯ ಗಮನ ಸೆಳೆದಿದೆ. ಹೌದು ಪುಣೆ ರಸ್ತೆಯಲ್ಲಿ ಅಚ್ಚರಿ ಘಟನೆ ನಡೆದಿದ್ದು, ರಸ್ತೆಯಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿ ಡಾಕ್ಟರ್ ಸಮಯಕ್ಕೆ ಬಂದು ತಾಯಿ-ಮಗುವಿನ ಜೀವ ಉಳಿಸಿರುವ ಘಟನೆ ವರದಿಯಾಗಿದೆ. ಹೌದು ಪುಣೆಯೊಂದರ ರಸ್ತೆಯಲ್ಲಿ ನಡೆದ ಈ ಘಟನೆ ಎಲ್ಲರ ಮನಸೂರೆಗೊಂಡಿದೆ, ಅಕಸ್ಮಿಕವಾಗಿ ಒಬ್ಬ ಮಹಿಳೆಗೆ ಹೆರಿಗೆ ನೋವು ಆರಂಭವಾಗಿದ್ದು, ಸುತ್ತಮುತ್ತಲಿದ್ದ ಜನರು ತಕ್ಷಣ ಸಹಾಯಕ್ಕೆ ಧಾವಿಸಿದರು. ಅದೇ ವೇಳೆ ಒಬ್ಬ ವೈದ್ಯರು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಬಂದು, ಸುರಕ್ಷಿತ ವಾತಾವರಣ ನಿರ್ಮಿಸಿ ಶಾಂತವಾಗಿ ಹೆರಿಗೆ ಪ್ರಕ್ರಿಯೆಗೆ ಮಾರ್ಗದರ್ಶನ ನೀಡಿದರು. ಜನರ ಸಹಕಾರ, ವೈದ್ಯರ ತಕ್ಷಣದ ಸ್ಪಂದನೆ ಮತ್ತು ಮಾನವೀಯತೆ ಸೇರಿ ತಾಯಿ ಹಾಗೂ ಮಗುವಿನ ಜೀವವನ್ನು ಸುರಕ್ಷಿತವಾಗಿಟ್ಟವು. ಈ ಹೃದಯಸ್ಪರ್ಶಿ ಘಟನೆ ಸಂಕಷ್ಟದ ಕ್ಷಣದಲ್ಲಿ ಮಾನವೀಯತೆ ಎಷ್ಟು ದೊಡ್ಡ ಶಕ್ತಿ ಎನ್ನುವುದನ್ನು ಮತ್ತೆ ಸಾಬೀತುಪಡಿಸಿದೆ. ಸಮಯೋಚಿತ ಸಹಾಯ ಮತ್ತು ಒಗ್ಗಟ್ಟು ಇದ್ದರೆ ಯಾವುದೇ ಸಂಕಷ್ಟವನ್ನೂ ಜಯಿಸಬಹುದು ಎಂಬ ಸಂದೇಶವನ್ನು…

Read More

ತಿರುಪತಿಗೆ ಹೋಗಿ ತಿಮ್ಮಪ್ಪನ ದರ್ಶನ ಮಾಡಿ ಪ್ರಸಾದ ಸವಿಯಲೇಬೇಕು ಎಂಬ ಹಂಬಲ ಎಲ್ಲರ ಮನಸ್ಸಿನಲ್ಲಿ ಬೇರೂರುವಷ್ಟು ‘ಪ್ರಸಾದ’ ಪ್ರಸಿದ್ದಿಯಾಗಿದೆ. ತಿರುಪತಿ ಪ್ರಸಾದ ಅಷ್ಟು ಸುಲಭದಲ್ಲಿ ದೊರೆಯುವುದಿಲ್ಲ. ತಿಮ್ಮಪ್ಪನ ದರ್ಶನ ಮಾಡುವಷ್ಟೇ ಕಾಯಬೇಕು. ಅದಕ್ಕಾಗಿ ಮೊದಲೇ ಕೌಂಟರ್ನಲ್ಲಿ ಹಣ ಕೊಟ್ಟು ಟಿಕೆಟ್ ಪಡೆದಿರಬೇಕು. ಒಬ್ಬರಿಗೆ ಒಂದೇ ಟಿಕೆಟ್, ಸರದಿಯಲ್ಲಿ ನಿಂತು ಗಂಟೆ ಗಟ್ಟಲೆ ಕಾಯಬೇಕು. ಇಂಥ ಭಾರಿ ಜನಜಂಗುಳಿಯ ನಿತ್ಯ ಜಾತ್ರೆಯಂತಿರುವ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ ಲಾಡು ಪ್ರಸಾದ ತೆಗೆದುಕೊಂಡು ಬರುವುದು ಎಂದರೆ, ವೈಕುಂಠಕ್ಕೆ ಹೋಗಿ ವಿಷ್ಣುವಿನ ದರ್ಶನ ಮಾಡಿ ಬಂದ ಪ್ಟೇ ಸಂಭ್ರಮ ಸಡಗರ ಮುಖದಲ್ಲಿ ತುಂಬಿ ತುಳುಕಾಡುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ…

Read More

ನವದೆಹಲಿ : ಅಮೆರಿಕದ ವಾಷಿಂಗ್ಟನ್ ನಲ್ಲಿ ಹಿಲ್ಟನ್ ಹೋಟೆಲ್ ನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಅಪರಿಚಿತ ವ್ಯಕ್ತಿ ಒಬ್ಬ ಗುಂಡಿನ ದಾಳಿ ನಡೆಸಿದ್ದ. ತಕ್ಷಣ ಭದ್ರತಾ ಸಿಬ್ಬಂದಿಗಳು ಅವರನ್ನು ರಕ್ಷಣೆ ಮಾಡಿದ್ದಾರೆ. ಈ ಒಂದು ಗುಂಡಿನ ದಾಳಿಯ ಕುರಿತಂತೆ ಡೊನಾಲ್ಡ್ ಟ್ರಂಪ್ ವೈಟ್ ಹೌಸ್ ನಲ್ಲಿ ಸುದ್ದಿಗೋಷ್ಠಿ ನಡೆಸಿದರು. ಗುಂಡಿನ ದಾಳಿಯ ಬಗ್ಗೆ ಡೊನಾಲ್ಡ್ ಟ್ರಂಪ್ ಮಾತನಾಡಿದರು. ಭದ್ರತಾ ತಪಾಸಣೆ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿದೆ ಸಿಬ್ಬಂದಿಗಳು ತಕ್ಷಣ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸೀಕ್ರೆಟ್ ಸರ್ವಿಸ್ ಸಿಬ್ಬಂದಿಗಳು ಅತ್ಯುತ್ತಮ ಕಾರ್ಯ ಮಾಡಿದ್ದಾರೆ. ಒಬ್ಬ ಸಿಬ್ಬಂದಿಗೆ ಗುಂಡು ತಗುಲಿದ್ದು ಅವರು ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ. ಬುಲೆಟ್ ಪ್ರೂಫ್ ಜಾಕೆಟ್ ಧರಿಸಿದ್ದರಿಂದ ಬಚಾವ್ ಆಗಿದ್ದಾರೆ ಎಂದು ತಿಳಿಸಿದರು. ಪೆನ್ಸಿಲ್ವೆನಿಯಾದಲ್ಲಿ ನನ್ನ ಮೇಲೆ ದಾಳಿ ನಡೆದಿತ್ತು. ಜೆಡಿ ವ್ಯಾನ್ಸ್ ಸೇರಿದಂತೆ ಹಲವರು ಇದ್ದರು. ಇಂತಹ ದಾಳಿ ಮೊದಲಲ್ಲ. ದಾಳಿಕೊರನ ಬಳಿ ಹಲವು ಶಾಸ್ತ್ರಾಸ್ತ್ರಗಳು ಇದ್ದವು. ಈ ಕಾರ್ಯಕ್ರಮವನ್ನು ಅರಿತುಕೊಂಡೆ ದಾಳಿ ಮಾಡುವ…

Read More

ನವದೆಹಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬ ಭೀಕರವಾಗಿ ಗುಂಡಿನ ದಾಳಿ ನಡೆಸಿದ್ದಾನೆ. ಅಮೇರಿಕಾದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್ನಲ್ಲಿ ಈ ಒಂದು ಗುಂಡಿನ ದಾಳಿ ನಡೆದಿದ್ದು, ತಕ್ಷಣ ಡೊನಾಲ್ಡ್ ಟ್ರಂಪ್ ಅವರನ್ನು ಭದ್ರತಾ ಸಿಬ್ಬಂದಿಗಳು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಅದೃಷ್ಟವಶತ್ ಟ್ರಂಪ್ಪ್ರಾಣಪಾಯದಿಂದ ಪಾರಾಗಿದ್ದಾರೆ. ವೈಟ್ ಹೌಸ್ ಪ್ರತಿನಿಧಿಗಳ ಔತಣ ಕೂಟದಲ್ಲಿ ಈ ಒಂದು ಗುಂಡಿನ ದಾಳಿ ನಡೆದಿದ್ದು, ಟ್ರಂಪ್ ಗುರಿಯಾಗಿಸಿಯೇ ಈ ಒಂದು ಗುಂಡಿನ ದಾಳಿ ನಡೆದಿದ್ದ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಕಾರ್ಯಕ್ರಮದಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಕೂಡಲೇ ಭದ್ರತಾ ಸಿಬ್ಬಂದಿಗಳು ದಾಳಿಕೋರನನ್ನು ಅರೆಸ್ಟ್ ಮಾಡಿದ್ದಾರೆ. ಸೀಕ್ರೆಟ್ ಸರ್ವಿಸಸ್ ಸಿಬ್ಬಂದಿಗಳು ಗುಂಡು ಹಾರಿಸಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಈ ಒಂದು ಘಟನೆ ಕುರಿತು ಡೊನಾಲ್ಡ್ ಟ್ರಂಪ್ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Read More

ನವದೆಹಲಿ : ಇರಾನ್ ಅಮೇರಿಕಾ ಯುದ್ಧದ ನಡುವೆ ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಶೂಟ್ ಔಟ್ ಆಗಿದೆ. ಅಮೆರಿಕದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್ ನಲ್ಲಿ ಗುಂಡಿನ ದಾಳಿ ನಡೆದಿದೆ. ವೈಟ್ ಹೌಸ್ ಪ್ರತಿನಿಧಿಗಳ ಔತಣಕೂಟದಲ್ಲಿ ಈ ಒಂದು ಗುಂಡಿನ ದಾಳಿ ನಡೆದಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಕ್ಷಣ ಟ್ರಂಪ್ ಅವರನ್ನು ಸಿಬ್ಬಂದಿಗಳು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯ ವೇಳೆ ವೇದಿಕೆ ಮೇಲೆ ರೊನಾಲ್ಡ್ ಟ್ರಂಪ್ ಹಾಗು ಜೆಡಿ ವ್ಯಾನ್ಸ್ ಇದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಇನ್ನು ಗುಂಡಿನ ದಾಳಿಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದು ಇದು ತುಂಬಾ ಪ್ರಕ್ಷುಬ್ದ ಸಂಜೆಯಾಗಿತ್ತು ಆದರೆ ರಹಸ್ಯ ಸಂಸ್ಥೆಗಳು ಉತ್ತಮವಾಗಿ ಕೆಲಸ ಮಾಡಿವೆ ಎಂದು ಡೊನಾಲ್ಡ್ ಟ್ರಂಪ್ ಸಾಮಾಜಿಕ…

Read More

ಬೆಂಗಳೂರು : ತಮ್ಮ ಸ್ನೇಹಿತೆ ವಿಚಾರವಾಗಿ ಇಬ್ಬರು ಗೆಳೆಯರ ನಡುವಿನ ಕಿತ್ತಾಟವು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಟಾಲಮ್ಮ ಲೇಔಟ್ ನಿವಾಸಿ ರಾಮಚಂದ್ರ (46) ಕೊಲೆಯಾದ ದುರ್ದೈವಿ. ಈ ಹತ್ಯೆ ಸಂಬಂಧ ಕೂಲಿ ಕಾರ್ಮಿಕ ಹರೀಶ್‌ನನ್ನು ಬಂಧಿಸಲಾಗಿದೆ. ತಮ್ಮ ಮನೆ ಹತ್ತಿರದಲ್ಲಿರುವ ಸ್ನೇಹಿತೆ ಮನೆಗೆ ಶುಕ್ರವಾರ ರಾತ್ರಿ ರಾಮಚಂದ್ರ ತೆರಳಿದ್ದಾಗ ಈ ಹತ್ಯೆ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ರಾಮಚಂದ್ರ ಮೂಲತಃ ತಮಿಳುನಾಡು ರಾಜ್ಯದವನಾಗಿದ್ದು, ಹಲವು ವರ್ಷಗಳಿಂದ ಕಾಡುಗೋಡಿ ಹತ್ತಿರದ ಪಟಾಲಮ್ಮ ಲೇಔಟ್‌ನಲ್ಲಿ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳ ಜತೆ ವಾಸವಾಗಿದ್ದ. ಈರುಳ್ಳಿ ಮಾರಾಟ ಮಳಿಗೆಯಲ್ಲಿ ಲಾರಿ ಚಾಲಕನಾಗಿದ್ದ ಆತನಿಗೆ ಅದೇ ಮಳಿಗೆಯ ಕೆಲಸ ಮಾಡುತ್ತಿದ್ದ ಮಹಿಳೆ ಪರಿಚಯವಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ತೊರೆದು ಆಕೆ ಏಕಾಂಗಿಯಾಗಿ ವಾಸವಾಗಿದ್ದಳು. ತಮಿಳುನಾಡು ಮೂಲದ ರಾಮಚಂದ್ರ ರೆಡ್ಡಿ, ವ್ಯಾಪಾರಕ್ಕೆಂದು ಬೆಂಗಳೂರಿಗೆ ಬರುತ್ತಿದ್ದ. ಆ ಸಂದರ್ಭದಲ್ಲಿ ರಾಮಚಂದ್ರ ರೆಡ್ಡಿಗೆ ಮಹಿಳೆಯೊಬ್ಬರ ಪರಿಚಯವಾಗಿದ್ದು, ಬಳಿಕ ಇಬ್ಬರ…

Read More

ವಾಷಿಂಗ್ಟನ್ : ಇರಾನ್ ಅಮೇರಿಕಾ ಯುದ್ಧದ ನಡುವೆ ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಶೂಟ್ ಔಟ್ ಆಗಿದೆ. ಅಮೆರಿಕದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್ ನಲ್ಲಿ ಗುಂಡಿನ ದಾಳಿ ನಡೆದಿದೆ. ವೈಟ್ ಹೌಸ್ ಪ್ರತಿನಿಧಿಗಳ ಔತಣಕೂಟದಲ್ಲಿ ಈ ಒಂದು ಗುಂಡಿನ ದಾಳಿ ನಡೆದಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಕ್ಷಣ ಟ್ರಂಪ್ ಅವರನ್ನು ಸುರಕ್ಷಿತ ಸಿಬ್ಬಂದಿಗಳು ಕರೆದುಕೊಂಡು ಹೋಗಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯ ವೇಳೆ ವೇದಿಕೆ ಮೇಲೆ ರೊನಾಲ್ಡ್ ಟ್ರಂಪ್ ಇದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಉತ್ತರಪ್ರದೇಶ : ಉತ್ತರ ಪ್ರದೇಶದಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಬರ್ತಡೆ ಪಾರ್ಟಿಯಲ್ಲಿ ಕೇಕ್ ವಿಚಾರಕ್ಕೆ ಜಗಳ ಆಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೇಕ್ ವಿಚಾರವಾಗಿ ನಡೆದ ಜಗಳದಲ್ಲಿ ಗುಂಡಿನ ದಾಳಿ ನಡೆದಿದ್ದು 3 ಸಾವನಪ್ಪಿದ್ದಾರೆ. ಉತ್ತರಪ್ರದೇಶದ ಬುಲೆಂದ ಶಹರ್ನ ಖುರ್ಜಾದಲ್ಲಿ ಈ ಒಂದು ಘಟನೆ ನಡೆದಿದೆ. ಬರ್ತಡೆ ಪಾರ್ಟಿಯಲ್ಲಿ ಮುಖಕ್ಕೆ ಕೇಕ್ ಬಳಿಯುವ ವಿಚಾರಕ್ಕೆ ಗಲಾಟೆ ಆಗಿದೆ ಈ ವೇಳೆ ಗುಂಡಿನ ದಾಳಿ ನಡೆಸಿ ಮೂರು ಯುವಕರು ಸಾವನಪ್ಪಿದ್ದಾರೆ. ಉತ್ತರ ಪ್ರದೇಶದಲ್ಲಿ ಸಂಭ್ರಮದ ಹುಟ್ಟುಹಬ್ಬದ ಪಾರ್ಟಿಯು ದುರಂತದಲ್ಲಿ ಅಂತ್ಯಗೊಂಡಿದೆ. ಕೇವಲ ಕೇಕ್ ವಿಚಾರವಾಗಿ ಸ್ನೇಹಿತರ ನಡುವೆ ಉಂಟಾದ ಸಣ್ಣ ಜಗಳ ವಿಕೋಪಕ್ಕೆ ಹೋಗಿ, ಗುಂಡಿನ ದಾಳಿ ನಡೆದಿದೆ. ಈ ಭೀಕರ ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Read More

ಮೈಸೂರು : ಮೈಸೂರಲ್ಲಿ ಘೋರ ಘಟನೆ ಒಂದು ಸಂಭವಿಸಿದ್ದು ಕಂಪಲಾಪುರ ಗ್ರಾಮದಲ್ಲಿ ಹಾವು ಕಡಿದು 14 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಹಸುವಿಗೆ ಹುಲ್ಲು ಹಾಕುವಾಗ ಬಾಲಕ ವೆಂಕಟೇಶ್ (14) ಗೆ ಹಾವು ಕಡಿದಿತ್ತು. ಬಲಗೈ ಬೆರಳಿಗೆ ಹಾವು ಕಚ್ಚಿದ್ದರು ಕೂಡ ಮನೆಯವರಿಗೆ ಬಾಲಕ ತಿಳಿಸಿಲ್ಲ. ಅಂಗಡಿಯಿಂದ ಪ್ಲಾಸ್ಟರ್ ತಂದು ವೆಂಕಟೇಶ್ ಬೆರಳಿಗೆ ಸುತ್ತಿಕೊಂಡಿದ್ದ. ಬಳಿಕ ಅಸ್ವಸ್ಥಗೊಂಡು ಬಾಲಕ ವೆಂಕಟೇಶ್ ಪ್ರಜ್ಞೆತಪ್ಪಿ ಬಿದ್ದಿದ್ದಾನೆ. ತಕ್ಷಣ ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ವೆಂಕಟೇಶನನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ವೆಂಕಟೇಶ ಮೃತಪಟ್ಟಿದ್ದಾನೆ. ಘಟನೆ ಕುರಿತಂತೆ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More