Author: kannadanewsnow05

ತೆಲಂಗಾ : ಹೆಣ್ಣು ಮಕ್ಕಳು ಜನಿಸಿದರೆ ಮನೆ ಮಹಾಲಕ್ಷ್ಮಿ ಅಂತ ಕರೀತಾರೆ ಆದರೆ ಇಲ್ಲಿ ಒಬ್ಬ ಪಾಪಿ ಗಂಡ ಗಂಡು ಮಗು ಆಗ್ಲಿಲ್ಲ ಅಂತ ಬೇಸರಗೊಂಡು ಗರ್ಭಿಣಿ ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ವ್ಯಕ್ತಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ವಾರಂಗಲ್‌ನಲ್ಲಿ ನಡೆದಿದೆ. ಫರ್ಹತ್‌ (26) ಮತ್ತು ಆಕೆಯ ಇಬ್ಬರು ಅಪ್ರಾಪ್ತ ಪುತ್ರಿಯರಾದ ಉಮೇರಾ (8), ಆಯೇಷಾ (6) ವಾರಂಗಲ್-ಖಮ್ಮಾಮ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಈಜುಕೊಳದಲ್ಲಿ ಶವವಾಗಿ ಪತ್ತೆಯಾಗಿದ್ದರು. ರಾತ್ರಿ ಆಕಸ್ಮಿಕವಾಗಿ ಈಜುಕೊಳಕ್ಕೆ ಜಾರಿದ ನಂತರ ಮೂವರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪತಿ ಅಜರುದ್ದೀನ್ ತಿಳಿಸಿದ್ದ. ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಅಜರುದ್ದೀನ್‌ ಕೊಲೆಗಾರ ಎಂಬುದು ಗೊತ್ತಾಗಿದೆ. ಅಜರುದ್ದೀನ್, ಪತ್ನಿ ಫರ್ಹತ್ ಮತ್ತು ಅವರ ಹೆಣ್ಣುಮಕ್ಕಳನ್ನು ಕೊಳಕ್ಕೆ ಕರೆದೊಯ್ದು ನೀರಿಗೆ ತಳ್ಳಿ ಹತ್ಯೆ ಮಾಡಿದ್ದಾನೆ. ಕೃತ್ಯಕ್ಕೂ ಮೊದಲು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್‌ ಮಾಡಲಾಗಿತ್ತು.

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೊತ್ತನೂರು ಗ್ರಾಮದ ಬಳಿ ನಡೆದಿದೆ.ಮೃತ ಬಾಲಕಿಯನ್ನು ಅಂಕಿತಾ (9) ಎಂದು ಗುರುತಿಸಲಾಗಿದೆ. ಬಾಲಕಿ ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ರಾಜೇಂದ್ರ ಹಾಗೂ ಭಾಗ್ಯಮ್ಮ ದಂಪತಿ ಮಗಳು ಎಂದು ತಿಳಿದುಬಂದಿದೆ. ಕುಟುಂಬ ಹೊಸಕೋಟೆಯಲ್ಲಿ ವಾಸವಾಗಿತ್ತು. ಜಾತ್ರೆಗೆ ತೆರಳಿದ್ದ ಭಾಗ್ಯಮ್ಮ ಸಂಬಂಧಿಕ ಮಹೇಶ್ ಎಂಬವರಿಗೆ ಸೇರಿದ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಮಕ್ಕಳೊಂದಿಗೆ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಲಾರಿ ಒವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಹಾರಿ ಪಲ್ಟಿಯಾಗಿದೆ. ಈ ವೇಳೆ ಬಾಲಕಿ ಸಾವನ್ನಪ್ಪಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷಾ ಗ್ರೇಡಿಂಗ್ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ. ನಾರಾಯಣಗೌಡ ಕೆಂಡಾಮಂಡಲವಾಗಿದ್ದಾರೆ. ತೃತೀಯ ಭಾಷೆ ವಿಚಾರದಲ್ಲಿ ರಾಜ್ಯಪಾಲರ ಆಕ್ಷೇಪಕ್ಕೆ ಇದೀಗ ಕನ್ನಡಪ್ರ ಸಂಘಟನೆಗಳು ಕಿಡಿಕಾರಿದ್ದು, ರಾಜ್ಯಪಾಲರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸಿಡಿದೆದ್ದಿದೆ. ಹಾಗಾಗಿ ಸೋಮವಾರ ಬೆಳಗ್ಗೆ 11 ಗಂಟೆಗೆ ಲೋಕಭವನಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಹೌದು ಕರವೇ ನಾರಾಯಣಗೌಡ ಬಣದಿಂದ ಲೋಕಭವನಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಈ ಒಂದು ಪ್ರತಿಭಟನೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಕರವೇ ಕಾರ್ಯಕರ್ತರು ಆಗಮಿಸಲಿದ್ದಾರೆ. ಲೋಕಭವನ ಮುತ್ತಿಗೆ ಹಾಕಲು ಕರವೇ ನಾರಾಯಣಗೌಡ ಕರೆ ನೀಡಿದ್ದಾರೆ. ಹಿಂದಿ ಸಾಮ್ರಾಜ್ಯಶಾಹಿಯ ಪರವಾಗಿ ಲಾಬಿ ಮಾಡುತ್ತಿದ್ದೀರಿ ಎಂದು ಆರೋಪಿಸಿರುವ ಅವರು, ಉತ್ತರ ಭಾರತದ ರಾಜ್ಯಗಳಲ್ಲಿ ಮೊದಲು ಕನ್ನಡವನ್ನು 3ನೇ ಭಾಷೆಯಾಗಿ ಜಾರಿಗೆ ತರುವ ಧೈರ್ಯ ತೋರಿಸಿ. ಅಧಿಕಪ್ರಸಂಗ ಮುಂದುವರಿಸಿದರೆ ಗಂಟುಮೂಟೆ ಕಟ್ಟಿ ನಿಮ್ಮ ರಾಜ್ಯಕ್ಕೆ ತೊಲಗಿ ಎಂದು ಹೇಳಬೇಕಾಗುತ್ತದೆ ಎಂದು ಗುಡುಗಿದ್ದಾರೆ. ರಾಜಭವನದ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ ಬೆಂಗಳೂರಿನ ಜೆಸಿ ನಗರದ ಮುಖ್ಯ ರಸ್ತೆಯಲ್ಲಿ ವಿಜಯ್ 22 ಎನ್ನುವ ಕನನ್ನು ಚಾಕು ಇರಿದು ಕೊಲೆ ಮಾಡಲಾಗಿದೆ. ಇಂದು ಮಧ್ಯಾಹ್ನ ಈ ಒಂದು ಘಟನೆ ನಡೆದಿದ್ದು ಜೆಸಿ ನಗರದ ಮುಖ್ಯ ರಸ್ತೆಯಲ್ಲಿ ವಿಜಯಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಯುವಕ ವಿಜಯ್ ಗೆ ಕಿರಣ ಮತ್ತು ವಿನೋದ್ ಎಂಬವರು ಚಾಕು ಇರಿದು ಕೊಲೆ ಮಾಡಿದ್ದಾರೆ. ನಿನ್ನೆ ರಾತ್ರಿ ಕುಡಿದು ಹೋಗುವಾಗ ಗಾಡಿ ಟಚ್ ಆಗಿದ್ದಕ್ಕೆ ಗಲಾಟೆ ಆಗಿದೆ ಜೈ ಗಾಡಿಗೆ ವಿನೋದ್ ಗಾಡಿ ಟಚ್ ಆಗಿದೆ ಗಲಾಟೆ ಆಗಿತ್ತು. ಇಂದು ಬೆಳಿಗ್ಗೆ ವಿಜಯನನ್ನು ಕಿರಣ್ ಮತ್ತು ವಿನೋದ್ ಹುಡುಕಿಕೊಂಡು ಹೋಗಿದ್ದಾರೆ. ಮನೆಯ ಬಳಿದ್ದಾಗ ವಿಜಯ ಸಿಗದಿದ್ದರಿಂದ ಫೋನ್ ಮಾಡಿದರು. ವಿಜಯನನ್ನು ಮತ್ತೆ ಬಾರ್ ಬಳಿಗೆ ಕರೆಸಿಕೊಂಡು ಗಲಾಟೆ ಮಾಡಿದರು. ಮಾತಿಗೆ ಮಾತು ಬೆಳೆದು ವಿಜಯ್ ಹೊಟ್ಟೆಗೆ ಚಾಕು ಇರಿದು ಕೊಲೆ ಮಾಡಿದ್ದಾರೆ. ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ವಿಜಯ್…

Read More

ಚೈನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರುವುದು ತಮ್ಮದೇ ಸ್ವಯಂ ತೀರ್ಮಾನ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ. ತಮ್ಮ ಟಿಕೆಟ್ ಕಟ್ ಆಗಿದೆ ಎಂಬ ವದಂತಿಗಳನ್ನು ತಳ್ಳಿಹಾಕಿದ ಅವರು, ಪಕ್ಷದ ನಾಯಕತ್ವಕ್ಕೆ ಈ ಮೊದಲೇ ಲಿಖಿತವಾಗಿ ಮಾಹಿತಿ ನೀಡಿದ್ದಾಗಿ ತಿಳಿಸಿದ್ದಾರೆ. ಇದೀಗ ತಾವು ರಾಜ್ಯಾದ್ಯಂತ ಬಿಜೆಪಿ ಮತ್ತು ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ಅವರು ಹೇಳಿದ್ದಾರೆ.u ಹೌದು ಈ ವಿಚಾರವಾಗಿ ಮಾತನಾಡಿದ ಅವರು, ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಬಾರದೆಂದು ಬಹಳ ಹಿಂದೆಯೇ ನಿರ್ಧರಿಸಿದ್ದೆ. ಈ ತೀರ್ಮಾನವನ್ನು ಪಕ್ಷದ ಕೋರ್ ಕಮಿಟಿಯ ಸಭೆಯಲ್ಲಿ ತಿಳಿಸಿದ್ದಲ್ಲದೆ, ಲಿಖಿತವಾಗಿಯೂ ಯಾವುದೇ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ನಾಯಕತ್ವಕ್ಕೆ ಮಾಹಿತಿ ನೀಡಿದ್ದೆ ತಮ್ಮ ವಿರುದ್ಧ ಹರಿದಾಡುತ್ತಿದ್ದ ಟಿಕೆಟ್ ಕಟ್ ಆರೋಪಗಳನ್ನು ತಳ್ಳಿಹಾಕಿದ ಅವರು, ಚುನಾವಣೆಗೆ ನಿಲ್ಲದಿರುವುದು ತಮ್ಮದೇ ಸ್ವಯಂ ತೀರ್ಮಾನ ಎಂದು ಸ್ಪಷ್ಟಪಡಿಸಿದ್ದಾರೆ. ನಾನು ಸ್ಪರ್ಧಿಸದಿರುವ ಬಗ್ಗೆ ಈಗಾಗಲೇ ಕೇಂದ್ರ ನಾಯಕತ್ವಕ್ಕೆ ತಿಳಿಸಿದ್ದೆ. ಪಿಯೂಷ್ ಗೋಯಲ್ ಮತ್ತು ಪಕ್ಷದ…

Read More

ಬೆಂಗಳೂರು : ಒಂದು ಕಡೆ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಸಿಲಿಂಡರ್ ಇಲ್ಲದೆ ಜನ ಪರದಾಡುತ್ತಿದ್ದು, ಗ್ಯಾಸ್ ಸಿಲಿಂಡರ್ ಪಡೆಯಲು ಏಜೆನ್ಸಿ ಅಂಗಡಿ ಮುಂದೆ ನಿಲ್ಲುತ್ತಿದ್ದಾರೆ. ಆದರೆ ಮತ್ತೊಂದು ಕಡೆ ನಾಳೆ ಆರ್‌ಸಿಬಿ ಹಾಗೂ ಚೆನ್ನೈ ನಡುವೆ ಹೈ ವೋಲ್ಟೇಜ್ ಪಂದ್ಯದ ಹಿನ್ನೆಲೆಯಲ್ಲಿ ಶಾಸಕರ ಪಿಎಗಳು ಟಿಕೆಟ್ ಗಾಗಿ ವಿಧಾನಸೌಧದಲ್ಲಿ ಕ್ಯೂ ನಿಂತಿರುವುದು ತಿಳಿದುಬಂದಿದೆ. ಹೌದು ರಾಜ್ಯಾದ್ಯಂತ ಗ್ಯಾಸ್ ಗಾಗಿ ಆಟೋ ಚಾಲಕರು ಕ್ಯೂ ನಿಲ್ಲುತ್ತಿದ್ದಾರೆ ಆದರೆ ಐಪಿಎಲ್ ಟಿಕೆಟ್ ಗಾಗಿ ಶಾಸಕರ ಪಿಎಗಳು ಸಾಲು ನಿಂತಿದ್ದಾರೆ. ಜನಸಾಮಾನ್ಯರಿಗೆ ಜೀವನ ನಡೆಸುವ ಚಿಂತೆ ಒಂದೆಡೆ ಆದರೆ ಇತ್ತ ಶಾಸಕರ ಪಿಎ ಗಳಿಗೆ ಐಪಿಎಲ್ ಎಂಜಾಯ್ ಮಾಡುವ ಆಸೆಯಾಗಿದೆ. ಪ್ರತಿ ಶಾಸಕರಿಗೆ 3 ಐಪಿಎಲ್ ಟಿಕೆಟ್ ಉಚಿತ ಹಿನ್ನೆಲೆಯಲ್ಲಿ ಟಿಕೆಟ್ ಪಡೆಯಲು ವಿಧಾನಸೌಧದಲ್ಲಿ ಶಾಸಕರ ಪಿಎಗಳು ನಿಂತಿದ್ದಾರೆ. ಸಭಾಧ್ಯಕ್ಷರ, ಆಪ್ತ ಕಾರ್ಯದರ್ಶಿ ಕಚೇರಿಯಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತಿದೆ. ಸ್ಪೀಕರ್ ಆಪ್ತ ಕಾರ್ಯದರ್ಶಿ ಮಹೇಶ್ ಕರ್ಜಗಿ ಕೊಠಡಿಯಲ್ಲಿ ಟಿಕೆಟ್ ವಿತರಣೆ ಮಾಡಲಾಗುತ್ತಿದೆ. ಪ್ರತಿಯೊಬ್ಬ ಶಾಸಕರಿಗೆ ಚಲಮರೂ…

Read More

ಹುಬ್ಬಳ್ಳಿ : ಲವ್​ ಜಿಹಾದ್​ ಆರೋಪ ಪ್ರಕರಣ ಸಂಬಂಧ ಕ್ಷಣಕ್ಷಣಕ್ಕೂ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಯುವತಿ ತಾಯಿ ಸಮೀರ್, ಸಹೋದರಿ ತೈಸೀನ್ ಸೇರಿದಂತೆ 6 ಜನರ ವಿರುದ್ಧ ದೂರು ನೀದ್ದಿದ್ದಾರೆ. ಇದೀಗ ಆರೋಪಿ ಸಮೀರ್ ಮುಲ್ಲಾ ಮತ್ತೊಂದು ದೂರು ದಾಖಲಿಸಿದ್ದಾನೆ. ಹೌದು ಆರೋಪಿ ಸಮೀರ್ ಮುಲ್ಲಾ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಮತ್ತೊಂದು ದೂರು ದಾಖಲಿಸಿರುವ ಆರೋಪಿ ಜಿಮ್​ ಟ್ರೈನರ್​​ ಸಮೀರ್​ ಮುಲ್ಲಾ ತನ್ನನ್ನು 60 ಜನರು ಬಂದು ಅಪಹರಿಸಿಕೊಂಡು ಹೋಗಿ ಮನಸೋ ಇಚ್ಛೆ ಥಳಿಸಿದ್ದಾರೆ ಎಂದು ಆರೋಪಿಸಿದ್ದಾನೆ. ಇದೀಗ ಪೊಲೀಸರು ಈ ಬಗ್ಗೆಯೂ ತನಿಖೆ ಮಾಡಲು ಮುಂದಾಗಿದ್ದಾರೆ. ನಿನ್ನೆ ಮುಂಜಾನೆ ಸಮೀರ್ ಮನೆಗೆ ಹೋಗಿ ಆತನನ್ನು ಎತ್ತಿಕೊಂಡು ಬಂದಿದ್ದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಎಂದು ಹೇಳಲಾಗುತ್ತಿದೆ. ಅವರು ಸಮೀರ್ ನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಮೀರ್ ಲವ್ ಜಿಹಾದ್ ಮಾಡಿದ್ದಾನೆ ಎಂದು ಆರೋಪಿಸಿ ಅವರನ್ನು ಥಳಿಸಲಾಗಿದೆ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಈ…

Read More

ಬೆಂಗಳೂರು: ದೇಶದ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಕರ್ನಾಟಕ ಪೊಲೀಸ್ ಇಲಾಖೆ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಜಂಟಿಯಾಗಿ ಒಂದು ಮಹತ್ವದ ಹೆಜ್ಜೆ ಇಟ್ಟಿವೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ನೆಲೆಸಿದ್ದ 272 ಬಾಂಗ್ಲಾದೇಶಿ ಪ್ರಜೆಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಿ, ಅವರನ್ನು ಅವರ ಸ್ವದೇಶಕ್ಕೆ ಗಡಿಪಾರು (Deportation) ಮಾಡಲಾಗಿದೆ. ಇದು ದೇಶದ ಇತರೆ ನಗರಗಳಿಗೆ ಹೋಲಿಸಿದರೆ ಅತ್ಯಂತ ದೊಡ್ಡ ಮಟ್ಟದ ಗಡಿಪಾರು ಪ್ರಕ್ರಿಯೆ ಎಂದು ಗುರುತಿಸಲ್ಪಟ್ಟಿದೆ. ಕಾರ್ಯಾಚರಣೆಯ ಹಿನ್ನೆಲೆ ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರಿನ ಐಟಿ ಹಬ್‌ಗಳು, ನಿರ್ಮಾಣ ಪ್ರದೇಶಗಳು ಮತ್ತು ಕಸ ವಿಲೇವಾರಿ ಘಟಕಗಳ ಸುತ್ತಮುತ್ತ ಅಕ್ರಮ ವಲಸಿಗರು ನೆಲೆಸಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿಯ ಆಧಾರದ ಮೇಲೆ ಸಿಸಿಬಿ (CCB) ಮತ್ತು ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದರು. ಈ ಪೈಕಿ 178 ಪುರುಷರು, 94 ಮಹಿಳೆಯರು ಮತ್ತು 12 ಮಕ್ಕಳು ಸೇರಿದ್ದಾರೆ. ಎಲ್ಲರನ್ನು ಪೊಲೀಸರು ಪತ್ತೆ ಮಾಡಿ ಒಟ್ಟಿಗೆ ಗಡಿಪಾರು ಮಾಡಿದ್ದಾರೆ. ಜೊತೆಗೆ…

Read More

ಬೆಂಗಳೂರು : ಇಂದು ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದು ಈ ಹಿನ್ನೆಲೆ ಜನರಿಗೆ ಎಚ್ಚರದಿಂದ ಇರಿ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ರಾಜ್ಯದ 22 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ವಿಜಯನಗರ, ದಾವಣಗೆರೆ, ಬಳ್ಳಾರಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆಯಿದ್ದು ಎಚ್ಚರಿಕೆ ವಹಿಸುವಂತೆ ಜನರಿಗೆ ಸೂಚಿಸಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಮಳೆಯ ತೀವ್ರತೆ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಕೊಲೆ ನಡೆದಿದ್ದು ರಾಜಸ್ಥಾನ್ ಮೂಲದ ವ್ಯಕ್ತಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ವರ್ತೂರು ಪೊಲೀಸ್ ಠಣ ವ್ಯಾಪ್ತಿಯಲ್ಲಿ ಈ ಒಂದು ಕೊಲೆ ನಡೆದಿದ್ದು, ತಡರಾತ್ರಿ ದಲ್ರಾಮ್ ಎನ್ನುವ ವ್ಯಕ್ತಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ರಾಜಸ್ಥಾನದಲ್ಲಿ ದಲ್ರಾಮ್ ಕೌಟುಂಬಿಕ ಕಲಹ ಹೊಂದಿದ್ದ. ಬೆಂಗಳೂರಿನಲ್ಲಿ ಮಾತನಾಡಲು ಬಂದು ಕೊಲೆಯಾಗಿದ್ದಾನೆ. ಗ್ಯಾಸ್ ಅಂಗಡಿ ಬಳಿಗೆ ದಲ್ರಾಮ್ ನನ್ನ ಕರೆಸಿಕೊಂಡು ದುಷ್ಪರ್ಮಿಗಳು ಕೊಲೆ ಮಾಡಿದ್ದಾರೆ ಕಾರಿನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿಗಳು ದಲ್ರಾಮ್ ನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More