Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ಮೊಬೈಲ್ ವಿಚಾರಕ್ಕೆ ಸ್ನೇಹಿತನಿಂದ ಹಲ್ಲೆಗೊಳಗಾದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೇ 10ರಂದು ಮಾರತ್ ಹಳ್ಳಿ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ನೇಹಿತ ರಾಮು ಎಂಬಾತನಿಂದ ಚಾಕು ಇರಿತಕ್ಕೊಳಗಾಗಿದ್ದ ಪರಶುರಾಮ ಎಲ್ಲಪ್ಪ ಮಂಗಳಗಟ್ಟಿ (25) ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಹುಬ್ಬಳ್ಳಿ ಮೂಲದ ಪರಶುರಾಮ ಹಾಗೂ ರಾಮು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದರು. ಮಾರತ್ ಹಳ್ಳಿ ಠಾಣೆ ವ್ಯಾಪ್ತಿಯ ಚೌಡೇಶ್ವರಿ ರಸ್ತೆಯಲ್ಲಿನ ಬೆಸ್ಕಾಂ ಕಚೇರಿ ಬಳಿ ಬಾಡಿಗೆ ರೂಮ್‌ನಲ್ಲಿ ವಾಸವಿದ್ದರು. ಮೇ 10ರಂದು ನೈಟ್ ಶಿಫ್ಟ್ ಮುಗಿಸಿ, ಪಾನಮತ್ತನಾಗಿ ಬಂದಿದ್ದ ರಾಮು, ಪರಶುರಾಮನ ಮೊಬೈಲ್ ಫೋನ್ ಬಚ್ಚಿಟ್ಟಿದ್ದ. ಎಚ್ಚರವಾದ ಬಳಿಕ ‘ಮೊಬೈಲ್ ಎಲ್ಲಿಟ್ಟಿದ್ದೀಯಾ, ಕೊಡು’ ಎಂದು ಪರಶುರಾಮ ಕೇಳಿದ್ದ. ಈ ವೇಳೆ, ರಾಮು ಮೊಬೈಲ್ ಕೊಡಲ್ಲ ಎಂದಿದ್ದಕ್ಕೆ ಇಬ್ಬರ ನಡುವೆ ವಾಗ್ವಾದವಾಗಿತ್ತು. ಸಿಟ್ಡಿಗೆದ್ದ ರಾಮು, ಅಡುಗೆ ಕೋಣೆಯಿಂದ ಚಾಕು ತಂದು ಪರಶುರಾಮನಿಗೆ ಇರಿದಿದ್ದ. ಬಳಿಕ ಆತನ ಮೊಬೈಲ್ ತೆಗೆದುಕೊಂಡು ಪರಾರಿಯಾಗಿದ್ದ. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದವನನ್ನು ಅಕ್ಕಪಕ್ಕದವರು…

Read More

ನವದೆಹಲಿ : ಮೇ 3 ರಂದು ದೇಶಾದ್ಯಂತ ನಡೆದಿದ್ದ ನೀಟ್ ಅರ್ಹತಾ ಪ್ರವೇಶ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಬ್ಬ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ದೆಹಲಿಯ NTA ಕಚೇರಿಯಲ್ಲಿದ್ದ ಅಧಿಕಾರಿಯನ್ನು ಅರೆಸ್ಟ್ ಮಾಡಲಾಗಿದೆ. NTA ಕೇಂದ್ರ ಕಚೇರಿಯಲ್ಲಿ ಈತನನ್ನು ಅರೆಸ್ಟ್ ಮಾಡಲಾಗಿದೆ ಸಿಬಿಐ ತಂಡ NTA ಕಚೇರಿಗೆ ನೇರವಾಗಿ ದಾಳಿ ಮಾಡಿದೆ. ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯು ಪರೀಕ್ಷೆಗೂ ಮುನ್ನವೇ ಸೋರಿಕೆಯಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸುದೀರ್ಘ ತನಿಖೆ ನಡೆಸುತ್ತಿರುವ ಸಿಬಿಐಗೆ, ಎನ್‌ಟಿಎ ಒಳಗಿನ ಸಿಬ್ಬಂದಿಯೇ ಈ ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ಬಲವಾದ ಶಂಕೆ ವ್ಯಕ್ತವಾಗಿತ್ತು. ಅದರಂತೆ ನಡೆಸಿದ ಕಾರ್ಯಾಚರಣೆಯಲ್ಲಿ ಕಚೇರಿಯ ಒಳಗಿದ್ದ ಅಧಿಕಾರಿಯನ್ನೇ ವಶಕ್ಕೆ ಪಡೆಯಲಾಗಿದ್ದು, ಇದು ಪರೀಕ್ಷಾ ವ್ಯವಸ್ಥೆಯೊಳಗಿನ ಭ್ರಷ್ಟಾಚಾರವನ್ನು ಬಯಲಿಗೆಳೆದಿದೆ. ಬಂಧಿತ ಅಧಿಕಾರಿಯು ಪ್ರಶ್ನೆ ಪತ್ರಿಕೆಗಳ ಭದ್ರತೆ ಅಥವಾ ವಿತರಣಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದ್ದು, ಈತ ಪತ್ರಿಕೆ ಸೋರಿಕೆ ಮಾಡುವ ಜಾಲದೊಂದಿಗೆ ನೇರ…

Read More

ಬೆಂಗಳೂರು: ದೇಶದಲ್ಲಿ ತೈಲ ಬಳಕೆಯನ್ನು ಕಡಿಮೆ ಮಾಡುವಂತೆ ಹಾಗೂ ಚಿನ್ನದ ಖರೀದಿಯ ಮೇಲೆ ಹತೋಟಿ ಇಟ್ಟುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಜನತೆಯಲ್ಲಿ ಮನವಿ ಮಾಡಿದ್ದರು. ಪ್ರಧಾನಿಯವರ ಈ ಕರೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಮಾದರಿ ಹೆಜ್ಜೆಯನ್ನಿಡಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ವಾರದಲ್ಲಿ ಮೂರು ದಿನಗಳ ಕಾಲ ತಾವು ಬೆಂಗಾವಲು ವಾಹನಗಳನ್ನು ಬಳಸದಿರಲು ಅವರು ತೀರ್ಮಾನಿಸಿದ್ದಾರೆ. ಪ್ರಧಾನಿ ಮೋದಿಯವರ ಆಶಯದಂತೆ ಇಂಧನ ಸಂರಕ್ಷಣೆ ಮತ್ತು ದೇಶದ ಆರ್ಥಿಕತೆಗೆ ನೆರವಾಗುವ ಉದ್ದೇಶದಿಂದ ಅಶೋಕ್ ಈ ನಿರ್ಧಾರ ಕೈಗೊಂಡಿದ್ದಾರೆ. ಬೆಂಗಳೂರಿನಲ್ಲಿ ಸಂಚರಿಸುವಾಗ ವಾರದ ಮೂರು ದಿನಗಳು ಯಾವುದೇ ಎಸ್ಕಾರ್ಟ್ ಅಥವಾ ಬೆಂಗಾವಲು ವಾಹನಗಳಿಲ್ಲದೆ ಸಾಮಾನ್ಯರಂತೆ ಸಂಚರಿಸಲಿದ್ದಾರೆ. ಈ ಮೂಲಕ ಅನಗತ್ಯ ಇಂಧನ ವ್ಯಯಕ್ಕೆ ಕಡಿವಾಣ ಹಾಕುವುದು ಅವರ ಪ್ರಮುಖ ಉದ್ದೇಶವಾಗಿದೆ. ಕೇವಲ ಸರ್ಕಾರಿ ಕಾರ್ಯಕ್ರಮಗಳು ಮಾತ್ರವಲ್ಲದೆ, ವೈಯಕ್ತಿಕ ಅಥವಾ ಖಾಸಗಿ ಕಾರ್ಯಕ್ರಮಗಳಿಗೆ ತೆರಳುವಾಗಲೂ ಬೆಂಗಾವಲು ಪಡೆಯನ್ನು ಬಳಸದಿರಲು ಅವರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ವಿರೋಧ…

Read More

ಬೆಂಗಳೂರು : ಹಿಟ್ಲರ್ ಕಲ್ಯಾಣ’ ಧಾರಾವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದುಸಂಜೆ ಗುನ್ನೂರು ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.ರಾಮನಗರ ತಾಲೂಕಿನ ಗುನ್ನೂರು ಗ್ರಾಮದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಕೆಲಸಗಾರರು ಹಾಗೂ ಗ್ರಾಮಸ್ಥರು ಗುಂಡಿತೋಡುವ ಕಾರ್ಯ ಆರಂಭಿಸಿದ್ದಾರೆ. ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. 10 ವರ್ಷಗಳ ಹಿಂದೆ ನಟ ದಿಲೀಪ್ ರಾಜ್ 1 ಎಕರೆ ಜಮೀನು ಖರೀದಿಸಿದ್ದರು. ಅಲ್ಲಿ ತೋಟ ನಿರ್ಮಾಣ ಮಾಡಿಕೊಂಡು ಮನೆ ಕಟ್ಟಿದ್ದರು. ತಿಂಗಳಿಗೊಮ್ಮೆ ಫಾರ್ಮ್‌ಹೌಸ್‌ಗೆ ಭೇಟಿ ನೀಡುತ್ತಿದ್ದರು. ಇಂದು ಬೆಳಗಿನ ಜಾವ ದಿಲೀಪ್ ರಾಜ್‌ಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ದಿಲೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ. ದಿಲೀಪ್ ರಾಜ್ ಅವರ ಮೃತದೇಹ ಕುಮಾರಸ್ವಾಮಿ ಲೇಔಟ್‌ನ ಅಪೋಲೊ ಆಸ್ಪತ್ರೆಯಲ್ಲಿರಿಸಲಾಗಿದೆ. ದಿಲೀಪ್ ನಿಧನಕ್ಕೆ ಕನ್ನಡ ಚಿತ್ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ…

Read More

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ನಡುವೆಯೆ ಕೆಲವು ಹಿರಿಯ ಶಾಸಕರಿಂದ ಸಂಪುಟ ಪುನರಚನೆ ಆಗಬೇಕು ಎಂದು ವಿಚಾರ ಕೇಳಿ ಬಂದಿತ್ತು. ಈಗ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ ಕೂಡ ನನಗೂ ಕೂಡ ಮಂತ್ರಿ ಆಗಬೇಕು ಎಂಬ ಆಸೆ ಇದೆ. ಸಚಿವ ಸ್ಥಾನ ಸಿಕ್ಕಿದರು ಸಂತೋಷ ಸಿಗದಿದ್ದರೂ ಸಂತೋಷ. ಹಾಗಾಗಿ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರು ಭೇಟಿಯಾಗುತ್ತೇನೆ ಎಂದು ಬೆಂಗಳೂರಲ್ಲಿ ಕಾಂಗ್ರೆಸ್ ಶಾಸಕ ಪರದೆ ಈಶ್ವರ ಹೇಳಿಕೆ ನೀಡಿದರು. ಇನ್ನೂ NTA ಇಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ರದ್ದು ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಪರೀಕ್ಷೆ ರದ್ದು ಮಾಡಿದ್ದಕ್ಕೆ ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಬೇಸರ ಆಗಿದೆ ರಾಜಸ್ಥಾನದಲ್ಲಿಯೇ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಲು ಯಾರು ಕಾರಣ? ಕರ್ನಾಟಕದ ವಿದ್ಯಾರ್ಥಿಗಳು ಭಯಪಡಬೇಡಿ. ಮಾನಸಿಕವಾಗಿ ಸಿದ್ದರಾಗಿ ಹೊಸದಾಗಿ ಶುಲ್ಕವನ್ನು ಕಟ್ಟಬೇಕಿಲ್ಲ. ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆ ನೀಡಿದರು.

Read More

ಬೆಂಗಳೂರು : ಕನ್ನಡ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧದ 1.5 ಕೋಟಿ ಬ್ಲ್ಯಾಕ್‌ಮೇಲ್ ಆರೋಪಕ್ಕೆ ಹೊಸ ತಿರುವು ಸಿಕ್ಕಿದೆ. ಪತಿ ಕಾರ್ತಿಕ್ ಸುಳ್ಳು ದೂರು ನೀಡಿದ್ದಾನೆ ಎಂದು ಆತನ ಪತ್ನಿ ಹರ್ಷಿತಾ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಪತಿಯ ಲೈಂಗಿಕ ಅಕ್ರಮ ಮತ್ತು ವಂಚನೆಯ ಜಾಲವನ್ನು ಸಾಕ್ಷಿಸಮೇತ ಪತ್ನಿಯೇ ಪೊಲೀಸರಿಗೆ ರವಾನಿಸಿದ್ದು, ಉದ್ಯಮಿ ಕಾರ್ತಿಕ್ ಅಸಲಿ ಮುಖ ಬಯಲಾಗಿದೆ. ಮೇಕಪ್ ಕ್ಲಿನಿಕ್ ಮಾಲೀಕ ಕಾರ್ತಿಕ್ ಪುತಾ ಎಂಬುವವರು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿತ್ತು. ಇದೀಗ ಈ ಸಂಬಂಧ ಪತಿ ಕಾರ್ತಿಕ್ ಪುತಾ ವಿರುದ್ಧ ಪತ್ನಿ ಹರ್ಷಿತಾ ಹೈದರಾಬಾದ್, ಬೆಂಗಳೂರು ಡಿಜಿಗೆ ಪತ್ರ ಬರೆದು ಸುಳ್ಳು ಕಥೆಯ ಬಗ್ಗೆ ತಿಳಿಸಿದ್ದಾರೆ. ತನ್ನ ತಪ್ಪನ್ನು ಮುಚ್ಚಿಟ್ಟುಕೊಳ್ಳಲು ಸಾಧನಾ ಮೇಲೆ ದೂರು ನೀಡಿದ್ದ. ಕ್ಲಿನಿಕ್ ಪ್ರಮೋಶನ್ ಸಲುವಾಗಿ ಯುವತಿಯನ್ನು ಭೇಟಿ ಮಾಡಿದ್ದ. ಆಗ ಇಬ್ಬರ ಮಧ್ಯೆ ಸ್ನೇಹವಾಗಿತ್ತು. ಬಳಿಕ ಪ್ರೀತಿಯ ಹೆಸರಲ್ಲಿ ಮುಂದುವರೆಯೋದಾಗಿ ತಿಳಿಸಿ,…

Read More

ಚೈನ್ನೈ : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಗೆ ಇದೀಗ ಅಗ್ನಿಪರೀಕ್ಷೆ ಎದುರಾಗಿದತ್ತು. ಇಂದು ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಪ್ರಕ್ರಿಯೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ವಿಶ್ವಾಸಮತಯಾಚನೇ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡು ವಿಧಾನಸಭೆಯಲ್ಲಿ ನಡೆದ ವಿಶ್ವಾಸ ಮತಯಾಚನೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಒಟ್ಟು 144 ಶಾಸಕರು ಬೆಂಬಲ ನೀಡಿದ್ದು ವಿಧಾನಸಭೆಯಲ್ಲಿ ವಿಶ್ವಾಸ ಮಥವನ್ನು ಇದೀಗ ಮುಖ್ಯಮಂತ್ರಿ ವಿಜಯ್ ಗೆದ್ದಿದ್ದಾರೆ. ಈಗಾಗಲೇ ವಿಜಯ್ ಸರ್ಕಾರಕ್ಕೆ ತಮ್ಮ ಪಕ್ಷದ ಐವರು ಶಾಸಕರಿಂದ ಸಂಪೂರ್ಣ ಬೆಂಬಲ ಇದೆ ಎಂದು ಸದನದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಬೆಂಬಲ ಘೋಷಿಸಿತು.  ಇನ್ನು ಸಿಪಿಐ ಪಕ್ಷದ ಇಬ್ಬರು ಶಾಸಕರು ಕೂಡ ವಿಜಯ್ ಸರ್ಕಾರಕ್ಕೆ ಬೆಂಬಲ ಘೋಷಿಸಿದರು. ತಮಿಳುನಾಡು ವಿಧಾನಸಭೆಯಲ್ಲಿ ಒಟ್ಟು ಸದಸ್ಯರ ಬಲ 232 ಇದು ವಿಜಯ್ ಬಹುಮತ ಸಾಬೀತಿಗೆ 117 ಶಾಸಕರ ಬಲ ಬೇಕು. ಸಿಪಿಐ 2, ಸಿಪಿಐ(ಎಂ) 2, ಟಿವಿಕೆ ಸರ್ಕಾರದ ಪರ ಮತಯಾಚನೆ ಮಾಡಿದ್ದು, ಡಿಎಂಕೆ ಪಕ್ಷದ ಓರ್ವ ಶಾಸಕರು ಟಿವಿಕೆ ಗೆ ಬೆಂಬಲ…

Read More

ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ ನಡೆದಿದ್ದು, ಹುಬ್ಬಳ್ಳಿಯ ಜೈನ ಮಂದಿರದಲ್ಲಿ ತಡರಾತ್ರಿ ಕಳ್ಳರು ನುಗ್ಗಿ ಸುಮಾರು 3 ಕೆಜಿ ಬೆಳ್ಳಿ ಮತ್ತು ಚಿನ್ನಾಭರಣ ಕದ್ದು ಪರಾರಿ ಆಗಿರುವ ಘಟನೆ ಇದೀಗ ವರದಿಯಾಗಿದೆ. ಘಟನೆ ಕೋರಿದಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹೌದು ಹುಬ್ಬಳ್ಳಿಯ ಹೊಸೂರು ಪ್ರದೇಶದಲ್ಲಿ ಮಧ್ಯರಾತ್ರಿ ಸಿನಿಮೀಯ ಶೈಲಿಯಲ್ಲಿ ಜೈನ ಮಂದಿರ ಕಳ್ಳತನವಾಗಿದ್ದು, ಭಕ್ತರಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದೆ. ದೇವರಿಗೆ ಅಲಂಕರಿಸಿದ್ದ ಭಾರೀ ಪ್ರಮಾಣದ ಬೆಳ್ಳಿ ಬೆಳ್ಳಿ ಹಾಗೂ ಚಿನ್ನದ ಆಭರಣಗಳನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆಗೆ ಮೂವರು ದುಷ್ಕರ್ಮಿಗಳು ಜೈನ ಮಂದಿರಕ್ಕೆ ನುಗ್ಗಿದ್ದಾರೆ ಎನ್ನಲಾಗಿದೆ. ಮಂದಿರಕ್ಕೆ ನುಗ್ಗುವ ಮೊದಲ ಖದೀಮರು ಎಲ್ಲ ತಯಾರಿ ಮಾಡಿಕೊಂಡೇ ಬಂದಿದ್ದಾರೆ. ಮೊದಲು ದೇವಸ್ಥಾನದ ಸೈರನ್ ವ್ಯವಸ್ಥೆಯನ್ನು ಬಂದ್ ಮಾಡಿರುವ ಕಳ್ಳರು, ಬಳಿಕ ಸಿಸಿ ಕ್ಯಾಮೆರಾ ಕೇಬಲ್ ಕಟ್ ಮಾಡಿ ಒಳನುಗ್ಗಿದ್ದಾರೆ. ಮಂದಿರದ ಕೀಲಿ ಒಡೆದು ಒಳಗೆ…

Read More

ಗುರುಗ್ರಾಮ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ, ಅವರನ್ನು ತಕ್ಷಣ ಗುರುಗ್ರಾಮದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.ಕಳೆದ ಕೆಲವು ದಿನಗಳಿಂದ ಸಣ್ಣಪ್ರಮಾಣದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ, ಇಂದು ಹೆಚ್ಚಿನ ಚಿಕಿತ್ಸೆಯ ಅಗತ್ಯ ಕಂಡುಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ಉಸಿರಾಟದ ತೊಂದರೆ ಅಥವಾ ಜ್ವರದ ಲಕ್ಷಣಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಅವರನ್ನು ತಜ್ಞ ವೈದ್ಯರ ನಿಗಾವಣೆಯಲ್ಲಿ ಇರಿಸಲಾಗಿದ್ದು, ವಿವಿಧ ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗುತ್ತಿದ್ದು, ಆಸ್ಪತ್ರೆಯ ಕಡೆಯಿಂದ ಅಧಿಕೃತ ಆರೋಗ್ಯ ಬುಲೆಟಿನ್ ಬಿಡುಗಡೆಯಾಗುವುದನ್ನು ಎದುರುನೋಡಲಾಗುತ್ತಿದೆ. ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಆತಂಕ ಮನೆಮಾಡಿದೆ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಈಗಾಗಲೇ ಆಸ್ಪತ್ರೆಗೆ ಧಾವಿಸಿದ್ದು,…

Read More

ನವದೆಹಲಿ : ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕ ಏರಿಕೆಯಾದ ಬೆನ್ನಲ್ಲೇ ಎಂಸಿಎಕ್ಸ್‌ನಲ್ಲಿ ಫ್ಯೂಚರ್‌ ಚಿನ್ನ, ಬೆಳ್ಳಿ ದರ ಏರಿಕೆಯಾಗಿದೆ. ಬೆಳಗ್ಗೆ 9:45ರ ವೇಳೆಗೆ 10 ಗ್ರಾಂ ಚಿನ್ನದ ಬೆಲೆ 8,838 ರೂ.(5.66%) ಏರಿಕೆಯಾಗಿ 1,61,887 ರೂ.ನಲ್ಲಿ ವ್ಯವಹಾರ ನಡೆಸುತ್ತಿದ್ದರೆ 1 ಕೆಜಿ ಬೆಳ್ಳಿ ದರ 18,0920 ರೂ. (6.36%) ಏರಿಕೆಯಾಗಿ 2,98,400 ರೂ. ನಲ್ಲಿ ವ್ಯವಹಾರ ನಡೆಸುತ್ತಿದೆ. ಮಧ್ಯಾಹ್ನ 3:30ರ ವೇಳೆಗೆ ಈ ದರ ಮತ್ತಷ್ಟು ಏರಿಳಿತವಾಗುವ ಸಾಧ್ಯತೆಯಿದೆ. ಬೆಲೆ ಏರಿಕೆಯ ವಿವರ: ಇಂದು ಬೆಳಿಗ್ಗೆ 9:45ರ ಸುಮಾರಿಗೆ ಎಂಸಿಎಕ್ಸ್ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ ಬರೋಬ್ಬರಿ 8,838 ರೂ. (5.6% ರಷ್ಟು) ಏರಿಕೆಯಾಗಿದೆ. ಈ ಮೂಲಕ ಪ್ರತಿ 10 ಗ್ರಾಂ ಚಿನ್ನದ ದರ 1,61,887 ರೂ. ತಲುಪಿ ವ್ಯವಹಾರ ನಡೆಸುತ್ತಿದೆ. ಕೇವಲ ಚಿನ್ನ ಮಾತ್ರವಲ್ಲದೆ ಬೆಳ್ಳಿಯ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡಿದ್ದು, ಪ್ರತಿ ಕೆಜಿ ಬೆಳ್ಳಿಗೆ 18,092 ರೂ. (6.36%) ಹೆಚ್ಚಳವಾಗಿದೆ. ಇದರಿಂದ ಒಂದು…

Read More