Subscribe to Updates
Get the latest creative news from FooBar about art, design and business.
Author: kannadanewsnow05
ಮಂಡ್ಯ : ಮಂಡ್ಯದಲ್ಲಿ ಅನುಮಾನಾಸ್ಪದವಾಗಿ ಗ್ರಹಿಣಿ ಸಾವನ್ನಪ್ಪಿದ್ದಾರೆ ವರದಕ್ಷಿಣೆಗಾಗಿ ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು ಮಂಡ್ಯ ತಾಲೂಕಿನ ಜವನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಬನಂಗಾಡಿಯ ನಾಗವೇಣಿ (24) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಜವನ ಹಳ್ಳಿಯ ಬಾವಿಯಲ್ಲಿ ನಾಗವೇಣಿಯ ಶವಪತ್ತೆಯಾಗಿದೆ. ಆರು ವರ್ಷಗಳ ಹಿಂದೆ ಬ್ಯಾಟಗೆಗೌಡನ ಜೊತೆಗೆ ನಾಗವೇಣಿ ಮದುವೆ ಆಗಿತ್ತು. ದಂಪತಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗು ಇದೆ. ಮದುವೆ ವೇಳೆ 80 ಗ್ರಾಂ ಚಿನ್ನಾಭರಣ ಹಾಗೂ ಅರವತ್ತು ಸಾವಿರ ವರದಕ್ಷಿಣೆ ಸಹ ನೀಡಲಾಗಿತ್ತು. ಆದರೆ ಇನ್ನಷ್ಟು ವರದಕ್ಷಿಣೆ ಬೇಕು ಎಂದು ಬ್ಯಾಟಗೆಗೌಡ ಪೀಡಿಸುತ್ತಿದ್ದ. ಆರು ತಿಂಗಳ ಹಿಂದೆ ಕುಟುಂಬ ಆದರೂ ಕೂಡ ಮತ್ತಷ್ಟು ಹಣ ತರುವಂತೆ ನಾಗವೇಣಿಗೆ ಪತಿ ಕಿರುಕುಳ ನೀಡಿದ್ದಾನೆ. ಮನೆಯಲ್ಲಿ ಸಾಯಿಸಿ ಬಾವಿಗೆ ಹೆಣ ಹಾಕಿದ್ದಾರೆ ಎಂದು ಇದೀಗ ನಾಗವೇಣಿ, ಕುಟುಂಬಸ್ಥರು ಆರೋಪಿಸಿದ್ದಾರೆ. ನಾಗವೇಣಿ ಪತಿ ಮತ್ತು ಅತ್ತೆ ಹಾಗೂ ಅವರ ಕುಟುಂಬದವರು ಘಟನೆಯ ಬಳಿಕ ನಾಪತ್ತೆಯಾಗಿದ್ದಾರೆ.…
ನವದೆಹಲಿ : ಮತ ಎಣಿಕೆ ಪ್ರಕ್ರಿಯೆ ಕೇಂದ್ರ ಅಧಿಕಾರಿಗಳ ನಿಯೋಜನೆ ವಿಚಾರಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ನಲ್ಲಿ ಇದೀಗ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಭಾರಿ ಹಿನ್ನಡೆಯಾಗಿದೆ. ಟಿಎಂಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇದೀಗ ವಜಾಗೊಳಿಸಿದೆ. ಕೊಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಇದೆ ವೇಳೆ ಎತ್ತಿ ಹಿಡಿದಿದೆ. ಚುನಾವಣಾ ಆಯೋಗದ ಸುತ್ತೋಲೆ ತಪ್ಪು ಎಂದು ಹೇಳಲು ಆಗುವುದಿಲ್ಲ ಚುನಾವಣಾ ಆಯೋಗದ ನಿರ್ಧಾರ ನಿಯಮಗಳಿಗೆ ವಿರುದ್ಧವಾಗಿಲ್ಲ. ಮತ ಎಣಿಕೆ ಪ್ರಕ್ರಿಯೆಯಲ್ಲಿ ರಾಜ್ಯದ ಬದಲು ಕೇಂದ್ರ ಅಧಿಕಾರಿಗಳ ನಿಯೋಜನೆ ಮಾಡಲಾಗಿತ್ತು. ರಾಜ್ಯ ಸರ್ಕಾರಿ ಅಧಿಕಾರಿಗಳನ್ನು ಎಣಿಕೆಯಿಂದ ದೂರವಿಡಲು ಪ್ರಯತ್ನಿಸಲಾಗಿತ್ತು ಎಂದು ಟಿಎಂಸಿ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ವಾದ ಮಂಡಿಸಿದರು. ಇವರ ವಾದವನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭಾಗ್ಜಿ ಅವರು ತಳ್ಳಿ ಹಾಕಿದ್ದು ಈ ಕಾರಣಕ್ಕೆ ಚುನಾವಣಾ ಆಯೋಗವನ್ನು ದೂಷಿಸಲು ಸಾಧ್ಯವಿಲ್ಲ. ಮತ ಎಣಿಕೆಯನ್ನು ನಡೆಸಲು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ನೇಮಿಸಬಹುದು. ಈ…
ದಾವಣಗೆರೆ : 50 ಸಾವಿರ ಲಂಚ ಪಡೆಯುತ್ತಿದ್ದ ಸರ್ವೇ ಸುರ್ವೈಸರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ADLR ಕಚೇರಿಯಲ್ಲಿ ನಡೆದಿದ್ದು, ಸರ್ವೇ ಸೂಪರ್ ಕೆ.ಹೆಚ್ ಅಂಜಿನಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 50 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಅಂಜಿನಪ್ಪ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ದಾವಣಗೆರೆ ನಗರದ ಹಳೆ ಬಸ್ ನಿಲ್ದಾಣದ ದ್ವಾರಕಾ ಲಾಡ್ಜ್ ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ. ಬೆಳಿಗ್ಗೆ ಸರ್ವೆ ಸೂಪರ್ ಕೆಎಚ್ ಅಂಜಿನಪ್ಪ ಮಧುರ ನಾಯಕನಹಳ್ಳಿ ಎಬಿ ಕುಮಾರನಾಯಕ ಎಂಬ ತನ ಬಳಿ 50,000 ಲಂಚ ಪಡೆಯಲು ಮುಂದಾಗಿದ್ದಾರೆ. ರೈತನ ಜಮೀನು ಹದ್ದುಬಸ್ತು ಮಾಡಿಕೊಡಲು 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು ಸ್ನೇಹಿತ ಶ್ರೀಧರ್ ಮೂಲಕ ರೈತನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೊದಲ ಕಂತು ಐವತ್ತು ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ಸ್ನೇಹಿತ ಶ್ರೀಧರ್…
ರಾಯಚೂರು : ರಾಯಚೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಪಕ್ಕದ ಜಮೀನಿನಿಂದ ಬೆಂಕಿ ಕಿಡ್ಡಿ ತಗುಲಿ ಕುರಿ ಶೆಡ್ ಸುಟ್ಟು ಭಸ್ಮವಾಗಿದೆ. ಘಟನೆಯಲ್ಲಿ 20 ಕೋಳಿಗಳು, 10 ಮೇಕೆ ಸಜೀವ ದಹನಗೊಂಡಿದ್ದು, ಮನೆಗೂ ಹಾನಿಯಾಗಿದೆ ರಾಯಚೂರು ತಾಲೂಕಿನ ಬುರ್ದಿಪಾಡ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ನಾಗಮ್ಮ ಎಂಬುವರಿಗೆ ಈ ಒಂದು ಕುರಿ ಶೆಡ್ ಹಾಗೂ ಮನೆ ಸೇರಿತ್ತು. ನಾಗಮ್ಮಳ ಪಕ್ಕದ ಹೊಲದಲ್ಲಿ ಕಸಕ್ಕೆ ಬೆಂಕಿ ಹಾಕಲಾಗಿತ್ತು. ಈ ವೇಳೆ ಬೆಂಕಿ ಕಿಡಿ ತಾಗಿ ಶೆಡ್ ಹಾಗೂ ಮನೆ ಹೊತ್ತಿ ಉರಿದಿದೆ. 3 ಲಕ್ಷ ಮೌಲ್ಯದ 20 ಕೋಳಿಗಳು, ಹಾಗೂ 10 ಮೇಕೆಗಳು ಸಜೀವ ದಹನಗೊಂಡಿವೆ. ಹತ್ತಿ ಮಾರಾಟದಿಂದ ಬಂದಿದ್ದ 2 ಲಕ್ಷ ನಗದು ಸಹ ಸುಟ್ಟು ಬಸ್ಮವಾಗಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಉತ್ತರಕನ್ನಡ : ತುಮಕೂರಿನಲ್ಲಿ ಪತ್ನಿ ಅಕ್ರಮ ಸಂಬಂಧ ಹಿನ್ನೆಲೆ ಬೇರೊಬ್ಬನ ಜೊತೆಗೆ ಪತ್ನಿ, ಎಸ್ಕೇಪ್ ಆಗಿದ್ದು ಇದರಿಂದ ಮನನೊಂದು ಪತಿ ಇಬ್ಬರೂ ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ನಡೆದಿದೆ. ಇದೀಗ ಇಂಥದ್ದೇ ಘಟನೆ ಮತ್ತೊಂದು ನಡೆದಿದ್ದು, ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಪತಿಯನ್ನು ರಾಘವೇಂದ್ರ ಎಂದು ತಿಳಿದು ಬಂದಿದ್ದು ಪತ್ನಿ ಮೇಘ ಅಕ್ರಮ ಸಂಬಂಧ ಹೊಂದಿದ್ದಾಳೆ. ಮೂರು ವರ್ಷ ಮಲೇಶಿಯಾದಲ್ಲಿ ರಾಘವೇಂದ್ರ ಕೆಲಸದಲ್ಲಿದ್ದ. ದಾಂಡೇಲಿ ಇಬ್ಬರು ಮಕ್ಕಳ ಜೊತೆಗೆ ಪತ್ನಿ ಮೇಘ ಇದ್ದಳು. ಪತಿ ರಾಘವೇಂದ್ರ ಬರುತ್ತಿದ್ದಂತೆ ಮೇಘ ತವರು ಮನೆಗೆ ತೆರಳಿದ್ದಾಳೆ. ಬೇರೊಬ್ಬನೊಂದಿಗೆ ಪತ್ನಿ ಮೇಘ ಅಕ್ರಮ ಸಂಬಂಧ ಹೊಂದಿದಳು. ಓಪನ್ ಆಗಿ ಪ್ರಿಯಕರ ಜೊತೆಗೆ ಫೋಟೋಗಳು ಶೇರ್ ಮಾಡುತ್ತಿದ್ದಳು. ಅನೈತಿಕ ಸಂಬಂಧ ನಿಲ್ಲಿಸಲು ಬುದ್ಧಿ ಹೇಳಿದರು ಕೂಡ ಮೇಘ…
ಬೆಂಗಳೂರು: ರಾಜಧಾನಿಯ ಪ್ರಮುಖ ವಾಣಿಜ್ಯ ಕೇಂದ್ರಗಳಲ್ಲಿ ಒಂದಾದ ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು (APMC) ಶೀಘ್ರದಲ್ಲೇ ದಾಸನಪುರಕ್ಕೆ ಸ್ಥಳಾಂತರಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ್ ಪಾಟೀಲ್ ತಿಳಿಸಿದ್ದಾರೆ. ವಿಶೇಷವಾಗಿ ಈರುಳ್ಳಿ, ಆಲೂಗಡ್ಡೆ ಹಾಗೂ ಶುಂಠಿ ಮಾರುಕಟ್ಟೆಗಳು ದಾಸನಪುರಕ್ಕೆ ಶಿಫ್ಟ್ ಆಗಲಿದ್ದು, ಈ ಮೂಲಕ ಯಶವಂತಪುರ ಭಾಗದ ದಶಕಗಳ ಕಾಲದ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಗುರಿ ಹೊಂದಲಾಗಿದೆ. 68 ಎಕರೆ ವಿಶಾಲ ಪ್ರದೇಶದಲ್ಲಿ ಮಾರುಕಟ್ಟೆ: ದಾಸನಪುರದಲ್ಲಿ ಮಾರುಕಟ್ಟೆಗಾಗಿ ಒಟ್ಟು 68 ಎಕರೆ ಜಾಗವನ್ನು ಮೀಸಲಿಡಲಾಗಿದೆ. ವ್ಯಾಪಾರಸ್ಥರಿಗೆ ಮತ್ತು ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸುಸಜ್ಜಿತ ವ್ಯವಸ್ಥೆ ಮಾಡಲಾಗುತ್ತಿದೆ. ಯಶವಂತಪುರ ಮಾರುಕಟ್ಟೆಯಿಂದ ಸುಮಾರು 800 ಮಳಿಗೆಗಳು ದಾಸನಪುರಕ್ಕೆ ಸ್ಥಳಾಂತರಗೊಳ್ಳಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ವಿಶೇಷ ಒತ್ತು: ಮಾರುಕಟ್ಟೆಗೆ ಬರುವ ವಾಹನಗಳ ನಿಲುಗಡೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪಾರ್ಕಿಂಗ್ ಉದ್ದೇಶಕ್ಕಾಗಿಯೇ ಹೆಚ್ಚುವರಿಯಾಗಿ 10 ಎಕರೆ ಜಾಗವನ್ನು ಲೀಸ್ ಪಡೆದುಕೊಳ್ಳಲಾಗಿದೆ. ಇದರಿಂದಾಗಿ ಮಾರುಕಟ್ಟೆ ಪ್ರದೇಶದಲ್ಲಿ ಲಾರಿ ಹಾಗೂ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಪುಟ ಪುನಾರಚನೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಸಕ್ಕರೆ ಹಾಗೂ ಜವಳಿ ಸಚಿವ ಶಿವಾನಂದ ಪಾಟೀಲ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. “ಸಚಿವ ಸ್ಥಾನ ಬಿಟ್ಟುಕೊಡು ಎಂದು ಹೈಕಮಾಂಡ್ ಸೂಚಿಸಿದರೆ ನಾನು ಈ ಕ್ಷಣವೇ ರಾಜೀನಾಮೆ ನೀಡಲು ಸಿದ್ಧ” ಎಂದು ಹೇಳುವ ಮೂಲಕ ಅವರು ಕುತೂಹಲ ಮೂಡಿಸಿದ್ದಾರೆ. ಬೇಡಿಕೆ ಇಟ್ಟವನಲ್ಲ ನಾನು: ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಆಗಬೇಕು ಎನ್ನುವುದು ಕೆಲವು ಶಾಸಕರ ವೈಯಕ್ತಿಕ ಅಭಿಪ್ರಾಯವಾಗಿರಬಹುದು. ಆದರೆ, ನಾನು ಸಚಿವ ಸ್ಥಾನಕ್ಕಾಗಿ ಎಂದಿಗೂ ಯಾರ ಮುಂದೆಯೂ ಬೇಡಿಕೆ ಇಟ್ಟಿಲ್ಲ. ಪಕ್ಷ ನನಗೆ ಜವಾಬ್ದಾರಿ ನೀಡಿದೆ, ಅದನ್ನು ನಿರ್ವಹಿಸುತ್ತಿದ್ದೇನೆ. ಒಂದು ವೇಳೆ ಹೊಸಬರಿಗೆ ಅವಕಾಶ ನೀಡುವ ಉದ್ದೇಶದಿಂದ ನನ್ನನ್ನು ಸ್ಥಾನ ಬಿಟ್ಟುಕೊಡಲು ಸೂಚಿಸಿದರೆ, ಅದಕ್ಕೆ ನನ್ನ ಅಭ್ಯಂತರವಿಲ್ಲ ಎಂದು ಸ್ಪಷ್ಟಪಡಿಸಿದರು. 20 ವರ್ಷ ಅಧಿಕಾರವಿಲ್ಲದೆ ಕಳೆದಿದ್ದೇನೆ: ತಮ್ಮ ರಾಜಕೀಯ ಜೀವನದ ಹಳೆಯ ದಿನಗಳನ್ನು…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸುರಿದ ಭಾರಿ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಅಮಾಯಕರು ಬಲಿಯಾದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕರ್ತವ್ಯ ಲೋಪದ ಆರೋಪದ ಮೇಲೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ (GBA) ಇಬ್ಬರು ಹಿರಿಯ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅಮಾನತುಗೊಂಡ ಅಧಿಕಾರಿಗಳು: ಶಿವಾಜಿನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ (EE) ಮೊಹಮ್ಮದ್ ಜಾವೇದ್ ಹಾಗೂ ವಸಂತನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ರುದ್ರಮುನಿ ಅಮಾನತುಗೊಂಡ ಅಧಿಕಾರಿಗಳು. ಮಳೆಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಲ್ಲಿ ಹಾಗೂ ದುರ್ಬಲವಾಗಿದ್ದ ಕಾಂಪೌಂಡ್ ಗೋಡೆಯ ಸುರಕ್ಷತೆಯನ್ನು ಪರಿಶೀಲಿಸುವಲ್ಲಿ ಇವರು ವಿಫಲರಾಗಿದ್ದಾರೆ ಎಂಬ ಕಾರಣಕ್ಕೆ ಈ ಶಿಸ್ತು ಕ್ರಮ ಜರುಗಿಸಲಾಗಿದೆ. ಘಟನೆಯ ಹಿನ್ನೆಲೆ: ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಬೌರಿಂಗ್ ಆಸ್ಪತ್ರೆಯ ಹಳೆಯ ಕಾಂಪೌಂಡ್ ಗೋಡೆ ದಿಢೀರನೆ ಕುಸಿದು ಬಿದ್ದಿತ್ತು. ಈ ವೇಳೆ ಗೋಡೆಯ ಪಕ್ಕದಲ್ಲೇ ಆಶ್ರಯ ಪಡೆದಿದ್ದ ಹಾಗೂ…
ಬೆಳಗಾವಿ : ಸಾಲ ತೀರಿಸಲು ಅಳಿಯನ ಮನೆಗೆ ಮತ್ತೆ ಕನ್ನ ಹಾಕಿದ್ದು ಅಳಿಯನ ಮನೆಯಲ್ಲಿ ಕಳ್ಳತನ ಮಾಡಿದ ಅತ್ತೆ ಇದೀಗ ಜೈಲು ಪಾಲಾಗಿದ್ದಾರೆ. 16 ಲಕ್ಷ ಮೌಲ್ಯದ 110 ಗ್ರಾಂ ಚಿನ್ನಾಭರಣವನ್ನು ಅತ್ತೆ ಕಳ್ಳತನ ಮಾಡಿದ್ದಳು ಬೆಳಗಾವಿಯ ವಿರುಣವಾಡಿ ನಿವಾಸಿ ಉಜ್ವಲ ಎನ್ನುವ ಮಹಿಳೆಯಿಂದ ಈ ಕೃತ್ಯ ನಡೆದಿದೆ. ಸ್ನೇಹಿತರ ಮದುವೆಗೆ ಎಂದು ಬೇರೆ ಊರಿಗೆ ಹೋಗಿದ್ದ ಅಳಿಯ ಈ ವೇಳೆ ಮದುವೆ ಮುಗಿಸಿ ಬಂದ ನೋಡಿದಾಗ ಕಳ್ಳತನ ಆಗಿದ್ದು ಬೆಳಕಿಗೆ ಬಂದಿದೆ. ಈ ವೇಳೆ ಅತ್ತೆ ಉಜ್ವಲ ತನಗೇನು ಗೊತ್ತಿಲ್ಲ ಎಂದು ನಾಟಕವಾಡಿದ್ದಾಳೆ. ಪೊಲೀಸರು ವಿಚಾರಣೆ ನಡೆಸಿದಾಗ ಅತ್ತೆಯ ಕಳ್ಳಾಟ ಬಯಲಾಗಿದೆ. ಇದೀಗ ಉಜ್ವಲ ಮತ್ತು ಶಿವಣ್ಣನನ್ನು ಬಂಧಿಸಿ ಪೊಲೀಸರು ಟಿಳಕವಾಡಿ ಪೊಲೀಸರು ಜೈಲಿಗೆ ಅಟ್ಟಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಳಿಮಾವಿನ ಹಳೆ ಪೋಸ್ಟ್ ಆಫೀಸ್ ಬಳಿ ಈ ಒಂದು ಘಟನೆ ನಡೆದಿದೆ. ಇದು ಆತ್ಮಹತ್ಯೆ ಅಲ್ಲ ಕೊನೆಯಲ್ಲಿ ಗೃಹಿಣಿ ಪೋಷಕರು ಆರೋಪಸಿದ್ದು, ಪತಿಯ ಮನೆಯವರೇ ಹೊಡೆದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಆತ್ಮಹತ್ಯೆಗೆ ಶರಣಾದ ಗ್ರಹಿಣಿಯನ್ನು ವಂದನ ಎಂದು ತಿಳಿದುಬಂದಿದೆ. ಪತಿ ವಿಕ್ರಂ, ಮಾವ ಶ್ರೀನಿವಾಸ್ ಹಾಗೂ ಮೈದುನ ವಿನಿಶ್ ವಿರುದ್ಧ ಇದೀಗ ದೂರು ದಾಖಲಾಗಿದೆ. ಮದುವೆ ಸಮಯದಲ್ಲಿ ವಿಕ್ರಮಗೆ ಬೈಕ್ ಚಿನ್ನಾಭರಣ ಕೊಟ್ಟಿದ್ದರು. ಅದ್ದೂರಿಯಾಗಿ ಮದುವೆಯನ್ನು ಸಹ ಮಾಡಿಕೊಟ್ಟಿದ್ದರು. ಆದರೂ ವರದಕ್ಷಿಣೆಗಾಗಿ ವಿಕ್ರಂ ಪದೇ ಪದೇ ವಂದನಾಗೆ ಕಿರುಕುಳ ನೀಡುತ್ತಿದ್ದ. ಈ ವೇಳೆ ಎಲ್ಲಾ ಹಿರಿಯರು ಸೇರಿ ರಾಜಿ ಸಂಧಾನ ಮಾಡಿದರು ಕೂಡ ಪತ್ನಿಗೆ ವಿಕ್ರಂ ಕಿರುಕುಳ ನೀಡಿದ್ದಾನೆ. ಗಂಡನ ಹಣದ ಹಪಾಹಪಿಗೆ ವಂದನಾ ಬಲಿಯಾಗಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ಇದೀಗ ಮರಣೋತರ ಪರೀಕ್ಷೆ ನಡೆಸಿದ ಬಳಿಕ ವಂದನಾ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.














