Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ನವದೆಹಲಿ: ದೇಶದಲ್ಲಿ ತೈಲ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ್ದ ಕರೆಗೆ ದೆಹಲಿ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿದೆ. ತೈಲ ಉಳಿತಾಯ ಮತ್ತು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ದೆಹಲಿ ಸರ್ಕಾರವು ತನ್ನ ನೌಕರರಿಗೆ ವಾರದಲ್ಲಿ ಎರಡು ದಿನ ‘ವರ್ಕ್ ಫ್ರಮ್ ಹೋಮ್’ (ಮನೆಯಿಂದಲೇ ಕೆಲಸ) ಮಾಡಲು ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಕ್ರಮದಿಂದ ಇಂಧನ ಬಳಕೆಯಲ್ಲಿ ಗಣನೀಯ ಇಳಿಕೆಯಾಗುವ ನಿರೀಕ್ಷೆಯಿದೆ. ತೈಲ ಉಳಿತಾಯದ ಈ ಅಭಿಯಾನವನ್ನು ಮತ್ತಷ್ಟು ಬಲಪಡಿಸಲು ದೆಹಲಿ ಸರ್ಕಾರವು ಸಭೆಗಳ ವಿಚಾರದಲ್ಲೂ ಮಹತ್ವದ ಬದಲಾವಣೆ ತಂದಿದೆ. ಇನ್ಮುಂದೆ ಸರ್ಕಾರಿ ಇಲಾಖೆಗಳಲ್ಲಿ ನಡೆಯುವ ಒಟ್ಟು ಸಭೆಗಳ ಪೈಕಿ ಶೇಕಡಾ 50 ರಷ್ಟು ಸಭೆಗಳನ್ನು ಆನ್ಲೈನ್ ಮೂಲಕವೇ ನಡೆಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಅನಗತ್ಯ ಓಡಾಟಕ್ಕೆ ಬ್ರೇಕ್ ಬೀಳಲಿದ್ದು, ಇಂಧನ ವ್ಯಯವಾಗುವುದನ್ನು ತಡೆಯಬಹುದಾಗಿದೆ. ಕೇವಲ ಸಾಮಾನ್ಯ ನೌಕರರಿಗೆ ಮಾತ್ರವಲ್ಲದೆ, ಸಚಿವರು ಮತ್ತು ಜನಪ್ರತಿನಿಧಿಗಳಿಗೂ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಅದರಂತೆ, ಯಾವೊಬ್ಬ…
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಗ್ರಾಹಕರ ನಿದ್ದೆಗೆಡಿಸಿದೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಚಿನ್ನ ಖರೀದಿ ಮಾಡಬೇಡಿ ಮತ್ತು ಅಡುಗೆ ಎಣ್ಣೆ ಬಳಕೆ ಕಡಿಮೆ ಮಾಡಿ ಎಂದು ನೀಡಿದ್ದ ಕರೆಯ ಬೆನ್ನಲ್ಲೇ, ಮಾರುಕಟ್ಟೆಯಲ್ಲಿ ದಿಢೀರ್ ಬದಲಾವಣೆಗಳಾಗಿವೆ. ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಏರಿಕೆ ಕಂಡುಬಂದ ಬೆನ್ನಲ್ಲೇ, ಈಗ ಅಕ್ಕಿ ಮತ್ತು ಅಡುಗೆ ಎಣ್ಣೆಯ ದರವೂ ಗಗನಕ್ಕೇರುತ್ತಿರುವುದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಅಕ್ಕಿ ದರದಲ್ಲಿ ಭಾರಿ ಏರಿಕೆ: ಮಾರುಕಟ್ಟೆಯಲ್ಲಿ ಅಕ್ಕಿಯ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹೋಲ್ ಸೆಲ್ ಮತ್ತು ರಿಟೇಲ್ ಎರಡೂ ವಿಭಾಗಗಳಲ್ಲಿ ಗ್ರಾಹಕರಿಗೆ ಬಿಸಿ ತಟ್ಟಿದೆ. ಸಗಟು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಅಕ್ಕಿಗೆ ಸುಮಾರು 4 ರಿಂದ 5 ರೂಪಾಯಿ ಹೆಚ್ಚಳವಾಗಿದ್ದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ ಇದು ಬರೋಬ್ಬರಿ 8 ರಿಂದ 10 ರೂಪಾಯಿ ತನಕ ಏರಿಕೆಯಾಗುವ ಸಾಧ್ಯತೆ ಇದೆ. ಈ ಹಿಂದೆ ಇದ್ದ ದರಕ್ಕೆ ಹೋಲಿಸಿದರೆ, 25 ಕೆಜಿಯ ಅಕ್ಕಿ ಚೀಲದ ದರದಲ್ಲಿ…
ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದ ಬಳಿ ಭದ್ರಾ ಬಲದಂಡೆ ನಾಲೆಯಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘೋರ ಘಟನೆ ಸಂಭವಿಸಿದೆ. ಈ ದುರ್ಘಟನೆಯು ವಿದ್ಯಾರ್ಥಿಗಳ ಕುಟುಂಬಸ್ಥರು ಹಾಗೂ ಕಾಲೇಜು ವಲಯದಲ್ಲಿ ಶೋಕದ ಛಾಯೆ ಮೂಡಿಸಿದೆ. ಮೃತರ ವಿವರ: ಮೃತಪಟ್ಟ ವಿದ್ಯಾರ್ಥಿಗಳನ್ನು ವಿವೇಕ್ ಮತ್ತು ಮಾನಸ ಎಂದು ಗುರುತಿಸಲಾಗಿದೆ. ಇವರಿಬ್ಬರೂ ದಾವಣಗೆರೆಯ ಹೆಸರಾಂತ BIET (ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ) ಕಾಲೇಜಿನ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಗೆಳೆಯರೊಂದಿಗೆ ವಿಹಾರಕ್ಕೆಂದು ತೆರಳಿದ್ದ ಈ ವಿದ್ಯಾರ್ಥಿಗಳು ವಿಧಿಯ ಆಟಕ್ಕೆ ಬಲಿಯಾಗಿದ್ದಾರೆ. ಘಟನೆಯ ಹಿನ್ನೆಲೆ: ಮಾಹಿತಿಯ ಪ್ರಕಾರ, BIET ಕಾಲೇಜಿನ ಸುಮಾರು 10 ವಿದ್ಯಾರ್ಥಿಗಳ ತಂಡವು ಮರಬನಹಳ್ಳಿ ಸಮೀಪವಿರುವ ಭದ್ರಾ ಬಲದಂಡೆ ನಾಲೆ ವೀಕ್ಷಿಸಲು ಹಾಗೂ ವಿಹಾರಕ್ಕಾಗಿ ತೆರಳಿದ್ದರು. ಈ ವೇಳೆ ನಾಲೆಯ ನೀರಿನ ಸೆಳೆತವನ್ನು ಅರಿಯದೆ ಈಜಲು ಮುಂದಾದಾಗ ವಿವೇಕ್ ಮತ್ತು ಮಾನಸ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಉಳಿದ ವಿದ್ಯಾರ್ಥಿಗಳು ಸಹಾಯಕ್ಕಾಗಿ ಕೂಗಿಕೊಂಡರೂ ಯಾವುದೇ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಿಷ್ಟಾಚಾರದ ವೇಳೆ ತಮಗೆ ಕುಡಿಯಲು ನೀರು ನೀಡಿದ ಅಧಿಕಾರಿಯೊಬ್ಬರ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಕಡು ಬಿಸಿಲಿನಲ್ಲಿ ಕಾಮಗಾರಿ ವೀಕ್ಷಣೆ ಮಾಡುತ್ತಿದ್ದ ಸಂದರ್ಭದಲ್ಲಿ ಕೇವಲ ನೀರು ತಂದಿದ್ದಕ್ಕೆ ಸಿಎಂ ಆಕ್ರೋಶ ಹೊರಹಾಕಿದ್ದಾರೆ. ಮೈಸೂರು ನಗರದಾದ್ಯಂತ ನಡೆಯುತ್ತಿರುವ ಪ್ರಮುಖ ರಸ್ತೆ ಹಾಗೂ ಮೂಲಸೌಕರ್ಯ ಕಾಮಗಾರಿಗಳ ಗುಣಮಟ್ಟ ಮತ್ತು ಪ್ರಗತಿಯನ್ನು ಪರಿಶೀಲಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದರು. ಬಿರು ಬಿಸಿಲಿನಲ್ಲಿ ಸುತ್ತಾಡಿ ಸುಸ್ತಾಗಿದ್ದ ಮುಖ್ಯಮಂತ್ರಿಗಳಿಗೆ ಎಂಜಿನಿಯರ್ ಒಬ್ಬರು ಕುಡಿಯುವ ನೀರಿನ ಬಾಟಲಿಯನ್ನು ನೀಡಲು ಮುಂದಾದರು. ಈ ವೇಳೆ ಸಿಎಂ ಕಿಡಿಕಾರಿದ್ದಾರೆ. ನೀರು ನೀಡಲು ಬಂದ ಅಧಿಕಾರಿಯನ್ನು ಕಂಡು ಗರಂ ಆದ ಸಿದ್ದರಾಮಯ್ಯ, “ಏ ಜ್ಯೂಸ್ ಇಲ್ವೇನಯ್ಯ? ಏ ಇವನ್ಯಾವನೋ ಬಿಸಿಲಲ್ಲಿ ಎಳನೀರು ತರಬೇಕಲ್ವಾ?” ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿದ್ದಾರೆ. ಬಿಸಿಲಿನ ತಾಪಕ್ಕೆ ತತ್ತರಿಸಿದ್ದ ಸಿಎಂ, ಕೇವಲ ನೀರು ತಂದಿದ್ದಕ್ಕೆ ಅಧಿಕಾರಿಗಳ ಸಮಯಪ್ರಜ್ಞೆಯ ಬಗ್ಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿರುವ ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಅವರಿಗೆ ನಾಳೆ ಅತ್ಯಂತ ಮಹತ್ವದ ದಿನವಾಗಿದೆ. ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದ್ದು, ಅವರ ಮುಂದಿನ ಭವಿಷ್ಯ ಹಾಗೂ ಜೈಲು ವಾಸದ ಅಂತ್ಯದ ಬಗ್ಗೆ ನಾಳೆ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ. ಈ ಪ್ರಮುಖ ವಿಚಾರಣೆಯು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ವಿಜಯ್ ಬಿಷ್ನೋಯಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠದಲ್ಲಿ ನಡೆಯಲಿದೆ. ಈಗಾಗಲೇ ಹೈಕೋರ್ಟ್ನಲ್ಲಿ ಜಾಮೀನು ನಿರಾಕರಿಸಲ್ಪಟ್ಟಿರುವ ಹಿನ್ನೆಲೆಯಲ್ಲಿ, ದರ್ಶನ್ ಪರ ವಕೀಲರು ಸುಪ್ರೀಂ ಕೋರ್ಟ್ನಲ್ಲಿ ಈ ಬಾರಿ ಪ್ರಬಲ ವಾದ ಮಂಡಿಸಲು ಸಜ್ಜಾಗಿದ್ದಾರೆ. ಹಿಂದಿನ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಿಂದ ಸಮಗ್ರ ವರದಿಯನ್ನು ಕೇಳಿತ್ತು. ಈ ವರದಿಯಲ್ಲಿ ಪ್ರಮುಖವಾಗಿ ಪ್ರಕರಣದ ಪ್ರಗತಿಯ ಬಗ್ಗೆ ಪ್ರಶ್ನಿಸಲಾಗಿತ್ತು. ಇದುವರೆಗೆ ಎಷ್ಟು ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ? ಇನ್ನೂ ಎಷ್ಟು ಸಾಕ್ಷಿಗಳು ಬಾಕಿ ಇದ್ದಾರೆ? ಮತ್ತು ಇಡೀ…
ಹುಬ್ಬಳ್ಳಿ: ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಫ್ರಿಡ್ಜ್, ವಾಷಿಂಗ್ ಮಷಿನ್, ಹೊಲಿಗೆ ಯಂತ್ರ, ಬೀದಿಬದಿ ವ್ಯಾಪಾರ, ಆಸ್ಪತ್ರೆ ಖರ್ಚು, ಬಂಗಾರ ಹೀಗೆ ನಾನಾ ಕಾರ್ಯಗಳಿಗೆ ಬಳಕೆ ಮಾಡಿಕೊಂಡಿದ್ದನ್ನು ಕೇಳಿದ್ದೇವೆ. ಆದರೆ, ಇಲ್ಲೊಬ್ಬ ಗೃಹಿಣಿ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 29 ಕಂತುಗಳ ಹಣದಿಂದ ಹೊಲದಲ್ಲಿ ಬೋರ್ವೆಲ್ ಕೊರೆಸಿ ಬದುಕು ಹಸನಾಗಿಸಿಕೊಂಡಿದ್ದಾರೆ. ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪ ಗ್ರಾಮದ ರೈತ ಮಹಿಳೆ ಈರವ್ವ ಅಂಗಡಿ ಗೃಹಲಕ್ಷ್ಮಿ ಯೋಜನೆ ಹಣವನ್ನು ಸದ್ಬಳಕೆ ಮಾಡಿಕೊಂಡು ಮಾದರಿಯಾಗಿದ್ದಾರೆ. ಏ.28ರಂದು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ 2.5 ಎಕರೆ ಹೊಲದಲ್ಲಿ ಬೋರ್ ವೆಲ್ ಕೊರೆಸಿದ್ದು, ಇದರ ಫಲವಾಗಿ 5 ಇಂಚು ನೀರು ದೊರೆತಿದೆ. ಇದು ಈರವ್ವ ಕುಟುಂಬದ ಸಂತಸಕ್ಕೆ ಕಾರಣವಾಗಿದೆ. ಗೃಹಲಕ್ಷ್ಮಿಯಿಂದ ಬಂದ ಹಣದಲ್ಲಿ ₹4000 ಉಳಿದಿದ್ದು ಮೋಟಾರ್ ಅಳವಡಿಸಲು ₹ 80,000 ವೆಚ್ಚ ತಗುಲಿದ್ದು ವಿವಿಧೆಡೆ ಸಾಲ ಮಾಡಿದ್ದಾರೆ. ನೀರಾವರಿ ಮಾಡಿ ಉತ್ತಮ ಬೆಳೆ ಬೆಳೆದು ಈ ಸಾಲ ತೀರಿಸುತ್ತೇವೆ ಎನ್ನುತ್ತಾರೆ ಈರವ್ವ ಹಾಗೂ ಆಕೆಯ ಪತಿ ಭರಮಣ್ಣ. ಗೃಹಲಕ್ಷ್ಮಿ…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನಾರಚನೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದೆಹಲಿ ಭೇಟಿಯ ಬಗ್ಗೆ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. “ಇದೇ ತಿಂಗಳ 15ನೇ ತಾರೀಖು ನಾನು ದೆಹಲಿಗೆ ಹೋಗುತ್ತಿಲ್ಲ, ಹೈಕಮಾಂಡ್ನಿಂದ ಅಧಿಕೃತ ಕರೆ ಬಂದರೆ ಮಾತ್ರ ನಾನು ರಾಷ್ಟ್ರ ರಾಜಧಾನಿಗೆ ಪ್ರಯಾಣ ಬೆಳೆಸುತ್ತೇನೆ” ಎಂದು ಅವರು ತಿಳಿಸಿದ್ದಾರೆ. ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿರುವೆ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸದ್ಯಕ್ಕೆ ದೆಹಲಿಗೆ ಹೋಗುವ ಯಾವುದೇ ಪೂರ್ವನಿರ್ಧರಿತ ಕಾರ್ಯಕ್ರಮಗಳಿಲ್ಲ ಎಂದು ಸ್ಪಷ್ಟಪಡಿಸಿದರು. ಒಂದು ವೇಳೆ ಪಕ್ಷದ ವರಿಷ್ಠರು ಚರ್ಚೆಗೆ ಬರುವಂತೆ ಸೂಚಿಸಿದರೆ ಮಾತ್ರ ಭೇಟಿ ನೀಡುವುದಾಗಿ ಹೇಳುವ ಮೂಲಕ, ಎಲ್ಲ ನಿರ್ಧಾರಗಳನ್ನು ಹೈಕಮಾಂಡ್ ವಿವೇಚನೆಗೆ ಬಿಟ್ಟಿರುವುದಾಗಿ ಅವರು ಸೂಚ್ಯವಾಗಿ ತಿಳಿಸಿದರು. ಸಂಪುಟ ಪುನಾರಚನೆಯ ಸುಳಿವು ಇದೇ ಸಂದರ್ಭದಲ್ಲಿ ಆಡಳಿತ ಯಂತ್ರಕ್ಕೆ ಹೊಸ ಚೈತನ್ಯ ನೀಡುವ ಉದ್ದೇಶದಿಂದ ಸಚಿವ ಸಂಪುಟ ಪುನಾರಚನೆ ಮಾಡಬೇಕಾದ ಅಗತ್ಯವಿದೆ ಎಂದು ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಸಂಪುಟದಲ್ಲಿ ಬದಲಾವಣೆ ತರುವ ಮೂಲಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ…
ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ನಟ, ರಾಜಕಾರಣಿ ಜೋಸೆಫ್ ವಿಜಯ್ ಅವರು ರಾಜ್ಯದಲ್ಲಿ ಮದ್ಯಪಾನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕ್ರಾಂತಿಕಾರಿ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಸಾರ್ವಜನಿಕ ಕಲ್ಯಾಣ ಮತ್ತು ಯುವ ಪೀಳಿಗೆಯ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು, ಮದ್ಯ ಖರೀದಿ ಮತ್ತು ಮಾರಾಟಕ್ಕೆ ಇರಬೇಕಾದ ಕನಿಷ್ಠ ವಯೋಮಿತಿಯನ್ನು 21 ವರ್ಷಕ್ಕೆ ನಿಗದಿಪಡಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಯುವ ಪೀಳಿಗೆಯ ಹಿತದೃಷ್ಟಿಯಿಂದ ನಿರ್ಧಾರ ರಾಜ್ಯದಲ್ಲಿ ಈ ಹಿಂದೆ ಮದ್ಯಪಾನಕ್ಕೆ ಸಂಬಂಧಿಸಿದ ವಯೋಮಿತಿಯ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಎಳೆದಿರುವ ಸರ್ಕಾರ, ಈಗ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಘೋಷಿಸಲಾಗಿದೆ. ಯುವ ಸಮೂಹವು ಅಮಲು ಪದಾರ್ಥಗಳ ವ್ಯಸನಕ್ಕೆ ಬಲಿಯಾಗುವುದನ್ನು ತಡೆಯಲು ಮತ್ತು ಶಿಸ್ತುಬದ್ಧ ಸಮಾಜ ನಿರ್ಮಾಣ ಮಾಡಲು ಈ ಕ್ರಮ ಅನಿವಾರ್ಯ ಎಂದು ಮುಖ್ಯಮಂತ್ರಿ ವಿಜಯ್ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. 717 ಮದ್ಯದಂಗಡಿಗಳಿಗೆ ಬೀಗ ಕೇವಲ ವಯೋಮಿತಿ ನಿಗದಿ ಮಾತ್ರವಲ್ಲದೆ,…
SHOCKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತೆ ಮೇಲೆ, ನೆರೆ ಮನೆಯವನಿಂದಲೇ ಅತ್ಯಾಚಾರ!
ಬೀದರ್: ತಾಯಿಯನ್ನು ಕಳೆದುಕೊಂಡು ಅನಾಥಪ್ರಜ್ಞೆಯಲ್ಲಿದ್ದ ಎಂಟು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನೆರೆಮನೆಯ ವ್ಯಕ್ತಿಯೊಬ್ಬ ಅಮಾನವೀಯವಾಗಿ ಅತ್ಯಾಚಾರ ಎಸಗಿರುವ ಘಟನೆ ಬೀದರ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ನಾಗರಿಕ ಸಮಾಜವೇ ತಲೆತಗ್ಗಿಸುವಂತೆ ಮಾಡಿರುವ ಈ ಕೃತ್ಯವು ಜಿಲ್ಲೆಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತಂದೆ ಕೆಲಸಕ್ಕೆ ಹೋದಾಗ ಕೃತ್ಯ: ಮೂಲಗಳ ಪ್ರಕಾರ, ಈ ಬಾಲಕಿಯು ಇತ್ತೀಚೆಗಷ್ಟೇ ತನ್ನ ತಾಯಿಯನ್ನು ಕಳೆದುಕೊಂಡಿದ್ದಳು. ಬಾಲಕಿಯ ತಂದೆ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು, ಎಂದಿನಂತೆ ಮಗಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಹೊಂಚು ಹಾಕಿದ್ದ ನೆರೆಮನೆಯ 35 ವರ್ಷದ ಆರೋಪಿ ಧನರಾಜ್ ಕಾಂಬಳೆ ಎಂಬಾತ, ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದಿದ್ದಾನೆ. ಬಾಲಕಿಯ ಮೇಲೆ ಅಮಾನವೀಯ ಕ್ರೌರ್ಯ: ತನ್ನ ಮೇಲೆ ನಂಬಿಕೆ ಇಟ್ಟಿದ್ದ ಮಗುವಿನ ಮೇಲೆ ಆರೋಪಿ ಧನರಾಜ್ ಅತ್ಯಂತ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿಯ ಕಿರುಚಾಟ ಯಾರಿಗೂ ಕೇಳದಂತೆ ಆತ ಅಮಾನವೀಯವಾಗಿ ವರ್ತಿಸಿದ್ದು, ಮಗುವಿನ ದೈಹಿಕ ಸ್ಥಿತಿ ಗಂಭೀರಗೊಂಡಿದೆ.…
ಬೆಂಗಳೂರು : ರಾಜ್ಯ ಸರ್ಕಾರ ವಿಜಾಬ್ ನಿಷೇಧ ಆದೇಶವನ್ನು ಪಡೆದಿದ್ದು ಇನ್ಮುಂದೆ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಜನಿವಾರ, ರುದ್ರಾಕ್ಷಿ, ಶಿವದಾರ ಹಾಗೂ ಇಜಾಬ್ ಧರಿಸಿ ಹೋಗಬಹುದು ಎಂದು ಆದೇಶ ಹೊರಡಿಸಿದ್ದು ಈ ವಿಚಾರವಾಗಿ ಬಿಜೆಪಿ ನಾಯಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು. ಟ್ವೀಟ್ ನಲ್ಲಿ ಈ ಕುರಿತು ಹೇಳಿದ ಅವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ತುಷ್ಠಿಕರಣ ರಾಜಕಾರಣ ಶಿಕ್ಷಣದ ಅಂಗಳಕ್ಕೂ ಕಾಲಿಟ್ಟಿರುವುದು ಅತ್ಯಂತ ದುರದೃಷ್ಟಕರ. ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳು ಇನ್ನೂ ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠದ ಮುಂದೆ ಬಾಕಿ ಇರುವಾಗಲೇ, ನ್ಯಾಯಾಂಗದ ಪ್ರಕ್ರಿಯೆಯನ್ನು ಕಡೆಗಣಿಸಿ ಹಿಜಾಬ್ ನಿಷೇಧವನ್ನು ಸರ್ಕಾರ ಹಿಂಪಡೆದಿರುವುದು ನ್ಯಾಯಾಂಗ ವ್ಯವಸ್ಥೆಗೆ ಮಾಡುವ ಅಪಮಾನ. ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆಯ ಮೂಲ ಉದ್ದೇಶವೇ ವಿದ್ಯಾರ್ಥಿಗಳಲ್ಲಿ ಸಮಾನತೆ ಬೆಳೆಸುವುದು. ಆದರೆ ಕಾಂಗ್ರೆಸ್ ಸರ್ಕಾರವೇ ಈ ರೀತಿ ಧರ್ಮದ ಆಧಾರದ ಮೇಲೆ ತಾರತಮ್ಯ ಎಸಗುತ್ತಿರುವುದು…














