Subscribe to Updates
Get the latest creative news from FooBar about art, design and business.
Author: kannadanewsnow05
ಚನ್ನೈ : ತಮಿಳುನಾಡಿನಲ್ಲಿ ಟಿಬಿಕೆ ಪಕ್ಷ ಸರ್ಕಾರ ರಚನೆ ಮಾಡಲು ತೀವ್ರ ಕಸರತ್ತು ನಡೆಸುತ್ತಿದ್ದು ನಿನ್ನೆ ಟಿವಿಕೆ ಸರ್ಕಾರಕ್ಕೆ ಬೆಂಬಲ ಘೋಷಿಸಿದ ಮುಸ್ಲಿಂ ಲೀಗ್ ಪಕ್ಷಗಳು ಇಂದು ಏಕಾಏಕಿ ಉಲ್ಟಾ ಪಡೆದಿದೆ ಪಕ್ಷಗಳ ಡಿಮ್ಯಾಂಡ್ಗಳನ್ನು ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ ಅವರು ಒಪ್ಪಿಕೊಂಡಿದ್ದು ಬಹುತೇಕ ತಮಿಳುನಾಡಿನಲ್ಲಿ ಸರ್ಕಾರ ರಚನೆ ಫಿಕ್ಸ್ ಎಂದು ಹೇಳಲಾಗುತ್ತಿದೆ. ಇದರ ಮಧ್ಯ ತಮಿಳುನಾಡು ರಾಜಕೀಯದಲ್ಲಿ ಮತ್ತೊಂದು ತಿರುಗು ಸಿಕ್ಕಿದ್ದು ಅಣ್ಣ ಡಿಎಂಕೆ ಮತ್ತು ಡಿಎಂಕೆ ನಡುವೆ ಮಾತುಕತೆ ಮುಂದುವರೆದಿದೆ. ವಿಸಿಕೆ ಮುಖ್ಯಸ್ಥನಿಗೆ ಸಿಎಂ ಹುದ್ದೆ ಆಫರ್ ನೀಡಲು AIADMK ರಣತಂತ್ರ ರೂಪಿಸಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಬರುತ್ತಿದೆ. ಹಾಗಾಗಿ ಇದೀಗ ತಮಿಳುನಾಡಿನಲ್ಲಿ ಯಾವ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎನ್ನುವುದು ಎಲ್ಲರಲ್ಲಿ ಕುತೂಹಲ ಮೂಡಿಸಿದೆ. ಟಿವಿಕೆ ಸರ್ಕಾರ ರಚನೆಗೆ ಮುಸ್ಲಿಂ ಲೀಗ್ ಅಡ್ಡಗಾಲು? ಪಕ್ಷ ಸ್ಥಾಪಿಸಿದ ಮೊದಲ ಪ್ರಯತ್ನದಲ್ಲೇ 108 ಸ್ಥಾನಗಳನ್ನು ಗೆದ್ದು ದಾಖಲೆ ಬರೆದಿರುವ ವಿಜಯ್ ಅವರಿಗೆ ಸರ್ಕಾರ ರಚಿಸಲು ಇನ್ನು ಕೆಲವೇ ಶಾಸಕರ ಬೆಂಬಲದ…
ಬೆಂಗಳೂರು : ರಾಜ್ಯದಲ್ಲಿ ಗೃಹ ಬಳಕೆ ಸಿಲಿಂಡರ್ ಸಮಸ್ಯೆ ಆಗುತ್ತಿಲ್ಲ. ಆದರೆ ವಾಣಿಜ್ಯ ಸಿಲಿಂಡರ್ ಸಮಸ್ಯೆ ಆಗ್ತಿದೆ. ಅಕಸ್ಮಾತ್ ಯಾರಾದ್ರೂ ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದ್ರೆ ಕಠಿಣ ಕ್ರಮ ಕಗೊಳ್ಳಲಾಗುತ್ತೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ ನೀಡಿದರು. ಗೃಹ ಬಳಕೆಗೆ ಸಮಸ್ಯೆಯಿಲ್ಲ ರಾಜ್ಯದ ಜನತೆಗೆ ಭರವಸೆ ನೀಡಿದ ಸಚಿವರು, ಮನೆಗಳಲ್ಲಿ ಬಳಸುವ ಅಡುಗೆ ಅನಿಲ (LPG) ಸಿಲಿಂಡರ್ಗಳ ವಿತರಣೆ ಸುಗಮವಾಗಿ ನಡೆಯುತ್ತಿದೆ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಆದರೆ ಹೋಟೆಲ್, ಉದ್ದಿಮೆ ಸೇರಿದಂತೆ ವಾಣಿಜ್ಯ ಚಟುವಟಿಕೆಗಳಿಗೆ ಬಳಸುವ ಸಿಲಿಂಡರ್ಗಳ ಪೂರೈಕೆಯಲ್ಲಿ ತುಸು ಏರುಪೇರಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಅವರು ತಿಳಿಸಿದರು. ಕಾಳಸಂತೆ ವಿರುದ್ಧ ಕಠಿಣ ಕ್ರಮ ಸಿಲಿಂಡರ್ ಅಭಾವವನ್ನು ಬಂಡವಾಳ ಮಾಡಿಕೊಂಡು ಯಾರಾದರೂ ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುವುದು…
ಮಂಡ್ಯ : ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದ್ದು, ಕೇವಲ ಒಂದೇ ವಾರದಲ್ಲಿ 4 ನೇ ಮರ್ಡರ್ ಗೆ ಮಂಡ್ಯ ಜನ ಬೆಚ್ಚಿ ಬಿದ್ದಿದ್ದಾರೆ. ಮಲಗಿದ್ದ ಅಪರಿಚಿತ ಮಹಿಳೆ ಮೇಲೆ ಕಲ್ಲು ಎತ್ತಾಕ್ಕಿ ಬರ್ಬರ ಹತ್ಯೆಗೈದಿದ್ದಾರೆ. ಘಟನೆಯ ವಿವರ: ಕಿರುಗಾವಲು ಗ್ರಾಮದ ಸಂತೇಮಾಳದಲ್ಲಿ ಈ ದಾರುಣ ಘಟನೆ ನಡೆದಿದೆ. ರಾತ್ರಿ ವೇಳೆ ಮಲಗಿದ್ದ ಮಹಿಳೆಯ ಮೇಲೆ ದುಷ್ಕರ್ಮಿಗಳು ಭಾರಿ ಗಾತ್ರದ ಕಲ್ಲನ್ನು ಎತ್ತಾಕಿ ಕೊಲೆ ಮಾಡಿದ್ದಾರೆ. ಮುಂಜಾನೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯ ಶವವನ್ನು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ಮಹಿಳೆಯ ಗುರುತು ಇನ್ನು ಪತ್ತೆಯಾಗಬೇಕಿದ್ದು, ಪೊಲೀಸರು ಈ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ: ವಿಷಯ ತಿಳಿಯುತ್ತಿದ್ದಂತೆಯೇ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP), ಡಿವೈಎಸ್ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಮಹಜರು ನಡೆಸಿರುವ ಅಧಿಕಾರಿಗಳು, ಹಂತಕರ ಪತ್ತೆಗಾಗಿ ಶ್ವಾನದಳ ಹಾಗೂ…
ಪಶ್ಚಿಮಬಂಗಾಳ : ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿ ಸರ್ಕಾರದ ಪ್ರಮಾಣವಚನ ಸಮಾರಂಭವು ಇಂದು ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆಯಿತು. ಪಶ್ಚಿಮಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೆಂಧು ಅಧಿಕಾರಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್, ರಾಜನಾಥ್ ಸಿಂಗ್, ಜೆಪಿ ನಡ್ಡಾ, ನಿತೀನ್ ಗಡ್ಕರಿ, ಧರ್ಮೇಂದ್ರ ಪ್ರಧಾನ್, ಶಿವರಾಜ್ ಸಿಂಗ್, ಸುರೇಶ್ ಗೋಪಿ, ಸಿಎಂಗಳಾದ ಯೋಗಿ ಆದಿತ್ಯನಾಥ, ಚಂದ್ರಬಾಬು ನಾಯ್ಡು ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು. ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಅಧಿಕಾರಾವಧಿಯನ್ನು ಔಪಚಾರಿಕವಾಗಿ ಕೊನೆಗೊಳಿಸಿದ ರಾಜ್ಯಪಾಲ ರವಿ ಗುರುವಾರ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿದ್ದರು. ಇದು ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ 207 ಸ್ಥಾನಗಳನ್ನು ಗಳಿಸಿ ಬಹುಮತ ಪಡೆದಿದ್ದ ಬಿಜೆಪಿಗೆ ರಾಜ್ಯದಲ್ಲಿ ಮೊದಲ ಬಾರಿ ಸರ್ಕಾರ ರಚಿಸಲು ದಾರಿ ಮಾಡಿಕೊಟ್ಟಿತು. ಇನ್ನೂ ನಿನ್ನೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಣೆಯಾದ ನಂತರ ಮಾತನಾಡಿದ ಸುವೇಂದು ಅಧಿಕಾರಿ, “ರಾಜ್ಯದಲ್ಲಿ ಇದುವರೆಗೆ ಇದ್ದ…
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹೋಟೆಲ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಸಾವನ್ನಪ್ಪಿದ ಘಟನೆ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ನಾಗರಬಾವಿಯ ಹೋಟೆಲ್ವೊಂದರಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಸಲಾಗುತ್ತಿದೆ. ನಾಗರಬಾವಿಯ ಹೊರವರ್ತುಲ ರಸ್ತೆಯ ಪಕ್ಕದ ಸರ್ವಿಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ತಡರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಅಲ್ಲೇ ಕೆಲಸ ಮಾಡುತ್ತಿದ್ದ 8 ಮಂದಿ ಹೋಟೆಲ್ ಸಿಬ್ಬಂದಿ ವಾಸವಿದ್ದ ಹೋಟೆಲ್ ಕಟ್ಟಡದ ಮೇಲಿನ ಮಹಡಿಗೂ ಬೆಂಕಿ ವ್ಯಾಪಿಸಿದೆ. ದಟ್ಟ ಹೊಗೆಯಿಂದಾಗಿ ಸಿಬ್ಬಂದಿ ಭೀಮಾ, ಶಿವಾನಂದ್, ಸತೀಶ್, ರಾಜಕುಮಾರ್ ಸೇರಿದಂತೆ ಐವರು ಅಸ್ವಸ್ಥಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ದುರದೃಷ್ಟವಶಾತ್ 45 ವರ್ಷದ ರಾಜಕುಮಾರ್ ಅವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ…
ಯಾದಗಿರಿ : ಯಾದಗಿರಿ ಜಿಲ್ಲೆಯ ಗುರುಮಠಕಲ್ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಜಾತಿ ನಿಂದನೆ ಪ್ರಕರಣದಿಂದ ಆರೋಪಿಯನ್ನು ಕೈಬಿಡಲು ಈ ಹಣಕ್ಕೆ ಬೇಡಿಕೆಯಿಟ್ಟಿದ್ದು, ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ಜಾಕೀರ್ ಇನಾಂದಾರ್ ನೇತೃತ್ವದ ತಂಡ ದಾಳಿ ನಡೆಸಿ, ಅಧಿಕಾರಿಯನ್ನು ವಶಕ್ಕೆ ಪಡೆದಿದೆ. ಗುರುಮಠಕಲ್ ತಾಲೂಕಿನ ಗೋಪಾಳಪುರ ಗ್ರಾಮದ ಆನಂದ್ ಎಂಬುವವರ ವಿರುದ್ಧ ಜಾತಿ ನಿಂದನೆ ಪ್ರಕರಣವೊಂದು ದಾಖಲಾಗಿತ್ತು. ಈ ಕೇಸ್ನಲ್ಲಿ ಅವರನ್ನು ಬಂಧಿಸದೆ ಇರಲು ಮತ್ತು ಇನ್ನೊಂದು ಕೇಸ್ನಲ್ಲಿ ಅವರ ಹೆಸರನ್ನು ಕೈಬಿಡಲು ಪಿಐ ವೀರಣ್ಣ ದೊಡ್ಡಮನಿ ಅವರು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆನಂದ್ ದೂರು ನೀಡಿದ್ದಾರೆ. ಈ ಎರಡು ಪ್ರಕರಣಗಳ ಇತ್ಯರ್ಥಕ್ಕಾಗಿ ಒಟ್ಟು ಒಂದು ಲಕ್ಷ ರೂಪಾಯಿ ಹಣವನ್ನು ಪಡೆಯುವ ಒಪ್ಪಂದವಾಗಿತ್ತು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಲೋಕಾಯುಕ್ತ ದಾಳಿ: ಲಂಚ ನೀಡಲು ಇಚ್ಛಿಸದ ವ್ಯಕ್ತಿಯು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ…
ಬೆಂಗಳೂರು : ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿ ಸೇರಿದಂತೆ ಮೂವರನ್ನು ಇದೀಗ ಇಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿ, ರಾಬಿನ್ ಖಂಡೇವಾಲ ಮತ್ತು ಸುನೀಶ್ ಹೆಗಡೆ ಎನ್ನುವವರನ್ನು ಇಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಈ ಬಿಟ್ಕಾಯಿನ್ ಹಗರಣದ ಜಾಡನ್ನು ಹಿಡಿದಿದ್ದ ಇಡಿ ಅಧಿಕಾರಿಗಳು, ತನಿಖೆಯನ್ನು ತೀವ್ರಗೊಳಿಸಿದ್ದರು. ಬಿಟ್ಕಾಯಿನ್ ವಿನಿಮಯ ಕೇಂದ್ರಗಳನ್ನು ಹ್ಯಾಕ್ ಮಾಡಿ ಕೋಟ್ಯಂತರ ರೂಪಾಯಿ ಮೌಲ್ಯದ ಡಿಜಿಟಲ್ ಹಣವನ್ನು ಲೂಟಿ ಮಾಡಿದ ಆರೋಪ ಇವರ ಮೇಲಿದೆ. ಈ ಹಿಂದೆ ಸಿಸಿಬಿ ಪೊಲೀಸರು ನಡೆಸಿದ್ದ ತನಿಖೆಯ ಆಧಾರದ ಮೇಲೆ ಇಡಿ ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಿತ್ತು. ಬಂಧಿತ ಆರೋಪಿಗಳಾದ ಶ್ರೀಕಿ ಮತ್ತು ಆತನ ತಂಡವು ಸರ್ಕಾರಿ ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಹ್ಯಾಕ್ ಮಾಡಿ ಹಣ ವರ್ಗಾವಣೆ ಮಾಡಿದ ಆರೋಪವನ್ನೂ ಎದುರಿಸುತ್ತಿದ್ದಾರೆ. ಕಳ್ಳತನ ಮಾಡಿದ ಬಿಟ್ಕಾಯಿನ್ಗಳನ್ನು ನಗದೀಕರಿಸಲು ರಾಬಿನ್ ಖಂಡೇವಾಲ ಮತ್ತು ಸುನೀಶ್ ಹೆಗಡೆ ನೆರವಾಗುತ್ತಿದ್ದರು ಎಂಬ ಬಲವಾದ ಶಂಕೆ…
ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಹೊಸ ಅಲೆ ಎಬ್ಬಿಸಲು ಸಜ್ಜಾಗುತ್ತಿರುವ ನಟ ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷಕ್ಕೆ ಆರಂಭದಲ್ಲೇ ಹಿನ್ನಡೆಯಾಗಿದೆ. ಮುಂಬರುವ ಚುನಾವಣೆಗಳಲ್ಲಿ ವಿಜಯ್ ಅವರ ಪಕ್ಷವು ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂಬ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಪಕ್ಷವು ವಿಜಯ್ಗೆ ಬೆಂಬಲ ನೀಡಲು ನಿರಾಕರಿಸುವ ಮೂಲಕ ದೊಡ್ಡ ಶಾಕ್ ನೀಡಿದೆ. ವಿಜಯ್ ಅವರು ಇತ್ತೀಚೆಗಷ್ಟೇ ವಿಜೃಂಭಣೆಯ ಸಾರ್ವಜನಿಕ ಸಮಾವೇಶ ನಡೆಸಿ ತಮ್ಮ ಪಕ್ಷದ ಸಿದ್ಧಾಂತಗಳನ್ನು ಘೋಷಿಸಿದ್ದರು. ಈ ವೇಳೆ ಅವರು ದ್ರಾವಿಡ ಸಿದ್ಧಾಂತ ಮತ್ತು ರಾಷ್ಟ್ರೀಯತೆಯ ಸಮತೋಲನದ ಬಗ್ಗೆ ಮಾತನಾಡಿದ್ದರು. ಆದರೆ, ಮುಸ್ಲಿಂ ಲೀಗ್ ನಾಯಕರು ಟಿವಿಕೆ ಪಕ್ಷದ ನಿಲುವುಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ತಾವು ವಿಜಯ್ ಅವರ ಜೊತೆ ಕೈಜೋಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದು ವಿಜಯ್ ಅವರ ರಾಜಕೀಯ ಲೆಕ್ಕಾಚಾರಗಳನ್ನು ಕೊಂಚ ತಲೆಕೆಳಗಾಗುವಂತೆ ಮಾಡಿದೆ. ಮುಸ್ಲಿಂ ಲೀಗ್ನ ಈ ನಿರ್ಧಾರವು ತಮಿಳುನಾಡಿನ ಅಲ್ಪಸಂಖ್ಯಾತ ಮತಗಳ ಮೇಲೆ ಪ್ರಭಾವ ಬೀರಬಹುದು…
ಮೈಸೂರು : ಭಾರತದ ಸರ್ವತೋಮುಖ ಪ್ರಗತಿಗೆ ಸಾಮಾಜಿಕ ಸಾಮರಸ್ಯ ಮತ್ತು ಭಾವನಾತ್ಮಕ ಏಕೀಕರಣ ಅತ್ಯಗತ್ಯ. ದೇಶದ ಪ್ರಗತಿಗೆ ಸಾಮಾಜಿಕ ಸಾಮರಸ್ಯವೇ ಅಡಿಪಾಯ. ಹಾಗಾಗಿ ಏಕರೂಪ ನಾಗರೀಕ ಸಂಹಿತೆ ಶೀಘ್ರದಲ್ಲೇ ಜಾರಿಯಾಗುವ ಬಗ್ಗೆ RSS ಮುಖ್ಯಸ್ಥ ಮೋಹನ್ ಭಾಗವತ್ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಜೆಎಸ್ಎಸ್ ಮಹಾವಿದ್ಯಾಪೀಠದ ಸುವರ್ಣ ಮಹೋತ್ಸವ ಉಪನ್ಯಾಸ ಮಾಲಿಕೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ಸಾಮರಸ್ಯವೇ ಪ್ರೇರಕ ಶಕ್ತಿ’ ಎಂಬ ವಿಷಯದ ಕುರಿತು ಅವರು ಗುರುವಾರ ವಿಶೇಷ ಉಪನ್ಯಾಸ ನೀಡಿದರು. ಸಮಾಜವು ಜಾತಿ ಮತ್ತು ಧರ್ಮದ ಸಂಕುಚಿತ ಮನೋಭಾವದಿಂದ ಹೊರಬರಬೇಕು ಎಂದು ಅವರು ಈ ಸಂದರ್ಭದಲ್ಲಿ ಕರೆ ನೀಡಿದರು. ಜನಸಂಖ್ಯಾ ನೀತಿಯ ಕುರಿತು ಮಾತನಾಡಿದ ಮೋಹನ್ ಭಾಗವತ್, ಸರ್ಕಾರವು ಮುಂದಿನ ನೂರು ವರ್ಷಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ದೀರ್ಘಾವಧಿಯ ನೀತಿಗಳನ್ನು ರೂಪಿಸಬೇಕು. ಜನಸಂಖ್ಯಾ ಅಸಮತೋಲನವು ದೊಡ್ಡ ಸವಾಲಾಗಿದ್ದು, ಯಾವುದೇ ತಾರತಮ್ಯವಿಲ್ಲದೆ ಇದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಇನ್ನು ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ನಿರ್ಧಾರಗಳು ಸಾಮೂಹಿಕವಾಗಿ…
ಕಲಬುರ್ಗಿ : ಬಿಇಡಿ ಪರೀಕ್ಷಾ ಅಕ್ರಮ ಬಯಲಿಗೆಳೆದ ಗುಲ್ಬರ್ಗಾ ವಿವಿ ಕುಲಪತಿ ಪ್ರೊ. ಶಶಿಕಾಂತ್ ಅವರಿಗೆ ಆ್ಯಸಿಡ್ ದಾಳಿಯ ಬೆದರಿಕೆ ಬಂದಿದೆ. ಮರುಮೌಲ್ಯಮಾಪನದಲ್ಲಿ ಅಂಕ ಕಡಿಮೆಯಾದರೆ ದಾಳಿ ಮಾಡುವುದಾಗಿ ಅನಾಮಧೇಯ ಪತ್ರ ಬಂದಿದೆ. 2024ರಲ್ಲಿ ನಡೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ನಡೆದಿದ್ದ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ಕುಲಪತಿಗಳು ಪತ್ತೆಹಚ್ಚಿ ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ಈ ಬೆದರಿಕೆ ಹಾಕಲಾಗಿದೆ. ಬೆದರಿಕೆ ಪತ್ರದ ಹಿನ್ನೆಲೆ: 2024ರಲ್ಲಿ ನಡೆದಿದ್ದ ಬಿಇಡಿ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾರೀ ಭ್ರಷ್ಟಾಚಾರ ಮತ್ತು ಅಕ್ರಮಗಳು ನಡೆದಿರುವುದು ಕುಲಪತಿಗಳ ಗಮನಕ್ಕೆ ಬಂದಿತ್ತು. ಈ ಹಗರಣದ ಆಳಕ್ಕೆ ಇಳಿದಿದ್ದ ಪ್ರೊ. ಶಶಿಕಾಂತ್ ಅವರು, ನೂರಾರು ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಅಂಕಗಳನ್ನು ಹೆಚ್ಚಿಸಿರುವ ಜಾಲವನ್ನು ಪತ್ತೆಹಚ್ಚಿದ್ದರು. ಈ ಸಂಬಂಧ ಅವರು ಸಮಗ್ರ ತನಿಖೆಗೆ ಆದೇಶಿಸಿ, ಮರುಮೌಲ್ಯಮಾಪನಕ್ಕೆ ಸೂಚನೆ ನೀಡಿದ್ದರು. ಇದರಿಂದ ಆತಂಕಕ್ಕೊಳಗಾದ ಅನಾಮಧೇಯ ವ್ಯಕ್ತಿಗಳು ಈ ಬೆದರಿಕೆ ಪತ್ರವನ್ನು ಕಳುಹಿಸಿದ್ದಾರೆ ಎನ್ನಲಾಗಿದೆ. ಪತ್ರದಲ್ಲಿನ ಅಂಶಗಳು: ಬಂದಿರುವ ಅನಾಮಧೇಯ ಪತ್ರದಲ್ಲಿ ಅತ್ಯಂತ ಕೀಳು ಮಟ್ಟದ ಭಾಷೆಯನ್ನು ಬಳಸಲಾಗಿದ್ದು,…














