Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನಿಂದ 47 ಜೀವಂತ ಆಮೆಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ಬ್ಯಾಕಾಂಕ್‌ನಿಂದ ಬಂದಿಳಿದ ಪ್ರಯಾಣಿಕನನ್ನು ಬಂಧಿಸಲಾಗಿದೆ. ಈ ಪ್ರಾಣಿಗಳನ್ನು ಅಕ್ರಮವಾಗಿ ಭಾರತಕ್ಕೆ ಸಾಗಿಸಲು ಯತ್ನಿಸಲಾಗುತ್ತಿದ್ದು, ಕಳ್ಳ ಸಾಗಾಣಿಕೆ ದಂಧೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ ಎಂಬ ಶಂಕೆ ವ್ಯಕ್ತವಾಗಿದೆ. ಕೆಲವರು ಆಮೆಗಳು ಅದೃಷ್ಟ ತರಲಿವೆ ಎಂಬ ನಂಬಿಕೆಯನ್ನು ಬಳಸಿಕೊಂಡು ಜನರಿಗೆ ಮಾರಾಟ ಮಾಡುವುದರಿಂದ ಇಂತಹ ಅಕ್ರಮ ದಂಧೆಗಳು ಹೆಚ್ಚಾಗುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಖಚಿತ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿ, ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ವೇಳೆ ವಿವಿಧ ಜಾತಿಯ ಆಮೆಗಳು ಪತ್ತೆಯಾಗಿವೆ. ವಶಪಡಿಸಿಕೊಂಡ ಪ್ರಾಣಿಗಳಲ್ಲಿ ರೆಡ್ ಫೂಟೆಡ್ ಆಮೆ, ಆಫ್ರಿಕನ್ ಸ್ಪರ್‌ಡ್ ಆಮೆ, ಅರ್ಜೆಂಟೀನಾದ ಕಪ್ಪು-ಬಿಳಿ ಟೆಗು ಹಾಗೂ ಗೋಯಲ್ಡಿಯ ಮಾರ್ಮೊಸೆಟ್ ಸೇರಿದಂತೆ ಅಪರೂಪದ ಜಾತಿಗಳು ಸೇರಿವೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಕಾಯ್ದೆ 1962ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಬಂಧಿತ ಪ್ರಯಾಣಿಕನನ್ನು ಮುಂದಿನ ಕ್ರಮಕ್ಕಾಗಿ ವನ್ಯಜೀವಿ (ರಕ್ಷಣೆ)…

Read More

ಹಾವೇರಿ: ರಾಜ್ಯದಲ್ಲಿ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ಹಾವೇರಿ ಜಿಲ್ಲೆಯಲ್ಲಿ ಮತ್ತೊಂದು ಬೃಹತ್ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿಯ ಚಿನ್ನದ ಅಂಗಡಿಯೊಂದಕ್ಕೆ ನುಗ್ಗಿದ ಖದೀಮರು ಸಾರ್ವಜನಿಕರಲ್ಲಿ ಭೀತಿ ಮೂಡಿಸುವ ರೀತಿಯಲ್ಲಿ ಸುಮಾರು 70 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ಇಡೀ ದರೋಡೆಯ ದೃಶ್ಯಗಳು ಅಂಗಡಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಚಿಕ್ಕಾಂಶಿ ಹೊಸೂರು ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ಸಂಭವಿಸಿದೆ. ಇಲ್ಲಿನ ಸ್ಥಳೀಯ ನಿವಾಸಿ ಅಣ್ಣಪ್ಪ ಭಜಂತ್ರಿ ಅವರಿಗೆ ಸೇರಿದ ಜುವೆಲ್ಲರಿ ಶಾಪ್‌ ಅನ್ನು ಗುರಿಯಾಗಿಸಿಕೊಂಡ ಕಳ್ಳರು ಈ ಕೃತ್ಯ ಎಸಗಿದ್ದಾರೆ. ಎಂದಿನಂತೆ ವ್ಯಾಪಾರ ಮುಗಿಸಿ ಅಂಗಡಿ ಮುಚ್ಚಿದ್ದ ಸಮಯದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ತಿಜೋರಿ ಸಮೇತ ಎಸ್ಕೇಪ್ ಆದ ಕಳ್ಳರು! ಅಂಗಡಿಯ ಬೀಗ ಮುರಿದು ಒಳನುಗ್ಗಿದ ದರೋಡೆಕೋರರು ಅಂದಾಜು 300 ಗ್ರಾಂ ಚಿನ್ನ ಹಾಗೂ ಬರೋಬ್ಬರಿ 25 ಕೆಜಿ ತೂಕದ…

Read More

ಕಾಲಿವುಡ್ ಚಿತ್ರರಂಗದ ಖ್ಯಾತ ನಟ ಜಯಂ ರವಿ ಅವರ ವೈವಾಹಿಕ ಜೀವನದಲ್ಲಿ ಎದ್ದಿರುವ ಬಿರುಗಾಳಿ ಈಗ ಮತ್ತೊಂದು ಸ್ಫೋಟಕ ಹಂತಕ್ಕೆ ತಲುಪಿದೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯೊಂದರಲ್ಲಿ ಜಯಂ ರವಿ ಅವರು ತಮ್ಮ ಪತ್ನಿ ಆರತಿ ಮತ್ತು ಅವರ ಕುಟುಂಬದ ವಿರುದ್ಧ ಗಂಭೀರ ಆರೋಪಗಳನ್ನು ಮಾಡುತ್ತಾ, ತೀವ್ರ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕೂಗಾಡಿ, ಕಿರುಚಾಡಿ ತಮ್ಮ ಆಕ್ರೋಶ ಹಾಗೂ ನೋವನ್ನು ಹೊರಹಾಕಿರುವ ನಟ, ತಮ್ಮ ಖಾಸಗಿ ಬದುಕಿನಲ್ಲಿ ಎದುರಿಸುತ್ತಿರುವ ನರಕಯಾತನೆಯನ್ನು ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದ್ದಾರೆ. ಪತ್ನಿಯೊಂದಿಗಿನ ಮುನಿಸು ಕೇವಲ ದಾಂಪತ್ಯ ಕಲಹಕ್ಕೆ ಸೀಮಿತವಾಗದೆ, ಮಕ್ಕಳ ಭೇಟಿಗೂ ಮುಳ್ಳಾಗಿದೆ ಎಂದು ರವಿ ಅಳಲು ತೋಡಿಕೊಂಡಿದ್ದಾರೆ. “ನನ್ನ ಸ್ವಂತ ಮಕ್ಕಳನ್ನು ನೋಡಲು ನನಗೆ ಸಾಧ್ಯವಾಗುತ್ತಿಲ್ಲ. ಅವರಿಗೆ ಫೋನ್ ಮಾಡಲು ಸಹ ಬಿಡುತ್ತಿಲ್ಲ. ಮಕ್ಕಳನ್ನು ನಾನು ಭೇಟಿಯಾಗಬಾರದು ಎಂಬ ಕಾರಣಕ್ಕೆ ಶಾಲೆಗೆ ಬಾಡಿಗಾರ್ಡ್‌ಗಳನ್ನು ಕಳುಹಿಸಿ ತಡೆಹಿಡಿಯಲಾಗಿದೆ” ಎಂದು ಜಯಂ ರವಿ ಆರೋಪಿಸಿದ್ದಾರೆ. ಮಕ್ಕಳನ್ನು ನೋಡಲಾಗದ ಈ ತೀವ್ರ ನೋವಿನಿಂದಾಗಿ ಮನನೊಂದು ತಾವೇ ಕೈಗಳನ್ನು ಕುಯ್ದುಕೊಂಡು ಆತ್ಮಹತ್ಯೆಗೂ…

Read More

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ತನ್ನ ತನಿಖೆಯನ್ನು ತೀವ್ರಗೊಳಿಸಿದೆ. ಇದರ ಭಾಗವಾಗಿ, ಇದೀಗ ದೇಶದ ರಾಜಧಾನಿ ದೆಹಲಿಯಲ್ಲಿ ಸಿಬಿಐ ಅಧಿಕಾರಿಗಳು ಪ್ರಮುಖ ಕಾರ್ಯಾಚರಣೆ ನಡೆಸಿ ಉಪನ್ಯಾಸಕಿಯೊಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಉಪನ್ಯಾಸಕಿಯನ್ನು ಮನಿಷಾ ಗುರುನಾಥ ಎಂದು ಗುರುತಿಸಲಾಗಿದೆ. ಈಕೆ ಪ್ರಶ್ನೆ ಪತ್ರಿಕೆ ಸೋರಿಕೆ ಜಾಲದೊಂದಿಗೆ ನೇರ ಸಂಪರ್ಕ ಹೊಂದಿದ್ದರು ಮತ್ತು ಅಭ್ಯರ್ಥಿಗಳಿಗೆ ಅಕ್ರಮವಾಗಿ ಪ್ರಶ್ನೆ ಪತ್ರಿಕೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮನಿಷಾ ಅವರ ಬಂಧನದೊಂದಿಗೆ ಈ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿಸಲ್ಪಟ್ಟ ಒಟ್ಟು ಆರೋಪಿಗಳ ಸಂಖ್ಯೆ ಇದೀಗ 9ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಸಿಬಿಐ ವಶದಲ್ಲಿರುವ ಉಪನ್ಯಾಸಕಿ ಮನಿಷಾ ಸೇರಿದಂತೆ ಬಂಧಿತ ಒಂಬತ್ತೂ ಆರೋಪಿಗಳನ್ನು ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಜಾಲದ ಹಿಂದೆ ದೇಶದ ಬೇರೆ ಬೇರೆ ರಾಜ್ಯಗಳ ದೊಡ್ಡ ಕೈವಾಡವಿರುವ…

Read More

ಬೆಂಗಳೂರು : ತಾಂತ್ರಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ ಮೇ 17ರಂದು ಸಂಚಾರ ವ್ಯತ್ಯಯ ಉಂಟಾಗಲಿದೆ. ಹೊಸಹಳ್ಳಿ-ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಒಟ್ಟು ಎರಡು ಗಂಟೆಗಳ ಅವಧಿಗೆ ಮೆಟ್ರೋ ರೈಲು ಸಂಚಾರದಲ್ಲಿ ಭಾಗಶಃ ವ್ಯತ್ಯಯವುಂಟಾಗಲಿದೆ. ನೇರಳೆ ಮಾರ್ಗದ ಇತರ ಭಾಗಗಳು ಹಾಗೂ ಹಸಿರು, ಹಳದಿ ಮಾರ್ಗಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಬೆಂಗಳೂರು ಬಿಎಂಆರ್‌ಸಿಎಲ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್‌ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜಿನ ನಡುವೆ ನಾಳೆ ತುರ್ತು ಮತ್ತು ಅಗತ್ಯ ಸುರಕ್ಷತಾ ಕಾಮಗಾರಿಗಳು ನಡೆಯಲಿವೆ. ಈ ತಾಂತ್ರಿಕ ಕಾರಣದಿಂದಾಗಿ, ನಾಳೆ ಬೆಳಗ್ಗೆ 2 ಗಂಟೆಗಳ ಕಾಲ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಬೆಳಿಗ್ಗೆ 9 ಗಂಟೆಯ ನಂತರ ಈ ಮಾರ್ಗದಲ್ಲಿ ಎಂದಿನಂತೆ ರೈಲುಗಳು ಸಂಚರಿಸಲಿವೆ.…

Read More

ಬೆಂಗಳೂರು : ಅತಿ ಹೆಚ್ಚು ಜನಸಂದಣಿ ಹೊಂದಿರುವ ದೇಶದ ನಿಲ್ದಾಣಗಳ ಪೈಕಿ ಒಂದಾದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ತಲುಪಿದೆ. ಈ ವಿಮಾನ ನಿಲ್ದಾಣದಿಂದ 2025-26ನೇ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಸಂಚಾರ ನಡೆಸಿದ್ದಾರೆ. ಅದೇ ರೀತಿ, 532,000 ಮೆಟ್ರಿನ್​ ಟನ್​ ಸರಕುಗಳನ್ನು ಸಾಗಣೆ ಮಾಡಲಾಗಿದೆ ಎಂಬ ಅಂಶ ತಿಳಿದುಬಂದಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ನ 134 ನೇ ಮಂಡಳಿ ಸಭೆಯಲ್ಲಿ, 2025-26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕೈಗೊಂಡ ಪ್ರಮುಖ ಸಾಧನೆಗಳು, ಕಾರ್ಯಕ್ಷಮತೆಯ ಮುಖ್ಯಾಂಶಗಳು ಮತ್ತು ಅಭಿವೃದ್ಧಿ ಉಪಕ್ರಮಗಳ ಪರಿಶೀಲನಾ ಸಭೆಯಲ್ಲಿ ಈ ವಿವರ ನೀಡಲಾಗಿದೆ. ವಿಮಾನ ನಿಲ್ದಾಣದ ಅಧಿಕೃತ ಹೇಳಿಕೆಯ ಪ್ರಕಾರ, 2025-26ರ ಹಣಕಾಸು ವರ್ಷದಲ್ಲಿ ಬಿಎಲ್‌ಆರ್ ವಿಮಾನ ನಿಲ್ದಾಣವು 44.47 ಮಿಲಿಯನ್ ಪ್ರಯಾಣಿಕರನ್ನು…

Read More

ಬೆಂಗಳೂರು : 2 ಸಾವಿರ ಕೋಟಿ ರೂ. ನಕಲಿ ಐಟಿಸಿ ಜಾಲ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಕಲಿ ಐಟಿಸಿ ಜಾಲದ ಬಗ್ಗೆ ವಾಣಿಜ್ಯ ತೆರಿಗೆ ಇಲಾಖೆ ಇದೀಗ ತನಿಖೆ ಚುರುಕುಗೊಳಿಸಿದೆ ನಕಲಿ ಐಟಿಸಿ ಜಾಲದಲ್ಲಿ ನ್ಯಾಷನಲ್ ಟ್ರಾವೆಲ್ಸ್ ಹೆಸರು ಕೂಡ ತಳುಕು ಹಾಕಿಕೊಂಡಿದೆ ಈ ಒಂದು ನ್ಯಾಷನಲ್ ಟ್ರಾವೆಲ್ಸ್ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಸೇರಿದೆ ಎಂದು ಹೇಳಲಾಗಿದೆ. ವಾಣಿಜ್ಯ ತೆರಿಗೆ ಇಲಾಖೆಯಿಂದ ನ್ಯಾಷನಲ್ ಟ್ರಾವೆಲ್ಸ್ ಗೆ ಇದೀಗ ನೋಟಿಸ್ ಜಾರಿ ಮಾಡಲಾಗಿದೆ. ನ್ಯಾಷನಲ್ ಟ್ರಾವೆಲ್ಸ್ ಬಳಸಲಾಗಿದೆ. ಕೆಲವು ಲಾರಿಗಳನ್ನು ನ್ಯಾಷನಲ್ ಟ್ರಾವೆಲ್ಸ್ ಗುತ್ತಿಗೆ ಪಡೆದಿತ್ತು. ಆ ಲಾರಿಗಳಲ್ಲಿ ಭೌತಿಕವಾಗಿ ಸ್ಕ್ರಾಪ್ ಇಲ್ಲದಿದ್ದರೂ ನಕಲಿ ಬಿಲ್ ಮಾಡಲಾಗಿತ್ತು. ಸ್ಕ್ರಾಪ್ ಸಾಗಣೆ ಮಾಡಿರುವುದಾಗಿ ನಕಲಿ ಬಿಲ್ ಪಡೆದಿದ್ದ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ತನಿಖೆಯ ಭಾಗವಾಗಿ ನ್ಯಾಷನಲ್ ಟ್ರಾವೆಲ್ಸ್ ಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

Read More

ಕೊಪ್ಪಳ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವೆಯೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಅಭಿಮಾನಿಗಳು ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಅವರ ಹುಟ್ಟುಹಬ್ಬಕ್ಕೆ ಶುಭಕೋರಿ ಬ್ಯಾನರ್ ಹಾಕಿದ್ದು ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಶಾಸಕ ಬಸವರಾಜ್ ರಾಯರೆಡ್ಡಿ 2028ರವರೆಗೆ ಸಿದ್ದರಾಮಯ್ಯರೆ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನಗೆ ಗೊತ್ತಿರುವ ಮಟ್ಟಿಗೆ ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರೆ. ಇದು ನನ್ನ ನಂಬಿಕೆ. ವರಿಷ್ಠರು ಬದಲಾವಣೆ ಮಾಡಬೇಕು ಅಂದರೆ ಶಾಸಕರ ಸಭೆ ಕರೆಯಬೇಕು. ಶಾಸಕಾಂಗ ಪಕ್ಷದ ಸಭೆ ಕರೆಯಬೇಕು ಆದರೆ ಆ ಪರಿಸ್ಥಿತಿ ಉದ್ಭವಿಸಿಲ್ಲ. ಕೇರಳ ಮುಖ್ಯಮಂತ್ರಿ ಪ್ರಮಾಣ ವಚನಕ್ಕೆ ರಾಹುಲ್ ಗಾಂಧಿ ಬರಬಹುದು. ಆಗ ರಾಹುಲ್ ಗಾಂಧಿ ಜೊತೆಗೆ ಮುಖ್ಯಮಂತ್ರಿ ಚರ್ಚೆ ಮಾಡಬಹುದು. ಮೇ 30ರವರೆಗೆ ಸಂಪುಟ ಪುನರಚನೆ ಅಥವಾ ವಿಸ್ತರಣೆ ಮಾಡಬಹುದು ಮೂರು ವರ್ಷ ಆಯ್ತು ಸಂಪುಟದಲ್ಲಿ ಹೊಸಬರಿಗೆ ಅವಕಾಶ ಕೊಡಬೇಕು. ಜನಪರ…

Read More

ಬೆಂಗಳೂರು : ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದ ಶಾಸಕ ಜಿ.ಟಿ.ದೇವೇಗೌಡರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಕುತೂಹಲ ಮೂಡಿಸಿದರು. ಭೇಟಿ ಬಳಿಕ ಜಿ.ಟಿ.ದೇವೇಗೌಡ 2028ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದಲೇ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ಅನುಮಾನಗಳಿಗೆ ತೆರೆ ಎಳೆದಿದ್ದಾರೆ. ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಜಿಟಿಡಿ, ಜೆಡಿಎಲ್​ಪಿ ಸ್ಥಾನ ತಪ್ಪಿದ್ದಕ್ಕೆ ದೇವೇಗೌಡರ ಮೇಲೆ ಮುನಿಸಿಕೊಂಡಿದ್ದರು. ಈ ಹಿನ್ನೆಲೆ ಪಕ್ಷದ ಕಾರ್ಯಚಟುವಟಿಕೆಯಿಂದಲೂ ದೂರ ಉಳಿದಿದ್ದರು. ಈ ಮಧ್ಯೆ ಸಿಎಂ ಸಿದ್ದರಾಮಯ್ಯರನ್ನು ಶ್ಲಾಘಿಸಿ ನೀಡಿದ್ದ ಹೇಳಿಕೆಗಳು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಜಿ.ಟಿ.ದೇವೇಗೌಡರು ಕಾಂಗ್ರೆಸ್​ಗೆ ಸನಿಹವಾಗುತ್ತಿದ್ದಾರೆ ಎಂಬ ಚರ್ಚೆ ಕೂಡ ಬಲವಾಗಿ ಕೇಳಿ ಬಂದಿತ್ತು. ಆದರೆ, ಹೆಚ್.ಡಿ.ದೇವೇಗೌಡರ ಬೇಟಿ ಬಳಿಕ ಜಿ.ಟಿ.ದೇವೇಗೌಡರ ಹೇಳಿಕೆ ಹಲವು ಅನುಮಾನಗಳಿಗೆ ತೆರೆ ಎಳೆದಿದ್ದಾರೆ. ಅವರ ಈ ದಿಢೀರ್ ಭೇಟಿ ಸಾಕಷ್ಟು ಕುತೂಹಲಗಳಿಗೆ ಕಾರಣವಾಗಿತ್ತು. ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿ ಕೆಲ ಹೊತ್ತು ಸಮಾಲೋಚನೆ ನಡೆಸಿದರು. ಬಹುದಿನಗಳ ಬಳಿಕ ದೇವೇಗೌಡರ ಭೇಟಿಯಾದ ಅವರ ನಡೆ ಹಲವು ಕುತೂಹಲಗಳಿಗೆ…

Read More

ಬೆಳಗಾವಿ : RBI ನಿಯಮ ಉಲ್ಲಂಘಿಸಿ, 35 ಸಾವಿರ ಜನರಿಂದ ಸಾವಿರಾರು ಕೋಟಿ ಹಣ ಠೇವಣಿ ಸಂಗ್ರಹಿಸಿದ ಆರೋಪದಡಿ ಬಂಧಿಸಲ್ಪಟ್ಟ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಅವರ ಪ್ರಕರಣಕ್ಕೀಗ ಸಿಐಡಿ ಎಂಟ್ರಿ ಕೊಟ್ಟಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಶಿವಾನಂದ ನೀಲಣ್ಣವರ ಬಂಧನ ಮಾಡಿರುವ ಮಾಳಮಾರುತಿ ಪೊಲೀಸ್ ಠಾಣೆಗೆ ಬೆಂಗಳೂರಿನಿಂದ ಸಿಐಡಿ ಅಧಿಕಾರಿಗಳ ತಂಡ ಇಂದು ಬೆಳಗ್ಗೆ ಭೇಟಿ‌‌ ನೀಡಿತು. ಸಿಐಡಿ ಡಿವೈಎಸ್ಪಿ ನೇತೃತ್ವದ ತಂಡವು ಪ್ರಕರಣದ ಕುರಿತು ಮಾಹಿತಿ ಕಲೆ ಹಾಕುತ್ತಿದೆ. ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ ಅವರ ಬಳಿ ಹಲವು ಮಾಹಿತಿಯನ್ನು ಸಿಐಡಿ ತಂಡವು ಪಡೆದುಕೊಂಡಿತು. ಆರ್​ಬಿಐ ನಿಯಮ ಪಾಲಿಸದೇ 35,000 ಜನರಿಂದ ಠೇವಣಿ ಸಂಗ್ರಹಿಸಿರುವ ಸಂಬಂಧ ಮಾಳಮಾರುತಿ ಠಾಣೆಯಲ್ಲಿ ಶಿವಾನಂದ ನೀಲಣ್ಣವರ ವಿರುದ್ಧ ಪ್ರಕರಣ ದಾಖಲಾಗಿದ್ದು, ನಿನ್ನೆ ರಾತ್ರಿ ಆರೋಪಿನ್ನು ಬಂಧಿಸಲಾಗಿತ್ತು. ಎಸಿಪಿ ಸಂತೋಷ ಸತ್ಯನಾಯಕ ನೇತೃತ್ವದ ತಂಡವು ನಿನ್ನೆ ಇಡೀ ರಾತ್ರಿ ವಿಚಾರಣೆ ನಡೆಸಿದೆ. ಇಂದು ಬೆಳಗ್ಗೆ ಸ್ಥಳ‌ ಮಹಜರಿಗೆ ಕರೆದೊಯ್ಯಲಾಗಿದೆ. ತನಿಖಾಧಿಕಾರಿ ಎಸಿಪಿ ಸಂತೋಷ…

Read More