Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಎರಡನೇ ಮದುವೆಯಾಗಿದ್ದ ಗ್ರಹಿಣಿ ಶೈಲಜಾ (36) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ 27ನೇ ಕ್ರಾಸ್ ನಲ್ಲಿ ಈ ಒಂದು ಘಟನೆ ನಡೆದಿದೆ ವೆಂಕಟೇಶ್ ಎಂಬ ಅವರನ್ನು ಶೈಲಜಾ ಎರಡನೇ ಮದುವೆಯಾಗಿದ್ದರು ವೆಂಕಟೇಶ ಮನೆಯವರು ಚಿತ್ರಹಿಂಸೆ ಕೊಟ್ಟ ಆರೋಪ ಕೇಳಿ ಬಂದಿದೆ. ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬರುತ್ತಿದೆ. ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಗೆ ಮೃತಳ ಕುಟುಂಬಸ್ಥರು ದೂರು ನೀಡಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಅವಶ್ಯಕತೆ ಇಲ್ಲ ಅಂತ ಕನ್ನಡಪರ ಸಂಘಟನೆಗಳು ಹೇಳ್ತಿವೆ. ಸಿಎಂ ಕೂಡ ದ್ವಿಭಾಷಾ ಸೂತ್ರ ತಂದರೆ ಒಳ್ಳೆಯದು ಅಂತ ಹೇಳಿದ್ದಾರೆ. ದ್ವಿಭಾಷಾ ಸೂತ್ರ ಬಂದರೆ ಒಳ್ಳೆಯದು. ಈಗ ತ್ರಿಭಾಷಾ ಸೂತ್ರ ಇದೆ. ಇದು ಬದಲಾವಣೆ ಆಗಬೇಕಾದ್ರೆ ಚರ್ಚೆ ಆಗಬೇಕು. ಶಿಕ್ಷಕರ ಜೊತೆಯೂ ಮಾತಾಡ್ತೀವಿ, ಸಿಎಂ ಜೊತೆ ನಾವು ಮಾತಾಡಬೇಕು. ಎಲ್ಲಾ ಆಯಾಮಗಳಲ್ಲಿ ಚರ್ಚಿಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಹಾಗಾಗಿ ಯಾರೂ ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕೋದು ಬೇಡ. ಸಿಎಂ ಜೊತೆ ಮಾತಾಡಿ ಇಂದೇ ಈ ಬಗ್ಗೆ ನಿರ್ಧಾರ ಮಾಡ್ತೀವಿ ಎಂದು ಹೇಳಿದ್ದಾರೆ. ಈ ಹಿಂದೆಯೂ ಕನ್ನಡ ಮತ್ತು ಇಂಗ್ಲಿಷ್‌ ಭಾಷೆಗಳನ್ನ ಮಾತ್ರ ಒಳಗೊಂಡ ‘ದ್ವಿಭಾಷಾ ನೀತಿ’ಯನ್ನು ಜಾರಿಗೆ ತರಲು…

Read More

ಧಾರವಾಡ : ಕಳೆದ ಕೆಲವು ದಿನಗಳ ಹಿಂದೆ ಶಿವಮೊಗ್ಗ ಜೈಲಿಗೆ ಕೈದಿಗಳಿಗೆ ಡ್ರಗ್ಸ್ ಸಿಗರೇಟ್ ಇತರೆ ಮಾದಕ ವಸ್ತುಗಳನ್ನು ಪೂರೈಕೆ ಮಾಡಿದ ಪ್ರಕರಣ ನಡೆದಿತ್ತು. ಇದರ ಬೆನ್ನಲ್ಲೇ ಇದೀಗ ಧಾರವಾಡದಲ್ಲಿ ಜೈಲಿನ ವಾರ್ಡರ್ ಗಳೇ ಕೈದಿಗಳಿಗೆ ಗುಟ್ಕಾ ಸಿಗರೇಟ್ ಪೂರೈಕೆ ಮಾಡುತ್ತಿದ್ದು ಈ ಹಿನ್ನೆಲೆ ಮೂವರ ವಿರುದ್ಧ ಪೊಲೀಸರು ಇದೀಗ FIR ದಾಖಲಿಸಿದ್ದಾರೆ. ಹೌದು ಧಾರವಾಡದ ಕೇಂದ್ರ ಕಾರಾಗೃಹ ಅಂದ್ರೆ ಕೈದಿಗಳಿಗೆ ಭಯವೇ ಇಲ್ಲದಂತಾಗಿದೆ. ಹಣ ಕೊಟ್ಟರೆ ಕಾರಾಗೃಹದಲ್ಲಿ ಎಲ್ಲವೂ ಸಿಗುತ್ತದೆ ಎಂಬ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿತ್ತು. ಇದು ಸತ್ಯ ಎಂಬಂತೆ ಕಾರಾಗೃಹದಲ್ಲಿ ಘಟನೆಯೊಂದು ನಡೆದಿದೆ. ಕೈದಿಗಳಿಗೆ‌ ವಾರ್ಡರ್‌ಗಳೇ ನಿಷೇಧಿತ ತಂಬಾಕು ಉತ್ಪನ್ನಗಳನ್ನ ಪೂರೈಕೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬೇಲಿಯೇ ಎದ್ದು ಹೊಲ ಮೇಯಿತು ಎಂಬಂತೆ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿನ ಇಬ್ಬರು ವಾರ್ಡರ್‌ಗಳು ಕೈದಿಗಳಿಗೆ ಸಿಗರೇಟು, ಗುಟ್ಕಾ ಶೀಟ್‌ಗಳನ್ನ ಪೂರೈಕೆ ಮಾಡುತ್ತಿದ್ದರು. ಕೊನೆಗೆ ಇಬ್ಬರನ್ನೂ ರೆಡ್‌ಹ್ಯಾಂಡಾಗಿ ಹಿಡಿದಿರುವ ಧಾರವಾಡ ಉಪನಗರ ಠಾಣೆ ಪೊಲೀಸರು, ಕಾರಾಗೃಹದ ಇಬ್ಬರು ವಾರ್ಡರ್‌ ಹಾಗೂ…

Read More

ಅಲಹಾಬಾದ್ : ಮದುವೆಯಾದ ವ್ಯಕ್ತಿಯೊಂದಿಗೆ ಲಿವ್-ಇನ್ ರಿಲೇಶನ್‌ನಲ್ಲಿ ಇರುವುದನ್ನು ಕಾನೂನು ಅಪರಾಧ ಎಂದು ಪರಿಗಣಿಸುವುದಿಲ್ಲ. ಇಬ್ಬರೂ ಸ್ವಯಂ ಇಚ್ಛೆಯಿಂದ ಸಂಬಂಧದಲ್ಲಿ ಇದ್ದರೆ, ಅದು ಅವರ ವೈಯಕ್ತಿಕ ಆಯ್ಕೆ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಪ್ರಕರಣದಲ್ಲಿ, ವಿವಾಹಿತ ಪುರುಷ ಮತ್ತು ಮಹಿಳೆ ಒಟ್ಟಿಗೆ ಲಿವ್-ಇನ್ ರಿಲೇಶನ್‌ನಲ್ಲಿ ವಾಸಿಸುತ್ತಿದ್ದರು. ಇವರಿಗೆ ಕುಟುಂಬದಿಂದ ಮತ್ತು ಸಮಾಜದಿಂದ ಬೆದರಿಕೆ ಎದುರಾಗುತ್ತಿದ್ದ ಹಿನ್ನೆಲೆ, ತಮ್ಮ ಜೀವಕ್ಕೆ ರಕ್ಷಣೆ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಸ್ಪಷ್ಟವಾಗಿ ಹೇಳಿದ್ದು— “ಮದುವೆಯಾದ ವ್ಯಕ್ತಿಯೊಂದಿಗೆ ಲಿವ್-ಇನ್ ರಿಲೇಶನ್‌ನಲ್ಲಿ ಇರುವುದನ್ನು ಕಾನೂನು ಅಪರಾಧ ಎಂದು ಪರಿಗಣಿಸುವುದಿಲ್ಲ. ಇಬ್ಬರೂ ಸ್ವಯಂ ಇಚ್ಛೆಯಿಂದ ಸಂಬಂಧದಲ್ಲಿ ಇದ್ದರೆ, ಅದು ಅವರ ವೈಯಕ್ತಿಕ ಆಯ್ಕೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಆದರೆ ಕೋರ್ಟ್ ಮತ್ತೊಂದು ಮುಖ್ಯ ವಿಚಾರವನ್ನು ಕೂಡ ಒತ್ತಿ ಹೇಳಿದೆ. ಇಂತಹ ಸಂಬಂಧಗಳು ಸಮಾಜದ ದೃಷ್ಟಿಯಲ್ಲಿ ಒಪ್ಪಿಗೆಯನ್ನು ಪಡೆಯದೇ ಇರಬಹುದು, ಆದರೆ ಕಾನೂನಿನ ದೃಷ್ಟಿಯಲ್ಲಿ ಇದನ್ನು ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ವೈಯಕ್ತಿಕ ಸ್ವಾತಂತ್ರ್ಯ ಮತ್ತು…

Read More

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದ್ದು 1,210 ಆರಕ್ಷಕ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ರವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಮೇಲುಕೋಟೆ ವೈರಾಮುಡಿ ಬ್ರಹ್ಮೋತ್ಸವದ ಸಂಬಂಧ ಕುರಿತು ಪತ್ರಿಕಾಗೋಷ್ಠಿ ನಡಸಿ ಮಾತನಾಡಿದ ಅವರು ಮೇಲುಕೋಟೆ ಚೆಲುವ ನಾರಾಯಣ ಸ್ವಾಮಿ ದೇವಾಲಯದಲ್ಲಿ 2026 ನೇ ಸಾಲಿನ ವೈರಮುಡಿ ಬ್ರಹ್ಮೋತ್ಸವ ಮಾರ್ಚ್ 23 ರಿಂದ ಪ್ರಾರಂಭವಾಗಿ ಏಪ್ರಿಲ್ 04 ವರಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಮಾರ್ಚ್ 28 ರಂದು ಶ್ರೀ ವೈರಮುಡಿ ಕಿರೀಟಧಾರಣೆ ಉತ್ಸವ ನೆಡೆಯಲಿದ್ದು ಶ್ರೀವೈರಮುಡಿ ಬ್ರಹೋತ್ಸವ ಸಂಬಂಧ ದೇವಾಲಯ ಮತ್ತು ಇತರೆ ಇಲಾಖೆಗಳಿಂದ ಶ್ರೀಕ್ಷೇತ್ರದಲ್ಲಿ ಕೈಗೊಳ್ಳಬೇಕಾಗಿರುವ ಪೂರ್ವಸಿದ್ಧತೆ ಮತ್ತು ಮುಂಜಾಗ್ರತಾ ಕ್ರಮಗಳ ಸಿದ್ದತಾ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದ್ದು, ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಶ್ರೀವೈರಮುಡಿ ಬ್ರಹೋತ್ಸವ ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷದಷ್ಟು ಭಕ್ತಾದಿಗಳು ಮತ್ತು ಸಾರ್ವಜನಿಕರು…

Read More

ಮಂಡ್ಯ : ಕ್ಯಾನ್ ಬಾಟಲಿಗಳಿಗೆ ಪೆಟ್ರೋಲ್ ತುಂಬಿಸಿ ಕೊಟ್ಟರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು ಪೆಟ್ರೋಲ್ ಬಂಕ್ ಮಾಲೀಕರಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.ಪೆಟ್ರೋಲ್ ಬಂಕ್ ಮಾಲೀಕರ ಜೊತೆಗೆ ಈಗಾಗಲೇ ಸಭೆ ನಡೆಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಅಗತ್ಯ ಇರುವಷ್ಟು ಪೆಟ್ರೋಲ್ ಡೀಸೆಲ್ ಸಂಗ್ರಹವಿದೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು. ಕ್ಯಾನ್ ಗಳಿಗೆ ಪೆಟ್ರೋಲ್ ತುಂಬಿಸಿದರೆ ಬಂಕ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕ್ಯಾನ್, ಬಾಟಲಿಗಳಲ್ಲಿ ಪೆಟ್ರೋಲ್ ತುಂಬಿಸುವುದು ಸುರಕ್ಷಿತ ಕ್ರಮವಲ್ಲ. ಗೃಹ ಬಳಕೆ ಗ್ಯಾಸ್ ಸಮಸ್ಯೆ ಇಲ್ಲ ಸಾರ್ವಜನಿಕರು ಆತಂಕ ಪಡಬೇಕಿಲ್ಲ ಗ್ಯಾಸ್ ಬುಕಿಂಗ್ ಆನ್ಲೈನ್ ಸಮಸ್ಯೆ ಸರಿಪಡಿಸಲು ಸೂಚನೆ ನೀಡಿದ್ದೇನೆ. ಕಾಳಸಂತೆಯಲ್ಲಿ ಗೃಹ ಬಳಕೆ ಸಿಲಿಂಡರ್ ಮಾರಾಟವಾದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಗ್ಯಾಸ್ ಏಜೆನ್ಸಿಗಳ ಮಾಲೀಕರಿಗೆ ಮಂಡ್ಯ ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್ ಎಚ್ಚರಿಕೆ ನೀಡಿದರು.

Read More

ನವದೆಹಲಿ : ಇಂದಿನ ಕೋರಿಕೆ ಸಂಪೂರ್ಣವಾಗಿ ಸುರಕ್ಷಿತ ಮತ್ತು ಸ್ಥಿರವಾಗಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ನಲ್ಲಿ ಯಾವುದೇ ಕೊರತೆ ಇಲ್ಲ ಎಂದು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಇದೀಗ ಮಾಹಿತಿ ನೀಡಿದೆ. ಇತ್ತೀಚಿನ ದಿನಗಳಲ್ಲಿ ಸೃಷ್ಟಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯ ವದಂತಿಗಳಿಗೆ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸ್ಪಷ್ಟನೆ ನೀಡಿದೆ. ದೇಶದಲ್ಲಿ ಇಂಧನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಮತ್ತು ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ ಎಂದು ಕಂಪನಿ ತಿಳಿಸಿದೆ.ಎಲ್ಲಾ ಪೆಟ್ರೋಲ್ ಬಂಕ್‌ಗಳಿಗೆ ನಿರಂತರವಾಗಿ ಇಂಧನ ಸರಬರಾಜು ಮಾಡಲಾಗುತ್ತಿದ್ದು, ಅಗತ್ಯವಿರುವಷ್ಟು ದಾಸ್ತಾನು ಲಭ್ಯವಿದೆ ಎಂದು ಕಂಪನಿಯು ಸಾರ್ವಜನಿಕರಿಗೆ ಭರವಸೆ ನೀಡಿದೆ.

Read More

ಕೋಲಾರ : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲಾ ಕೋರ್ಟ್ ಗಳಿಗೆ ಸೇರಿದಂತೆ ಸರಕಾರಿ ಕಚೇರಿಗಳಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇಮೇಲ್ ಸಂದೇಶ ಕಳುಸಿದ್ದ ಪ್ರಕರಣಗಳು ನಡೆದಿದ್ದವು. ಇದೀಗ ಕೋಲಾರ ಆರ್ ಟಿ ಓ ಕಚರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಕಿಡಿಗೇಡಿಗಳು ಆರ್‌ಟಿಓ ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಸಂದೇಶ ಕಳುಹಿಸಿದ್ದಾರೆ. ಅಪರಿಚಿತ ಇಮೇಲ್ ಐಡಿ ಇಂದ ಈ ಒಂದು ಬೆದರಿಕೆ ಸಂದೇಶ ಬಂದಿದೆ. ಘಟನಾ ಸ್ಥಳಕ್ಕೆ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೋಲಾರ ನಗರ ಪೋಲಿಸರಿಂದಲೂ ಆರ್‌ಟಿಓ ಕಚೇರಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ.

Read More

ಉತ್ತರಪ್ರದೇಶ : ಉತ್ತರ ಪ್ರದೇಶದ ಆಯೋಧ್ಯೆಯಲ್ಲಿ ಇಂದು ರಾಮ ನವಮಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಇದೇ ವೇಳೆ ಶ್ರೀ ರಾಮಲಲ್ಲ ಹಣೆಗೆ ಸೂರ್ಯ ರಶ್ಮಿ ತಿಲಕ ನೋಡಿ ಭಕ್ತರು ಪುನೀತರಾದರು. ಸೂರ್ಯ ರಶ್ಮಿ ನೇರವಾಗಿ ರಾಮಲಲ್ಲ ವಿಗ್ರಹದ ಹಣೆಗೆ ಸ್ಪರ್ಶಿಸಿದ್ದು ರಾಮಲಲ್ಲಾಗೆ ಸೂರ್ಯನ ತಿಲಕವಿಟ್ಟಂತೇ ಕಾಣಿಸಿತು. ಸುಮಾರು 4 ನಿಮಿಷಗಳ ಕಾಲ ರಾಮಲಲ್ಲ ಹಣೆಗೆ ಸೂರ್ಯ ರಶ್ಮಿ ತಿಲಕ ಇತ್ತು.ಅಯ್ಯೋಧ್ಯಯಲ್ಲಿ ರಾಮ ಲಾಲ ದರ್ಶನ ಪಡೆದ ಸಹಸ್ರಾರ ಭಕ್ತರು, ಕರ್ನಾಟಕದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದಂತಹ ಕಪ್ಪು ಶಿಲೆಯಲ್ಲಿ ಶ್ರೀ ರಾಮನ ಸುಮಾರು 15 ಅಡಿ ಎತ್ತರದ ಭವ್ಯ ಮೂರ್ತಿಗೆ ಇಂದು ವಿಶೇಷವಾದ ಪೂಜೆ ಪುನಸ್ಕಾರ ಹಾಗೂ ವಿಶಿಷ್ಟವಾದ ಅಲಂಕಾರ ನೆರವೇರಿಸಲಾಯಿತು.

Read More

ಬೆಂಗಳೂರು : ಬರ್ತಡೇ ಪಾರ್ಟಿ ಆಚರಣೆಗಾಗಿ ದರೋಡೆ ಮಾಡಿದ ಐವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ದರೋಡೆ ಮಾಡಿದ್ದ ಐವರನ್ನು ಇದೀಗ ಬಂಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೋಲಿಸರಿಂದ ಕಾರ್ಯಾಚರಣೆ ನಡೆದಿದೆ. ಮುನೇಗೌಡ, ಆನಂದ, ಗಗನ, ತಿಲಕ್ ಮತ್ತು ಆಕಾಶ್ ಬಂದಿದ ಆರೋಪಿಗಳು ಎಂದು ತಿಳಿದುಬಂದಿದೆ. ನಾಗದೇವ ಹಳ್ಳಿಯ ಗೀತಂ ವಿಶ್ವವಿದ್ಯಾಲಯ ಬಳಿ ವಿದ್ಯಾರ್ಥಿಗಳನ್ನು ಬೆದರಿಸಿ ದರೋಡೆ ಮಾಡಿದ್ದರು. ದೊಡ್ಡಬಳ್ಳಾಪುರದ ಹರವಲಯದಲ್ಲಿರುವ ಗೀತಂ ವಿಶ್ವವಿದ್ಯಾಲಯದ ಬಳಿ ವಿದ್ಯಾರ್ಥಿಗಳನ್ನು ಬೆದರಿಸಿ ಸುಲಿಗೆ ಮಾಡಿದ್ದರು. ಆನಂದನ ಬರ್ತಡೆ ಪಾರ್ಟಿ ಮಾಡಲು ಈ ಒಂದು ಗ್ಯಾಂಗ್ ದರೋಡೆ ಮಾಡಿತ್ತು.ಪಿಜಿ ಮೇಲೆ ಹಲ್ಲೆ ನಡೆಸಿ ಫೋನ್ ಪೇ ಮೂಲಕ ಹಣ ಸುಲಿಗೆ ಮಾಡಿದ್ದಾರೆ. ಹಲ್ಲೆಗೆ ಒಳಗಾದ ಬಿಇ ವಿದ್ಯಾರ್ಥಿಗಳು ನೀಡಿದ ದೂರಿನ ಮೇರೆಗೆ ಕೇಸ್ ದಾಖಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಂತರ ಠಾಣೆ ಪೋಲಿಸರು ಪ್ರಕರಣದ ಕಲಿಸಿಕೊಂಡು ಐವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Read More