Author: kannadanewsnow05

ವಿಜಯಪುರ : ವಿಜಯಪುರದಲ್ಲಿ ಬೀದಿ ನಾಯಿಗಳ ಅಟ್ಟಹಾಸ ಮಿತಿಮೀರಿದ್ದು, ನಡು ರಸ್ತೆಯಲ್ಲಿಯೇ ಪುಟ್ಟ ಮಗುವಿನ ಮೇಲೆ ಎರಡು ಬೀದಿ ನಾಯಿಗಳು ಭೀಕರವಾದ ದಾಳಿ ಮಾಡಿದ್ದು, ರಸ್ತೆಯಿಂದಲೇ ಬಾಲಕನನ್ನು ಎಳೆದೊಯ್ದಿರುವ ಘಟನೆ ವರದಿಯಾಗಿದೆ. ಕೇವಲ ಒಂದೇ ವಾರದಲ್ಲಿ ಹಲವು ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ವಿಜಯಪುರ ನಗರದಲ್ಲಿ ಈ ಒಂದು ಘಟನೆ ನಡೆದಿದ್ದು, ನಿನ್ನೆ ರಾಜಕುಮಾರ್ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ. ಬಾಲಕನ ಬೆನ್ನಿನಲ್ಲಿ ಎರಡು ಇಂಚಿನಷ್ಟು ಆಳವಾದ ಗಾಯವಾಗಿದ್ದು ಸದ್ಯ ಐಸಿಯುನಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ ರಸ್ತೆಯ ಮೇಲೆ ದಾಳಿ ಮಾಡಿದ ನಾಯಿಗಳು ರಸ್ತೆಯ ಪಕ್ಕದಲ್ಲಿ ಮಗುವನ್ನು ಎಳೆದುಕೊಂಡು ಹೋಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಬೆಚ್ಚಿ ಬೀಳಿಸುವ ವಿಡಿಯೋ ಸೆರೆಯಾಗಿದೆ.

Read More

ತಮಿಳುನಾಡು : ತಮಿಳುನಾಡಿನಲ್ಲಿ ಈ ಬಾರಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಭಾರಿ ಇತಿಹಾಸ ನಿರ್ಮಾಣ ಮಾಡಿದ್ದು ಇದೀಗ ಇನ್ನೆರಡು ದಿನಗಳಲ್ಲಿ ವಿಜಯ್ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಈಗಾಗಲೇ ಕಾಂಗ್ರೆಸ್ ನೊಂದಿಗೆ ವಿಜಯ್ ಮೈತ್ರಿ ಮಾಡಿಕೊಂಡಿದ್ದು, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಗೆ ಆಹ್ವಾನಿಸಿದ್ದಾರೆ ಎಂದು ತಿಳಿದುಬಂದಿದೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಗೆ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ ಅವರು ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭದಲ್ಲಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಳ್ಳುವ ಸಾಧ್ಯತೆ ಇದೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪಾಲ್ಗೊಳ್ಳುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು ರಾಜ್ಯಪಾಲ ರಾಜೇಂದ್ರ ಅವರನ್ನು ಭೇಟಿಯಾಗಿ ವಿಜಯ ಅವರು ಹಕ್ಕು ಮಾಡಿಸಿದ್ದಾರೆ. ಒಟ್ಟು 234 ಕ್ಷೇತ್ರಗಳ ಪೈಕಿ ಪಕ್ಷ 108…

Read More

ಪಶ್ಚಿಮಬಂಗಾಳ : ಪಶ್ಚಿಮ ಬಂಗಾಳ ಬಿಜೆಪಿ ಪಟ್ಟಾಭಿಷೇಕಕ್ಕೆ ಇದೀಗ ಮುಹೂರ್ತ ಫಿಕ್ಸ್ ಆಗಿದ್ದು ಮೇ 9ಕ್ಕೆ ಬೆಳಿಗ್ಗೆ 11 ಗಂಟೆಗೆ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭ ನಡೆಯಲಿದೆ. ಕೊಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಸಮಾರಂಭ ನಡೆಯಲಿದ್ದು, ಮೇ 8ರಂದು ಸಂಜೆ 4 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಒಂದು ಸಭೆಯಲ್ಲಿ ಬಿಜೆಪಿ ನಾಯಕರು ಸಿಎಂ ಹೆಸರನ್ನು ಘೋಷಣೆ ಮಾಡಲಿದ್ದಾರೆ, ಬಳಿಕ ರಾಜಪಾಲರನ್ನು ಭೇಟಿಯಾಗಿ ಹಕ್ಕು ಮಂಡನೆ ಆಗಲಿದೆ. ಸಂಜೆ 4 ಗಂಟೆಗೆ ಶಾಸಕಾಂಗ ಪಕ್ಷದ ಸಭೆ: ಮುಖ್ಯಮಂತ್ರಿ ಪಟ್ಟ ಯಾರಿಗೆ ಒಲಿಯಲಿದೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಇಂದು ಸಂಜೆ 4 ಗಂಟೆಗೆ ಬಿಜೆಪಿಯ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಹಿರಿಯ ನಾಯಕರು ಮತ್ತು ವೀಕ್ಷಕರ ಸಮ್ಮುಖದಲ್ಲಿ ಶಾಸಕರು ತಮ್ಮ ನಾಯಕನನ್ನು ಆರಿಸಲಿದ್ದಾರೆ. ಈ ಸಭೆಯ ಮುಕ್ತಾಯದ ನಂತರ ಬಿಜೆಪಿ ಅಧಿಕೃತವಾಗಿ ನೂತನ ಮುಖ್ಯಮಂತ್ರಿಯ ಹೆಸರನ್ನು ಘೋಷಣೆ ಮಾಡಲಿದೆ. ಬೆಳಿಗ್ಗೆ 11ಕ್ಕೆ ಪದಗ್ರಹಣ…

Read More

ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ ಪೀಠಾಧಿಪತಿಯಾಗಿರುವ ವಚನಾನಂದ ಸ್ವಾಮೀಜಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸ್ವಾಮೀಜಿ ತನಿಖೆಗೆ ಸಂಪೂರ್ಣ ಸಹಕರಿಸಬೇಕು, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ನ್ಯಾಯಾಲಯದ ಅನುಮತಿಯಿಲ್ಲದೆ ವ್ಯಾಪ್ತಿ ಬಿಟ್ಟು ಹೋಗಬಾರದು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ. ಮಠದಲ್ಲಿ ಸ್ವಾಮೀಜಿ ಹಾಗೂ ಟ್ರಸ್ಟಿಗಳ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆ ಸ್ವಾಮೀಜಿ ವಿರುದ್ಧ ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಅವರು, ಏಪ್ರಿಲ್ 21ರಂದು ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ಅಂತಿಮವಾಗಿ ಏಪ್ರಿಲ್ 21ರಂದು ಅವರಿಗೆ ಜಾಮೀನು ನೀಡಲು ಸಮ್ಮತಿಸಿದೆ. ಆದರೆ, ಈ ಜಾಮೀನು ಮಂಜೂರಾತಿ ವೇಳೆ ನ್ಯಾಯಾಲಯವು ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿದೆ. “ತನಿಖಾಧಿಕಾರಿಗಳು ನಡೆಸುವ ತನಿಖೆಗೆ ಸ್ವಾಮೀಜಿಯವರು ಸಂಪೂರ್ಣವಾಗಿ ಸಹಕರಿಸಬೇಕು. ಈ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಸಾಕ್ಷ್ಯಗಳನ್ನು ನಾಶಪಡಿಸಲು ಅಥವಾ ಸಾಕ್ಷಿಗಳಿಗೆ ಬೆದರಿಕೆ ಹಾಕಲು ಪ್ರಯತ್ನಿಸಬಾರದು,”…

Read More

ಬೆಂಗಳೂರು : ಬಾಡಿಗೆ ಮನೆಯಲ್ಲಿ ಯುವತಿ ಸ್ನಾನ ಮಾಡುವಾಗ ಅಪರಿಚಿತ ವ್ಯಕ್ತಿಯೋರ್ವ ವಿಡಿಯೋ ಚಿತ್ರೀಕರಣ ಮಾಡಿರುವ ಘಟನೆ ನಗರದ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 23 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಈ ಬಗ್ಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದೂರುದಾರೆ ಯುವತಿ ಕಳೆದ ಒಂಬತ್ತು ತಿಂಗಳ ಹಿಂದೆ ಗರುಡಾಚಾರ್ ಪಾಳ್ಯಕ್ಕೆ ವಾಸ್ತವ್ಯ ಬದಲಾಯಿಸಿದ್ದರು. ಏಪ್ರಿಲ್​​ 29ರಂದು ರಾತ್ರಿ ಸುಮಾರು 9.30ರಿಂದ 9.40ರ ವೇಳೆ ಅವರು ಸ್ನಾನ ಮಾಡುತ್ತಿದ್ದಾಗ, ಪಕ್ಕದ ಕಟ್ಟಡದಿಂದ ಯಾರೋ ಫೋನ್ ಮೂಲಕ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿ ಬೆಚ್ಚಿಬಿದ್ದಿ ಕಿರುಚಿದ್ದಾರೆ. ಈ ವೇಳೆ ಆ ವ್ಯಕ್ತಿ ಮೊಬೈಲ್​ ಸಮೇತ ಓಡಿ ಹೋಗಿದ್ದಾನೆ. ಕೂಡಲೇ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಯಿಂದ ತೀವ್ರ ಮಾನಸಿಕ ನೋವಿಗೆ ಒಳಗಾಗಿರುವ ದೂರುದಾರೆ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಆತಂಕ ಎದುರಿಸುತ್ತಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಯ ವಿವರ: ನಗರದ ಗರುಡಾಚಾರ್ ಪಾಳ್ಯದಲ್ಲಿ ವಾಸವಾಗಿರುವ 23 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್…

Read More

ದಕ್ಷಿಣ ಕನ್ನಡ: ಜಿಲ್ಲೆಯ ಸುಬ್ರಹ್ಮಣ್ಯ–ಮಂಜೇಶ್ವರ ರಾಜ್ಯ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಮಂಗಳವಾರ ಸಂಜೆ ಮೈನಡುಗಿಸುವ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳ ನಡುವೆ ನಡೆದ ಈ ಭೀಕರ ಸಂಘರ್ಷದಲ್ಲಿ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದು, ಮೃತರ ಕುಟುಂಬದಲ್ಲಿ ಶೋಕದ ಮಡುವು ಆವರಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಸ್ಥಳದಲ್ಲೇ ಪ್ರಾಣ ಬಿಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಸಹ ಸವಾರನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಲಾಯಿತಾದರೂ, ಸಾಗಿಸುವ ದಾರಿ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಮೃತ ಯುವಕರನ್ನು ಬಂಟ್ವಾಳ ತಾಲೂಕಿನ ಮಿತ್ತೂರು ಬೊಳ್ಳರಮಜಲು ನಿವಾಸಿ ಪುರಂದರ ಎಂಬುವರ ಪುತ್ರ ಯಜ್ನೇಶ್ (21) ಮತ್ತು ಆರ್ಲಪದವು ನೋಣಯ್ಯ ಭರಣ್ಯ ಎಂಬುವರ ಪುತ್ರ ಜಗನ್ (20) ಎಂದು ಗುರುತಿಸಲಾಗಿದೆ. ಘಟನೆಯ ವಿವರದಂತೆ, ಚಾಪಳ್ಳದ ಅಪಾಯಕಾರಿ ತಿರುವಿನಲ್ಲಿ ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸ ಎಷ್ಟಿತ್ತೆಂದರೆ ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಇದೇ ವೇಳೆ ಮೃತರ ಬೈಕ್ ಹಿಂದೆಯೇ ಬರುತ್ತಿದ್ದ ಮತ್ತೊಂದು ಬೈಕ್‌ ಕೂಡ ನಿಯಂತ್ರಣ ತಪ್ಪಿ…

Read More

ಮೈಸೂರು : ರಾಜ್ಯದಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಕುರಿತಂತೆ ಹೈಕಮಾಂಡ್ ಈಗಾಗಲೇ ಮಹೂರ್ತ ಫಿಕ್ಸ್ ಮಾಡಿದೆ ಎಂದು ಹೇಳಲಾಗಿರತ್ತು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಇದುವರೆಗೂ ನನ್ನ ರಾಹುಲ್ ಗಾಂಧಿ ದೆಹಲಿಗೆ ಕರೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಇದುವರೆಗೂ ರಾಹುಲ್ ಗಾಂಧಿ ನನ್ನನ್ನು ದೆಹಲಿಗೆ ಕರೆದಿಲ್ಲ. ನಾನು ಕೂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಅವಕಾಶ ಕೇಳಿಲ್ಲ. ರಾಹುಲ್ ಗಾಂಧಿ ನನ್ನನ್ನು ದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ರಾಹುಲ್ ಗಾಂಧಿ ಭೇಟಿ ಫಿಕ್ಸ್ ಆದಮೇಲೆ ಸಂಪುಟ ಪುನರ್ ರಚನೆ ಆಗುತ್ತಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಂಪುಟ ವಿಸ್ತರಣೆನ ಅಥವಾ ಯಾವ ವಿಷಯದ ಚರ್ಚೆ ಗೊತ್ತಾಗಲಿದೆ. ರಾಹುಲ್ ಕರೆದೇ ಇಲ್ಲ ಅಂದಮೇಲೆ ಅಜೆಂಡ ಹೇಗೆ ಫಿಕ್ಸ್ ಆಗುತ್ತದೆ? ಅವರು ಕರೆಯದಿದ್ದರೆ, ನಾನೇ ರಾಹುಲ್ ಗಾಂಧಿಗೆ ಕೇಳುತ್ತೇನೆ. ಸದ್ಯಕ್ಕಂತೂ ದೆಹಲಿಯ ಪ್ರವಾಸ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Read More

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಬಸ್‌ಗಳಲ್ಲಿ ದಿನನಿತ್ಯ ಸಂಚರಿಸುವ ಲಕ್ಷಾಂತರ ಪ್ರಯಾಣಿಕರಿಗೆ ಈಗ ಸುಸಜ್ಜಿತ ಮತ್ತು ತಾಂತ್ರಿಕ ಸ್ನೇಹಿ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಮೆಟ್ರೋ ರೈಲುಗಳಲ್ಲಿ ಇರುವಂತೆ ಇನ್ನು ಮುಂದೆ ಬಿಎಂಟಿಸಿ ಬಸ್‌ಗಳಲ್ಲೂ ಕ್ಯಾಶ್‌ಲೆಸ್‌ ಪ್ರಯಾಣಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ‘ರಿಚಾರ್ಜೆಬಲ್‌ ಪ್ರಿಪೇಯ್ಡ್ ಕಾರ್ಡ್’ ಅನ್ನು ಪರಿಚಯಿಸಲು ಸಂಸ್ಥೆ ಮುಂದಾಗಿದೆ. ಈ ಕ್ರಮವು ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಡಿಜಿಟಲ್ ಕ್ರಾಂತಿಗೆ ಹೊಸ ಮುನ್ನುಡಿ ಬರೆಯಲಿದೆ. ಸಾಮಾನ್ಯವಾಗಿ ಬಸ್‌ಗಳಲ್ಲಿ ಪ್ರಯಾಣಿಸುವಾಗ ಚಿಲ್ಲರೆ ಹಣದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತದೆ. ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಚಾರವಾಗಿ ಆಗಾಗ ನಡೆಯುವ ಕಿರಿಕಿರಿಗಳಿಗೆ ಈ ಪ್ರಿಪೇಯ್ಡ್ ಕಾರ್ಡ್ ಶಾಶ್ವತ ಪರಿಹಾರ ನೀಡಲಿದೆ. ಪ್ರಯಾಣಿಕರು ಒಮ್ಮೆ ಕಾರ್ಡ್ ಪಡೆದು ಅದಕ್ಕೆ ಬೇಕಾದ ಮೊತ್ತವನ್ನು ರಿಚಾರ್ಜ್ ಮಾಡಿಸಿಕೊಂಡರೆ, ಟಿಕೆಟ್ ಪಡೆಯಲು ನಗದು ನೀಡುವ ಅಗತ್ಯವಿರುವುದಿಲ್ಲ. ಇದು ಸಮಯವನ್ನು ಉಳಿಸುವುದಲ್ಲದೆ ಪ್ರಯಾಣವನ್ನು ಹೆಚ್ಚು ಸುಗಮಗೊಳಿಸಲಿದೆ. ನೂಕುನುಗ್ಗಲಿನ ಸಮಯದಲ್ಲಿ ಬಸ್ ಹತ್ತಿದಾಗ ಕೈಯಲ್ಲಿ ಹಣ…

Read More

ಬೆಂಗಳೂರು : ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪ ಹೊತ್ತು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಖೈದಿಯಾಗಿ ಕಾಲ ಕಳೆಯುತ್ತಿದ್ದಾರೆ. ಅಲ್ಲದೆ ಇತ್ತೀಚಿಗೆ ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದು, ಈ ವಿಚಾರವಾಗಿ ಹಾಡಿ ಸರಕಾರಕ್ಕೆ ಸುಪ್ರೀಂಕೋರ್ಟ್ ಒಂದು ವಾರದ ಒಳಗಾಗಿ ವರದಿ ನೀಡುವಂತೆ ಸೂಚನೆ ನೀಡಿದೆ. ಇದಕ್ಕಿಂತ ಮೊದಲು ದರ್ಶನ್ ಜೈಲಿನಲ್ಲಿ ಇದ್ದಾಗ ಪತ್ನಿ ವಿಜಯಲಕ್ಷ್ಮಿ, ಹೋಗದ ದೇವಸ್ಥಾನಗಳಿಲ್ಲ. ತೀರಿಸಿದ ಹರಕೆಗಳಿಲ್ಲ. ಪತಿ ದರ್ಶನ್ ಗಾಗಿ ದೇವಸ್ಥಾನ, ದೇವರುಗಳ ಮೊರೆ ಹೋಗಿದ್ದರು. ಈಗಲೂ ಸಹ ಅವರು ದರ್ಶನ್ ಗಾಗಿ ಪ್ರಾರ್ಥನೆ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಇನ್ಸ್ಟಾಗ್ರಾಮ್ ನಲ್ಲಿ ವಿಜಯಲಕ್ಷ್ಮಿ ಅವರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು ಅದಕ್ಕೆ ಒಬ್ಬರು ಕಮೆಂಟ್ ಮಾಡಿದ್ದು ಭಾರಿ ವೈರಲ್ ಆಗುತ್ತಿದೆ. ಹೌದು ಇಂದು ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದೆ. ರೇಷ್ಮೆ ಸೀರೆಯನ್ನು ಉಟ್ಟು, ತಲೆಯಲ್ಲಿ ಮಲ್ಲಿಗೆ ಮುಡಿದು, ಮುಗುಳ್ನಗುತ್ತಾ ಸಾಂಪ್ರದಾಯಿಕ ಉಡುಗೆಯಲ್ಲಿ ವಿಜಯಲಕ್ಷ್ಮಿ ಕಂಗೊಳಿಸಿದ್ದಾರೆ. ಈ ಫೋಟೋ…

Read More

ತಮಿಳುನಾಡು : ತಮಿಳುನಾಡಲ್ಲಿ ಟಿವಿಕೆ ಪಕ್ಷಕ್ಕೆ ಬೆಂಬಲ ಸೂಚಿಸಲು ಮುಂದಾಗಿದ್ದ ಕಾಂಗ್ರೆಸ್ ಗೆ ಇದೀಗ ಬಿಗ್ ಶಾಕ್ ಎದುರಾಗಿದೆ. AIADMK ಜೊತೆಗೆ ಟಿವಿಕೆ ಮಾತುಕತೆ ನಡೆಸಿದ್ದರಿಂದ ಕಾಂಗ್ರೆಸ್ ಗೆ ಹಿನ್ನಡೆ ಆಗಿದೆ. ಟಿವಿಕೆ ಬೆಂಬಲಿಸೋ ಸಲುವಾಗಿ ಸಭೆ ನಡೆಸಲು ಮುಂದಾಗಿತ್ತು. ಆದರೆ ಇದೀಗ ಕಾಂಗ್ರೆಸ್ ಗೆ ಶಾಕ್ ಎದುರಾಗಿದೆ. ಟಿವಿಕೆ ಬೆಂಬಲಿಸೋ ವಿಚಾರವಾಗಿ ಕಾಂಗ್ರೆಸ್ ಸುದ್ದಿಗೋಷ್ಠಿ ಕರೆದಿತ್ತು. ಏಕಾಏಕಿ ಸುದ್ದಿಗೋಷ್ಠಿ ವಿಳಂಬ ಮಾಡಿದೆ. ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ. ಇನ್ನೊಂದು ಕಡೆ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿಯಲ್ಲಿ ಬಿರುಕು ಮೂಡಿದೆ. ಎಂ.ಕೆ ಸ್ಟಾಲಿನ್ ಅಸಮಾಧಾನ ಹೊರ ಹಾಕಿದ್ದು ಸುಧೀರ್ಘಕಾಲದ ಮೈತ್ರಿಗೆ ಮಾಡಿದ ದ್ರೋಹ ಎಂದು ಕಿಡಿ ಕರೆದಿದ್ದಾರೆ ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ ಟಿ ವಿ ಕೆ ಜೊತೆ ಹೋದರೆ ಬಿಎಂಟಿ ಜೊತೆ ಯಾವುದೇ ಸಂಬಂಧ ಇರಲ್ಲ ಅಂತ ಸ್ಪಷ್ಟವಾಗಿ ಹೇಳಿದ್ದಾರೆ.

Read More