Author: kannadanewsnow05

ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ, ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಸ್ಪೀಕರ್ಗೆ ಪತ್ರ ಬರೆಯಲಾಗಿದೆ. ಸಾಮಾಜಿಕ ಹೋರಾಟಗಾರ ಬಸವರಾಜ್ ಕೊರವರ್ ಅವರು ಪತ್ರ ಬರೆದಿದ್ದಾರೆ. ಕಳೆದ ಏಪ್ರಿಲ್ 17ರಂದು ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಈ ಒಂದು ಆದೇಶ ಬಂದು 10 ದಿನಗಳಾದರೂ ಕೂಡ ವಿನಯ್ ಕುಲಕರ್ಣಿ ಅವರನ್ನ ಶಾಸಕ ಸ್ಥಾನ ಅನರ್ಹಗೊಳಿಸಿಲ್ಲ. ಕೂಡಲೇ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಸ್ಪೀಕರ್ ಗೆ ಸಾಮಾಜಿಕ ಹೋರಾಟಗಾರ ಬಸವರಾಜ ಕೊರವರ್ ಅವರು ಪತ್ರ ಬರೆದಿದ್ದಾರೆ.

Read More

ಯಾದಗಿರಿ : ರಾಜ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬುದುರು ಗ್ರಾಮದಲ್ಲಿ ನಡೆದಿದೆ.ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಬುದುರು ಗ್ರಾಮದಲ್ಲಿ ನಡೆದ ಈ ಘಟನೆ ನಿಜಕ್ಕೂ ಅತ್ಯಂತ ದುರದೃಷ್ಟಕರ ಮತ್ತು ಮನಕಲಕುವಂತದ್ದು. ಹವಾಮಾನ ವೈಪರೀತ್ಯ ಹಾಗೂ ಸಿಡಿಲಿನ ಹೊಡೆತಕ್ಕೆ ಸಿಲುಕಿ 60 ಕುರಿಗಳು ಏಕಾಏಕಿ ಸಾವನ್ನಪ್ಪಿರುವುದು ಆ ಕುರಿಗಾಹಿ ಕುಟುಂಬಗಳಿಗೆ ತುಂಬಲಾರದ ಆರ್ಥಿಕ ನಷ್ಟವನ್ನುಂಟು ಮಾಡಿದೆ. ಕುರಿಗಾಹಿಗಳಾದ ಮಲ್ಲಪ್ಪ, ಜಲ್ಲಪ್ಪ ಎಂಬುವವರಿಗೆ ಸೇರಿದ 60 ಕುರಿಗಳು ಮೃತಪಟ್ಟಿವೆ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಈ ವೇಳೆ ಕುರಿಗಳನ್ನು ಹೊಡೆದುಕೊಂಡು ಬರುವಾಗ ಈ ಅವಘಡ ಸಂಭವಿಸಿದೆ. ಅವಘಡದಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿವೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿರುವ ಬೆನ್ನಲ್ಲೆ, ರಾಜ್ಯ ಕಾಂಗ್ರೆಸ್ ಶಾಸಕರು, ಸಚಿವರು ಸಚಿವ ಸಂಪುಟ ಪುನಾರಚನೆ ಹಾಗು ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ. ಇದರ ಮಧ್ಯ ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೊಸ ಬಾಂಬ್ ಸಿಡಿಸಿದ್ದು, 15 ದಿನಗಳ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ. ಕುರ್ಚಿಗಾಗಿ ವಿಧಾನಸೌಧದಲ್ಲಿ ಆಡಳಿತವೇ ಇಲ್ಲದಂತಾಗಿದೆ. ಮೇ 4 ರಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಬರುತ್ತದೆ. ಸಿದ್ದರಾಮಯ್ಯರ ಕುರ್ಚಿ ಫಲಿತಾಂಶವು ಪ್ರಕಟವಾಗಲಿದೆ.

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರೆದಲ್ಲಿ ಘೋರ ಘಟನೆ ಒಂದು ನಡೆದಿದ್ದು, ನವವಿವಾಹಿತೆ ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಶವ ಪತ್ತೆಯಾಗಿದೆ. ಮೃತಳನ್ನು ರೂಪ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. 5 ತಿಂಗಳ ಹಿಂದೆಯಷ್ಟೇ ಮುನಿರಾಜು ಜೊತೆ ಮದುವೆಯಾಗಿದ್ದ ರೂಪ, ಪತಿಯ ಅನುಮಾನದ ಭೂತಕ್ಕೆ ರೂಪ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರೂಪ ಮೃತದೇಹ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಮೃತ ರೂಪ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ನಿವಾಸಿಯಾಗಿದ್ದು, ರೂಪ ಪೋಷಕರಿಂದ ಗಂಡ ಮುನಿರಾಜು ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

Read More

ಹಾವೇರಿ : ಹಾವೇರಿ ಜಿಲ್ಲಾಸ್ಪತ್ರೆಯ ವೈದ್ಯರು ಮಹಾ ಎಡವಟ್ಟು ಮಾಡಿದ್ದು, ಹರ್ನಿಯ ಆಪರೇಷನ್ ವೇಳೆ ಬಾಲಕನೊಬ್ಬ ಕೋಮಾಗೆ ಹೋಗಿದ್ದಾನೆ. ಹಾಗಾಗಿ ಇದೀಗ ಬಾಲಕನ ಪೋಷಕರು ಆಸ್ಪತ್ರೆ ಹಾಗು ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದು, ಪ್ರತಿಭಟನೆ ಮಾಡುತ್ತಿದ್ದಾರೆ. ಹರ್ನಿಯ ಆಪರೇಷನ್ ಮಾಡಿದ ವೇಳೆ 7 ವರ್ಷದ ಚಾಂದ್ ಪೀರ್ ಸಾಬ್ ದೊಡಮನಿ ಎಂದು ತಿಳಿದುಬಂದಿದೆ. ವೈದ್ಯರು, ಸಿಬ್ಬಂದಿ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೋಮಾಗೆ ಹೋದ ಬಾಲಕನನ್ನ ಖಾಸಗಿ ಆಸ್ಪತ್ರೆಗೆ ರೆಫರ್ ಮಾಡಿದ್ದಾರೆ. ಬಾಲಕನ ಚಿಕಿತ್ಸೆಗೆ ಲಕ್ಷಾಂತರ ರೂ.ಖರ್ಚು ಮಾಡಿರುವ ಕುಟುಂಬ ಸದಸ್ಯರು ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಚಾಂದ್ ಪೀರ್ ಹರ್ನಿಯ ಆಪರೇಷನ್ ಮಾಡಿದ ವೈದ್ಯರ ವಿರುದ್ಧ ದೂರು ದಾಖಲಾಗಬೇಕು ತನಿಖೆ ನಡೆಸಿ ಬಾಲಕನ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ನಡೆಸೋದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿರುವ ಬೆನ್ನಲ್ಲೆ, ಶಾಸಕ ನಾರಾಯಣಸ್ವಾಮಿ ಸ್ಪೋಟಕ ಸುಳಿವು ನೀಡಿದ್ದು, ಮೇ 15ರ ಒಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ ಅಂತ ಕಾಂಗ್ರೆಸ್ ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೇ ಎರಡನೇ ವಾರದಲ್ಲಿ ಪುನರ್ ರಚನೆ ಆಗೋ ವಿಶ್ವಾಸ ಇದೆ. ಸರ್ಕಾರಕ್ಕೆ ಮೂರು ವರ್ಷ ಆಗಿದೆ. ಈಗಲೇ ಪುನರ್ ರಚನೆ ಆಗಬೇಕು. ಈಗ ಮಂತ್ರಿ ಮಾಡಿದ್ರೆ ಇನ್ನೊಂದು ವರ್ಷ ಕೆಲಸ ಮಾಡೋಕೆ ಸಮಯ ಸಿಗಲಿದೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ವಿಶೇಷ ಮುತುವರ್ಜಿ ವಹಿಸಬೇಕು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಾದ್ರೆ ಸಂಪುಟ ಪುನರ್ ರಚನೆ ಅಗಲೇಬೇಕು ಅಂತ ತಿಳಿಸಿದ್ದಾರೆ. ಸಂಪುಟ ಪುನರ್ ರಚನೆ ಆಗಲೇಬೇಕು. ದೆಹಲಿಗೆ ಹೋಗಿ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ್ವಿ. ಅವರು ನಮಗೆ ಭರವಸೆ ನೀಡಿದ್ದಾರೆ. ಕೆಲಸ ಮಾಡದ ಮಂತ್ರಿಗಳನ್ನು ಕೈ ಬಿಟ್ಟು ಹೊಸಬರನ್ನು ಸೇರಿಸಬೇಕು. 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದ್ರೆ ಸಂಪುಟ ಪುನರ್ ರಚನೆ…

Read More

ಮುಂಬೈ : ಸಾಮಾನ್ಯವಾಗಿ ಊಟ ಆದ್ಮೇಲೆ ಜೀರ್ಣ ಕ್ರೀಯೇ ಅಗಲಿ ಎಂದು ಬಾಳೆ ಹಣ್ಣು ಸೇವಿಸುತ್ತಾರೆ. ಆದರೆ ಊಟ ಆದ್ಮೇಲೆ ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಮುಂಬೈಯಲ್ಲಿ ಬಿರಿಯಾನಿ ಸೇವಿಸಿದ ಬಳಿಕ ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿಗೆ ನಿಖರ ಕಾರಣ ಏನು ಎನ್ನುವುದನ್ನು ಪತ್ತೆ ಹಚ್ಚಲು ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ಕಳುಹಿಸಲಾಗಿದೆ. ಈ ಪ್ರಕರಣದ ಬೆನ್ನಲ್ಲೇ ಆರೋಗ್ಯ ತಜ್ಞರು ಊಟ ಮಾಡಿದ ನಂತರ ಕಲ್ಲಂಗಡಿ ಸೇವಿಸಬಾರದು ಎಂದು ಸಲಹೆ ನೀಡುತ್ತಿದ್ದಾರೆ. ಊಟ ಮಾಡಿದ ತಕ್ಷಣ ಕಲ್ಲಂಗಡಿ ಹಣ್ಣನ್ನು ತಿನ್ನುವುದು ಜೀರ್ಣಕ್ರಿಯೆಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಉಂಟುಮಾಡಬಹುದು. ಆಯುರ್ವೇದದ ಪ್ರಕಾರ, ಕೆಲವು ಆಹಾರಗಳನ್ನು ಕಲ್ಲಂಗಡಿಯೊಂದಿಗೆ ಸೇರಿಸುವುದು ದೇಹದಲ್ಲಿ ವಿಷಕಾರಿ ಅಂಶಗಳನ್ನು ಉತ್ಪತ್ತಿ ಮಾಡುವ ಸಾಧ್ಯತೆ ಇರುತ್ತದೆ. ಕಲ್ಲಂಗಡಿ ಹಣ್ಣು ಹೊಟ್ಟೆಯಲ್ಲಿ ತುಂಬಾ ಬೇಗ (ಸುಮಾರು 20-30 ನಿಮಿಷದಲ್ಲಿ) ಜೀರ್ಣವಾಗುತ್ತದೆ. ಆದರೆ ನಾವು ತಿಂದ ಊಟ…

Read More

ಬೆಂಗಳೂರು : ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರ ನಡುವೆ ತೆರೆ ಮರೆಯಲ್ಲಿ ಭಾರಿ ಸರ್ಕಸ್ ನಡೆದಿದ್ದು, ಇದರ ಮಧ್ಯ ಸಿಎಂ ಸಿದ್ದರಾಮಯ್ಯ ಅಧಿಕಾರ ಮುಂದುವರಿಸಲು ಮತ್ತು ಪದತ್ಯಾಗ ಎರಡಕ್ಕೂ ಸಿದ್ಧರಾಗಿದ್ದಾರೆ ಎಂದು ಮಾಜಿ‌ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಗೊಂದಲ ಬಗೆಹರಿಸಬೇಕು. ಗೊಂದಲ ಬಗೆಹರಿಸಿದಷ್ಟು ರಾಜ್ಯಕ್ಕೆ ಒಳ್ಳೆಯದು. ಗೊಂದಲ ಮುಂದುವರಿಯಲು ಹೈಕಮಾಂಡ್ ಅವಕಾಶ ನೀಡಬಾರದು. ಹೈಕಮಾಂಡ್ ಏನು ಹೇಳುತ್ತದೆಯೋ ಅದಕ್ಕೆ ಸಿದ್ದರಾಮಯ್ಯ ಬದ್ಧರಾಗಿದ್ದಾರೆ. ಇದು ಆತುರದಲ್ಲಿ ತೆಗೆದುಕೊಳ್ಳುವ ನಿರ್ಧಾರ ಅಲ್ಲ. ಸಿದ್ದರಾಮಯ್ಯ ಅವರು ಅಧಿಕಾರ ಮುಂದುವರಿಕೆಗೂ ಸಿದ್ದರಾಗಿದ್ದಾರೆ, ಪದತ್ಯಾಗಕ್ಕೂ ಸಿದ್ದರಾಗಿದ್ದಾರೆ ಎಂದರು‌. ಅಧಿಕಾರ ಶಾಶ್ವತವಲ್ಲ. ಅಧಿಕಾರ ಕಳೆದುಕೊಂಡವರು ಗಳಿಸ್ತಾರೆ. ರಾಹುಲ್ ನಿರ್ದೇಶನದಂತೆ ಹೋಗಬೇಕು ಎಂಬುದು ಸಿಎಂ ಮನಸ್ಥಿತಿ. ಸಿದ್ದರಾಮಯ್ಯ ಮುಂದುವರಿಯಬೇಕು ಎಂಬ ಬಗ್ಗೆ ನಾವೆಲ್ಲ ನಮ್ಮ ಅಭಿಪ್ರಾಯವನ್ನು ಹೈಕಮಾಂಡ್​ಗೆ ಹೇಳಿದ್ದೇವೆ. ದಲಿತ ಸಿಎಂ ಆಗಬೇಕು ಎಂಬುದಕ್ಕೆ ನಾನು ಈಗಲೂ ಬದ್ಧ. ಅಹಿಂದ ವರ್ಗ ನಿಜವಾಗಿ ಸಮಾಧಾನವಾಗಿಲ್ಲ. 2013-18 ರ…

Read More

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ಮನುಷ್ಯಕುಲವೇ ತಲೆತಗ್ಗಿಸುವಂತಹ ಭೀಕರ ಘಟನೆಯೊಂದು ಜರುಗಿದೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಕೌಟುಂಬಿಕ ಕಲಹವೊಂದು ಇಡೀ ಸಂಸಾರವನ್ನೇ ಬೀದಿಗೆ ತಂದಿದ್ದು, ಪತ್ನಿಯನ್ನೇ ಕೊಚ್ಚಿ ಕೊಂದ ಪತಿ ತಾನೂ ಮಗುವಿನೊಂದಿಗೆ ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾನೆ. ಘಟನೆಯ ವಿವರ: ಅಫಜಲಪುರ ತಾಲೂಕಿನ ಮದರಾ (ಕೆ) ಗ್ರಾಮದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದೆ. 23 ವರ್ಷದ ಅಂಜಲಿ ಕೊಲೆಯಾದ ದುರ್ದೈವಿ ಪತ್ನಿ. ದಂಪತಿಗಳ ನಡುವೆ ನಡೆದ ತೀವ್ರ ಜಗಳವು ವಿಕೋಪಕ್ಕೆ ತಿರುಗಿದ್ದು, ಆವೇಶಕ್ಕೊಳಗಾದ ಪತಿ ಕೊಡಲಿಯಿಂದ ಪತ್ನಿಯ ಮೇಲೆ ಮನಬಂದಂತೆ ದಾಳಿ ನಡೆಸಿ ಹತ್ಯೆ ಮಾಡಿದ್ದಾನೆ. ಮಗುವಿನ ಅದೃಷ್ಟದ ಬದುಕು: ಪತ್ನಿಯನ್ನು ಹತ್ಯೆಗೈದ ನಂತರ ಆರೋಪಿ ಪತಿಯು, ತನ್ನ ಪುಟ್ಟ ಮಗುವನ್ನು ಎತ್ತಿಕೊಂಡು ಗ್ರಾಮದ ಸಮೀಪದ ಲಕ್ಷ್ಮೀಪುರ ಎಂಬಲ್ಲಿರುವ ಬಾವಿಗೆ ಹಾರಿದ್ದಾನೆ. ಈ ವೇಳೆ ಪತಿಯು ನೀರಿನಲ್ಲಿ ಮುಳುಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ಸಮಯಪ್ರಜ್ಞೆ ಮೆರೆದು ಮಗುವನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಪೊಲೀಸ್ ಭೇಟಿ: ಘಟನಾ ಸ್ಥಳಕ್ಕೆ…

Read More

ಧಾರವಾಡ : ಗಾಂಜಾ ಸೇವಿಸದಿದ್ದರೂ ಕೂಡ ಕೇಸ್ ಹಾಕುವುದಾಗಿ ಪೊಲೀಸರು ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರ ವಿರುದ್ಧ ಈ ಒಂದು ಗಂಭೀರ ಆರೋಪ ಕೇಳಿಬಂದಿದೆ. ಹಾಗಾಗಿ ಮರ್ಯಾದೆಗೆ ಹೆದ್ದಾರಿ ವಿದ್ಯಾರ್ಥಿ ಒಬ್ಬ ಆತ್ಮಹತ್ಯೆ ಶರಣಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಆದಿತ್ಯ ಮ್ಯಾಗೇರಿ (20) ಎಂದು ತಿಳಿದು ಬಂದಿದೆ. ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಹಲವಾರು ಯುವಕರನ್ನು ಠಾಣೆಗೆ ಕರೆದೊಯ್ಯುತ್ತಾರೆ. ಅದರಲ್ಲಿ ಆದಿತ್ಯ ಎನ್ನುವ ವಿದ್ಯಾರ್ಥಿ ಕೊಡ ಒಬ್ಬ. ಆತ ಗಾಂಜಾ ಸೇವನೆ ಮಾಡಿರಲಿಲ್ಲ ಆದರೂ ಕೂಡ ಅದರ ಮೇಲೆ ಪೊಲೀಸರು ಕೇಸ್ ಹಾಕಿರುತ್ತಾರೆ. ಅದಾದ ಮೇಲೆ ರಿಪೋರ್ಟ್ ನಲ್ಲಿ ನೆಗೆಟಿವ್ ಎಂದು ಬರುತ್ತದೆ. ಬಳಿಕ ಆತನನ್ನು ಬಿಟ್ಟು ಕಳುಹಿಸುತ್ತಾರೆ. ಆದರೆ ಆತ ಮನೆಗೆ ಬಂದು ನೇಣು ಹಾಕಿಕೊಳ್ಳುತ್ತಾನೆ. ಎಲ್ಲಿ ಮತ್ತೆ ಪೊಲೀಸರು ನನ್ನನ್ನು ಪೊಲೀಸ್ ಠಾಣೆಗೆ ಕರೆಯುತ್ತಾರೆ ಎಂದು ಹೆದರಿ ನೇಣು ಬಿಗಿದುಕೊಂಡು ಆದಿತ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಆದಿತ್ಯ…

Read More