Author: kannadanewsnow05

ಚೈನ್ನೈ : ತಮಿಳುನಾಡಿನಲ್ಲಿ ದಳಪತಿ ವಿಜಯ ನೇತೃತ್ವದ ಟಿವಿಕೆ ಪಕ್ಷ ಸರ್ಕಾರ ರಚಿಸುವುದು ಬಹುತೇಕ ಫಿಕ್ಸ್ ಆಗಿದೆ. ತಮಿಳುನಾಡು ರಾಜ್ಯಪಾಲರಿಗೆ ವಿಜಯ್ ಪತ್ರ ಬರೆದಿದ್ದು, ನಮಗೆ 121 ಶಾಸಕರ ಬೆಂಬಲವಿದೆ ಎಂದು ವಿಜಯ್ ಪತ್ರ ಬರೆದಿದ್ದಾರೆ. ಟಿವಿಕೆಗೆ ಕಾಂಗ್ರೆಸ್ ಮುಸ್ಲಿಂ ಲೀಗ್ ನಿಂದ ಬೆಂಬಲವಿದೆ ಎಂದು ಪತ್ರ ಬರೆದಿದ್ದಾರೆ. ಅಲ್ಲದೆ ಉಳಿದ ಪಕ್ಷಗಳಾದ ಸಿಪಿಐ, ಸಿಪಿಐ(ಎಂ) ಪಕ್ಷಗಳಿಂದಲೂ ಬೆಂಬಲವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 121 ಶಾಸಕರ ಬೆಂಬಲದ ಘೋಷಣೆ ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ವಿಜಯ್ ಅವರು ತಮಗೆ ಒಟ್ಟು 121 ಶಾಸಕರ ಬೆಂಬಲ ಇದೆ ಎಂದು ಉಲ್ಲೇಖಿಸಿದ್ದಾರೆ. ತಮಿಳುನಾಡು ವಿಧಾನಸಭೆಯ ಒಟ್ಟು ಬಲಕ್ಕೆ ಹೋಲಿಸಿದರೆ ಇದು ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ಆಗಿದೆ. ವಿಜಯ್ ಅವರ ಈ ನಡೆ ವಿರೋಧ ಪಕ್ಷಗಳಲ್ಲಿ ಸಂಚಲನ ಮೂಡಿಸಿದ್ದು, ತಮಿಳುನಾಡಿನಲ್ಲಿ “ದಳಪತಿ ಯುಗ” ಆರಂಭವಾಗುವ ಲಕ್ಷಣಗಳು ದಟ್ಟವಾಗಿವೆ. ಸಮ್ಮಿಶ್ರ ಶಕ್ತಿಯ ಬೆಂಬಲ ಟಿವಿಕೆ ಪಕ್ಷಕ್ಕೆ ಕೇವಲ ಸ್ವತಂತ್ರ ಬಲ ಮಾತ್ರವಲ್ಲದೆ, ಪ್ರಮುಖ ಮೈತ್ರಿ ಪಕ್ಷಗಳ…

Read More

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಕಳೆದ ಕೆಲವು ದಿನಗಳಿಂದ ಮನೆಮಾಡಿದ್ದ ಕುತೂಹಲಕ್ಕೆ ತೆರೆ ಬಿದ್ದಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಪ್ರಭಾವಿ ನಾಯಕ ಸುವೇಂದು ಅಧಿಕಾರಿ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮಹತ್ವದ ನಿರ್ಧಾರದೊಂದಿಗೆ ಬಂಗಾಳದ ರಾಜಕಾರಣದಲ್ಲಿ ಹೊಸ ಅಧ್ಯಾಯವೊಂದು ಆರಂಭವಾದಂತಾಗಿದೆ. ಶುಕ್ರವಾರ ಕೋಲ್ಕತ್ತಾಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಜ್ಯ ಕಚೇರಿಯಲ್ಲಿ ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕರೊಂದಿಗೆ ಸುದೀರ್ಘ ಸಭೆ ನಡೆಸಿದರು. ಈ ನಿರ್ಣಾಯಕ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯ ಕುರಿತು ಗಂಭೀರ ಚರ್ಚೆಗಳು ನಡೆದವು. ಶಾಸಕರ ಅಭಿಪ್ರಾಯಗಳನ್ನು ಆಲಿಸಿದ ನಂತರ, ಪಕ್ಷದ ಹೈಕಮಾಂಡ್ ಸುವೇಂದು ಅಧಿಕಾರಿ ಅವರ ಹೆಸರನ್ನು ಅಂತಿಮಗೊಳಿಸಿತು. ಸುವೇಂದು ಅಧಿಕಾರಿ ಅವರ ಹೆಸರನ್ನು ಘೋಷಿಸಿದ ಬಳಿಕ ಮಾತನಾಡಿದ ಅಮಿತ್ ಶಾ, “ಬಂಗಾಳದ ನೆಲದ ಮಗ ಮತ್ತು ಜನರ ನಾಡಿಮಿಡಿತ ಅರಿತಿರುವ ಸುವೇಂದು ಅಧಿಕಾರಿ ಅವರು ರಾಜ್ಯವನ್ನು ಅಭಿವೃದ್ಧಿಯ ಪಥದಲ್ಲಿ…

Read More

ಬೆಂಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತಪತ್ರಗಳ ಮತ ಎಣಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಇದೀಗ ಟಿಡಿ ರಾಜೇಗೌಡ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಅಂಚೆ ಮತಗಳ ಮರು ಎಣಿಕೆಗೆ ಹೈಕೋರ್ಟ್ ಆದೇಶ ನೀಡಿತ್ತು. 279 ತಿರಸ್ಕೃತಗೊಂಡ ಮತಗಳಲ್ಲಿ ಲೋಪಗಳಿಲ್ಲದಿದ್ದರೆ ಪರಿಗಣಿಸಬೇಕು ಒಟ್ಟು ಅಂಚೆ ಮತ ಪತ್ರಗಳೊಂದಿಗೆ ಪರಿಗಣಿಸಲು ಹೈಕೋರ್ಟ್ ಆದೇಶ ನೀಡಿತ್ತು. ಮರುಮತ ಎಣಿಕೆಯಲ್ಲಿ ಡಿ ಎನ್ ಜೀವರಾಜ್ ವಿಜೇತರೆಂದು ಘೋಷಿಸಲಾಗಿತ್ತು. ಈಗ ಸುಪ್ರೀಂ ಕೋರ್ಟಿಗೆ ಟಿಡಿ ರಾಜೇಗೌಡ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್ ನೀಡಿದ್ದ ಆದೇಶವೇನು? ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಡಿ.ಎನ್. ಜೀವರಾಜ್ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಚುನಾವಣಾ ಸಂದರ್ಭದಲ್ಲಿ ತಿರಸ್ಕೃತಗೊಂಡಿದ್ದ 279 ಅಂಚೆ ಮತಗಳನ್ನು ಮರು ಪರಿಶೀಲಿಸುವಂತೆ ಸೂಚಿಸಿತ್ತು. ಈ ಮತಗಳಲ್ಲಿ ಯಾವುದೇ ತಾಂತ್ರಿಕ ಲೋಪಗಳಿಲ್ಲದಿದ್ದರೆ ಅವುಗಳನ್ನು ಸಿಂಧು ಎಂದು ಪರಿಗಣಿಸಿ,…

Read More

ಚೈನ್ನೈ : ತಮಿಳುನಾಡಿನಲ್ಲಿ ಸರ್ಕಾರ ರಚನೆ ಮಾಡಲು ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಕಸರತ್ತು ನಡೆಸಿದ್ದು, ಇದೀಗ ವಿಜಯ ಅವರು ಎಡಪಕ್ಷಗಳ ಮನವೊಲಿಸುವಲ್ಲಿ ಸಕ್ಸಸ್ ಆಗಿದ್ದಾರೆ, ವಿಜಯ ಪಟ್ಟಾಭಿಷೇಕಕ್ಕೆ ಇನ್ನೊಂದೇ ಹೆಜ್ಜೆ ಬಾಕಿ ಇದ್ದು, ಇದೀಗ ಎಡ ಪಕ್ಷಗಳು ಅಧಿಕೃತವಾಗಿ ವಿಜಯ ನೇತೃತ್ವದ ಟಿ ವಿ ಕೆ ಪಕ್ಷಕ್ಕೆ ಬೆಂಬಲ ಘೋಷಣೆ ಮಾಡಿವೆ ಹಾಗಾಗಿ ನಟ ವಿಜಯ್ ತಮಿಳುನಾಡಲ್ಲಿ ಸರ್ಕಾರ ರಚನೆ ಮಾಡುವುದು ನಿಶ್ಚಿತ ಎಂದೇ ಹೇಳಲಾಗಿದೆ. ಎಲ್ಲವು ಅಂದುಕೊಂಡಂತೆ ಆದರೆ ನಾಳೆ ಅಥವಾ ನಾಡಿದ್ದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ವಿಜಯ್ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚಿಸುವುದು ಬಹುತೇಕ ಫಿಕ್ಸ್ ಎಂಬಂತಾಗಿದೆ. 234 ಕ್ಷೇತ್ರಗಳ ಪೈಕಿ 108 ಕ್ಷೇತ್ರಗಳಲ್ಲಿ ಟಿವಿಕೆ ಪಕ್ಷ ಗೆದ್ದಿದ್ದು ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು ಸಾಧಿಸಿದ್ದಾರೆ. ಶಾಸಕರ ಎಣಿಕೆ ಸಮಯದಲ್ಲಿ ಒಂದು ಕ್ಷೇತ್ರ ಮಾತ್ರ ಎಣಿಕೆ ಮಾಡಿದ್ದು,ಹಾಗಾಗಿ ಟಿ ವಿ ಕೆ ಸ್ಥಾನಗಳ ಸಂಖ್ಯೆ…

Read More

ತಮಿಳುನಾಡು : ತಮಿಳುನಾಡಲ್ಲಿ ಸರ್ಕಾರ ರಚನೆ ಮಾಡಲು ದಳಪತಿ ವಿಜಯ್ ನೇತ್ರತ್ವದ ಟಿವಿಕೆ ಪಕ್ಷ ಕಸರತ್ತು ನಡೆಸುತ್ತಿದೆ. ಇದರ ಬೆನ್ನಲ್ಲೇ ಎಡಪಕ್ಷಗಳು ಹಾಗೂ ವಿಸಿಕೆ ಅಧಿಕೃತವಾಗಿ ಟಿವಿಕೆ ಪಕ್ಷಕ್ಕೆ ಬೆಂಬಲ ನೀಡಿದ್ದು, ಈ ಒಂದು ಪಕ್ಷಗಳ ಬೆಂಬಲದಿಂದ ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ರಚನೆ ಮಾಡುವುದು ಬಹುತೇಕ ಫಿಕ್ಸ್ ಎಂದೇ ಇದೀಗ ಹೇಳಲಾಗುತ್ತಿದೆ. ಹೌದು ಇಂದು 3ನೇ ಬಾರಿಗೆ ರಾಜ್ಯಪಾಲರ ಭೇಟಿಯಾಗಲಿರುವ ಟಿವಿಕೆ ಸಂಸ್ಥಾಪಕ ವಿಜಯ್. 118 ಶಾಸಕರ ಸಹಿ ಉಳ್ಳ ಬೆಂಬಲ ಪತ್ರ ರಾಜಪಾಲರಿಗೆ ಸಲ್ಲಿಸಲಿದ್ದಾರೆ. ಈಗಾಗಲೇ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ್ದಾರೆ. ಅಲ್ಲದೇ ವಿಜಯ್ ಗೆ ಕಾಂಗ್ರೆಸ್ ಬೆಂಬಲ ಘೋಷಿಸಿದೆ. ಎಡಪಕ್ಷಗಳು ವಿಸಿಕೆ ಬೆಂಬಲದೊಂದಿಗೆ ಟಿವಿಕೆ ಸರ್ಕಾರ ರಚನೆ ಬಹುತೇಕ ಫಿಕ್ಸ್ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಂಜೆ 4:30ಕ್ಕೆ ಎಡ ಪಕ್ಷಗಳು ಹಾಗೂ ವಿಸಿಕೆ ಅಧಿಕೃತ ನಿರ್ಧಾರ ಪ್ರಕಟಿಸಲಿದೆ.

Read More

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಪಾಲಿಕೆ ವಲಯ ಕಚೇರಿಗಳ ಮೇಲೆ ಇಂದು ಲೋಕಾಯುಕ್ತ ದಾಳಿ ಮಾಡಿದೆ. ಒಟ್ಟು 12 ಕಚೇರಿಗಳ ಮೇಲೆ ಲೋಕಾಯುಕ್ತ ದಿಡೀರ್ ದಾಳಿ ಮಾಡಿದೆ. ಇ-ಖಾತ ಪೆಂಡಿಂಗ್ ಸಮಸ್ಯೆ ಸೇರಿ ಮಹತ್ವದ ದಾಖಲೆಗಳನ್ನು ದಾಳಿಯ ವೇಳೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡಿದರು. ಕಸ ವಿಲೇವಾರಿ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಸೂಚನೆ ಮೇರೆಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಲಾಯಿತು. ಈ ವೇಳೆ 12 ಕಚೇರಿಗಳಲ್ಲಿ ಹಲವು ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡಿದರು.

Read More

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಅಧಿಕಾರಿಗಳ ಸೋಗಿನಲ್ಲಿ ‘ಡಿಜಿಟಲ್ ಅರೆಸ್ಟ್’ ಮಾಡಿ 78 ವರ್ಷದ ವೃದ್ಧೆ ಮತ್ತು ಅವರ ಪುತ್ರಿಗೆ ಸೈಬರ್‌ ವಂಚಕರು 2.1 ಕೋಟಿ ರೂಪಾಯಿ ವಂಚಿಸಿದ್ದಾರೆ. ಈ ಕುರಿತು ವಂಚನೆಗೊಳಗಾದ ಜಯನಗರದ ನಿವಾಸಿ ಪ್ರಸನ್ನ ಪಾರ್ವತಿ ಎಂಬವರು ನೀಡಿದ ದೂರಿನ ಮೇರೆಗೆ ಆಗ್ನೇಯ ವಿಭಾಗದ ಸೆನ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಆರೋಪಿಗಳು ಎನ್‌ಐಎ ಅಧಿಕಾರಿಗಳೆಂದು ಕರೆ ಮಾಡಿ ವಂಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಏ.13ರಂದು ವಾಟ್ಸ್‌ಆ್ಯಪ್‌ ಮೂಲಕ ವಂಚಕರು, ಪ್ರಸನ್ನ ಪಾರ್ವತಿ ಅವರಿಗೆ ಕರೆ ಮಾಡಿ, ತಾವೂ ಎನ್ಐಎ ಅಧಿಕಾರಿಗಳೆಂದು ಪರಿಚಯಿಸಿಕೊಂಡಿದ್ದರು. ಬಳಿಕ ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯನೊಬ್ಬ ತಮ್ಮ ಹೆಸರಿನಲ್ಲಿ ಡೆಬಿಟ್‌ ಕಾರ್ಡ್‌ ಬಳಸುತ್ತಿದ್ದಾನೆ, ನಿಮ್ಮ ಪುತ್ರಿಯೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾಳೆ ಎಂದು ಹೆದರಿಸಿದ್ದಾರೆ. ಕರೆ ಮಾಡಿರುವುದನ್ನು ಯಾರಿಗೂ ತಿಳಿಸಬಾರದು ಎಂದಿರುವ ವಂಚಕರು, ವೃದ್ಧೆ ಹಾಗೂ ಅವರ ಮಕ್ಕಳಿಂದ ಎಲ್ಲ ದಾಖಲೆಗಳನ್ನೂ ಪಡೆದುಕೊಂಡಿದ್ದಾರೆ. ಪೊಲೀಸ್ ಠಾಣೆಯಂತೆ ಕಾಣುವ ಕೊಠಡಿಯಿಂದ ಆರೋಪಿಗಳು ವಿಡಿಯೋ…

Read More

ಹುಬ್ಬಳ್ಳಿ : ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್ರಚನೆಯ ಕುರಿತಾದ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಹುಬ್ಬಳ್ಳಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು, “ಆದಷ್ಟು ಬೇಗನೆ ರಾಜ್ಯ ಸಚಿವ ಸಂಪುಟ ಪುನರ್ರಚನೆಯಾಗಲಿದೆ,” ಎಂದು ಮಹತ್ವದ ಸುಳಿವು ನೀಡಿದ್ದಾರೆ. ದೆಹಲಿ ಭೇಟಿಯ ಬಳಿಕ ನಿರ್ಧಾರ ಸಂಪುಟ ಪುನರ್ರಚನೆಯ ಪ್ರಕ್ರಿಯೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿಯ ಮೇಲೆ ಅವಲಂಬಿತವಾಗಿದೆ. ಇಬ್ಬರೂ ನಾಯಕರು ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಚರ್ಚಿಸಿದ ನಂತರವೇ ಅಂತಿಮ ತೀರ್ಮಾನ ಹೊರಬೀಳಲಿದೆ. ಬಹುಶಃ ಮೇ ತಿಂಗಳಲ್ಲೇ ಈ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಹೊಸಬರಿಗೆ ಅವಕಾಶ ನೀಡಲು ಮನವಿ ಸಂಪುಟದಲ್ಲಿ ಬದಲಾವಣೆ ತರುವ ಮೂಲಕ ಹೊಸ ಮುಖಗಳಿಗೆ ಹಾಗೂ ಉತ್ಸಾಹಿ ನಾಯಕರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಪಕ್ಷದ ಹಲವರ ಆಶಯವಾಗಿದೆ. ಈ ಕುರಿತು ಈಗಾಗಲೇ ಹೈಕಮಾಂಡ್…

Read More

ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿರುವ ಉಮೇಶ್ ಮೇಟಿ ಹಾಗೂ ಸಮರ್ಥ್ ಶಾಮನೂರು ಅವರು ಮೇ 11ರಂದು ಅಧಿಕೃತವಾಗಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದ ಗಮನ ಸೆಳೆದಿದ್ದ ಉಪ ಚುನಾವಣಾ ಕಣದ ವಿಜೇತರು ಈಗ ಶಾಸಕಾಂಗ ಸಭೆಯನ್ನು ಪ್ರವೇಶಿಸಲು ಸಜ್ಜಾಗಿದ್ದಾರೆ. ಸೋಮವಾರ ಬೆಳಗ್ಗೆ ಕಾರ್ಯಕ್ರಮ: ಪೂರ್ವ ನಿಗದಿಯಂತೆ ಮೇ 11ರ ಸೋಮವಾರ ಬೆಳಗ್ಗೆ 10 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭವು ನಡೆಯಲಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜನೆಯಾಗಲಿರುವ ಈ ಕಾರ್ಯಕ್ರಮದಲ್ಲಿ ಉಭಯ ನಾಯಕರು ಸಂವಿಧಾನಬದ್ಧವಾಗಿ ಶಾಸಕ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವಾಲಯದಿಂದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಚುನಾವಣಾ ಗೆಲುವಿನ ಸಂಭ್ರಮ: ಉಪ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಈ ಇಬ್ಬರು ನಾಯಕರ ಬೆಂಬಲಿಗರಲ್ಲಿ ಹರ್ಷೋದ್ಗಾರ ಮುಗಿಲು ಮುಟ್ಟಿದೆ. ಕ್ಷೇತ್ರದಲ್ಲಿನ ಅಭಿವೃದ್ಧಿ ಕೆಲಸಗಳು ಹಾಗೂ ಪಕ್ಷದ ಸಂಘಟನೆಯ ಬಲದಿಂದ ಉಮೇಶ್ ಮೇಟಿ ಮತ್ತು ಸಮರ್ಥ್ ಶಾಮನೂರು ಮತದಾರರ ವಿಶ್ವಾಸ…

Read More

ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಸುಮಾರು 1 ಕೋಟಿ 25 ಲಕ್ಷ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಬೇಗೂರು ಮುಖ್ಯರಸ್ತೆಯ ಕೊಪ್ಪ ಬಳಿ ಇಬ್ಬರನ್ನು ಬಂಧಿಸಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಜಿಗಣಿ ಪೊಲೀಸರಿಂದ ರಾಮಾಯಣ ಯಾದವ್ (56) ಮತ್ತು ಸಬೀರ್ ಖಾನ್ (51) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬೆಂಗಳೂರು ನಗರ ಜಿಲ್ಲೆ, ಆನೇಕಲ್ ತಾಲೂಕಿನ ಜಿಗಣಿ ಪೊಲೀಸ್ ಠಾಣೆ ಪೊಲೀಸರು ಈ ಒಂದು ಕಾರ್ಯಚರಣೆ ನಡೆಸಿದ್ದಾರೆ. ರಾಮಾಯಣ ಯಾದವ್ ಮತ್ತು ಸಬೀರ್ ಖಾನ್ ಬಿಹಾರ ಮೂಲದವರು ಎಂದು ತಿಳಿದುಬಂದಿದೆ. ಪ್ರಮುಖ ಆರೋಪಿ ವಿನೋದ್ ಸಿಂಗ್ ಮತ್ತು ಬಾಬುಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಯಾರಿಗೂ ತಿಳಿಯದಂತೆ ಪೌಲ್ಟ್ರಿ ಫೀಲ್ಡ್ಸ್ ಮಧ್ಯೆ ಗಾಂಜಾ ಸಾಗಿಸಿದ್ದರು. ಸಿನಿಮಾ ಶೈಲಿಯಲ್ಲಿ ಗಾಂಜಾ ಸಾಗಾಟ ಮಾಡಿದ್ದ ಬಂಧಿತ ಆರೋಪಿಗಳು. ಪೊಲೀಸರ ಕಾರ್ಯಕ್ಕೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಚಂದ್ರಕಾಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Read More