Subscribe to Updates
Get the latest creative news from FooBar about art, design and business.
Author: kannadanewsnow05
ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಒಂದು ಕುಸಿದು ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುಚ್ಚೆ ಮೊಗರು ಭಾಗದ ಬಾವದಬೈಲು ಎಂಬಲ್ಲಿ ಕಾಲು ಸಂಕ ಕುಸಿದಿರುವ ಘಟನೆ ವರದಿಯಾಗಿದೆ. ಕಾಲು ಸಂಕ ಮುರಿದು ಬಿದ್ದ ಪರಿಣಾಮ 8 ಮಂದಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ನಿತ್ಯ ಕಾಲು ಸಂಕದ ಮೇಲೆ ಜನರು ಓಡಾಡುತ್ತಿದ್ದರು. ಈ ಒಂದು ಕಾಲು ಸಂಕ ಸುಮಾರು ಐವತ್ತು ವರ್ಷಗಳ ಹಿಂದಿನ ಹಳೆಯದಾಗಿದ್ದು ಶಿಥಿಲಗೊಂಡ ಪರಿಣಾಮ ಇಂದು ದೈವದ ಭಂಡಾರ ಬರವಣಿಗೆ ವೇಳೆ ಕಾಲು ಸಂಕ ಕುಸಿದು ಬಿದ್ದಿದೆ. ಘಟನೆಯಲ್ಲಿ 8 ಜನರಿಗೆ ಗಂಭೀರ, ಗಾಯಗಳಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಧಾರವಾಡ : ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಯೊಬ್ಬ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಜೈಲಿನ ಶೌಚಾಲಯದ ಕೆಟ್ಟಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಕೈದಿ ಮಹಾಂತೇಶ್ (29) ಆತ್ಮಹತ್ಯೆಗೆ ಶರಣಾಗಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಗದಗ ಮೂಲದ ಮಹಾಂತೇಶ್ ಪೋಕ್ಸೋ ಕೇಸ್ ನಲ್ಲಿ ಜೈಲು ಸೇರಿದ್ದ. ಗದಗದಿಂದ ಧಾರವಾಡಕ್ಕೆ ಮಹಾಂತೇಶ ಕುಂಬಾರ ಶಿಫ್ಟ್ ಆಗಿದ್ದ. ನಿನ್ನೆ ಜಿಲ್ಲಾ ಸೆಷನ್ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಹಾಗಾಗಿ ಮಹಾಂತೇಶ್ ಕುಂಬಾರ್ ಮಾನಸಿಕವಾಗಿ ನೊಂದಿದ್ದ. ಜೈಲಿನಲ್ಲಿ ಮಹಾಂತೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತೆಲಂಗಾಣ : ತೆಲಂಗಾಣದಲ್ಲಿ ಹೊಸ ರಾಜಕೀಯ ಪಕ್ಷ ಘೋಷಣೆ ಆಗಿದ್ದು ಮಾಜಿ ಮುಖ್ಯಮಂತ್ರಿ ಕೆ ಸಿ ಆರ್ ಪುತ್ರಿ ಕೆ.ಕವಿತಾ ಅವರು ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ಹೊಸ ಪಕ್ಷಕ್ಕೆ ತೆಲಂಗಾಣ ರಾಷ್ಟ್ರ ಸೇನಾ (ಟಿಆರ್ಎಸ್) ಪಕ್ಷ ಎಂದು ಘೋಷಣೆ ಮಾಡಿದ್ದಾರೆ. ತೆಲಂಗಾಣದ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ ಪುತ್ರಿ ಕವಿತಾ ಅವರು ಇಂದು ಹೊಸ ಪಕ್ಷ ಘೋಷಣೆ ಮಾಡಿದರು ಮೇಡ್ಚಲ ಜಿಲ್ಲೆಯ ಮುನಿರಾಬಾದ್ ನಲ್ಲಿ ಬೃಹತ್ ಸಮಾವೇಶದಲ್ಲಿ ಹೊಸ ಪಕ್ಷ ಘೋಷಣೆ ಮಾಡಿದರು. ಮಾಜಿ ಎಂಎಲ್ಸಿ ತೆಲಂಗಾಣ ಜಾಗೃತಿ ಸಂಘಟನೆ ಅಧ್ಯಕ್ಷರಾಗಿರುವ ಕೆ ಕವಿತಾ ಅವರು ಸಾವಿರ ಜನರನ್ನು ಸೇರಿಸಿ ಹೊಸ ಪಕ್ಷದ ಹೆಸರು ಘೋಷಿಸಿದ್ದಾರೆ. ಸದ್ಯ ತೆಲಂಗಾಣ ಜಾಗೃತಿ ಸಂಘಟನೆ ಅಧ್ಯಕ್ಷರಾಗಿದ್ದಾರೆ. ತಂದೆ ಕೆಸಿಆರ್ ಹಾಗೂ ಸೋದರ ಕೆಟಿ ರಾಮರಾವ್ಗೆ ಸೆಡ್ಡು ಹೊಡೆದು ಕವಿತಾ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ ದೆಹಲಿ ಅಬಕಾರಿ ನೀತಿ ಹಗರಣದ ಆರೋಪದ ಅಡಿ ಕವಿತಾ ಅವರು ಜೈಲು ಸೇರಿದ್ದರು. ಅಬಕಾರಿ ಹಗರಣದಿಂದ ಕ್ಲೀನ್ ಚಿಟ್…
ಬೆಂಗಳೂರು : ರಾಜ್ಯದ ಹಲವಡೆ ಸಿಇಟಿ ಪರೀಕ್ಷಾ ವೇಳೆ ವಿದ್ಯಾರ್ಥಿಗಳಿಂದ ಸಿಬ್ಬಂದಿಗಳು ಜನಿವಾರ ತೆಗಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಪಾ ನಿಧಿ ಕಾಲೇಜಿನಲ್ಲಿ ನಡೆದ ಘಟನೆ ಯ ಬಗ್ಗೆ ಮಾಹಿತಿ ಬಂದಿದೆ. ಸೀಟಿ ಪರೀಕ್ಷೆಗೆ ಬಂದಾಗ ವಿದ್ಯಾರ್ಥಿಯ ಜನಿವಾರ ತಗಿಸಿದ ಮಾಹಿತಿ ಬಂದಿದ್ದು ಪೊಲೀಸರು ಈಗಾಗಲೇ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳು ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದರು. ಕೃಪಾನಿಧಿ ಕಾಲೇಜಿನಲ್ಲಿ ಕೆಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ನಡೆದ ಘಟನೆ ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ಈ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಪಾರದರ್ಶಕವಾಗಿ ಕ್ರಮ ಜರುಗಿಸಲಾಗುವುದು. ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳ ಕಿವಿ ಓಲೆ, ಬಳೆ, ಹಿಜಾಬ್ ಅಥವಾ ಜನಿವಾರ ತೆಗೆಸುವುದು, ಹಾಗೂ ಉದ್ದನೆಯ ತೋಳಿಗೆ ಕತ್ತರಿ ಹಾಕುವ ಮೂಲಕ ಅವರ…
ಚಿಕ್ಕಬಳ್ಳಾಪುರ : ನಿನ್ನೆ ತಾನೇ ಹಿಂದೆ ಅಷ್ಟೇ ಬೆಂಗಳೂರಿನಲ್ಲಿ ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗಿಸಿದ ಪ್ರಕರಣ ನಡೆದಿತ್ತು. ಇದೀಗ ಚಿಕ್ಕಬಳ್ಳಾಪುರದಲ್ಲಿ ಕೂಡ CET ಪರೀಕ್ಷೆ ವೇಳೆ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಆರೋಪ ಕೇಳಿ ಬಂದಿದೆ. ಪರೀಕ್ಷೆಗೆ ಬಂದಿದ ವಿದ್ಯಾರ್ಥಿಯ ಜನಿವಾರವನ್ನು ತೆಗೆಸಿದ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರದ ನಾಗಾರ್ಜುನ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದ್ದು ವಿದ್ಯಾರ್ಥಿ ಸುಪ್ರೀತ್ ಎಂಬತನ ಜನಿವಾರವನ್ನು ಸಿಬ್ಬಂದಿ ತೆಗೆಸಿದ್ದಾರೆ. ಮೊದಲ ದಿನ ಪರೀಕ್ಷೆಗೆ ಬಂದಾಗ ಜನಿವಾರ ತೆಗಿಸಿ ಕತ್ತರಿಸುವ ಆರೋಪ ಕೇಳಿ ಬಂದಿದ್ದು, ಸಿಬ್ಬಂದಿ ನಡೆಗೆ ಸುಪ್ರೀತ್ ಆಕ್ಷೇಪ ವ್ಯಕ್ತಪಡಿಸಿದ್ದ. 12 ದಿನಗಳ ಹಿಂದೆ ಅಷ್ಟೇ ಪ್ರೀತಿಗೆ ಉಪನಯನ ಸಹ ಮಾಡಲಾಗಿತ್ತು ಇವಳೆ ಪರೀಕ್ಷೆ ಬರೆಯಲು ಬಂದಾಗ ಬಂದುಗಳು ಹಾಸನ ಜನವಾರವನ್ನು ಕತ್ತರಿಸಿ ತೆಗೆದು ಹಾಕಿದ್ದು ಸಿಬ್ಬಂದಿ ವಿರುದ್ಧ ಸುಪ್ರೀತ್ ಆಕ್ರೋಶ ವ್ಯಕ್ತಪಡಿಸಿದ್ದಾನೆ.
ಬೆಂಗಳೂರು : ಕಾಂಗ್ರೆಸ್ ನಲ್ಲಿ ಇದೀಗ ಮತ್ತೆ ನಾಯಕತ್ವಕ್ಕಾಗಿ ರಣತಂತ್ರ ಜೋರಾಗಿದೆ. ಯಾವಾಗ ರಿಸೀವ್ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ದೆಹಲಿ ಭೇಟಿ ನೀಡಿದರೊ ಇತ್ತ ಸಿಎಂ ಸಿದ್ದರಾಮಯ್ಯ ಆಪ್ತರಿಂದಲೂ ರಿಂದಲೂ ಕೂಡ ಇದೀಗ ಪ್ಲಾನ್ ಬಿ ತಯಾರಿ ನಡೆದಿದ್ದು ಮತ್ತೊಂದು ಸುತ್ತಿನ ಕ್ರಾಂತಿಗೆ ಸಿಎಂ ಸಿದ್ದರಾಮಯ್ಯ ಹೊಸ ದಾಳ ಉರುಳಿಸಲು ಸಿಎಂ ಸಿದ್ದರಾಮಯ್ಯ ಬಣ ಸಜ್ಜಾಗಿದೆ. ಇನ್ನು ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಬದಲಾವಣೆಯ ಬಗ್ಗೆ ಪ್ರಸ್ತಾಪ ಮಾಡುವುದಿಲ್ಲ ಎಂದು ಆಪ್ತರ ಬಳಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದು ಆದರೂ ಎಲ್ಲದಕ್ಕೂ ಸಿದ್ಧರಾಗಿರುವಂತೆ ಸಚಿ ವರು ಸಲಹೆ ಕೊಟ್ಟಿದ್ದಾರೆ. ಅಹಿಂದ ಸಚಿವರಿಂದ ಸಿಎಂ ಸಿದ್ದರಾಮಯ್ಯಗೆ ಮನವರಿಕೆ ಮಾಡಿಕೊಡಲು ಆಪ್ತ ನಾಯಕರು ಯತ್ನಿಸುತ್ತಿದ್ದಾರೆ. ಸಂಪೂರ್ಣ ಲೆಕ್ಕಾಚಾರ ಹಾಕಿದ್ದು, ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚೆ ನಡೆಸಲು ಆಪ್ತ ಸಚಿವರು ಸಿದ್ಧತೆ ಮಾಡಿದ್ದಾರೆ. ಮೇ ತಿಂಗಳ ಬೆಳವಣಿಗೆಗಳ ಮೇಲೆ ಸಿಎಂ ಬಣ ಲೆಕ್ಕಾಚಾರ ಹಾಕಿದ್ದು, ನಾಯಕತ್ವ ಬದಲಾವಣೆ ಸಂಬಂಧಿಸಿದಂತೆ ಸಚಿವರಿಗೆ ಗುಮಾನಿ ಇದೇ…
ಬೆಂಗಳೂರು : ಮೇ ಮೊದಲ ವಾರದಲ್ಲಿ ರಾಜ್ಯ ರಾಜಕೀಯದ ಹೈಡ್ರಾಮಾ ಫಿಕ್ಸ್ ಎಂಬಂತಾಗಿದೆ. ಮೇ 6 ಬಳಿಕ ದೆಹಲಿಗೆ ರಾಜ್ಯ ರಾಜಕಾರಣ ಶಿಫ್ಟ್ ಆಗಲಿದ್ದು ಈ ಬಾರಿ ಹೈಕಮಾಂಡ್ ಅಂಗಳದಲ್ಲಿ ಬಿಗಿಪಟ್ಟಿಗೆ ಡಿಕೆ ಶಿವಕುಮಾರ್ ತಯಾರಿ ಮಾಡಿಕೊಂಡಿದ್ದಾರೆ. ಅತ್ತ ಸಿಎಂ ಸಿದ್ದರಾಮಯ್ಯ ಕೂಡ ದೆಹಲಿ ಯಾತ್ರೆಗೆ ತಯಾರಿ ಮಾಡಿಕೊಂಡಿದ್ದು, ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ತಂಡ ಅಧಿಕಾರ ಹಂಚಿಕೆ ಮೊದಲು ತೀರ್ಮಾನ ಆಗಬೇಕು ಎಂದು ಪಟ್ಟು ಹಿಡಿದಿದೆ. ಸಂಪತ ವಿಸ್ತರಣೆಗೂ ಮುನ್ನ ಅಧಿಕಾರ ಹಂಚಿಕೆಯ ಬಗ್ಗೆ ತೀರ್ಮಾನಿಸಲು ಪಟ್ಟಣದಲ್ಲಿ ಸಂಪುಟ ಪುನರ್ ರಚನೆ ವಿಷಯವನ್ನೇ ಸಿಎಂ ಸಿದ್ದರಾಮಯ್ಯ ತಂಡಕೊಡ ಪ್ರತಿಪಾದಿಸುತ್ತಿದೆ ಪಂಚ ರಾಜ್ಯಗಳ ಚುನಾವಣೆ ಬಳಿಕ ಹೈಕಮಾಂಡ್ ಇಂದ ಪ್ರತ್ಯೇಕ ಸಭೆ ನಡೆಯಲಿದೆ.
ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ನಡೆದಿದೆ. ಕನಕಪುರ ತಾಲೂಕಿನ ಸಂಗಮ ಅರಣ್ಯ ಪ್ರದೇಶದಲ್ಲಿ ನೀರು ಕುಡಿಯಲು ನದಿಗೆ ಬಂದ ಕಾಡಾನೆ ಏಕಾಏಕಿ ಪ್ರವಾಸಿಗರ ಮೇಲೆ ಎರಗಿದೆ. ಈ ವೇಳೆ ಪ್ರವಾಸಿಗರು ಸ್ಥಳದಿಂದ ಎದ್ನೋಬಿದ್ನೋ ಎಂದು ಓಡಿದ್ದಾರೆ. ಈ ವೇಳೆ ಓರ್ವ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿ ಅಲ್ಲಿಂದ ಕಾಡಿನೊಳಗೆ ಕಾಲ್ಕಿತ್ತಿದೆ. ಕಾಡಾನೆ ದಾಳಿಯಲ್ಲಿ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂಟಿಸಲಗ ಪ್ರವಾಸಿಗರ ಮೇಲೆ ದಾಳಿ ಮಾಡುವ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಭೀಕರ ಕೊಲೆ ನಡೆದಿದ್ದು, ಹೋಟೆಲ್ ಗೆ ನುಗ್ಗಿ ಮೀಟರ್ ಬಡ್ಡಿಯ ದಂದೆಯ ಕಿಂಗ್ ಪಿನ್ ಅನ್ನು ಕೊಲೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ನಿನ್ನೆ ರಾತ್ರಿ ಒಂದು ಕೊಲೆ ನಡೆದಿದೆ. ಹೋಟೆಲ್ನಲ್ಲಿ ಬಡ್ಡಿ ದಂಧೆಕೋರ ಕಿಂಗ್ ಪಿನ್ ನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಎಂ ಎನ್ ಡಿ ಅಲಿಯಾಸ್ ಜಮೀರ್ ಅಹ್ಮದ್ ದರ್ಗಾ ವಾಲೆಯನ್ನು ಹತ್ಯೆಗೆದಿದ್ದಾರೆ. ಮೀಟರ್ ಬಡ್ಡಿ ದಂಧೆಯ ಕಿಂಗ್ ಪಿನ್ ಆಗಿದ್ದ ಜಮೀರ್ ದರ್ಗಾವಾಲೆಯನ್ನು ಒಂದು ವರ್ಷದ ಹಿಂದೆ ಕಿಡ್ನಾಪ್ ಮಾಡಲಾಗಿತ್ತು. ಜಮೀರ್ ಅಹ್ಮದ್ ದರ್ಗಾವಾಲೆಯನ್ನು ಕಿಡ್ನಾಪ್ ಮಾಡಿ ಆರೋಪಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದೀಗ ನಿನ್ನೆ ರಾತ್ರಿ 11:00 ಹೋಟೆಲ್ಗೆ ಊಟಕ್ಕೆ ಎಂದು ಜಮೀರ್ ಬಂದಿದ್ದಾಗ ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ದೀಪನ್ ಭೇಟಿ ನೀಡಿದ್ದು, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಶಾಸಕ ಟಿಡಿ ರಾಜೇಗೌಡಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಶೃಂಗೇರಿ ಕ್ಷೇತ್ರದ ಅಂಚೆ ಮತ ಮರುವಣಿಗೆಗೆ ಹೈಕೋರ್ಟ್ ಸೂಚನೆ ನೀಡಿದ್ದು, ಮೇ 2 ರಂದು ಬೆಳಿಗ್ಗೆ 9 ಗಂಟೆಗೆ ಅಂಚೆ ಮರು ಮತ ಎಣಿಕೆ ನಡೆಯಲಿದೆ. ಚಿಕ್ಕಮಂಗಳೂರಿನ ಐಡಿಎಸ್ಜಿ ಕಾಲೇಜಿನಲ್ಲಿ ಮರು ಮತ ಎಣಿಕೆ ನಡೆಯಲಿದೆ. ಟಿಡಿ ರಾಜೇಗೌಡ ಆಯ್ಕೆ ಆಸಿಂದು ಕೋರಿ ಜೀವರಾಜ್ ಅರ್ಜಿ ಸಲ್ಲಿಸಿದ್ದರು. ಜೀವರಾಜ್ ಶೃಂಗೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿಯಾಗಿದ್ದು, ಏಪ್ರಿಲ್ 6 ರಂದು ಮರು ಎಣಿಕೆಗೆ ಆದೇಶ ನೀಡಿ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಎರಡು ವಾರಗಳ ಕಾಲಾವಕಾಶ ಮಧ್ಯಂತರ ತಡೆ ನೀಡಿದ್ದ ಹೈಕೋರ್ಟ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಇದೀಗ ಅಂಚೆ ಮತಗಳ ಮರು ಎಣಿಕೆ ಮಾಡಲು ಹೈಕೋರ್ಟ್ ಮತ್ತೆ ಆದೇಶ…














